Author: admin

ತುರುವೇಕೆರೆ: ಪಟ್ಟಣದ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ಹಾಗೂ ಯೋಗ ಶಿಕ್ಷಣ ಟ್ರಸ್ಟ್ ವತಿಯಿಂದ ಉಚಿತ ಯೋಗ ಮತ್ತು ಪ್ರಾಣಾಯಾಮ ಹೊಸ ತರಗತಿಗಳ ಉದ್ಘಾಟನಾ ಕಾರ್ಯಕ್ರಮ ಜೂ. 4ರಂದು ಸಂಜೆ ಪಟ್ಟಣದ ಶ್ರೀ ಪತಂಜಲಿ ಯೋಗಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಶ್ರೀ ಪತಂಜಲಿ ಯೋಗಶಿಕ್ಷಣ ಸಮಿತಿ ತಿಳಿಸಿದೆ. ಸಂಸ್ಕಾರ, ಸಂಘಟನೆ, ಸೇವೆ ಎಂಬ ಧೇಯೋದ್ದೇಶದೊಂದಿಗೆ ಉಚಿತವಾಗಿ ಯೋಗ ತರಗತಿಗಳನ್ನು ನಡೆಸುತ್ತಾ ಬರುತ್ತಿದೆ. ಆ ನಿಟ್ಟಿನಲ್ಲಿ ಜೂ. 4ರಂದು ಗುರುವಾರ ಸಂಜೆ 6.30 ಗಂಟೆಗೆ ಯೋಗಭವನದಲ್ಲಿ ಉಚಿತ ಯೋಗ ಮತ್ತು ಪ್ರಾಣಾಯಾಮ ನೂತನ ತರಗತಿಗಳ ಉದ್ಘಾಟನೆ ನಡೆಯಲಿದ್ದು ಶಿಬಿರದಲ್ಲಿ ಯೋಗಾಭ್ಯಾಸ, ಪ್ರಾಣಾಯಾಮ, ಧ್ಯಾನ, ಭಜನೆ, ಅಗ್ನಿಹೋತ್ರ, ಸತ್ಸಂಗ ಸೇರಿದಂತೆ ಅನೇಕ ಸಂಸ್ಕಾರಯುತ ನಡವಳಿಕೆಗಳ ಬಗ್ಗೆ ಉಚಿತವಾಗಿ ಶಿಕ್ಷಣ ನೀಡಲಾಗುವುದು.. ಜೂ.9ರಂದು ಮಂಗಳವಾರ ಸಂಜೆ 7ಗಂಟೆಗೆ ಮುನಿಯೂರು ಗ್ರಾಮದ ಒಕ್ಕಲಿಗರ ಸಮುದಾಯ ಭವನದಲ್ಲಿಯೂ ಉಚಿತ ಯೋಗ ಮತ್ತು ಪ್ರಾಣಾಯಾಮ ಹೊಸ ತರಗತಿಗಳ ಉದ್ಘಾಟನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು ಆಸಕ್ತರು ಜೂ.4 ಮತ್ತು ಜೂ.9ರಂದು ಸಂಜೆ ಉದ್ಘಾಟನಾ…

Read More

ತುಮಕೂರು: ಪೂರಕ ಪೌಷ್ಟಿಕ ಆಹಾರ ಯೋಜನೆ ಹಾಗೂ ಪೋಷಣ್ ಯೋಜನೆಯಡಿ ಶೇಕಡಾ 100 ಕ್ಕಿಂತ ಕಡಿಮೆ ಸಾಧನೆ ಮಾಡಿರುವ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಿಗೆ ನೋಟಿಸ್ ಜಾರಿಗೊಳಿಸುವಂತೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರಿಗೆ ಸೂಚಿಸಿದ್ದಾರೆ. ಶುಕ್ರವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಸಂಬಂಧಿಸಿದಂತೆ 2025-2026 ನೇ ಸಾಲಿನ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪೌಷ್ಟಿಕ ಆಹಾರ ಪೂರೈಕೆಗೆ ಸಂಬಂಧಿಸಿದಂತೆ ಹಿಂದಿನ ಸಭೆಯಲ್ಲಿಯೇ ಸೂಚನೆ ನೀಡಲಾಗಿತ್ತು. ಆದರೂ ಸಮರ್ಪಕವಾಗಿ ಆಗಿಲ್ಲ. ಈ ಹಿನ್ನೆಲೆಯಲ್ಲಿ ಶೇ.100 ಕ್ಕಿಂತ ಕಡಿಮೆ ಸಾಧನೆ ಮಾಡಿದ ಜಿಲ್ಲೆಯ ನಾಲ್ವರು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಿಗೆ ನೋಟಿಸ್ ಜಾರಿಗೊಳಿಸುವಂತೆ ಅವರು ಇಲಾಖೆ ಉಪ ನಿರ್ದೇಶಕ ಡಾ.ಸಿದ್ಧರಾಮಣ್ಣ ಅವರಿಗೆ ಸೂಚಿಸಿದರು. ಕೇಂದ್ರ ಪುರಸ್ಕೃತ ಯೋಜನೆಯಾದ ಮಿಷನ್ ಶಕ್ತಿ ಯೋಜನೆಯಡಿ ಮಹಿಳಾ ಸಬಲೀಕರಣಕ್ಕಾಗಿ ಇಲಾಖೆಯಿಂದ ಹಲವಾರು ತರಬೇತಿ, ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಈ ವಿಷಯದಲ್ಲಿ ಉತ್ತಮ ಪ್ರಗತಿಯಾಗಿದೆ. ಈ…

Read More

ಕುಣಿಗಲ್: ಹೊಸದಾಗಿ ಕೊರೆದಿರುವ ಕೊಳವೆ ಬಾವಿಗಳಲ್ಲಿ ನೀರು ಸಿಕ್ಕಿದ್ದರೂ, ಏಕೆ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡುತ್ತೀರಾ ಎಂದು ಸಿಡಿಮಿಡಿಗೊಂಡ ತಾಲೂಕು ಪಂಚಾಯಿತಿ ಆಡಳಿತಾಧಿಕಾರಿ, ಜಿ.ಪಂ ಉಪ ಕಾರ್ಯದರ್ಶಿ ಕೆ.ಪಿ. ಸಂಜೀವಪ್ಪ ತಕ್ಷಣವೇ ಟ್ಯಾಂಕರ್ ನೀರು ಸರಬರಾಜು ನಿಲ್ಲಿಸುವಂತೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚಿಸಿದರು. ಪಟ್ಟಣದ ತಾ.ಪಂ ಸಭಾಂಗಣದಲ್ಲಿ ನಡೆದ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಈಗಾಗಲೇ ತಾಲೂಕಿನಲ್ಲಿ ಮಳೆಯಾಗಬೇಕಾಗಿತ್ತು ಆದರೆ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಕಾರಣ ಕೆರೆ ಕಟ್ಟೆಗಳಲ್ಲಿ ನೀರಿನ ಪ್ರಮಾಣ ಕಡಿಮೆಯಾಗಿ ಅಂತರ್ಜಲ ಮಟ್ಟ ಕುಸಿದು ಕೆಲವು ಗ್ರಾಮಗಳಲ್ಲಿ ಜನ ಜಾನುವಾರುಗಳ ಕುಡಿಯುವ ನೀರಿಗೆ ಸಮಸ್ಯೆಯಾದ ಹಿನ್ನೆಲೆಯಲ್ಲಿ 26 ಗ್ರಾಮಗಳಲ್ಲಿ ಕೊಳವೆ ಬಾವಿ ಕೊರೆಸಲಾಗಿದೆ, ಈ ಪೈಕಿ 10 ಕೊಳವೆ ಬಾವಿ ವಿಫಲಗೊಂಡಿದ್ದು, ಡಿ.ಹೊಸಹಳ್ಳಿ, ತಾವರೆಕೆರೆ, ಭಕ್ತರಹಳ್ಳಿ, ಮಡಿಕೆಹಳ್ಳಿ, ಬಿಳಿದೇವಾಲಯ, ಕಗ್ಗರೆ ಗ್ರಾ.ಪಂ ವ್ಯಾಪ್ತಿಯ ಸೇರಿದಂತೆ 16 ಗ್ರಾಮಗಳ ಕೊಳವೆ ಬಾವಿಯಲ್ಲಿ ನೀರು ಸಿಕ್ಕಿದೆ, ಆದರೂ ಈ ಗ್ರಾಮಗಳಿಗೆ ಈಗಲೂ ಸಹಾ ಟ್ಯಾಂಕರ್ ಮೂಲಕ ನೀರು ಸರಬರಾಜು…

Read More

ಪಾವಗಡ: ತಾಲ್ಲೂಕಿನ ಹಿರಿಯ ರಾಜಕಾರಣಿ ಹಾಗೂ ಮಾಜಿ ಸಚಿವ ವೆಂಕಟರಮಣಪ್ಪ (82) ಅವರು ಶುಕ್ರವಾರ ಬೆಳಗಿನ ಜಾವ 5:00 ಗಂಟೆಗೆ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಫೋರ್ಟಿಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ವೆಂಕಟರಮಣಪ್ಪನವರು ಪಾವಗಡ ಕ್ಷೇತ್ರದಿಂದ ಒಟ್ಟು ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ರಾಜ್ಯ ಸರ್ಕಾರದಲ್ಲಿ ಎರಡು ಬಾರಿ ಸಚಿವರಾಗಿ ಸೇವೆ ಸಲ್ಲಿಸಿದ್ದರು.  2008ರ ವಿಧಾನಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಭರ್ಜರಿ ಗೆಲುವು ಸಾಧಿಸುವ ಮೂಲಕ ರಾಜ್ಯ ರಾಜಕಾರಣದಲ್ಲಿ ತಮ್ಮದೇ ಆದ ವಿಶಿಷ್ಟ ಗುರುತು ಮೂಡಿಸಿದ್ದರು. ತಮ್ಮ ಸರಳತೆ ಹಾಗೂ ಜನಸ್ನೇಹಿ ನಡವಳಿಕೆಯಿಂದ ಸದಾ ಜನರ ಮಧ್ಯೆ ಇರುತ್ತಿದ್ದ ವೆಂಕಟರಮಣಪ್ಪನವರು, ಈ ಭಾಗದ ಜನರಿಂದ ಪ್ರೀತಿಯಿಂದ “ಎಲ್ಲರ ಮನೆಯ ಮನಸ್ಸಿನ ದೊಡ್ಡಪ್ಪ” ಎಂದೇ ಕರೆಯಲ್ಪಡುತ್ತಿದ್ದರು. ಅವರ ನಿಧನಕ್ಕೆ ಮುಖ್ಯಮಂತ್ರಿಗಳು, ಸಚಿವರು ಹಾಗೂ ವಿವಿಧ ರಾಜಕೀಯ ಪಕ್ಷಗಳ ಗಣ್ಯ ನಾಯಕರು ತೀವ್ರ ಸಂತಾಪ ಸೂಚಿಸಿದ್ದಾರೆ. ಮೃತರ ಪಾರ್ಥಿವ ಶರೀರವನ್ನು ಸಾರ್ವಜನಿಕರ ಅಂತಿಮ…

Read More

ಸರಗೂರು: ಎಚ್‌.ಡಿ. ಕೋಟೆ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಅರಣ್ಯ ಮತ್ತು ವಸತಿ ವಿಹಾರಧಾಮಗಳ ಸಂಸ್ಥೆ  ಅಧ್ಯಕ್ಷರಾದ ಅನಿಲ್ ಚಿಕ್ಕಮಾದು ಅವರಿಗೆ ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ರಾಜ್ಯ ಸರ್ಕಾರದಲ್ಲಿ ಸಚಿವ ಸ್ಥಾನ ನೀಡಬೇಕೆಂದು ಮಾಜಿ ತಾಪಂ ಅಧ್ಯಕ್ಷ ಮನುಗನಹಳ್ಳಿ ಗುರುಸ್ವಾಮಿ ಒತ್ತಾಯಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು, “ಅನಿಲ್ ಚಿಕ್ಕಮಾದು ಅವರು ಕ್ಷೇತ್ರದಲ್ಲಿ ಸತತ ಎರಡು ಬಾರಿ ಗೆಲುವು ಸಾಧಿಸಿ, ಅಭಿವೃದ್ಧಿಗೆ ಮುನ್ನುಡಿ ಬರೆದಿದ್ದಾರೆ. ಇಂತಹ ದಕ್ಷ ನಾಯಕರಿಗೆ ಸಚಿವ ಸ್ಥಾನ ನೀಡಿದರೆ, ಎಚ್.ಡಿ. ಕೋಟೆ ತಾಲ್ಲೂಕಿಗೆ ಅಂಟಿರುವ ‘ಹಿಂದುಳಿದ ತಾಲ್ಲೂಕು’ ಎಂಬ ಹಣೆಪಟ್ಟೆಯನ್ನು ತೊಲಗಿಸಲು ಸಹಾಯಕವಾಗುತ್ತದೆ. ಆದ್ದರಿಂದ ನೂತನ ಸಚಿವ ಸಂಪುಟದಲ್ಲಿ ಅವರಿಗೆ ಸ್ಥಾನ ನೀಡಲು ಸರ್ಕಾರ ಸೂಕ್ತ ನಿರ್ಧಾರ ಕೈಗೊಳ್ಳಬೇಕು,” ಎಂದು ಆಗ್ರಹಿಸಿದರು. ರಾಜ್ಯದಲ್ಲಿ ಸಚಿವ ಸಂಪುಟ ಪುನರ್‌ ರಚನೆ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ ಈ ಬೇಡಿಕೆ ಮುಂಚೂಣಿಗೆ ಬಂದಿದೆ. ರಾಜ್ಯದ ದಕ್ಷಿಣ ಭಾಗದಲ್ಲಿ ನಾಯಕ (ಎಸ್.ಟಿ) ಸಮುದಾಯಕ್ಕೆ ಸಚಿವ ಸಂಪುಟದಲ್ಲಿ ಸೂಕ್ತ ಅವಕಾಶ ಸಿಕ್ಕಿಲ್ಲ.…

Read More

ಸರಗೂರು: ಹಿರಿಯ ದಲಿತ ನಾಯಕ ಕೆ.ಎಚ್. ಮುನಿಯಪ್ಪ ಅವರಿಗೆ ರಾಜ್ಯದಲ್ಲಿ ಉಪಮುಖ್ಯಮಂತ್ರಿ ಸ್ಥಾನ ಹಾಗೂ ಎಚ್.ಡಿ. ಕೋಟೆ ಕ್ಷೇತ್ರದ ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಕಾಂಗ್ರೆಸ್ ಮುಖಂಡ ಹಾಗೂ ಮಾಧರ ಮಹಾಸಭಾ ತಾಲೂಕು ಅಧ್ಯಕ್ಷ ಕುರ್ಣೇಗಾಲ ಬೆಟ್ಟಸ್ವಾಮಿ ಹೈಕಮಾಂಡ್ ಅನ್ನು ಬಲವಾಗಿ ಒತ್ತಾಯಿಸಿದ್ದಾರೆ. ಸಾಮಾಜಿಕ ನ್ಯಾಯದ ಭಾಗವಾಗಿ ಹಾಗೂ ಹಿರಿಯ ದಲಿತ ನಾಯಕರಾಗಿರುವ ಮುನಿಯಪ್ಪ ಅವರಿಗೆ ಈ ಉನ್ನತ ಹುದ್ದೆ ನೀಡಬೇಕು ಎಂಬುದು ಮುಖಂಡರ ಪ್ರಮುಖ ಬೇಡಿಕೆಯಾಗಿದೆ. ಮುನಿಯಪ್ಪ ಅವರು ದಲಿತ (ಎಡ) ಸಮುದಾಯದ ಪ್ರಮುಖ ನಾಯಕರಾಗಿದ್ದು, ಏಳು ಬಾರಿ ಸಂಸದರಾಗಿ ಸುದೀರ್ಘ ರಾಜಕೀಯ ಅನುಭವ ಹೊಂದಿದ್ದಾರೆ. ಈ ಹಿನ್ನೆಲೆಯಲ್ಲಿ ಅವರಿಗೆ ಸೂಕ್ತ ಮನ್ನಣೆ ನೀಡಿ ಉಪಮುಖ್ಯಮಂತ್ರಿ ಸ್ಥಾನ ನೀಡುವ ಮೂಲಕ ಸರ್ಕಾರ ಮತ್ತು ಪಕ್ಷದಲ್ಲಿ ಸಮುದಾಯಕ್ಕೆ ಪ್ರಾತಿನಿಧ್ಯ ನೀಡಬೇಕು ಎಂದು ಎಚ್.ಡಿ. ಕೋಟೆ, ಸರಗೂರು ಹಾಗೂ ಸುತ್ತಮುತ್ತಲಿನ ಬ್ಲಾಕ್ ಕಾಂಗ್ರೆಸ್ ನಾಯಕರು ಮತ್ತು ಬೆಂಬಲಿಗರು ಆಗ್ರಹಿಸುತ್ತಿದ್ದಾರೆ. ಇದೇ ಸಂದರ್ಭದಲ್ಲಿ ಶಾಸಕ ಅನಿಲ್ ಚಿಕ್ಕಮಾದು ಅವರ…

Read More

ನವದೆಹಲಿ/ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ನಿರ್ಗಮಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸುದೀರ್ಘ ಸಾರ್ವಜನಿಕ ಜೀವನ ಮತ್ತು ಜನಸೇವೆಯನ್ನು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ‘ಎಕ್ಸ್’ (ಟ್ವಿಟರ್) ಖಾತೆಯಲ್ಲಿ ಬರೆದುಕೊಂಡಿರುವ ಖರ್ಗೆ, “ಸಿದ್ದರಾಮಯ್ಯ ಅವರ ಸಾರ್ವಜನಿಕ ಜೀವನವು ಸದಾ ಗೌರವ, ಕರುಣೆ ಮತ್ತು ಸಾಮಾಜಿಕ ನ್ಯಾಯದ ಬದ್ಧತೆಯನ್ನು ಪ್ರತಿಬಿಂಬಿಸಿದೆ” ಎಂದು ಹೇಳಿದ್ದಾರೆ. ಸಿದ್ದರಾಮಯ್ಯ ಅವರು ತಮ್ಮ ಜೀವನದ ಆರಂಭದ ದಿನಗಳಿಂದಲೂ ಸಮಾಜದಲ್ಲಿ ಸಮಾನತೆ ಮತ್ತು ಹಿಂದುಳಿದ ವರ್ಗಗಳ ಹಕ್ಕುಗಳಿಗಾಗಿ ನಿರಂತರವಾಗಿ ಹೋರಾಡುತ್ತಾ ಬಂದಿದ್ದಾರೆ. ಅತ್ಯಂತ ಸರಳ ಹಿನ್ನೆಲೆಯಿಂದ ಬಂದು, ಕರ್ನಾಟಕದ ಮುಖ್ಯಮಂತ್ರಿಯಾಗಿ ಎರಡು ಬಾರಿ ಅತ್ಯುತ್ತಮ ಸೇವೆ ಸಲ್ಲಿಸಿದ್ದಾರೆ. ತಮ್ಮ ಅಧಿಕಾರಾವಧಿಯಲ್ಲಿ ಸಮಾಜದ ಸೌಹಾರ್ದತೆ, ಸಮಾನತೆ ಹಾಗೂ ಹಿಂದುಳಿದವರ ಕಲ್ಯಾಣಕ್ಕೆ ಸದಾ ಮೊದಲ ಆದ್ಯತೆ ನೀಡಿದ್ದರು ಎಂದರು. ಕರ್ನಾಟಕ ರಾಜ್ಯ ಹಾಗೂ ಕಾಂಗ್ರೆಸ್ ಪಕ್ಷವು ಅವರ ಸುದೀರ್ಘ ಸಾರ್ವಜನಿಕ ಸೇವೆ ಮತ್ತು ಕೊಡುಗೆಗೆ ಸದಾ ಕೃತಜ್ಞವಾಗಿರುತ್ತದೆ.  ಸಿದ್ದರಾಮಯ್ಯ ಅವರಿಗೆ ಮುಂದಿನ ದಿನಗಳಲ್ಲಿ ಉತ್ತಮ ಆರೋಗ್ಯ ಮತ್ತು ಜನಸೇವೆಯಲ್ಲಿ…

Read More

ತಿಪಟೂರು: ತಾಲ್ಲೂಕಿನ ಬಾಳುವನೆರಳು ರುದ್ರಾಪುರ ಗ್ರಾಮದ ಶ್ರೀ ಗುರು ಸಿದ್ದೇಶ್ವರ ದೇವಸ್ಥಾನದ ಜೀರ್ಣೋದ್ದಾರ ಕಾರ್ಯಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಪೂಜ್ಯ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು 1 ಲಕ್ಷ ರೂಪಾಯಿ ಮೊತ್ತದ ಧನಸಹಾಯ ಮಂಜೂರುಗೊಳಿಸಿದ್ದಾರೆ. ಈ ಧನಸಹಾಯದ ಡಿಡಿಯನ್ನು (Demand Draft) ತಾಲ್ಲೂಕು ಯೋಜನಾಧಿಕಾರಿಗಳಾದ ಉದಯ್ ಕೆ. ಅವರು ಗ್ರಾಮಸ್ಥರಿಗೆ ಹಸ್ತಾಂತರಿಸಿ, ದೇವಸ್ಥಾನದ ಅಭಿವೃದ್ಧಿ ಕಾರ್ಯಗಳು ಯಶಸ್ವಿಯಾಗಿ ನೆರವೇರಲಿ ಎಂದು ಶುಭ ಹಾರೈಸಿದರು. ಈ ಸಂದರ್ಭದಲ್ಲಿ ದೇವಸ್ಥಾನ ಆಡಳಿತ ಮಂಡಳಿಯ ಅಧ್ಯಕ್ಷರಾದ ಚಂದ್ರಶೇಖರ್, ಕಾರ್ಯದರ್ಶಿ ಲೋಕೇಶ್, ಯೋಜನೆಯ ವಲಯ ಮೇಲ್ವಿಚಾರಕರಾದ ಪ್ರದೀಪ್, ಸೇವಾಪ್ರತಿನಿಧಿ ವೇದಾ ಹಾಗೂ ಧರ್ಮಸ್ಥಳ ಸಂಘದ ಪಾಲುದಾರ ಬಂಧುಗಳು, ಊರಿನ ಗಣ್ಯರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು. ವರದಿ: ಆನಂದ್, ತಿಪಟೂರು ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

Read More

ಬೆಂಗಳೂರು: ಪಾವಗಡದ ಮಾಜಿ ಶಾಸಕರು ಹಾಗೂ ಮಾಜಿ ಸಚಿವರಾದ ವೆಂಕಟರಮಣಪ್ಪ ಅವರು ವಿಧಿವಶರಾಗಿದ್ದಾರೆ. ಇಂದು ಕನ್ನಿಂಗ್‌ ಹ್ಯಾಮ್ ರಸ್ತೆಯಲ್ಲಿರುವ ಪೋರ್ಟಿಸ್ ಆಸ್ಪತ್ರೆಗೆ ಭೇಟಿ ನೀಡಿದ ಗೃಹ ಸಚಿವ ಡಾ. ಜಿ. ಪರಮೇಶ್ವರ ಅವರು, ವೆಂಕಟರಮಣಪ್ಪ ಅವರ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆದು ಶ್ರದ್ಧಾಂಜಲಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ವೆಂಕಟರಮಣಪ್ಪ ಅವರು ಪಾವಗಡ ಕ್ಷೇತ್ರದ ಅಭಿವೃದ್ಧಿಗೆ ನೀಡಿದ ಕೊಡುಗೆ ಅಪಾರ. ಅವರ ಅಗಲಿಕೆ ನಾಡಿಗೆ ತುಂಬಲಾರದ ನಷ್ಟ ಎಂದು ಸಂತಾಪ ವ್ಯಕ್ತಪಡಿಸಿದರು. ಹಲವು ಮುಖಂಡರು, ಅಭಿಮಾನಿಗಳು ಆಸ್ಪತ್ರೆಗೆ ಆಗಮಿಸಿ ಅಂತಿಮ ದರ್ಶನ ಪಡೆದರು. ಅಂತ್ಯಕ್ರಿಯೆಯ ವಿವರಗಳನ್ನು ಕುಟುಂಬದವರು ಶೀಘ್ರದಲ್ಲೇ ಪ್ರಕಟಿಸಲಿದ್ದಾರೆ. ವರದಿ: ನಂದೀಶ್ ನಾಯ್ಕ ಪಿ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

Read More

ಮಿಡಿಗೇಶಿ: ದ್ವಿಚಕ್ರ ವಾಹನಗಳ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಪತ್ನಿ ಸ್ಥಳದಲ್ಲೇ ಸಾವನ್ನಪ್ಪಿ, ಪತಿ ತೀವ್ರವಾಗಿ ಗಾಯಗೊಂಡಿರುವ ಧಾರುಣ ಘಟನೆ ಮೇ 28ರಂದು ಬೆಳಿಗ್ಗೆ ಮಿಡಿಗೇಶಿ ಹೋಬಳಿಯ ದೊಡ್ಡಯಲೂರು ಗ್ರಾಮದ ತಂಗುದಾಣದ ಸಮೀಪ ನಡೆದಿದೆ. ಹೊಸಕೆರೆ ಗ್ರಾಮದ ನಿವಾಸಿ, ಪದ್ಮ (40) ಅಪಘಾತದಲ್ಲಿ ಮೃತಪಟ್ಟ ದುರ್ದೈವಿ. ಇವರ ಪತಿ, ಕೆಎಸ್‌ಆರ್‌ಟಿಸಿ ಚಾಲಕರಾಗಿರುವ ಸೋಮಶೇಖರ್ ತೀವ್ರವಾಗಿ ಗಾಯಗೊಂಡಿದ್ದು, ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೇ 28ರ ಭಾನುವಾರ ಬೆಳಿಗ್ಗೆ ಸುಮಾರು 6:15ರ ವೇಳೆಗೆ ಸೋಮಶೇಖರ್ ಹಾಗೂ ಪದ್ಮ ದಂಪತಿಗಳು ತಮ್ಮ ಸಹೋದರನಿಗೆ ವಧು ನೋಡುವ ಸಲುವಾಗಿ ದ್ವಿಚಕ್ರ ವಾಹನದಲ್ಲಿ ಹಿಂದೂಪುರಕ್ಕೆ ಪ್ರಯಾಣಿಸುತ್ತಿದ್ದರು. ಈ ವೇಳೆ ದೊಡ್ಡಯಲೂರು ಗ್ರಾಮದ ಬಸ್ ತಂಗುದಾಣದ ಸಮೀಪ ಬರುತ್ತಿದ್ದಂತೆ, ಎದುರಿನಿಂದ ಚೀಲನಹಳ್ಳಿ ನಾಗಪ್ಪ ಎಂಬುವವರು ಡೇರಿಗೆ ಹಾಲು ಹಾಕಲು ತಮ್ಮ ದ್ವಿಚಕ್ರ ವಾಹನದಲ್ಲಿ ಬಂದಿದ್ದಾರೆ. ಆಗ ಎರಡೂ ಬೈಕ್‌ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಡಿಕ್ಕಿಯ ತೀವ್ರತೆಗೆ ಪದ್ಮ ಅವರು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಇನ್ನು ಅಪಘಾತದಲ್ಲಿ…

Read More