Author: admin

ಬೆಂಗಳೂರು: ಚುನಾವಣಾ ಬಾಂಡ್ ರಾಡಿಯಲ್ಲಿ ಕೇವಲ ಬಿಜೆಪಿ ಅತಿಹೆಚ್ಚು ಕೊಳಕನ್ನು ಮೆತ್ತಿಕೊಂಡಿರಬಹುದು. ಆದರೆ, ಕಾಂಗ್ರೆಸ್ ಕೈ ಏನೂ ಸ್ವಚ್ಛವಾಗಲಿಲ್ಲ. ಕರ್ನಾಟಕದ ಸಿದ್ದರಾಮಯ್ಯ ಸರ್ಕಾರ 1200 ಕೋಟಿ ಬಾಂಡ್ ಖರೀದಿಸಿರುವ ಮೇಘಾ ಕಂಪನಿಗೆ ರಾಜ್ಯ ಸರ್ಕಾರ 1787 ಕೋಟಿ ಲಾಭ ನೀಡುವ ಗುತ್ತಿಗೆ ನೀಡಿದೆ ಎಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಪಕ್ಷದ ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜೀದ್ ಅವರು ತಮ್ಮ ಪ್ರಕಟಣೆಯ ಮೂಲಕ ಆರೋಪಿಸಿದ್ದಾರೆ. ಚುನಾವಣಾ ಬಾಂಡ್ ಗಳ ಮೂಲಕ ಕಾರ್ಪೊರೇಟ್ ಕಂಪನಿಗಳಿಂದ ಬಿಜೆಪಿ 6060 ಕೋಟಿ ದೇಣಿಗೆಯನ್ನು ಪಡೆದುಕೊಂಡಿದೆ. ಸುಪ್ರೀಂ ಕೋರ್ಟ್ ನ ತೀರ್ಪಿನ ಕಾರಣದಿಂದ ಈ ಎಲ್ಲಾ ಕೊಳಕು ಹೊರ ಬರುತ್ತಿದೆ. ಇದರ ನಡುವೆ ವಿಪಕ್ಷಗಳು, ಅದರಲ್ಲೂ ವಿಶೇಷವಾಗಿ ಕಾಂಗ್ರೆಸ್ ಏನು ಈ ವಿಚಾರದಲ್ಲಿ ಸಾಚಾ ಅಲ್ಲ. ಕಾಂಗ್ರೆಸ್ ಕಳೆದ ಐದು ವರ್ಷಗಳ ಅವಧಿಯಲ್ಲಿ 1609.50 ಕೋಟಿ ರೂಪಾಯಿಗಳನ್ನು ಚುನಾವಣಾ ಬಾಂಡ್ ಮೂಲಕ ಪಡೆದುಕೊಂಡಿದೆ. ಮೇಘಾ ಇಂಜಿನಿಯರಿಂಗ್ ಅಂಡ್ ಇನ್ಫ್ರಾಸ್ಟ್ರಕ್ಚರ್ ಕಂಪನಿ 1200 ಕೋಟಿ ಮೊತ್ತದ ಚುನಾವಣಾ…

Read More

ದಾವಣಗೆರೆ: ರಂಜಾನ್‌ ಉಪವಾಸ ಮುಗಿದ ಬಳಿಕ ಪಾನಿಪುರಿ ಸೇವಿಸಿ 19 ಮಕ್ಕಳು ಅಸ್ವಸ್ಥರಾದ ಘಟನೆಯಲ್ಲಿ ಅಸ್ವಸ್ಥಗೊಂಡವರ ಪೈಕಿ ಬಾಲಕನೋರ್ವ ಚಿಕಿತ್ಸೆ ಫಲಿಸದೇ ಮೃತಪಟ್ಟಿರುವ ಘಟನೆ ನಡೆದಿದೆ. ದಾವಣಗೆರೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಾಲಕ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾನೆ. ಹಜರತ್ ಬಿಲಾಲ್ ಎಂಬುವರ ಪುತ್ರ ಇರ್ಫಾನ್(6)‌ ಮೃತಪಟ್ಟ ಬಾಲಕನಾಗಿದ್ದಾನೆ. ಮಾರ್ಚ್ 15ರಂದು ದಾವಣಗೆರೆಯ ಹರಿಹರ ತಾಲೂಕಿನ ಮಲೆಬೆನ್ನೂರಿನ ಜಾಮೀಯಾ ಮಸೀದಿ ಬಳಿ ಮಕ್ಕಳು ಪಾನಿಪುರಿ ಸೇವಿಸಿದ್ದರು. ಪಾನಿಪೂರಿ ಸೇವಿಸಿದ್ದ ಮಕ್ಕಳಲ್ಲಿ ವಾಂತಿ, ಭೇದಿ, ಹೊಟ್ಟೆ ನೋವು ಕಾಣಿಸಿಕೊಂಡಿದ್ದರಿಂದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ಪೈಕಿ ನಾಲ್ವರಿಗೆ ದಾವಣಗೆರೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು, ಇಂದು ಚಿಕಿತ್ಸೆ ಫಲಿಸದೆ ಬಾಲಕ ಇರ್ಫಾನ್ ಸಾವನ್ನಪ್ಪಿದ್ದಾನೆ. ಘಟನೆಯ ಬಳಿಕ ಪಾನಿಪುರಿ ಅಂಗಡಿ ಮಾಲಿಕ ಪರಾರಿಯಾಗಿದ್ದಾನೆ. ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಮಲೆಬೆನ್ನೂರು ಪೊಲೀಸರು ಆರೋಪಿಯ ಪತ್ತೆಗಾಗಿ ತನಿಖೆ ನಡೆಸುತ್ತಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು…

Read More

ಬೀದರ್‌: ಜಿಲ್ಲೆಯ ಔರಾದ್ ಬಿ  ತಾಲೂಕಿನ ಸಂತಪುರ ಗ್ರಾಮದಲ್ಲಿ ಇಂದು ಪ್ರಭು ಶೆಟ್ಟಿ ಬಿ ಸೈನಿಕರ ಗೆಳೆಯರ ಬಳಗದ ವತಿಯಿಂದ ಕರ್ನಾಟಕ ಚಿತ್ರರಂಗದ ಮೇರು ನಟ ನಗುವಿನ ಒಡೆಯ ಕರ್ನಾಟಕ ರತ್ನ ಡಾ.ಪುನೀತ್ ರಾಜಕುಮಾರ್ ಅವರ 49ನೇ ಹುಟ್ಟುಹಬ್ಬವನ್ನು ಆಚರಿಸಲಾಯಿತು. ಸಂತೋಷ್ ಸೈನಿಕ, ಗೌತಮ್ ಮೇತ್ರೆ, ದಿಲೀಪ್ ಸೋನೆ, ಗುರುನಾಥ ಅಂಕಲಗಿ, ಶಿವ, ಪಾಂಡು, ತುಕಾರಾಮ್, ಶಿವಕಾಂತ್, ಹುಲೇಪಾ, ಸತೀಶ್, ಮುಂತಾದವರು ಹಾಜರಿದ್ದರು. ವರದಿ: ಅರವಿಂದ ಮಲ್ಲಿಗೆ, ಬೀದರ್‌ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ತುಮಕೂರು: ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣರಿಂದ ತುಮಕೂರು ಜಿಲ್ಲೆಯ ವಿವಿಧ ದೇವರುಗಳಿಗೆ ಭೇಟಿ ನೀಡಿ ಸ್ಥಳೀಯ ಮುಖಂಡರೊಂದಿಗೆ ಮಾತುಕತೆ ನಡೆಸಿ ಸುದೀರ್ಘಸಮಾಲೋಚನೆಯನ್ನು ನಡೆಸುತ್ತಿದ್ದಾರೆ. ಭಾನುವಾರ ತಿಪಟೂರಿನ ದಸರಿಘಟ್ಟ ಚೌಡೇಶ್ವರಿ ದೇವಸ್ಥಾನ, ನೊಣವಿನಕೆರೆ ಕಾಡಸಿದ್ದೇಶ್ವರ ಮಠಕ್ಕೆ ಸೋಮಣ್ಣ ಭೇಟಿ ನೀಡಿದರು. ಕಾಡಸಿದ್ದೇಶ್ವರ ಮಠದ ಅಜ್ಜಯ್ಯನ ಆಶೀರ್ವಾದ ಪಡೆದ ಸೋಮಣ್ಣ ಆದಿಚುಂಚನಗಿರಿ ಶ್ರೀಗಳನ್ನೂ ಭೇಟಿ ಮಾಡಿದರು. ಮತ್ತೊಂದೆಡೆ ಜೆಡಿಎಸ್ ಶಾಸಕರನ್ನು, ಮುಖಂಡರನ್ನು ಭೇಟಿ ಮಾಡುತ್ತಿರುವ ಸೋಮಣ್ಣ ತುರುವೇಕೆರೆ ಶಾಸಕ ಎಂ.ಟಿ ಕೃಷ್ಣಪ್ಪ, ತಿಪಟೂರು ಕ್ಷೇತ್ರದ ಜೆಡಿಎಸ್ ಮುಖಂಡರನ್ನು ಭೇಟಿಯಾದರು. ಈ ಮೂಲಕ ಜೆಡಿಎಸ್ ಹಾಗೂ ಬಿಜೆಪಿ ಮುಖಂಡರನ್ನು ಭೇಟಿಯಾಗಿ ಮತಗಳು ಚದುರ್ಗೆ ಹೋಗದಂತೆ ಮೈತ್ರಿ ಅಭ್ಯರ್ಥಿ ಎಂಬುದಾಗಿ ಹೇಳು ಪಕ್ಷದ ಕಾರ್ಯಕರ್ತರನ್ನು ಮನವೊಲಿಸುವ ಯತ್ನದಲ್ಲಿ ತೊಡಗಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ತುಮಕೂರು: ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಹುಳಿಯಾರು ಹೋಬಳಿಯ ದೊಡ್ಡೇಣ್ಣೆಗೆರೆ ಗ್ರಾಮದ ಶ್ರೀ ಭೀಮಾಸತಿ ತೀಥಾರಾಜ ಸ್ವಾಮಿ ದೇವತೆಗಳ 67ನೇ ವರ್ಷದ ಜಾತ್ರಾ ರಥೋತ್ಸವ ಶುಕ್ರವಾರ — ಶನಿವಾರದಂದು ಬಹಳ ವಿಜೃಂಭಣೆಯಿಂದ ಬಂಜಾರ ಸಮುದಾಯದ ಜನಾಂಗದಿಂದ ನಡೆಸಲಾಯಿತು. ಭೀಮಾಸತಿ ತೀಥಾರಾಜ ಅವರ ವಿಗ್ರಹಕ್ಕೆ ವಿಶೇಷ ಪೂಜಾ ಕಾರ್ಯಕ್ರಮವನ್ನು ಮಾಡಲಾಯಿತು. ಈ ಒಂದು ಜಾತ್ರಾ ಮಹೋತ್ಸವದಲ್ಲಿ ಭಕ್ತ ಸಾಗರವೇ ಹರಿದು ಬಂದಿತ್ತು. ಮಹಿಳೆಯರು ಬಂಜಾರ ಸಮುದಾಯದ ಉಡುಪುಗಳನ್ನು ಧರಿಸಿಕೊಂಡು ಲಂಬಾಣಿ ನೃತ್ಯವನ್ನು ಮಾಡಿದರು, ಯುವಕರು ಡಿಜೆ ಸದ್ದಿಗೆ ಕುಣಿದು ಕುಪ್ಪಳ್ಳಿಸಿದರು ಹಾಗೂ ಹಿರಿಯರಿಂದ ಭಜನೆ ಕಾರ್ಯಕ್ರಮವನ್ನು ನಡೆಸಲಾಯಿತು. ಚಿತ್ರದುರ್ಗ ಜಿಲ್ಲಾ  ಬೀಮಾಸಮುದ್ರ ಗ್ರಾಮದ  ಚಂದ್ರಶೇಖರ್ 1,11,101 ರೂಪಾಯಿ ಚೆಕ್ ಅನ್ನು  ಭೀಮಾಸತಿ ದೇವಸ್ಥಾನಕ್ಕೆ ನೀಡಿದ್ದರು. ವರದಿ: ನಂದೀಶ್‌ ನಾಯ್ಕ, ಪಾವಗಡ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ತುಮಕೂರು: ಇಂದು ಸರ್ಕಾರಿ ಪದವಿ ಕಾಲೇಜುಗಳು ಪರಿಣಿತ ಅಧ್ಯಾಪಕರನ್ನು ಒಳಗೊಂಡಿದ್ದು ಇದರಿಂದ ಗುಣಮಟ್ಟದ ಶಿಕ್ಷಣವನ್ನು ನೀಡಲಾಗುತ್ತಿದೆ. ಸರ್ಕಾರಿ ಪದವಿ ಕಾಲೇಜುಗಳಲ್ಲಿ ಗಣನೀಯವಾಗಿ ಪ್ರವೇಶಾತಿಯಲ್ಲಿ ಹೆಚ್ಚಾಗಿರುವುದು ಕಂಡು ಬಂದಿರುತ್ತದೆ ಎಂದು ಕಾಲೇಜು ಶಿಕ್ಷಣ ಇಲಾಖೆ ನಿರ್ದೇಶಕ ಡಾ.ಎಸ್.ಬಿ.ಅಪ್ಪಾಜಿಗೌಡ ಹೇಳಿದರು. ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾಲೇಜು ಶಿಕ್ಷಣ ಇಲಾಖೆ ಹಾಗೂ ವಾದ್ವಾನಿ ಫೌಂಡೇಶನ್ ಸಹಯೋಗದಲ್ಲಿ ಆಯೋಜಿಸಲಾಗಿದ್ದ  ಉದ್ಯೋಗ ಕೌಶಲ ತರಬೇತಿ ಕಾರ್ಯಾಗಾರ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು. ತರಬೇತಿಯಲ್ಲಿ ಪಡೆದ ಉದ್ಯೋಗ ಕೌಶಲ್ಯದ ಜ್ಞಾನವನ್ನು ವಿದ್ಯಾರ್ಥಿಗಳಿಗೆ ಮುಟ್ಟಿಸುವ ಮೂಲಕ ತರಬೇತಿಯ ಉದ್ದೇಶವನ್ನು ಸಾರ್ಥಕಗೊಳಿಸಬೇಕು. ವಿದ್ಯಾರ್ಥಿಗಳಿಗೆ ವಿವಿಧ ಉದ್ಯೋಗ ಕೌಶಲ್ಯದ ಮಾಹಿತಿಯನ್ನು ನೀಡಿ ಸಮಾಜದಲ್ಲಿ ಉತ್ತಮ ಪ್ರಜೆಗಳನ್ನಾಗಿ ಮಾಡುವ ಜವಾಬ್ದಾರಿ ಬೋಧಕರದ್ದು ಎಂದರು. ರಾಜ್ಯದಲ್ಲಿ ಶೇ.2 ರಷ್ಟು ಮಾತ್ರ ಸರ್ಕಾರಿ ಉದ್ಯೋಗಗಳು ಲಭ್ಯವಿರುತ್ತವೆ. ವಿವಿಧ ಖಾಸಗಿ ಸಂಸ್ಥೆಗಳಲ್ಲಿ ಸಿಗುವಂತಹ ಉದ್ಯೋಗದ ಬಗ್ಗೆಯೂ ಬೋಧಕರು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಬೇಕು. ಉದ್ಯೋಗ ಕೌಶಲ್ಯದಿಂದ ಸಾಕಷ್ಟು ಯುವಕರು ಉದ್ಯೋಗವನ್ನು ಕಂಡುಕೊಂಡು ಜೀವನ ಸಾಗಿಸಬಹುದು. ಈ…

Read More

ಹೆಣ್ಣು ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಸಾರ್ವಜನಿಕ ಪ್ರದೇಶಗಳಲ್ಲಿ ಸಹಾಯವಾಣಿ ಸಂಖ್ಯೆ ಪೋಸ್ಟರ್, ಜಾಗೃತಿ ಕಾರ್ಯಕ್ರಮಗಳ ಮೂಲಕ ವ್ಯಾಪಕ ಪ್ರಚಾರ ಕೈಗೊಳ್ಳಬೇಕು ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಶನಿವಾರ (ಮಾ.16) ನಡೆದ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ಹೆಣ್ಣು ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಗಳು ಮರುಕಳಿಸದಂತೆ ನೋಡಿಕೊಳ್ಳಬೇಕು. 2023-24 ನೇ ಸಾಲಿನಲ್ಲಿ ಸವದತ್ತಿ, ಬೈಲಹೊಂಗಲ ತಾಲೂಕಿನಲ್ಲಿರುವ ಬಾಲ್ಯ ವಿವಾಹ ಪ್ರಕರಣಗಳು ಹೆಚ್ಚಾಗಿ ಕಂಡು ಬಂದಿವೆ. ಇವುಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಪ್ರತಿ 3 ತಿಂಗಳಿಗೊಂದು ತಾಲೂಕಾ ಮಟ್ಟದ ಸಭೆ ಕರೆದು ಜಾಗೃತಿಗಳನ್ನು ಮೂಡಿಸಬೇಕು ಎಂದು ಹೇಳಿದರು. ಸವದತ್ತಿ, ಗೋಕಾಕ್, ರಾಮದುರ್ಗ ತಾಲೂಕಿನ ಅತೀ ಹೆಚ್ಚು ಬಾಲ್ಯವಿವಾಹ ಪ್ರಕರಣಗಳು ಕಂಡು ಬಂದಿವೆ ಹಾಗಾಗಿ ಹೆಚ್ಚಿನ ಜಾಗೃತಿ ಕಾರ್ಯಕ್ರಮಗಳು ಆಯೋಜನೆ ಮಾಡಬೇಕು ಮತ್ತು ಅದಕ್ಕೆ ಪೂರಕವಾದ ದಾಖಲೆಗಳನ್ನು ಸಂಗ್ರಹಿಸಬೇಕು ಎಂದು ತಿಳಿಸಿದರು. ಪ್ರತಿ…

Read More

ಚುನಾವಣಾ ಬಾಂಡ್ ರಾಜಕೀಯ ಸುಲಿಗೆಯ ಬ್ರಹ್ಮಾಸ್ತ್ರವೇ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮಾಧ್ಯಮಗಳು ವಿಶ್ಲೇಷಿಸುತ್ತಿರುವ ಚುನಾವಣಾ ಆಯೋಗ ಪ್ರಕಟಿಸಿರುವ ಮಾಹಿತಿ ನೋಡಿದರೆ ಕೇಂದ್ರ ಸರ್ಕಾರ ಉದ್ಯಮಿಗಳ ಬ್ಲಾಕ್ ಮೇಲ್ ಮಾಡುತ್ತಿರುವಂತೆ ಕಾಣುತ್ತಿದೆ. ಉದ್ಯಮಿಗಳ ಮೇಲೆ ನಡೆದಿರುವ ಐಟಿ, ಇಡಿ, ಸಿಬಿಐ ದಾಳಿ ದಿನಾಂಕ ಮತ್ತು ಉದ್ಯಮಿಗಳು ಚುನಾವಣಾ ಬಾಂಡ್ ಖರೀದಿ ದಿನಾಂಕ ನೋಡಿದರೆ ಇದೊಂದು ಪಕ್ಕಾ ಬ್ಲಾಕ್ ಮೇಲ್ ರೀತಿ ಕಾಣುತ್ತಿದೆ ಎಂದರು. ಮೋದಿಯವರೇ ಕನಿಷ್ಠ ಚುನಾವಣಾ ಬಾಂಡ್ ಹಗರಣದ ಬಗ್ಗೆಯಾದರೂ ಉತ್ತರಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹಿಸಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸ್ವಿಸ್‌ ಬ್ಯಾಂಕ್ ನಲ್ಲಿರುವ ಕಪ್ಪು ಹಣ ತಂದು ಜನರಿಗೆ ಹಂಚುತ್ತೇವೆ, ನೋಟ್ ಬ್ಯಾನ್ ಮಾಡಿ ಕಪ್ಪುಹಣದ ಮೂಲೋತ್ಪಾಟನೆ ಮಾಡುತ್ತೇವೆ, ನಾ ಖಾವೂಂಗಾ – ನಾ ಖಾನೆ ದೂಂಗಾ, ದೇಶದ ಸಂಪತ್ತಿಗೆಲ್ಲ ನಾನೇ ಚೌಕಿದಾರ ಎಂದೆಲ್ಲ ಹೇಳಿ ಹತ್ತು ವರ್ಷಗಳಿಂದ ಅಧಿಕಾರದಲ್ಲಿರುವ ಮೋದಿಯವರೇ ಕನಿಷ್ಠ ಚುನಾವಣಾ ಬಾಂಡ್ ಹಗರಣದ ಬಗ್ಗೆಯಾದರೂ ಉತ್ತರಿಸಿ ಎಂದರು.…

Read More

ಬೆಂಗಳೂರು: ಲೋಕಸಭಾ ಚುನಾವಣೆ ಮಾದರಿ ನೀತಿ ಸಂಹಿತೆ ಜಾರಿಯಾಗಿದ್ದು, ಕೂಡಲೇ ಸರ್ಕಾರಿ ಕಚೇರಿ, ಸರ್ಕಾರಿ ಆಸ್ತಿಗಳು ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಜನಪ್ರತಿನಿಧಿಗಳ ಹೆಸರು, ಭಾವಚಿತ್ರಗಳು ಹಾಗೂ ಜಾಹೀರಾತುಗಳನ್ನು ತೆಗೆಯಬೇಕು ಎಂದು ಬೆಂಗಳೂರು ಜಿಲ್ಲಾ ಚುನಾವಣಾಧಿಕಾರಿ ತುಷಾರ್ ಗಿರಿನಾಥ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಸಾರ್ವಜನಿಕ ಸ್ಥಳಗಳಲ್ಲಿ ಯಾವುದೇ ಪ್ಲೆಕ್ಸ್, ಪೋಸ್ಟರ್, ಬ್ಯಾನ‌ರ್ ಹಾಕಿದರೆ ಸಂಬಂಧಪಟ್ಟವರ ಮೇಲೆ ದೂರು ದಾಖಲಿಸಬೇಕು ಎಂದು ಆದೇಶಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಕ್ಷುಲ್ಲಕ ಕಾರಣಕ್ಕೆ ಯುವತಿಯನ್ನು ಪ್ರಿಯಕರನೇ ಬರ್ಬರವಾಗಿ ಹತ್ಯೆ ನಡೆಸಿರುವ ಘಟನೆ ಗುರುಗ್ರಾಮದಲ್ಲಿ ನಡೆದಿದೆ. ಏಳು ತಿಂಗಳ ಹಿಂದೆ ದಿನಸಿ ಅಂಗಡಿಯಲ್ಲಿ ಅಂಜಲಿ ಮತ್ತು ಲಲ್ಲನ್ ಯಾದವ್ ಎಂಬವರಿಗೆ ಪರಿಚಯವಾಗಿತ್ತು.  ಬಳಿಕ ಒಟ್ಟಿಗೆ ಜೀವನ ಸಾಗಿಸುವ ನಿರ್ಧಾರ ಮಾಡಿ ಒಟ್ಟಿಗೆ ವಾಸಿಸಲು ಆರಂಭಿಸಿದ್ದರು. ಲಲ್ಲನ್ ಯಾದವ್ ಅಂಜಲಿಯನ್ನು ತನ್ನ ಹೆಂಡತಿ ಎಂದು ಪರಿಚಯ ಮಾಡಿಕೊಂಡು ಬಾಡಿಗೆ ಮನೆ ಪಡೆದುಕೊಂಡಿದ್ದ,  ಆದರೆ  ಅಡುಗೆ ಮಾಡುವ ವಿಚಾರದಲ್ಲಿ ಇಬ್ಬರ ನಡುವೆ ಜಗಳವಾಗಿತ್ತು ಎನ್ನಲಾಗಿದೆ. ಲಲ್ಲನ್ ಯಾದವ್ ತನಗಾಗಿ ಮೊಟ್ಟೆ ಕರಿ ಮಾಡಲು ಅಂಜಲಿಯನ್ನು ಕೇಳುತ್ತಾನೆ. ಆದರೆ ಅಂಜಲಿ ನಿರಾಕರಿಸಿದ್ದಳು. ಮದ್ಯದ ಅಮಲಿನಲ್ಲಿದ್ದ ಲಲ್ಲನ್ ಕೋಪಗೊಂಡು ಅಂಜಲಿಯನ್ನು ಸುತ್ತಿಗೆ ಮತ್ತು ಬೆ ಲ್ಟ್‌ನಿಂದ ಹೊಡೆದು ಬರ್ಬರವಾಗಿ ಹತ್ಯೆ ಮಾಡಿದ್ದ. ಗುರುಗ್ರಾಮದ ಚೌಮಾ ಗ್ರಾಮದಲ್ಲಿ ನಿರ್ಮಾಣ ಹಂತದಲ್ಲಿರುವ ಮನೆಯಲ್ಲಿ 32 ವರ್ಷದ ಅಂಜಲಿಯ ಶವವನ್ನು ಗುರುಗ್ರಾಮ್ ಪೊಲೀಸರು ಪತ್ತೆ ಮಾಡಿದ್ದಾರೆ.  ಮೃತದೇಹವನ್ನು ಮೊದಲು ಕೇರ್ ಟೇಕರ್ ನೋಡಿದ್ದು, ಬಳಿಕ ಅವರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಘಟನೆ ಸಂಬಂಧ ತನಿಖೆ…

Read More