Subscribe to Updates
Get the latest creative news from FooBar about art, design and business.
- ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
- ಸಂಕಷ್ಟದಲ್ಲೂ ಕೈಬಿಡದ ಸಂಗಾತಿ: ದೇವೇಗೌಡರ 72 ವರ್ಷಗಳ ಪಯಣಕ್ಕೆ ನೆರಲಾಗಿದ್ದ ಚೆನ್ನಮ್ಮ
- ವಲಸೆಗೆ ಬ್ರೇಕ್; ‘ವಿಬಿ–ಜಿ ರಾಮ್-ಜಿ’ ಯೋಜನೆಯಿಂದ ಗ್ರಾಮದಲ್ಲೇ ಉದ್ಯೋಗದ ಭರವಸೆ
- ಬರಗಾಲಕ್ಕೆ ಹೆದರಿ ವಲಸೆ ಹೋಗಬೇಡಿ: ನಿಮ್ಮೂರಲ್ಲೇ ‘ವಿಬಿ–ಜಿ ರಾಮ್ ಜಿ’ ಕೆಲಸ ಮಾಡಿ: ಡಿಸಿ ಶಿಲ್ಪಾ ಶರ್ಮಾ
- ತ್ಯಾಜ್ಯವಲ್ಲ ಕರಟ, ರೈತರಿಗೆ ಬಂಪರ್ ಹಣ! ಕೊಬ್ಬರಿ ಚಿಪ್ಪಿನ ಬೆಲೆ ಗಗನಕ್ಕೇರಿಕೆ, ಬೆಳೆಗಾರರ ಮೊಗದಲ್ಲಿ ಮಂದಹಾಸ
- ಬದುಕು ಉಜ್ವಲವಾಗಲು ಶಿಕ್ಷಣವೇ ಮುಖ್ಯ ಅಸ್ತ್ರ: ಶಾಸಕ ಕೆ.ಎನ್. ರಾಜಣ್ಣ ಕರೆ
- ಬಡವರ ಹಸಿವು ನೀಗಿಸುತ್ತಿರುವ ಕೊರಟಗೆರೆಯ ‘ದತ್ತು ಹೋಟೆಲ್’: ಕೇವಲ 40 ರೂಪಾಯಿಗೆ ಸೌದೆ ಒಲೆಯ ರುಚಿಕರ ಊಟ–ತಿಂಡಿ!
- ಬಡ ಮಕ್ಕಳಿಗೆ ಸಮವಸ್ತ್ರ ವಿತರಣೆ : ಹಳೆಯ ವಿದ್ಯಾರ್ಥಿನಿ ಕಾರ್ಯಕ್ಕೆ ಮೆಚ್ಚುಗೆ
Author: admin
ಗದಗ: ನಡುರಸ್ತೆಯಲ್ಲಿ ಪತ್ನಿಯನ್ನು ಹರಿತವಾದ ಕಬ್ಬಿಣದ ಆಯುಧದಿಂದ ಪತಿ ಮಾರಣಾಂತಿಕವಾಗಿ ಹಲ್ಲೆ ಮಾಡಿರುವ ಘಟನೆ ಗದಗ ಜಿಲ್ಲೆಯ ಮುಂಡರಗಿದಲ್ಲಿ ನಡೆದಿದೆ. ಮುಂಡರಗಿ ಪಟ್ಟಣದ ಪೋಸ್ಟ್ ಆಫೀಸಿನಲ್ಲಿ ಪೋಸ್ಟ್ ವುಮೇನ್ ಆಗಿ ಕೆಲಸ ಮಾಡುತ್ತಿದ್ದ ಗೀತಾ ಹಲ್ಲೆಗೆ ಒಳಗಾದ ಮಹಿಳೆಯಾಗಿದ್ದಾರೆ. ಆರೋಪಿ ಪತಿಯನ್ನು ಪೋಲಿಸರು ಬಂಧಿಸಿದ್ದಾರೆ. ಹಲ್ಲೆಗೊಳಗಾದ ಮಹಿಳೆ ರಕ್ತದ ಮಡುವಿನಲ್ಲಿ ಬಿದ್ದಿದ್ದು ಸಾರ್ವಜನಿಕರು, ಪೊಲೀಸರು ಸೇರಿ ಪೊಲೀಸ್ ಜೀಪಿನಲ್ಲೇ ತಾಲೂಕು ಆಸ್ಪತ್ರೆಗೆ ದಾಖಲಿಸಿದ್ದಾರೆ. ಮಹಿಳೆಯನ್ನು ಪ್ರಾಥಮಿಕ ಚಿಕಿತ್ಸೆಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಗದಗ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಮಹಿಳೆ ಹಾಗೂ ಪತಿ ನಡುವಿನ ಕೌಟುಂಬಿಕ ಕಲಹವೇ ಹಲ್ಲೆಗೆ ಕಾರಣ ಎನ್ನಲಾಗಿದೆ. ಪ್ರಕರಣ ದಾಖಲಿಸಿದ ಪೋಲಿಸರು ತನಿಖೆ ನಡೆಸುತ್ತಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನೀಚ ತಾಯಿಯೊಬ್ಬಳು ಮಕ್ಕಳಿಬ್ಬರ ಜೀವ ತೆಗೆದ ಘಟನೆ ನಡೆದಿದೆ. ಲಕ್ಷ್ಮಿ(7) ಮತ್ತು ಗೌತಮ್(9) ಮೃತ ಮಕ್ಕಳಾಗಿದ್ದಾರೆ. ಇವರನ್ನು ತಾಯಿ ಗಂಗಾದೇವಿ ಕೊಲೆ ಮಾಡಿದ್ದಾಳೆ. ಗಂಗಾದೇವಿ ಕಳೆದ ಮಾರ್ಚ್ ತಿಂಗಳಲ್ಲಿ ಗಂಡನ ಮೇಲೆ ಲೈಂಗಿಕ ದೌರ್ಜನ್ಯ ಕೇಸ್ ದಾಖಲಿಸಿದ್ದಳು. ಗಂಡ ನನ್ನ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸೆಗುತ್ತಿದ್ದಾನೆಂದು ದೂರು ನೀಡಿದ ಆಧಾರದ ಮೇಲೆ, ಗಂಡನನ್ನ ಬಂಧಿಸಿ ಜಾಲಹಳ್ಳಿ ಪೊಲೀಸರು ಜೈಲಿಗೆ ಕಳಿಸಿದ್ದರು. ಅದಾದ ಬಳಿಕ ಇದೀಗ ಇಬ್ಬರು ಮಕ್ಕಳನ್ನ ಕೊಲೆ ಮಾಡಿದ್ದಾಳೆ. ಹೆತ್ತ ತಾಯಿಯೇ ಮಂಗಳವಾರ ರಾತ್ರಿ ತನ್ನ ಇಬ್ಬರು ಮಕ್ಕಳನ್ನು ಕೊಲೆ ಮಾಡಿದ್ದು, ಬಳಿಕ ಕಂಟ್ರೋಲ್ ರೂಂಗೆ ಕರೆ ಮಾಡಿ “ಮಕ್ಕಳನ್ನ ಉಸಿರುಗಟ್ಟಿಸಿ ಕೊಲೆ ಮಾಡಿದ್ದು, ನಾನು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ” ಹೇಳಿದ್ದಾಳೆ. ಕೂಡಲೇ ಘಟನಾ ಸ್ಥಳಕ್ಕೆ ಜಾಲಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೇ ಆರೋಪಿ ಗಂಗಾದೇವಿಯನ್ನ ವಶಕ್ಕೆ ಪಡೆದಿದ್ದಾರೆ. ಈ ಘಟನೆ ಜಾಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ…
ಬೇಸಿಗೆಗೆ ಈ ಪಾನೀಯಗಳು ಉತ್ತಮ ಸೇಬು-ದಾಲ್ಟಿನ್ನಿ ಪಾನೀಯವು ತುಂಬಾ ಆರೋಗ್ಯಕರ ಇದರಲ್ಲಿನ ಫೈಬರ್ ಚಯಾಪಚಯವನ್ನು ಹೆಚ್ಚಿಸುತ್ತದೆ. ನೀರಿನ ಬಾಟಲಿಯಲ್ಲಿ ಸೇಬಿನ ಚೂರು-ದಾಲ್ಟಿನ್ನಿ ಪುಡಿ ಹಾಕಿ ರಾತ್ರಿಯಿಡೀ ನೆನೆಸಿಟ್ಟು ಮರುದಿನ ಕುಡಿಯಿರಿ. ನಿಂಬೆ & ಪುದೀನಾ ನೀರು ತೂಕ ನಷ್ಟಕ್ಕೆ ತುಂಬಾ ಒಳ್ಳೆಯದು. ನಿಂಬೆಯನ್ನು ತುಂಡುಗಳಾಗಿ ಕತ್ತರಿಸಿ ನೀರಿನ ಬಾಟಲಿಗೆ ಹಾಕಿ. ಇದಕ್ಕೆ ಪುದೀನಾ ಸೊಪ್ಪನ್ನು ಸೇರಿಸಿ ರಾತ್ರಿಯಿಡಿ ಇಟ್ಟು ಬೆಳಗ್ಗೆ ಕುಡಿಯಿರಿ. ಒಂದು ಲೋಟ ನೀರಿಗೆ ಕೆಲವು ಸೌತೆಕಾಯಿ ಚೂರುಗಳನ್ನು ಹಾಕಿ ಸ್ವಲ್ಪ ಹೊತ್ತು ಹಾಗೆಯೇ ಇಡಿ. ಇವುಗಳನ್ನು ದಿನವಿಡೀ ಸೇವಿಸ ಈ ಬೇಸಿಗೆಯಲ್ಲಿ ಪಾತ್ರೆಯಲ್ಲಿರುವ ನೀರನ್ನು ಕುಡಿದರೆ ಲಾಭ..! ಮಣ್ಣಿನ ಪಾತ್ರೆಯಲ್ಲಿನ ನೀರು ನೈಸರ್ಗಿಕವಾಗಿ ತಣ್ಣಗಾಗುತ್ತದೆ. ಇದು ರೆಫ್ರಿಜರೇಟರ್ನಲ್ಲಿ ನೀರಿಗಿಂತ ಉತ್ತಮವಾಗಿದೆ. ಇದು ನೈಸರ್ಗಿಕವಾಗಿ ಕ್ಷಾರೀಯವಾಗಿರುವುದರಿಂದ, ಇದು ಸಂಗ್ರಹವಾಗಿರುವ ನೀರಿನ pH ಮಟ್ಟವನ್ನು ಸಮತೋಲನಗೊಳಿಸುತ್ತದೆ. ಇದು ಜೀರ್ಣಕಾರಿ ಸಮಸ್ಯೆಗಳನ್ನು ಉಂಟುಮಾಡುವುದಿಲ್ಲ. ಇದಲ್ಲದೆ, ಈ ನೀರಿನಲ್ಲಿ ನೈಸರ್ಗಿಕವಾಗಿ ಕಂಡುಬರುವ ಖನಿಜಗಳಿವೆ. ಆದ್ದರಿಂದ, ಈ ನೀರನ್ನು ಕುಡಿಯುವುದರಿಂದ ಚಯಾಪಚಯವು ಹೆಚ್ಚಾಗುತ್ತದೆ.. ಇದು ಶಾಖದಿಂದ…
ಭಾರತೀಯ ಒಲಿಂಪಿಕ್ಸ್ ಸಂಸ್ಥೆಯ ಸದಸ್ಯರ ವಿರುದ್ಧ ಅಧ್ಯಕ್ಷ ಪಿ.ಟಿ. ಉಷಾ ಮಾತನಾಡಿ ಇತರೆ ಸದಸ್ಯರು ನನ್ನನ್ನು ಕಡೆಗಣಿಸುತ್ತಿದ್ದು, ಸಂಘದ ಕಾರ್ಯಕಾರಿ ಮಂಡಳಿ ಸದಸ್ಯರು ಒಂದಾಗಿ ಕೆಲಸ ಮಾಡುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಸದಸ್ಯರಿಗೆ ಕಳುಹಿಸಿರುವ ಪತ್ರದಲ್ಲಿ ಪಿ.ಟಿ. ಉಷಾ ಆಕ್ಷೇಪ ವ್ಯಕ್ತಪಡಿಸಿದರು. ಪಿಟಿ ಉಷಾ ಅವರ ಕಾರ್ಯನಿರ್ವಾಹಕ ಸಹಾಯಕ ಅಜಯ್ ನಾರಂಕ್ ಅವರನ್ನು ಪದಚ್ಯುತಗೊಳಿಸಿದ ವಿರುದ್ಧ ಪತ್ರ ಕಳುಹಿಸಲಾಗಿದೆ. ಕಾರ್ಯಕಾರಿ ಸಮಿತಿಗೆ ನಾರಂಗ್ ಅವರನ್ನು ನೇಮಿಸುವ ಅಥವಾ ವಜಾ ಮಾಡುವ ಅಧಿಕಾರವಿಲ್ಲ ಮತ್ತು ದೈನಂದಿನ ಆಡಳಿತಾತ್ಮಕ ಕಾರ್ಯಗಳು ಕಾರ್ಯಕಾರಿ ಮಂಡಳಿಯ ಕೆಲಸವಲ್ಲ ಎಂದು ಪಿಟಿ ಉಷಾ ಪತ್ರದಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಕೊರಿಯನ್ ಸೂಪರ್ ಸ್ಟಾರ್ ಮಾ ಡಾಂಗ್ ಸಿಯೋಕ್ ವಿವಾಹವಾಗಲಿದ್ದಾರೆ. ವಧು ಅವನ ಗೆಳತಿ ಯಿ ಜಂಗ್ ಹ್ವಾ. ಅವರು ಬಹಳ ದಿನಗಳಿಂದ ಪ್ರೀತಿಸುತ್ತಿದ್ದರು. ಮುಂದಿನ ತಿಂಗಳು ಮದುವೆ ನಡೆಯಲಿದೆ. 2021ರಲ್ಲಿ ಇಬ್ಬರೂ ನೋಂದಣಿ ಮಾಡಿಕೊಂಡಿದ್ದಾರೆ. ಡಾನ್ ಲೀ ಅವರ ಏಜೆನ್ಸಿ, ಬಿಗ್ ಪಂಚ್ ಎಂಟರ್ ಟೈನ್ ಮೆಂಟ್, ಸಿಯೋಲ್ ನಲ್ಲಿ ಖಾಸಗಿ ಸಮಾರಂಭದಲ್ಲಿ ವಿವಾಹ ನಡೆಯಲಿದೆ ಎಂದು ಘೋಷಿಸಿದೆ. ಡಾನ್ ಲೀ ಮತ್ತು ಯಿ ಜಂಗ್ ಅವರ ವಿವಾಹವು ಅತ್ಯಂತ ಖಾಸಗಿ ಸಮಾರಂಭದಲ್ಲಿ ನಡೆಯಲಿದೆ. ಕುಟುಂಬ, ಸಂಬಂಧಿಕರು, ಸಹೋದ್ಯೋಗಿಗಳು ಮತ್ತು ಪರಿಚಯಸ್ಥರು ಮಾತ್ರ ಸಮಾರಂಭದಲ್ಲಿ ಪಾಲ್ಗೊಳ್ಳುತ್ತಾರೆ. ಡಾನ್ ಲೀ ಅವರ ಏಜೆನ್ಸಿ ಪ್ರತಿನಿಧಿ ಪತ್ರಿಕೆಗಳ ಮೂಲಕ ಈ ವಿಷಯ ತಿಳಿಸಿದ್ದಾರೆ. ಡಾನ್ ಲೀ ಎಂದೂ ಕರೆಯಲ್ಪಡುವ ಮಾ ಡಾಂಗ್ ಸಿಯೋಕ್ ಭಾರತದಲ್ಲೂ ಅನೇಕ ಅಭಿಮಾನಿಗಳನ್ನು ಹೊಂದಿದ್ದಾರೆ. ಡಾಂಗ್ ಲೀ ಮತ್ತು ಯಿ ಜಂಗ್ ಹ್ವಾ 2016 ರಿಂದ ಡೇಟಿಂಗ್ ಮಾಡುತ್ತಿದ್ದಾರೆ. ಮಾ ಡಾಂಗ್ ಸಿಯೋಕ್ ಅಕಾ ಡಾನ್ ಲೀ ಅವರು ಟ್ರೈನ್…
ಕಾರು ಪ್ರಯಾಣ ಎಂದರೆ ಎಲ್ಲರಿಗೂ ಬಲು ಇಷ್ಟ. ದೂರದ ಊರುಗಳಿಗೆ, ಟ್ರಿಪ್ ಮಾಡಲು ಕಾರುಗಳಲ್ಲಿ ಹೋಗುವುದೆಂದರೆ ಒಂದು ರೀತಿಯ ಖುಷಿ. ಹೀಗೆ ಕಾರಲ್ಲಿ ಹೋಗುವ ಸಂದರ್ಭದಲ್ಲಿ ಸುಖಕರ ಪ್ರಯಾಣಕ್ಕಾಗಿ ಹೆಚ್ಚಿನವರು ಎಸಿ ಆನ್ ಮಾಡುತ್ತಾರೆ. ಆದರೆ ಕಾರಲ್ಲಿ ಹೀಗೆ, ಯಾವಾಗ ಬೇಕು ಆವಾಗ AC ಆನ್ ಮಾಡಿದ್ರೆ ಏನೆಲ್ಲಾ ನಷ್ಟ ಉಂಟಾಗುತ್ತೆ ಗೊತ್ತಾ? ಹಾಗಿದ್ರೆ ಇಲ್ಲಿದೆ ನೋಡಿ ಕುತೂಹಲ ವಿಚಾರ. ಇಂದು ಬಿಸಿಲ ಝಳಕ್ಕೆ ಜನ ತಂಡಾ ಹೊಡೆದಿದ್ದಾರೆ. ಫ್ಯಾನ್, ಕೂಲರ್, AC ಇಲ್ಲದೆ ನಿಮಿಷವೂ ಇರಲು ಅಸಾಧ್ಯ. ಕಾರಿನಲ್ಲಿ ಹೋಗುವಾಗ ಕಿಟಕಿ ತೆರೆದರೆ ಬೇಕಾದಷ್ಟು ಗಾಳಿ ಬೀಸಿದರೂ AC ಹಾಕಿದಾಗ ಆಗೋ ನೆಮ್ಮದಿ ಸಿಗುವದೇ ಇಲ್ಲ. ಹೀಗಾಗಿ ಇಂದು ಎಲ್ಲರೂ ಕಾರಲ್ಲಿ AC ಹಾಕುತ್ತಾರೆ. ಹವಾನಿಯಂತ್ರಿಣ ಇಲ್ಲದ ಕಾರಿನಲ್ಲಿ ಪ್ರಯಾಣಿಸೋದೇ ತ್ರಾಸದಾಯಕ. ಹೀಗೆ ಕಾರಲ್ಲಿ 1 ಗಂಟೆ ನಿರಂತರವಾಗಿ AC ಆನ್ ಮಾಡಿದ್ರೆ ಎಷ್ಟು ಪೆಟ್ರೋಲ್ ಖರ್ಚಾಗುತ್ತೆ ಅನ್ನೋ ಐಡಿಯಾ ಇದೆಯಾ? ಇದು ತಿಳಿದರೆ ಇನ್ಮುಂದೆ ನೀವು AC ಹಾಕೋದಕ್ಕೆ…
ಬೆಂಗಳೂರು: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ಪಿಯು ಮಂಡಳಿಯ ಅಧಿಕೃತ ವೆಬ್ ಸೈಟ್ karresults.nic.in ಮೂಲಕ ದ್ವಿತೀಯ ಪಿಯು ಫಲಿತಾಂಶಗಳನ್ನು ಪರಿಶೀಲಿಸಬಹುದಾಗಿದೆ. ಕಲಾ ವಿಭಾಗದಲ್ಲಿ 1,28,448 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ 1,74,315 ವಿದ್ಯಾರ್ಥಿಗಳು ಪಾಸಾಗಿದ್ದರೆ, ವಿಜ್ಞಾನ ವಿಭಾಗದಲ್ಲಿ 2,49,927 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ವಿಜ್ಞಾನ ವಿಭಾಗದಲ್ಲಿ ಹುಬ್ಬಳ್ಳಿಯ ವಿದ್ಯಾಲಕ್ಷ್ಮೀ 600ಕ್ಕೆ 598 ಅಂಕಗಳನ್ನು ಪಡೆದು ಪ್ರಥಮ ಸ್ಥಾನ ಪಡೆದಿದ್ದಾರೆ. ನಂತರ ಸ್ಥಾನದಲ್ಲಿ ಕೆ ಹೆಚ್ ಉರ್ವೀಶ್ ಪ್ರಶಾಂತ್ 597 ಅಂಕ, ವೈಭವಿ ಆಚಾರ್ಯ 597 ಅಂಕ ಪಡೆದಿದ್ದಾರೆ. ಕಲಾ ವಿಭಾಗದಲ್ಲಿ ಮೂವರು ಟಾಪರ್ಗಳಾಗಿದ್ದಾರೆ. ಕಲಾ ವಿಭಾಗದಲ್ಲಿ ಮೇಧಾ ಡಿ. ಟಾಪರ್ 600ಕ್ಕೆ 596 ಅಂಕಗಳನ್ನು ಪಡೆದರೆ, ವಿಜಯಪುರದ ವೇದಾಂತ್ ಜ್ಞಾನುಭ ನವಿ ಮತ್ತು ಕವಿತಾ ಬಿ ವಿ 600ಕ್ಕೆ 596 ಅಂಕ ಪಡೆದಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ತುಮಕೂರಿನ ಜ್ಞಾನವಿ 600ಕ್ಕೆ 597 ಅಂಕ ಪಡೆದು ಟಾಪರ್ ಆಗಿದ್ದಾರೆ. ಪವನ್ ಎಂ ಎಸ್ ಮತ್ತು ಹರ್ಷಿತ ಎಸ್ ಎಚ್ 596 ಅಂಕ ಪಡೆದಿದ್ದಾರೆ.…
ರೇಖಾ ಮತ್ತು ಅಮಿತಾಬ್ ಬಚ್ಚನ್ ಸಿನಿಮಾಗಳನ್ನು ಸಿನಿ ಪ್ರೇಮಿಗಳು ಮರೆಯಲು ಆಗಲ್ಲ. ಇವರಿಬ್ಬರೂ ಈ ಹಿಂದೆ ಅನೇಕ ರೊಮ್ಯಾಂಟಿಕ್ ಚಿತ್ರಗಳಲ್ಲಿ ಕೆಲಸ ಮಾಡಿದ್ದಾರೆ. ಈ ಜೋಡಿಯನ್ನು ಜನರು ತುಂಬಾ ಇಷ್ಟಪಟ್ಟಿದ್ದರು. ಈ ಜೋಡಿ ನಡುವಿನ ಸಂಬಂಧದ ಕುರಿತು ಅಂದು ಗುಸುಗುಸು ಕೇಳಿಬಂದಿತ್ತು. ಈಗಲೂ ಕೇಳಿಬರುತ್ತಿರುತ್ತದೆ. ಆದರೀಗ ಅಮಿತಾಭ್ ಮತ್ತು ರೇಖಾ ನಡುವಿನ ಪ್ರೇಮ ಪ್ರಕರಣದ ಕುರಿತು ಅವರ ಪತ್ನಿ ಜಯಾ ಬಚ್ಚನ್ ಮನಬಿಚ್ಚಿ ಮಾತನಾಡಿದ್ದಾರೆ. ಸೂಪರ್ ಸ್ಟಾರ್ ಅಮಿತಾಭ್ ಬಚ್ಚನ್ ಮತ್ತು ಒಂದು ಕಾಲದಲ್ಲಿ ಬಾಲಿವುಡ್ ಆಳಿದ್ದ ಕೃಷ್ಣ ಸುಂದರಿ ರೇಖಾ ಅವರ ಪ್ರೇಮಕಥೆ ಯಾವ ಸಿನಿಮಾಗೂ ಕಡಿಮೆಯೇನಿಲ್ಲ. 70 ರ ದಶಕದಲ್ಲಿ, ಅಮಿತಾಭ್ ಬಚ್ಚನ್ ಮತ್ತು ರೇಖಾ ಅವರ ಸಂಬಂಧವು ಬಹಳ ಚರ್ಚಿತ ವಿಷಯವಾಗಿತ್ತು. ಈ ಬಗ್ಗೆ ಎಲ್ಲಡೆ ಗುಸುಗುಸು ಉಂಟಾಗಿದ್ದರೂ ಅಮಿತಾಭ್ ಮಾತ್ರ ಇದನ್ನು ಬಹಿರಂಗವಾಗಿ ಒಪ್ಪಿಕೊಳ್ಳಲಿಲ್ಲ. ಆದರೆ ರೇಖಾ ತಮ್ಮ ಪ್ರೇಮ ಕಥೆಯ ಬಗ್ಗೆ ಹಲವಾರು ವೇದಿಕೆಗಳಲ್ಲಿ ಮುಕ್ತವಾಗಿ ಮಾತನಾಡಿದ್ದಾರೆ. ಒಟ್ಟಿನಲ್ಲಿ ಈ ಜೋಡಿಯ ಪ್ರೇಮಕಥೆ ಯಾರೂ…
ಗೋಮಾಂಸ ಸಮೋಸವನ್ನು ಕುರಿ ಮಾಂಸದ ಹೆಸರಿನಲ್ಲಿ ಮಾರಾಟ ಮಾಡುತ್ತಿದ್ದ ಏಳು ಮಂದಿಯನ್ನು ಗುಜರಾತ್ ನಲ್ಲಿ ಬಂಧಿಸಲಾಗಿದೆ. ಗೋಹತ್ಯೆ ನಿಷೇಧ ಕಾಯ್ದೆಯಡಿ ಅವರನ್ನು ಬಂಧಿಸಲಾಗಿದೆ. ಅಂಗಡಿಯಲ್ಲಿ ಮಾರುವ ಮಟನ್ ಸಮೋಸದಲ್ಲಿ ಕಡಿಮೆ ಬೆಲೆಗೆ ದನದ ಮಾಂಸ ತುಂಬಿ ಲಾಭ ಮಾಡಿಕೊಳ್ಳುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಸುಳಿವಿನ ಆಧಾರದ ಮೇಲೆ ಪೊಲೀಸರು ವಡೋದರದ ಪಾನಿಗೇಟ್ ಪ್ರದೇಶದ ಹುಸೇನಿ ಸಮೋಸಾ ಕೇಂದ್ರದಲ್ಲಿ ದಾಳಿ ನಡೆಸಿ 113 ಕೆಜಿ ಮಾಂಸವನ್ನು ವಶಪಡಿಸಿಕೊಂಡಿದ್ದಾರೆ. ನಂತರ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಪರೀಕ್ಷೆಗೆ ಕಳುಹಿಸಿದಾಗ ಅದು ಹಸುವಿನ ಮಾಂಸ ಎಂಬುದು ದೃಢಪಟ್ಟಿತ್ತು. ಪೊಲೀಸರು ಮಾಲೀಕರಾದ ಯೂಸುಫ್ ಶೇಖ್ ಮತ್ತು ನಯೀಮ್ ಶೇಖ್ ಮತ್ತು ಅವರ ನಾಲ್ವರು ಕಾರ್ಮಿಕರನ್ನು ಬಂಧಿಸಿದ್ದಾರೆ. ವಿಚಾರಣೆ ವೇಳೆ ಮಾಲೀಕರು ಇಮ್ರಾನ್ ಖುರೇಷಿ ಅವರಿಗೆ ದನದ ಮಾಂಸ ನೀಡಿರುವುದು ಬೆಳಕಿಗೆ ಬಂದಿದೆ. ಅವರ ಹೇಳಿಕೆ ಆಧರಿಸಿ ಪೊಲೀಸರು ಖುರೇಷಿಯನ್ನು ಬಂಧಿಸಿದ್ದಾರೆ. ಕೆಲವರು ಹಸುವಿನ ಮಾಂಸವನ್ನು ಬಳಸಿ ಮನೆಯಿಂದ ಸಮೋಸ ಮಾರಾಟ ಮಾಡುತ್ತಿರುವ ಬಗ್ಗೆ ಮಾಹಿತಿ ಲಭಿಸಿದ್ದು, 61 ಕೆಜಿ…
ಭಾರತದ ರಾಷ್ಟ್ರೀಕೃತ ಬ್ಯಾಂಕ್ ಗಳಲ್ಲಿ ಪ್ರಮುಖವಾದ ಹಾಗೂ ಹೆಚ್ಚು ಪ್ರಸಿದ್ಧಿ ಹೊಂದಿದ ಬ್ಯಾಂಕ್ ಗಳಲ್ಲಿ ಕೆನರಾ ಬ್ಯಾಂಕ್ ಕೂಡ ಪ್ರಮುಖವಾದುದು. ಇದೀಗ ಈ ಬ್ಯಾಂಕ್ ತನ್ನ ಗ್ರಾಹಕರಿಗೊಂದು ಭರ್ಜರಿ ಗುಡ್ ನ್ಯೂಸ್ ನೀಡಿದ್ದು ಫಿಕ್ಸೆಡ್ ಡೆಪಾಸಿಟ್ (FD) ನ ಬಡ್ಡಿ ಹೆಚ್ಚು ಮಾಡಿ ಆದೇಶ ಹೊರಡಿಸಿದೆ. ಹೌದು, ಕೆನರಾ ಬ್ಯಾಂಕ್ ಗ್ರಾಹಕರಿಗೋಸ್ಕರ ನಾನಾ ರೀತಿಯ ಸೌಲಭ್ಯವನ್ನು ನೀಡುತ್ತವೆ, ಅದರ ಜೊತೆಗೆ ಹೂಡಿಕೆ ಮಾಡಿರುವವರ ಹಣಕ್ಕೆ ಬಡ್ಡಿ ದರವನ್ನು ಹೆಚ್ಚಿಸಿರುವ ಕೆನರಾ ಬ್ಯಾಂಕ್, 444 ದಿನಗಳ ಫಿಕ್ಸೆಡ್ ಡೆಪಾಸಿಟ್(Fixed deposit) ಯೋಜನೆಯನ್ನು ಹೊಂದಿರುವಂತಹ ಗ್ರಾಹಕರಿಗೆ ಸಂತೋಷದ ಸುದ್ದಿ ನೀಡಿ, ಹೂಡಿಕೆ ಮಾಡಿರುವ ಹಣಕ್ಕೆ 7% ಕ್ಕಿಂತ ಹೆಚ್ಚಿನ ಬಡ್ಡಿ ಹಣವನ್ನು ನೀಡ ಹೊರಟಿದೆ. ಕೆನರಾ ಬ್ಯಾಂಕಿನಲ್ಲಿರುವ ನಾನಾ ರೀತಿಯಾದಂತಹ FD ಯೋಜನೆಗಳ ಪೈಕಿ ನೀವೇನಾದರೂ 444 ದಿನದ ಯೋಜನೆಯನ್ನು ಪಡೆದು, ಒಟ್ಟಿಗೆ 3 ಲಕ್ಷ ಹಣವನ್ನು ಪಾವತಿಸುತ್ತಾ ಹೋದರೆ 444 ದಿನಗಳವರೆಗೆ ನಿಮ್ಮ ಹೂಡಿಕೆ ಹಣಕ್ಕೆ 7.25% ಬಡ್ಡಿ ಹಣವು ಲಭಿಸುತ್ತದೆ. ಇದರಿಂದಾಗಿ…