Subscribe to Updates
Get the latest creative news from FooBar about art, design and business.
- ದಳವಾಯಿಹಳ್ಳಿಯಲ್ಲಿ ಕುಡಿಯುವ ನೀರಿಗೆ ಹಾಹಾಕಾರ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಗ್ರಾಮಸ್ಥರ ಆಕ್ರೋಶ, BPS ನಿಂದ ಟ್ಯಾಂಕರ್ ನೀರು ಪೂರೈಕೆ
- ಪಾವಗಡ: ದೊಡ್ಡಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ 2026–27ನೇ ಸಾಲಿನ ದಾಖಲಾತಿ ಆರಂಭ
- ರಾಜ್ಯಸಭೆ ಚುನಾವಣೆಗೂ ಸಚಿವ ಸಂಪುಟ ಪುನರಾಚನೆಗೂ ಯಾವುದೇ ಸಂಬಂಧವಿಲ್ಲ: ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟನೆ
- ಸಿರಾದಲ್ಲಿ ಮೇ 26 ರಂದು ಜೆಡಿಎಸ್ ಪಕ್ಷದ ಪದಾಧಿಕಾರಿಗಳ ನೇಮಕಾತಿ ಕಾರ್ಯಕ್ರಮ
- ಮಕ್ಕಳ ಕೈಗೆ ಮೊಬೈಲ್ ಕೊಡುವ ಮುನ್ನ ಈ ಸುದ್ದಿ ಓದಿ: 1.98 ಲಕ್ಷ ರೂಪಾಯಿ ಕಳೆದುಕೊಂಡ ತುಮಕೂರಿನ ವ್ಯಕ್ತಿ!
- ಚಿಲ್ಲರೆಗಳಿಗೆ ನಾನು ಹೆದರುವ ಮಗನೇ ಅಲ್ಲ ಕೀಳುಮಟ್ಟದ ರಾಜಕಾರಣ ನನಗೆ ಗೊತ್ತಿಲ್ಲ: ಶಾಸಕ ಎಸ್. ಆರ್.ಶ್ರೀನಿವಾಸ್ ತಿರುಗೇಟು
- ತುಮಕೂರು ಜಿಲ್ಲೆಯಲ್ಲಿ 0.3 ಮಿ.ಮೀ. ಮಳೆ
- ಕೆಎಸ್ ಆರ್ ಟಿಸಿ ಬಸ್ ದರ ಏರಿಕೆ ಖಚಿತ: ಸಾರಿಗೆ ಸಂಸ್ಥೆ ಅಧ್ಯಕ್ಷ ಎಸ್.ಆರ್. ಶ್ರೀನಿವಾಸ್
Author: admin
ಮೈಸೂರು: ಮೈಸೂರಿನ ಹುಣಸೂರು ತಾಲೂಕಿನ ಹರವೆ ಗ್ರಾಮದಲ್ಲಿ ಅರೆಬೆಂದ ಸ್ಥಿತಿಯಲ್ಲಿ ಚಿಲ್ಲರೆ ಅಂಗಡಿ ವ್ಯಾಪಾರಿಯಾಗಿದ್ದ ಎಚ್.ಸಿ. ಹರೀಶ್ (40) ಎಂಬುವರ ಮೃತದೇಹ ಪತ್ತೆಯಾಗಿದೆ. ಸಾಲಿಗ್ರಾಮ ತಾಲೂಕಿನ ಕುಪ್ಪೆ ಅರಣ್ಯದ ಮಳಲಿ- ಹೊಸಕೋಟೆ ರಸ್ತೆಯ ಪಕ್ಕದಲ್ಲಿ ಮೃತದೇಹ ಪತ್ತೆಯಾಗಿದ್ದು, ಸ್ನೇಹಿತರು ಬಂದು ಕರೆದುಕೊಂಡು ಹೋಗಿ ಇವರನ್ನು ಕೊಲೆ ಮಾಡಿದ್ದಾರೆ ಎಂಬ ಸಂಶಯ ಕೇಳಿಬರುತ್ತಿದೆ. ಮಾಹಿತಿ ತಿಳಿದ ಸಾಲಿಗ್ರಾಮ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಕೊಲೆಯ ಹಿಂದಿನ ವಿದ್ಯಮಾನಗಳ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಬೆಂಗಳೂರು: ಗಂಡನ ಕಿರುಕುಳದಿಂದ ಬೇಸತ್ತ ಮಹಿಳೆಯೊಬ್ಬಳು ಹೆತ್ತ ಮಗುವನ್ನು ಉಸಿರುಗಟ್ಟಿಸಿ ಕೊಂದು ತಾನೂ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಕೆ.ಆರ್.ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮಗು ಶೃತಿಕಾ(2) ಸಾವನ್ನಪ್ಪಿದ್ದು, ತಾಯಿ ಚಿನ್ನಾ ಆಸ್ಪತೆಯಲ್ಲಿ ಗಂಭೀರ ಸ್ಥಿತಿಯಲ್ಲಿದ್ದಾರೆ. ಪ್ರತಿನಿತ್ಯ ಗಂಡ ಲಕ್ಷ್ಮೀ ನಾರಾಯಣ ವಿನಾಕಾರಣ ನೀಡುತ್ತಿದ್ದ ಹಿಂಸೆಯಿಂದ ಚಿನ್ನಾ ಬೇಸತ್ತಿದ್ದಳು. ಇದರಿಂದಾಗಿ, ಮಗುವನ್ನು ಉಸಿರುಗಟ್ಟಿಸಿ ಹತ್ಯೆಗೈದ ಚಿನ್ನಾ ತಾನೂ ಸಹ ಕುತ್ತಿಗೆ ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಸ್ಥಳೀಯರು ಆಕೆಯನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದು ಚಿಕಿತ್ಸೆ ಮುಂದುವರೆದಿದೆ. ಪತಿ ಲಕ್ಷ್ಮೀ ನಾರಾಯಣ್ ನನ್ನು ವಶಕ್ಕೆ ಪಡೆದಿರುವ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಹಾಸನ: ಹಾಸನದ ಹೊಳೆನರಸೀಪುರ ತಾಲೂಕಿನ ದೊಡ್ಡಕುಂಚೇವು ಗ್ರಾಮದಲ್ಲಿ ಬೆಂಕಿ ಆರಿಸಲು ಹೋದ ರೈತ ಬೆಂಕಿಗಾಹುತಿಯಾದ ದುರಂತ ಘಟನೆ ನಡೆದಿದೆ. ಕೃಷ್ಣೇಗೌಡ (62) ಮೃತರೈತನಾಗಿದ್ದಾನೆ. ಕೃಷ್ಣೇಗೌಡ ತಮ್ಮ ಜಮೀನಿಗೆ ತೆರಳಿದ್ದ ವೇಳೆ, ಜಮೀನಿನ ಬದುವಿನಲ್ಲಿದ್ದ ಒಣ ಹುಲ್ಲಿಗೆ ಬೆಂಕಿ ತಗುಲಿದ್ದನ್ನು ಕಂಡಿದ್ದಾರೆ. ತೋಟಕ್ಕೆಲ್ಲಾ ಬೆಂಕಿ ವ್ಯಾಪಿಸುತ್ತದೆ ಎಂದು ಭೀತಿಗೊಂಡ ಕೃಷ್ಣೇಗೌಡರು ಬೆಂಕಿ ಆರಿಸಲು ಹೋಗಿದ್ದು, ಧಗಧಗಿಸಿ ಉರಿಯುತ್ತಿದ್ದ ಬೆಂಕಿಗೆ ಸಿಲುಕಿ ಕೃಷ್ಣೇಗೌಡರು ಸುಟ್ಟ ಗಾಯಗಳಿಂದ ಸ್ಥಳದಲ್ಲೇ ಕುಸಿದು ಬಿದ್ದಿದ್ದರು. ಕೂಡಲೇ ಗಾಯಗೊಂಡ ರೈತನನ್ನು ಗ್ರಾಮಸ್ಥರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿದ್ದರು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಹೊಳೆನರಸೀಪುರ ತಾಲೂಕು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲೇ ಕೃಷ್ಣೇಗೌಡರು ಮೃತಪಟ್ಟಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಬೆಂಗಳೂರು: ಬೆಂಗಳೂರಿನ ಜೆ.ಪಿ.ನಗರದ 3ನೇ ಹಂತದಲ್ಲಿ ಒಂದೇ ಕುಟುಂಬದ ಮೂವರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ತಾಯಿ ಸುಕನ್ಯಾ (48), ಮಕ್ಕಳಾದ ನಿಖಿತ್, ನಿಶಿತ್ (28) ಮೃತ ದುರ್ದೈವಿಗಳು. ಘಟನಾ ಸ್ಥಳಕ್ಕೆ ಜೆ.ಪಿ.ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸ್ಥಳೀಯರು ಮತ್ತು ಸಂಬಂಧಿಕರಿಂದ ಮಾಹಿತಿ ಪಡೆಯುತ್ತಿದ್ದಾರೆ. ಉಡುಪಿ ಮೂಲದ ಅಂಬಲಪಾಡಿ ನಿವಾಸಿಗಳಾಗಿರುವ ಕುಟುಂಬ, ಜೆಪಿ ನಗರದಲ್ಲಿ ವಾಸವಾಗಿದ್ದರು. ನಿನ್ನೆ (ಮಾ.19) ರ ಸಂಜೆ ಮನೆಯಲ್ಲಿ ಪತಿ ಇಲ್ಲದ ಸಮಯದಲ್ಲಿ ಮನೆಗೆ ಬಂದ ಬ್ಯಾಂಕ್ ಸಿಬ್ಬಂದಿಗಳು ಸಾಲ ವಾಪಾಸ್ ಕೇಳಿದ್ದರಂತೆ. ಖಾಸಗಿ ಬ್ಯಾಂಕ್ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಇನ್ನು ಸ್ಥಳಕ್ಕೆ ಎಫ್ ಎಸ್ ಎಲ್ ಸಿಬ್ಬಂದಿ ಮತ್ತು ಸೋಕೋ ಟೀಂ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ದೆಹಲಿಯ ಮದ್ರಾಸ್ ಕಾಫಿ ಹೌಸ್ ನ ಈ ವೀಡಿಯೋವನ್ನು ನೋಡಿ ಜನ ಆಶ್ಚರ್ಯಚಕಿತರಾಗಿದ್ದಾರೆ. ಅಷ್ಟೇ ಅಲ್ಲ, ದುಬಾರಿ ಹೋಟೆಲ್ ಗಳಿಗಿಂತಲೂ ಉಳಿದ ಸಣ್ಣ ಪುಟ್ಟ ಹೊಟೇಲ್ ಗಳೇ ವಾಸಿ ಎಂದು ಜನರಾಡಿಕೊಳ್ಳುತ್ತಿದ್ದಾರೆ. ದೇಶದ ರಾಜಧಾನಿ ದೆಹಲಿಯಿಂದ ಈ ಅಚ್ಚರಿಯ ಪ್ರಕರಣ ಬೆಳಕಿಗೆ ಬಂದಿದ್ದು, ಕನ್ನಾಟ್ ಪ್ಲೇಸ್ನಲ್ಲಿರುವ ಪ್ರಸಿದ್ಧ ಮದ್ರಾಸ್ ಕಾಫಿ ಹೌಸ್ ನಲ್ಲಿನ ದೋಸೆಯಲ್ಲಿ 8 ಜಿರಳೆಗಳು ಪತ್ತೆಯಾಗಿವೆ. ಅದರ ವೀಡಿಯೋ ಈಗ ವೈರಲ್ ಆಗಿದೆ. ಈ ವಿಡಿಯೋವನ್ನು ಇಶಾನಿ ಎಂಬ ಬಳಕೆದಾರರು ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಮಾರ್ಚ್ 7 ರಂದು ಈ ಘಟನೆ ಸಂಭವಿಸಿದೆ ಎಂದು ಇಶಾನಿ ಹೇಳಿದ್ದಾರೆ. “ನಾನು ಮಧ್ಯಾಹ್ನ 1 ಗಂಟೆ ಸುಮಾರಿಗೆ ನನ್ನ ಸ್ನೇಹಿತನೊಂದಿಗೆ ಕನ್ನಾಟ್ ಪ್ಲೇಸ್ ನಲ್ಲಿರುವ ಮದ್ರಾಸ್ ಕಾಫಿ ಹೌಸ್ ಗೆ ಹೋದೆ. ಅಲ್ಲಿ ನಾವು ಎರಡು ದೋಸೆಗಳನ್ನು ಆರ್ಡರ್ ಮಾಡಿದೆವು, ಆದರೆ ನಾನು ದೋಸೆಗಳನ್ನು ತಿಂದಾಗ, ಅವು ವಿಚಿತ್ರವಾದ ರುಚಿಯನ್ನು ಹೊಂದಿದ್ದವು. ಸರಿಯಾಗಿ ನೋಡಿದಾಗ ಅದರಲ್ಲಿ ಜಿರಳೆ ಕಂಡು ಬಂತು. ದೋಸೆಯಲ್ಲಿ ಒಟ್ಟು…
ಇದೊಂದು ಅಪರೂಪದ ಜನನಾಂಗದ ಸ್ಥಿತಿಯಾಗಿದ್ದು, ಇದರಲ್ಲಿ ಬಳಲುತ್ತಿರುವವರು ಎರಡು ಯೋನಿ ಹಾಗೂ ಎರಡು ಗರ್ಭಾಶಯಗಳನ್ನು ಹೊಂದಿರುತ್ತಾರೆ ಎಂದು ಹೇಳಲಾಗಿದೆ. 25ರ ಹರೆಯದ ಆನಿ ಚಾರ್ಲೊಟ್ ಎಂಬ ಯುವತಿಗೆ ಯೂಟರಸ್ ಡಿಡೆಲ್ಸಿಸ್ ಎಂಬ ಅಪರೂಪದ ಸ್ಥಿತಿಯನ್ನು ಹೊಂದಿರುವುದು ಪತ್ತೆಯಾಗಿದೆ. ಈ ಮಹಿಳೆಗೆ ಎರಡು ಯೋನಿ, ಎರಡು ಗರ್ಭಾಶಯವಿದೆಯಂತೆ. ವೈದ್ಯಕೀಯ ತಜ್ಞರು ಹೇಳುವ ಪ್ರಕಾರ ಈ ಯುವತಿಯೂ ಇಬ್ಬರೂ ಪುರುಷರಿಂದ ಎರಡು ಮಕ್ಕಳನ್ನು ಪಡೆಯಬಹುದು. ಸಂತಾನೋತ್ಪತ್ತಿ ವ್ಯವಸ್ಥೆಯು ಎರಡು ಭಾಗಗಳಾಗಿ ವಿಭಜಿಸಲ್ಪಟ್ಟಿದ್ದು, ಸ್ವತಂತ್ರವಾಗಿ ಕಾರ್ಯನಿರ್ವಹಿಸುತ್ತದೆ ಎಂದು ತಿಳಿಸಿದ್ದಾರೆ. ಗರ್ಭಾಶಯದ ಡಿಡೆಲ್ಫಿಸ್ ಎಂದರೆ ಮಹಿಳೆಯು ಎರಡು ಗರ್ಭಾಶಯ ಮತ್ತು ಎರಡು ಯೋನಿಗಳೊಂದಿಗೆ ಜನಿಸುವ ಸ್ಥಿತಿಯಾಗಿದೆ. ಇದು ಅತ್ಯಂತ ಅಪರೂಪದ ಪ್ರಕರಣವಾಗಿದ್ದು, ಕೆಲವೊಮ್ಮೆ ಎರಡೂ ಗರ್ಭಾಶಯಗಳಿಗೆ ಒಂದೇ ಗರ್ಭಕಂಠವಿರುತ್ತದೆ. ಕೆಲವೊಮ್ಮೆ ಪ್ರತಿ ಗರ್ಭಾಶಯವು ಗರ್ಭಕಂಠವನ್ನು ಹೊಂದಿರುತ್ತದೆ. ಈ ಸಮಸ್ಯೆಯಿರುವ ಮಹಿಳೆಯರಲ್ಲಿ ಯೋನಿಯನ್ನು ತೆಳುವಾದ ಪೊರೆಯಿಂದ ಎರಡು ಪ್ರತ್ಯೇಕ ತೆರೆಯುವಿಕೆಗಳಾಗಿ ವಿಂಗಡಿಸಲಾಗಿದೆ. ಇಂತಹ ಪ್ರಕರಣಗಳು ಗರ್ಭಾವಸ್ಥೆಯಲ್ಲಿ ಮಗುವಿನ ಬೆಳವಣಿಗೆಯು ಕೇವಲ ಆರರಿಂದ ಇಪ್ಪತ್ತೆರಡು ವಾರಗಳಲ್ಲಿದ್ದಾಗ ಈ ಅಂಗಗಳು ಅಭಿವೃದ್ಧಿಗೊಳ್ಳುತ್ತವೆ.…
ವಿಪರೀತ ಕುಡಿದು ಬಂದು ಗಲಾಟೆ ಮಾಡುತ್ತಿದ್ದನೆಂಬ ಕಾರಣಕ್ಕೆ ಪತಿಯ ಮರ್ಮಾಂಗ ಹಿಚುಕಿ ಸಾಯಿಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನ ಲಂಬಾಣಿ ತಾಂಡಾದಲ್ಲಿ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಟೋಪಣ್ಣ ಲಮಾಣಿ(44) ಎಂಬಾತ ಕೊಲೆಯಾದ ವ್ಯಕ್ತಿ ಎಂದು ಗುರುತಿಸಲಾಗಿದೆ. ಪತ್ನಿ ಶಾಂತವ್ವ ಲಮಾಣಿ ಎಂಬಾಕೆಯೇ ಪತಿಯನ್ನ ಕೊಲೆ ಮಾಡಿದ ಆರೋಪಿಯಾಗಿದ್ದು, ಸಹಜ ಸಾವು ಎಂದು ಅಂತ್ಯಕ್ರಿಯೆ ಮಾಡಿದ ಹದಿನೈದು ದಿನಗಳ ಬಳಿಕ ಕೊಲೆ ಪ್ರಕರಣ ಬೆಳಕಿಗೆ ಬಂದಿದೆ ಎನ್ನಲಾಗಿದೆ. ವಿಪರೀತ ಕುಡಿತದ ಚಟ ಹೊಂದಿದ್ದ ಟೋಪಣ್ಣ. ಪ್ರತಿ ದಿನವೂ ಮದ್ಯ ಸೇವನೆ ಮಾಡಿ ಮನೆಗೆ ಬರುತ್ತಿದ್ದ. ಇದರಿಂದ ಬೇಸತ್ತಿದ್ದ ಪತ್ನಿ ಶಾಂತವ್ವ. ಪತಿಯನ್ನ ಮುಗಿಸಲು ಸಂಚು ಮಾಡಿದ್ದಳು. ಎಂದಿನಂತೆ ಹದಿನೈದು ದಿನಳ ಹಿಂದೆಯೂ ಮದ್ಯ ಸೇವನೆ ಮಾಡಿ ಮನೆಗೆ ಬಂದಿದ್ದ ಪತಿ ಟೋಪಣ್ಣ. ಕುಡಿದು ನಶೆಯಲ್ಲಿದ್ದ ಪತಿಯ ಮರ್ಮಾಂಗ ಹಿಚುಕಿ ಕೊಲೆ ಮಾಡಿದ್ದಾಳೆ ಎನ್ನಲಾಗಿದೆ. ಬಳಿಕ ಯಾರಿಗೂ ಅನುಮಾನ ಬಾರದಂತೆ, ಕುಡಿದ ನಶೆಯಲ್ಲಿ ಬಿದ್ದು ಮೃತಪಟ್ಟಿದ್ದಾನೆ ಎಂದು ಕತೆ…
ಕನ್ನಡ ಚಿತ್ರರಂಗದಲ್ಲಿ ಕೇವಲ ನಟನಾಗಿ ಮಾತ್ರವಲ್ಲದೇ, ಅತ್ಯುತ್ತಮ ಮಾದರಿ ವ್ಯಕ್ತಿತ್ವದಿಂದಲೂ ಜನರ ಮನಸ್ಸಿನಲ್ಲಿ ಉಳಿದುಕೊಂಡವರು ಪುನೀತ್ ರಾಜಕುಮಾರ್ ಅವರು. ತಮ್ಮದೇ ಪ್ರೊಡಕ್ಷನ್ ಹೌಸ್ ಮೂಲಕ ಹೊಸ ಪ್ರತಿಭೆಗಳಿಗೆ ಅವಕಾಶ ನೀಡಿ ಎಷ್ಟೋ ಜನರ ಜೀವನಕ್ಕೆ ದಾರಿ ದೀಪವಾಗಿದ್ದಾರೆ ನಮ್ಮ ಅಪ್ಪು. ನಟನೆಯೊಂದಿಗೆ ಅನೇಕ ಕಾರ್ಯಕ್ರಮಗಳ ನಿರೂಪಣೆ, ಗಾಯಕನಾಗಿ ಅಪ್ಪು ಎಲ್ಲರನ್ನು ಸೆಳೆಯುವಲ್ಲಿ ಯಶಸ್ವಿಯಾದವರು. ಕನ್ನಡಿಗರ ಎದೆಯಲ್ಲಿ ಎಂದೆಂದಿಗೂ ಜೀವಂತವಾಗಿರುವ ಅಪ್ಪು, ದೊಡ್ಮನೆ ರಾಜಕುಮಾರ ನಮ್ಮೊಡನಿಲ್ಲ ಅಂತ ಅಭಿಮಾನಿಗಳು ಅಂದುಕೊಂಡೇ ಇಲ್ಲ..! ಕನ್ನಡದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಎಷ್ಟೋ ಯುವಜನತೆಗೆ ಸ್ಪೂರ್ತಿ. ಬದುಕಿದರೆ ಅಪ್ಪು ಅವರಂತೆ ಬದುಕಬೇಕು ಎನ್ನುತ್ತಾರೆ ಕನ್ನಡಿಗರು. ಇದೀಗ ಡಾ. ಪುನೀತ್ ರಾಜ್ ಕುಮಾರ್ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಬಿಗ್ ಬಾಸ್ ಸೀಸನ್ 10 ಸ್ಪರ್ಧಿ ವಿನಯ್ ಗೌಡ ಅವರು ಅಂಧ ಮಗುವನ್ನ ದತ್ತು ಪಡೆದುಕೊಂಡಿದ್ದಾರೆ. ಅಪ್ಪು ಬರ್ತ್ ಡೇ ಹಿನ್ನೆಲೆಯಲ್ಲಿ ಬಿಗ್ ಬಾಸ್ ಸ್ಪರ್ಧಿ ವಿನಯ್ ಗೌಡ ಅವರು ಶೇಷಾದ್ರಿಪುರಂನ ಒಂದನೇ ಮುಖ್ಯರಸ್ತೆಯಲ್ಲಿರುವ ಕರ್ನಾಟಕ ಅಂಧರ ಕ್ಷೇಮಾಭ್ಯುದಯ…
ತುಮಕೂರು: ಗುಬ್ಬಿ ತಾಲ್ಲೂಕು ನಿಟ್ಟೂರು ಹೋಬಳಿಯ ಎನ್ ಪುರ ಗ್ರಾಮದ ಕಲ್ಲೇಶ್ವರ ಸ್ವಾಮಿ ದೇಗುಲದ ರಥಕ್ಕೆ ಆಸಾಮಿಯೊಬ್ಬ ಬೆಂಕಿ ಇಟ್ಟು ಸಂಪೂರ್ಣವಾಗಿ ಸುಟ್ಟು ಹಾಕಿದ್ದನು. ಸುಟ್ಟಿರುವ ರಥವನ್ನು ಹೆಚ್ಚು ದಿನ ನಿಲ್ಲಿಸಬಾರದು ಎಂಬ ಕಾರಣದಿಂದ ಮಂಗಳವಾರ ಗ್ರಾಮಸ್ಥರು ಹಾಗೂ ಭಕ್ತಾದಿಗಳು ಸೇರಿಕೊಂಡು ಸುಟ್ಟಿರುವ ರಥಕ್ಕೆ ವಿಶೇಷಪೂಜೆ ಸಲ್ಲಿಸಿ ಹೋಮ ಹವನಗಳನ್ನು ನಡೆಸಿ ತೇವಡಿಹಳ್ಳಿ ಮಠದ ಚನ್ನಬಸವೇಶ್ವರ ಶಿವಾಚಾರ್ಯ ಸ್ವಾಮೀಜಿ ಹಾಗೂ ಬೆಟ್ಟದಹಳ್ಳಿ ಚಂದ್ರಶೇಖರ ಸ್ವಾಮೀಜಿಗಳ ದಿವ್ಯ ಸಾನಿಧ್ಯ ಹಾಗೂ ಮಾರ್ಗದರ್ಶನದಲ್ಲಿ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಮಣ್ಣಿನಲ್ಲಿ ಮುಚ್ಚಿ ಸಂಸ್ಕಾರ ಮಾಡಲಾಯಿತು. ರಥ ಕಲ್ಲೇಶ್ವರ ಸ್ವಾಮಿ ಜಾತ್ರೆಯನ್ನು ನಿಲ್ಲಿಸಲು ತೀರ್ಮಾನಿಸಿದ್ದ ಗ್ರಾಮಸ್ಥರು ಧಾರ್ಮಿಕ ಗುರುಗಳ ಹಾಗೂ ಸ್ವಾಮೀಜಿಗಳ ಸಲಹೆಯಂತೆ ಜಾತ್ರೆಯನ್ನು ಧಾರ್ಮಿಕವಾಗಿ ನೆರವೇರಿಸಲು ಮುಂದಾಗಿದ್ದಾರೆ. ಕಲ್ಲೇಶ್ವರಸ್ವಾಮಿ ರಥ ಇಲ್ಲದೇ ಇರುವುದರಿಂದ ಗ್ರಾಮದಲ್ಲಿರುವ ಸಿದ್ಧಲಿಂಗೇಶ್ವರ ಸ್ವಾಮಿ ದೇವಾಲಯದ ರಥವನ್ನೇ ಬಳಸಿಕೊಂಡು ಈ ಬಾರಿ ಸಂಪ್ರದಾಯ ಬದ್ಧವಾಗಿ ಜಾತ್ರೆಯನ್ನು ನಡೆಸಲಾಗುತ್ತಿದೆ. ಮುಂದಿನ ವರ್ಷದೊಳಗೆ ಅಗತ್ಯವಿರುವ ಕ್ರಮ ಕೈಗೊಂಡು ನೂತನ ರಥೋತ್ಸವವನ್ನು ಮಾಡಿಸಲೇಬೇಕಿದೆ ಎಂದು ಗ್ರಾಮಸ್ಥರು…
ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ತನ್ನ ಪ್ರಣಾಳಿಕೆಯನ್ನು ಸಿದ್ಧಪಡಿಸಿದ್ದು, ಶೀಘ್ರದಲ್ಲೇ ಅದನ್ನು ಜನರಲ್ಲಿ ಮಂಡಿಸಬಹುದು. ಈ ಪ್ರಣಾಳಿಕೆಯು 5 ‘ನ್ಯಾಯ’ ಮತ್ತು 25 ‘ಗ್ಯಾರಂಟಿ’ಗಳನ್ನು ಆಧರಿಸಿರುತ್ತದೆ. ಘರ್ ಘರ್ ಗ್ಯಾರಂಟಿ ಎಂಬ ಮಂತ್ರದೊಂದಿಗೆ ದೇಶದ ಪ್ರತಿಯೊಬ್ಬ ಮತದಾರರನ್ನು ತಲುಪಲು ಇದು ತನ್ನ ʼನ್ಯಾಯ ಪಾತ್ರ’ ಎಂದು ಪಕ್ಷ ಹೇಳುತ್ತದೆ. ಕರಡು ಪ್ರಣಾಳಿಕೆಯ ಮೇಲೆ ಮೂರೂವರೆ ಗಂಟೆಗಳ ಚರ್ಚೆ ನಡೆದಿದೆ. ಕಾಂಗ್ರೆಸ್ ಕಾರ್ಯಕಾರಿ ಸಮಿತಿಯು ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಅನುಮೋದನೆ ನೀಡಲು ಮತ್ತು ಅದರ ಬಿಡುಗಡೆಗೆ ದಿನಾಂಕವನ್ನು ನಿಗದಿಪಡಿಸಲು ಅಧಿಕಾರ ನೀಡಿತು. ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಪ್ರಮುಖವಾಗಿ ಉಲ್ಲೇಖಿಸಲಾಗುವ ಐದು ‘ನ್ಯಾಯ’ ಮತ್ತು 25 ‘ಗ್ಯಾರಂಟಿ’ಗಳನ್ನು ‘ಭಾರತ್ ಜೋಡೋ ನ್ಯಾಯ್ ಯಾತ್ರೆ’ ಸಮಯದಲ್ಲಿ ಘೋಷಿಸಲಾಯಿತು. ಕಾಂಗ್ರೆಸ್ ಪ್ರಕಾರ, ಅದರ ಪ್ರಣಾಳಿಕೆಯು ಪಕ್ಷದ ಐದು ನ್ಯಾಯಗಳನ್ನು ಒಳಗೊಂಡಿದೆ. ‘ಭಾಗಿತ್ವ ನ್ಯಾಯ’, ‘ಕಿಸಾನ್ ನ್ಯಾಯ’, ‘ಮಹಿಳಾ ನ್ಯಾಯ’, ‘ಕಾರ್ಮಿಕ ನ್ಯಾಯ’ ಮತ್ತು ‘ಯುವ ನ್ಯಾಯ’ಗಳನ್ನು ಆಧರಿಸಿದೆ. ‘ಯುವ ನ್ಯಾಯ’ ಅಡಿಯಲ್ಲಿ ಪಕ್ಷವು ಮಾತನಾಡಿರುವ ಐದು ಖಾತರಿಗಳಲ್ಲಿ…