Subscribe to Updates
Get the latest creative news from FooBar about art, design and business.
- ದಳವಾಯಿಹಳ್ಳಿಯಲ್ಲಿ ಕುಡಿಯುವ ನೀರಿಗೆ ಹಾಹಾಕಾರ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಗ್ರಾಮಸ್ಥರ ಆಕ್ರೋಶ, BPS ನಿಂದ ಟ್ಯಾಂಕರ್ ನೀರು ಪೂರೈಕೆ
- ಪಾವಗಡ: ದೊಡ್ಡಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ 2026–27ನೇ ಸಾಲಿನ ದಾಖಲಾತಿ ಆರಂಭ
- ರಾಜ್ಯಸಭೆ ಚುನಾವಣೆಗೂ ಸಚಿವ ಸಂಪುಟ ಪುನರಾಚನೆಗೂ ಯಾವುದೇ ಸಂಬಂಧವಿಲ್ಲ: ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟನೆ
- ಸಿರಾದಲ್ಲಿ ಮೇ 26 ರಂದು ಜೆಡಿಎಸ್ ಪಕ್ಷದ ಪದಾಧಿಕಾರಿಗಳ ನೇಮಕಾತಿ ಕಾರ್ಯಕ್ರಮ
- ಮಕ್ಕಳ ಕೈಗೆ ಮೊಬೈಲ್ ಕೊಡುವ ಮುನ್ನ ಈ ಸುದ್ದಿ ಓದಿ: 1.98 ಲಕ್ಷ ರೂಪಾಯಿ ಕಳೆದುಕೊಂಡ ತುಮಕೂರಿನ ವ್ಯಕ್ತಿ!
- ಚಿಲ್ಲರೆಗಳಿಗೆ ನಾನು ಹೆದರುವ ಮಗನೇ ಅಲ್ಲ ಕೀಳುಮಟ್ಟದ ರಾಜಕಾರಣ ನನಗೆ ಗೊತ್ತಿಲ್ಲ: ಶಾಸಕ ಎಸ್. ಆರ್.ಶ್ರೀನಿವಾಸ್ ತಿರುಗೇಟು
- ತುಮಕೂರು ಜಿಲ್ಲೆಯಲ್ಲಿ 0.3 ಮಿ.ಮೀ. ಮಳೆ
- ಕೆಎಸ್ ಆರ್ ಟಿಸಿ ಬಸ್ ದರ ಏರಿಕೆ ಖಚಿತ: ಸಾರಿಗೆ ಸಂಸ್ಥೆ ಅಧ್ಯಕ್ಷ ಎಸ್.ಆರ್. ಶ್ರೀನಿವಾಸ್
Author: admin
ಶಿವಮೊಗ್ಗ: ಲೋಕಸಭಾ ಸಮರದ ಹಿನ್ನೆಲೆ ರಾಜ್ಯ ಪ್ರವಾಸಗಳನ್ನು ಕೈಗೊಳ್ಳುತ್ತಿರುವ ಪ್ರಧಾನಿ ಮೋದಿ ಶಿವಮೊಗ್ಗದಲ್ಲಿ ಬೃಹತ್ ಸಮಾವೇಶದಲ್ಲಿ ಭಾಗಿಯಾಗಿ ಮಾತನಾಡಿದರು. ಶಿವಮೊಗ್ಗ ಜನತೆಗೆ ನಮಸ್ಕಾರ ಎಂದು ಕನ್ನಡದಲ್ಲಿ ಭಾಷಣ ಆರಂಭಿಸಿದ ಪ್ರಧಾನಿ ಮೋದಿ, ಕೆಲ ವರ್ಷಗಳ ಹಿಮದೆ ಶಿವಮೊಗ್ಗ ಜನತೆಗೆ ನಾವು ಯಾರು ಎಂದೇ ಗೊತ್ತಿರಲಿಲ್ಲ ಆದರೆ ಅಂತಹ ಸಮಯದಲ್ಲಿ ಬಿ ಎಸ್ ಯೆಇಯೂರಪ್ಪ ತಮ್ಮ ಜೀವನವನ್ನು ಸವೆಸಿ ಪಕ್ಷಕ್ಕೆ ಭದ್ರ ಬುನಾದಿ ಹಾಕಿದ್ದಾರೆ, ಇದು ಅವರ ತಪೋಭೂಮಿ ಎಂದು ಬಿಎಸ್ ವೈ ಅವರನ್ನು ಮೋದಿ ಹಾಡಿ ಹೊಗಳಿದ್ದಾರೆ. ಇಂದು ಸೇರಿರುವ ಜನ ಸಂಖ್ಯೆ ನೋಡಿದರೆ, ಅಲ್ಲಿ ಭ್ರಷ್ಟಾಚಾರದಲ್ಲಿ ಮುಳುಗಿರುವವರ ನಿದ್ದೆ ಹಾರಿ ಹೋಗಿದೆ ಎಂದು ಮೋದಿ ಟೀಕಿಸಿದರು. ಕರ್ನಾಟಕ ಕಾಂಗ್ರೆಸ್ ವಿರುದ್ಧ ಪಿಎಂ ವಾಗ್ದಾಳಿ ಕರ್ನಾಟಕವನ್ನು ಕಾಂಗ್ರೆಸ್ ಎಟಿಎಂ ಮಾಡಿಕೊಂಡಿದೆ, ಲೂಟಿ ಭ್ರಷ್ಟಾರ ಎಷ್ಟರ ಮಟ್ಟಿಗೆ ಹೆಚ್ಚಾಗಿದೆ ಎಂದರೆ ಸರ್ಕಾರ ನಡೆಸಲೂ ಹಣವಿಲ್ಲ. ಇಲ್ಲಿ ದೆಹಲಿಯ ಕಲೆಕ್ಷನ್ ಮಿನಿಸ್ಟರ್, ಸೂಪರ್ ಸಿಎಂ , ಶ್ಯಾಡೋ ಸಿಎಂ, ಭಾವಿ ಸಿಎಂ ಎಲ್ಲಾ ಇದ್ದಾರೆ.…
ಶಿವಮೊಗ್ಗ: ಪುತ್ರನಿಗೆ ಟಿಕೆಟ್ ಸಿಗದ ಬೆನ್ನಲ್ಲೇ ಬಂಡಾಯವೆದ್ದಿರುವ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಅವರು ಶಿವಮೊಗ್ಗದಲ್ಲಿ ನಡೆಯುತ್ತಿರುವ ನರೇಂದ್ರ ಮೋದಿ ಅವರ ಸಮಾವೇಶಕ್ಕೆ ಗೈರಾಗಿದ್ದಾರೆ. ಕಾಂತೇಶ್ ಅವರಿಗೆ ಬಿಜೆಪಿಯಿಂದ ಹಾವೇರಿ ಕ್ಷೇತ್ರಕ್ಕೆ ಟಿಕೆಟ್ ಸಿಗದಿದ್ದರಿಂದ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಬಂಡಾಯವೆದ್ದಿದ್ದಾರೆ. ಈ ಹಿನ್ನೆಲೆಯಲ್ಲಿ ಈಗಾಗಲೇ ಶಿವಮೊಗ್ಗದಿಂದ ಸ್ವತಂತ್ರವಾಗಿ ಸ್ಪರ್ಧಿಸುವುದಾಗಿ ತಿಳಿಸಿದ್ದರು. ಅಷ್ಟೇ ಅಲ್ಲದೇ ಮೋದಿ ಸಮಾವೇಶಕ್ಕೆ ಹಾಜರಾಗುವುದಿಲ್ಲ. ಆದರೆ ಗೆದ್ದ ಬಳಿಕ ಮೋದಿಗೆ ಬೆಂಬಲ ನೀಡುವುದಾಗಿ ತಿಳಿಸಿದ್ದರು. ಇದೀಗ ಅದರಂತೆ ಮೋದಿ ಸಮಾವೇಶಕ್ಕೆ ಗೈರಾಗಿದ್ದಾರೆ. ಇಂದು ಈಶ್ವರಪ್ಪ ಅವರು ಶಿವಮೊಗ್ಗ ಜಿಲ್ಲೆಯ ಬಿಳಕಿ, ಗೋಣಿಬೀಡು, ತೊಗರ್ಸಿ, ಹಿರೇಮಾಗಡಿ, ಜಡೇ-ಮೂಡಿ, ಶಾಂತಪುರ, ಹಾರ್ನಹಳ್ಳಿ ಚೌಕಿಮಠ, ಮೂಲೆಗದ್ದೆ, ಹುಂಚಾ ಜೈನಮಠ, ಶಿಕಾರಿಪುರದ ಸಾಲೂರು ಸೇರಿದಂತೆ 10ಕ್ಕೂ ಹೆಚ್ಚು ಮಠಗಳ ಭೇಟಿಗೆ ತೆರಳಿದ್ದು, ವೀರಶೈವ-ಲಿಂಗಾಯತ ಹಾಗೂ ಜೈನ ಸಮುದಾಯದ ಶ್ರೀಗಳ ಆಶೀರ್ವಾದ ಪಡೆಯಲು ಮುಂದಾಗಿದ್ದಾರೆ. ಅಷ್ಟೇ ಅಲ್ಲದೇ ಮತ್ತೊಂದು ಕಡೆ ಪ್ರಧಾನಿ ಜೊತೆ ವೇದಿಕೆ ಹಂಚಿಕೊಳ್ಳುವ ಗಣ್ಯರ ಪಟ್ಟಿಯಲ್ಲಿ ಈಶ್ವರಪ್ಪ ಅವರ ಹೆಸರು ಇಲ್ಲ.…
ಬೀದರ್: ಬೀದರ್ ಜಿಲ್ಲೆಯಲ್ಲಿ ತಲೆನೋವಿನಿಂದ ಬೇಸತ್ತು ಗರ್ಭಿಣಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಕೀರ್ತಿ ರಾಮು(22) ಮೃತ ಗರ್ಭಿಣಿಯಾಗಿದ್ದಾಳೆ. 7 ತಿಂಗಳ ಗರ್ಭಿಣಿಯಾಗಿದ್ದ ಕೀರ್ತಿರಾಮು ಅವರು ಹಲವು ತಿಂಗಳುಗಳಿಂದ ತೀವ್ರವಾದ ತಲೆನೋವಿನಿಂದ ಬಳಲುತ್ತಿದ್ದರು. ಎಷ್ಟೇ ಚಿಕಿತ್ಸೆ ಮಾಡಿದರೂ ಗುಣವಾಗುತ್ತಿರಲಿಲ್ಲ. ಇದರಿಂದ ಬೇಸತ್ತು ಕೀರ್ತಿರಾಮು ಅವರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಾವಿಗೆ ಬಿದ್ದ ಗರ್ಭಿಣಿಯ ಮೃತದೇಹವನ್ನು ಪೊಲೀಸರು ಮೇಲೆಕ್ಕಿತ್ತಿದ್ದು, ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಈ ಕುರಿತು ಹುಮ್ನಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಕುಂಬಳಕಾಯಿ ಹೂವಿನಿಂದ ಏನೆಲ್ಲಾ ಪ್ರಯೋಜನ ಇದೆ ಗೊತ್ತಾ?: ಕುಂಬಳಕಾಯಿ ಮತ್ತು ಅದರ ಬೀಜಗಳು ಮಾತ್ರವಲ್ಲದೆ ಅವುಗಳ ಹೂವುಗಳೂ ಔಷಧೀಯ ಗುಣಗಳನ್ನು ಹೊಂದಿವೆ. ಕುಂಬಳಕಾಯಿ ಹೂವು ತಿನ್ನಲು ಸಹ ರುಚಿಕರವಾಗಿರುತ್ತದೆ. ಕುಂಬಳಕಾಯಿ ಹೂವುಗಳು ಸಾಕಷ್ಟು ಕ್ಯಾಲ್ಸಿಯಂ, ರಂಜಕ, ಜೀವಸತ್ವಗಳು ಮತ್ತು ಖನಿಜಗಳನ್ನು ಹೊಂದಿರುತ್ತವೆ. ಹೀಗಾಗಿ ಈ ಹೂವು ಅನೇಕ ರೋಗಗಳ ವಿರುದ್ಧ ಹೋರಾಡಲು ನಮಗೆ ಸಹಾಯ ಮಾಡುತ್ತದೆ. ಕುಂಬಳಕಾಯಿ ಹೂಗಳನ್ನು ತಿನ್ನುವುದರಿಂದ ಅನೇಕ ಆರೋಗ್ಯ ಪ್ರಯೋಜನಗಳಾಗಲಿವೆ. ಕುಂಬಳಕಾಯಿ ಹೂವುಗಳು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತವೆ. ಬಾಳೆಹಣ್ಣಿನ ಜೊತೆ ಹಾಲು ಕುಡಿಯುವುದು ಆರೋಗ್ಯಕ್ಕೆ ಅಪಾಯ?: ಬಾಳೆಹಣ್ಣು ಹಾಗೂ ಹಾಲು ಕುಡಿಯುವುದರಿಂದ ನಿಮ್ಮ ದೇಹದ ತೂಕ ಹೆಚ್ಚಾಗುತ್ತದೆ. ಆದರೆ, ಅಸ್ತಮಾದಂತ ಸಮಸ್ಯೆ ಇರುವವರು ಬಾಳೆಹಣ್ಣಿನ ಮಿಲ್ಕ್ ಶೇಕ್ ಕುಡಿಯುವುದು ಒಳ್ಳೆಯದಲ್ಲ. ಬಾಳೆಹಣ್ಣನ್ನು ಹಾಲಿನೊಂದಿಗೆ ಸೇವಿಸುವುದರಿಂದ ದೇಹದಲ್ಲಿ ಜೀರ್ಣಶಕ್ತಿ ದುರ್ಬಲಗೊಳ್ಳುತ್ತದೆ. ಇದರಿಂದ ಶೀತ, ಉಸಿರಾಟದ ತೊಂದರೆ, ಕಫದ ಸಮಸ್ಯೆ ಉಂಟಾಗಬಹುದು. ತಜ್ಞರ ಪ್ರಕಾರ, ಬಾಳೆಹಣ್ಣು ಹಾಗೂ ಹಾಲನ್ನು ಒಟ್ಟಿಗೆ ಸೇವಿಸದಿರುವುದು ಆರೋಗ್ಯಕ್ಕೆ ಒಳ್ಳೆಯದು. ನಮ್ಮತುಮಕೂರಿನ ಕ್ಷಣ ಕ್ಷಣದ…
ಲೋಕಸಭಾ ಚುನಾವಣೆ ದಿನಾಂಕ ಘೋಷಣೆಯಾಗುತ್ತಿದ್ದಂತೆ ನೆನ್ನೆಯಿಂದ ಬೆಂಗಳೂರು ಸೇರಿದಂತೆ ರಾಜಾದ್ಯಂತ ನೀತಿ ಸಂಹಿತೆ ಜಾರಿಯಾಗಿದ್ದು, ಈ ಹಿನ್ನೆಲೆಯಲ್ಲಿ, ಲೈಸೆನ್ಸ್ ಹೊಂದಿರುವಂತಹ ಗನ್ ಗಳನ್ನು ಎಲ್ಲಾ ಠಾಣೆಗಳಿಗೆ ಒಪ್ಪಿಸಬೇಕು ಎಂದು ಬೆಂಗಳೂರಿನ ನಗರ ಪೊಲೀಸ್ ಆಯುಕ್ತ ದಯಾನಂದ್ ಸೂಚನೆ ನೀಡಿದ್ದಾರೆ. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಜಾರಿಯಾಗಿರುವುದರಿಂದ ಲೈಸೆನ್ಸ್ ಹೊಂದಿರುವಂತಹ ಗನ್ ಗಳನ್ನು ವಶಪಡಿಸಿಕೊಳ್ಳುವಂತೆ ಎಲ್ಲ ಠಾಣೆಗಳಿಗೆ ಸೂಚನೆ ನೀಡಲಾಗಿದೆ ಎಂದರು. ಲೋಕಸಭಾ ಚುನಾವಣೆ ದಿನಾಂಕ ಪ್ರಕಟವಾದ ಹಿನ್ನೆಲೆಯಲ್ಲಿ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ಮೂರು ಚೆಕ್ ಪೋಸ್ಟ್ ಗಳಂತೆ ನಗರದಾದ್ಯಂತ ನೂರಾಕ್ಕೂ ಹೆಚ್ಚು ಚೆಕ್ಪೋಸ್ಟ್ ಗಳನ್ನು ನಿರ್ಮಿಸಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ದಯಾನಂದ ತಿಳಿಸಿದ್ದಾರೆ. ಈ ಸಂಜೆಯೊಂದಿಗೆ ಮಾತನಾಡಿದ ಅವರು, ಈ ಚೆಕ್ ಪೋಸ್ಟ್ ಗಳು ದಿನದ 24 ಗಂಟೆಗಳಲ್ಲೂ ಕಾರ್ಯನಿರ್ವಹಿಸುತ್ತವೆ. ಪಾಳಿಯಲ್ಲಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಕರ್ತವ್ಯ ನಿರ್ವಹಿಸುತ್ತಾರೆ ಎಂದು ಹೇಳಿದರು. ಈ ಚೆಕ್ಪೋಸ್ಟ್ ಗಳಲ್ಲಿ ನಮ್ಮ ಪೊಲೀಸರು, ಬಿಬಿಎಂಪಿ, ಆರ್ಟಿಒ, ಅಬಕಾರಿ, ವಾಣಿಜ್ಯ ತೆರಿಗೆ ಹೀಗೆ ವಿವಿಧ…
ಮಾದರಿ ನೀತಿ ಸಂಹಿತೆ(ಎಂಸಿಸಿ) ಘೋಷಣೆಯಾದ ನಂತರ ಚುನಾವಣಾ ಆಯೋಗವು ಕರ್ನಾಟಕದಲ್ಲಿ ನೀರಿನ ಟ್ಯಾಂಕರ್ ಗಳ ಚಲನವಲನಗಳ ಮೇಲೆ ತೀವ್ರ ನಿಗಾ ಇಡಲಿದೆ ಎಂದು ವರದಿ ಮಾಡಿದೆ. ಬೆಂಗಳೂರಿನಲ್ಲಿ ನೀರು ಸರಬರಾಜಿನಲ್ಲಿ ತೀವ್ರ ಕೊರತೆಯ ಮಧ್ಯೆ ಬೆಂಗಳೂರಿನಲ್ಲಿ ನೀರಿನ ಟ್ಯಾಂಕರ್ ಗಳ ಬೆಲೆಯನ್ನು ರಾಜ್ಯ ಸರ್ಕಾರ ಈಗಾಗಲೇ ನಿಯಂತ್ರಿಸಿದೆ. ಈ ನಡುವೆ ಲೋಕಸಭೆ ಚುನಾವಣೆ ಘೋಷಣೆ ಬೆನ್ನಲ್ಲೇ ನೀರಿನ ಟ್ಯಾಂಕರ್ ಗಳ ಮೇಲೆ ಕರ್ನಾಟಕ ಚುನಾವಣಾ ಆಯೋಗ ನಿಗಾ ಇಟ್ಟಿದೆ. ಪಾಲಿಕೆ ವ್ಯಾಪ್ತಿಯಲ್ಲಿ ಸ್ವಯಂ ನೋಂದಣಿಯಾಗಿರುವ ಟ್ಯಾಂಕರ್ ಗಳಿಗೆ ಕಡ್ಡಾಯವಾಗಿ ಸ್ಟಿಕ್ಕರ್ ಗಳನ್ನು ಅಂಟಿಸಿಕೊಳ್ಳಬೇಕಿದೆ. ಜಲಮಂಡಳಿ ವತಿಯಿಂದ ಸ್ಟಿಕ್ಕರ್ ಸಿದ್ದಪಡಿಸಿ ಪಾಲಿಕೆಗೆ ನೀಡಿದೆ. ಪ್ರತಿ ಟ್ಯಾಂಕರ್ ಮಾಲೀಕರು ನೋಂದಣಿ ಪ್ರಮಾಣ ಪತ್ರ, ಸ್ಟಿಕರ್ ನಲ್ಲಿ ವಾಹನದ ಸಂಖ್ಯೆ, ಮಾಲೀಕರ ಹೆಸರು, ದೂರುವಾಣಿ ಸಂಖ್ಯೆ ಹಾಗೂ ಸ್ವಂ ನೋಂದಣಿಯಾಗಿರುವ ಸಂಖ್ಯೆಯನ್ನು ಹಾಗೂ ವಲಯದ ಹೆಸರು ನಮೂದಿಸಿ ವಾಹನದ ಮೇಲೆ ಕಡ್ಡಾಯವಾಗಿ ಅಂಟಿಸಬೇಕು. ಇಲ್ಲವಾದಲ್ಲಿ ಶಿಸ್ತು ಕ್ರಮ ಜರಿಸಲಾಗುವುದು ಎಂದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು…
ಇವಿಎಂ ಇಲ್ಲದೆ ಬಿಜೆಪಿ ಲೋಕಸಭೆ ಚುನಾವಣೆ ಗೆಲ್ಲಲು ಸಾಧ್ಯವಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ನರೇಂದ್ರ ಮೋದಿ ಒಬ್ಬ ಒಳ್ಳೆಯ ನಟ. ಭಾರತ್ ಜೋಡೋ ನ್ಯಾಯ್ ಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ರಾಹುಲ್, ರಾಜನ ಆತ್ಮ ಇವಿಎಂನಲ್ಲಿದೆ. ನರೇಂದ್ರ ಮೋದಿ ಬಾಲಿವುಡ್ ಅನ್ನು ಸೋಲಿಸಿದ ನಟ. ಇವಿಎಂ ಯಂತ್ರ ಹೇಗೆ ಕಾರ್ಯನಿರ್ವಹಿಸುತ್ತದೆ ಎಂಬುದನ್ನು ತೋರಿಸಲು ಮತ್ತು ವಿವಿ ಪ್ಯಾಟ್ ಅನ್ನು ಎಣಿಕೆ ಮಾಡುವಂತೆ ಪ್ರತಿಪಕ್ಷಗಳು ಚುನಾವಣಾ ಆಯೋಗವನ್ನು ಕೇಳಿದ್ದವು. ಆದರೆ ಅನುಮತಿ ಸಿಕ್ಕಿರಲಿಲ್ಲ. ಇವಿಎಂ ಮಿತಿಗಳನ್ನು ಪರಿಹರಿಸಲು ಚುನಾವಣಾ ಆಯೋಗಕ್ಕೆ ಆಸಕ್ತಿ ಇಲ್ಲ. ನಮ್ಮ ಹೋರಾಟ ಶಕ್ತಿಯ ವಿರುದ್ಧ. ಮೋದಿ ಅಥವಾ ಬಿಜೆಪಿ ವಿರುದ್ಧ ಅಲ್ಲ. ಮೋದಿ ಆ ಶಕ್ತಿಯ ಮುಖವಾಡವಷ್ಟೇ. ಆ ಶಕ್ತಿ ಮಣಿಪುರದಲ್ಲಿ ಅಂತರ್ಯುದ್ಧ ನಡೆಸುತ್ತಿದೆ. ಮಹಾರಾಷ್ಟ್ರದ ಹಿರಿಯ ಕಾಂಗ್ರೆಸ್ ನಾಯಕರೊಬ್ಬರು ಪಕ್ಷ ತೊರೆದಾಗ ಸೋನಿಯಾ ಗಾಂಧಿ ಅವರಿಗೆ ಜೈಲಿಗೆ ಹೋಗುವ ಧೈರ್ಯವಿಲ್ಲ ಎಂದು ಕಣ್ಣೀರಿಟ್ಟರು. ಭಯದಿಂದಲೇ ಎಲ್ಲರೂ ಪಕ್ಷ ತೊರೆಯುತ್ತಾರೆ ಎಂದೂ ರಾಹುಲ್ ಗಾಂಧಿ…
ದಕ್ಷಿಣ ಅಫ್ಘಾನಿಸ್ತಾನದ ಹೆಲ್ಮಂಡ್ ಪ್ರಾಂತ್ಯದಲ್ಲಿ ಭೀಕರ ಕಾರು ಅಪಘಾತ ಸಂಭವಿಸಿದೆ. ಬಸ್, ಟ್ಯಾಂಕರ್ ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ 21 ಮಂದಿ ಸಾವನ್ನಪ್ಪಿದ್ದಾರೆ. 38 ಮಂದಿ ಗಾಯಗೊಂಡಿದ್ದಾರೆ. ಕಳಪೆ ರಸ್ತೆಗಳು, ಅಜಾಗರೂಕ ಚಾಲನೆ ಮತ್ತು ನಿಯಮಗಳ ಕೊರತೆಯಿಂದಾಗಿ ಮಾರಣಾಂತಿಕ ರಸ್ತೆ ಅಪಘಾತಗಳು ದೇಶದಲ್ಲಿ ಸಾಮಾನ್ಯವಾಗಿದೆ. ಹೆಲ್ಮಂಡ್ ಪ್ರಾಂತ್ಯದ ಗ್ರಿಷ್ಕ್ ಜಿಲ್ಲೆಯ ಹೆರಾತ್-ಕಂದಹಾರ್ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದೆ. ಪ್ರಯಾಣಿಕ ಬಸ್ ಹೆರಾತ್ ನಗರದಿಂದ ರಾಜಧಾನಿ ಕಾಬೂಲ್ ಗೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ. ಬಸ್ ನಿಯಂತ್ರಣ ತಪ್ಪಿ ಬೈಕ್ ಗೆ ಡಿಕ್ಕಿ ಹೊಡೆದು ಎದುರಿನಿಂದ ಬರುತ್ತಿದ್ದ ತೈಲ ಟ್ಯಾಂಕರ್ ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ನಂತರ ವಾಹನಗಳಿಗೆ ಬೆಂಕಿ ಹೊತ್ತಿಕೊಂಡಿದೆ. ಗಂಟೆಗಳ ಪ್ರಯತ್ನದ ನಂತರ ಬೆಂಕಿಯನ್ನು ಹತೋಟಿಗೆ ತರಲಾಯಿತು. ಅಪಘಾತದಲ್ಲಿ 16 ಬಸ್ ಪ್ರಯಾಣಿಕರು, ಟ್ಯಾಂಕರ್ ನಲ್ಲಿದ್ದ ಮೂವರು ಹಾಗೂ ಇಬ್ಬರು ಬೈಕ್ ಸವಾರರು ಸೇರಿದಂತೆ 21 ಮಂದಿ ಸಾವನ್ನಪ್ಪಿದ್ದಾರೆ. 38 ಮಂದಿ ಗಾಯಗೊಂಡಿದ್ದು, 11 ಮಂದಿಯ ಸ್ಥಿತಿ ಗಂಭೀರವಾಗಿದೆ. ನಮ್ಮತುಮಕೂರಿನ ಕ್ಷಣ…
ಐದನೇ ರಷ್ಯಾದ ಅಧ್ಯಕ್ಷೀಯ ಚುನಾವಣೆಯಲ್ಲಿ ವ್ಲಾಡಿಮಿರ್ ಪುಟಿನ್ ಗೆದ್ದಿದ್ದಾರೆ. 87ಕ್ಕೂ ಹೆಚ್ಚು ಮತಗಳನ್ನು ಪಡೆದು ಪುಟಿನ್ ಅಧಿಕಾರಕ್ಕೆ ಮರಳಿದ್ದಾರೆ. ಪುಟಿನ್ ತಮ್ಮ ಮುಂದಿನ ಆರು ವರ್ಷಗಳ ಆಡಳಿತವನ್ನು ಭದ್ರಪಡಿಸಿಕೊಳ್ಳುತ್ತಿದ್ದಂತೆ, ಜೋಸೆಫ್ ಸ್ಟಾಲಿನ್ ಅವರ ದಾಖಲೆಯನ್ನು ಅವರು ಅತಿ ಹೆಚ್ಚು ಕಾಲ ಅಧಿಕಾರದಲ್ಲಿದ್ದ ಆಡಳಿತಗಾರ ಎಂಬ ದಾಖಲೆಯನ್ನು ಮೀರಿಸುವುದು ಖಚಿತವಾಗಿದೆ. ಆದರೆ ರಾಜಕೀಯ ಭಿನ್ನಾಭಿಪ್ರಾಯ ಹೊಂದಿರುವವರನ್ನು ಬಂಧಿಸಿ ಮುಕ್ತ ಚುನಾವಣಾ ಪ್ರಕ್ರಿಯೆಯನ್ನು ಬುಡಮೇಲು ಮಾಡುವ ಮೂಲಕ ಪುಟಿನ್ ಮತ್ತೆ ರಷ್ಯಾ ಅಧ್ಯಕ್ಷರಾಗಿದ್ದಾರೆ ಎಂದು ಅಮೆರಿಕ, ಬ್ರಿಟನ್ ಮತ್ತು ಜರ್ಮನಿ ಪ್ರತಿಕ್ರಿಯಿಸಿವೆ. ಕಮ್ಯುನಿಸ್ಟ್ ನಾಯಕ ನಿಕೊಲಾಯ್ ಖರಿಟೋನೊವ್ ಅವರು ಚುನಾವಣೆಯಲ್ಲಿ ಕೇವಲ ನಾಲ್ಕು ಪ್ರತಿಶತದಷ್ಟು ಮತಗಳೊಂದಿಗೆ ಎರಡನೇ ಸ್ಥಾನ ಪಡೆದರು. ಹೊಸಬರಾದ ವ್ಲಾಡಿಸ್ಲಾವ್ ದಾವಂಕೋವ್ ಅವರು ಮೂರನೇ ಮತ್ತು ಅಲ್ಟ್ರಾ-ನ್ಯಾಷನಲಿಸ್ಟ್ ಲಿಯೊನಿಡ್ ಸ್ಲಟ್ಸ್ಕಿ ನಾಲ್ಕನೇ ಸ್ಥಾನವನ್ನು ಪಡೆದರು, ರಾಯಿಟರ್ಸ್ ಪ್ರಕಾರ, ಇತ್ತೀಚಿನ ಚುನಾವಣಾ ಡೇಟಾವನ್ನು ಬಿಡುಗಡೆ ಮಾಡಿದೆ. ಐದನೇ ವಿಜಯದ ನಂತರ, ಪುಟಿನ್ ಅವರು ರಷ್ಯಾದ ಮಿಲಿಟರಿಯನ್ನು ಬಲಪಡಿಸುವುದಾಗಿ ಮತ್ತು ಉಕ್ರೇನ್ ನಲ್ಲಿನ ವಿಶೇಷ…
ಬಾಲಿವುಡ್ ನ ಟಾಪ್ ನಟಿಯರ ಪೈಕಿ ಆಲಿಯಾ ಭಟ್ ಸಹ ಒಬ್ಬರು. ಆಕೆಯ ಅದ್ಭುತ ನಟನೆಯಿಂದಾಗಿ ಎಲ್ಲಾ ನಿರ್ಮಾಪಕರ ಮೊದಲ ಆಯ್ಕೆಯಾಗಿದ್ದಾರೆ, ಆಲಿಯಾ ಭಟ್ ಅವರು ಸ್ಟೂಡೆಂಟ್ ಆಫ್ ದಿ ಇಯರ್ ಚಿತ್ರದ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದರು. ಅಂದಿನಿಂದ ಇಂದಿನವರೆಗೂ ಪ್ರತಿ ವರ್ಷ 2 ರಿಂದ 3 ಚಲನಚಿತ್ರಗಳನ್ನು ನಟಿಸುತ್ತಿದ್ದಾರೆ. ಆಲಿಯಾ 10 ವರ್ಷಗಳಿಗೂ ಹೆಚ್ಚು ಕಾಲ ಚಿತ್ರರಂಗದಲ್ಲಿದ್ದಾರೆ ಮತ್ತು ಪ್ರತಿ ಚಿತ್ರದಲ್ಲೂ ಎಲ್ಲರ ನೆಚ್ಚಿನ ನಟಿಯಾಗಿ ಮಿಂಚಿದ್ದಾರೆ. ನೀವೂ ಸಹ ಆಲಿಯಾ ಭಟ್ ಅವರ ಅಭಿಮಾನಿಯಾಗಿದ್ದರೆ, ಆಲಿಯಾ ಅವರ ಬಗ್ಗೆ ಇನ್ನಷ್ಟು ತಿಳಿಯಿರಿ. ಆಲಿಯಾ ಒಬ್ಬ ಉತ್ತಮ ನಟಿ ಮಾತ್ರವಲ್ಲದೆ ಉದ್ಯಮಿ ಕೂಡ ಆಗಿದ್ದಾರೆ. ನಟನೆಯ ಜೊತೆಗೆ ಆಲಿಯಾ ತಮ್ಮದೇ ಆದ ನಿರ್ಮಾಣ ಸಂಸ್ಥೆಯನ್ನು ಹೊಂದಿದ್ದಾರೆ. ಇದಲ್ಲದೆ, ಆಲಿಯಾ ಅನೇಕ ವ್ಯವಹಾರಗಳನ್ನು ಸಹ ನಡೆಸುತ್ತಿದ್ದಾರೆ. ಆಲಿಯಾ ಭಟ್ ಒಂದು ಸಿನಿಮಾ ಮಾಡಲು ಸಾಕಷ್ಟು ಹಣವನ್ನು ತೆಗೆದುಕೊಳ್ಳುತ್ತಾರೆ. ವರದಿಗಳ ಪ್ರಕಾರ, ಆಕೆ ಒಂದು ಚಿತ್ರದಲ್ಲಿ ನಟಿಸಲು ಸುಮಾರು 20 ಕೋಟಿ…