Subscribe to Updates
Get the latest creative news from FooBar about art, design and business.
- ದಳವಾಯಿಹಳ್ಳಿಯಲ್ಲಿ ಕುಡಿಯುವ ನೀರಿಗೆ ಹಾಹಾಕಾರ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಗ್ರಾಮಸ್ಥರ ಆಕ್ರೋಶ, BPS ನಿಂದ ಟ್ಯಾಂಕರ್ ನೀರು ಪೂರೈಕೆ
- ಪಾವಗಡ: ದೊಡ್ಡಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ 2026–27ನೇ ಸಾಲಿನ ದಾಖಲಾತಿ ಆರಂಭ
- ರಾಜ್ಯಸಭೆ ಚುನಾವಣೆಗೂ ಸಚಿವ ಸಂಪುಟ ಪುನರಾಚನೆಗೂ ಯಾವುದೇ ಸಂಬಂಧವಿಲ್ಲ: ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟನೆ
- ಸಿರಾದಲ್ಲಿ ಮೇ 26 ರಂದು ಜೆಡಿಎಸ್ ಪಕ್ಷದ ಪದಾಧಿಕಾರಿಗಳ ನೇಮಕಾತಿ ಕಾರ್ಯಕ್ರಮ
- ಮಕ್ಕಳ ಕೈಗೆ ಮೊಬೈಲ್ ಕೊಡುವ ಮುನ್ನ ಈ ಸುದ್ದಿ ಓದಿ: 1.98 ಲಕ್ಷ ರೂಪಾಯಿ ಕಳೆದುಕೊಂಡ ತುಮಕೂರಿನ ವ್ಯಕ್ತಿ!
- ಚಿಲ್ಲರೆಗಳಿಗೆ ನಾನು ಹೆದರುವ ಮಗನೇ ಅಲ್ಲ ಕೀಳುಮಟ್ಟದ ರಾಜಕಾರಣ ನನಗೆ ಗೊತ್ತಿಲ್ಲ: ಶಾಸಕ ಎಸ್. ಆರ್.ಶ್ರೀನಿವಾಸ್ ತಿರುಗೇಟು
- ತುಮಕೂರು ಜಿಲ್ಲೆಯಲ್ಲಿ 0.3 ಮಿ.ಮೀ. ಮಳೆ
- ಕೆಎಸ್ ಆರ್ ಟಿಸಿ ಬಸ್ ದರ ಏರಿಕೆ ಖಚಿತ: ಸಾರಿಗೆ ಸಂಸ್ಥೆ ಅಧ್ಯಕ್ಷ ಎಸ್.ಆರ್. ಶ್ರೀನಿವಾಸ್
Author: admin
ಲೋಕಸಭಾ ಚುನಾವಣೆಗೆ ಬಿಜೆಪಿ ರಾಜ್ಯದ 20 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ್ದು, ಚುನಾವಣಾ ಪ್ರಚಾರ ಕೂಡ ಆರಂಭಿಸಿದೆ. ಆದರೆ ಕಾಂಗ್ರೆಸ್ ಮಾತ್ರ 7 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿ ಸುಮ್ಮನಾಗಿದೆ. ಕೈ ಪಾಳಯದಲ್ಲಿ ಉಳಿದ ಕ್ಷೇತ್ರಗಳಿಗೆ ಅಭ್ಯರ್ಥಿಗಳೇ ಸಿಗದಾಗಿದ್ದಾರೆ. ಈ ಬೆನ್ನಲ್ಲೇ ಕಾಂಗ್ರೆಸ್ ಪಾಳಯದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು ರಾಜ್ಯದ ಮಂತ್ರಿಗಳು ಕೂಡ ಲೋಕ ಸಮರದಲ್ಲಿ ಸೆಣೆಸಲು ಹಿಂದೇಟು ಹಾಕಿದ್ದಾರೆ. ಹೀಗಾಗಿ ಕಾಂಗ್ರೆಸ್’ಗೆ ಅಭ್ಯರ್ಥಿಗಳದ್ದೇ ಕಗ್ಗಂಟಾಗಿದೆ. ಹೌದು, ರಾಜ್ಯದ ಬಹುಪಾಲು ಸ್ಥಾನಗಳಿಗೆ ಸ್ಪರ್ಧಿಗಳನ್ನು ಅಂತಿಮಗೊಳಿಸುವಲ್ಲಿ ಕಾಂಗ್ರೆಸ್ ಇನ್ನಿಲ್ಲದ ಕಸರತ್ತಿನಲ್ಲಿ ತೊಡಗಿದೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ ಕೆಲವು ಮಂತ್ರಿಗಳನ್ನು ಕಣಕ್ಕಿಳಿಸಲು ಕಾಂಗ್ರೆಸ್ ಮೊದಲೇ ಯೋಚಿಸಿತ್ತು. ಈ ಬಗ್ಗೆ ಸಾಕಷ್ಟು ಅಂತಿಮ ನಿರ್ಧಾರಗಳೂ ಆಗಿದ್ದವು. ಆದರೀಗ ಕೊನೇ ಕ್ಷಣಕ್ಕೆ ಕೆಲವು ಸಚಿವರು ಮತ್ತು ಶಾಸಕರು ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಹಿಂದೇಟು ಹಾಕಿದ್ದಾರೆ. ಇದು ಕಾಂಗ್ರೆಸ್ಗೆ ತಲೆನೋವಾಗಿ ಪರಿಣಮಿಸಿದ್ದು, ‘ಗೆಲ್ಲುವ’ ಅಭ್ಯರ್ಥಿಗಳ ಹುಡುಕಾಟ ಮುಂದುವರಿದಿದೆ. ಅಂದಹಾಗೆ ಏಳರಿಂದ ಎಂಟು ಸಚಿವರನ್ನು ಕಣಕ್ಕಿಳಿಸಲು ಪಕ್ಷದೊಳಗೆ ಚರ್ಚೆ ನಡೆಯುತ್ತಿದೆ…
ಭಾರತೀಯ ಸಾರಿಗೆ ಇಲಾಖೆಯು ವಾಹನಗಳಿಗೆ ಹಾಗೂ ರಸ್ತೆಯ ನಿಯಮಗಳಿಗೆ ಸಂಬಂಧಪಟ್ಟಂತೆ ಹೊಸ ಹೊಸ ಕಾನೂನು, ನಿಯಮಗಳನ್ನು ಜಾರಿಗೊಳಿಸುತ್ತದೆ. ಅಂತೆಯೇ ಇದೀಗ ದೇಶಾದ್ಯಂತ ಕಾರು ಹೊಂದಿರುವವರಿಗೆ ಹೊಸ ರೂಲ್ಸ್ ಜಾರಿಯಾಗಿದ್ದು ಎಲ್ಲಾ ಕಾರು ಮಾಲೀಕರು ಸದ್ಯದಲ್ಲೇ ಇದನ್ನು ಅಳವಡಿಸಿಕೊಳ್ಳಬೇಕು ಎಂದು ಖಡಕ್ ಆದೇಶ ಮಾಡಲಾಗಿದೆ. ಹೌದು, ಇತ್ತೀಚಿನ ದಿನಗಳಲ್ಲಿ ಅಧಿಕ ಪ್ರಮಾಣದಲ್ಲಿ ರಸ್ತೆ ಅಪಘಾತಗಳು ನಡೆಯುತ್ತಿವೆ. ಈ ರಸ್ತೆ ಅಪಘಾತ ಕ್ಕ ಚಾಲಕರ ನಿರ್ಲಕ್ಷ್ಯ ಮತ್ತು ಕಳಪೆ ರಸ್ತೆ ಕಾರಣವಾದ್ರೆ ಇನ್ನೊಂದು ಪ್ರಯಾಣಿಕ ರ ನಿರ್ಲಕ್ಷ್ಯವೂ ಸಹ ಕಂಡು ಬಂದಿದೆ. ಅದರಲ್ಲೂ ಕಾರಿನ ಪ್ರಯಾಣಿಕರಲ್ಲಂತೂ ನಿರ್ಲಕ್ಷವೇ ಎದ್ದು ಕಾಣುತ್ತದೆ. ಕಾರುಗಳಲ್ಲಿ ಸಂಚಾರ ಮಾಡುವ ಪ್ರಯಾಣಿಕರಿಗೆ ಸೀಟ್ ಬೆಲ್ಟ್ ವರದಾನವಾಗಿದೆ. ಚಾಲಕ ಹಾಗೂ ಮುಂದಿನ ಸೀಟ್ ನಲ್ಲಿ ಕುಳಿತುಕೊಳ್ಳುವ ವ್ಯಕ್ತಿ ಸೀಟ್ ಬೆಲ್ಟ್ ಧರಿಸುವುದು ಕಡ್ಡಾಯ. ಸೀಟ್ ಬೆಲ್ಟ್ ಧರಿಸಿದ್ದರೆ ಅಪಘಾತದ ಸಂದರ್ಭದಲ್ಲಿ ಏರ್ ಬ್ಯಾಗ್ ಓಪನ್ ಆಗುವ ಕಾರಣ ಅನೇಕರ ಜೀವ ಉಳಿಯುತ್ತದೆ. ಆದರೆ ಕಾರಿನಲ್ಲಿ ಪ್ರಯಾಣಿಸುವ ಬಹುತೇಕರು ಹಿಂದಿನ ಸೀಟ್ ನಲ್ಲಿ…
ಭಕ್ತಿಗೀತೆ ಹಾಡುಗಳನ್ನು ಹಾಕಿದ್ದಕ್ಕೆ ಐದಾರು ಯುವಕರಿಂದ ಯುವಕನೋರ್ವನ ಮೇಲೆ ಹಲ್ಲೆ ನಡೆದಿರುವ ಕುರಿತು ಬೆಂಗಳೂರಿನ ಸಿದ್ದಣ್ಣ ಗಲ್ಲಿ ಜುಮ್ಮಾ ಮಸೀದಿ ರಸ್ತೆಯಲ್ಲಿ ನಡೆದಿದೆ. ಮುಖೇಶ್ ಎಂಬಾತನೇ ಹಲ್ಲೆಗೊಳಗಾದ ಯುವಕ ಈತ ವರ್ಧಮಾನ್ ಟೆಲಿಕಾಮ್ ಎಂಬ ಮೊಬೈಲ್ ಶಾಪ್ ನಡೆಸುತ್ತಿದ್ದು, ಸಂಜೆ ಸಮಯ ಮೊಬೈಲ್ ಶಾಪ್ ನಲ್ಲಿ ಭಕ್ತಿಗೀತೆ ಹಾಕುತ್ತಿದ್ದ ಯುವಕ, ಈ ಸಮಯದಲ್ಲಿ ಅಂಗಡಿಗೆ ಬಂದ ನಾಲ್ಕೈದು ಮುಸ್ಲಿಂ ಯುವಕರು ಸಂಜೆ ನಮಾಜ್ ಸಮಯದಲ್ಲಿ ಹನುಮಾನ್ ಚಾಲೀಸ್ ಹಾಕ್ತೀಯ ಎಂದು ಕಿರಿಕ್ ಮಾಡಿದ್ದರು. ಮೊಬೈಲ್ ಸ್ಪೇರ್ ಪಾರ್ಟ್ಸ್ ಅಂಗಡಿಯಿಂದ ಹೊರಗೆಳೆದು ಮುಖೇಶ್ ಮೇಲೆ ಮನಸೋ ಇಚ್ಛೆ ಹಲ್ಲೆ ಮಾಡಿದ್ದಾರೆ ಈ ಮುಸ್ಲಿಂ ಯುವಕರು. ಈ ಕುರಿತು ಹಲ್ಲೆಗೊಳಗಾದ ಯುವಕ ಮುಖೇಶ್ ಹಲಸೂರು ಗೇಟ್ ಪೊಲೀಸ್ ಠಾಣೆಗೆ ದೂರು ನೀಡಲು ಹೋದಾಗ ಪೊಲೀಸರು ಆರೋಪಿಗಳ ವಿರುದ್ಧ ಎಫ್ಐಆರ್ ಮಾಡಲು ಹಿಂದೇಟು ಹಾಕಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಈ ಹಿನ್ನೆಲೆ ಠಾಣೆ ಮುಂದೆ ಜಮಾಯಿಸಿದ ಜನರು ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಪೊಲೀಸರು…
ಹುಬ್ಬಳ್ಳಿ: ಲೋಕಸಭಾ ಚುನಾವಣೆ ಎದರಿಸಲು ಬಿಜೆಪಿಗೆ ಪಾಕಿಸ್ತಾನದಿಂದ ಹಣ ಬರುತ್ತಿದೆ ಎಂದು ಕೆಲ ಸಮಯದ ಹಿಂದೆ ಕಾಂಗ್ರೆಸ್ ವ್ಯಂಗ್ಯವಾಡಿತ್ತು. ಇದೀಗ ಈ ಕುರಿತು ಕೇಂದ್ರ ಮಂತ್ರಿ ಪ್ರಹ್ಲಾದ್ ಜೋಷಿ ಪ್ರತಿಕ್ರಿಯಿಸಿ ಪಾಕಿಸ್ತಾನದಿಂದ ಭಾರತಕ್ಕೆ ಬಂದಿರುವ ದುಡ್ಡು ಕಾಂಗ್ರೆಸ್ಗೆ ಬಂದಿರಬೇಕು. ಅದು ಬಿಜೆಪಿಗೆ ಬಂದಿಲ್ಲ ಎಂದು ಕುಟುಕಿದ್ದಾರೆ. ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಪಾಕಿಸ್ತಾನದಿಂದ ಬಿಜೆಪಿಗೆ ಹಣ ಬಂದಿದೆ ಎಂಬ ಆರೋಪಕ್ಕೆ ಕಿಡಿಕಿಡಿಯಾದರು. ಕಾಂಗ್ರೆಸಿಗೆ ಹಣ ಬಂದಿದೆ. ಬಿಜೆಪಿಗೆ ಇಂತಹ ಹಣದ ಅವಶ್ಯಕತೆ ಇಲ್ಲ ಎಂದರು. ಅಲ್ಲದೆ ಈಗಾಗಲೇ ಚುನಾವಣೆ ದಿನಾಂಕ ನಿಗದಿಯಾಗಿದೆ. ಕ್ಯಾಲೆಂಡರ್ ಆಫ್ ದಿ ಇವೆಂಟ್ ಕೂಡ ಬಂದಿದೆ. ಈ ನಿಟ್ಟಿನಲ್ಲಿ ಚುನಾವಣೆಗೆ ನಾವು ಸಿದ್ಧತೆ ಮಾಡಿಕೊಂಡಿದ್ದೇವೆ. ಎರಡು ಅವಧಿಯ ಮೋದಿ ನೇತೃತ್ವದ ಸರ್ಕಾರದ ನಿಯತ್ತನ್ನು ನೋಡಿ ಈ ಬಾರಿ ಆಶೀರ್ವಾದ ಮಾಡುತ್ತಾರೆ ಎಂದು ಹೇಳಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್…
ಬಿಹಾರದ ಖಗರಿಯಾ ಜಿಲ್ಲೆಯಲ್ಲಿ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಏಳು ಜನರು ಸಾವನ್ನಪ್ಪಿ, ಹಲವರು ಗಾಯಗೊಂಡಿದ್ದಾರೆ. ಮೃತರಲ್ಲಿ ಮೂವರು ಮಕ್ಕಳು ಸೇರಿದ್ದಾರೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಚೌತಮ್ ನ ಮೋಹನ್ಪುರ ಢಮಾರಾದಿಂದ ಮದುವೆ ಮುಗಿಸಿ ವಾಪಸಾಗುತ್ತಿದ್ದ ಸಂದರ್ಭದಲ್ಲಿ ಈ ಅವಘಡ ಸಂಭವಿಸಿದೆ. ಪರ್ಬಟ್ಟಾ ಬ್ಲಾಕ್ ನ ಬೆಸಾ ಗ್ರಾಮದ ನಿವಾಸಿ ಇಂದ್ರದೇವ್ ಠಾಕೂರ್ ಅವರ ಪುತ್ರನ ಮದುವೆಗೆ ತೆರಳಿ ಮದುವೆ ಮೆರವಣಿಗೆ ವಾಪಸಾಗುತ್ತಿತ್ತು ಎನ್ನಲಾಗಿದೆ. ಮಾಹಿತಿ ಪ್ರಕಾರ, ಮದುವೆ ಮೆರವಣಿಗೆಯು ಪರ್ಬಟ್ಟಾದ ಬಿಥಾಲ ಗ್ರಾಮದಿಂದ ಹಿಂದಿರುಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಸಿಮೆಂಟ್ ತುಂಬಿದ್ದ ಟ್ರ್ಯಾಕ್ಟರ್ಗೆ ಎಸ್ಯುವಿ ನೇರವಾಗಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಎಕ್ಸ್ ಯುವಿಯಲ್ಲಿ ಪ್ರಯಾಣಿಸುತ್ತಿದ್ದ 7 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸೋಮವಾರ ಬೆಳಗ್ಗೆ (ಇಂದು) 6:30ಕ್ಕೆ ಘಟನೆ ವರದಿಯಾಗಿದೆ. ಪೊಲೀಸರು ಸ್ಥಳಕ್ಕೆ ತಲುಪಿದ್ದಾರೆ. ಪ್ರಕರಣದ ತನಿಖೆ ನಡೆಯುತ್ತಿದೆ. ಇದೀಗ ಅಪಘಾತದಲ್ಲಿ ಗಾಯಗೊಂಡಿರುವ ನಾಲ್ವರನ್ನು ಆದಷ್ಟು ಬೇಗ ಆಸ್ಪತ್ರೆಗೆ ಕರೆದೊಯ್ಯಲು ಮೊದಲ ಆದ್ಯತೆ ನೀಡಲಾಗಿದೆ ಎಂದು ಪೊಲೀಸರು…
ಕರ್ನಾಟಕದಲ್ಲಿ ಬಿಸಿಲ ಬೇಗೆಯಿಂದ ಜನ ತತ್ತರಿಸಿ ಹೋಗಿರುವ ಜೊತೆಗೆ ನೀರಿನ ಅಭಾವ ಕೂಡಾ ಉಂಟಾಗಿದೆ. ಈ ಸಂದರ್ಭದಲ್ಲಿ ಹವಾಮಾನ ಇಲಾಖೆಯು ಖುಷಿಯ ಸುದ್ದಿಯೊಂದನ್ನು ನೀಡಿದೆ. ಹೌದು, ಬೆಳಗಾವಿ, ಬೀದರ್, ಧಾರವಾಡ, ರಾಯಚೂರು, ಕಲಬುರಗಿ, ವಿಜಯಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ವರದಿಯಾಗಿದೆ. ಉಳಿದ ಹಾಗೆ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡದಲ್ಲಿ ಒಣಹವೆ ಇರಲಿದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಉತ್ತರ ಒಳನಾಡಿನ ಬಾಗೊಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿಯಲ್ಲಿ ಬಿಸಿಲಿನ ಧಗೆ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಬೆಂಗಳೂರಿನ ಕೊಡಿಗೆಹಳ್ಳಿಯಲ್ಲಿ ಚಿನ್ನದ ಅಂಗಡಿ ಮಾಲೀಕನ ಮೇಲೆ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ದರೋಡೆಕೋರರನ್ನು ಪೊಲೀಸರು ಬಂಧಿಸಿದ್ದಾರೆ. ಖಾನಾ ಪಂಡಿತ್, ಆಶು ಪಂಡಿತ್, ಮೋಸೆ ಅಲಿಯಾಸ್ ಬಂಟಿ ಹಾಗೂ ಸೂರಜ್ ಎಂಬವರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಈ ಖದೀಮರು ಸಣ್ಣ ಸಣ್ಣ ಆಭರಣದ ಅಂಗಡಿಗಳನ್ನು ಮಾತ್ರ ಟಾರ್ಗೆಟ್ ಮಾಡಿ ಕಳ್ಳತನ ಮಾಡುತ್ತಿದ್ದರು. ದೊಡ್ಡ ದೊಡ್ಡ ಅಂಗಡಿಗಳಲ್ಲಿ ಸಾಕಷ್ಟು ಜನರು ಕೆಲಸ ನಿರ್ವಹಿಸುತ್ತಾರೆ. ಸಣ್ಣ ಸಣ್ಣ ಅಂಗಡಿಗಳಲ್ಲಿ ಒಬ್ಬರು, ಇಬ್ಬರು ಮಾತ್ರ ಕೆಲಸ ಮಾಡುವುದರಿಂದ ಅಂತಹ ಅಂಗಡಿಗಳನ್ನು ಟಾರ್ಗೆಟ್ ಮಾಡುತ್ತಿದ್ದರು ಎನ್ನಲಾಗಿದೆ. ಪ್ರಕರಣ ಸಂಬಂಧ ನಾಲ್ವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಇನ್ನು ಘಟನೆ ಸಂಬಂಧ ಆರೋಪಿಗಳು ಯಡವಟ್ಟು ಮಾಡಿದ್ದು, ಶೂಟೌಟ್ ವೇಳೆ ತಮ್ಮದೇ ಗ್ಯಾಂಗ್ನ ಸದಸ್ಯ ಸೂರಜ್ ಎಂಬಾತನಿಗೆ ಗುಂಡು ಹಾರಿಸಿದ್ದಾರೆ. ಆಶು ಪಂಡಿತ್ ಮಾಡಿದ ಯಡವಟ್ಟಿಗೆ ಸೂರಜ್ ಗಂಟಲಿಗೆ ಗುಂಡೇಟು ಬಿದ್ದಿದೆ. ಸದ್ಯ ಸೂರಜ್ ಗ್ವಾಲಿಯರ್ನ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಆಶು ಪಂಡಿತ್ ಹಾಗೂ ಖಾನಾ ಪಂಡಿತ್ ಮೇಲೆ 20ಕ್ಕೂ…
ಬಾಗಲಕೋಟೆ: 8ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದು, ಶಿಕ್ಷಕಿಯೊಬ್ಬರು ಕಳ್ಳತನದ ಆರೋಪ ಮಾಡಿ ಪರಿಶೀಲಿಸಿದ್ದಕ್ಕೆ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎನ್ನಲಾಗಿದ್ದು, ಘಟನೆ ಬಾಗಲಕೋಟೆ ತಾಲೂಕಿನ ಕದಂಪುರದಲ್ಲಿ ನಡೆದಿದೆ. ದಿವ್ಯಾ ಬಾರಕೇರ (14) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ ಎಂದು ಗುರುತಿಸಲಾಗಿದೆ. ಮಾ.15ರಂದು ಕದಂಪುರ ಪ್ರೌಢ ಶಾಲೆಯ ಶಿಕ್ಷಕಿ ಜಯಶ್ರೀ ಮಿಶ್ರಿಕೋಟಿ ಎಂಬವರ 2 ಸಾವಿರ ರೂ. ಕಳೆದು ಹೋಗಿದ್ದು, ವಿದ್ಯಾರ್ಥಿಗಳ ಬಳಿ ಯಾರು ತೆಗೆದುಕೊಂಡಿದ್ದೀರಿ ಎಂದು ವಿಚಾರಿಸಿದ್ದಾರೆ. ಬಳಿಕ ಕೆಲವು ವಿದ್ಯಾರ್ಥಿನಿಯರ ವಿರುದ್ಧ ಕಳ್ಳತನ ಆರೋಪ ಮಾಡಿ ಶಿಕ್ಷಕಿ, ಮುಖ್ಯಶಿಕ್ಷಕ ಸೇರಿದಂತೆ ಇತರೆ ಶಿಕ್ಷಕರು ದುರ್ಗಾದೇವಿ ಮುಂದೆ ಆಣೆ ಮಾಡಿಸಿದ್ದಾರೆ. ಅಲ್ಲದೇ ವಿದ್ಯಾರ್ಥಿನಿಯ ಸಮವಸ್ತ್ರ ಬಿಚ್ಚಿಸಿ ಪರಿಶೀಲನೆ ಮಾಡಿದ್ದಾರೆ ಎನ್ನಲಾಗಿದೆ. ಇದೇ ಕಾರಣಕ್ಕೆ ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಆರೋಪಿಸಲಾಗಿದೆ. ಈ ಸಂಬಂಧ ಶಾಲಾ ಶಿಕ್ಷಕಿ ಜಯಶ್ರೀ ಮಿಶ್ರಿಕೋಟಿ ಹಾಗೂ ಮುಖ್ಯ ಶಿಕ್ಷಕ ಕೆ.ಹೆಚ್ ಮುಜಾವರ ವಿರುದ್ಧ ಬಾಗಲಕೋಟೆ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ವಿದ್ಯಾರ್ಥಿನಿಯ ಪೋಷಕರು ಪ್ರಕರಣ ದಾಖಲಿಸಿದ್ದಾರೆ ಎಂದು ವರದಿ…
ಶಿವಮೊಗ್ಗ: ಪುತ್ರ ಕೆ.ಇ.ಕಾಂತೇಶ್’ಗೆ ಹಾವೇರಿ ಲೋಕಸಭಾ ಕ್ಷೇತ್ರದ ಟಿಕೆಟ್ ಸಿಗದಿದ್ದಕ್ಕೆ ಅಸಮಾಧಾನಗೊಂಡು ಬಂಡಾಯ ಎದ್ದಿರುವ ಕೆ.ಎಸ್.ಈಶ್ವರಪ್ಪ ಜೊತೆಗೆ ಬಿಜೆಪಿ ವರಿಷ್ಠರು ಮಾತಕತೆ ನಡೆಸಿದರೂ, ಸಂಧಾನ ವಿಫಲವಾಗಿದೆ. ಇದೀಗ ಈಶ್ವರಪ್ಪ ಸ್ಪರ್ಧೆ ಖಚಿತವಾಗಿದ್ದು, ಪಕ್ಷೇತರ ಅಭ್ಯರ್ಥಿಯಾಗಿ ಕೆ.ಎಸ್.ಈಶ್ವರಪ್ಪ ಕಣಕ್ಕಿಳಿಯಲು ಸಜ್ಜಾಗಿದ್ದಾರೆ. ಈಶ್ವರಪ್ಪ ಅವರನ್ನು ಸಮಾಧಾನ ಮಾಡಲು ಮನೆಗೆ ಆಗಮಿಸಿದ್ದ ವರಿಷ್ಠರು ಬರಿಗೈಯಲ್ಲೇ ವಾಪಸ್ ಹೋಗಿದ್ದಾರೆ. ಭಾನುವಾರ ಬೆಳಿಗ್ಗೆ ಮಾಜಿ ಸಚಿವ ಆರಗ ಜ್ಞಾನೇಂದ್ರ, ವಿಧಾನ ಪರಿಷತ್ ಸದಸ್ಯ ರವಿಕುಮಾರ್, ಡಿ.ಎಸ್. ಅರುಣ್ ಹಾಗೂ ಇತರ ನಾಯಕರು ಶಿವಮೊಗ್ಗದ ಮಲ್ಲೇಶ್ವರ ನಗರದ ಈಶ್ವರಪ್ಪ ಮನೆಗೆ ಭೇಟಿ ನೀಡಿ, ಅವರ ಮನವೊಲಿಸುವ ಪ್ರಯತ್ನ ಮಾಡಿದರು. ಸೋಮವಾರ ನಡೆಯುವ ಮೋದಿ ಕಾರ್ಯಕ್ರಮಕ್ಕೆ ಆಗಮಿಸುವಂತೆ ಆಹ್ವಾನ ನೀಡಿದರು. ಆದರೆ, ತಾವು ಬಂಡಾಯದಿಂದ ಹಿಂದೆ ಸರಿಯುವ ಮಾತೇ ಇಲ್ಲ ಎಂದು ಈಶ್ವರಪ್ಪ ಅವರು ಖಡಕ್ ಸಂದೇಶ ರವಾನಿಸಿದರು. ರಾಜ್ಯ ನಾಯಕರ ಮಾತುಕತೆ ವಿಫಲವಾದ ಬಳಿಕ, ಮಧ್ಯಾಹ್ನ ಸ್ವತಃ ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ರಾಧಾಮೋಹನ್ ಅಗರ್ವಾಲ್ ಈಶ್ವರಪ್ಪ ಮನೆಗೆ ಭೇಟಿ ನೀಡಿದರು.…
ನವದೆಹಲಿ: WPL ಕಪ್ ಗೆಲ್ಲುವ ಮೂಲಕ RCB ನಾಯಕಿ ಸ್ಮೃತಿ ಮಂದಾನ RCB ಅಭಿಮಾನಿಗಳ ಬಹುದಿನಗಳ ಕನಸನ್ನು ನನಸು ಮಾಡಿದ್ದಾರೆ. ಚಾಂಪಿಯನ್ ಟ್ರೋಫಿ ಎತ್ತಿ ಹಿಡಿದ ಸ್ಮೃತಿ ಮಂದಾನ, ‘ಈ ಸಲ ಕಪ್ ನಮ್ದೆ ಅಲ್ಲ, ಈ ಸಲ ಕಪ್ ನಮ್ದು ಎಂದು ಹೇಳುವ ಮೂಲಕ RCB ಫಾನ್ಸ್ ಗಳಿಗೆ ಉತ್ಸಾಹ ತುಂಬಿದ್ದಾರೆ. ಈ ಪಂದ್ಯದಲ್ಲಿ ಸ್ಮೃತಿ ಮಂದಾನ 31 ರನ್ ಗಳನ್ನು ಬಾರಿಸುವ ಮೂಲಕ ತಂಡಕ್ಕೆ ಬಲ ನೀಡಿದ್ದರು.. ನಂತರ ಸೋಫಿ ಡಿವೈನ್ 32 ರನ್ ಬಾರಿಸಿ ಔಟಾದರು. ಈ ವೇಳೆ ಬಂದ ಎಲ್ಲಿಸ್ ಪೇರಿ ಮತ್ತು ರಿಚ್ಚ ಘೋಷ್ ಅತ್ಯುತ್ತಮ ಬ್ಯಾಟಿಂಗ್ ಮಾಡಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು. ಅಂತಿಮವಾಗಿ ಆರ್ ಸಿಬಿ ಮೂರು ಎಸೆತಗಳು ಬಾಕಿ ಇರುವಂತೆ 115 ರನ್ ಬಾರಿಸಿ ಗೆಲುವಿನ ನಗೆ ಬೀರಿತು. ಪುರುಷರ ಐಪಿಎಲ್ ನಲ್ಲಿ RCB ಕಪ್ ಗೆಲ್ಲಬೇಕು ಎಂದು ಸಾಕಷ್ಟು ವರ್ಷಗಳಿಂದ ಅಭಿಮಾನಿಗಳು ಕಾಯುತ್ತಿದ್ದರು. ಆದ್ರೆ, ಇದೀಗ WPL ನಲ್ಲಿ…