Author: admin

ತಮ್ಮ ಮಗ ಕಾಂತೇಶ್ ಅವರಿಗೆ ಹಾವೇರಿ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಆಕ್ರೋಶಗೊಂಡಿರುವ ಬಿಜೆಪಿ ನಾಯಕ ಕೆ.ಎಸ್. ಈಶ್ವರಪ್ಪನವರು ಶಿವಮೊಗ್ಗದಿಂದ ಪಕ್ಷೇತರ ಸ್ಪರ್ಧೆಗಿಳಿಯುತ್ತೇನೆಂದು ಮುಂದಾಗಿದ್ದು, ಇದೀಗ ಈ ಬಗ್ಗೆ ಈಶ್ವರಪ್ಪನವರು ಬಿಗ್ ಅಪ್ಡೇಟ್ ನೀಡಿದ್ದಾರೆ. ಹೌದು, ಮನವೊಲಿಕೆಗೆ ಯಾರೇ ಬಂದರೂ ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿರ್ಧರಿಸುವ ತೀರ್ಮಾನದಿಂದ ಹಿಂದೆ ಸರಿಯುವುದಿಲ್ಲ, ಸ್ಪರ್ಧೆ ಮಾಡುವುದು ಅಚಲ. ಈ ಬಗ್ಗೆ ಬಿಜೆಪಿ ಮುಖಂಡರು ವಿಫಲ ಪ್ರಯತ್ನ ನಡೆಸುವುದನ್ನು ನಿಲ್ಲಿಸಲಿ ಎಂದು ಎಚ್ಚರಿಕೆ ನೀಡಿದ್ದಾರೆ. ಅಂದಹಾಗೆ, ತಾಲೂಕಿನ ಜಡೆ ಮಠಕ್ಕೆ ಭೇಟಿ ನೀಡಿ ಡಾ. ಮಹಾಂತ ಸ್ವಾಮಿಗಳ ಆಶೀರ್ವಾದ ಪಡೆದು ಮಾತನಾಡಿದ ಅವರು, ನಾನು ನನ್ನ ಪುತ್ರನಿಗಾಗಿ ಸ್ಪರ್ಧಿಸುತ್ತಿಲ್ಲ. ಪಕ್ಷ ಸರಿಪಡಿಸಲು ಈ ಸ್ಪರ್ಧೆ. ಈಗ ನನ್ನ ಪುತ್ರ ಕಾಂತೇಶ್ ಗೆ ಹಾವೇರಿಯಿಂದ ಟಿಕೆಟ್‌ ನೀಡುತ್ತೇನೆ ಎಂದರೂ ಅದು ಬೇಕಾಗಿಲ್ಲ ಬಿಜೆಪಿ ಬಿ.ಎಸ್. ಯಡಿಯೂರಪ್ಪ ಅವರ ಕುಟುಂಬದವರ ಸ್ವತ್ತಲ್ಲ. ನಾನೂ ಕೂಡ ಪಕ್ಷಕ್ಕಾಗಿ ದುಡಿದಿದ್ದೇನೆ. ಇಡೀ ಪಕ್ಷವನ್ನು ತಮ್ಮ…

Read More

ತಮಿಳುನಾಡಿನಿಂದ ಬಂದಿದ್ದ ಪ್ರವಾಸಿ ವಾಹನವು ಆದಿಮಲಿ ಬಳಿ ಕಂದಕಕ್ಕೆ ಉರುಳಿದ ಪರಿಣಾಮ 11 ಮಂದಿ ಗಾಯಗೊಂಡಿದ್ದು, ಜೊತೆಗೆ 1 ವರ್ಷದ ಮಗು ಸೇರಿ ಮೂವರು ಸಾವನ್ನಪ್ಪಿದ್ದಾರೆ ಎಂದು ಕೇರಳ ಪೊಲೀಸರು ತಿಳಿಸಿದ್ದಾರೆ. ಅಷ್ಟು ಮಾತ್ರವಲ್ಲದೇ ಗಾಯಗೊಂಡವರಲ್ಲಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಲಾಗಿದೆ. 14ಜನ ವಾಹನದಲ್ಲಿ ಇದ್ದಿದ್ದು, ಅವರಲ್ಲಿ ಮೂವರು ಸಾವಿಗೀಡಾಗಿದ್ದಾರೆ. ಈ ಅಪಘಾತವು ಮಂಗಳವಾರ ಸಂಜೆ ಆರು ಗಂಟೆಯ ಸುಮಾರಿಗೆ ಸಂಭವಿಸಿದೆ ಎಂದು ಹೇಳಲಾಗಿದ್ದು, ಹೇಗೆ ಸಂಭವಿಸಿತು ಎಂಬ ವಿವರ ಇನ್ನಷ್ಟೇ ತಿಳಿಯಬೇಕಿದೆ. ಗಾಡಿಯಲ್ಲಿ ಪ್ರವಾಸಿಗರಿದ್ದು, ತಮಿಳುನಾಡಿನ ಥೇಣಿಯಿಂದ ಬಂದಿದ್ದು, ಇಲ್ಲಿನ ಮಂಕುಲಂಗೆ ಭೇಟಿ ನೀಡಿ ವಾಪಾಸ್ಸಾಗುವ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ನಮ್ಮ ಮೆಟ್ರೋ ಸಿಬ್ಬಂದಿಯೋರ್ವ ಅಸಭ್ಯ ವರ್ತನೆಯನ್ನು ತೋರಿದ್ದು, ಮಹಿಳೆ ಮುಂದೆ ತನ್ನ ಖಾಸಗಿ ಅಂಗ ಸ್ಪರ್ಶಿಸಿಕೊಂಡು ವರ್ತನೆ ತೋರಿದ್ದು, ಈ ಘಟನೆ ಜಾಲಹಳ್ಳಿ ಮೆಟ್ರೋ ಫ್ಲ್ಯಾಟ್‌ಫಾರ್ಮ್‌ನಲ್ಲಿ ನಡೆದಿದೆ. ಈ ಕುರಿತು ಮೆಟ್ರೋ ಮೇಲಾಧಿಕಾರಿಗಳಿಗೆ ಮಹಿಳೆಯೊಬ್ಬರು ದೂರು ನೀಡಿದ್ದಾರೆ. ಮೆಟ್ರೋ ಅಧಿಕಾರಿಗಳಿಗೆ ದೂರು ನೀಡಿದರೂ ಕ್ರಮ ಕೈಗೊಳ್ಳದ ಕಾರಣ ಬೆಂಗಳೂರು ಪೊಲೀಸರಿಗೆ ಟ್ಯಾಗ್‌ ಮಾಡಿ ಜಾಲಹಳ್ಳಿ ಮೆಟ್ರೋ ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಮನವಿ ಮಾಡಲಾಗಿದೆ. ಮೆಟ್ರೋ ಸಿಬ್ಬಂದಿ ತನ್ನ ಖಾಸಗಿ ಅಂಗವನ್ನು ಸ್ಪರ್ಶ ಮಾಡಿ ಕೆಲವು ಸನ್ನೆಗಳನ್ನು ನಿರಂತರವಾಗಿ ಮಾಡುತ್ತಾ ನನ್ನನ್ನು ದಿಟ್ಟಿಸಿ ನೋಡುತಿದ್ದು, ಇದು ಮಧ್ಯಾಹ್ನ 2.30 ರ ಸುಮಾರಿಗೆ ನಡೆದಿದೆ. ಹಗಲು ಹೊತ್ತಿನಲ್ಲಿಯೇ ಇಂತಹ ಘಟನೆ ನಿಜಕ್ಕೂ ಕೆಟ್ಟದ್ದಾಗಿತ್ತು ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ. ನಾನು ಆತನನ್ನು ಪ್ರಶ್ನೆ ಮಾಡಿದಾಗ, ಆತ ಕೆಲವು ಸನ್ನೆ ಮಾಡಿ, ನನ್ನನ್ನು ದಿಟ್ಟಿಸಿ ನೋಡುತ್ತಲೇ ಇದ್ದ. ನಾನು ನಂತರ ವಿಡಿಯೋ ಮಾಡಲು ಆರಂಭಿಸಿದ ಬಳಿಕ ಆತ ಅಲ್ಲಿಂದ ಹೊರಟು ಹೋದ ಎಂದು ದೂರಿನಲ್ಲಿ…

Read More

ಲೋಕಸಭಾ ಚುನಾವಣೆಗೆ ದಿನಾಂಕ ಪ್ರಕಟವಾದ ಬೆನ್ನಲ್ಲೇ ಅಕ್ರಮಗಳ ಹಣ ಮತ್ತು ವಸ್ತುಗಳ ದಾಸ್ತಾನಿನ ಮೇಲೆ ಚುನಾವಣಾ ಆಯೋಗ ಹದ್ದಿನ ಕಣ್ಣಿಟ್ಟಿದೆ. ಇದರ ಬೆನ್ನಲ್ಲೇ ಯಾವುದೆ ದಾಖಲೆಗಳಿಲ್ಲದೆ ಕೊಂಡೊಯ್ಯುತ್ತಿದ್ದ ಬರೋಬ್ಬರಿ ತೊಂಬತ್ತೊಂಬತ್ತು ಲಕ್ಷದ ಇಪ್ಪತ್ತು ಸಾವಿರ ನಗದು (99,20,000) ಹಣವನ್ನು ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿರುವ ನಿಡಘಟ್ಟ ಚೆಕ್ ಪೋಸ್ಟ್ ನಲ್ಲಿ ವಶಪಡಿಸಿಕೊಳ್ಳಲಾಗಿದೆ. ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯ ನಿಡಘಟ್ಟ ಚೆಕ್ ಪೋಸ್ಟ್ ಬಳಿ ವಾಹನಗಳನ್ನು ತಪಾಸಣೆ ಮಾಡುತ್ತಿದ್ದ ವೇಳೆ ಇಷ್ಟೊಂದು ದೊಡ್ಡ ಮೊತ್ತದ ಹಣ ಪತ್ತೆಯಾಗಿದೆ. ಈ ಹಣವನ್ನು ಕ್ರೇಟಾ ಕಾರಿನಲ್ಲಿ ಬೇರೆಡೆಗೆ ಸಾಗಣೆ ಮಾಡಲಾಗುತ್ತಿತ್ತು. ನಿಡಘಟ್ಟ ಚೆಕ್ ಪೋಸ್ಟ್‌ ನಲ್ಲಿ ಕಾರು ತಪಾಸಣೆ ನಡೆಸಿದ ವೇಳೆ ಚೀಲದಲ್ಲಿ ತುಂಬಿಸಿದ್ದ ಕಂತೆಗಟ್ಟಲೆ ಹಣ ಪತ್ತೆಯಾಗಿದೆ. ಚೀಲದಲ್ಲಿ ತುಂಬಿಸಿಟ್ಟಿದ್ದ 99,20,000 ನಗದು, ಕ್ರೇಟಾ ಕಾರನ್ನು ಜಪ್ತಿ ಮಾಡಿರುವ ಪೊಲೀಸರು, ಹಣ ಸಾಗಿಸುತ್ತಿದ್ದ ಗಿರೀಶ್ ಎಂಬಾತನನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ. ಆದರೆ ಪೊಲೀಸರ ವಿಚಾರಣೆ ವೇಳೆಯೂ ಕೊಂಡೊಯ್ಯುತ್ತಿದ್ದ ಹಣಕ್ಕೆ ಸೂಕ್ತ…

Read More

ಭೂಮಿಯ ಮೇಲೆ ಚಿತ್ರ ವಿಚಿತ್ರ ಪ್ರಾಣಿ ಪಕ್ಷಿಗಳಿವೆ. ಅದರಲ್ಲೂ ಈ ಜಗತ್ತಿನಲ್ಲಿ ಮೂರು ಸಾವಿರಕ್ಕೂ ಹೆಚ್ಚು ಜಾತಿಯ ಹಾವುಗಳಿವೆ ಎಂದು ಸಂಶೋಧಕರು ಅಂದಾಜಿಸಿದ್ದಾರೆ. ಇವುಗಳಲ್ಲಿ ಕೆಲವು ಹೆಚ್ಚು ವಿಷಕಾರಿ. ಕೆಲವು ವಿಷಕಾರಿಯಲ್ಲದ ಹಾವುಗಳು. ಆದರೂ ಹಾವುಗಳಿಗೆ ಹೆದರುವ ಮಂದಿ ಜಾಸ್ತಿ.. ದೂರದಲ್ಲಿ ಹಾವು ಇದೆ ಎಂದು ತಿಳಿದರೆ ಅದೆಷ್ಟೋ ಜನ ಪ್ರಾಣ ಭಯದಿಂದ ಓಡುತ್ತಾರೆ. ಆದರೆ, ಇದೀಗ ಅಪರೂಪದ ಹಾವಿನ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಅದರ ಕಲರ್‌ ನೋಡಿದ್ರೆ ನಿಮಗೂ ಶಾಕ್ ಆಗುತ್ತೆ.. ವೈರಲ್ ಆದ ವೀಡಿಯೊದಲ್ಲಿ, ವ್ಯಕ್ತಿಯೊಬ್ಬರು ಕೆಂಪು ಹಾವನ್ನು ಹಿಡಿದಿರುವುದನ್ನು ಕಾಣಬಹುದು. ಇದು ನಾಗರಹಾವು. ಇಲ್ಲಿ ಅತ್ಯಂತ ಆಶ್ಚರ್ಯಕರ ವಿಷಯವೆಂದರೆ ಹಾವಿನ ಬಣ್ಣ ಕೆಂಪು. ಇದು ಬಹಳ ಅಪರೂಪದ ಹಾವು. ಕೆಂಪು ಬಣ್ಣದ ಹಾವನ್ನು ರೆಡ್ ಸ್ಪಿಟಿಂಗ್ ಕೋಬ್ರಾ ಎಂದು ಕರೆಯಲಾಗುತ್ತದೆ ಎಂದು ಹೇಳಲಾಗಿದೆ. ಇದನ್ನು ನೋಡಿ ನೆಟ್ಟಿಗರು ಆಶ್ಚರ್ಯ ಸೂಚಿಸಿದ್ದಾರೆ. ಅನಿಮಲ್ ಡೈವರ್ಸಿಟಿ ವೆಬ್‌ಸೈಟ್ ಪ್ರಕಾರ, ಕೆಂಪು ಬಣ್ಣವನ್ನು ಹೊಂದಿರುವ ಈ ನಾಗರ ಹಾವು…

Read More

ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣದ ಕಹಿ ನೆನಪು ಮಾಸುವ ಮುನ್ನವೇ ಬೆಂಗಳೂರಿನ ಶಾಲೆಯೊಂದರ ಮುಂಭಾಗದಲ್ಲಿ ಸ್ಫೋಟಕ ವಸ್ತುಗಳು ಪತ್ತೆಯಾಗಿವೆ. ಜಿಲೆಟಿನ್ ಕಡ್ಡಿ, ಡಿಟೋನೇಟರ್​​ ಹಾಗೂ ಇತರ ಕೆಲವು ಸ್ಫೋಟಕಗಳು ಬೆಂಗಳೂರಿನ ಬೆಳ್ಳಂದೂರಿನ ಪ್ರಕ್ರಿಯಾ ಶಾಲೆ ಮುಂಬಾಗದ ಖಾಲಿ ಜಮೀನಿನಲ್ಲಿ ಪತ್ತೆಯಾಗಿದೆ ಎಂದು ವರದಿ ತಿಳಿಸಿದೆ. ಸ್ಫೋಟಕಗಳನ್ನು ಟ್ರಾಕ್ಟರ್ ಒಂದರಲ್ಲಿ ಇಡಲಾಗಿತ್ತು. ಮೆಲ್ನೋಟಕ್ಕೆ ಕಟ್ಟಡ ನಿರ್ಮಾಣ ಮಾಡುವ ಜಾಗದಲ್ಲಿ ಬಂಡೆಗಳನ್ನು ಸ್ಫೋಟಿಸಲು ಸ್ಫೋಟಕಗಳನ್ನು ತಂದಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಆದರೆ, ಅಕ್ರಮವಾಗಿ ಸ್ಫೋಟಕ ವಸ್ತು ಸಂಗ್ರಹಿಸಲಾಗಿದೆ ಎಂದು ವರದಿ ತಿಳಿಸಿದೆ. ಸದ್ಯ ಬೆಳ್ಳಂದೂರು ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಅಕ್ರಮವಾಗಿ ಸ್ಪೋಟಕ ವಸ್ತುಗಳನ್ನು ಸಂಗ್ರಹ ಮಾಡಿದ್ದಾರೆ ಎಂದು ಪೊಲೀಸರು ಸ್ವಯಂಪ್ರೇರಿತರಾಗಿ ಕೇಸ್ ದಾಖಲು ಮಾಡಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ. ಮಾರ್ಚ್ 1 ರಂದು ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ್ದ ಬಾಂಬ್ ಸ್ಪೋಟದಲ್ಲಿ ಐದು ಮಂದಿ ಗಾಯಗೊಂಡಿದ್ದರು. ಘಟನೆ ಬಗ್ಗೆ ಸಿಸಿಬಿ ಪೊಲೀಸರು ಹಾಗೂ ರಾಷ್ಟ್ರೀಯ ತನಿಖಾ ದಳ ತನಿಖೆ ನಡೆಸುತ್ತಿವೆ. ಪ್ರಕರಣಕ್ಕೆ ಸಂಬಂಧಿಸಿದ…

Read More

ತಮ್ಮ ಮಕ್ಕಳಿಗೆ ಉತ್ತಮ ಅಂಕ ಸಿಗಬೇಕು ಎಂದು ಪಾಲಕರು ಕನಸು ಕಂಡರೆ, ಶಾಲೆಗೆ ಒಳ್ಳೆಯ ಹೆಸರು ಬರಲೆಂದು ಮಾಲೀಕರು ಬಯಸೋದು ಸಹಜ. ಹೀಗಾಗಿ ಶಿಕ್ಷಕರು ವಿದ್ಯಾರ್ಥಿಗಳ ಮೇಲೆ ಒತ್ತಡ ಹೇರುವಾಗ ಸಹಜವಾಗಿಯೇ ಈ ಒತ್ತಡ ಆರೋಗ್ಯದ ಮೇಲೆ ನೇರ ಪರಿಣಾಮ ಬೀರುತ್ತದೆ ಎಂದು ಹೇಳಲಾಗಿದೆ. ಅಂತೆಯೇ ನಿನ್ನೆಯಷ್ಟೇ ಹತ್ತನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಪರೀಕ್ಷೆ ಬರೆದ ನಂತರ ಇದ್ದಕ್ಕಿದ್ದಂತೆ ಕುಸಿದು ಬಿದ್ದು ಮೃತಪಟ್ಟಿದ್ದಾಳೆ. ವೈದ್ಯರು ಪರಿಶೀಲನೆ ನಡೆಸಿದಾಗ ಹೃದಯಾಘಾತದಿಂದ ಸಾವಿಗೀಡಾಗಿರುವುದಾಗಿ ತಿಳಿಸಿದ್ದಾರೆ. ಹಿಂದೆಲ್ಲ ವಯಸ್ಸಾದವರಿಗೆ ಮಾತ್ರ ಹೃದಯಾಘಾತ ಆಗುತ್ತದೆ ಎನ್ನುತ್ತಿದ್ದರು. ಆದರೆ, ಈಗ ಯಾವುದೇ ವಯಸ್ಸಿನ ಮಿತಿ ಇಲ್ಲದೆ, ಹೃದಯಾಘಾತ ಸಾಮಾನ್ಯವಾಗಿದೆ. ದಿಢೀರನೇ ಸಾಯುತ್ತಿರುವವರ ಸಂಖ್ಯೆ ಅಧಿಕವಾಗುತ್ತಿದೆ. ಇದೀಗ ಆಂಧ್ರ ಪ್ರದೇಶದ ವೈಎಸ್ ಆರ್ ಜಿಲ್ಲೆಯ ರಾಜುಪಾಲೆಂ ಮಂಡಲದಲ್ಲಿ ದುರಂತವೊಂದು ಸಂಭವಿಸಿದೆ. ಕೊರ್ರಪಾಡುವಿನಲ್ಲಿ 10ನೇ ತರಗತಿ ಓದುತ್ತಿದ್ದ ಲಿಖಿತಾ(15) ಎಂಬ ವಿದ್ಯಾರ್ಥಿನಿ ಹೃದಯಾಘಾತದಿಂದ ಮೃತಪಟ್ಟಿದ್ದಾಳೆ. ನಿನ್ನೆ ಪರೀಕ್ಷೆಗೆ ಹಾಜರಾಗಿದ್ದ ಬಾಲಕಿ, ಮಧ್ಯಾಹ್ನದ ಊಟದ ನಂತರ ಸಹ ವಿದ್ಯಾರ್ಥಿಗಳೊಂದಿಗೆ ಮಾತನಾಡುತ್ತಿದ್ದಾಗ ಕುಸಿದು ಬಿದ್ದಿದ್ದಾಳೆ. ಆಕೆ…

Read More

ಚುನಾವಣೆಗೆ ಹಂಚಲು ಸೀರೆ, ಕುಕ್ಕರ್ ಶೇಖರಣೆ ಮಾಡಿರುವುದು ಕಂಡುಬಂದಲ್ಲಿ ಬೆಂಕಿ ಹಚ್ಚಿ ಎಂದು ಜೆಡಿಎಸ್ ಕಾರ್ಯಕರ್ತರಿಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಕರೆ ನೀಡಿದ್ದಾರೆ ಎನ್ನಲಾಗಿದೆ. ಚುನಾವಣೆ ಘೋಷಣೆಗೂ ಮುಂಚೆ ಸೀರೆ ಹಂಚಿದ್ದಾರೆ. ಚುನಾವಣೆ ಘೋಷಣೆ ಆಗಿರುವುದರಿಂದ ಮತ್ತೆ ಸೀರೆ, ಕುಕ್ಕರ್ ಹಂಚಿಕೆಯಾಗುತ್ತಿದೆ. ಹಣ ಬಲ ಮತ್ತು ತೋಳ್ಬಲದಿಂದ ಚುನಾವಣೆ ಮಾಡಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೊರಟ್ಟಿದ್ದಾರೆ. ಅದಕ್ಕೆ ನಾವು ಹೆದವುದಿಲ್ಲ ಎಂದಿದ್ದಾರೆ. ಸಿದ್ದರಾಮಯ್ಯನವರೇ ಗ್ಯಾರಂಟಿ ಕೊಟ್ಟಿದ್ದೀರಿ, ಯಾಕೆ ಮತ್ತೆ ಕುಕ್ಕರ್ ಹಂಚುತ್ತಿದ್ದೀರಿ? ನಮ್ಮ ಕಾರ್ಯಕರ್ತರಿಗೆ ಕರೆ ಕೊಡುತ್ತೇನೆ. ಸೀರೆ, ಕುಕ್ಕರ್ ಶೇಖರಣೆ ಇಟ್ಟ ಜಾಗದಲ್ಲೇ ಬೆಂಕಿ ಇಡಿ. ಯಾರು ಮೊಕದ್ದಮೆ ಹಾಕುತ್ತಾರೆ ನಾನೂ ನೋಡುತ್ತೇನೆ. ಮುಖ್ಯ ಚುನಾವಣಾ ಅಧಿಕಾರಿ ಇದನ್ನು ಗಂಭೀರವಾಗಿ ಪರಿಗಣಿಸಬೇಕು ಎಂದಿದ್ದಾರೆ. ಪ್ಯಾರಾ ಮಿಲಿಟರಿ ಪೋರ್ಸ್ ಗ್ರಾಮಾಂತರ ಕ್ಷೇತ್ರಕ್ಕೆ ಹಾಕಬೇಕು. ಕೇಂದ್ರ ಸರ್ಕಾರಕ್ಕೆ ಮನವಿ ಮಾಡುತ್ತೇನೆ. ಮಿಲಿಟರಿ ಬರಲಿಲ್ಲ ಅಂದರೆ ಗ್ರಾಮಾಂತರ ಕ್ಷೇತ್ರದಲ್ಲಿ ಪಾರದರ್ಶಕ ಚುನಾವಣೆ ನಡೆಯಲ್ಲ ಎಂದು ಹೇಳಿದ್ದಾರೆ. ನಮ್ಮ ಮೈತ್ರಿ ಬಗ್ಗೆ ಡಿ.ಕೆ.…

Read More

ಪಕ್ಕದ ಮನೆ ದಂಪತಿಯ ಸರಸ ಸಲ್ಲಾಪದಿಂದ ನಮಗೆ ಕಿರಿಕಿರಿಯಾಗುತ್ತದೆ ಎಂದು ಮಹಿಳೆಯೋರ್ವರು ದೂರು ದಾಖಲಿಸಿರುವ ಘಟನೆಯೊಂದು ಬೆಂಗಳೂರಿನಲ್ಲಿ ನಡೆದಿದೆ. ಗಿರಿನಗರ ಪೊಲೀಸ್‌ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ. 44 ವರ್ಷದ ಮಹಿಳೆಯೊಬ್ಬರು ಆವಲಹಳ್ಳಿ, ಬಿಡಿಎ ಲೇಔಟ್‌ ನಲ್ಲಿ ವಾಸವಾಗಿದ್ದು, ಈಕೆಯ ಮನೆಯ ಬಾಗಿಲಿಗೆ ಪಕ್ಕದ ಮನೆಯ ಬೆಡ್‌ ರೂಂ ಇರುವ ಕಾರಣ ಪಕ್ಕದ ಮನೆಯಲ್ಲಿ ವಾಸವಾಗಿರುವ ದಂಪತಿ ಬೆಡ್‌ ರೂಂ ಕಿಟಕಿ ತೆರೆದು ಸರಸ ಸಲ್ಲಾಪದಲ್ಲಿ ತೊಡಗುವುದು, ಹಾಗೂ ವಿಕೃತ ಮತ್ತು ಅಸಹ್ಯ ಮನಸ್ಥಿತಿಯಿಂದ ನಡೆದುಕೊಂಡಿದ್ದಾರೆ ಎಂದು ಹೇಳಲಾಗಿದೆ. ಈ ಕುರಿತು ಪಕ್ಕದ ಮನೆಯರಲ್ಲಿ ದೂರು ನೀಡಿದ ಮಹಿಳೆ, ದಯವಿಟ್ಟು ಬೆಡ್‌ ರೂಂ ಕಿಟಕಿ ಹಾಕಿ ಎಂದು ಮನವಿ ಮಾಡಿದ್ದಾರೆ. ಇದಕ್ಕೆ ಪಕ್ಕದ ಮನೆಯ ವ್ಯಕ್ತಿ ಅವಾಚ್ಯ ಶಬ್ದಗಳಿಂದ ಮಹಿಳೆ ಹಾಗೂ ಕುಟುಂಬದವರಿಗೆ ನಿಂದನೆ ಮಾಡಿದ್ದಾನೆ. ಅಷ್ಟು ಮಾತ್ರವಲ್ಲದೇ ಮಹಿಳೆಯ ಮೇಲೆ ಅತ್ಯಾಚಾರ, ಕೊಲೆ ಮಾಡುವುದಾಗಿ ಬೆದರಿಕೆ ಕೂಡಾ ಹಾಕಿದ್ದಾನೆ. ಅಲ್ಲದೆ ಹಲ್ಲೆಗೆ ಕೂಡಾ ಯತ್ನ ಮಾಡಿದ್ದಾನೆ. ಇಷ್ಟು ಸಾಲದು…

Read More

ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಅವರ ಹತ್ಯೆ ಪ್ರಕರಣದಲ್ಲಿ 21ನೇ ಆರೋಪಿಯಾಗಿರುವ ಮೊಹಮ್ಮದ್ ಜಾಬೀರ್ ಎಂಬಾತನಿಗೆ ಜಾಮೀನು ನೀಡಲು ಹೈಕೋರ್ಟ್ ನಿರಾಕರಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲ್ಲೂಕಿನ ಒಳಮೊಗ್ರು ಗ್ರಾಮದ ನಿವಾಸಿ 35 ವರ್ಷದ ಜಾಬೀರ್, ತನ್ನ ಕಸ್ಟಡಿ ವಿಸ್ತರಿಸಿ ಡೀಫಾಲ್ಟ್ ಜಾಮೀನು ತಿರಸ್ಕರಿಸಿ ವಿಶೇಷ ಎನ್‌ಐಎ ನ್ಯಾಯಾಲಯ 2023ರ ಫೆಬ್ರವರಿ 9ರಂದು ಮಾಡಿದ್ದ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದನು. ಈ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಶ್ರೀನಿವಾಸ್ ಹರೀಶ್ ಕುಮಾರ್ ಮತ್ತು ನ್ಯಾಯಮೂರ್ತಿ ವಿಜಯಕುಮಾರ್ ಎ. ಪಾಟೀಲ್ ಅವರ ನೇತೃತ್ವದ ವಿಭಾಗೀಯ ಪೀಠ ಅರ್ಜಿ ವಜಾಗೊಳಿಸಿ ಆದೇಶಿಸಿದೆ. ಅರ್ಜಿದಾರರ ಪರ ವಕೀಲರು, ವಿಚಾರಣಾ ನ್ಯಾಯಾಲಯದಲ್ಲಿ (ವಿಶೇಷ ನ್ಯಾಯಾಲಯ) ಎನ್‌ಐಎ ಪರವಾಗಿ ಹಾಜರಾಗಿ ಅರ್ಜಿದಾರರ ಕಸ್ಟಡಿ ಆದೇಶ ವಿಸ್ತರಿಸುವಂತೆ ಕೋರಿರುವವರು ವಿಶೇಷ ಸರ್ಕಾರಿ ಅಭಿಯೋಜಕರಲ್ಲ. ಅಲ್ಲದೇ, ಅವರ ಮೌಖಿಕ ಕೋರಿಕೆಯನ್ನು ಎನ್‌ಐಎ ವಿಶೇಷ ನ್ಯಾಯಾಲಯ ಪರಿಗಣಸಿದೆ ಎಂದು ತಿಳಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಪೀಠ, ಅರ್ಜಿದಾರರ ಪರ…

Read More