Author: admin

ಚುನಾವಣಾ ಆಯೋಗದ ಮಾಹಿತಿ ಪ್ರಕಾರ, ದೇಶದಲ್ಲಿ ಒಟ್ಟು 97 ಕೋಟಿ ನೋಂದಾಯಿತ ಮತದಾರರಿದ್ದಾರೆ. 10.5 ಲಕ್ಷಕ್ಕೂ ಹೆಚ್ಚು ಮತಗಟ್ಟೆಗಳು ಇವೆ. 1.5 ಕೋಟಿ ಸಿಬ್ಬಂದಿ, 55 ಲಕ್ಷ ಇವಿಎಂಗಳಿಂದ ಚುನಾವಣೆ ನಿರ್ವಹಿಸಲ್ಪಡುತ್ತವೆ. ಕರ್ನಾಟಕದಲ್ಲಿ ಏಪ್ರಿಲ್ 26ರಂದು ಹಾಗೂ ಮೇ 7ರಂದು ಮತದಾನ ನಡೆಯಲಿದೆ. ಜೂನ್ 4ರಂದು ಮತ ಎಣಿಕೆ, ಫಲಿತಾಂಶ ಪ್ರಕಟವಾಗಲಿದೆ. ದಕ್ಷಿಣ ಕರ್ನಾಟಕ ಎರಡನೇ ಹಂತದಲ್ಲಿ ಮತದಾನ ನಡೆದರೆ, ಉತ್ತರ ಕರ್ನಾಟಕ ಪ್ರದೇಶಗಳಲ್ಲಿ ಮೂರನೇ ಹಂತದಲ್ಲಿ ಮತದಾನ ನಡೆಯಲಿದೆ. ಏಪ್ರಿಲ್ 26ಕ್ಕೆ ಮತದಾನ ನಡೆಯಲಿರುವ ಕ್ಷೇತ್ರಗಳು: ಚಿತ್ರದುರ್ಗ ಉಡುಪಿ-ಚಿಕ್ಕಮಗಳೂರು ದಕ್ಷಿಣ ಕನ್ನಡ ಹಾಸನ ತುಮಕೂರು ಚಿಕ್ಕಬಳ್ಳಾಪುರ ಕೋಲಾರ ಮಂಡ್ಯ ಮೈಸೂರು-ಕೊಡಗು ಚಾಮರಾಜನಗರ ಬೆಂಗಳೂರು ಗ್ರಾಮಾಂತರ ಬೆಂಗಳೂರು ದಕ್ಷಿಣ ಬೆಂಗಳೂರು ಉತ್ತರ ಬೆಂಗಳೂರು ಕೇಂದ್ರ ಮೇ 7ರಂದು ಮತದಾನ ನಡೆಯಲಿರುವ ಕ್ಷೇತ್ರಗಳು: ಬೆಳಗಾವಿ ಬಳ್ಳಾರಿ ಚಿಕ್ಕೋಡಿ ಹಾವೇರಿ-ಗದಗ ಕಲಬುರಗಿ ಬೀದರ್​ ಹುಬ್ಬಳಿ – ಧಾರವಾಡ ಕೊಪ್ಪಳ ರಾಯಚೂರು ಉತ್ತರ ಕನ್ನಡ ದಾವಣಗೆರೆ ಶಿವಮೊಗ್ಗ ಬಾಗಲಕೋಟೆ ವಿಜಯಪುರ ನಮ್ಮತುಮಕೂರಿನ ಕ್ಷಣ ಕ್ಷಣದ…

Read More

ಪ್ರತಿದಿನ ಖಾಲಿ ಹೊಟ್ಟೆಯಲ್ಲಿ ನೆನೆಸಿಟ್ಟ ಬೆಂಡೆಕಾಯಿ ನೀರು ಕುಡಿಯಿರಿ: ಪ್ರತಿದಿನ ಖಾಲಿ ಹೊಟ್ಟೆಯಲ್ಲಿ ನೆನೆಸಿಟ್ಟ ಬೆಂಡೆಕಾಯಿ ನೀರನ್ನು ಕುಡಿಯುವುದರಿಂದ ಅನೇಕ ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದು ಎಂದು ತಜ್ಞರು ಹೇಳುತ್ತಾರೆ. ಇದರಲ್ಲಿ ವಿಟಮಿನ್ ಬಿ, ಸಿ, ಫೋಲಿಕ್ ಆಮ್ಲ ಮತ್ತು ಫೈಬ‌ರ್ ಸಮೃದ್ಧವಾಗಿದೆ. ಇದು ಕೊಲೆಸ್ಟ್ರಾಲ್ ಮಟ್ಟವನ್ನು ನಿಯಂತ್ರಿಸುತ್ತದೆ. ಹೃದಯದ ಆರೋಗ್ಯಕ್ಕೆ ಒಳ್ಳೆಯದು. ಇದಲ್ಲದೆ ಕ್ಯಾನ್ಸರ್ ವಿರೋಧಿ ಗುಣಗಳನ್ನು ಹೊಂದಿದೆ. ಕಣ್ಣಿನ ಆರೋಗ್ಯವನ್ನು ಸುಧಾರಿಸುತ್ತದೆ. ಬೆಂಡೆಕಾಯಿ ತೂಕ ಇಳಿಸಲು ಮತ್ತು ರಕ್ತದೊತ್ತಡವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಜೀರಿಗೆ ನೀರು ಕುಡಿದು ನೋಡಿ.. ಆರೋಗ್ಯಕ್ಕೆ ಬೆಸ್ಟ್: ಪ್ರತಿದಿನ ಜೀರಿಗೆ ನೀರು ಕುಡಿದರೆ ಜೀರ್ಣಕ್ರಿಯೆಗೆ ತುಂಬಾ ಒಳ್ಳೆಯದು. ಅಲ್ಲದೆ ಗ್ಯಾಸ್ಟ್ರಿಕ್ ಸಮಸ್ಯೆ ತಡೆಗಟ್ಟಲು ಸಹಕಾರಿ. ಇದು ಅಜೀರ್ಣ, ಬೇಧಿ, ವಾಂತಿ ಈ ಬಗೆಯ ಸಮಸ್ಯೆ ತಡೆಗಟ್ಟಲು ಸಹಕಾರಿ. ನೀವು ಊಟವಾದ ಬಳಿಕ ಅಥವಾ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಜೀರಿಗೆ ನೀರು ಕುಡಿಯಿರಿ. ಇದರ ಜೊತೆಗೆ ಈ ಜೀರಿಗೆ ನೀರು ಕುಡಿಯುವುದರಿಂದ ಅನೇಕ ಬಗೆಯ ಕ್ಯಾನ್ಸರ್ ತಡೆಗಟ್ಟಲು…

Read More

ಶಿವಮೊಗ್ಗ:  ಶಿವಮೊಗ್ಗದಲ್ಲಿ ತೋಗರ್ಸಿ ಹೊರವಲಯದ ಸ್ಮಶಾನದ ಬಳಿ ಯುವಕನೋರ್ವನನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ನಡೆದಿದೆ. ಶಿವಮೊಗ್ಗದ ಗಾಡಿಕೊಪ್ಪದ ಮೈಸೂರು ಬೀದಿ ನಿವಾಸಿ ವೀರೇಶ್ (27) ಹತ್ಯೆಗೀಡಾದ ಯುವಕನಾಗಿದ್ದಾನೆ. ರಾತ್ರಿ ಗಾಡಿಕೊಪ್ಪದ ಮನೆಯಲ್ಲಿದ್ದ ಯುವಕನಿಗೆ, ಕೆಲ ಪರಿಚಿತರು ಆತನ ಮೊಬೈಲ್ ಫೋನ್ ಗೆ ಕರೆ ಮಾಡಿದ್ದರು. ಸ್ನೇಹಿತರೋರ್ವರ ಇನ್ನೋವಾ ಕಾರಿನಲ್ಲಿ ವೀರೇಶ್ ತೆರಳಿದ್ದರು. ನಂತರ ಮನೆಗೆ ಹಿಂದಿರುಗಿರಲಿಲ್ಲ ಎಂದು ಸ್ಥಳೀಯರು ಹೇಳಿದ್ದಾರೆ. ಆತ ಕೊಂಡೊಯ್ದ ಇನ್ನೋವಾ ಕಾರಿನ ಡಿಕ್ಕಿಯಲ್ಲಿ, ಸಂಪೂರ್ಣ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಹಂತಕರು ಕಾರಿಗೆ ಬೆಂಕಿ ಹಚ್ಚಿ ಸುಟ್ಟಿರುವುದರಿಂದ ದೇಹ ಸಂಪೂರ್ಣ ಸುಟ್ಟು ಕರಕಲಾಗಿದೆ. ಘಟನಾ ಸ್ಥಳಕ್ಕೆ ಶಿಕಾರಿಪುರ ಪೊಲೀಸರು ಭೇಟಿಯಿತ್ತು ಪರಿಶೀಲನೆ ನಡೆಸಿದ್ದಾರೆ. ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದ ಹೆಚ್ಚಿನ ವಿವರಗಳು ಇನ್ನಷ್ಟೆ ತಿಳಿದು ಬರಬೇಕಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಕಲಬುರ್ಗಿ: 7ನೇ ವೇತನ ಆಯೋಗದ ಅಂತಿಮ ಶಿಫಾರಸು ಈಡೇಸುವ ಕರ್ತವ್ಯ ಮುಖ್ಯಮಂತ್ರಿ ಸಿದ್ದರಾಮಯ್ಯರದ್ದು ಇದೆ. ಆದರೆ, ಬಜೆಟ್ ನಲ್ಲಿ ಒಂದು ನಯಾಪೈಸೆ ಕೊಟ್ಟಿಲ್ಲ. ಸರ್ಕಾರಿ ನೌಕರರ ಮೂಗಿಗೆ ತುಪ್ಪ ಸವರುವ ಕೆಲಸ ಮಾಡಿದ್ದಾರೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಕಲಬುರ್ಗಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಏಳನೆ ವೇತನ ಆಯೋಗದ ವರದಿ ಜಾರಿ ಮಾಡಬೇಕು. ಚುನಾವಣೆ ಪೂರ್ವದಲ್ಲಿ ಬಿಜೆಪಿ ಸರ್ಕಾರ ಇದ್ದಾಗ ಸಿಎಂ ಸಿದ್ದರಾಮಯ್ಯ ಬಹಳಷ್ಟು ಭಾಷಣ ಮಾಡುತ್ತಿದ್ದರು. ಈಗ ಅವರು ಅಧಿಕಾರದಲ್ಲಿದ್ದಾರೆ. ನಾವು ಶೇಕಡಾ 17ರಷ್ಟು ಮಧ್ಯಂತರ ಪರಿಹಾರ ಕೊಟ್ಟಿದ್ದೇವು ಎಂದು ಹೇಳಿದರು. ಸಿದ್ದರಾಮಯ್ಯನವರಿಗೆ ಮಾರ್ಚ್ ಏಪ್ರಿಲ್ ನಲ್ಲಿ 7ನೇ ವೇತನ ಆಯೋಗದ ವರದಿ ಬರುತ್ತದೆ ಅಂತ ಗೊತ್ತಿದ್ದರೂ ಕೂಡಾ ಬಜೆಟ್ ನಲ್ಲಿ ಯಾವುದೇ ಹಣ ಮೀಸಲಿಡದೇ. ಸರ್ಕಾರಿ ನೌಕರರಿಗೆ ಮೂಗಿಗೆ ತುಪ್ಪ ಒರಿಸುವ ಕೆಲ್ಸ ಮಾಡಿದ್ದಾರೆ. ವರದಿ ಜಾರಿ ಆಗುತ್ತದೆಯೋ ಇಲ್ಲವೋ ಕಾದು ನೋಡಬೇಕು.. 7ನೇ ವೇತನ ಆಯೋಗದ ವರದಿ ರೆಡಿಯಾಗಿತ್ತು, ಆದರೂ ಆರು ತಿಂಗಳು ಕಾಲಾವಕಾಶ…

Read More

ನವದೆಹಲಿ: ಲೋಕಸಭಾ ಚುನಾವಣೆ 2024 ದಿನಾಂಕ ಇಂದು ಪ್ರಕಟಿಸಲಾಗಿದ್ದು, ದೇಶದ 543 ಲೋಕಸಭಾ ಕ್ಷೇತ್ರಗಳಿಗೆ ಒಟ್ಟು 7 ಹಂತಗಳಲ್ಲಿ ಚುನಾವಣೆ ನಡೆಯಲಿದ್ದು ಎಪ್ರಿಲ್ 19ರಂದು ಮೊದಲ ಹಂತದ ಚುನಾವಣೆ ನಡೆಯಲಿದೆ. ಜೂನ್ 4ರಂದು ಮತ ಎಣಿಕೆ ಹಾಗೂ ಫಲಿತಾಂಶ ಪ್ರಕಟಗೊಳ್ಳಲಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಘೋಷಿಸಿದ್ದಾರೆ. ಕರ್ನಾಟಕದಲ್ಲಿ 28 ಲೋಕಸಭಾ ಕ್ಷೇತ್ರಗಳಿಗೆ ಎರಡು ಹಂತದಲ್ಲಿ ಮತದಾನ ನಡೆಯಲಿದೆ. ಎಪ್ರಿಲ್ 26ರಂದು ಕರ್ನಾಟಕದಲ್ಲಿ ಮೊದಲ ಹಂತದ ಚುನಾವಣೆ ನಡೆಯಲಿದೆ. ಮೇ 7ರಂದು ಎರಡನೇ ಹಂತದ ಮತದಾನ ನಡೆಯಲಿದೆ. ದೆಹಲಿ ವಿಜ್ಞಾನ ಭವನದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಚುನಾವಣಾ ದಿನಾಂಕ ಘೋಷಣೆ ಮಾಡಿ, ಚುನಾವಣೆ ಬಗ್ಗೆ ಮಾಹಿತಿ ನೀಡಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಕಲಬುರ್ಗಿ: ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಕೂಗಿದವರ ವಿರುದ್ಧ ಕಾಂಗ್ರೆಸ್ ಯಾವುದೇ ಕ್ರಮ ಕೈಗೊಂಡಿಲ್ಲ. ಹಾಗಾಗಿ ಕಾಂಗ್ರೆಸ್ ನಲ್ಲಿ ಚುನಾವಣೆಗೆ ನಿಲ್ಲಲು ಯಾರೂ ರೆಡಿಯಿಲ್ಲ ಎಂದು ವಿಪಕ್ಷ ನಾಯಕ ಆರ್. ಅಶೋಕ್ ವಾಗ್ದಾಳಿ ನಡೆಸಿದ್ದಾರೆ. ಕಲಬುರ್ಗಿಯಲ್ಲಿ ಬಿಜೆಪಿ ಸಂಕಲ್ಪ ಸಮಾವೇಶದಲ್ಲಿ ಮಾತನಾಡಿದ ವಿಪಕ್ಷ ನಾಯಕ ಆರ್. ಅಶೋಕ್, ಕಾಂಗೆಸ್ ನ ಯಾವುದೇ ಅಭ್ಯರ್ಥಿಗಳು ನಿಲ್ಲಲು ರೆಡಿಯಿಲ್ಲ. ಯುದ್ಧಕ್ಕೆ ಮುನ್ನವೇ ಸೋಲನ್ನು ಒಪ್ಪಿಕೊಂಡಿದ್ದಾರೆ. ಮೋದಿಯಿಂದ ಮಾತ್ರ ಈ ದೇಶದ ರಕ್ಷಣೆ ಸಾಧ್ಯ. ಒಂದೇ ಒಂದು ಕಾಳು ಅಕ್ಕಿಯನ್ನು ಸಿಎಂ ಸಿದ್ದರಾಮಯ್ಯ ಕೊಟ್ಟಿಲ್ಲ. ಅದನ್ನು ಕೊಟ್ಟಿದ್ದು ನರೇಂದ್ರ ಮೋದಿ ಎಂದು ಹೇಳಿದರು. ಸಿದ್ದರಾಮಯ್ಯ ಅನ್ನ ನೀಡಲು ಬಂದಿಲ್ಲ, ಕನ್ನ ಹಾಕಲು ಬಂದಿದ್ದಾರೆ. ಲೂಟಿ ಮಾಡಲು ಸಿದ್ದರಾಮಯ್ಯ ಬಂದಿರುವುದು. ಸಿದ್ದರಾಮಯ್ಯ ಕಾಲಿಟ್ಟಿದ್ದೇ ಇಟ್ಟಿದ್ದು, ಬರಗಾಲ ಆರಂಭವಾಗಿದೆ. ಈ ಹಿಂದೆಯೂ ಸಿದ್ದರಾಮಯ್ಯ ಅಧಿಕಾರದಲ್ಲಿದ್ದಾಗ ಬರಗಾಲ ಬಂದಿತ್ತು. ಆಮೇಲೆ ಯಡಿಯೂರಪ್ಪ ಸಿಎಂ ಆದಾಗ ಎಲ್ಲೆಲ್ಲೂ ಮಳೆ. ಸಿದ್ದರಾಮಯ್ಯನವರೇ ನಿಮಗೆ ಆತ್ಮಸಾಕ್ಷಿ ಇದ್ದರೆ ಅಭಿವೃದ್ಧಿಗೆ ಒಂದು ರೂಪಾಯಿ ಕೊಟ್ಟಿದ್ದೀರಾ ಹೇಳಿ? ಎಂದು…

Read More

ಕಲಬುರಗಿ: ರಾಜ್ಯಕ್ಕೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು ಕಲಬುರಗಿಯಲ್ಲಿ ಎನ್ ವಿ ಗ್ರೌಂಡ್ ನಲ್ಲಿ ನಡೆಯುತ್ತಿರುವ ಬಿಜೆಪಿ ಸಂಕಲ್ಪ ಸಮಾವೇಶದ ವೇದಿಕೆಗೆ ಆಗಮಿಸಿದ್ದು, ಕನ್ನಡದಲ್ಲೇ ಭಾಷಣ ಆರಂಭಿಸಿದ್ದಾರೆ. ಬಸವೇಶ್ವರರ ನಾಡಿಗೆ ನನ್ನ ನಮಸ್ಕಾರಗಳು ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ್ದಾರೆ. ಸಮಾವೇಶಕ್ಕೆ ಆಗಮಿಸಿದ ಪ್ರಧಾನಿ ಮೋದಿ ಅವರಿಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ಪೇಠ ತೊಡಿಸಿದರು. ಬಸವರಾಜ ಬೊಮ್ಮಾಯಿ ಅವರು ಪ್ರಧಾನಿ ಮೋದಿಗೆ ಕಂಬಳಿ ಶಾಲು ಹಾಕಿದರು. ಭಗವಂತ ಖೂಬಾ ಮತ್ತು ಸಂಸದ ಉಮೇಶ್ ಜಾಧವ್ ಅವರು ಮೋದಿ ಅವರಿಗೆ ಹಾರ ಹಾಕಿ ಸನ್ಮಾನಿಸಿದರು. ತೆಲಂಗಾಣದಿಂದ ಸೇನಾ ಹೆಲಿಕಾಪ್ಟರ್ ಮೂಲಕ ಕಲಬುರಗಿಗೆ ಆಗಮಿಸಿದ್ದು, ಕನ್ನಡಿಗರು ಜೈ ಶ್ರೀ ರಾಮ್. ನಮೋ ನಮೋ ಎಂದು ಘೋಷಣೆಗಳನ್ನು ಕೂಗಿ ಸ್ವಾಗತ ಕೋರಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಬೆಂಗಳೂರು: ಬೆಂಗಳೂರಿನ ತಿಲಕ್‌ ನಗರದಲ್ಲಿ ರಸ್ತೆ ಬದಿ ನಿಂತಿದ್ದ ಕಾರಿನ ಬಾಗಿಲು ದಿಢೀರ್ ತೆರೆದ ಪರಿಣಾಮ ರಸ್ತೆಯಲ್ಲಿ ಸಾಗುತ್ತಿದ್ದ ಬೈಕ್ ಸವಾರ ಅದಕ್ಕೆ ಡಿಕ್ಕಿಯಾಗಿ ಮೃತಪಟ್ಟ ಘಟನೆ ನಡೆದಿದೆ. ವೆಂಕಟೇಶ್(53) ಮೃತಪಟ್ಟ ದುರ್ದೈವಿಯಾಗಿದ್ದಾರೆ. ಕೆಲಸ ಮುಗಿಸಿಕೊಂಡು ವೆಂಕಟೇಶ್ ಅವರು, ದ್ವಿಚಕ್ರ ವಾಹನದಲ್ಲಿ ಮನೆಗೆ ವಾಪಾಸ್ ಆಗುತ್ತಿದ್ದಾಗ ರಸ್ತೆ ಬದಿ ನಿಂತಿದ್ದ ಕಾರಿನೊಳಗಿದ್ದವರು ದಿಢೀರ್ ಆಗಿ ಬಾಗಿಲು ತೆರೆದಿದ್ದಾರೆ. ಇದರಿಂದ ಕಾರಿನ ಬಾಗಿಲು ವೆಂಕಟೇಶ್ ತಲೆಗೆ ತಾಗಿ ಗಂಭೀರ ಗಾಯವಾಗಿತ್ತು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದು ಅಲ್ಲಿ ಅವರು ಮೃತಪಟ್ಟಿದ್ದಾರೆ. ಈ ಕುರಿತು ಮೈಕೊಲೇಔಟ್ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಹುಬ್ಬಳ್ಳಿ: ಪ್ರೀತಿಸಿದ ಹುಡುಗಿಯನ್ನು ಚುಡಾಯಿಸಿದ್ದಕ್ಕೆ ಸಿಟ್ಟಾದ ಯುವಕನೊಬ್ಬ ಹುಬ್ಬಳ್ಳಿಯ ವರೂರಿನ ಜಗದೀಶ್ ಡಾಬಾದಲ್ಲಿ ಯುವಕನ ಮೇಲೆ ಕೊಡಲಿಯಿಂದ ದಾಳಿ ಮಾಡಿ ಕೊಲೆ ಮಾಡಿದ್ದಾನೆ. ಸುಧೀರ್‌ ಹುಲಗೂರು(31) ಹತ್ಯೆಯಾದವನು. ಸಾಗರ್ ಗಾಬಣ್ಣವರ್ ಕೊಲೆ ಆರೋಪಿಯಾಗಿದ್ದಾನೆ. ಸಾಗರ್ ಪ್ರೀತಿಸುತ್ತಿದ್ದ ಹುಡುಗಿಯನ್ನು ಸುಧೀರ್‌ ಚುಡಾಯಿಸಿದ್ದ. ಇದೇ ವಿಚಾರಕ್ಕೆ ಸಾಗರ್‌ ಹಾಗೂ ಸುಧೀರ್‌ ನಡುವೆ ಡಾಬಾದಲ್ಲಿ ಗಲಾಟೆ ಶುರುವಾಗಿದ್ದು, ಮಾತಿಗೆ ಮಾತು ಬೆಳೆದಾಗ ಸಿಬ್ಬಂದಿ ಸಮಾಧಾನ ಮಾಡಿ ಹೊರಕಳಿಸಿದ್ದರು. ಡಾಬಾದಲ್ಲಿ ಊಟ ಮಾಡಿ ಹೊರಬರುತ್ತಿದ್ದ ಸುಧೀರ್‌ ಮೇಲೆ ಸಾಗರ್‌ ಒಮ್ಮೆಲೆ ದಾಳಿ ಮಾಡಿ, ಕೊಡಲಿ ಬೀಸಿ ಸುಧೀರ್‌ನನ್ನು ಕೊಲೆ ಮಾಡಿದ್ದಾನೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಹುಬ್ಬಳ್ಳಿ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ಸಂಬಂಧ ಆರೋಪಿ ಸಾಗರ್‌ ನನ್ನು ಬಂಧಿಸಿದ್ದಾರೆ. ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ನಡೆಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 …

Read More

ನಿಮ್ಮ ದೇಹದ ಕೊಬ್ಬಿನಾಂಶ ಕರಗಿಸಲು ಈ ಜ್ಯೂಸ್ ಸೇವಿಸಿ: ಇತ್ತೀಚಿನ ದಿನದಲ್ಲಿ ತೂಕ ಕಳೆದುಕೊಳ್ಳುವುದು ಅತೀ ಸಾಹಸದ ಕೆಲಸ. ಆದರೆ ಕೆಲ ಆಹಾರದ ಮೂಲಕ ನಾವು ಸುಲಭವಾಗಿ ತೂಕ ಕಳೆದುಕೊಳ್ಳಬಹುದು. ಅದಕ್ಕೆ ಈ ಜ್ಯೂಸ್ ಗಳು ಸಹಾಯ ಮಾಡುತ್ತದೆ. ಬೀಟ್ರೂಟ್ ಜ್ಯೂಸ್ ಸೇವನೆಯಿಂದ ಪೌಷ್ಟಿಕಾಂಶ ಸಿಗುತ್ತದೆ. ಹಿಮೋಗ್ಲೋಬಿನ್ ಮಟ್ಟವನ್ನು ಹೆಚ್ಚಿಸುತ್ತದೆ. ಕ್ಯಾರೆಟ್ ಜ್ಯೂಸ್ ತೂಕ ನಷ್ಟಕ್ಕೆ ಸಹಾಯ ಮಾಡುತ್ತದೆ. ಹೊಟ್ಟೆ ಸಮಸ್ಯೆ ನಿವಾರಣೆಗೆ ಎಲೆಕೋಸು, ಪಾಲಕ್ ಜ್ಯೂಸ್ ಕುಡಿಯಬಹುದು. ಸೌತೇಕಾಯಿ ಜ್ಯೂಸ್, ಅಲೋವೆರಾ ಜ್ಯೂಸ್ ಸೇವನೆಯಿಂದ ಕೊಬ್ಬು ಕರಗಿಸಬಹುದು. ಉಪವಾಸ ಇರುವಾಗ ಇವುಗಳನ್ನು ತಿಂದರೆ ದಿನವಿಡೀ ಸುಸ್ತಾಗುವುದಿಲ್ಲ..!: ಖರ್ಜೂರವು ನೈಸರ್ಗಿಕ ಸಕ್ಕರೆಗಳಾದ ಗ್ಲೋಕೋಸ್ & ಸುಕ್ರೋಸ್ ಹೊಂದಿರುತ್ತದೆ. ಉಪವಾಸದ ವೇಳೆ ದೇಹಕ್ಕೆ ಶಕ್ತಿ ನೀಡುತ್ತವೆ. ಗೆಣಸು ಕರಗದ ಫೈಬರ್, ವಿಟಮಿನ್ & ಸಂಕೀರ್ಣ ಕಾರ್ಬೋಹೈಡ್ರೆಟ್ ಹೊಂದಿರುತ್ತದೆ. ಇವು ಕಡಿಮೆ ಗೈಸೆಮಿಕ್ ಸೂಚಿ ಹೊಂದಿದ್ದು ತಿಂದ ನಂತರ ರಕ್ತದಲ್ಲಿನ ಸಕ್ಕರೆ ನಿಧಾನವಾಗಿ ಹೆಚ್ಚಾಗಿ ದಿನವಿಡೀ ಶಕ್ತಿ ನೀಡುತ್ತದೆ. ಓಟ್ಸ್ ಪ್ರೋಟೀನ್, ಕರಗದ ಫೈಬ‌ರ್,…

Read More