Subscribe to Updates
Get the latest creative news from FooBar about art, design and business.
- ಸಿರಾದಲ್ಲಿ ಮೇ 26 ರಂದು ಜೆಡಿಎಸ್ ಪಕ್ಷದ ಪದಾಧಿಕಾರಿಗಳ ನೇಮಕಾತಿ ಕಾರ್ಯಕ್ರಮ
- ಮಕ್ಕಳ ಕೈಗೆ ಮೊಬೈಲ್ ಕೊಡುವ ಮುನ್ನ ಈ ಸುದ್ದಿ ಓದಿ: 1.98 ಲಕ್ಷ ರೂಪಾಯಿ ಕಳೆದುಕೊಂಡ ತುಮಕೂರಿನ ವ್ಯಕ್ತಿ!
- ಚಿಲ್ಲರೆಗಳಿಗೆ ನಾನು ಹೆದರುವ ಮಗನೇ ಅಲ್ಲ ಕೀಳುಮಟ್ಟದ ರಾಜಕಾರಣ ನನಗೆ ಗೊತ್ತಿಲ್ಲ: ಶಾಸಕ ಎಸ್. ಆರ್.ಶ್ರೀನಿವಾಸ್ ತಿರುಗೇಟು
- ತುಮಕೂರು ಜಿಲ್ಲೆಯಲ್ಲಿ 0.3 ಮಿ.ಮೀ. ಮಳೆ
- ಕೆಎಸ್ ಆರ್ ಟಿಸಿ ಬಸ್ ದರ ಏರಿಕೆ ಖಚಿತ: ಸಾರಿಗೆ ಸಂಸ್ಥೆ ಅಧ್ಯಕ್ಷ ಎಸ್.ಆರ್. ಶ್ರೀನಿವಾಸ್
- ಜನರ ಏಳಿಗೆಗಾಗಿ ಯೋಜನೆಗಳು ಜಾರಿ, ಸರ್ಕಾರಿ ಯೋಜನೆಗಳು ಮತಗಳಿಕೆಗೆ ಅಲ್ಲ: ಶಾಸಕ ಕೆ.ಎನ್.ರಾಜಣ್ಣ
- ಪಾವಗಡ: ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಪ್ರಾಂಶುಪಾಲರಿಗೆ ಬೀಳ್ಕೊಡುಗೆ ಸಮಾರಂಭ
- ದೇಶದ 2ನೇ ಅತಿ ದೊಡ್ಡ ಕ್ರಿಕೆಟ್ ಕ್ರೀಡಾಂಗಣಕ್ಕೆ ಸಿಎಂ ಸಿದ್ದರಾಮಯ್ಯ ಶಂಕುಸ್ಥಾಪನೆ
Author: admin
ಲೋಕಸಭೆ ಚುನಾವಣೆಗೂ ಮುನ್ನ ಶಾಲಾ ಶಿಕ್ಷಣ ಇಲಾಖೆ ಮಹತ್ವದ ನಿರ್ಧಾರ ಕೈಗೊಂಡಿದೆ. ಹೌದು ಶಾಲಾ ಶಿಕ್ಷಕರಿಗೆ ಇದೀಗ ಶಿಕ್ಷಣ ಇಲಾಖೆ ಡ್ರೆಸ್ ಕೋಡ್ ನಿಯಮವನ್ನು ಜಾರಿಗೆ ತಂದಿದೆ. ಅಂದ ಹಾಗೆ ಈ ನೂತನ ವಸ್ತ್ರ ಸಂಹಿತೆ ಜಾರಿಗೆ ಬಂದಿರುವುದು ಮಹಾರಾಷ್ಟ್ರ ರಾಜ್ಯದಲ್ಲಿ. ಈ ಕೂಡಲೇ ಮಹಾರಾಷ್ಟ್ರ ರಾಜ್ಯದಲ್ಲಿ ನೂತನ ವಸ್ತ್ರ ಸಂಹಿತೆಯನ್ನು ಜಾರಿಗೆ ತಂದಿದ್ದಾರೆ. ಇದೀಗ ಅಲ್ಲಿ ಕಾರ್ಯ ನಿರ್ವಹಿಸುವ ಎಲ್ಲಾ ಶಿಕ್ಷಣ ಸಂಸ್ಥೆಗಳಲ್ಲಿ ಶಿಕ್ಷಕರಿಗೆ ದೈನಂದಿನ ಡ್ರೆಸ್ ಕೋಡ್ ಬಗ್ಗೆ ಶಿಕ್ಷಣ ಇಲಾಖೆ ಮಾರ್ಗಸೂಚಿಗಳನ್ನು ಹೊರಡಿಸಿದೆ. ಮಹಿಳಾ ಶಿಕ್ಷಕರು ಸೀರೆ ಅಥವಾ ಸಲ್ವಾರ್/ಚೂಡಿದಾರ್, ಕುರ್ತಾ ಮತ್ತು ಪುರುಷ ಶಿಕ್ಷಕರು ಶರ್ಟ್ ಮತ್ತು ಟ್ರೌಸರ್ ಪ್ಯಾಂಟ್ ಧರಿಸಬೇಕು. ಜೀನ್ಸ್ ಟೀ ಶರ್ಟ್ ಕೆಲಸ ಮಾಡುವುದಿಲ್ಲ, ವಾಸ್ತವವಾಗಿ ಗ್ರಾಫಿಕ್ ಡಿಸೈನ್ ಇರುವ ಶರ್ಟ್ ಧರಿಸಬಾರದು ಎಂದು ಶಾಲಾ ಶಿಕ್ಷಣ ಇಲಾಖೆ ಎಚ್ಚರಿಕೆ ನೀಡಿದೆ. ಶಿಕ್ಷಣ ಸಚಿವ ದೀಪಕ್ ಕೇಸರ್ಕರ್ ಮಹತ್ವದ ಘೋಷಣೆ ಮಾಡಿದ್ದು, ವಿದ್ಯಾರ್ಥಿಗಳಿಗೆ ಸಮವಸ್ತ್ರ ಕಡ್ಡಾಯವಾಗಿರುವಂತೆಯೇ ಈಗ ರಾಜ್ಯದ ಎಲ್ಲ ಶಿಕ್ಷಕರಿಗೂ…
ಕೊಲೆ ಆರೋಪಿಯೊಬ್ಬ ಜೈಲಿನಿಂದಲೇ ಲೈವ್ ಸ್ಟ್ರೀಮಿಂಗ್ ಮಾಡಿದ್ದಲ್ಲದೆ ಇದು ಸ್ವರ್ಗ ಎಂದು ಜೈಲನ್ನು ಬಣ್ಣಿಸಿರುವ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ. ಆತ ಈಗ ಬರೇಲಿ ಕೇಂದ್ರ ಕಾರಾಗೃಹದಲ್ಲಿದ್ದಾನೆ, ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿರುವುದಾಗಿ ವರದಿ ತಿಳಿಸಿದೆ. ಇಲ್ಲೊಬ್ಬ ಕೊಲೆ ಆರೋಪಿ ಜೈಲಿನಿಂದ ಲೈವ್ ಸ್ಟ್ರೀಮ್ ಮಾಡಿದ್ದಲ್ಲದೆ, ಇದು ಸ್ವರ್ಗವೆಂದು ಹೇಳಿರುವ ವಿಡಿಯೋ ಇದೀಗ ವೈರಲ್ ಆಗಿದೆ. ನಾನು ಇಲ್ಲಿ ಎಂಜಾಯ್ ಮಾಡುತ್ತಿದ್ದೇನೆ, ಇದು ಸ್ವರ್ಗ ಎಂದು ಹೇಳಿರುವ ವಿಡಿಯೋ ವೈರಲ್ ಆದ ಬಳಿಕ ಹೆಚ್ಚಿನ ತನಿಖೆಗೆ ಆದೇಶಿಸಲಾಗಿದೆ, ತನಿಖೆಯಲ್ಲಿ ಯಾರೇ ತಪ್ಪಿತಸ್ಥರು ಎಂದು ಕಂಡುಬಂದರೂ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಲೈವ್ ನ 2 ನಿಮಿಷಗಳ ಉದ್ದೇಶಿತ ವೀಡಿಯೊವು ಕೊಲೆ ಆರೋಪಿ ಆಸಿಫ್ ನದ್ದಾಗಿದ್ದು, ಶೀಘ್ರದಲ್ಲೇ ಜೈಲಿನಿಂದ ಹೊರಬರಲಿದ್ದೇನೆ ಎಂದು ಹೇಳುವುದು ಪ್ರಸಾರವಾಗಿದೆ. 2019 ರ ಡಿಸೆಂಬರ್ 2 ರಂದು ದೆಹಲಿಯ ಶಹಜಾನ್ಪುರದ ಸದರ್ ಬಜಾರ್ ಪೊಲೀಸ್ ಠಾಣೆ ಪ್ರದೇಶದಲ್ಲಿ ಲೋಕೋಪಯೋಗಿ ಇಲಾಖೆ (ಪಿಡಬ್ಲ್ಯುಡಿ) ಗುತ್ತಿಗೆದಾರ ರಾಕೇಶ್…
ಪಾನಿಪೂರಿ ತಿಂದು 19 ಮಂದಿ ಮಕ್ಕಳು ಅಸ್ವಸ್ಥಗೊಂಡ ಘಟನೆ ಹರಿಹರ ತಾಲೂಕಿನ ಮಲೇ ಬೆನ್ನೂರಿನಲ್ಲಿ ನಡೆದಿದೆ. ಮಲೇಬೆನ್ನೂರಿನ ಜಾಮಿಯಾ ಮಸೀದಿ ಬಳಿ ಉಪವಾಸ ಅಂತ್ಯ ಮಾಡಿದ ನಂತರ ಮಸೀದಿ ಮುಂಭಾಗ ಪಾನಿ ಪೂರಿ ಸೇವಿಸಿದ 19 ಮಕ್ಕಳು ಅಸ್ವಸ್ಥಗೊಂಡಿದ್ದಾರೆ. ಕೂಡಲೇ ಅವರನ್ನು ಸರ್ಕಾರಿ ಆಸ್ಪತ್ರೆ ಗೆ ದಾಖಲಿಸಲಾಗಿದೆ, ಅದರಲ್ಲಿ ನಾಲ್ಕು ಮಕ್ಕಳ ಸ್ಥಿತಿ ಚಿಂತಾಜನಕವಾಗಿದೆ. ದಾವಣಗೆರೆ ಬಾಪೂಜಿ ಆಸ್ಪತ್ರೆಯ ತೀವ್ರ ನಿಗಾ ಘಟಕಕ್ಕೆ ಸ್ಥಳಾಂತರ ಮಾಡಲಾಗಿದೆ ಎಂದು ವರದಿ ತಿಳಿಸಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಮಂಡ್ಯದಲ್ಲಿ ಮಾತನಾಡಿದ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ, ಸುಮಲತಾ ಅಂಬರೀಶ್ ನನ್ನ ಅಕ್ಕ ಇದ್ದಂತೆ. ರಾಜಕೀಯವಾಗಿ ಈ ಹಿಂದೆ ಏನೋ ಆಗಿತ್ತು. ಈಗ ಅದು ಮುಗಿದ ಕಾಲ. ನಾನು ಸುಮಲತಾ ಅವರ ಜೊತೆ ಸಂಘರ್ಷವನ್ನು ಮುಂದುವರಿಸಲ್ಲ ಎಂದು ಹೇಳಿದ್ದಾರೆ. ಇನ್ನು ಅಭ್ಯರ್ಥಿ ಘೋಷಣೆ ಮಾಡದ ಬಗ್ಗೆ ಕಾರ್ಯಕರ್ತರಲ್ಲ ಗೊಂದಲವಿದೆ. ಮಂಡ್ಯ ಕ್ಷೇತ್ರ ನಿರ್ಲಕ್ಷ ಮಾಡುತ್ತಿದ್ದಾರೆ ಅನ್ನೋ ಪ್ರಶ್ನೆ ಹಲವರಲ್ಲಿ ಇದೆ. ಇಂದಿನ ಸಭೆಯಲ್ಲಿ ನಾವು ಸಂದೇಶ ಕೊಡುವುದಕ್ಕಿಂತ ನೀವೇ ಕೊಟ್ಟಿದ್ದೀರಿ. ಹಾಸನ ಲೋಕಸಭಾ ಕ್ಷೇತ್ರದಲ್ಲಿ ಕೆಲವು ಗೊಂದಲ ಇತ್ತು. ಹೀಗಾಗಿ ನಾನೇ ಹಾಸನಕ್ಕೆ ಹೋಗಿ ಅಪಪ್ರಚಾರ ಅಂತ್ಯವಾಡಿದ್ದೇನೆ ಎಂದು ಅವರು ತಿಳಿಸಿದರು. ಎಚ್.ಡಿ. ದೇವೇಗೌಡರಿಗೆ ರಾಜಕೀಯವಾಗಿ ಹಾಸನಕ್ಕಿಂತ ಮಂಡ್ಯ ಹೆಚ್ಚು ಶಕ್ತಿ ನೀಡಿದೆ. ನಾನು ನನ್ನ ಕುಟುಂಬದ ಯಾರು ಯಾರಿಗೂ ದ್ರೋಹ ಮಾಡಿದವರಲ್ಲ. ಬೆಳೆಯುವರನ್ನು ಹಿಂದೆ ನಿಂತು ಶಕ್ತಿ ತುಂಬಿದ್ದೇವೆ. ನಾನು ಅಥವಾ ನಿಖಿಲ್ ಸ್ಪರ್ಧಿಯುಸುವ ನಿಮ್ಮ ಮಾತಿಗೆ ನಮಸ್ಕರಿಸುತ್ತೇನೆ. ನಿಮ್ಮ ಮಾತಿಗೆ ಅಪಚಾರ ಮಾಡಲು ಹೋಗುವುದಿಲ್ಲ ಎಂದು ಹೆಚ್ ಡಿಕೆ…
ರಾಯಚೂರು ಜಿಲ್ಲೆ ಲಿಂಗಸಗೂರು ಪಟ್ಟಣದ ಎನ್ ಜಿಎಲ್ ಲಾಡ್ಜ್ ಬಳಿ ಪೊದೆಯೊಂದರಲ್ಲಿ ಮಹಿಳೆಯೋರ್ವರನ್ನು ಬರ್ಬರವಾಗಿ ಕೊಚ್ಚಿ ಕೊಲೆ ಮಾಡಲಾಗಿತ್ತು. ವಿಜಯಲಕ್ಷ್ಮೀ ಅನ್ನೋ ಹೆಸರಿನ ಮಹಿಳೆ, ಮಸ್ಕಿ ತಾಲ್ಲೂಕಿನ ಅಂಕುಶದೊಡ್ಡಿ ಗ್ರಾಮದ ಮಹಿಳೆಯೇ ಬರ್ಬರವಾಗಿ ಕೊಲೆಯಾದಾಕೆ. ಪೊಲೀಸರು ಸ್ಥಳಕ್ಕೆ ಧಾವಿಸಿದ್ದು ನಂತರ ತನಿಖೆ ಮೂಲಕ ಗೊತ್ತಾಗಿದ್ದೇ ಇದೊಂದು ಅನೈತಿಕ ಸಂಬಂಧದ ಕೊಲೆ ಎಂದು. ತನಿಖೆ ಮುಂದುವರಿಸಿದಾಗ ತಿಳಿದು ಬಂದಿದ್ದೇ 22 ವರ್ಷದ ಚಿಗುರು ಮೀಸೆಯ ಯುವಕನ ಹೆಸರು. ಆತನ ಹೆಸರೇ ದೇವಣ್ಣ. ವಿಜಯಲಕ್ಷ್ಮೀ ಗಂಡ ಎರಡು ವರ್ಷಗಳ ಹಿಂದೆ ತೀರಿಹೋಗಿದ್ದ. ಆಗ ಗಂಡನ ಮನೆ ಬಿಟು ಮಗನೊಂದಿಗೆ ವಿಜಯಲಕ್ಷ್ಮೀ ತವರು ಸೇರಿದಳು. ನಂತರ ಆಕೆ ಕೂಲಿ ಕೆಲಸ ಮಾಡಿ ಜೀವನ ಸಾಗಿಸುತ್ತಿದ್ದಳು. ವಿಜಯಲಕ್ಷ್ಮೀ ಗಾರೆ ಕೆಲಸ ಮಾಡುತ್ತಿದ್ದ ಅದೇ ಗ್ರಾಮದ ದೇವಣ್ಣ ಅನ್ನೋನ ಪರಿಚಯವಾಗಿತ್ತು. ಈ ದೇವಣ್ಣ ವಿಜಯಲಕ್ಷ್ಮೀಯನ್ನು ಕಂಡಾಗೆಲ್ಲ ಅತ್ತೆ ಅತ್ತೆ ಎಂದು ಕರೆಯುತ್ತಿದ್ದ. ಆದರೆ ಆತ ಯಾವುದೇ ಸುಳಿವಿಲ್ಲದೇ ವಿಜಯಲಕ್ಷ್ಮೀಗೆ ಹತ್ತಿರವಾಗಿದ್ದ. ಪರಿಚಯ ನಡೆದು, ನಂತರ ಸಲುಗೆ ಬೆಳೆದು, ಸಲುಗೆ…
ಸಿಎಎ ಅಡಿಯಲ್ಲಿ ಭಾರತೀಯ ಪೌರತ್ವಕ್ಕೆ ಅರ್ಜಿ ಸಲ್ಲಿಸುವ ಅರ್ಹರ ಅನುಕೂಲಕ್ಕಾಗಿ ಕೇಂದ್ರ ಗೃಹ ಸಚಿವಾಲಯ ಶುಕ್ರವಾರ ಮೊಬೈಲ್ ಬಿಡುಗಡೆ ಮಾಡಿದೆ. ʼಸಿಎಎ-2019′ ಮೊಬೈಲ್ ಆಪ್ ಅನ್ನು ಗೂಗಲ್ ಪ್ಲೇ ಸ್ಟೋರ್ indiancitizenshipon- line.nic.in ವೆಬ್ಸೈಟ್ ಮೂಲಕ ಡೌನ್ ಲೋಡ್ ಮಾಡಿಕೊಳ್ಳಬಹುದು ಎಂದು ಗೃಹ ಸಚಿವಾಲಯ ತಿಳಿಸಿದೆ. ಈ ಹಿಂದೆ ಸರಕಾರವು ಸಿಎಎ ಅಡಿಯಲ್ಲಿ ಭಾರತೀಯ ಪೌರತ್ವಕ್ಕಾಗಿ ಅರ್ಜಿ ಸಲ್ಲಿಸಲು ಈ ವೆಬ್ ಸೈಟ್ ಆರಂಭಿಸಿದೆ. ಈಗ ಮೊಬೈಲ್ ಆಪ್ ಕೂಡ ಪರಿಚಯಿಸಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಬ್ಯಾಡಗಿ ತಾಲೂಕಿನ ಕದರಮಂಡಲಗಿ ಕಾಂತೇಶಸ್ವಾಮಿ ಮಂದಿರದಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಪಕ್ಷದ ಕಾರ್ಯಕರ್ತರ ಮೇಲೆ ಹೆಜ್ಜೇನು ದಾಳಿ ನಡೆದಿದೆ. ಅದೃಷ್ಟವಶಾತ್ ಬಸವರಾಜ ಬೊಮ್ಮಾಯಿ ಅವರು ಪಾರಾಗಿದ್ದಾರೆ. ಕಾಂತೇಶಸ್ವಾಮಿ ದರ್ಶನ ಪಡೆಯಲು ತೆರಳಿದ ಸಮಯದಲ್ಲಿ ಈ ಘಟನೆ ಸಂಭವಿಸಿದೆ. ಬೊಮ್ಮಾಯಿ ಅವರನ್ನು ಮುಖಂಡರು ಪಾರು ಮಾಡಿದ್ದಾರೆ. ಬೊಮ್ಮಾಯಿ ಅವರ ಕಾರಿನ ಚಾಲಕ ಹಾಗೂ ಕೆಲ ಕಾರ್ಯಕರ್ತರಿಗೆ ಹೆಜ್ಜೇನು ಕಡಿದ ಪರಿಣಾಮ ಚಿಕಿತ್ಸೆಗೆ ಕಳಿಸಲಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ತುಮಕೂರು: ಇತ್ತೀಚಿಗಷ್ಟೇ ಹಾಸನ ಜಿಲ್ಲೆಯ ಗೊರೂರಿನ ಹೇಮಾವತಿ ಜಲಾಶಯದಿಂದ, ತುಮಕೂರು ನಗರದ ಕುಡಿಯುವ ನೀರಿನ ಉಪಯೋಗಕ್ಕಾಗಿ ಬಿಡುಗಡೆಗೊಳಿಸಲಾಗಿರುವ ನೀರಿನ ಪ್ರಮಾಣದ ಕುರಿತು, ಜಿಲ್ಲಾ ಉಸ್ತುವಾರಿ ಸಚಿವ ಪರಮೇಶ್ವರ್ ಇಂದು ಭುಗುಡನಹಳ್ಳಿ ಕೆರೆಗೆ ಭೇಟಿ ನೀಡಿ ಅಧಿಕಾರಿಗಳಿಂದ ಮಾಹಿತಿ ಪಡೆದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಹಾಗೂ ಪಾಲಿಕೆ ಅಧಿಕಾರಿಗಳು ಸ್ಥಳದಲ್ಲಿದ್ದು ಸಚಿವ ಪರಮೇಶ್ವರ್ ಅವರಿಗೆ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಎನ್ ಡಿ ಆರ್ ಎಫ್ ಯೋಜನೆಯಡಿ ಕೇಂದ್ರ ಸರ್ಕಾರದಿಂದ ಬರಬೇಕಾಗಿರುವ ಹಣವನ್ನು ಬಿಡುಗಡೆ ಮಾಡದೇ ಅನ್ಯಾಯ ಎಸೆಗಲಾಗಿದೆ. ರಾಜ್ಯದಲ್ಲಿ ಬರ ಪರಿಹಾರ ಕಾಮಗಾರಿ, ಉದ್ಯೋಗ ನಷ್ಟ ಬೆಳೆ ನಷ್ಟ ಸೇರಿದಂತೆ ಅನೇಕ ನಷ್ಟವನ್ನು ಸರಿದೂಗಿಸಲು 36,000 ಕೋಟಿ ಅಂದಾಜು ಮಾಡಲಾಗಿದೆ ಆದರೆ ಅದರಲ್ಲಿ ಅರ್ಧ ಭಾಗ ಕನಿಷ್ಠ 18000 ಕೋಟಿ ಹಣವನ್ನು ಕೇಳಲಾಗಿತ್ತು ಅದನ್ನು ಕೂಡ ಕೇಂದ್ರ ಸರ್ಕಾರ ಬಿಡುಗಡೆ ಮಾಡಿಲ್ಲ ಎಂದು ಹೇಳಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್…
ಪೌರತ್ವ ತಿದ್ದುಪಡಿ ಕಾಯ್ದೆಯ ಕುರಿತು ಕೇಂದ್ರ ಸರ್ಕಾರದ ಅಧಿಸೂಚನೆಯನ್ನು ಖಂಡಿಸಿದ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಶ್ರೀಲಂಕಾದ ತಮಿಳರನ್ನು ಸಿಎಎ ವ್ಯಾಪ್ತಿಯಿಂದ ಏಕೆ ದೂರ ಇಡಲಾಗಿದೆ ಎಂದು ಪ್ರಶ್ನಿಸಿದ್ದಾರೆ. ಸಚಿವ ಸಂಪುಟ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಕೃಷ್ಣ ಬೈರೇಗೌಡ, ಸಚಿವ ಸಂಪುಟವು ಸಿಎಎ ವಿಷಯದ ಬಗ್ಗೆ ಚರ್ಚಿಸಿಲ್ಲ, ಆದರೆ ರಾಜ್ಯ ಸರ್ಕಾರವು ಖಂಡಿತವಾಗಿಯೂ ಅದರ ಬಗ್ಗೆ ನಿಲುವು ತೆಗೆದುಕೊಳ್ಳುತ್ತದೆ ಎಂದು ಹೇಳಿದರು. ನನ್ನ ವೈಯಕ್ತಿಕ ಅಭಿಪ್ರಾಯದಲ್ಲಿ, ಸರ್ಕಾರಿ ಪಡೆಗಳು ಮತ್ತು ಎಲ್ಟಿಟಿಇ ನಡುವಿನ ಯುದ್ಧದ ಸಮಯದಲ್ಲಿ ಹೆಚ್ಚಿನ ಸಂಖ್ಯೆಯ ತಮಿಳರು ಶ್ರೀಲಂಕಾದಿಂದ ಪಲಾಯನ ಮಾಡಿದರು. ಅವರೆಲ್ಲ ದಕ್ಷಿಣ ಭಾರತದ ವಿವಿಧ ಭಾಗಗಳಲ್ಲಿ ವಾಸಿಸುತ್ತಿದ್ದಾರೆ. ಇದು ಮೂಲಭೂತವಾಗಿ ಧಾರ್ಮಿಕ ದೃಷ್ಟಿಕೋನವನ್ನು ಹೊಂದಿದ್ದ ಜನಾಂಗೀಯ ಸಂಘರ್ಷವಾಗಿತ್ತು, ಸಿಎಎಯಲ್ಲಿ ಸ್ಥಳಾಂತರಗೊಂಡ ಶ್ರೀಲಂಕಾದ ತಮಿಳರ ಬಗ್ಗೆ ಏಕೆ ಉಲ್ಲೇಖವಿಲ್ಲ? ಎಂದು ಕೇಂದ್ರ ಸರ್ಕಾರವನ್ನು ಪ್ರಶ್ನಿಸಿದ್ದಾರೆ. ಕೇಂದ್ರ ಸರ್ಕಾರವು ಉದ್ದೇಶಪೂರ್ವಕವಾಗಿಯೇ ದಕ್ಷಿಣ ಭಾರತ ಮತ್ತು ಅದರ ಸಮಸ್ಯೆಗಳನ್ನು ನಿರ್ಲಕ್ಷಿಸಿದೆ ಎಂಬುದನ್ನು ಇದು ಸ್ಪಷ್ಟವಾಗಿ ತೋರಿಸುತ್ತದೆ ಎಂದು…
ಮಧುಗಿರಿಯ ಸಾರ್ವಜನಿಕ ತಾಲ್ಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ರಾತ್ರೋ ರಾತ್ರಿ ನೀರಿನ ಸಮಸ್ಯೆ ಉಂಟಾಗಿ ರೋಗಿಗಳು ಪರದಾಡಿದ ಘಟನೆ ನಡೆದಿದ್ದು, ಈ ಬಗ್ಗೆ ಮಾಹಿತಿ ತಿಳಿದು ಕಾಳಜಿ ತಂಡದ ಸದಸ್ಯರು ರೋಗಿಗಳಿಗೆ ಸೂಕ್ತ ಸಮಯದಲ್ಲಿ ನೀರು ಒದಗಿಸಿ ಕೊಡುವ ವ್ಯವಸ್ಥೆ ಮಾಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಸಾರ್ವಜನಿಕ ತಾಲ್ಲೂಕು ಸರ್ಕಾರಿ ಆಸ್ಪತ್ರೆ ಮಧುಗಿರಿಯ ರೋಗಿಗಳಿಗೆ ನೀರಿಲ್ಲದೆ ತೊಂದರೆಯಾಗಿ ರೋಗಿಗಳು ಪರದಾಡುತ್ತಿದ್ದಾರೆ ಎಂಬ ಬಗ್ಗೆ ಕಾಳಜಿ ತಂಡದ ವಾಟ್ಸಾಪ್ ಗ್ರೂಪ್ ನಲ್ಲಿ ಅಧಿಕಾರಿಗಳ ಗಮನ ಸೆಳೆಯಲು ತಂಡದ ಸದಸ್ಯರು ಪ್ರಯತ್ನಿಸಿದ್ದರು. ಆದರೆ, ಈ ವೇಳೆ ಯಾವುದೇ ಅಧಿಕಾರಿಗಳು ಸ್ಪಂದಿಸಲಿಲ್ಲ. ಹೀಗಾಗಿ ನೀರು ಸರಬರಾಜು ಮಾಡುವ ವ್ಯವಸ್ಥೆಯನ್ನು ಮಾಡಲು ಕಾಳಜಿ ಪೌಂಡೇಷನ್ ಸದಸ್ಯರಾದ ಮಧುಗಿರಿ ಮಹೇಶ್ ಮತ್ತು ಸತೀಶ ರವರು ಖುದ್ದು ತಡ ರಾತ್ರಿಯವರೆಗೂ ಆಸ್ಪತ್ರೆಯ ಬಳಿ ಇದ್ದು ನೀರಿನ ವ್ಯವಸ್ಥೆ ಕಲ್ಪಿಸಲು ಮುಂದಾಗಿದ್ದು, ಕೊಡಿಗೆನಹಳ್ಳಿ ಸಿಂಗೆನಹಳ್ಳಿ ಪ್ರಸಾದ್ ಬಾಬು ಅವರ ಗಮನಕ್ಕೆ ತಂದರು. ಪ್ರಸಾದ್ ಬಾಬು ಅವರು, ಮಾಹಿತಿ ತಿಳಿದು ತಕ್ಷಣವೇ ರಾತ್ರಿ ಸುಮಾರು…