Author: admin

ತುಮಕೂರು: ಈಗ ಭೂಮಿಯ ಬೆಲೆ ಚಿನ್ನದ ಬೆಲೆಯಾಗಿದೆ. ರೈತರು ತಮ್ಮ ಜಮೀನು ಮಾರಾಟ ಮಾಡಿಕೊಳ್ಳಬೇಡಿ, ಮಕ್ಕಳ ಮದುವೆ ಅಥವಾ ಸಂಸಾರದ ಸಮಸ್ಯೆಗಳಿಗೆಂದು ಜಮೀನು ಮಾರಿಕೊಂಡರೆ ಮತ್ತೆ ಗಳಿಸುವುದು ಕಷ್ಟವಾಗುತ್ತದೆ ಎಂದು ಗ್ರಾಮಾಂತರ ಕ್ಷೇತ್ರದ ಶಾಸಕ ಬಿ.ಸುರೇಶ್ ಗೌಡ  ರೈತರಿಗೆ ಕಿವಿಮಾತು ಹೇಳಿದರು. ಕ್ಷೇತ್ರದ ನಾಗವಲ್ಲಿಯಲ್ಲಿ ಕೊಳವೆ ಬಾವಿ ಕೊರೆಸಿರುವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಫಲಾನುಭವಿಗಳಿಗೆ ಸಣ್ಣ ನೀರಾವರಿ ಇಲಾಖೆಯಿಂದ ಪಂಪು, ಮೋಟಾರ್ ವಿತರಣೆ ಮಾಡಿ ಮಾತನಾಡಿದ ಶಾಸಕರು, ಈ ಭಾಗದಲ್ಲಿ ಬಹುತೇಕ ಕೆರೆಗಳು ತುಂಬಿ ಅಂತರ್ಜಲ ಮಟ್ಟದ ಹೆಚ್ಚಾಗಿದೆ. ರೈತರು ಕೊಳವೆ ಬಾವಿಗಳಲ್ಲಿ ನೀರಿನ ಪ್ರಮಾಣ ಹೆಚ್ಚಾಗಿದೆ. ಯಾವುದೇ ಕಾರಣಕ್ಕೂ ತಮ್ಮ ಜಮೀನು ಮಾರದೆ ಉಳಿಸಿಕೊಂಡು ವ್ಯವಸಾಯ ಮುಂದುವರೆಸಿ ಎಂದು ಹೇಳಿದರು. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವಿದ್ದರೂ ತಮ್ಮ ಕ್ಷೇತ್ರಕ್ಕೆ ಬೇಕಾದ ಅನುದಾನ ತರಲು ಪರಿಶ್ರಮ ಪಡುತ್ತಿದ್ದೇನೆ. ಕೇಂದ್ರ ಸಚಿವ ವಿ.ಸೋಮಣ್ಣ, ರಾಜ್ಯದ ಸಣ್ಣ ನೀರಾವರಿ ಖಾತೆ ಸಚಿವ ಬೋಸರಾಜು ಅವರು ಸಹಕಾರದಿಂದ ಕ್ಷೇತ್ರದ ಫಲಾನುಭವಿಗಳಿಗೆ ಪಂಪು, ಮೋಟಾರ್ ಮಂಜೂರು…

Read More

ತುರುವೇಕೆರೆ: ಸಮಾಜ ಸೇವೆಗೆ ಜಾತಿ ಮುಖ್ಯವಾಗಬಾರದು, ನಾವು ಮಾಡುವ ಸೇವೆ ಮುಖ್ಯವಾಗಬೇಕು ಎಂದು ತುರುವೇಕೆರೆ ಶಾಸಕ ಎಂ.ಟಿ.ಕೃಷ್ಣಪ್ಪ ಹೇಳಿದರು. ಗುರು ಸಿದ್ದರಾಮೇಶ್ವರ ಸಮುದಾಯ ಭವನದಲ್ಲಿ ನೋಳಂಬ ಲಿಂಗಾಯತ ಉಪ ಸಮಿತಿ ವತಿಯಿಂದ ಹಾಗೂ ಶಾಸಕ ಅನುದಾನ ಸುಮಾರು 35 ಲಕ್ಷ ರೂ. ವೆಚ್ಚದಲ್ಲಿ ನೂತನ ಗಣಪತಿ ಆಲಯ ಮತ್ತು ಶೌಚಾಲಯ ನಿರ್ಮಾಣಕ್ಕೆ ಚಾಲನೆ ನೀಡಿ ಅವರು ಮಾತನಾಡುತ್ತಿದ್ದರು. ಸಮುದಾಯ ಭವನಗಳಲ್ಲಿ ಮೂಲಭೂತ ಸೌಕರ್ಯಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕು. ಉತ್ತಮವಾದ ಹೈಟೆಕ್ ಶೌಚಾಲಯ ನಿರ್ಮಾಣ ಮಾಡಿ. ದಂಡಿನಶಿವಪ್ಪ ರಸ್ತೆಯ ಸಾರಿಗೆಹಳ್ಳಿ ಕೆರೆಕೋಡಿಗೆ ಸುಮಾರು 4 ಕೋಟಿ 50 ಲಕ್ಷ ರೂ. ವೆಚ್ಚದಲ್ಲಿ ಬ್ರಿಡ್ಜ್ ನಿರ್ಮಾಣ ಮಾಡಲು ಅನುದಾನ ನೀಡಲಾಗಿದೆ. ಆದರೆ ಕೆಲವು ತಾಂತ್ರಿಕ ತೊಡಕುಗಳಿಂದ ಕಾಮಗಾರಿ ತಡವಾಗಿದ್ದು, ಸದ್ಯದಲ್ಲಿಯೇ ಪ್ರಾರಂಭವಾಗಲಿದೆ ಎಂದರು. ಈ ಸಂದರ್ಭದಲ್ಲಿ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಎಂ.ಬಿ.ಧರಣೇಶ್ ಹಾಗೂ ಪಿಎಲ್.ಡಿ ಬ್ಯಾಂಕ್ ನಿರ್ದೇಶಕ ಮಾಚೇನಹಳ್ಳಿ ಲೋಕೇಶ್‌ ರನ್ನು ಸಂಘದ ವತಿಯಿಂದ ಸನ್ಮಾನಿಸಿ ಅಭಿನಂದಿಸಲಾಯಿತು. ಅಧ್ಯಕ್ಷತೆಯನ್ನು ನೋಳಂಬ ಲಿಂಗಾಯತ…

Read More

ತುಮಕೂರು: ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ನವಜಾತ ಶಿಶುಗಳ ಆರೈಕೆ ವ್ಯವಸ್ಥೆ ಬಲಪಡಿಸುವ ಸಂಬಂಧ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಡಾ.ಕೆ.ಟಿ.ತಿಪ್ಪೇಸ್ವಾಮಿ ಅವರು ಕೆಲವೊಂದು ಶಿಫಾರಸ್ಸುಗಳನ್ನು ಸಲ್ಲಿಸಿದ್ದಾರೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿಗಳಿಗೆ ಈ ಶಿಫಾರಸ್ಸು ಅಂಶಗಳನ್ನೊಳಗೊಂಡ ಪತ್ರ ರವಾನಿಸಿರುವ ಅವರು, ಜನನದ ಮೊದಲ 28 ದಿನಗಳು ಮಗುವಿನ ಬದುಕಿಗೆ ಅತ್ಯಂತ ಸಂವೇದನಾಶೀಲ ಅವಧಿಯಾಗಿದ್ದು, ಈ ಹಂತದಲ್ಲಿ ಸಮರ್ಪಕ ಚಿಕಿತ್ಸೆ ಮತ್ತು ಸುರಕ್ಷಿತ ಆರೈಕೆ ಲಭ್ಯವಾಗದಿದ್ದಲ್ಲಿ ಜೀವ ಅಪಾಯದ ಸಾಧ್ಯತೆ ಇರುತ್ತದೆ. ನವಜಾತ ಶಿಶುಗಳ ಆರೋಗ್ಯ ರಕ್ಷಣೆ ಮಕ್ಕಳ ಬದುಕುವ, ಬೆಳೆಯುವ ಹಾಗೂ ಗೌರವಪೂರ್ಣ ಬದುಕಿನ ಹಕ್ಕಿಗೆ ಸವಾಲಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಎನ್.ಐ.ಸಿ.ಯು., ಎಸ್.ಎನ್.ಸಿ.ಯು. ಹಾಗೂ ಎನ್.ಬಿ.ಎಸ್.ಯು. ಗಳಲ್ಲಿ ನವಜಾತ ಶಿಶುಗಳ ಆರೈಕೆ ಬಲವರ್ಧನೆಗೆ ಕೆಲವು ಕ್ರಮ ಜರುಗಿಸುವ ಅಗತ್ಯತೆಯ ಬಗ್ಗೆ ಪ್ರತಿಪಾದಿಸಿದ್ದಾರೆ. ಮೂಲ ಸೌಕರ್ಯ ಮತ್ತು ವೈದ್ಯಕೀಯ ಉಪಕರಣಗಳ ತುರ್ತು ಒದಗಿಸುವಿಕೆ, ಅಗತ್ಯ ಪ್ರಮಾಣದ ತಜ್ಞ ವೈದ್ಯರು ಮತ್ತು ತರಬೇತಿ ಪಡೆದ…

Read More

ಮೈಸೂರು: ಜೆಡಿಎಸ್ ಹಿರಿಯ ನಾಯಕ ಜಿ.ಟಿ. ದೇವೇಗೌಡರು ಹಾಗೂ ಪಕ್ಷದ ನಾಯಕತ್ವದ ನಡುವಿನ ಮುನಿಸು ಈಗ ಬಹಿರಂಗವಾಗಿದ್ದು, “ಜಿ.ಟಿ. ದೇವೇಗೌಡರು ಈಗ ನಮ್ಮ ಜೊತೆಯಲ್ಲಿಲ್ಲ” ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ. ಸೋಮವಾರ ಮೈಸೂರಿನಲ್ಲಿ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಅವರು, ಪಕ್ಷದ ಬಗ್ಗೆ ನಿಯತ್ತು ಮತ್ತು ನಿಷ್ಠೆ ಇಲ್ಲದವರನ್ನು ಜೊತೆಯಲ್ಲಿ ಇಟ್ಟುಕೊಳ್ಳುವ ಅವಶ್ಯಕತೆ ಇಲ್ಲ ಎಂದು ಗುಡುಗಿದ್ದಾರೆ. “ನನ್ನ ಮುಂದೆ ಪದೇಪದೆ ಅವರ ಹೆಸರು ಪ್ರಸ್ತಾಪ ಮಾಡಬೇಡಿ. ಮುಖ್ಯಮಂತ್ರಿಗಳಿಗೆ ಪ್ರಮಾಣಪತ್ರ ನೀಡುವ ಅವರು, ನಮ್ಮ ವಿರುದ್ಧವೇ ಮಾತನಾಡುತ್ತಾರೆ. ಇಂತಹ ವರ್ತನೆ ತೋರುವವರನ್ನು ನಾವು ಹೇಗೆ ಸಹಿಸಲು ಸಾಧ್ಯ?” ಎಂದು ಪ್ರಶ್ನಿಸಿದರು. ಇದೇ ವೇಳೆ ರಾಜ್ಯ ಸರ್ಕಾರದ ವಿರುದ್ಧವೂ ವಾಗ್ದಾಳಿ ನಡೆಸಿದ ಕುಮಾರಸ್ವಾಮಿ, ಮೆಟ್ರೋ ದರ ಏರಿಕೆಗೆ ಕೇಂದ್ರವನ್ನು ಹೊಣೆ ಮಾಡುವುದು ಸರಿಯಲ್ಲ ಎಂದರು. ಮಂಡ್ಯದಲ್ಲಿ 500 ಕೋಟಿ ರೂ. ವೆಚ್ಚದ ಆಟೋಮೋಟಿವ್ ಸಂಶೋಧನಾ ಕೇಂದ್ರ ಸ್ಥಾಪನೆಗೆ ಭೂಮಿ ನೀಡುವಂತೆ ಸಿಎಂಗೆ ಪತ್ರ ಬರೆದಿರುವುದಾಗಿ ತಿಳಿಸಿದ ಅವರು, ಸಮಯ ಬಂದಾಗ ತಾವು…

Read More

ಬೀದರ್: ವೇಶ್ಯಾವಾಟಿಕೆ ಮಾಡುವಂತೆ ಗಂಡನ ಮನೆಯವರು ನೀಡುತ್ತಿದ್ದ ಮಾನಸಿಕ ಕಿರುಕುಳಕ್ಕೆ ಬೇಸತ್ತು ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಧಾರುಣ ಘಟನೆ ಬೀದರ್ ಜಿಲ್ಲೆಯ ಬಸವಕಲ್ಯಾಣ ನಗರದಲ್ಲಿ ನಡೆದಿದೆ. ೨೨ ವರ್ಷದ ಅಂಜನಾಬಾಯಿ ಶೇಖರ್ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಮೃತಳ ತಂದೆ ವಿಜಯ್ ಕುಮಾರ್ ಅವರು ನೀಡಿದ ದೂರಿನ ಪ್ರಕಾರ, ಅಂಜನಾಬಾಯಿಗೆ ಕಳೆದ ಮೂರು ವರ್ಷಗಳ ಹಿಂದೆ ಶೇಖರ್ ಎಂಬುವವರ ಜೊತೆ ವಿವಾಹವಾಗಿತ್ತು. ಆದರೆ ಮದುವೆಯಾದ ಕೆಲವೇ ದಿನಗಳಲ್ಲಿ ಅತ್ತೆ ಅರುಣಾಬಾಯಿ ಮತ್ತು ಮಾವ ಚಂದ್ರಕಾಂತ ಅವರು ಅಂಜನಾಬಾಯಿಗೆ ವೇಶ್ಯಾವಾಟಿಕೆಯಲ್ಲಿ ತೊಡಗುವಂತೆ ಮಾನಸಿಕವಾಗಿ ಮತ್ತು ದೈಹಿಕವಾಗಿ ಪೀಡಿಸುತ್ತಿದ್ದರು ಎನ್ನಲಾಗಿದೆ. ಗಂಡನ ಮನೆಯವರ ನಿರಂತರ ಕಿರುಕುಳವನ್ನು ಸಹಿಸಲಾರದೆ ಅಂಜನಾಬಾಯಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದುಕೊಂಡು ಪ್ರಾಣ ಕಳೆದುಕೊಂಡಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಬಸವಕಲ್ಯಾಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮೃತಳ ಪತಿ ಶೇಖರ್ ಪಾಟೀಲ್ ಸೇರಿದಂತೆ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಸದ್ಯ ಪೊಲೀಸರು ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿದ್ದಾರೆ. ಮಹಿಳೆಯರ ಸುರಕ್ಷತೆಯ…

Read More

ಬೆಂಗಳೂರು: ವಿದೇಶದಲ್ಲಿ ನೆಲೆಸಿರುವ ಕನ್ನಡಿಗರಿಗೆ ಸುರಕ್ಷತೆಯ ಆತಂಕ ಎದುರಾಗಿದ್ದು, ಕೆನಡಾದಲ್ಲಿ ಬೆಂಗಳೂರು ಮೂಲದ ಯುವಕನೊಬ್ಬ ದುಷ್ಕರ್ಮಿಗಳ ಗುಂಡಿನ ದಾಳಿಗೆ ಬಲಿಯಾಗಿದ್ದಾರೆ. ಘಟನೆಯ ವಿವರ: ಮೃತರನ್ನು ಬೆಂಗಳೂರಿನ ನೆಲಮಂಗಲ ತಾಲೂಕಿನ ತ್ಯಾಮಗೊಂಡ್ಲು ನಿವಾಸಿ ಚಂದನ್ ಕುಮಾರ್ (37) ಎಂದು ಗುರುತಿಸಲಾಗಿದೆ. ಕಳೆದ ಆರು ವರ್ಷಗಳಿಂದ ಕೆನಡಾದಲ್ಲಿ ವಾಸವಾಗಿದ್ದ ಇವರು ಅಲ್ಲಿನ ಖಾಸಗಿ ಕಂಪನಿಯೊಂದರಲ್ಲಿ ವೃತ್ತಿ ನಿರ್ವಹಿಸುತ್ತಿದ್ದರು. ಭಾನುವಾರ ರಾತ್ರಿ ಸುಮಾರು 9 ಗಂಟೆಯ ಸಮಯದಲ್ಲಿ ಚಂದನ್ ಕುಮಾರ್ ಅವರು ತಮ್ಮ ಕಾರಿನಲ್ಲಿ ತೆರಳುತ್ತಿದ್ದಾಗ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಕಾರಿನ ಮುಂಭಾಗದ ಗಾಜಿನ ಮೂಲಕ ಗುಂಡುಗಳು ಚಂದನ್ ಅವರ ದೇಹಕ್ಕೆ ತಗುಲಿದ್ದು, ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಇದು ಅತ್ಯಂತ ಸಮೀಪದಿಂದ ನಡೆಸಲಾದ ದಾಳಿ ಎಂದು ಶಂಕಿಸಲಾಗಿದೆ. ಸಮುದಾಯದಲ್ಲಿ ಸಕ್ರಿಯರಾಗಿದ್ದ ಚಂದನ್: ಚಂದನ್ ಕುಮಾರ್ ಅವರು ಕೆನಡಾದ ಬ್ರಾಂಪ್ಟನ್‌ನಲ್ಲಿರುವ ಶಿರಡಿ ಸಾಯಿಬಾಬಾ ದೇವಾಲಯದ ಸಕ್ರಿಯ ಸದಸ್ಯರಾಗಿದ್ದರು ಮತ್ತು ಅಲ್ಲಿನ ಕನ್ನಡ ಸಮುದಾಯದ ಕಾರ್ಯಕ್ರಮಗಳಲ್ಲಿ ಉತ್ಸಾಹದಿಂದ ಭಾಗವಹಿಸುತ್ತಿದ್ದರು. ಇವರ ನಿಧನಕ್ಕೆ ಅಲ್ಲಿನ ಅನಿವಾಸಿ…

Read More

ತುಮಕೂರು: ಜಿಲ್ಲೆಯ ತುಮಕೂರು ತಾಲ್ಲೂಕಿನ ಬಾಣಾವರ ಗೇಟ್ ಬಳಿ ಭಾನುವಾರ ಸಂಜೆ ನಡೆದ ಮೂರು ಕಾರುಗಳ ಸರಣಿ ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದು, ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತರ ವಿವರ: ನಗರದ ಯಾದವ ನಗರ ನಿವಾಸಿಗಳಾದ ಸುರೇಶ್ (55) ಮತ್ತು ಮುರಳಿ (60) ಅಪಘಾತದಲ್ಲಿ ಮೃತಪಟ್ಟ ದುರ್ದೈವಿಗಳು. ಸುರೇಶ್ ಅವರು ಗುಬ್ಬಿ ತಾಲ್ಲೂಕು ಪಂಚಾಯಿತಿಯ ಮಾಜಿ ಸದಸ್ಯರಾಗಿದ್ದರು. ಗಾಯಾಳುಗಳು: ಸೈಬರ್ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ರಾಮಕೃಷ್ಣಪ್ಪ, ಜೆಡಿಎಸ್ ವಕ್ತಾರ ಜಯಣ್ಣ ಹಾಗೂ ಮಂಜುನಾಥ್ ಸೇರಿದಂತೆ ಒಟ್ಟು ಐದು ಮಂದಿ ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತ ನಡೆದಿದ್ದು ಹೇಗೆ? ಇನ್‌ಸ್ಪೆಕ್ಟರ್ ರಾಮಕೃಷ್ಣಪ್ಪ ಅವರು ತಮ್ಮ ಸ್ನೇಹಿತರೊಂದಿಗೆ ಆದಿಚುಂಚನಗಿರಿಗೆ ಭೇಟಿ ನೀಡಿ, ಕುಣಿಗಲ್ ಮಾರ್ಗವಾಗಿ ವಾಪಸ್ ಬರುತ್ತಿದ್ದರು. ಈ ಸಂದರ್ಭದಲ್ಲಿ ತುಮಕೂರು ಕಡೆಯಿಂದ ವೇಗವಾಗಿ ಬಂದ ಕಾರೊಂದು ತನ್ನ ಮುಂದೆ ಚಲಿಸುತ್ತಿದ್ದ ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದಿದೆ. ನಂತರ ನಿಯಂತ್ರಣ ತಪ್ಪಿ ಎದುರುಗಡೆಯಿಂದ ಬರುತ್ತಿದ್ದ ರಾಮಕೃಷ್ಣಪ್ಪ ಅವರಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ…

Read More

ಮಧುಗಿರಿ: ತಾಲ್ಲೂಕಿನ ಮಿಡಿಗೇಶಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ಲಾರಿಯೊಂದನ್ನು ಪೊಲೀಸರು ದಾಳಿ ನಡೆಸಿ ವಶಪಡಿಸಿಕೊಂಡಿದ್ದಾರೆ. ಬಳ್ಳಾರಿಯಿಂದ ಮಧುಗಿರಿ ಕಡೆಗೆ ಬರುತ್ತಿದ್ದ ಲಾರಿಯನ್ನು ಮಿಡಿಗೇಶಿ ಹೋಬಳಿಯ ಆಂಧ್ರ ಗಡಿ ಭಾಗದ ಚಂದ್ರಬಾವಿ ಚೆಕ್‌ಪೋಸ್ಟ್ ಬಳಿ ಪೊಲೀಸರು ತಡೆದು ತಪಾಸಣೆ ನಡೆಸಿದರು. ಈ ವೇಳೆ ಯಾವುದೇ ಅಧಿಕೃತ ದಾಖಲೆ ಅಥವಾ ಅನುಮತಿಯಿಲ್ಲದೆ ಅಕ್ರಮವಾಗಿ 27 ಜಾನುವಾರುಗಳನ್ನು (ಎಮ್ಮೆ, ಕೋಣ, ಹೋರಿ ಮತ್ತು ಹಸುಗಳು) ಸಾಗಿಸುತ್ತಿರುವುದು ಪತ್ತೆಯಾಗಿದೆ. ಕಾರ್ಯಾಚರಣೆ ನಡೆಸಿದ ಮಿಡಿಗೇಶಿ ಪೊಲೀಸರು ಲಾರಿ ಚಾಲಕ ಚೇತನ್, ಕ್ಲೀನರ್ ರಘು ಮತ್ತು ತಬರೀಸ್ ಎಂಬುವವರನ್ನು ಬಂಧಿಸಿದ್ದಾರೆ. ಪ್ರಾಥಮಿಕ ವಿಚಾರಣೆಯ ವೇಳೆ ಬಂಧಿತರು ದಾವಣಗೆರೆ, ಬಳ್ಳಾರಿ ಹಾಗೂ ಚಿತ್ರದುರ್ಗ ಭಾಗಗಳಿಂದ ಜಾನುವಾರುಗಳನ್ನು ತರುತ್ತಿರುವುದಾಗಿ ತಿಳಿಸಿದ್ದಾರೆ. ವಶಪಡಿಸಿಕೊಂಡ ಜಾನುವಾರುಗಳನ್ನು ಸುರಕ್ಷಿತವಾಗಿ ಕ್ಯಾತ್ಸಂದ್ರದ ಗೋಶಾಲೆಗೆ ರವಾನಿಸಲಾಗಿದೆ ಎಂದು ಪಿಎಸ್‌ಐ ರವೀಂದ್ರ ಅವರು ಮಾಹಿತಿ ನೀಡಿದ್ದಾರೆ. ಆರೋಪಿಗಳ ವಿರುದ್ಧ ಮಿಡಿಗೇಶಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್…

Read More

ಗುಬ್ಬಿ: ಆಗ್ನೇಯ ಪದವೀಧರ ಕ್ಷೇತ್ರದಲ್ಲಿ ಇದುವರೆಗೂ ಗೆದ್ದಂತ  ಜನ ಪ್ರತಿನಿಧಿಗಳು ಯಾರು ಸಹ ಪದವೀಧರರಿಗೆ ಅನುಕೂಲವಾಗುವಂತಹ ಕೆಲಸ ಮಾಡಿಲ್ಲ ಎಂದು ಆಗ್ನೇಯ ಪದವೀಧರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶಶಿ ಹುಲಿಕುಂಟೆ ಮಠ ದೂರಿದರು. ಗುಬ್ಬಿ ಪಟ್ಟಣದ ಚನ್ನಬಸವೇಶ್ವರ ಸ್ವಾಮಿ ದೇವಾಲಯದ ವಿಶೇಷ ಪೂಜೆಯನ್ನು ಸಲ್ಲಿಸಿ ಮಾತನಾಡಿದ ಅವರು,  ಕಾಂಗ್ರೆಸ್ ಸರ್ಕಾರ ನೀಡುತ್ತಿರುವಂತ ಅಭಿವೃದ್ಧಿ ಕೆಲಸಗಳು ನನಗೆ ಶ್ರೀ ರಕ್ಷೆ ಆಗಿತ್ತು ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುತ್ತಿದೆ ಮುಂದಿನ ದಿನದಲ್ಲೂ ನಾವು ನೀಡುವಂತಹ ಆಶ್ವಾಸನೆಗಳನ್ನು ಇಡೇರಿಸುವ ಮೂಲಕ ಪದವಿ ಹೊಂದಿರುವ ಯುವಕರಿಗೆ ಉದ್ಯೋಗ ಸೇರಿದಂತೆ ಹಲವು ರೀತಿಯ ಉದ್ಯೋಗಕ್ಕೂ ಕೂಡ ಹೆಚ್ಚಿನ ಮುನ್ನಡೆಯನ್ನು ನೀಡಿ ಕೆಲಸ ಮಾಡಲು ಬದ್ಧವಾಗಿದ್ದೇನೆ ಎಂದರು. ನಾವು ಹೋದ ಕಡೆಯಲ್ಲ ಉತ್ತಮ ಬೆಂಬಲ ಸಿಕ್ಕಿದ್ದು ಗುಬ್ಬಿ ತಾಲೂಕಿನಲ್ಲೂ ಕೂಡ ನಾಲ್ಕು ಸಾವಿರಕ್ಕೂ ಹೆಚ್ಚು ಜನ ಈಗಾಗಲೇ ನೋಂದಾವಣೆಯನ್ನು ಮಾಡಿ ಕೊಂಡಿದ್ದಾರೆ ಎಂದು ತಿಳಿಸಿದರು. ಇದೇ ಸಂದರ್ಭದಲ್ಲಿ ತಾಲೂಕು ಕಾಂಗ್ರೆಸ್ಅಧ್ಯಕ್ಷ ವೆಂಕಟೇಶ್, ಮುಖಂಡರಾದ ಕೊಪ್ಪ ದೇವರಾಜು, ಪಟ್ಟಣ ಪಂಚಾಯಿತಿ ಮಾಜಿ…

Read More

ತಿಪಟೂರು: ನಗರದ ಗ್ರಾಮದೇವತೆ ಶ್ರೀ ಕೆಂಪಮ್ಮ ದೇವಿ ದೇವಾಲಯದ ಆವರಣದಲ್ಲಿ ಹಿಂದೂ ಸಮಾಜೋತ್ಸವ ಸಮಿತಿ ಹಾಗೂ ವಿವಿಧ ಸಂಘಟನೆಗಳ ಸಹಯೋಗದೊಂದಿಗೆ ಫೆಬ್ರವರಿ 9 ರಂದು ಬೃಹತ್ ‘ಹಿಂದೂ ಸಮಾಜೋತ್ಸವ’ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿಯ ಮುಖಂಡ ಲೋಕೇಶ್ ಅವರು ತಿಳಿಸಿದ್ದಾರೆ. ಭವ್ಯ ಶೋಭಾಯಾತ್ರೆ ಮತ್ತು ಸಾಂಸ್ಕೃತಿಕ ವೈಭವ ಕಾರ್ಯಕ್ರಮದ ಅಂಗವಾಗಿ ನಗರದ ಪ್ರಮುಖ ರಸ್ತೆಗಳಲ್ಲಿ ಅದ್ಧೂರಿ ಶೋಭಾಯಾತ್ರೆ ಜರುಗಲಿದೆ. ಗ್ರಾಮದೇವತೆ ಶ್ರೀ ಕೆಂಪಮ್ಮ ದೇವಿ ದೇವಸ್ಥಾನದಿಂದ ಮೆರವಣಿಗೆಗೆ ಚಾಲನೆ ಸಿಗಲಿದೆ. ಕಲಾತಂಡಗಳು: ಬಸವ ವೀರಭದ್ರ ಡೊಳ್ಳು ಕುಣಿತ ಹಾಗೂ ವೀರಗಾಸೆ ತಂಡಗಳಿಂದ ಸಾಂಸ್ಕೃತಿಕ ಪ್ರದರ್ಶನ. ಉತ್ಸವ ಮೂರ್ತಿಗಳು: ಕೆಂಪಮ್ಮ ದೇವಿ, ಕಲ್ಲೇಶ್ವರ ಸ್ವಾಮಿ ಮತ್ತು ಚಿಕ್ಕಮ್ಮ ದೇವಿ ದೇವರುಗಳ ಉತ್ಸವ. ದೇಶಭಕ್ತಿಯ ಪ್ರತೀಕ: ಭಾರತಾಂಬೆಯ ಭವ್ಯ ಚಿತ್ರಪಟಗಳ ಮೆರವಣಿಗೆ. ಈ ಧಾರ್ಮಿಕ ಸಭೆಯಲ್ಲಿ ಕೆರೆಗೋಡಿ ರಂಗಾಪುರ ಸುಕ್ಷೇತ್ರದ ಶ್ರೀ ಗುರು ಪರದೇಶಿ ಕೇಂದ್ರೀಯ ಸ್ವಾಮೀಜಿಯವರು ದಿವ್ಯ ಸಾನಿಧ್ಯ ವಹಿಸಿ ಆಶೀರ್ವಚನ ನೀಡಲಿದ್ದಾರೆ. ಮುಖ್ಯ ಭಾಷಣಕಾರರಾಗಿ ವಿದ್ಯಾರ್ಥಿ ಪರಿಷತ್ ಮುಖಂಡರಾದ ಮಾಚೇನಹಳ್ಳಿ ಪೃಥ್ವಿ…

Read More