Subscribe to Updates
Get the latest creative news from FooBar about art, design and business.
- ದಳವಾಯಿಹಳ್ಳಿಯಲ್ಲಿ ಕುಡಿಯುವ ನೀರಿಗೆ ಹಾಹಾಕಾರ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಗ್ರಾಮಸ್ಥರ ಆಕ್ರೋಶ, BPS ನಿಂದ ಟ್ಯಾಂಕರ್ ನೀರು ಪೂರೈಕೆ
- ಪಾವಗಡ: ದೊಡ್ಡಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ 2026–27ನೇ ಸಾಲಿನ ದಾಖಲಾತಿ ಆರಂಭ
- ರಾಜ್ಯಸಭೆ ಚುನಾವಣೆಗೂ ಸಚಿವ ಸಂಪುಟ ಪುನರಾಚನೆಗೂ ಯಾವುದೇ ಸಂಬಂಧವಿಲ್ಲ: ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟನೆ
- ಸಿರಾದಲ್ಲಿ ಮೇ 26 ರಂದು ಜೆಡಿಎಸ್ ಪಕ್ಷದ ಪದಾಧಿಕಾರಿಗಳ ನೇಮಕಾತಿ ಕಾರ್ಯಕ್ರಮ
- ಮಕ್ಕಳ ಕೈಗೆ ಮೊಬೈಲ್ ಕೊಡುವ ಮುನ್ನ ಈ ಸುದ್ದಿ ಓದಿ: 1.98 ಲಕ್ಷ ರೂಪಾಯಿ ಕಳೆದುಕೊಂಡ ತುಮಕೂರಿನ ವ್ಯಕ್ತಿ!
- ಚಿಲ್ಲರೆಗಳಿಗೆ ನಾನು ಹೆದರುವ ಮಗನೇ ಅಲ್ಲ ಕೀಳುಮಟ್ಟದ ರಾಜಕಾರಣ ನನಗೆ ಗೊತ್ತಿಲ್ಲ: ಶಾಸಕ ಎಸ್. ಆರ್.ಶ್ರೀನಿವಾಸ್ ತಿರುಗೇಟು
- ತುಮಕೂರು ಜಿಲ್ಲೆಯಲ್ಲಿ 0.3 ಮಿ.ಮೀ. ಮಳೆ
- ಕೆಎಸ್ ಆರ್ ಟಿಸಿ ಬಸ್ ದರ ಏರಿಕೆ ಖಚಿತ: ಸಾರಿಗೆ ಸಂಸ್ಥೆ ಅಧ್ಯಕ್ಷ ಎಸ್.ಆರ್. ಶ್ರೀನಿವಾಸ್
Author: admin
ಎಚ್.ಡಿ.ಕೋಟೆ: ನ್ಯಾಯಾಲಯದ ಮೊರೆಯಲ್ಲಿ ಜೀವನಾಂಶಕ್ಕಾಗಿ ಅರ್ಜಿ ಸಲ್ಲಿಸಿದ್ದ ಎರಡು ಜೋಡಿಗಳು ನ್ಯಾಯಾಧೀಶರು ಮತ್ತು ವಕೀಲರ ಮಧ್ಯಸ್ಥಿಕೆಯಲ್ಲಿ ಒಂದುಗೂಡಿದ್ದಾರೆ. ಪಟ್ಟಣದ ನ್ಯಾಯಾಲಯದ ಆವರಣದಲ್ಲಿ ಶನಿವಾರ ನಡೆದ ಲೋಕ ಅದಾಲತ್ ನಲ್ಲಿ ಪ್ರಧಾನ ಸಿವಿಲ್ ನ್ಯಾಯಾಧೀಶ ಸತೀಶ್ ಮತ್ತು ವಕೀಲರ ಸಮ್ಮುಖದಲ್ಲಿ, ಒಬ್ಬರಿಗೊಬ್ಬರು ಹಾರ ಬದಲಿಸುವ ಮೂಲಕ ಪುನಹ ಜೊತೆಗೂಡಿದರು. ತಾಲ್ಲೂಕಿನ ಬಾಚೇಗೌಡನಹಳ್ಳಿ ಗ್ರಾಮದ ಮಹದೇವಮ್ಮ ಮತ್ತು ಮಹಾದೇವ ನಾಯಕ ಹಾಗೂ ಹಿರೇಹಳ್ಳಿ ಗ್ರಾಮದ ಎಚ್. ಎಲ್. ಶಿವಪ್ಪ ಮತ್ತು ಛಾಯಾದೇವಿ ದಂಪತಿಗಳು ವಿವಾಹ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿ ನ್ಯಾಯಾಲಯದ ಮೆಟ್ಟಿಲೇರಿದ್ದರು. ಎಲ್ಲರೂ ಸುಮಾರು ಹತ್ತು ವರ್ಷಗಳಿಂದ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿ ಜೀವನಾಂಶ ಕೋರಿ ನ್ಯಾಯಾಲಯದ ಮೆಟ್ಟಿಲೇರಿದ್ದರು. ಎರಡು ಜೋಡಿಗಳು ಪುನಃ ಒಂದಾಗಿ ಮಕ್ಕಳೊಂದಿಗೆ ಅನನ್ಯ ಜೀವನ ನಡೆಸುವುದಾಗಿ ಮಾಲಾರ್ಪಣೆ ಮಾಡಿಕೊಂಡು ಕುಟುಂಬದೊಂದಿಗೆ ತಮ್ಮ ಮನೆಗಳಿಗೆ ತೆರಳಿದರು. ಪ್ರಧಾನ ಸಿವಿಲ್ ನ್ಯಾಯಾಲಯದಲ್ಲಿ ನ್ಯಾಯಾಧೀಶರಾದ ಕೆ.ಜಿ. ಸತೀಶ, ಸರ್ಕಾರಿ ವಕೀಲ ಮಹಾದೇವ, ಹಿರಿಯ ವಕೀಲರಾದ ಜಿ.ಎನ್. ನಾರಾಯಣಗೌಡ, ಎ.ಟಿ. ಕೃಷ್ಣ, ಎಸ್. ಕರಿಗೌಡ, ಪ್ರವೀಣ್ ಇದ್ದರು.…
ಆನೇಕಲ್: ಬೆಂಗಳೂರು ಹೊರವಲಯದ ಆನೆಕಲ್ ತಾಲೂಕಿನ ಗೌರೇನ ಹಳ್ಳಿಯಲ್ಲಿ ಪತಿಯೇ ತನ್ನ ಪತ್ನಿಯ ಮೇಲೆ ಆಸಿಡ್ ದಾಳಿ ನಡೆಸಿರುವ ಘಟನೆ ನಡೆದಿದೆ. ಚಾಂದ್ ಪಾಷಾ(45) ಎಂಬಾತ ತನ್ನ ಪತ್ನಿಯಾದ ನಾಜಿಯಾ ಬೇಗಂ (40) ಮೇಲೆ ದಾಳಿ ಮಾಡಿದ್ದಾನೆ. ಗಂಭೀರವಾಗಿ ಗಾಯಗೊಂಡಿರುವ ನಾಜಿಯಾ ಬೇಗಂ ಈಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಚಾಂದ್ ಪಾಷಾ ಮತ್ತು ನಾಜಿಯಾ ಬೇಗಂ ಹಲವು ವರ್ಷದ ಹಿಂದೆ ಮದುವೆಯಾಗಿದ್ದ ಇವರಿಗೆ ಆರಂಭದಿಂದಲೇ ಸಂಬಂಧ ಅಷ್ಟೇನೂ ಚೆನ್ನಾಗಿರಲಿಲ್ಲ. ಆಗಾಗ ಹೊಡೆಯುವುದು, ಮನೆಯಿಂದ ಹೊರಹಾಕುವ ಗಂಡನ ಕಿರಿಕಿರಿಯಿಂದ ನಾಜಿಯಾ ಬೇಸತ್ತಿದ್ದರು. ಆತ ಆಗಾಗ ಹೊಡೆಯುವುದು, ಮನೆಯಿಂದ ಹೊರಹಾಕುವ ಹಿಂಸೆ ನೀಡುತ್ತಿದ್ದ. ಆದರೆ ನಾಜಿಯಾ ಅದನ್ನೆಲ್ಲ ಸಹಿಸಿಕೊಂಡಿದ್ದರು. ಇತ್ತೀಚೆಗೆ ಕೌಟುಂಬಿಕ ಕಲಹ ತಾರಕ್ಕಕ್ಕೇರಿ ಕೋಪಗೊಂಡ ಗಂಡ ತನ್ನ ಹೆಂಡತಿಯ ಮೇಲೆ ಸೇಡು ತೀರಿಸಿಕೊಳ್ಳಲು ಪ್ಲಾನ್ ಮಾಡಿದ್ದ. ರಾತ್ರಿ ಮಲಗಿದ್ದ ಪತ್ನಿಯ ಮೇಲೆ ನೀಚ ಪತಿಯು ಆಸಿಡ್ ದಾಳಿ ನಡೆಸಿದ್ದಾನೆ. ಮನೆಯಲ್ಲಿ ಟಾಯ್ಲೆಟ್ ಕ್ಲೀನ್ ಮಾಡಲು ಬಳಸುವ ಆಸಿಡನ್ನೇ ಆತ ಆಕೆಯ ಮೇಲೆ ಎರಚಿದ್ದಾನೆ.…
ತುಮಕೂರು: ಶಕ್ತಿ ಕೇಂದ್ರದ ಕೂಗಳತೆ ದೂರದಲ್ಲೇ ಇರುವ ಶಾಲೆಯ ದುಸ್ಥಿತಿ ಇದು. ತುಮಕೂರು ಜಿಲ್ಲೆಯ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದಲ್ಲಿ ಇರುವ ಸರ್ಕಾರಿ ಶಾಲೆಯೊಂದಕ್ಕೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಡಾ.ತಿಪ್ಪೇಸ್ವಾಮಿ ಕೆ.ಟಿ. ಅವರು ಅನಿರೀಕ್ಷಿತವಾಗಿ ಭೇಟಿ ನೀಡಿದ್ದು, ಅಲ್ಲಿನ ಶಾಲೆಯ ದುಸ್ಥಿತಿ ಕಂಡು ಮರುಗಿದ್ದಾರೆ. ಶತಮಾನಕ್ಕೂ ಹೆಚ್ಚು ಪುರಾತನ ಕಾಲದ ಶಾಲೆ ಇದಾಗಿದ್ದು, ಇಷ್ಟೊಂದು ಅದ್ವಾನದ ಪರಿಸ್ಥಿತಿಯಲ್ಲಿ ಮಕ್ಕಳು ಅದು ಹೇಗೆ ಕಳಿಯುತ್ತಾರೆ ದೇವರೇ ಬಲ್ಲ ಎಂದು ಡಾ.ತಿಪ್ಪೇಸ್ವಾಮಿ ಕೆ.ಟಿ. ಆತಂಕ ವ್ಯಕ್ತಪಡಿಸಿದರು. ಒಂದು ಕಾಲದಲ್ಲಿ 1,300ಕ್ಕೂ ಹೆಚ್ಚು ಮಕ್ಕಳಿಗೆ ಶಿಕ್ಷಣ ನೀಡುತ್ತಿದ್ದ ಈ ಶಾಲೆ ಈಗ 48 ಮಕ್ಕಳು ಇರುವುದು ಶಾಲೆಯ ಅವಾಸಾನದ ದ್ಯೋತಕ. ಶಕ್ತಿ ಕೇಂದ್ರದ ಕೂಗಳತೆ ದೂರದಲ್ಲೇ ಇರುವ ಈ ಶಾಲೆಯ ದುಸ್ಥಿತಿ ಜಿಲ್ಲಾಡಳಿತದ ಕಣ್ಣಿಗೆ ಬಿದ್ದಿಲ್ಲದಿರುವುದು ವಿಷಾದನೀಯ. ಸ್ಥಳಕ್ಕೆ ಆಗಮಿಸಿದ ಬಿಇಓ ರವರಿಂದ ಈ ಬಗ್ಗೆ ವಿವರಣೆ ಪಡೆದುಕೊಂಡಿರುವುದಾಗಿ ಅವರು ತಿಳಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್…
ತುಮಕೂರು: ಜಿಲ್ಲೆಯ ಸಿರಾ ತಾಲೂಕಿನ ಶಾಲೆಯೊಂದರಲ್ಲಿ ಅಗ್ನಿ ಅವಘಡಕ್ಕೆ ತುತ್ತಾಗಿದ್ದ ಮಗು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿತ್ತು. ಸೋಮವಾರ ಮಗು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದೆ. ಸಿರಾ ತಾಲ್ಲೂಕಿನ ಮೆಳೆಕೋಟೆ ಸರ್ಕಾರಿ ಶಾಲೆಯಲ್ಲಿ ಶಾಲಾ ಸಮಯದಲ್ಲಿ ಒಂದನೇ ತರಗತಿಯ ವಿದ್ಯಾರ್ಥಿನಿಯೊಬ್ಬಳು ಅಗ್ನಿ ಅವಘಡಕ್ಕೆ ತುತ್ತಾಗಿ ತೀವ್ರವಾಗಿ ಗಾಯಗೊಂಡಿದ್ದಳು. ಈಕೆಯನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೇ ಬಾಲಕಿ ಕೊನೆಯುಸಿರೆಳೆದಿದ್ದಾಳೆ. ಘಟನೆಗೆ ಸಂಬಂಧಿಸಿದಂತೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಡಾ.ತಿಪ್ಪೇಸ್ವಾಮಿ ಕೆ.ಟಿ. ಅವರು, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಹಾಗೂ ನ್ಯಾಯಾಧೀಶರಾದ ನೂರ್ ಉನ್ನಿಸಾ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದು, ಮಗುವಿಗೆ ಪರಿಹಾರ ನೀಡುವ ಸಂಬಂಧ ಚರ್ಚಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಈಗಾಗಲೇ ಇಬ್ಬರು ಶಿಕ್ಷಕರನ್ನು ಅಮಾನತು ಮಾಡಲಾಗಿದೆ. ಶಾಲಾ ಸಮಯದಲ್ಲಿ ಈ ಘಟನೆಯಾಗಿರುವುದರಿಂದ ಶಿಕ್ಷಕರ ನಿರ್ಲಕ್ಷ್ಯ ಎದ್ದು ಕಾಣುತ್ತಿದೆ. ಘಟನೆಗೆ ಸಂಬಂಧಿಸಿದಂತೆ ಸುಮೋಟೋ ಪ್ರಕರಣ…
ಚಿತ್ರದುರ್ಗ: ಚಳ್ಳಕೆರೆ ತಾಲೂಕಿನ ಮಲ್ಲಸಮುದ್ರ ಗ್ರಾಮದಲ್ಲಿ ತಾಯಿ ಹಾಗೂ ಇಬ್ಬರು ಮಕ್ಕಳು ಬೆಂಕಿಯಲ್ಲಿ ಸುಟ್ಟು ಕರಕಲಾದ ಹೃದಯವಿದ್ರಾವಕ ಘಟನೆ ನಡೆದಿದೆ. ಮಾರಕ್ಕ (24), ನಯನ್(4) ಹರ್ಷವಧರ್ನ್(2) ಮೃತ ದುರ್ದೈವಿಗಳಾಗಿದ್ದಾರೆ. ಬಹಿರ್ದೆಸೆಗೆ ತೆರಳಿದ್ದಾಗ ಬೇಲಿಗೆ ಬೆಂಕಿ ಹಾಕಿ ಇಬ್ಬರನ್ನು ಮಕ್ಕಳನ್ನು ದೂಡಿ, ತಾಯಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಸಾವಿಗೆ ಕಾರಣ ಇನ್ನೂ ತಿಳಿದು ಬಂದಿಲ್ಲ, ತಳಕು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರೆದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಅಪಹರಣಕ್ಕೊಳಗಾದ ಹಡಗಿನಲ್ಲಿ, ಕಡಲ್ಗಳ್ಳರು ಒತ್ತೆಯಾಳಾಗಿಟ್ಟುಕೊಂಡಿದ್ದ ಏಳು ಬಲ್ಗೇರಿಯನ್ನರನ್ನು ಯಶಸ್ವಿಯಾಗಿ ರಕ್ಷಿಸಿದ ಭಾರತೀಯ ನೌಕಾಪಡೆಯ ಕಡಲ್ಗಳ್ಳತನ ವಿರೋಧಿ ಕಾರ್ಯಾಚರಣೆಗಾಗಿ ಬಲ್ಗೇರಿಯಾದ ಅಧ್ಯಕ್ಷ ರುಮೆನ್ ರಾದೇವ್ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧನ್ಯವಾದ ಅರ್ಪಿಸಿದರು. ಏಳು ಬಲ್ಗೇರಿಯನ್ ನಾಗರಿಕರು ಸೇರಿದಂತೆ ಅಪಹರಣಕ್ಕೊಳಗಾದ ಬಲ್ಗೇರಿಯನ್ ಹಡಗು ‘ ರುಯೆನ್ ‘ ಮತ್ತು ಅದರ ಸಿಬ್ಬಂದಿಯನ್ನು ರಕ್ಷಿಸಿದ ಭಾರತೀಯ ನೌಕಾಪಡೆಯ ಧೈರ್ಯಶಾಲಿ ಕ್ರಮಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರಿಗೆ ನನ್ನ ಪ್ರಾಮಾಣಿಕ ಕೃತಜ್ಞತೆಗಳು ” ಎಂದು ರಾದೇವ್ ಎಕ್ಸ್ ನಲ್ಲಿ ಸಾಮಾಜಿಕ ಮಾಧ್ಯಮ ಪೋಸ್ಟ್ ನಲ್ಲಿ ತಿಳಿಸಿದ್ದಾರೆ. ಇನ್ನು ಬಲ್ಗೇರಿಯಾದ ಉಪ ಪ್ರಧಾನಿ ಮರಿಯಾ ಗ್ಯಾಬ್ರಿಯಲ್ ಕೂಡ ಎಕ್ಸ್ನಲ್ಲಿ ಪೋಸ್ಟ್ ಒಂದರಲ್ಲಿ ಇದೇ ಭಾವನೆಯನ್ನು ವ್ಯಕ್ತಪಡಿಸಿದ್ದರು. ” ನಮ್ಮ 7 ಪ್ರಜೆಗಳು ಸೇರಿದಂತೆ ಅಪಹರಣಕ್ಕೊಳಗಾದ ಹಡಗು ರುಯೆನ್ ಮತ್ತು ಅದರ ಸಿಬ್ಬಂದಿಯನ್ನು ರಕ್ಷಿಸುವ ಯಶಸ್ವಿ ಕಾರ್ಯಾಚರಣೆಗಾಗಿ ನಾನು ಭಾರತೀಯ ನೌಕಾಪಡೆಗೆ ನನ್ನ ಕೃತಜ್ಞತೆಯನ್ನು ವ್ಯಕ್ತಪಡಿಸುತ್ತೇನೆ . ನಿಮ್ಮ ಈ ಬೆಂಬಲ ಮತ್ತು ಉತ್ತಮ ಪ್ರಯತ್ನಕ್ಕಾಗಿ ಧನ್ಯವಾದಗಳು. ಸಿಬ್ಬಂದಿಯ ಜೀವಗಳನ್ನು…
ಪ್ರೇಮ ವೈಫಲ್ಯಕ್ಕೆ ಬೇಸತ್ತ ವಿವಾಹಿತ ಮಹಿಳೆಯೊಬ್ಬಳು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ನಂಜನಗೂಡಿನಲ್ಲಿ ನಡೆದಿದೆ. ಬಿಹಾರ ಮೂಲದ ನಾಸಿಂ ಬೇಗಂ(31) ಆತ್ಮಹತ್ಯೆಗೆ ಯತ್ನಿಸಿದವಳು ಎಂದು ಗುರುತಿಸಲಾಗಿದೆ. ಖಾಸಗಿ ಹೋಟೆಲ್ ನ ಕಟ್ಟಡದ ಮೇಲ್ಭಾಗದಲ್ಲಿ ನಿಂತು ಮದುವೆ ಆಗದಿದ್ದರೆ ಬಿಲ್ಡಿಂಗ್ ಮೇಲಿಂದ ಬಿದ್ದು ಸಾಯುವುದಾಗಿ ಹೇಳಿ ಗಲಾಟೆ ಮಾಡಿದ್ದಾಳೆ. ಈಗಾಗಲೇ ಮದುವೆ ಆಗಿದ್ದ ಬಿಹಾರ ಮೂಲದ ನಾಸಿಂ ಬೇಗಂ, ಇನ್ಸ್ಟಾಗ್ರಾಮ್ ನಲ್ಲಿ ಪರಿಚಯವಾಗಿದ್ದ ವಯಸ್ಸಿನಲ್ಲಿ ಚಿಕ್ಕವನ್ನಾಗಿದ್ದ ಆಸಿಬೂರ್ ರೆಹಮಾನ್ ಎಂಬಾತನನ್ನು ಪ್ರೀತಿಸಿದ್ದಳು. ನಂಜನಗೂಡಿನ ಹಿಮ್ಮಾವು ಗ್ರಾಮದಲ್ಲಿ ವಾಸವಾಗಿದ್ದ ಆಸಿಬೂರ್ ರೆಹಮಾನ್ ಏಷಿಯನ್ ಪೈಂಟ್ಸ್ ನಲ್ಲಿ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ. ಕಳೆದ ಒಂದು ವರ್ಷದಿಂದ ಆಸಿಬೂರ್ ರೆಹಮಾನ್ ಹಾಗೂ ನಾಸಿಂ ಬೇಗಂ ಪರಿಚಯವು ಪ್ರೀತಿಗೆ ತಿರುಗಿತ್ತು. ಆಕೆಯನ್ನು ಕಾಣಲು ಕಾತುರನಾಗಿದ್ದ ಆಸಿಬೂರ ಮಹಿಳೆಯನ್ನು ಕಂಡ ಮೇಲೆ ಮನಸ್ಸು ಬದಲಾಗಿತ್ತು. ಯಾಕೆಂದರೆ ನಾಸಿಂ ಬೇಗಂಗೆ ಈಗಾಗಲೇ ಮದುವೆ ಆಗಿತ್ತು. ಜತೆಗೆ ವಯಸ್ಸಿನ ಅಂತರ ಹೆಚ್ಚಿದೆ ಎಂದು ಮದುವೆ ಸಾಧ್ಯವಿಲ್ಲ ಎಂದಿದ್ದ. ಯುವಕನ ಮಾತಿನಿಂದ ಸಿಟ್ಟಿಗೆದ್ದ ವಿವಾಹಿತೆ…
ಬಿಗ್ ಬಾಸ್ 9 ವಿನ್ನರ್ ರೂಪೇಶ್ ಶೆಟ್ಟಿ ಹೊಸ ಪೋಸ್ಟ್ ಒಂದನ್ನು ಶೇರ್ ಮಾಡಿಕೊಂಡಿದ್ದು, ಇದರಲ್ಲಿ ಅವರು ತಮಿಳಿನ ಖ್ಯಾತ ಹಾಸ್ಯನಟ ಯೋಗಿ ಬಾಬು ಜೊತೆಗೆ ಸಿನಿಮಾ ನಟಿಸುತ್ತಿರುವ ಬಗ್ಗೆ ಸುಳಿವು ನೀಡಿದ್ದಾರೆ. ಅವರಿಬ್ಬರು ಜೊತೆಯಾಗಿರುವ ಫೋಟೋಗಳು ಈಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, “ಇಂದು ತುಂಬಾ ಖುಷಿಯ ದಿವಸ. ನಿಮ್ಮೆಲ್ಲರ ಆಶೀರ್ವಾದ ಹಾಗೂ ಪ್ರೋತ್ಸಾಹದಿಂದ ಇಂದು ಒಂದು ಅದ್ಭುತ ತಂಡದ ಜತೆಗೆ ಸನ್ನಿಧಾನಮ್ P. O ಎನ್ನುವ ನನ್ನ ಮೊದಲ ತಮಿಳು ಚಿತ್ರ ಮಾಡುವ ಅವಕಾಶ ದೊರಕಿದೆ. ತಮಿಳಿನ ಸೂಪರ್ ಸ್ಟಾರ್ ಹಾಸ್ಯ ನಟರಾದ ಯೋಗಿ ಬಾಬು ಅವರ ಜತೆ ನಟಿಸುವ ಅವಕಾಶ ನನ್ನ ಪಾಲಿಗೆ ದೊಡ್ಡ ಹೆಮ್ಮೆ. ನಿಮ್ಮ ಆಶೀರ್ವಾದ ಸದಾ ಇರಲಿ” ಎಂದು ನಟ ರೂಪೇಶ್ ಶೆಟ್ಟಿ ಬರೆದಿದ್ದಾರೆ. ರೋಜಾ ಸಿನಿಮಾ ಖ್ಯಾತಿಯ ನಟಿ ಮಧು ಈ ಸಿನಿಮಾಗೆ ಬಂಡವಾಳ ಹೂಡುತ್ತಿದ್ದು, ಸಾರಥಿ ನಿರ್ದೇಶನ ಮಾಡಲಿದ್ದಾರೆ. ರೂಪೇಶ್ ಶೆಟ್ಟಿ ತುಳು ಹಾಗೂ ಕನ್ನಡ ಸಿನಿಮಾ ಮಾಡಿದ್ದರೂ ಕೂಡಾ…
ಹೃದಯಾಘಾತವು ಗಂಭೀರ ಕಾಯಿಲೆಯಾಗಿದೆ. ಈ ರೋಗದಲ್ಲಿ, ಹೃದಯವು ರಕ್ತವನ್ನು ಪಂಪ್ ಮಾಡುವಲ್ಲಿ ಅನೇಕ ಸಮಸ್ಯೆಗಳನ್ನು ಎದುರಿಸುತ್ತದೆ. ರಕ್ತ ಸಂಚಾರದಲ್ಲಿ ತೊಂದರೆಯಾದರೆ ಪಾದಗಳಲ್ಲಿ ನೀರು ನಿಲ್ಲುವ ಸಮಸ್ಯೆ ಇರುತ್ತದೆ. ಇದರಿಂದಾಗಿ ಪಾದಗಳಲ್ಲಿ ಊತ ಕಾಣಿಸಿಕೊಳ್ಳಲು ಪ್ರಾರಂಭಿಸುತ್ತದೆ. ಕಾಲುಗಳಲ್ಲಿ ಗೋಚರಿಸುವ ಊತವು ಹೃದ್ರೋಗದ ಆರಂಭಿಕ ಚಿಹ್ನೆಯಾಗಿರಬಹುದು. ಅದನ್ನು ತಡೆಯುವುದು ಹೇಗೆ ಎಂದು ತಿಳಿಯೋಣ. ಪಾದಗಳ ಊತವನ್ನು ಎಂದಿಗೂ ಲಘುವಾಗಿ ತೆಗೆದುಕೊಳ್ಳಬಾರದು ಏಕೆಂದರೆ ಇದು ಅನೇಕ ಗಂಭೀರ ಕಾಯಿಲೆಗಳ ಅಪಾಯವನ್ನು ಹೆಚ್ಚಿಸುತ್ತದೆ. ಪಾದಗಳು, ಕಣಕಾಲುಗಳು ಮತ್ತು ಹೊಟ್ಟೆಯಲ್ಲಿ ಊತವು ಹೃದಯ ಸಂಬಂಧಿ ಕಾಯಿಲೆಗಳ ಅಪಾಯವನ್ನು ಹೆಚ್ಚಿಸುತ್ತದೆ. ಈ ಪರಿಸ್ಥಿತಿಯಲ್ಲಿ ರಕ್ತ ಕಟ್ಟಿ ಹೃದಯ ಸ್ಥಂಭನದ ಚಿಹ್ನೆಗಳು ಇರಬಹುದು. ಕಾಲುಗಳು ಮತ್ತು ಪಾದಗಳಲ್ಲಿ ಊತವನ್ನು ಬಾಹ್ಯ ಎಡಿಮಾ ಎಂದು ಕರೆಯಲಾಗುತ್ತದೆ. ಇವು ಜನರಲ್ಲಿ ಹೃದಯ ವೈಫಲ್ಯದ ಆರಂಭಿಕ ಚಿಹ್ನೆಗಳಾಗಿರಬಹುದು. ಈ ಕಾಯಿಲೆಯಿಂದಾಗಿ ಕಾಲುಗಳಲ್ಲಿ ಭಾರ, ಚರ್ಮದಲ್ಲಿಯೂ ಊತ ಕಾಣಿಸಿಕೊಳ್ಳಬಹುದು. ಬೂಟುಗಳನ್ನು ಧರಿಸಲು ಕಷ್ಟವಾಗಬಹುದು. ಊತದಿಂದಾಗಿ, ಪಾದಗಳು ಬಿಸಿಯಾಗಬಹುದು ಮತ್ತು ಗಟ್ಟಿಯಾಗಬಹುದು. ಕೆಟ್ಟ ಕೊಲೆಸ್ಟ್ರಾಲ್ ಹೆಚ್ಚಾಗುವುದರಿಂದ ಹೃದಯ ಸಂಬಂಧಿ…
ಎಂಟಿಆರ್ ಫುಡ್ಸ್ ತನ್ನ ಶತಮಾನೋತ್ಸವ ವರ್ಷಾಚರಣೆ ಅಂಗವಾಗಿ ಶನಿವಾರ ಲೋರ್ಮನ್ ಕಿಚನ್ ಸಲಕರಣೆಗಳ ಸಹಭಾಗಿತ್ವದಡಿ ತಯಾರಿಸಿದ 123 ಅಡಿ ಉದ್ದದ ದೋಸೆಯು ಗಿನ್ನಿಸ್ ವರ್ಲ್ಡ್ ರೆಕಾರ್ಡ್ ನಲ್ಲಿ ಸ್ಥಾನ ಗಿಟ್ಟಿಸಿಕೊಂಡಿದೆ. ಸಂಸ್ಕರಿಸಿದ ಆಹಾರ ಪದಾರ್ಥಗಳ ತಯಾರಿಕಾ ಸಂಸ್ಥೆಯಾದ ಎಂಟಿಆರ್ ಫುಡ್ಸ್ ತನ್ನ ಶತಮಾನೋತ್ಸವ ವರ್ಷಾಚರಣೆ ಅಂಗವಾಗಿ ಲೋರ್ಮನ್ ಕಿಚನ್ ಸಲಕರಣೆಗಳ ಸಹಭಾಗಿತ್ವದಡಿ ತಯಾರಿಸಿದ 123 ಅಡಿ ಉದ್ದದ ದೋಸೆಯು, ಗಿನ್ನಿಸ್ ವರ್ಲ್ಡ್ ರೆಕಾರ್ಡ್ ನಲ್ಲಿ ಸ್ಥಾನ ಗಿಟ್ಟಿಸಿಕೊಂಡಿದೆ. 16.68 ಮೀಟರ್ (54 ಅಡಿ 8.69 ಇಂಚು) ಉದ್ದದ ದೋಸೆಯು ಇಲ್ಲಿಯವರೆಗೆ ದಾಖಲಾಗಿತ್ತು. ನಗರದ ಬೊಮ್ಮಸಂದ್ರದಲ್ಲಿರುವ ಕಂಪನಿಯ ಫ್ಯಾಕ್ಟರಿಯಲ್ಲಿ ಈ ದೋಸೆ ತಯಾರಿಸಲು ತನ್ನದೇ ಸಿಗ್ನೇಚರ್ ರೆಡ್ ಬ್ಯಾಟರ್ ಅನ್ನು ಬಳಸಿಕೊಂಡಿದೆ. ಉದ್ದನೆಯ ತವಾದಲ್ಲಿ ಈ ದಾಖಲೆಯ ದೋಸೆ ತಯಾರಿಸಲಾಗಿದೆ. ಎಂಟಿಆರ್ ನ ಕ್ಯುಸಿನ್ ಸೆಂಟರ್ ಆಫ್ ಎಕ್ಸಲೆನ್ಸ್ ಮಾರ್ಗದರ್ಶನದಡಿ ಆಹಾರ ತಜ್ಞರು ಮತ್ತು ಪಾಕ ಶಾಲೆಯ ಸಿಬ್ಬಂದಿ ಒಳಗೊಂಡ 75 ಬಾಣಸಿಗರ ತಂಡವು ದೋಸೆ ತಯಾರಿಸಿತು. ದಾಖಲೆ ನಿರ್ಮಿಸಿದ ಬಳಿಕ ಎಂಟಿಆರ್…