Author: admin

ಲೋಕಸಭಾ ಚುನಾವಣೆಯ ಬಿಸಿ ಹೆಚ್ಚಾಗುತ್ತಿದ್ದು, ಇದೀಗ 21 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಹರಡಿರುವ 102 ಸಂಸದೀಯ ಕ್ಷೇತ್ರಗಳಿಗೆ ಏಪ್ರಿಲ್ 19 ರಂದು ಲೋಕಸಭಾ ಚುನಾವಣೆಯ ಮೊದಲ ಹಂತದಲ್ಲಿ ಮತದಾನ ನಡೆಯಲಿದೆ. ರಾಷ್ಟ್ರಪತಿಗಳ ಪರವಾಗಿ ಚುನಾವಣಾ ಆಯೋಗ ಹೊರಡಿಸಿರುವ ಅಧಿಸೂಚನೆಯ ಪ್ರಕಾರ, ನಾಮಪತ್ರ ಸಲ್ಲಿಸಲು ಮಾರ್ಚ್ 27 ಕೊನೆಯ ದಿನವಾಗಿದೆ. ಹಬ್ಬದ ಕಾರಣದಿಂದಾಗಿ, ಮೊದಲ ಹಂತದಲ್ಲಿ ಮತದಾನಕ್ಕೆ ಹೋಗುವ ಬಿಹಾರದ ಲೋಕಸಭಾ ಸ್ಥಾನಗಳಿಗೆ ನಾಮಪತ್ರ ಸಲ್ಲಿಸಲು ಮಾರ್ಚ್ 28 ಕೊನೆಯ ದಿನವಾಗಿದೆ. ಬಿಹಾರದ 40 ಕ್ಷೇತ್ರಗಳ ಪೈಕಿ ನಾಲ್ಕು ಕ್ಷೇತ್ರಗಳಲ್ಲಿ ಮೊದಲ ಹಂತದಲ್ಲಿ ಮತದಾನ ನಡೆಯಲಿದೆ. ಮಾರ್ಚ್ 28ರಂದು ನಾಮನಿರ್ದೇಶನ ಪತ್ರಗಳನ್ನು ಪರಿಶೀಲಿಸಲಾಗುತ್ತದೆ. ಬಿಹಾರಕ್ಕೆ, ಇದು ಮಾರ್ಚ್ 30 ರಂದು ನಡೆಯಲಿದೆ. ಇನ್ನು ತಮಿಳುನಾಡಿನ ಎಲ್ಲಾ 29 ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ನಾಮಪತ್ರ ಹಿಂಪಡೆಯಲು ಮಾರ್ಚ್ 20 ಕೊನೆಯ ದಿನವಾಗಿದ್ದರೆ, ಬಿಹಾರಕ್ಕೆ ಏಪ್ರಿಲ್ 2 ಕೊನೆಯ ದಿನವನ್ನಾಗಿ ನಿಗದಿಪಡಿಸಲಾಗಿದೆ. 18ನೇ ಲೋಕಸಭೆಗೆ ಏಪ್ರಿಲ್ 19ರಂದು ಚುನಾವಣೆ ಆರಂಭವಾಗಲಿದ್ದು, ನಂತರದ…

Read More

ಈಶಾ ಫೌಂಡೇಶನ್ ಮುಖ್ಯಸ್ಥ ಸದ್ಗುರು ಅವರು ಇತ್ತೀಚೆಗೆ  “ಮೆದುಳಿನ ಶಸ್ತ್ರಚಿಕಿತ್ಸೆಗೆ ” ಒಳಗಾಗಿದ್ದು ಪ್ರಸ್ತುತ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಇಶಾ ಫೌಂಡೇಶನ್ ತಿಳಿಸಿದೆ. ಕಳೆದ ವಾರದಿಂದ ತೀರ ತಲೆನೋವಿನಿಂದ ಬಳಲುತ್ತಿದ್ದ ಸದ್ಗುರು ಅವರು ಆಸ್ಪತ್ರೆಗೆ ದಾಖಲಾಗಿದ್ದು, ಬಳಿಕ ವೈದ್ಯರು ಅವರ ತಲೆಯ ಸ್ಕ್ಯಾನಿಂಗ್ ಮಾಡಿಸಿದಾಗ, ಮೆದುಳಿನ ಒಳಗೆ ರಕ್ತಸ್ರಾವ ಆಗಿರುವುದು ಕಂಡುಬಂದಿದೆ ತಕ್ಷಣ ವೈದ್ಯರು ಸದ್ಗುರು ಅವರಿಗೆ ಶಸ್ತ್ರ ಚಿಕಿತ್ಸೆ ಮಾಡಿದ್ದು ಸದ್ಯ ಚೇತರಿಸಿಕೊಳ್ಳುತ್ತಿದ್ದಾರೆ. ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯರ ತಂಡ ಅವರ ಆರೋಗ್ಯದ ಬಗ್ಗೆ ಮಾಹಿತಿ ಹಂಚಿಕೊಂಡಿದ್ದು ಸದ್ಗುರು ಅವರ ಆರೋಗ್ಯ ನಿರೀಕ್ಷೆಗೂ ಮೀರಿ ಸುಧಾರಿಸುತ್ತಿದೆ ಎಂದು ಹೇಳಿದ್ದಾರೆ” ಎಂದು ಇಶಾ ಫೌಂಡೇಶನ್ ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಅಪೊಲೊ ಆಸ್ಪತ್ರೆಯ ಡಾ. ವಿನಿತ್ ಸೂರಿ ಅವರನ್ನು ಉಲ್ಲೇಖಿಸಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಲೋಕಸಭೆ ಚುನಾವಣೆ ಚುನಾವಣೆ ಘೋಷಣೆ ಆದ ಬಳಿಕ ರಾಜ್ಯದಲ್ಲಿ ಅಕ್ರಮ ಹಣ ಸಾಗಾಟ ಹೆಚ್ಚಾಗಿದೆ. ಅಕ್ರಮ ಹಣ ಸಾಗಾಟ ಪತ್ತೆಗೆ ಪೊಲೀಸರು ಭರ್ಜರಿ ಕಾರ್ಯಾಚರಣೆಯನ್ನೂ ನಡೆಸುತ್ತಿದ್ದಾರೆ. ಅದರಲ್ಲೂ ಮಂಗಳವಾರ(ಮಾ.19) ಒಂದೇ ದಿನ ಬರೋಬ್ಬರಿ 3 ಕೋಟಿ ರೂ. ಹಣ ಸೀಜ್‌ ಮಾಡಿದ್ದಾರೆ. ಹಲವೆಡೆ, ಕಂತೆ ಕಂತೆ ನಗದು ಪತ್ತೆಯಾಗಿದ್ದರೆ, ರಾಮನಗರದಲ್ಲಿ ಗರಿ ಗರಿ ನೋಟಿನ ಜೊತೆ ರಾಶಿರಾಶಿ ಸೀರೆಗಳು ಸಿಕ್ಕಿವೆ. ಲೋಕಸಭೆ ಚುನಾವಣೆಯ ಹೊತ್ತಲ್ಲೇ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ರಾಮನಗರದ ದ್ಯಾವರಸೇಗೌಡನದೊಡ್ಡಿಯಲ್ಲಿರುವ ಖಾಸಗಿ ಗೋದಾಮಿನಲ್ಲಿ ರಾಶಿರಾಶಿ ಸೀರೆಗಳು ಪತ್ತೆಯಾಗಿವೆ. ಬರೋಬ್ಬರಿ 10 ಸಾವಿರಕ್ಕೂ ಹೆಚ್ಚು ಸೀರೆಗಳು ಪತ್ತೆಯಾಗಿವೆ. ಜೆಡಿಎಸ್​ ಕಾರ್ಯಕರ್ಯರು ದಾಳಿ ಮಾಡಿದ್ದು, ಕಾಂಗ್ರೆಸ್​ನವರು ಸೀರೆಗಳನ್ನು ತರಿಸಿದ್ದಾರೆಂದು ಆರೋಪ ಮಾಡಿದ್ದಾರೆ. ಸ್ಥಳಕ್ಕೆ ಡಿವೈಎಸ್​ಪಿ ದಿನಕರ್ ಶೆಟ್ಟಿ ಭೇಟಿ, ಪರಿಶೀಲನೆ ನಡೆಸಿದ್ದಾರೆ. ರಾಮನಗರದ ದ್ಯಾವರಸೇಗೌಡನದೊಡ್ಡಿಯಲ್ಲಿ ಸೀರೆಗಳು ಪತ್ತೆಯಾಗಿರುವ ಬಗ್ಗೆ ರಾಮನಗರ ಜಿಲ್ಲಾಧಿಕಾರಿ‌ ಡಾ.ಅವಿನಾಶ್ ಮೆನನ್ ರಾಜೇಂದ್ರನ್ ಹೇಳಿಕೆ ನೀಡಿದ್ದು, ಚುನಾವಣೆಗಾಗಿ ಸಂಗ್ರಹಿಸಿಟ್ಟಿದ್ದರಾ ಎಂಬ ಬಗ್ಗೆ ತನಿಖೆ ನಡೆಸುತ್ತೇವೆ. VRL ಗೋದಾಮಿನಲ್ಲಿ ಪತ್ತೆಯಾದ…

Read More

ತುಮಕೂರು:  ಲಂಚ ಸ್ವೀಕರಿಸುತ್ತಿದ್ದ ವೇಳೆ ಚಿಕ್ಕನಾಯಕನಹಳ್ಳಿ ತಹಶೀಲ್ದಾರ್ ಗೀತಾ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಚಿಕ್ಕನಾಯಕನಹಳ್ಳಿ ತಾಲೂಕಿನ ಗೋಡೆಕೆರೆ ಗ್ರಾಮದ ರೈತ ಮಲ್ಲಿಕಾರ್ಜುನ್ ಗೆ ಸೇರಿದ‌ 33 ಗುಂಟೆ ಜಮೀನನ್ನ ಭೂ ಪರಿವರ್ತನೆ ಮಾಡಿಕೊಡಲು 3 ಲಕ್ಷ ಲಂಚಕ್ಕೆ ಬೇಡಿಕೆಯಿಟ್ಟಿದ್ದ ತಹಶೀಲ್ದಾರ್ ಗೀತಾ,  ಇಂದು ಬೆಳಗ್ಗೆ 20 ಸಾವಿರ ಹಣ ಲಂಚ ಪಡೆದಿದ್ದರು. ಬಳಿಕ ಸಂಜೆ 30 ಸಾವಿರ ರೂಪಾಯಿ ಹಣ ಸ್ವೀಕರಿಸುತ್ತಿದ್ದ ವೇಳೆ ರೆಡ್‌ ಹ್ಯಾಂಡ್‌ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ತಹಶೀಲ್ದಾರ್‌ ತನ್ನ ಮನೆಗೆ ಕರೆಸಿಕೊಂಡು ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತರ ಬಲೆಗೆ ಬಿದ್ದಿದ್ದಾರೆ.  ತುಮಕೂರು ಲೋಕಾಯುಕ್ತ ಡಿವೈಎಸ್ ಪಿ ರಾಮಕೃಷ್ಣ ಹಾಗೂ ಉಮಾಶಂಕರ್ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆ ವೇಳೆ ತಹಶೀಲ್ದಾರ್‌ ಲಾಕ್‌ ಆಗಿದ್ದಾರೆ. ಸದ್ಯ ಚಿಕ್ಕನಾಯಕನಹಳ್ಳಿ ತಹಶೀಲ್ದಾರ್ ಗೀತಾ ಅವರನ್ನ ವಶಕ್ಕೆ ಪಡೆದ ಲೋಕಾಯುಕ್ತ ಅಧಿಕಾರಿಗಳು,  ತನಿಖೆ ಮುಂದುವರಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್…

Read More

ತುಮಕೂರು: ಖಾಸಗಿ ಬಸ್ ನಲ್ಲಿ ಆ್ಯಸಿಡ್ ಸಾಗಿಸುತ್ತಿದ್ದ ವೇಳೆ ಆ್ಯಸಿಡ್ ಇದ್ದ  ಡಬ್ಬಿ ಸಿಡಿದು ಐವರು ಪ್ರಯಾಣಿಕರಿಗೆ ಗಾಯಗಳಾಗಿರುವ ಘಟನೆ ತುಮಕೂರು ತಾಲೂಕು ಗುಳೂರು ಬಳಿ ನಡೆದಿದೆ. ಟಾಯ್ಲೆಟ್ ಗೆ ಬಳಸುವ ಆ್ಯಸಿಡ್ ಬಾಟಲ್ ಸ್ಪೋಟಹೊಂದಿದೆ. ಖಾಸಗಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಬಸ್ ನಲ್ಲಿದ್ದ ಇಬ್ಬರಿಗೆ ಗಂಭೀರ ಗಾಯವಾಗಿವೆ. ನಾಜೀಯಾ ಸುಲ್ತಾನ್, ರಾಜಲಕ್ಷ್ಮೀ ಗಾಯಗೊಂಡವರಾಗಿದ್ದು, ಆಸಿಡ್ ಸಾಗಿಸುತ್ತಿದ್ದ ಶಕೀಲಾ ಬಾನು ಕೈಗೆ ಸಹ ಗಾಯವಾಗಿದೆ. ಖಾಸಗಿ ಬಸ್ ‌ನಲ್ಲಿ ಆ್ಯಸಿಡ್ ಬಾಟಲ್ ಇಟ್ಟುಕೊಂಡು ತುಮಕೂರು ಕಡೆ ಬರುತ್ತಿದ್ದ ಮಹಿಳೆಯು ತುಮಕೂರು ತಾಲೂಕಿನ ಹೊನ್ನುಡಿಕೆ ಹ್ಯಾಂಡ್ ಪೋಸ್ಟ್ ನಲ್ಲಿ ಬಸ್ ಹತ್ತಿದರು. ಈ ವೇಳೆ ಖಾಸಗಿ ಬಸ್ ನಲ್ಲಿ  ಆ್ಯಸಿಡ್  ತುಂಬಿದ್ದ ಬಾಟಲ್ ಸ್ಪೋಟಗೊಂಡಿದೆ.  ಒಂದು ಕ್ಷಣ ಖಾಸಗಿ ಬಸ್ ನಲ್ಲಿದ್ದ ಪ್ರಯಾಣಿಕರು ಶಾಕ್ ಆಗಿದ್ದರು. ಘಟನೆಯಿಂದ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಸಣ್ಣ ಪುಟ್ಟ ಗಾಯವಾದವರನ್ನ ತುಮಕೂರು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮೇಲ್ನೋಟಕ್ಕೆ ಬಾಟಲ್ ನಲ್ಲಿ ಆ್ಯಸಿಡ್…

Read More

ಬೆಂಗಳೂರು: ಮುಂಬರುವ ಲೋಕಸಭಾ ಚುನಾವಣೆಯ ಟಿಕೆಟ್‌ ಕೈ ತಪ್ಪಿದ ಹಿನ್ನೆಲೆಯಲ್ಲಿ , ಮಾಜಿ ಸಚಿವ ಕೆ.ಎಸ್‌.ಈಶ್ವರಪ್ಪ ಸ್ವತಂತ್ರ್ಯ ಅಭ್ಯರ್ಥಿಯಾಗಿ ಬಿಜೆಪಿ ವಿರುದ್ದ ಸ್ಪರ್ಧಿಸುತ್ತಿರುವ ಬಗ್ಗೆ, ಮಾಜಿ ಸಿಎಂ ಯಡಿಯೂರಪ್ಪ ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇಂಥಾ ತೀರ್ಮಾನ ಬೇಡ ಎಂದು ಸಾಕಷ್ಟು ಬಾರಿ ಹೇಳಿದ್ದೇವೆ ಎಂದರು. ನಾನೂ ಸೇರಿದಂತೆ ಹಲವು ಹಿರಿಯ ನಾಯಕರು ಈಶ್ವರಪ್ಪ ಅವರನ್ನು ಮನವೊಲಿಸಲು ಯತ್ನಿಸಿದ್ದೇವೆ. ಆದರೆ ಈಶ್ವರಪ್ಪ ಕೇಳುತ್ತಿಲ್ಲ. ಮುಂದೆ ಏನಾಗುತ್ತದೆಯೋ ನೋಡೋಣ. ಎಲ್ಲವರೂ ಸರಿ ಹೋಗಲಿದೆ ಎಂದು ಭಾವಿಸುತ್ತೇನೆ ಎಂದು ಬಿ.ಎಸ್‌.ವೈ ಹೇಳಿದರು. ಜೊತೆಗೆ, ಮಾಧುಸ್ವಾಮಿಯವರ ಜೊತೆಗೂ ಮಾತನಾಡಲಿದ್ದೇನೆ ಎಂದರು. ಟಿಕೆಟ್‌ ಘೋಷಣೆಯಾಗುತ್ತಿದ್ದಂತೆಯೇ ಜೆಡಿಸ್‌ ಮತ್ತು ಬಿಜೆಪಿ ಒಟ್ಟಾಗಿ ಪ್ರಚಾರ ನಡೆಸಲಿದೆ. ಮಾಜಿ ಪ್ರಧಾನಿ ದೇವೇಗೌಡರೂ ಸಹ ಪ್ರಚಾರದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಬಿ.ಎಸ್‌. ಯಡಿಯೂರಪ್ಪ ಹೇಳಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಹುಬ್ಬಳ್ಳಿ: ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ನನಗೆ ಈ ಬಾರಿ ಬೆಳಗಾವಿಯಿಂದ ಟಿಕೆಟ್‌ ಸಿಕ್ಕೇ ಸಿಗುತ್ತದೆ. ನಾನು ಅಲ್ಲಿಂದಲೇ ಸ್ಪರ್ಧಿಸಲಿದ್ದೇನೆ ಎಂದು ಮಾಜಿ ಸಿಎಂ ಜಗದೀಶ್‌ ಶೆಟ್ಟರ್‌ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಧಾರವಾಡದಿಂದ ಟಿಕೆಟ್‌ ಸಿಗುವ ಬಗ್ಗೆ ಶೆಟ್ಟರ್‌ ಮೊದಲು ವಿಶ್ವಾಸ ಹೊಂದಿದ್ದರು. ಆದರೆ ಟಿಕೆಟ್‌ ಕೈತಪ್ಪಿ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿಗೆ ಲಭಿಸಿದೆ. ಭಾರೀ ನಿರಾಸೆಯ ಬಳಿಕ ಇದೀಗ ಶೆಟ್ಟರ್‌ ತಮಗೆ ಬೆಳಗಾವಿಯಿಂದ ಟಿಕೆಟ್‌ ಸಿಗುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಇಂದು ಅಥವಾ ನಾಳೆ ಬಿಜೆಪಿ ಅಭ್ಯರ್ಥಿಗಳನ್ನು ಫೈನಲ್ ಮಾಡುತ್ತಾರೆ. ಬೆಳಗಾವಿಯಿಂದ ನನಗೆ ಟಿಕೆಟ್ ಸಿಗುತ್ತದೆ. ಅಲ್ಲಿಂದ ನಾನು ಸ್ಪರ್ಧೆ ಮಾಡೇ ಮಾಡುತ್ತೇನೆ. ಇದರಲ್ಲಿ ಯಾವುದೇ ಸಂಶಯ ಬೇಡ. ಈಗಾಗಲೇ ಬೆಳಗಾವಿಯ ಪ್ರಮುಖರ ಜೊತೆ ಎರಡ್ಮೂರು ಬಾರಿ ಮಾತನಾಡಿದ್ದೇನೆ. ಎಲ್ಲರೂ ಸೇರಿ ಚುನಾವಣೆ ಮಾಡೋಣ‌ ಎಂದು ಹೇಳಿದ್ದಾರೆ ಎಂದು ತಿಳಿಸಿದರು. ಅಧಿಕೃತವಾಗಿ ಟಿಕೆಟ್ ಘೋಷಣೆಯ ನಂತರ ಬೆಳಗಾವಿಗೆ ಬರುವಂತೆ ಅಲ್ಲಿನ ಮುಖಂಡರು ಹೇಳಿದ್ದಾರೆ. ಟಿಕೆಟ್ ಘೋಷಣೆ ಆಗುತ್ತಿದ್ದಂತೆ…

Read More

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಅವರ ಮನೆಗೆ ಚುನಾವಣಾ ಅಧಿಕಾರಿಗಳು ದಿಢೀರ್‌ ದಾಳಿ ನಡೆಸಿದ್ದಾರೆ. ಹೆಬ್ಬಾಳ್ಕರ್‌ ತಮ್ಮ ಗೃಹ ಕಚೇರಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು ಹಾಗೂ ಆಶಾ ಕಾರ್ಯಕರ್ತೆಯರ ಸಭೆಯನ್ನು ನಡೆಸಿದ್ದು, ಇದೇ ವೇಳೆ ನಿವಾಸಕ್ಕೆ ಭೇಟಿ ನೀಡಿದ ಚುನಾವಣಾ ಅಧಿಕಾರಿಗಳು ಸಭೆಯನ್ನು ಅರ್ಧಕ್ಕೆ ಮೊಟಕುಗೊಳಿಸಿದ್ದಾರೆ. ಸಚಿವೆ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆಯ ಪ್ರಕರಣವನ್ನೂ ದಾಖಲಿಸುವುದಾಗಿ ಎಚ್ಚರಿಸಿದ್ದಾರೆ. ಮೂಲಗಳ ಪ್ರಕಾರ ಕುವೆಂಪು ನಗರದಲ್ಲಿರುವ ಲಕ್ಷ್ಮಿ ಹೆಬ್ಬಾಳ್ಕರ್‌ ಅವರ ನಿವಾಸದ ಪಕ್ಕದಲ್ಲಿ ವಿಶಾಲವಾದ ಗೃಹಕಚೇರಿಯಿದೆ. ಬೆಳಗ್ಗೆಯಿಂದ 500ಕ್ಕೂ ಹೆಚ್ಚು ಅಂಗನವಾಡಿ ಆಶಾಕಾರ್ಯಕರ್ತೆಯರು ಸೇರಿದ್ದು, ಈ ಬಗ್ಗೆ ಅಪರಿಚಿತರೊಬ್ಬರು ಚುನಾವಣಾ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಸ್ಥಳಕ್ಕೆ ಧಾವಿಸಿದ ಚುನಾವಣಾ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದ ಎಲ್ಲಾ ಕಾರ್ಯಕರ್ತೆಯರನ್ನು ಹೊರಗೆ ಕಳುಹಿಸಿ, ಹಲವರಿಂದ ಮಾಹಿತಿ ಸಂಗ್ರಹಿಸಿ ನಂತರ ಸಚಿವೆಯಿಂದ ವಿವರ ಪಡೆದಿದ್ದಾರೆ. ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ತಮ್ಮ ಪುತ್ರ ಮೃಣಾಲ್‌ ಹೆಬ್ಬಾಳ್ಕರ್‌ ಕಾಂಗ್ರೆಸ್‌ನಿಂದ ಸ್ಪರ್ಧಿಸುವುದು ಖಚಿತವಾಗಿದೆ. ಈ ಹಿನ್ನೆಲೆ…

Read More

ಬೆಂಗಳೂರು: ʻʻನಾನೇ ಸ್ಟ್ರಾಂಗ್ ನಾನೇ ಸ್ಟ್ರಾಂಗ್‌ ಎನ್ನುವ ಸಿದ್ದರಾಮಯ್ಯನವರೇ ನಿಮ್ಮ ಪರಿಸ್ಥಿತಿ ಹೇಗಿದೆ; 5 ವರ್ಷ ಸಿಎಂ ಆಗಿರುವ ಖಾತರಿಯೇ ನಿಮಗಿಲ್ಲʼʼ ಎಂದು ಬಿಜೆಪಿ ನಿಕಟಪೂರ್ವ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ರಾಜ್ಯದ ಮಾಜಿ ಸಚಿವ ಸಿ.ಟಿ.ರವಿ ಗೇಲಿ ಮಾಡಿದ್ದಾರೆ. ನಗರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನೇ 5 ವರ್ಷ ಸಿಎಂ, ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಎಂದು ಹೇಳಿಸಿಕೊಳ್ಳುವ ಸ್ಥಿತಿ ಅವರದು. ದುರ್ಬಲ ಆಡಳಿತ ಸಿದ್ದರಾಮಯ್ಯರದು. ಕಳೆದೊಂದು ವರ್ಷವನ್ನು ಗಮನಿಸಿದರೆ ಆಡಳಿತದ ಹಿಡಿತವೇ ಅವರಿಗೆ ಸಿಕ್ಕಿಲ್ಲ ಎಂದು ಅರಿವಾಗುತ್ತದೆ ಟೀಕಿಸಿದರು. ನೀವೇ ನೇಮಕ ಮಾಡಿಕೊಂಡ ರಾಜಕೀಯ ಕಾರ್ಯದರ್ಶಿ, ಮುಖ್ಯಮಂತ್ರಿಗಳ ಸಲಹೆಗಾರರು ‘ಅಭಿವೃದ್ಧಿಗೆ ಬಿಡಿಗಾಸೂ ಕೊಡುತ್ತಿಲ್ಲ’ ಎಂದು ನಿಮ್ಮ ಗುಣಗಾನ ಮಾಡಿದ್ದಾರೆ ಎಂದು ವ್ಯಂಗ್ಯವಾಡಿದರು. ಹಿರಿಯ ಸಚಿವರು ಮತ್ತು ಶಾಸಕರೇ ನಿಮ್ಮ ಸ್ಟ್ರಾಂಗ್ ಆಡಳಿತಕ್ಕೆ ಸರ್ಟಿಫಿಕೇಟ್ ಕೊಟ್ಟಿದ್ದಾರೆ. ನಿಮ್ಮ ಸರಕಾರದ ನೀತಿಯ ಪರಿಣಾಮವಾಗಿ ಕಾನೂನು- ಸುವ್ಯವಸ್ಥೆ ಹದಗೆಟ್ಟಿದೆ. ಮಹಿಳಾ ದೌರ್ಜನ್ಯ ಮಾತ್ರವಲ್ಲ ಬೆತ್ತಲೆ ಮೆರವಣಿಗೆ ನಡೆಯುತ್ತಿದೆ.…

Read More

ಬಳ್ಳಾರಿ: ಬಳ್ಳಾರಿ ಗ್ರಾಮೀಣ ಜೆಸ್ಕಾಂ ವ್ಯಾಪ್ತಿಯ 110 ಕೆ.ವಿ ಅಲ್ಲಿಪುರ-ಬಳ್ಳಾರಿ ಉತ್ತರ ಮಾರ್ಗದ ಲಿಲೊ ಕಾಮಗಾರಿಯನ್ನು ತುರ್ತಾಗಿ ಕೈಗೆತ್ತಿಕೊಳ್ಳುತ್ತಿರುವುದರಿಂದ 110/110 ಕೆ.ವಿ ಸೋಮಸಮುದ್ರ ವಿದ್ಯುತ್ ಉಪಕೇಂದ್ರದ 11 ಕೆ.ವಿ ಮಾರ್ಗದಲ್ಲಿ ಮಾ.21 ರಂದು ಬೆಳಿಗ್ಗೆ 8 ರಿಂದ ಮಧ್ಯಾಹ 3 ರ ವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಗ್ರಾಮೀಣ ಜೆಸ್ಕಾಂನ ಕಾರ್ಯನಿರ್ವಾಹಕ ಅಭಿಯಂತರರಾದ ಮೋಹನ್ ಬಾಬು ಅವರು ತಿಳಿಸಿದ್ದಾರೆ. ಜಿಲ್ಲೆಯ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಎಫ್-2 ಐ.ಪಿ ಸೆಟ್ ಫೀಡರ್ ಸೋಮಸಮುದ್ರ ಮಾರ್ಗದ ಸೋಮಸಮುದ್ರ ವಕ್ರಾಣಿ ಕ್ಯಾಂಪ್, ಲಕ್ಷ್ಮಿನಗರ ಕ್ಯಾಂಪ್, ವೀರಾಂಜಿನೇಯ್ಯ ಕ್ಯಾಂಪ್, ಕೋಳೂರು, ಮದಿರೆ, ಕೊಳಗಲ್ಲು, ಭಾಗ್ಯ ನಗರ ಕ್ಯಾಂಪ್, ಮಲ್ಲಾರೆಡ್ಡಿ ಕ್ಯಾಂಪ್, ಕೃಷಿ ಪ್ರದೇಶಗಳು. ಎಫ್-3/11 ಶ್ರೀಧರಗಡ್ಡೆ ಎನ್.ಜೆ.ವೈ ಫೀಡರ್ ಮಾರ್ಗದ ಸೋಮಸಮುದ್ರ ವಕ್ರಾಣಿ ಕ್ಯಾಂಪ್, ಲಕ್ಷ್ಮಿನಗರ ಕ್ಯಾಂಪ್, ವೀರಾಂಜಿನೇಯ್ಯ ಕ್ಯಾಂಪ್, ಕೋಳೂರು, ಮದಿರೆ, ಕೊಳಗಲ್ಲು, ಭಾಗ್ಯ ನಗರ ಕ್ಯಾಂಪ್, ಮಲ್ಲಾರೆಡ್ಡಿ ಕ್ಯಾಂಪ್ ಹಾಗೂ ಗ್ರಾಮಗಳು. ಕೋಳೂರು ಕ್ರಾಸ್, ದಮ್ಮೂರು, ಡಿ.ಕಗ್ಗಲ್, ವಿ.ಟಿ ಕ್ಯಾಂಪ್ ಸೇರಿ ಮುಂತಾದ…

Read More