Author: admin

ಬಳ್ಳಾರಿ:  ಬಳ್ಳಾರಿ ಲೋಕಸಭೆ ಕ್ಷೇತ್ರದ ಸಂಸದ ಈ.ತುಕಾರಾಮ್ ಅವರು ಬುಧವಾರ ನಗರದ ಜಿಪಂ ಹಳೆಯ ನಜೀರ್ ಸಾಬ್ ಸಭಾಂಗಣದಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು. ಶಾಲೆ, ಶಿಕ್ಷಣ, ಆರೋಗ್ಯ, ವಸತಿ, ಕಂದಾಯ ಹಾಗೂ ವಿವಿಧ ಇಲಾಖೆಗಳಿಗೆ ಸಂಬಂಧಿಸಿದಂತೆ ಸಾರ್ವಜನಿಕರು ಅಹವಾಲು ಸಲ್ಲಿಸಿದರು. ಈ ವೇಳೆ ಮಾತನಾಡಿದ ಅವರು ಸಕಾಲದಲ್ಲಿ ಅಹವಾಲುಗಳನ್ನು ಇತ್ಯರ್ಥಪಡಿಸಲಾಗುವುದು ಎಂದು ಹೇಳಿದರು. ಇದಕ್ಕೂ ಮುನ್ನ ಸಂಸದರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಫಲಾನುಭವಿಗಳಿಗೆ ಬ್ಯಾಟರಿ ಚಾಲಿತ ವೀಲ್ ಚೇರ್, ತೋಟಗಾರಿಕೆ ಇಲಾಖೆಯಿಂದ ಎನ್‌ ಹೆಚ್‌ಎಂ, ಪಿಎಂಕೆಎಸ್‌ವೈ ಯೋಜನೆಯಡಿ ಫಲಾನುಭವಿಗಳಿಗೆ ಟ್ರ್ಯಾಕ್ಟರ್, ಟ್ರ್ಯಾಕ್ಟರ್ ಟ್ರ್ಯಾಲಿ , ಟ್ರ್ಯಾಕ್ಟರ್ ಚಾಲಿತ ಸ್ಪೇಯರ್, ಹನಿ ನೀರಾವರಿ, ಸೋಲಾರ್ ಪಂಪ್ ಸೆಟ್ ವಿತರಣೆಯ ಆದೇಶ ಪ್ರತಿ ವಿತರಿಸಿದರು. ಬಳಿಕ ಸುಕನ್ಯಾ ಸಮೃದ್ಧಿ ಯೋಜನೆಯಡಿ ಫಲಾನುಭವಿಗಳಿಗೆ ಭಾಗ್ಯಲಕ್ಷ್ಮೀ ಬಾಂಡ್ ಆದೇಶ ಪ್ರತಿ, ಸಂಡೂರು ತಾಲ್ಲೂಕಿನಲ್ಲಿ ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳಿಗೆ ನೇಮಕಗೊಂಡವರಿಗೆ ಆದೇಶ ಪ್ರತಿ, ಆಯುಷ್ ಇಲಾಖೆಯಿಂದ ಕಿಟ್ ವಿತರಣೆ ಮಾಡಿದರು. ಈ ಸಂದರ್ಭದಲ್ಲಿ ಬಳ್ಳಾರಿ ಜಿಲ್ಲಾ…

Read More

ಬಳ್ಳಾರಿ:   ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಿದರೆ ಮಾತ್ರ, ಜನರ ಅಭಿವೃದ್ಧಿ ಸಾಧ್ಯ ಎಂದು ಬಳ್ಳಾರಿ ಲೋಕಸಭಾ ಕ್ಷೇತ್ರದ ಸಂಸದರು ಹಾಗೂ ಜಿಲ್ಲಾ ಮಟ್ಟದ ದಿಶಾ ಸಮಿತಿಯ ಅಧ್ಯಕ್ಷರೂ ಆದ ಈ.ತುಕಾರಾಮ್ ಅವರು ಹೇಳಿದರು. ನಗರದ ಜಿಲ್ಲಾ ಪಂಚಾಯತ್ ನ ಹೊಸ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಬುಧವಾರ ಏರ್ಪಡಿಸಿದ್ದ ಜಿಲ್ಲಾ ಅಭಿವೃದ್ಧಿ ಸಮನ್ವಯ ಉಸ್ತುವಾರಿ ಸಮಿತಿ “ದಿಶಾ” ಸಮಿತಿಯ ಮೂರನೇ ತ್ರೈಮಾಸಿಕ  ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಅಧಿಕಾರಿಗಳು ತಮ್ಮ ಇಲಾಖೆಗಳ ಸಮಗ್ರ ಮಾಹಿತಿಯನ್ನು ಕನ್ನಡಿಯಂತೆ ಸಿದ್ಧವಿಟ್ಟುಕೊಂಡು ಸಭೆಗಳಲ್ಲಿ ಪ್ರಸ್ತುತಪಡಿಸಬೇಕು. ಇದರಿಂದ ಜನರ ಅಭಿವೃದ್ಧಿಗೆ ಬೇಕಾದ ಸಮರ್ಪಕ ಅನುದಾನ ಕುರಿತು ಸರ್ಕಾರಗಳ ಮುಂದೆ ಪ್ರಸ್ತಾಪಿಸಲು ಸಾಧ್ಯವಾಗುತ್ತದೆ ಎಂದರು. ಪಿಎಂಎಫ್‌ ಎಂಇ ಯೋಜನೆ ಸಾಕಾರಗೊಂಡಿಲ್ಲ: ಅಸಂಘಟಿತ ವಲಯದಲ್ಲಿನ ಸಣ್ಣ ಆಹಾರ ಸಂಸ್ಕರಣಾ ಘಟಕಗಳನ್ನು ಉತ್ತೇಜಿಸಲು, ಅವರಿಗೆ ಸಾಲ ಸೌಲಭ್ಯ ನೀಡಲು ಪ್ರಧಾನ ಮಂತ್ರಿ ಸೂಕ್ಷ್ಮ ಆಹಾರ ಸಂಸ್ಕರಣಾ ಉದ್ಯಮಗಳ ಯೋಜನೆಯಡಿ ಲೋನ್ ಗಾಗಿ ಸಲ್ಲಿಸಿದ ಅರ್ಜಿಗಳಲ್ಲಿ ಮಂಜೂರಾತಿಗಳಿಗಿಂತ ತಿರಸ್ಕಾರಗೊಂಡಿರುವ ಅರ್ಜಿಗಳೇ ಹೆಚ್ಚಾಗಿದ್ದು, ಯಾವ…

Read More

ತುಮಕೂರು: ಜಿಲ್ಲೆಯ ಗುಬ್ಬಿ ತಾಲ್ಲೂಕಿನ ಹುರುಳಗೇರೆ ಗ್ರಾಮದ  ಗಿರೀಶ್ ಹೆಚ್.ಎನ್. ಅವರಿಗೆ ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು (KSOU) ಕನ್ನಡ ವಿಷಯದಲ್ಲಿ ಡಾಕ್ಟರೇಟ್ (ಪಿಹೆಚ್.ಡಿ) ಪದವಿಯನ್ನು ಪ್ರದಾನ ಮಾಡಿದೆ. ಜನವರಿ 31, 2026 ರಂದು ಮೈಸೂರಿನ ಮುಕ್ತಗಂಗೋತ್ರಿಯ ಘಟಿಕೋತ್ಸವ ಭವನದಲ್ಲಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ 21ನೇ ವಾರ್ಷಿಕ ಘಟಿಕೋತ್ಸವ ನಡೆಯಿತು. ಈ ಸಮಾರಂಭದಲ್ಲಿ ಸುಮಾರು 10,600 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪದವಿ ಪಡೆದಿದ್ದು, ಇದೇ ಸಮಾರಂಭದಲ್ಲಿ ಕೆಎಸ್ ಒಯು ಪ್ರಾದೇಶಿಕ ನಿರ್ದೇಶಕ ಗಿರೀಶ್ ಹೆಚ್.ಎನ್ ಅವರಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ರಿಂದ  ಪಿಹೆಚ್’ಡಿ ಪದವಿ ಪ್ರದಾನ ಮಾಡಿದರು. ಸಂಶೋಧನಾ ವಿವರ: ಗಿರೀಶ್ ಅವರು ಮೈಸೂರಿನ ಕೆಎಸ್ ಒಯು ಕನ್ನಡ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಪ್ರಾಧ್ಯಾಪಕರಾದ ಡಾ.ಡಿ.ನಾಗಣ್ಣ ಅವರ ಮಾರ್ಗದರ್ಶನದಲ್ಲಿ “ಗುಬ್ಬಿ ತಾಲ್ಲೂಕಿನ ಶಾಸನಗಳು: ಸಾಂಸ್ಕೃತಿಕ ಅಧ್ಯಯನ” ಎಂಬ ವಿಷಯದ ಕುರಿತು ಮಂಡಿಸಿದ ಮಹಾಪ್ರಬಂಧವನ್ನು ವಿಶ್ವವಿದ್ಯಾನಿಲಯವು ಅಂಗೀಕರಿಸಿ ಈ ಪದವಿ ನೀಡಿದೆ. ಸಿ.ಎಸ್.ಪುರ ಹೋಬಳಿಯ ಹುರುಳಗೇರೆ ಗ್ರಾಮದ…

Read More

ಶಿವಮೊಗ್ಗ: ನಗರದ ಸುಲೇಬೈಲು ಸರ್ಕಾರಿ ಶಾಲೆಯ ಹೊರಗೆ 16 ವರ್ಷದ ಎಸ್‌ ಎಸ್‌ ಎಲ್‌ ಸಿ ವಿದ್ಯಾರ್ಥಿಯನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಮೃತ ಬಾಲಕನನ್ನು ಉರಗದೂರಿನ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿ ಸಂಕೇತ್ (16) ಎಂದು ಗುರುತಿಸಲಾಗಿದೆ. ಈ ಘಟನೆಯಿಂದಾಗಿ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಘಟನೆಯ ವಿವರ: ಸಂಕೇತ್ ಪರೀಕ್ಷೆಗೂ ಮುನ್ನ ಶಾಲೆಯಲ್ಲಿ ನಡೆಯುತ್ತಿದ್ದ ವಿಶೇಷ ತರಗತಿಗೆ ಹಾಜರಾಗಿ ಹಿಂದಿರುಗುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಶಾಲೆಯ ಹೊರಗೆ ಹುಡುಗರ ಗುಂಪಿನ ನಡುವೆ ನಡೆಯುತ್ತಿದ್ದ ವಾಗ್ವಾದದಲ್ಲಿ ಸಂಕೇತ್ ಮಧ್ಯಪ್ರವೇಶಿಸಿದ್ದರು ಎನ್ನಲಾಗಿದೆ. ಎರಡು ದಿನಗಳ ಹಿಂದೆ ನಡೆದಿದ್ದ ಕ್ರಿಕೆಟ್ ಮ್ಯಾಚ್ ವಿಷಯವಾಗಿ ಉಂಟಾದ ಗಲಾಟೆಯೇ ಈ ಕೊಲೆಗೆ ಪ್ರಮುಖ ಕಾರಣ ಎಂದು ಪೊಲೀಸ್ ವರಿಷ್ಠಾಧಿಕಾರಿ (SP) ನಿಖಿಲ್ ಬಿ. ತಿಳಿಸಿದ್ದಾರೆ. ಏಳು ಅಪ್ರಾಪ್ತರ ಬಂಧನ: ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಈಗಾಗಲೇ ಏಳು ಮಂದಿ ಅಪ್ರಾಪ್ತ ವಯಸ್ಕರನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತರು ಮೃತ ಸಂಕೇತ್ ಓದುತ್ತಿದ್ದ…

Read More

ಬೆಂಗಳೂರು: ರಾಜ್ಯದ ಕೃಷಿ ಭೂಮಿ ಸೇರಿದಂತೆ ಎಲ್ಲಾ ರೀತಿಯ ಸ್ವತ್ತುಗಳ ಖಾತೆ ಬದಲಾವಣೆ (ಮ್ಯುಟೇಷನ್) ಪ್ರಕ್ರಿಯೆಯಲ್ಲಿ ಪಾರದರ್ಶಕತೆ ತರಲು ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು ಮಂಗಳವಾರ ‘ಸ್ವಯಂ ಚಾಲಿತ ಮ್ಯುಟೇಷನ್’ ತಂತ್ರಾಂಶಕ್ಕೆ ಚಾಲನೆ ನೀಡಿದ್ದಾರೆ. ಈ ಹೊಸ ವ್ಯವಸ್ಥೆಯಿಂದಾಗಿ ಸಾರ್ವಜನಿಕರು ಇನ್ನು ಮುಂದೆ ಮ್ಯುಟೇಷನ್ ಪ್ರತಿಗಾಗಿ ಸರ್ಕಾರಿ ಕಚೇರಿಗಳಿಗೆ ಅಲೆಯುವ ಅಗತ್ಯವಿಲ್ಲ. ಮಾನವ ಹಸ್ತಕ್ಷೇಪಕ್ಕೆ ಮುಕ್ತಿ: ಈ ನೂತನ ವ್ಯವಸ್ಥೆಯ ಅಡಿಯಲ್ಲಿ, 7 ಅಥವಾ 15 ದಿನಗಳ ನೋಟಿಸ್ ಅವಧಿ ಮುಕ್ತಾಯಗೊಂಡ ತಕ್ಷಣ, ಯಾವುದೇ ಅಧಿಕಾರಿಯ ಸಹಿ ಅಥವಾ ಅನುಮೋದನೆಗೆ ಕಾಯದೆ, ತಂತ್ರಾಂಶದ ಮೂಲಕವೇ ‘ಸರ್ವರ್ ಸಹಿ’ ಇರುವ ಮ್ಯುಟೇಷನ್ ಪ್ರತಿ ಸಿದ್ಧವಾಗಲಿದೆ. ಈ ಹಿಂದೆ ರಾಜಸ್ವ ನಿರೀಕ್ಷಕರು (RI) ಖುದ್ದಾಗಿ ತಾಲ್ಲೂಕು ಕಚೇರಿಗೆ ಬಂದು ಬೆರಳಚ್ಚು ನೀಡಿ ಅನುಮೋದಿಸಬೇಕಿತ್ತು. ಆದರೆ ಈಗ ಅವರಿಗೆ ಪ್ರತ್ಯೇಕ ಲಾಗಿನ್ ನೀಡಲಾಗಿದ್ದು, ಯಾವುದೇ ಸ್ಥಳದಿಂದ ಆನ್‌ಲೈನ್ ಮೂಲಕವೇ ಆಕ್ಷೇಪಣೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ತಕರಾರು ಮತ್ತು ಭದ್ರತೆ: ಒಂದು ವೇಳೆ ನಿಗದಿತ ಅವಧಿಯೊಳಗೆ ಸಾರ್ವಜನಿಕರು…

Read More

ಬೆಂಗಳೂರು: ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯಲ್ಲಿ ಖಾಲಿ ಇರುವ 1,600ಕ್ಕೂ ಹೆಚ್ಚು ಹುದ್ದೆಗಳನ್ನು ಶೀಘ್ರದಲ್ಲೇ ಭರ್ತಿ ಮಾಡಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು ತಿಳಿಸಿದ್ದಾರೆ. ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯಲ್ಲಿರುವ ಆರ್.ಎ. ಮುಂಡ್ಕೂರ್ ಅಗ್ನಿಶಾಮಕ ತರಬೇತಿ ಅಕಾಡೆಮಿಯಲ್ಲಿ ನಡೆದ ‘ಮುಖ್ಯಮಂತ್ರಿಗಳ ಪದಕ’ ಪ್ರದಾನ ಸಮಾರಂಭ ಹಾಗೂ 40 ಹೊಸ ಅಗ್ನಿಶಾಮಕ ವಾಹನಗಳ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಅವರು ಈ ವಿಷಯ ಹಂಚಿಕೊಂಡರು. ಇಲಾಖೆಯಲ್ಲಿನ ಸಿಬ್ಬಂದಿ ಕೊರತೆ ನೀಗಿಸಲು 1,600 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳಿಗೆ ಈಗಾಗಲೇ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಶೀಘ್ರದಲ್ಲೇ ಪ್ರಕ್ರಿಯೆ ಆರಂಭವಾಗಲಿದೆ. ರಾಜ್ಯದ 15 ಹೊಸ ತಾಲೂಕುಗಳಲ್ಲಿ ಅಗ್ನಿಶಾಮಕ ಠಾಣೆಗಳನ್ನು ಸ್ಥಾಪಿಸಲು ಉದ್ದೇಶಿಸಲಾಗಿದ್ದು, ಈ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಾಗಿದೆ ಎಂದರು. ಪೊಲೀಸ್ ಇಲಾಖೆಯ ‘ಪೊಲೀಸ್ ಗೃಹ’ ಯೋಜನೆಯ ಮಾದರಿಯಲ್ಲೇ ಅಗ್ನಿಶಾಮಕ ಸಿಬ್ಬಂದಿಗೂ ವಸತಿ ಸೌಲಭ್ಯ ಕಲ್ಪಿಸಲು ನಿರ್ಧರಿಸಲಾಗಿದ್ದು, ಇದಕ್ಕೆ ಅಗತ್ಯ ಅನುದಾನ ಒದಗಿಸಲಾಗುವುದು ಅಲ್ಲದೇ ಬೆಂಗಳೂರಿನಲ್ಲಿ ಹೆಚ್ಚುತ್ತಿರುವ ಬಹುಮಹಡಿ ಕಟ್ಟಡಗಳ ಅಗ್ನಿ ಅವಘಡಗಳನ್ನು ತಡೆಯಲು 90 ಮೀಟರ್…

Read More

ಬೆಂಗಳೂರು: ರಾಜ್ಯದಲ್ಲಿ ಖಾಲಿ ಇರುವ ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡದ ಸರ್ಕಾರದ ಧೋರಣೆಯ ವಿರುದ್ಧ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಧಾರವಾಡದಲ್ಲಿ ನಡೆಯುತ್ತಿರುವ ಉದ್ಯೋಗಾಕಾಂಕ್ಷಿಗಳ ಬೃಹತ್ ಪ್ರತಿಭಟನೆಯನ್ನು ಬೆಂಬಲಿಸಿರುವ ಅವರು, “ನಿಮ್ಮೊಂದಿಗೆ ನಾನಿದ್ದೇನೆ” ಎಂದು ಅಭಯ ನೀಡಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಸುದೀರ್ಘ ಪೋಸ್ಟ್ ಮಾಡಿರುವ ಕುಮಾರಸ್ವಾಮಿ, ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ರಾಜ್ಯದಲ್ಲಿ ಸದ್ಯ 2.94 ಲಕ್ಷ ಸರ್ಕಾರಿ ಹುದ್ದೆಗಳು ಖಾಲಿ ಇವೆ. ಆದರೆ ಸರ್ಕಾರವು ಸಂಪುಟ ದರ್ಜೆ ಹುದ್ದೆಗಳನ್ನು ಮಾತ್ರ ‘ಸೂಪರ್ ಫಾಸ್ಟ್’ ಆಗಿ ಭರ್ತಿ ಮಾಡುತ್ತಿದೆ ಎಂದು ಅವರು ಲೇವಡಿ ಮಾಡಿದ್ದಾರೆ ಅಲ್ಲದೇ,  “ನಿರುದ್ಯೋಗ ಎಂಬುದು ಸದಾ ಕುದಿಯುವ ಜ್ವಾಲಾಮುಖಿ. ಇದನ್ನು ಸರ್ಕಾರ ಲಘುವಾಗಿ ಪರಿಗಣಿಸಬಾರದು. ಕಾಲಕಾಲಕ್ಕೆ ನೇಮಕಾತಿ ಮಾಡದೆ ನಿರ್ಲಕ್ಷಿಸಿದ್ದರ ಫಲವಾಗಿಯೇ ಇಂದು ಯುವಜನರು ಬೀದಿಗೆ ಇಳಿದಿದ್ದಾರೆ” ಎಂದು ಎಚ್ಚರಿಸಿದ್ದಾರೆ. ಶಿಕ್ಷಣ, ಆರೋಗ್ಯ ಮತ್ತು ಪೊಲೀಸ್ ಇಲಾಖೆಗಳಲ್ಲಿ ಅತಿ ಹೆಚ್ಚು ಹುದ್ದೆಗಳು ಖಾಲಿ ಇವೆ. ಬೆಂಗಳೂರಿನ…

Read More

ಯಾದಗಿರಿ: ಜಿಲ್ಲೆಯ ಗುರುಮಠಕಲ್ ಪಟ್ಟಣದಲ್ಲಿ ನಡೆದ ಶಿವಾಜಿ ಜಯಂತಿ ಕಾರ್ಯಕ್ರಮದ ಸಂದರ್ಭದಲ್ಲಿ ದ್ವೇಷ ಭಾಷಣ ಮಾಡಿದ ಆರೋಪದ ಮೇಲೆ ವಿಜಯಪುರ ನಗರ ಕ್ಷೇತ್ರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಫೆಬ್ರವರಿ 21 ರಂದು ನಡೆದ ಈ ಘಟನೆಗೆ ಸಂಬಂಧಿಸಿದಂತೆ ಬುಧವಾರ ಅಧಿಕೃತವಾಗಿ ಎಫ್‌ ಐಆರ್ ದಾಖಲಾಗಿದೆ. ಘಟನೆಯ ಹಿನ್ನೆಲೆ: ಗುರುಮಠಕಲ್‌ನಲ್ಲಿ ಆಯೋಜಿಸಲಾಗಿದ್ದ ಶಿವಾಜಿ ಜಯಂತಿ ಉತ್ಸವಕ್ಕೆ ಯತ್ನಾಳ್ ಅವರು ಮುಖ್ಯ ಅತಿಥಿಯಾಗಿ ಆಗಮಿಸಿದ್ದರು. ಈ ವೇಳೆ ಅವರು ನೀಡಿದ ಭಾಷಣದಲ್ಲಿ ಒಂದು ನಿರ್ದಿಷ್ಟ ಸಮುದಾಯವನ್ನು ಗುರಿಯಾಗಿಸಿಕೊಂಡು ಅತ್ಯಂತ ವಿವಾದಾತ್ಮಕ ಮತ್ತು ಪ್ರಚೋದನಾಕಾರಿ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಆರೋಪಿಸಲಾಗಿದೆ. ಲವ್ ಜಿಹಾದ್ ವಿಷಯವನ್ನು ಪ್ರಸ್ತಾಪಿಸಿದ ಅವರು, ಕೆಲವು ಐತಿಹಾಸಿಕ ವ್ಯಕ್ತಿಗಳ ಬಗ್ಗೆ ಅವಹೇಳನಕಾರಿ ಮಾತುಗಳನ್ನಾಡಿದ್ದಾರೆ ಎನ್ನಲಾಗಿದೆ. ಅಲ್ಲದೆ, ಹಿಂದಿ ಕವಿತೆಯೊಂದನ್ನು ಉಲ್ಲೇಖಿಸುವ ನೆಪದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧಿ ಮತ್ತು ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಅವರ ಬಗ್ಗೆಯೂ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಪೊಲೀಸರು…

Read More

ಬೆಂಗಳೂರು: ಇಂದಿನ ದಿನಗಳಲ್ಲಿ ಫ್ರಿಜ್ ಪ್ರತಿಯೊಬ್ಬರ ಮನೆಯ ಅವಿಭಾಜ್ಯ ಅಂಗವಾಗಿದೆ. ಹಣ್ಣು, ತರಕಾರಿಗಳಿಂದ ಹಿಡಿದು ಮಿಕ್ಕಿದ ಆಹಾರದವರೆಗೆ ಎಲ್ಲವನ್ನೂ ನಾವು ಫ್ರಿಜ್‌ನಲ್ಲಿ ಸಂಗ್ರಹಿಸುತ್ತೇವೆ. ಆದರೆ, ನಮಗೆ ತಿಳಿಯದ ಒಂದು ಪ್ರಮುಖ ವಿಷಯವೆಂದರೆ, ಫ್ರಿಜ್‌ನ ಎಲ್ಲ ಭಾಗಗಳೂ ಒಂದೇ ರೀತಿಯ ತಾಪಮಾನವನ್ನು ಹೊಂದಿರುವುದಿಲ್ಲ. ವಿಶೇಷವಾಗಿ ಫ್ರಿಜ್ ಬಾಗಿಲಿನ ಭಾಗದಲ್ಲಿ (Fridge Door) ಕೆಲವು ನಿರ್ದಿಷ್ಟ ವಸ್ತುಗಳನ್ನು ಇಡುವುದು ನಿಮ್ಮ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರಬಹುದು.  ಹಾಲು ಮತ್ತು ಹಾಲಿನ ಉತ್ಪನ್ನಗಳು: ಹೆಚ್ಚಿನವರು ಹಾಲಿನ ಪ್ಯಾಕೆಟ್ ಅಥವಾ ಹಾಲಿನ ಪಾತ್ರೆಯನ್ನು ಫ್ರಿಜ್ ಬಾಗಿಲಲ್ಲಿ ಇಡುತ್ತಾರೆ. ಆದರೆ, ಫ್ರಿಜ್ ತೆರೆದಾಗಲೆಲ್ಲಾ ಬಾಗಿಲಿನ ತಾಪಮಾನ ಏರಿಳಿತವಾಗುತ್ತದೆ. ಇದರಿಂದ ಹಾಲು ಬೇಗನೆ ಕೆಡಬಹುದು ಮತ್ತು ಅದರಲ್ಲಿ ಬ್ಯಾಕ್ಟೀರಿಯಾಗಳು ಬೆಳೆಯುವ ಸಾಧ್ಯತೆ ಇರುತ್ತದೆ. ಹಾಲನ್ನು ಯಾವಾಗಲೂ ಫ್ರಿಜ್‌ನ ಒಳಗಿನ ತಂಪಾದ ಶೆಲ್ಫ್‌ಗಳಲ್ಲಿ ಇಡುವುದು ಉತ್ತಮ. ಮೊಟ್ಟೆಗಳು: ಫ್ರಿಜ್ ಬಾಗಿಲಲ್ಲಿ ಮೊಟ್ಟೆ ಇಡಲು ಪ್ರತ್ಯೇಕ ಜಾಗವಿರುತ್ತದೆ. ಆದರೆ, ತಜ್ಞರ ಪ್ರಕಾರ ಅಲ್ಲಿ ಮೊಟ್ಟೆ ಇಡುವುದು ಸುರಕ್ಷಿತವಲ್ಲ. ತಾಪಮಾನದ ಬದಲಾವಣೆಯಿಂದ ಮೊಟ್ಟೆಯ…

Read More

ರಾಯಚೂರು: ಸಾರ್ವಜನಿಕ ಸೇವೆಯಲ್ಲಿ ತೊಡಗಿರುವ ಸರ್ಕಾರಿ ನೌಕರರು ಕೆಲಸ ಮಧ್ಯೆಯೇ ಕ್ರೀಡಾಚಟುಟಿಕೆಗಳಲ್ಲಿ ಭಾಗವಹಿಸಿ, ಮಾನಸಿಕ ಮತ್ತು ದೈಹಿಕ ಸದೃಢತೆ ಸಾಧಿಸಬೇಕೆಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಈಶ್ವರ ಕುಮಾರ್ ಕಾಂದೂ ಅವರು ಸಲಹೆ ನೀಡಿದರು. ಫೆ.24ರ ಮಂಗಳವಾರ ದಂದು ನಗರದ ಕೃಷಿ ವಿಶ್ವವಿದ್ಯಾಲಯ ಕ್ರೀಡಾಂಗಣದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಮತ್ತು ಯುವಜನಸೇವಾ ಮತ್ತು ಕ್ರೀಡಾ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಿದ್ದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗಳ ಕ್ರೀಡಾ ಮತ್ತು ಸಾಂಸ್ಕೃತಿಕ ಉತ್ಸವಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಕ್ರೀಡೆಯಲ್ಲಿ ಸೋಲು-ಗೆಲುವು ಸಹಜ. ಪ್ರತಿಯೊಬ್ಬರು ಕ್ರೀಡಾ ಮನೋಭಾವನೆಯೊಂದಿಗೆ ಸ್ಪರ್ಧೆಗಳಲ್ಲಿ ಭಾಗವಹಿಸಬೇಕು. ಬದಲಾದ ಜೀವನ ಶೈಲಿ ಮತ್ತು ಆಹಾರ ಕ್ರಮಗಳಿಂದ ಒತ್ತಡ ಉಂಟಾಗುವುದು ಸಾಮಾನ್ಯವಾಗಿದೆ. ಹೀಗಾಗಿ ಪ್ರತಿ ನಿತ್ಯ ಕ್ರೀಡಾ ಚಟುವಟಿಕೆಗಳಲ್ಲಿ ತೊಡಗಿ ಆರೋಗ್ಯ ಕಾಪಾಡಿಕೊಳ್ಳಬೇಕು. ಹೀಗಾಗಿ ಎರಡು ದಿನಗಳ ಕಾಲ ಕ್ರೀಡಾ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಏರ್ಪಡಿಸಲಾಗಿದೆ. ಅವಕಾಶ ಸಿಕ್ಕಾಗ ಇದೆ ರೀತಿಯಲ್ಲಿ ಕ್ರೀಡೆಗಳನ್ನು ಏರ್ಪಡಿಸಿ, ನೌಕರರು…

Read More