Subscribe to Updates
Get the latest creative news from FooBar about art, design and business.
- ಮಕ್ಕಳ ಕೈಗೆ ಮೊಬೈಲ್ ಕೊಡುವ ಮುನ್ನ ಈ ಸುದ್ದಿ ಓದಿ: 1.98 ಲಕ್ಷ ರೂಪಾಯಿ ಕಳೆದುಕೊಂಡ ತುಮಕೂರಿನ ವ್ಯಕ್ತಿ!
- ಚಿಲ್ಲರೆಗಳಿಗೆ ನಾನು ಹೆದರುವ ಮಗನೇ ಅಲ್ಲ ಕೀಳುಮಟ್ಟದ ರಾಜಕಾರಣ ನನಗೆ ಗೊತ್ತಿಲ್ಲ: ಶಾಸಕ ಎಸ್. ಆರ್.ಶ್ರೀನಿವಾಸ್ ತಿರುಗೇಟು
- ತುಮಕೂರು ಜಿಲ್ಲೆಯಲ್ಲಿ 0.3 ಮಿ.ಮೀ. ಮಳೆ
- ಕೆಎಸ್ ಆರ್ ಟಿಸಿ ಬಸ್ ದರ ಏರಿಕೆ ಖಚಿತ: ಸಾರಿಗೆ ಸಂಸ್ಥೆ ಅಧ್ಯಕ್ಷ ಎಸ್.ಆರ್. ಶ್ರೀನಿವಾಸ್
- ಜನರ ಏಳಿಗೆಗಾಗಿ ಯೋಜನೆಗಳು ಜಾರಿ, ಸರ್ಕಾರಿ ಯೋಜನೆಗಳು ಮತಗಳಿಕೆಗೆ ಅಲ್ಲ: ಶಾಸಕ ಕೆ.ಎನ್.ರಾಜಣ್ಣ
- ಪಾವಗಡ: ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಪ್ರಾಂಶುಪಾಲರಿಗೆ ಬೀಳ್ಕೊಡುಗೆ ಸಮಾರಂಭ
- ದೇಶದ 2ನೇ ಅತಿ ದೊಡ್ಡ ಕ್ರಿಕೆಟ್ ಕ್ರೀಡಾಂಗಣಕ್ಕೆ ಸಿಎಂ ಸಿದ್ದರಾಮಯ್ಯ ಶಂಕುಸ್ಥಾಪನೆ
- ಈ ವರ್ಷ 52 ಸಾವಿರ ಅತಿಥಿ ಶಿಕ್ಷಕರ ನೇಮಕ: ಸಚಿವ ಮಧು ಬಂಗಾರಪ್ಪ
Author: admin
ಮುಂಬರುವ ಲೋಕಸಭಾ ಚುನಾವಣೆಗೆ ದಿನಗಣನೆ ಆರಂಭಗೊಂಡಿದೆ. ಈಗಾಗಲೇ ಎಲ್ಲಾ ಪಕ್ಷಗಳು ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡುತ್ತಿದ್ದು, ಇದರ ಜೊತೆ ಬಿಜೆಪಿಯಲ್ಲಿ ಅಸಮಾಧಾನದ ಹೊಗೆಯೂ ಭುಗಿಲೆದ್ದಿದೆ. ಇದೀಗ ಚಿಕ್ಕಮಗಳೂರು ಬಿಜೆಪಿಯಲ್ಲೂ ಅಸಮಾಧಾನ ಸ್ಫೋಟಗೊಂಡಿದ್ದು,ಇದರಿಂದ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಅವರ ಕಾರ್ಯಕ್ರಮ ದಿಢೀರ್ ರದ್ದುಗೊಂಡಿರುವ ಘಟನೆ ಬಗ್ಗೆಯೂ ವರದಿಯಾಗಿದೆ. ಹೌದು.. ಮೂಡಿಗೆರೆ ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟಗೊಂಡ ಬೆನ್ನಲ್ಲೇ ಕೋಟ ಶ್ರೀನಿವಾಸ ಪೂಜಾರಿ ಅವರು ಭಾಗವಹಿಸಬೇಕಾಗಿದ್ದ ಕಾರ್ಯಕ್ರಮ ಚಿಕ್ಕಮಗಳೂರಿನಲ್ಲಿ ರದ್ದುಗೊಂಡಿದೆ. ಚಿಕ್ಕಮಗಳೂರಿನಲ್ಲಿ ಪ್ರಚಾರ ಕಾರ್ಯ ಆರಂಭಿಸಬೇಕಿತ್ತು.ಹೀಗಾಗಿ ಮೂಡಿಗೆರೆ ತಾಲೂಕಿನ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದಲ್ಲಿ ಕೋಟ ಶ್ರೀನಿವಾಸ ಪೂಜಾರಿ ಭಾಗಿಯಾಗಬೇಕಿತ್ತು. ಆದರೆ ಪದಗ್ರಹಣ ಕಾರ್ಯಕ್ರಮಕ್ಕೆ ಪರ್ಯಾಯವಾಗಿ ಸ್ವಾಭಿಮಾನಿ ಸಮಾವೇಶ ಆಯೋಜನೆ ಮಾಡಿದ್ದರಿಂದ ಗೊಂದಲ ಉಂಟಾಗಿದೆ. ಮೂಡಿಗೆರೆ ಪಟ್ಟಣದಲ್ಲಿ ಬಿಜೆಪಿ ಕಾರ್ಯಕರ್ತರಿಂದಲೇ ಬಿಜೆಪಿ ಸ್ವಾಭಿಮಾನಿ ಸಮಾವೇಶ ಆಯೋಜನೆ ಮಾಡಿದ್ದು, ಇದರಿಂದ ಮೂಡಿಗೆರೆ ಬಿಜೆಪಿ ಕಚೇರಿಯಲ್ಲಿ ನಡೆಯಬೇಕಿದ್ದ ಪದಗ್ರಹಣ ಕಾರ್ಯಕ್ರಮ ರದ್ದುಗೊಂಡಿದೆ. ಮೂಡಿಗೆರೆ ತಾಲೂಕು ಮಂಡಲ ಅಧ್ಯಕ್ಷ ಸ್ಥಾನದ ವಿಚಾರವಾಗಿ ಹೊಡೆದಾಟ…
ಬೆಂಗಳೂರು: ಸ್ಯಾಂಕಿ ರಸ್ತೆಯಲ್ಲಿರುವ ಜಗದೀಶ್ ಹೋಟೆಲ್ ನಲ್ಲಿ 27 ವರ್ಷದ ಉಜ್ಬೇಕಿಸ್ತಾನ್ ಮಹಿಳೆಯೊಬ್ಬಳು ತನ್ನ ಕೋಣೆಯೊಳಗೆ ಸಾವನ್ನಪ್ಪಿದ ಪ್ರಕರಣವನ್ನು ಬೆನ್ನು ಹತ್ತಿದ್ದ ಬೆಂಗಳೂರು ಪೊಲೀಸರು ಇದೀಗ ದುಷ್ಕರ್ಮಿಗಳನ್ನ ಪತ್ತೆ ಹಚ್ಚಿದ್ದಾರೆ. ಮಹಿಳೆಯನ್ನು ಕೊಲೆ ಮಾಡಿದ ಆರೋಪದ ಮೇಲೆ ಹೋಟೆಲ್ ನ ಇಬ್ಬರು ಹೌಸ್ ಕೀಪಿಂಗ್ ಸಿಬ್ಬಂದಿಯನ್ನು ಬಂಧಿಸಲಾಗಿದೆ. ಜರೀನಾ ಉತ್ಕಿರೋವ್ನಾ ಎಂದು ಗುರುತಿಸಲಾದ ವಿದೇಶಿ ಮಹಿಳೆ ಸಾಕಷ್ಟು ಹಣವನ್ನು ಹೊಂದಿದ್ದು, ಅವಳನ್ನು ದರೋಡೆ ಮಾಡುವುದರಿಂದ ತಾನು ತಕ್ಷಣವೇ ಶ್ರೀಮಂತರಾಗಬಹುದು ಎಂದು ಆರೋಪಿಗಳು ಭಾವಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಹೋಟೆಲ್ ರೂಮ್ ನಲ್ಲಿ ಜರೀನಾ , ಮಾರ್ಚ್ 13ರ ರಾತ್ರಿ ಮುಖದ ಮೇಲೆ ಗಾಯಗಳು ಮತ್ತು ಮೂಗಿನಿಂದ ರಕ್ತಸ್ರಾವದೊಂದಿಗೆ ಶವವಾಗಿ ಪತ್ತೆಯಾಗಿದ್ದರು . ಈ ವೇಳೆ ಆಕೆಯ ಐಫೋನ್ ಮತ್ತು ಹಣ ರೂಮ್ ನಿಂದ ನಾಪತ್ತೆಯಾಗಿದ್ದವು. ತನಿಖೆಯ ನಂತರ, ನಗರ ಪೊಲೀಸರು 22 ವರ್ಷದ ಅಮೃತ್ ಸೋನಾ ಮತ್ತು 26 ವರ್ಷದ ರಾಬರ್ಟ್ ಎಂಬುವರನ್ನು ಬಂಧಿಸಿದ್ದಾರೆ. ಇಬ್ಬರೂ ಅಸ್ಸಾಂ ಮೂಲದವರಾಗಿದ್ದು ಸುಮಾರು ಒಂದು…
ಭಾರತೀಯ ಮೂಲದ ಕುಟುಂಬವೊಂದು ಕೆನಡಾದ ಒಟಾರಿಯೊದಲ್ಲಿ ನಿಗೂಢವಾಗಿ ಮೃತ ಹೊಂದಿದ ಘಟನೆಯೊಂದು ನಡೆದಿದೆ. ಮೃತರನ್ನು ರಾಜೀವ್ ವಾರಿಕೂ(51), ಪತ್ನಿ ಶಿಲ್ಪಾ ಕೋಥಾ(47) ಮತ್ತು ಮಗಳು ಮಾಹೆಕ್ ವಾರಿಕೊ(16) ಎಂದು ಗುರುತಿಸಲಾಗಿದೆ. ಕೆನಡಾದ ಒಂಟಾರಿಯೊದಲ್ಲಿ ಈ ಕುಟುಂಬ ವಾಸವಾಗಿತ್ತು. ಮನೆಗೆ ಬೆಂಕಿ ತಗುಲಿ ಮೂವರು ಮೃತ ಹೊಂದಿದ್ದಾರೆ ಎನ್ನಲಾಗಿದೆ. ಆದರೆ ಬೆಂಕಿ ಹೇಗೆ ಹೊತ್ತಿಕೊಂಡಿತು ಎನ್ನುವುದು ಇನ್ನೂ ನಿಗೂಢವಾಗಿದೆ ಎನ್ನುತ್ತಾರೆ ಪೊಲೀಸರು. ಮೂಲಗಳ ಪ್ರಕಾರ ಈ ಕುಟುಂಬ ಹದಿನೈದು ವರ್ಷಗಳಿಂದ ಇಲ್ಲೇ ವಾಸವಾಗಿತ್ತು. ಕುಟುಂಬದವರ ಮಧ್ಯೆ ಯಾವುದೇ ಸಮಸ್ಯೆ ಇರಲಿಲ್ಲ ಎಂದು ಹೇಳಲಾಗಿದೆ. ಬೆಂಕಿ ಹೊತ್ತಿಕೊಂಡದ್ದನ್ನು ಕಂಡು ಅಕ್ಕಪಕ್ಕದ ಮನೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದು, ಕೂಡಲೇ ಸ್ಥಳಕ್ಕೆ ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕಾಗಮಿಸಿ ಬೆಂಕಿ ನಂದಿಸುವಷ್ಟರಲ್ಲಿ ಮನೆ ಸಂಪೂರ್ಣ ಸುಟ್ಟು ಹೋಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಸುಟ್ಟು ಕರಕಲಾದ ಮನೆಯ ಅವಶೇಷಗಳ ಅಡಿಯಲ್ಲಿ ಮೂರೂ ಮೃತದೇಹಗಳು ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ ಎಂದು ಹೇಳಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು…
ಲೋಕಸಭೆ ಚುನಾವಣೆಗೆ ಪುತ್ರ ಕಾಂತೇಶ್ ಗೆ ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಬಿಜೆಪಿ ವಿರುದ್ದ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಬಂಡಾಯದ ಬಾವುಟ ಹಾರಿಸಿದ್ದಾರೆ. ಹೌದು ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿರ್ಧರಿಸಿದ್ದಾರೆ. ನಿನ್ನೆ ನಡೆದ ಬೆಂಬಲಿಗರ ಸಭೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿರ್ಧಾರ ತೆಗೆದುಕೊಂಡಿದ್ದಾರೆ. ಈ ಕುರಿತು ಮಾತನಾಡಿರುವ ಕೆ.ಎಸ್ ಈಶ್ವರಪ್ಪ, ಶಿವಮೊಗ್ಗ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುತ್ತೇನೆ. ಪಕ್ಷ ಉಳಿಸಲು ನನ್ನ ಈ ಹೋರಾಟ ನಾನು ಹಿಂದುತ್ವ ಮೇಲೆ ಚುನವಣೆ ಮಾಡುತ್ತೇನೆ. ಬಿವೈ ರಾಘವೇಂದ್ರ ಲಿಂಗಾಯತ ಮೇಲೆ ಚುನಾವಣೆ ಮಾಡುತ್ತಾರೆ ಎಂದಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಬಿಸಿಲಿನ ಬೇಗೆಯಿಂದ ಹೆಚ್ಚುತ್ತಿರುವ ತಾಪಮಾನವನ್ನು ಗಮನದಲ್ಲಿಟ್ಟುಕೊಂಡು, ವಿದ್ಯಾರ್ಥಿಗಳಿಗೆ ನೀರು ಆಹಾರದ ಕೊರತೆಯನ್ನು ಮನದಲ್ಲಿಟ್ಟುಕೊಂಡು ತೆಲಂಗಾಣ ರಾಜ್ಯ ಶಿಕ್ಷಣ ಇಲಾಖೆ ಮಾರ್ಚ್ 15ರಿಂದ ಅರ್ಧ ದಿನ ಮಾತ್ರ ಶಾಲೆಯನ್ನು ನಡೆಸಲು ಈ ಹಿಂದೆಯೇ ನಿರ್ಧರಿಸಿತ್ತು. ಅದರಂತೆಯೇ ಈಗ ಶಾಲೆಯನ್ನು ಅರ್ಧ ದಿನ ಮಾಡಲು ಸಿದ್ಧವಾಗಿದೆ. ಆದ್ರೆ, ಈ ಮಧ್ಯೆ ವಿದ್ಯಾರ್ಥಿಯೊಬ್ಬ ಮಾಡಿಕೊಂಡ ಮನವಿ ನೋಡಿದ್ರೆ ಎಂಥವರ ಕಣ್ಣಲ್ಲಿ ನೀರು ತರಿಸುತ್ತದೆ. ಹಾಗಾದರೆ ಆತ ಬರೆದ ಪತ್ರದಲ್ಲಿ ಏನಿದೆ? ಹೆಚ್ಚಿನ ಮಕ್ಕಳಿಗೆ ಬಿಸಿಯೂಟ ಎಷ್ಟು ಮುಖ್ಯ ಅನ್ನುವಂಥದ್ದನ್ನು ಈ ವರದಿಯಲ್ಲಿ ನೀವು ನೋಡಬಹುದು. ಈ ದೇಶದಲ್ಲಿ ಒಂದು ಹೊತ್ತಿನ ಊಟಕ್ಕೂ ಪರದಾಡುತ್ತಿರುವವರ ಸಂಖ್ಯೆ ಹೆಚ್ಚಿದ್ದು, ಅದರಲ್ಲೂ ನೀರಿಲ್ಲದೇ ಒದ್ದಾಡುವವರ ಸಂಖ್ಯೆ ಈಗ ಎಲ್ಲೆಡೆ ಕಾಣಿಸಿಕೊಳ್ತಿದೆ. ಬಿರು ಬಿಸಿಲಿನ ತಾಪಕ್ಕೆ ವಿದ್ಯಾರ್ಥಿಗಳು ತೊಂದರೆಗೆ ಒಳಗಾಗುತ್ತಿದ್ದಾರೆ, ಈ ಹಿನ್ನಲೆಯಲ್ಲಿ ಮಕ್ಕಳಿಗೆ ಕಷ್ಟವೆನಿಸಬಹುದು ಎಂಬ ಮುಂದಾಲೋಚನೆಯಿಂದ ತೆಲಂಗಾಣ ಸರ್ಕಾರ ಈ ಕುರಿತಂತೆ ಅಧಿಕೃತವಾಗಿ ಘೋಷಿಸಿದ್ದು, ಎಲ್ಲಾ ಖಾಸಗಿ ಮತ್ತು ಸರ್ಕಾರಿ ಶಾಲೆಗಳು ಅರ್ಧ ದಿನ ಕಾರ್ಯನಿರ್ವಹಿಸಲಿವೆ ಎಂದು ತಿಳಿಸಿದೆ.…
ಬಾಲಿವುಡ್ನಟ ಹಿರಿಯ ನಟ ಅಮಿತಾಬ್ ಬಚ್ಚನ್ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನುವ ಸುದ್ದಿಯೊಂದು ಹರಿದಾಡುತ್ತಿದೆ. ಇವರು ಮುಂಬೈನ ಕೋಕಿಲಾಬೆನ್ ಆಸ್ಪತ್ರೆಯಲ್ಲಿ ಆಂಜಿಯೋಪ್ಲಾಸ್ಟಿಗೆ ಒಳಗಾಗಿದ್ದಾರೆ. ಅಮಿತಾಬ್ ಅವರಿಗೆ ಬೆಳಗ್ಗೆ ಎದೆನೋವು ಕಾಣಿಸಿಕೊಂಡ ಬೆನ್ನಲ್ಲೇ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ. ಒಟ್ಟಿನಲ್ಲಿ ಅವರ ಆರೋಗ್ಯದ ಕುರಿತು ಆಸ್ಪತ್ರೆ ಅಥವಾ ಕುಟುಂಬದವರು ಹೆಲ್ತ್ ಅಪ್ಡೇಟ್ ನೀಡಲಿ ಎಂದು ಅಭಿಮಾನಿಗಳು ಇದೀಗ ನಿರೀಕ್ಷಿಸಿದ್ದಾರೆ. 81ರ ವಯಸ್ಸಿನ ಅಮಿತಾಭ್ ಈಗಲೂ ಉತ್ಸಾಹದಿಂದ ಕೆಲಸ ಮಾಡುವವರು.ದಣಿವರಿಯದ ಜೀವ. ಮೊನ್ನೆಯಷ್ಟೇ ಅವರು ಕಲ್ಕಿ ಸಿನಿಮಾದ ಶೂಟಿಂಗ್ ಮುಗಿಸಿಕೊಂಡು ಮುಂಬೈಗೆ ಆಗಮಿಸಿದ್ದರು. ಸಂಪೂರ್ಣ ಶೂಟಿಂಗ್ ಮುಗಿಸಿಕೊಂಡು ಬಂದಿರುವುದಾಗಿ ತಿಳಿಸಿದ್ದಾರೆ. ಸತತವಾಗಿ ಕಲ್ಕಿ ಸಿನಿಮಾದ ಚಿತ್ರೀಕರಣದಲ್ಲಿ ತೊಡಗಿದ್ದ ಅವರು, ದಿಢೀರ್ ಅಂತ ಆಸ್ಪತ್ರೆಗೆ ದಾಖಲಾಗಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಪಾವಗಡ: ಕ್ಷುಲ್ಲಕ ಕಾರಣಕ್ಕೆ ಪತಿಯೋರ್ವ ತನ್ನ ಪತ್ನಿಯ ಕುತ್ತಿಗೆಗೆ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಪಾವಗಡ ತಾಲೂಕಿನ ತಾಲೂಕಿನ ನಿಡಗಲ್ ಹೋಬಳಿ ವ್ಯಾಪ್ತಿಗೆ ಬರುವ ಸಿ.ಕೆ.ಪುರ ಗ್ರಾಮ ಪಂಚಾಯಿತಿಗೆ ಸೇರಿದ ಉದಂಡಪ್ಪನ ಪಾಳ್ಯ ಗ್ರಾಮದಲ್ಲಿ ನಡೆದಿದೆ. ರಾಮಾಂಜಿನಮ್ಮ (42) ಹತ್ಯೆಗೀಡಾದ ಮಹಿಳೆಯಾಗಿದ್ದಾರೆ. ಪತಿ ರಮೇಶ್ ಹತ್ಯೆ ನಡೆಸಿದ ಆರೋಪಿಯಾಗಿದ್ದಾನೆ. ಉದ್ದಂಡಪ್ಪನ ಪಾಳ್ಯ ಗ್ರಾಮದಲ್ಲಿ ರಾಮಾಂಜಿನಮ್ಮ ಮತ್ತು ರಮೇಶ ಚಿಲ್ಲರಂಗಡಿ ಇಟ್ಟುಕೊಂಡು ಜೀವನ ಸಾಗಿಸುತ್ತಿದ್ದರು. ಶುಕ್ರವಾರ ಬೆಳಗ್ಗೆ 11 ಗಂಟೆಯ ವೇಳೆಗೆ ಕ್ಷುಲ್ಲಕ ಕಾರಣಕ್ಕೆ ರಮೇಶ್ ಪತ್ನಿಯ ಕುತ್ತಿಗೆಗೆ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿ ಸ್ಥಳದಿಂದ ಪರಾರಿಯಾಗಿದ್ದಾನೆ. ಈತನನ್ನು ಕೆಲವೇ ಗಂಟೆಗಳಲ್ಲಿ ಪೊಲೀಸು ಬಂಧಿಸಿದ್ದಾರೆ. ಈ ದಂಪತಿಗೆ ಒಂದು ಗಂಡು ಹಾಗೂ ಒಂದು ಹೆಣ್ಣು ಮಕ್ಕಳಿದ್ದಾರೆ. ಅತ್ತ ತಾಯಿಯನ್ನು ಮಕ್ಕಳು ಕಳೆದುಕೊಂಡರೆ ಇನ್ನೊಂದೆಡೆ ತಂದೆ ಜೈಲು ಪಾಲಾಗಿದ್ದಾನೆ. ಘಟನಾ ಸ್ಥಳಕ್ಕೆ ಪಾವಗಡ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆ ಮುಂದುವರಿಸಿದ್ದಾರೆ. ವರದಿ: ರಾಮಪ್ಪ ಸಿ.ಕೆ.ಪುರ, ಪಾವಗಡ ಜಾಗತಿಕ ಕನ್ನಡಿಗರ…
ಕೊರಟಗೆರೆ: ಬೆಂಗಳೂರು ಕಡೆಯಿಂದ ವೇಗವಾಗಿ ಬಂದ ಕಾರೊಂದು ಕೊರಟಗೆರೆ ಕಡೆಯಿಂದ ಹೋಗುತ್ತಿದ್ದ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ ಶುಕ್ರವಾರ ಬೆಳಗ್ಗೆ ನಡೆದಿದೆ. ತಾಲೂಕಿನ ಜಿ.ನಾಗೇನಹಳ್ಳಿಯ ಗೊಲ್ಲರಹಟ್ಟಿ ಗೇಟ್ ಬಳಿ ಈ ಘಟನೆ ನಡೆದಿದ್ದು, ಬೆಂಗಳೂರು ಕಡೆಯಿಂದ ಬರುತ್ತಿದ್ದ ಎಕ್ಸ್ಯುವಿ ಕಾರೊಂದು ಕೊರಟಗೆರೆ ಕಡೆಯಿಂದ ಹೋಗುತ್ತಿದ್ದಂತಹ ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಬೈಕ್ ಸವಾರ ಸಾವನ್ನಪ್ಪಿದ್ದು, ಅಪಘಾತದಲ್ಲಿ ಸಾವಿಗೀಡಾದ ವ್ಯಕ್ತಿ ಮಧುಗಿರಿ ತಾಲೂಕಿನ ಬೆಲ್ಲದಮಡಗು ಗ್ರಾಮದ ಕೃಷ್ಣಮೂರ್ತಿ(55) ಎಂದು ತಿಳಿದು ಬಂದಿದೆ. ಬೈಕ್ ನ ಹಿಂಬದಿಯಲ್ಲಿ ಕುಳಿತಿದ್ದ ಪ್ರಸನ್ನ ಎನ್ನುವ ವ್ಯಕ್ತಿಗೆ ಎಡಗೈ ಮತ್ತು ಎಡಗಾಲು ಕಟ್ ಆಗಿದ್ದು, ಅದೇ ಕಾರು ಬೈಕ್ ಗೆ ಡಿಕ್ಕಿ ಹೊಡೆದ ಬಳಿಕ ರಸ್ತೆಯ ಪಕ್ಕದಲ್ಲಿ ನಡೆದುಕೊಂಡು ಹೋಗುತ್ತಿದ್ದ ಪಾದಚಾರಿಗೆ ಗುದ್ದಿದ್ದ ಪರಿಣಾಮ ಆ ವ್ಯಕ್ತಿಯ ಎದೆಭಾಗಕ್ಕೆ ಬಲವಾದ ಪೆಟ್ಟು ಬಿದ್ದಿರುವ ಕಾರಣ ಹೆಚ್ಚಿನ ಚಿಕಿತ್ಸೆಗಾಗಿ ತುಮಕೂರಿನ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ. ತಡವಾಗಿ ಬಂದ ತುರ್ತು ವಾಹನ:…
ಕೋಲಾರ: ಕೋಲಾರ ಜಿಲ್ಲೆಯಲ್ಲಿ ಮೇಲಾಧಿಕಾರಿಗಳ ಕಿರುಕುಳದಿಂದ ಬೇಸತ್ತಿದ್ದ ನೌಕರರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದ್ದು, ಮೃತರನ್ನು ಶ್ರೀನಿವಾಸ್ (50) ಎಂದು ಗುರುತಿಸಲಾಗಿದೆ. ಬಹಳ ದಿನಗಳಿಂದ ಮೇಲಧಿಕಾರಿಗಳು ಕಿರುಕುಳ ನೀಡುತ್ತಿದ್ದರು ಇದರಿಂದ ಬೇಸತ್ತಿದ್ದ ಹಾಪ್ ಕಾಮ್ಸ್ ನೌಕರ ಶ್ರೀನಿವಾಸ್ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸದ್ಯ ಘಟನಾ ಸ್ಥಳಕ್ಕೆ ಭೇಟಿ ನೀಡಿರುವ ಪೊಲೀಸ್ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಕೋಲಾರ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ದೂರು ದಾಖಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ರಾಜ್ಯದಲ್ಲಿ ಲೋಕಸಭಾ ಸಮರ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಈ ಹಿನ್ನೆಲೆ ಯುವ ಬ್ರಿಗೇಡ್ ಮುಖ್ಯಸ್ಥ ಹಾಗೂ ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಅವರು ಯಾರು ಊಹಿಸದ ಹೇಳಿಕೆಯೊಂದನ್ನು ನೀಡಿದ್ದಾರೆ. ನಾನು ಚುನಾವಣೆ ಟಿಕೆಟ್ ಕೇಳಿಕೊಂಡುಹೋಗುವುದಿಲ್ಲ. ಒಂದು ವೇಳೆ ಅಂತಹ ಅವಕಾಶ ಒದಗಿ ಬಂದರೆ ಸರ್ಧಿಸಲು ವಿರೋಧಿಸುವುದಿಲ್ಲ, ಎಂದು ಚಕ್ರವರ್ತಿ ಸೂಲಿಬೆಲೆ ಹೇಳಿದ್ದಾರೆ. ನಮೋ ಬ್ರಿಗೇಡ್ ವತಿಯಿಂದ ನಡೆದ ವಿಶೇಷ ಕಾರ್ಯಕ್ರಮದಲ್ಲಿ ಭಾಗವಹಿಸಲು ಪುತ್ತೂರಿಗೆ ಆಗಮಿಸಿದ್ದ ಅವರು, ಲೋಕಸಭಾ ಚುನಾವಣೆಗೆ ನಾನು ಸ್ಪರ್ಧಿಸುವ ವಿಚಾರ ಸದ್ಯ ವದಂತಿಯಷ್ಟೆ, 2014, 2019ರಲ್ಲೂ ಸಹ ಇಂತಹ ವದಂತಿ ಹರಡಿತ್ತು. ಇದೀಗ 2024ರಲ್ಲೂ ವದಂತಿ ಹರಡಿದೆ. ರಾಜಕೀಯ ಆಸಕ್ತಿಯ ಪ್ರಶ್ನೆ ಬೇರೆ. ಅದಕ್ಕೆ ನನ್ನ ವಿರೋಧವಿಲ್ಲ, ಆದರೆ ಸೀಟ್ ಕೇಳಿಕೊಂಡು ಹೋಗುವುದಿಲ್ಲ, ಅಂಥ ಅವಕಾಶ ಬಂದರೆ ವಿರೋಧ ಇಲ್ಲ ಎಂದು ಹೇಳಿದರು. ಬಿಜೆಪಿ ಇದುವರೆಗೂ ಉತ್ತರ ಕನ್ನಡ ಜಿಲ್ಲೆಯ ಅಭ್ಯರ್ಥಿಯನ್ನು ಪ್ರಕಟಿಸದೆ ಇರುವುದರಿಂದ ಸುಲಿಬೆಲೆ ಅವರು ಆ ಕ್ಷೇತ್ರದಿಂದ ಸ್ಪರ್ಧಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಆದರೆ ಆ…