Subscribe to Updates
Get the latest creative news from FooBar about art, design and business.
- ದಳವಾಯಿಹಳ್ಳಿಯಲ್ಲಿ ಕುಡಿಯುವ ನೀರಿಗೆ ಹಾಹಾಕಾರ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಗ್ರಾಮಸ್ಥರ ಆಕ್ರೋಶ, BPS ನಿಂದ ಟ್ಯಾಂಕರ್ ನೀರು ಪೂರೈಕೆ
- ಪಾವಗಡ: ದೊಡ್ಡಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ 2026–27ನೇ ಸಾಲಿನ ದಾಖಲಾತಿ ಆರಂಭ
- ರಾಜ್ಯಸಭೆ ಚುನಾವಣೆಗೂ ಸಚಿವ ಸಂಪುಟ ಪುನರಾಚನೆಗೂ ಯಾವುದೇ ಸಂಬಂಧವಿಲ್ಲ: ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟನೆ
- ಸಿರಾದಲ್ಲಿ ಮೇ 26 ರಂದು ಜೆಡಿಎಸ್ ಪಕ್ಷದ ಪದಾಧಿಕಾರಿಗಳ ನೇಮಕಾತಿ ಕಾರ್ಯಕ್ರಮ
- ಮಕ್ಕಳ ಕೈಗೆ ಮೊಬೈಲ್ ಕೊಡುವ ಮುನ್ನ ಈ ಸುದ್ದಿ ಓದಿ: 1.98 ಲಕ್ಷ ರೂಪಾಯಿ ಕಳೆದುಕೊಂಡ ತುಮಕೂರಿನ ವ್ಯಕ್ತಿ!
- ಚಿಲ್ಲರೆಗಳಿಗೆ ನಾನು ಹೆದರುವ ಮಗನೇ ಅಲ್ಲ ಕೀಳುಮಟ್ಟದ ರಾಜಕಾರಣ ನನಗೆ ಗೊತ್ತಿಲ್ಲ: ಶಾಸಕ ಎಸ್. ಆರ್.ಶ್ರೀನಿವಾಸ್ ತಿರುಗೇಟು
- ತುಮಕೂರು ಜಿಲ್ಲೆಯಲ್ಲಿ 0.3 ಮಿ.ಮೀ. ಮಳೆ
- ಕೆಎಸ್ ಆರ್ ಟಿಸಿ ಬಸ್ ದರ ಏರಿಕೆ ಖಚಿತ: ಸಾರಿಗೆ ಸಂಸ್ಥೆ ಅಧ್ಯಕ್ಷ ಎಸ್.ಆರ್. ಶ್ರೀನಿವಾಸ್
Author: admin
ದೇಗುಲದ ಪ್ರಸಾದ ಸಿಕ್ಕಿದ್ರೆ ಸಾಕು, ದೇವರ ಹೆಸರು ಹೇಳಿ ಪ್ರಸಾದ ಸೇವಿಸುತ್ತೇವೆ. ಇನ್ನೂ ಕೆಲವರು ಪ್ರಸಾದ ಸ್ವೀಕಾರ ಮಾಡದೇ ಬರೋದೇ ಇಲ್ಲ.. ದೇವರ ಪ್ರಸಾದವನ್ನು ಸ್ವಲ್ಪವಾದರೂ ತಿಂದ್ರೆನೆ ಕೆಲವರಿಗೆ ಸಮಾಧಾನ. ಹೀಗೆ ಇನ್ನೇನು ದೇವರ ಪ್ರಸಾದ ಬಾಯಿಗಿಡಬೇಕು ಅನ್ನುವಷ್ಟರಲ್ಲಿ ವ್ಯಕ್ತಿಯೊಬ್ಬರಿಗೆ ಸತ್ತ ಇಲ್ಲಿ ಪತ್ತೆಯಾಗಿದೆ ಎನ್ನಲಾದ ಘಟನೆ ಬಗ್ಗೆ ತೆಲಂಗಾಣದಿಂದ ವರದಿಯಾಗಿದೆ. ಇದರ ವೀಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಸಂಚಲನ ಸೃಷ್ಟಿಸಿದೆ. ತೆಲಂಗಾಣದ ಯಾದಾದ್ರಿಯಲ್ಲಿ ಭಕ್ತರಿಗೆ ನೀಡಿದ ಪ್ರಸಾದದಲ್ಲಿ ಸತ್ತ ಇಲ್ಲಿ ಪತ್ತೆಯಾಗಿದೆ. ಆದರೆ ದೇಗುಲ ಸಮಿತಿ ಈ ಆರೋಪವನ್ನು ನಿರಾಕರಿಸಿದ್ದು, ವೀಡಿಯೋದ ಸತ್ಯಾಸತ್ಯತೆಯನ್ನು ಪ್ರಶ್ನಿಸಿದೆ. ಸಾಮಾಜಿಕ ಜಾಲತಾಣದಲ್ಲಿ ಯಾರೋ ತೆಲಂಗಾಣದ ಪ್ರಸಿದ್ಧ ತೀರ್ಥಕ್ಷೇತ್ರ ಯಾದಾದ್ರಿ ದೇಗುಲದಲ್ಲಿ ಪ್ರಸಾದವಾಗಿ ನೀಡಿದ ಪುಳಿಯೊಗ್ಗರೆಯಲ್ಲಿ ಇಲಿ ಇತ್ತು ಎಂದು ಬರೆದು ವೀಡಿಯೋವೊಂದನ್ನು ಪೋಸ್ಟ್ ಮಾಡಿದ್ದಾರೆ ಎನ್ನಲಾಗಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಧಾರ್ಮಿಕ ದತ್ತಿ ಇಲಾಖೆಯ ಕಮೀಷನರ್ ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ಈ ಘಟನೆಯನ್ನು ಖಂಡಿಸುವುದಾಗಿ ಹೇಳಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ನಾವು ವಿಚಾರಣೆ…
ಸಂಸದ ಪ್ರತಾಪ್ ಸಿಂಹ ಮಾತನಾಡಿ, ನಾನು ಪಕ್ಷಕ್ಕೂ ದ್ರೋಹ ಮಾಡಲ್ಲ, ಪಕ್ಕದಲ್ಲಿರುವವರಿಗೂ ದ್ರೋಹ ಮಾಡಲ್ಲ. 2014ರಲ್ಲಿ ನನಗೆ ಯಾಕೆ ಟಿಕೆಟ್ ಕೊಟ್ಟರು ಅಂತ ಹೈಕಮಾಂಡ್ ಹೇಳಿರಲಿಲ್ಲ. ನಾನು ಸಹ ಯಾಕೆ ಕೊಟ್ರಿ ಅಂತ ಕೇಳಿರಲಿಲ್ಲ. ಈಗಲೂ ಅಷ್ಟೇ ಯಾಕೆ ತಪ್ಪಿಸಿದ್ದೀರಿ ಅಂತಾನೂ ಕೇಳಿಲ್ಲ ಎಂದು ಹೇಳಿದ್ದಾರೆ. ನಂತರ ಬಿಜೆಪಿ ಅಭ್ಯರ್ಥಿ ರಾಜ ಯದುವೀರ್ ಮಾತನಾಡಿ ನಮ್ಮ ತಂದೆ ನಾಲ್ಕು ಬಾರಿ ಸಂಸದರಾಗಿದ್ದರು. ನಮಗೆ ಎಲ್ಲ ಪಕ್ಷದವರೊಂದಿಗೆ ಸಂಬಂಧ ಇದೆ. ನನ್ನ ಪರಿಕಲ್ಪನೆಗೆ ಬಿಜೆಪಿಯೊಂದಿಗೆ ಹೊಂದಾಣಿಕೆ ಇದೆ. ಜನರಿಗೆ ಅರಮನೆ ಬಗ್ಗೆ ಭಾವನಾತ್ಮಕ ಸಂಬಂಧ ಇದೆ. ಸಂವಿಧಾನದ ಅಡಿಯಲ್ಲಿ ಎಲ್ಲರೂ ಸಮಾನರು. ನಾನೂ ಸಹ ಸಾಮಾನ್ಯ ಸಂಸದನ ರೀತಿ ಕೆಲಸ ಮಾಡುತ್ತೇನೆ. ಆಧುನಿಕ ತಂತ್ರಜ್ಞಾನದ ಮೂಲಕ ಸಂಪರ್ಕ ಇಟ್ಟುಕೊಳ್ಳಬಹುದು. ನೀವು ಅರಮನೆಗೆ ಬರಬೇಕಿಲ್ಲ, ನಾನೇ ಅರಮನೆಯಿಂದ ಹೊರಗೆ ಬರುತ್ತೇನೆ. ನಾನು ರಾಜ ಅಂತ ಇದನ್ನು ಹೇಳಿಲ್ಲ. ಅರಮನೆಗೆ ಒಂದು ಪರಂಪರೆ ಇದೆ. ಅದನ್ನು ಹೊರತುಪಡಿಸಿ ನಾನು ಸಾಮಾನ್ಯನಾಗಿ ಇರುತ್ತೇನೆ. ನನ್ನನ್ನು ಸಂಸದ, ಪ್ರತಿನಿಧಿ…
ರಾಜ್ಯದಲ್ಲಿ ಬಿಸಿಲ ಬೇಗೆ ಹೆಚ್ಚಿದೆ. ಜೊತೆಗೆ ವಿದ್ಯುತ್ ಬೇಡಿಕೆ ಕೂಡಾ ಹೆಚ್ಚಿದೆ. ಜನರು ಬಿಸಿಲ ಧಗೆಯನ್ನು ಕಡಿಮೆ ಮಾಡಲು ಎಸಿ, ಫ್ಯಾನ್, ಕೂಲರ್ ಗಳ ಮೊರೆ ಹೋಗುತ್ತಿದ್ದಾರೆ. ಹೀಗಾಗಿ ವಿದ್ಯುತ್ ಬಳಕೆ ಹೆಚ್ಚಾಗಿದೆ. ಗೃಹಜ್ಯೋತಿ ಗ್ರಾಹಕರು ಕೂಡಾ ಸಾಮಾನ್ಯ ಗ್ರಾಹಕರಂತೆ ಎಲ್ಲಾ ಯೂನಿಟ್ಗೂ ನಿಗದಿತ ದರದಂತೆ ಇದೀಗ ಬಿಲ್ ಪಾವತಿಸಬೇಕಿದೆ. 2022-23 ನೇ ಸಾಲಿನ ವಾರ್ಷಿಕ ಸರಾಸರಿ ಲೆಕ್ಕಾಚಾರದ ಆಧಾರದ ಮೇಲೆ 200 ಯೂನಿಟ್ ವರೆಗೆ ಉಚಿತ ವಿದ್ಯುತ್ ನೀಡಲಾಗಿದೆ. ನಿಗದಿತ ಸರಾಸರಿಗಿಂತ 150 ಉಚಿತ ಯೂನಿಟ್ ಗಿಂತ 50 ಯೂನಿಟ್ ಹೆಚ್ಚು ಬಳಕೆ ಮಾಡಿದ್ದಲ್ಲಿ ಪ್ರತಿ ಯೂನಿಟ್ ಗೆ 7 ರೂ.ಪಾವತಿ ಮಾಡಬೇಕು. ಇದೀಗ ಬಿಸಿಲ ಝಳ ಹೆಚ್ಚಾಗಿರುವ ಕಾರಣ ವಿದ್ಯುತ್ ಬಳಕೆ ಶೇ.20 ರಷ್ಟು ಹೆಚ್ಚಾಗಿದೆ. ಹೆಚ್ಚಿನ ಪ್ರಮಾಣದ ವಿದ್ಯುತ್ ಬಳಕೆ ಮಾಡುತ್ತಿರುವುದರಿಂದ ಗೃಹಜ್ಯೋತಿ ಬಳಕೆದಾರರು ಕೂಡಾ ಸಾಮಾನ್ಯ ಗ್ರಾಹಕರ ರೀತಿ ನಿಗದಿತ ದರದಂತೆ ಬಿಲ್ ಪಾವತಿ ಮಾಡಬೇಕಿದೆ. ಶೇ.20ಕ್ಕೂ ಅಧಿಕ ಗೃಹಜ್ಯೋತಿ ಗ್ರಾಹಕರಿಗೆ ಇದು ಶಾಕಿಂಗ್ ನ್ಯೂಸ್…
ಈ ಬಾರಿ ಮಾರ್ಚ್ 22ರಿಂದ ಮೇ 26ರವರೆಗೆ ಬಹುನಿರೀಕ್ಷಿತ ಐಪಿಎಲ್ ಟೂರ್ನಿ ನಡೆಯಲಿದೆ. ಇಂದು (ಮಾರ್ಚ್ 19ಕ್ಕೆ) ಆರ್ ಸಿಬಿ ಅನ್ ಬಾಕ್ಸ್ ಈವೆಂಟ್ ಗೆ ವೇದಿಕೆ ಸಜ್ಜಾಗಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ಅನ್ಬಾಕ್ಸ್ ಇವೆಂಟ್ ಕುರಿತ ಪ್ರೋಮೊದಲ್ಲಿ ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ಕಾಣಿಸಿಕೊಂಡಿದ್ದಾರೆ. ಆರ್ ಸಿಬಿ ಅನ್ ಬಾಕ್ಸ್ ಇವೆಂಟ್ ಪ್ರೋಮೊದಲ್ಲಿ ಈಗಾಗಲೇ ಶಿರಾಜ್ ಕುಮಾರ್, ಸುದೀಪ್, ರಿಷಬ್, ಅಶ್ವಿನಿ ಪುನೀತ್ ರಾಜ್ ಕುಮಾರ್ ಕಾಣಿಸಿಕೊಂಡಿದ್ದಾರೆ. ಕಳೆದೊಂದು ವಾರದಿಂದ ಅರ್ಥ ಆಯ್ತಾ? ಎಂದು ಆರ್ ಸಿಬಿ ಚಮಕ್ ಕೊಡುತ್ತಲೇ ಬರುತ್ತಿದೆ. ಇದೀಗ ನ್ಯಾಶನಲ್ ಕ್ರಶ್ ರಶ್ಮಿಕಾ ಮಂದಣ್ಣ ಅವರ ಸರದಿ. Royal Challengers Bangalore ಎನ್ನುವ ಹೆಸರಿನಲ್ಲಿ ಬೆಂಗಳೂರು ಪದದ ಇಂಗ್ಲೀಷ್ ಅಕ್ಷರಗಳನ್ನು, ಉಚ್ಚಾರಣೆ ಬದಲಿಸಿದೆ. ಬೆಂಗಳೂರು ಎಂದು ಮಾಡಲಾಗುತ್ತಿದೆ. ಇಂದು(ಮಾರ್ಚ್ 19)ಕ್ಕೆ ನಡೆಯುವ ಆರ್ ಸಿಬಿ ಅನ್ ಬಾಕ್ಸ್ ಇವೆಂಟ್ ನಲ್ಲಿ ಇದು ಅಧಿಕೃತವಾಗುತ್ತಿದೆ. ಆರ್ ಸಿಬಿ ತನ್ನ ಅಭಿಯಾನ ಆರಂಭಿಸುವ ಮುನ್ನ ಪೂರ್ವಭಾವಿಯಾಗಿ ಅಭಿಮಾನಿಗಳಿಗಾಗಿ ಈ…
ಕೊಡಗು ಪೊಲೀಸ್ ಶ್ವಾನ ದಳದ ‘ಕಾಪರ್’ ವಿಶೇಷ ಸಾಧನೆ ಮಾಡಿದೆ. ಹೌದು,ಅಕ್ರಮವಾಗಿ ಗಾಂಜಾ ಸರಬರಾಜು, ಮಾರಾಟ ಹಾಗೂ ಬಳಕೆ ಮಾಡುತ್ತಿದ್ದ ಆರೋಪಿಯನ್ನು ಪತ್ತೆ ಹಚ್ಚುವಲ್ಲಿ ಕೊಡಗು ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ. ಗಾಂಜಾವನ್ನು ಪತ್ತೆಹಚ್ಚುವಲ್ಲಿ ಕೊಡಗು ಪೊಲೀಸ್ ಶ್ವಾನ ದಳದ ಕಾಪರ್ ಹೆಸರಿನ ಶ್ವಾನವು ಪ್ರಮುಖ ಪಾತ್ರ ವಹಿಸಿದೆ. ಈ ಹಿಂದೆ ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ಮಾದಕ ವಸ್ತುಗಳ ಸರಬರಾಜು, ಬಳಕೆ ಹಾಗೂ ಮಾರಾಟದ ಬಗ್ಗೆ ಸ್ಥಳೀಯ ಪೊಲೀಸ್ ಠಾಣೆಗಳಿಗೆ ಸಾರ್ವಜನಿಕರಿಂದ ದೂರು ಬರುತ್ತಿತ್ತು. ಮಾದಕ ವಸ್ತುಗಳ ಮಾರಾಟ ತಡೆಗಟ್ಟುವ ಹಿನ್ನೆಲೆಯಲ್ಲಿ ತಂಡವನ್ನು ರಚಿಸಿ ತನಿಖೆ ಕೈಗೊಂಡು ಮಾಹಿತಿ ಸಂಗ್ರಹಿಸಿತ್ತು. ಅದರಂತೆ, ಮಾರ್ಚ್ 17 ರಂದು ಬಸವನಹಳ್ಳಿ ಗ್ರಾಮ ಸಮೀಪ ತೆಪ್ಪದಕಂಡಿ ಎಂಬಲ್ಲಿ ನಿಷೇಧಿತ ಮಾದಕ ವಸ್ತುವನ್ನು ಮಾರಟ ಹಾಗೂ ಸರಬರಾಜು ಮಾಡುತ್ತಿರುವ ಕುರಿತು ಖಚಿತ ಮಾಹಿತಿ ಹಿನ್ನಲೆಯಲ್ಲಿ ದಾಳಿ ನಡೆಸಿ, ಆರೋಪಿಯನ್ನು ಬಂಧಿಸಿ, ದ್ವಿ-ಚಕ್ರ ವಾಹನದ ಜತೆಗೆ ಗಾಂಜಾವನ್ನು ವಶಕ್ಕೆ ಪಡೆಯಲಾಯಿತು. ಬಂಧಿತ ಆರೋಪಿಯನ್ನು 37 ವರ್ಷದ ಬಸವರಾಜು ಎಂದು…
ಗುಜರಾತ್ ವಿಶ್ವವಿದ್ಯಾಲಯದ ಹಾಸ್ಟೆಲ್ ಗೆ ನುಗ್ಗಿದ ಗುಂಪೊಂದು, ನಮಾಜ್ ಮಾಡಿದ ಆರೋಪದ ಮೇಲೆ ಆಫ್ರಿಕಾ, ಅಫ್ಘಾನಿಸ್ತಾನ ಮತ್ತು ಉಜ್ಬೇಕಿಸ್ತಾನದ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಅಫ್ಘಾನಿಸ್ತಾನ, ಶ್ರೀಲಂಕಾ ಮತ್ತು ತುರ್ಕಮೆನಿಸ್ತಾನ್ ನ ತಲಾ ಒಬ್ಬರು ಮತ್ತು ಆಫ್ರಿಕನ್ ದೇಶಗಳ ಇಬ್ಬರ ಮೇಲೆ ಹಲ್ಲೆ ನಡೆದಿದೆ. ಪೊಲೀಸರು ಬರುವಷ್ಟರಲ್ಲಿ ಗುಂಪು ಓಡಿಹೋಗಿತ್ತು. ಗಾಯಗೊಂಡ ವಿದ್ಯಾರ್ಥಿಗಳು ಆಸ್ಪತ್ರೆಯಲ್ಲಿದ್ದಾರೆ. ರಾಯಭಾರ ಕಚೇರಿಗಳಿಗೆ ಮಾಹಿತಿ ನೀಡಿದ್ದಾರೆ ಎಂದು ಉಳಿದ ವಿದ್ಯಾರ್ಥಿಗಳು ತಿಳಿಸಿದ್ದಾರೆ. ಹಾನಿಗೊಳಗಾದ ಬೈಕ್ ಗಳು, ಒಡೆದ ಲ್ಯಾಪ್ ಟಾಪ್ ಗಳು ಮತ್ತು ಧ್ವಂಸಗೊಂಡ ಕೊಠಡಿಗಳ ದೃಶ್ಯಗಳಿರುವ ವೀಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿವೆ. ಗುಂಪು ಹಾಸ್ಟೆಲ್ ಗೆ ಕಲ್ಲು ಎಸೆಯುತ್ತಿರುವುದು ಮತ್ತು ವಿದೇಶಿ ವಿದ್ಯಾರ್ಥಿಗಳನ್ನು ನಿಂದಿಸುತ್ತಿರುವ ದೃಶ್ಯದ ವೀಡಿಯೋ ಕೂಡ ವೈರಲ್ ಆಗಿದೆ ಎಂದು ವರದಿ ತಿಳಿಸಿದೆ. ಐವರು ವಿದೇಶಿ ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಅಹಮದಾಬಾದ್ ಮೂಲದ ಕ್ಯಾಂಪಸ್ ನಲ್ಲಿ ಯಾವುದೇ ಮಸೀದಿ ಇಲ್ಲ ಎಂದು ವಿದ್ಯಾರ್ಥಿಗಳು ಹೇಳಿದ್ದಾರೆ. ಆದ್ದರಿಂದ ರಂಜಾನ್ ಸಮಯದಲ್ಲಿ ರಾತ್ರಿ ನೀಡಲಾಗುವ…
ಹೈದರಾಬಾದ್ ನ ನೆಹರೂ ಮೃಗಾಲಯದಲ್ಲಿದ್ದ ದೈತ್ಯ ಆಮೆ ಚಾಣಕ್ಯ ತನ್ನ 125ನೇ ವಯಸ್ಸಿಗೆ ಕೊನೆಯುಸಿರೆಳೆದಿದೆ. ಮೃಗಾಲಯದ ಅತ್ಯಂತ ಹಿರಿಯ ನಿವಾಸಿ ಎಂದು ಗುರುತಿಸ್ಪಡುತ್ತಿದ್ದ ಚಾಣಕ್ಯ ಹೆಸರಿನ ಆಮೆಯ ನಿಧನಕ್ಕೆ ಅನೇಕರು ಬೇಸರ ವ್ಯಕ್ತಪಡಿಸಿದ್ದಾರೆ. ಚಾಣಕ್ಯ ತನ್ನ ವಯೋಸಹಜ ಸಮಸ್ಯೆಗಳಿಂದ ಕೊನೆಯುಸಿರೆಳೆದಿದೆ ಎನ್ನಲಾಗಿದೆ. ಕಳೆದ 10 ದಿನಗಳಿಂದ ಆಹಾರ ಸೇವಿಸುತ್ತಿರಲಿಲ್ಲ ಎಂದು ಮೃಗಾಲಯ ಸಿಬ್ಬಂದಿ ಮಾಹಿತಿ ನೀಡಿದ್ದಾರೆ. ಬೆಳಗ್ಗೆ ಮೃಗಾಲಯದ ಸಿಬ್ಬಂದಿ ಆವರಣವನ್ನು ಸ್ವಚ್ಛಗೊಳಿಸಲು ಹೋದಾಗ ಚಾಣಕ್ಯ ಕೊನೆಯುಸಿರೆಳೆದ ಬಗ್ಗೆ ತಿಳಿದಿದೆ. 1963ರಲ್ಲಿ ನಾಂಪಲ್ಲಿಯ ಸಾರ್ವಜನಿಕ ಉದ್ಯಾನದಿಂದ (ಬಾಗ್-ಎ-ಆಮ್) ಚಾಣಕ್ಯನನ್ನು ಹೈದರಾಬಾದ್ನ ನೆಹರೂ ಮೃಗಾಲಯಕ್ಕೆ ಕರೆ ತರಲಾಗಿತ್ತು. ಮೃಗಾಲಯ ಸ್ಥಾಪಿಸುವ ಮುನ್ನ ಇದು ಉದ್ಯಾನವನ ಆಗಿತ್ತು. ಈ ಹಿರಿಯ ಆಮೆಯ ಪೋಸ್ಟ್ ಮಾರ್ಟಮ್ ರಿಪೋರ್ಟ್ ಹೊರ ಬಂದಿದೆ. ಬಹು ಅಂಗಾಂಗ ವೈಫಲ್ಯದಿಂದಾಗಿ ಚಾಣಕ್ಯ ನಿಧನವಾಗಿದೆ ಎನ್ನುವ ಮಾಹಿತಿ ಬಹಿರಂಗಗೊಂಡಿದೆ. ಹೆಚ್ಚಿನ ತನಿಖೆಗಾಗಿ ಆಮೆಯ ಮಾದರಿಗಳನ್ನು ಪಶು ವೈದ್ಯಕೀಯ ಕಾಲೇಜಿಗೆ ಕಳುಹಿಸಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್…
ಇಂಡಿಯನ್ ಆಯಿಲ್ ಇಂಧನ ದರಗಳ ವ್ಯತ್ಯಯ ಕಾರ್ಪೊರೇಷನ್ ಲಕ್ಷದ್ವೀಪದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು 15.3 ರೂ. ವರೆಗೆ ಕಡಿತಗೊಳಿಸಿದೆ. ಒಂದೇ ಬಾರಿಗೆ ಈ ಪ್ರಮಾಣದ ದರ ಕಡಿತ ಮಾಡಿರುವುದು ದೇಶದಲ್ಲಿ ಇದೇ ಮೊದಲು. ಮಾಲ್ಡೀವ್ಸ್ ಜೊತೆಗಿನ ಸಂಬಂಧ ಹದಗೆಟ್ಟಿರುವ ಬೆನ್ನಲ್ಲೇ ಲಕ್ಷದ್ವೀಪವನ್ನು ಅಭಿವೃದ್ಧಿ ಪಡಿಸಲು ಕೇಂದ್ರ ಸರಕಾರ ಮುಂದಾಗಿರುವ ನಿರ್ಧಾರಕ್ಕೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ. ಇಂಧನ ದರ ಕಡಿತದ ಹಿಂದೆ ಲಕ್ಷದ್ವೀಪದ ಪ್ರವಾಸೋದ್ಯಮ ಅಭಿವೃದ್ಧಿ ಪಡಿಸುವ ಉದ್ದೇಶವಿದೆ. ಇದರಿಂದ ದ್ವೀಪವಾಸಿಗಳ ಬದುಕನ್ನು ಸುಲಭಗೊಳಿಸುವುದಲ್ಲದೆ, ದೀರ್ಘಾವಧಿಯಲ್ಲಿ ಸಕಾರಾತ್ಮಕ ನಿರ್ಮಾಣಗೊಳ್ಳುವ ಸರಕಾರ ವ್ಯಕ್ತಪಡಿಸಿದೆ. ಆಕರ್ಷಿಸುವುದರ ಹೂಡಿಕೆದಾರರನ್ನೂ ವಾತಾವರಣ ವಿಶ್ವಾಸವನ್ನು ಪ್ರವಾಸಿಗರನ್ನು ಜೊತೆಗೆ ಆಕರ್ಷಿಸುವ ನಿಟ್ಟಿನಲ್ಲಿ ಸರಕಾರ ಕಾರ್ಯಪ್ರವೃತ್ತವಾಗಿದೆ. ದೇಶದಲ್ಲಿ ಸದ್ಯ ಅತ್ಯಧಿಕ ಇಂಧನ ದರ ನಿಗದಿಯಾಗಿರುವ ರಾಜ್ಯಗಳ ಪೈಕಿ ಆಂಧ್ರಪ್ರದೇಶ, ತೆಲಂಗಾಣ ಮತ್ತು ಕೇರಳ ರಾಜ್ಯ ಮುಂಚೂಣಿಯಲ್ಲಿವೆ. ಇದೇ ವೇಳೆ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ದಿಲ್ಲಿ ಸೇರಿದಂತೆ ಕೇಂದ್ರಾಡಳಿತ ಪ್ರದೇಶಗಳು, ಈಶಾನ್ಯ ರಾಜ್ಯಗಳಲ್ಲಿ ಅತಿ ಕಡಿಮೆ ಇಂಧನ ದರ ನಿಗದಿಯಾಗಿದೆ. ಈ…
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಇದೀಗ ಮಲೆನಾಡಿನ ಜಿಲ್ಲೆ ಶಿವಮೊಗ್ಗಕ್ಕೆ ಭೇಟಿ ನೀಡಿದ್ದಾರೆ. ನಗರದ ಅಲ್ಲಮಪ್ರಭು ಮೈದಾನದಲ್ಲಿ ಆಯೋಜಿಸಿರುವ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮೋದಿ ಭಾಷಣ ಮಾಡಿದ್ದಾರೆ. ಇದೇ ಸಂದರ್ಭ ಸಿಎಂ ಸಿದ್ದರಾಮಯ್ಯ ಅವರು, ರೈತರ ಸಾವಿಗೆ ಕಾರಣರಾದ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ಮಗ ಬಿವೈ ವಿಜಯೇಂದ್ರ ಅವರಿಗೆ ಮತ ನೀಡಿ ಎನ್ನಲು ನಿಮ್ಮ ಆತ್ಮಸಾಕ್ಷಿ ಒಪ್ಪುವುದೇ ಎಂದು ಪ್ರಧಾನಿ ನರೇಂದ್ರ ಮೋದಿಗೆ ಪ್ರಶ್ನಿಸಿದ್ದಾರೆ. ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಒಂದನ್ನು ಹಂಚಿಕೊಂಡಿರುವ ಸಿದ್ದರಾಮಯ್ಯ, ರೈತರ ಚಳವಳಿಗಳ ತವರುನೆಲ ಶಿವಮೊಗ್ಗಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸ್ವಾಗತ. ಬಿಎಸ್ ಯಡಿಯೂರಪ್ಪ ಅವರು ಹಿಂದೊಮ್ಮೆ ರೈತರ ಸಾಲ ಮನ್ನಾದ ಭರವಸೆ ನೀಡಿ ನಂತರ ಮುಖ್ಯಮಂತ್ರಿಯಾದ ಮೇಲೆ ನಮ್ಮ ಸರ್ಕಾರದ ಬಳಿ ನೋಟ್ ಪ್ರಿಂಟ್ ಮಾಡುವ ಮೆಷಿನ್ ಇಲ್ಲ ಎಂದು ಹೇಳಿದ್ದರು. ಹಾವೇರಿಯಲ್ಲಿ ರಸಗೊಬ್ಬರ ಕೇಳಿದ ರೈತರ ಮೇಲೆ ಗೋಲಿಬಾರ್ ಮಾಡಿಸಿ ಅಮಾಯಕ ರೈತರನ್ನು ಬಲಿ ಪಡೆದಿದ್ದರು. ಇಂದು ಅದೇ…
ದೊಡ್ಡ ಹೊಟ್ಟೆಯನ್ನು ಕರಗಿಸುತ್ತೆ ಈ ಎರಡು ಎಲೆಗಳು: ತುಳಸಿ ಎಲೆಗಳ ಸೇವನೆಯು ಹೊಟ್ಟೆಗೆ ಪ್ರಯೋಜನಕಾರಿಯಾಗಿದೆ. ಇದನ್ನು ತಿನ್ನುವುದರಿಂದ ಜೀರ್ಣಾಂಗವು ಆರೋಗ್ಯವಾಗಿರುತ್ತದೆ. ತುಳಸಿಯು ತೂಕವನ್ನು ಕಡಿಮೆ ಮಾಡಿಕೊಳ್ಳಲು ಸಹಾಯ ಮಾಡುತ್ತದೆ. ಆದ್ದರಿಂದ ಪ್ರತಿದಿನ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ 3 ರಿಂದ 4 ತುಳಸಿ ಎಲೆಗಳನ್ನು ತಿನ್ನಿ. ಕರಿಬೇವಿನ ಎಲೆಗಳಲ್ಲಿರುವ ಅಂಶಗಳು ಬೊಜ್ಜು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಕಣ್ಣಿನ ಊತ ಕಾಣಿಸಿಕೊಂಡರೆ ಇದನ್ನೊಮ್ಮೆ ಟ್ರೈ ಮಾಡಿ: ಮಾಲಿನ್ಯ ಅಥವಾ ಧೂಳಿನ ಅಲರ್ಜಿಯಿಂದ ಕಣ್ಣಿನ ಅಡಿಯಲ್ಲಿ ಊತ ಕಾಣಿಸಿಕೊಳ್ಳುವುದಿದೆ. ನಿದ್ರಾಹೀನತೆ ಅಥವಾ ಸರಿಯಾಗಿ ನಿದ್ರೆ ಮಾಡದಿರುವುದು ಕೂಡ ಕಣ್ಣಿನ ಕೆಳ ಭಾಗದ ಊತಕ್ಕೆ ಕಾರಣವಾಗಿರುತ್ತದೆ. ಇದರ ಊತ ತಡೆಯಲು ಉಪ್ಪನ್ನು ಮಿತವಾಗಿ ಬಳಸಿ, ಅನಗತ್ಯ ಮೇಕಪ್ ಮಾಡುವುದನ್ನು ನಿಲ್ಲಿಸಿ, ಇದರ ಜೊತೆಗೆ ದಿನಕ್ಕೆ ಕನಿಷ್ಠ 20 ರಿಂದ 30 ಬಾರಿ ಕಣ್ಣುಗಳ ಮೇಲೆ ನೀರು ಚಿಮುಕಿಸಬೇಕು. ಇದರಿಂದ ಕಣ್ಣುಗಳು ಸ್ವಚ್ಛವಾಗಿರುತ್ತವೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.…