Subscribe to Updates
Get the latest creative news from FooBar about art, design and business.
- ಮಕ್ಕಳ ಕೈಗೆ ಮೊಬೈಲ್ ಕೊಡುವ ಮುನ್ನ ಈ ಸುದ್ದಿ ಓದಿ: 1.98 ಲಕ್ಷ ರೂಪಾಯಿ ಕಳೆದುಕೊಂಡ ತುಮಕೂರಿನ ವ್ಯಕ್ತಿ!
- ಚಿಲ್ಲರೆಗಳಿಗೆ ನಾನು ಹೆದರುವ ಮಗನೇ ಅಲ್ಲ ಕೀಳುಮಟ್ಟದ ರಾಜಕಾರಣ ನನಗೆ ಗೊತ್ತಿಲ್ಲ: ಶಾಸಕ ಎಸ್. ಆರ್.ಶ್ರೀನಿವಾಸ್ ತಿರುಗೇಟು
- ತುಮಕೂರು ಜಿಲ್ಲೆಯಲ್ಲಿ 0.3 ಮಿ.ಮೀ. ಮಳೆ
- ಕೆಎಸ್ ಆರ್ ಟಿಸಿ ಬಸ್ ದರ ಏರಿಕೆ ಖಚಿತ: ಸಾರಿಗೆ ಸಂಸ್ಥೆ ಅಧ್ಯಕ್ಷ ಎಸ್.ಆರ್. ಶ್ರೀನಿವಾಸ್
- ಜನರ ಏಳಿಗೆಗಾಗಿ ಯೋಜನೆಗಳು ಜಾರಿ, ಸರ್ಕಾರಿ ಯೋಜನೆಗಳು ಮತಗಳಿಕೆಗೆ ಅಲ್ಲ: ಶಾಸಕ ಕೆ.ಎನ್.ರಾಜಣ್ಣ
- ಪಾವಗಡ: ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಪ್ರಾಂಶುಪಾಲರಿಗೆ ಬೀಳ್ಕೊಡುಗೆ ಸಮಾರಂಭ
- ದೇಶದ 2ನೇ ಅತಿ ದೊಡ್ಡ ಕ್ರಿಕೆಟ್ ಕ್ರೀಡಾಂಗಣಕ್ಕೆ ಸಿಎಂ ಸಿದ್ದರಾಮಯ್ಯ ಶಂಕುಸ್ಥಾಪನೆ
- ಈ ವರ್ಷ 52 ಸಾವಿರ ಅತಿಥಿ ಶಿಕ್ಷಕರ ನೇಮಕ: ಸಚಿವ ಮಧು ಬಂಗಾರಪ್ಪ
Author: admin
ತುಮಕೂರು: ಮಾಜಿ ಪ್ರಧಾನಿ ದೇವೇಗೌಡರು, ಎಚ್.ಡಿ.ಕುಮಾರಸ್ವಾಮಿ ಹಾಗೂ ರೇವಣ್ಣ ಅವರೊಂದಿಗೆ ಸುದೀರ್ಘ ಒಂದು ಗಂಟೆಗಳ ಕಾಲ ನಡೆದ ಮಾತುಕತೆಯ ನಂತರ ಲೋಕಸಭೆ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುವ ಕುರಿತ ಪ್ರಕ್ರಿಯೆ ಗೆ ಚಾಲನೆ ದೊರೆತಿದ್ದು ಎಂದು ಬಿಜೆಪಿ ಅಭ್ಯರ್ಥಿ ಸೋಮಣ್ಣ ತಿಳಿಸಿದ್ದಾರೆ. ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ ನಂತರ ಪತ್ರಕರ್ತರೊಂದಿಗೆ ಮಾತನಾಡಿದ ಅವರು ಇದಲ್ಲದೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹಾಗೂ ವಿಧಾನಸಭೆ ವಿರೋಧ ಪಕ್ಷದ ನಾಯಕ ಅಶೋಕ್ ಅವರೊಂದಿಗೆ ಸುದೀರ್ಘ ಮಾತುಕತೆಯ ನಂತರವಷ್ಟೇ ನಾನು ಈ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುವ ಕುರಿತು ಪ್ರಕ್ರಿಯೆಗೆ ಚಾಲನೆ ದೊರೆತಿದೆ ಎಂದು ಹೇಳಿದರು. ನಾನು ಕೇವಲ ಬಂದ ಪುಟ್ಟ ಹೋದ ಪುಟ್ಟ ಎಂಬ ಗಾದೆಗೆ ಸೀಮಿತವಾಗುವುದಿಲ್ಲ ಬದಲಾಗಿ ದೂರ ದೃಷ್ಟಿಕೋನದ ಅಭಿವೃದ್ಧಿಯ ಚಿಂತನೆಗಳೊಂದಿಗೆ ಚುನಾವಣಾ ಕಣದಲ್ಲಿ ಇದ್ದೇನೆ. ಅಲ್ಲದೆ ಬಿಜೆಪಿ ಹಾಗೂ ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರು ಒಟ್ಟಿಗೆ ಸೇರಿ ಕೆಲಸ ಮಾಡಲಿದ್ದೇವೆ ಎಂದು ಹೇಳಿದರು. ಮಾಜಿ ಸಚಿವ…
ತುಮಕೂರು: ಪಿಡಬ್ಲ್ಯೂ ಡಿ ಕಚೇರಿಯಲ್ಲಿ ಟೆಂಡರ್ ಕರಾರು ಮಾಡಿಕೊಡದ ಇಂಜಿನಿಯರ್ ಧೋರಣೆ ವಿರುದ್ಧ ವಿರುದ್ಧ ಧರಣಿ ಕುಳಿತಿದ್ದ ಕಾಂಗ್ರೆಸ್ ಮುಖಂಡ ರಾಯಸಂದ್ರ ರವಿಕುಮಾರ್ ಮೇಲೆಯೇ ಗುಬ್ಬಿ ಶಾಸಕ ಎಸ್ ಆರ್ ಶ್ರೀನಿವಾಸ್ ಬೆಂಬಲಿಗರು ಮಾರಣಾಂತಿಕ ಹಲ್ಲೆ ಮಾಡಿರುವ ಆರೋಪ ವ್ಯಕ್ತವಾಗಿದೆ. ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷನಾಗಿರೋ ರಾಯಸಂದ್ರ ರವಿಕುಮಾರ್, ತುಮಕೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮುದ್ದಹನುಮೇಗೌಡ ಬೆಂಬಲಿಗನೂ ಆಗಿರೋ ರವಿಕುಮಾರ್, 2018ರ ಚುನಾವಣೆಯಲ್ಲಿ ತುಮಕೂರು ಗ್ರಾಮಾಂತರ ಕ್ಷೇತ್ರದ ಅಭ್ಯರ್ಥಿಯಾಗಿದ್ದರು. ನಿನ್ನೆ ತುಮಕೂರು ನಗರದ ಪಿಡಬ್ಲೂಡಿ ಕಚೇರಿ ಆವರಣದಲ್ಲಿ ಅಹೋರಾತ್ರಿ ಪ್ರತಿಭಟನೆ ನಡೆಸುತ್ತಿದ್ದ ವೇಳೆ ರಾತ್ರಿ ಸುಮಾರು 10.30ರ ವೇಳೆ ಏಕಾಏಕಿ ಆವರಣದೊಳಗೆ ನುಗ್ಗಿದ ಶಾಸಕ ಎಸ್.ಆರ್. ಶ್ರೀನಿವಾಸ್ ಮತ್ತು ಸಹಚರರು ಹಲ್ಲೆ ಮಾಡಿದ್ದಾರೆ ಎಂದು ಆರೋಪ ಮಾಡಲಾಗಿದೆ. ಅವಾಚ್ಯ ಶಬ್ಧಗಳಿಂದ ನಿಂದಿಸಿ, ರಾಯಸಂದ್ರ ರವಿಕುಮಾರ್ ಗೆ ಹಿಗ್ಗಾಮುಗ್ಗಾ ಥಳಿಸಲಾಗಿದೆ. ತಾಕತ್ ಇದ್ದರೆ ನನ್ನ ಕ್ಷೇತ್ರದಲ್ಲಿ ಕೆಲಸ ಮಾಡಿಸು, ಸುಟ್ಟು ಹಾಕಿಬಿಡುತ್ತೇನೆ ಎಂದು ಜೀವಬೆದರಿಕೆ ಹಾಕಿರೋದಾಗಿ ಆರೋಪ ಮಾಡಲಾಗಿದೆ. ರಾಯಸಂದ್ರ…
ಮೂಸಂಬಿ ಹಣ್ಣು ತಿಂದ್ರೆ ಅನೇಕ ಸಮಸ್ಯೆ ಮಾಯ!: ಮೂಸಂಬಿಯನ್ನು ನಿಯಮಿತವಾಗಿ ಸೇವಿಸಿದರೆ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಬಹಳಷ್ಟು ವಿಟಮಿನ್ ಸಿ ಅನ್ನು ಹೊಂದಿರುತ್ತದೆ. ಇದರಿಂದ ರೋಗನಿರೋಧಕ ಶಕ್ತಿ ಹೆಚ್ಚುತ್ತದೆ. ದೇಹದಲ್ಲಿ ಫ್ರೀ ರಾಡಿಕಲ್ಗಳು ಕಡಿಮೆಯಾಗುತ್ತವೆ. ಇದು ಹೆಚ್ಚಿನ ಫೈಬರ್ ಅಂಶವನ್ನು ಹೊಂದಿದ್ದು, ಹೆಚ್ಚಾಗಿ ಜೀರ್ಣಕಾರಿ ಸಮಸ್ಯೆಗಳನ್ನು ಬರದಂತೆ ತಡೆಯುತ್ತದೆ. ಉತ್ಕರ್ಷಣ ನಿರೋಧಕಗಳು ಅಧಿಕವಾಗಿದ್ದು, ಹೆಚ್ಚಿನ ಕ್ಯಾನ್ಸರ್ ಕೋಶಗಳ ವಿರುದ್ಧ ಹೋರಾಡುತ್ತದೆ. ಅಂತೆಯೇ ಇದರ ಆಯಂಟಿಆಕ್ಸಿಡೆಂಟ್ಗಳು ಅಲರ್ಜಿಯನ್ನು ಕಡಿಮೆ ಮಾಡುತ್ತದೆ. ಮೊಸರು ಸೇವಿಸೋದರಿಂದ ದಿನವಿಡೀ ಸಿಗುತ್ತೆ ಉಲ್ಲಾಸ!: ಮೊಸರಿನಲ್ಲಿ ಫೈಬರ್ ಸಮೃದ್ಧವಾಗಿದೆ. ಹಾಗಾಗಿ ಬೆಳಿಗ್ಗೆ ಉಪಹಾರಕ್ಕೆ ಮೊಸರನ್ನು ಬಳಸಿದರೆ ಕರುಳಿನ ಆರೋಗ್ಯ ಉತ್ತಮವಾಗಿರುತ್ತದೆ. ಮೊಸರಿನಲ್ಲಿ ಕ್ಯಾಲೋರಿ ಪ್ರಮಾಣ ಕಡಿಮೆ ಇದೆ. ಇದು ಕೇವಲ 300 ಕ್ಯಾಲೋರಿಗಳನ್ನು ಹೊಂದಿದೆ. ಹಾಗಾಗಿ ಇದನ್ನು ಬೆಳಿಗ್ಗಿನ ಉಪಹಾರಕ್ಕೆ ಸೇವಿಸಿದರೆ ತೂಕವನ್ನು ಸುಲಭವಾಗಿ ಕಳೆದುಕೊಳ್ಳಲಬಹುದು. ದೇಹದಲ್ಲಿ ಕಬ್ಬಿಣದ ಕೊರತೆಯಿದ್ದಾಗ ಮೊಸರನ್ನು ಸೇವಿಸಿ. ಇದರಿಂದ ರಕ್ತಹೀನತೆ ಸಮಸ್ಯೆ ದೂರವಾಗುತ್ತದೆ. ಇದರ ಸೇವನೆ ದಿನವಿಡೀ ಉಲ್ಲಾಸವಾಗಿರುವಲ್ಲಿ ಸಹಕಾರಿಯಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ…
ಪರೀಕ್ಷೆ ಅಂದರೆ ಅಲ್ಲಿ ಗಂಭೀರತೆ ಇರುತ್ತೆ. ಯಾರೂ ಅತ್ತ ಸುಳಿಯಬಾರದು ಎನ್ನುವ ನಿಯಮವಿದೆ. ಮಾತ್ರವಲ್ಲ ವಿದ್ಯಾರ್ಥಿಗಳನ್ನು ಪರೀಕ್ಷಿಸಿಯೇ ಪರೀಕ್ಷಾ ಕೇಂದ್ರಕ್ಕೆ ಕಳುಹಿಸಲಾಗುತ್ತೆ. ಆದರೆ ಇಲ್ಲೊಂದು ಕಡೆ ಇದು ಉಲ್ಟಾ ಆಗಿದೆ. ಶೈಕ್ಷಣಿಕ ವರ್ಷ ಮುಗಿಯುತ್ತ ಬಂದರೂ ಮಕ್ಕಳಿಗೆ ಪೂರ್ಣ ಪಾಠ ಮಾಡದ ಶಿಕ್ಷಕರು ವಾರ್ಷಿಕ ಪರೀಕ್ಷೆಯಲ್ಲಿ ತಾವೇ ಎಲ್ಲ ಪ್ರಶ್ನೆಗಳಿಗೆ ಉತ್ತರ ಬರೆಸಿದ್ದಾರೆ. ಜತೆಗೆ ಪ್ರಶ್ನೆ ಪತ್ರಿಕೆ, ಉತ್ತರ ಪತ್ರಿಕೆ ಮನೆಗೆ ಕೊಟ್ಟು ನಿಧಾನವಾಗಿ ಉತ್ತರ ಬರೆದುಕೊಂಡು ಬನ್ನಿ ಎಂದು ಹೇಳಿರುವ ಘಟನೆ ಬಗ್ಗೆ ವರದಿಯಾಗಿದೆ. ಇದರಿಂದ ಕೆರಳಿದ ಪಾಲಕರು ಶಿಕ್ಷಕರನ್ನು ತರಾಟೆಗೆ ತೆಗೆದುಕೊಂಡ ಘಟನೆ ಚಿಕ್ಕಮಗಳೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ತಂಡಗ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ತಂಡಗದ ಸ.ಹಿ.ಪ್ರಾ. ಪಾಠಶಾಲೆಯಲ್ಲಿ 1ರಿಂದ 7ನೇ ತರಗತಿ ವರೆಗೆ 42 ಮಕ್ಕಳು, ನಾಲ್ವರು ಶಿಕ್ಷಕರು ಇದ್ದಾರೆ. ಆದರೆ ಪಠ್ಯದಲ್ಲಿರುವ ಪಾಠಗಳನ್ನು ಪೂರ್ಣ ಮಾಡಿಲ್ಲ ಎಂಬುದು ಪಾಲಕರ ಆರೋಪವಾಗಿದೆ. ಶಾಲೆಯಲ್ಲಿ ನಾಲ್ಕನೇ ತರಗತಿಯ ಪರೀಕ್ಷೆ ಇತ್ತು. ಹೀಗಾಗಿ ಮಕ್ಕಳು ಆದ ಪಾಠವನ್ನು ಓದಿಕೊಂಡು…
ಪಾವಗಡ: ತಾಲೂಕಿನ ಸಿ.ಕೆ.ಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಹರಿಹರಪುರ ಗ್ರಾಮದ ಶ್ರೀ ಸಿದ್ದೇಶ್ವರ ಸ್ವಾಮಿಯ ಮಹಾಶಿವರಾತ್ರಿಯ ಹಬ್ಬದ ಪ್ರಯುಕ್ತ ಶ್ರೀ ಸಿದ್ದೇಶ್ವರ ಸ್ವಾಮಿಯ ರಥೋತ್ಸವ ಅದ್ದೂರಿಯಾಗಿ ನಡೆಯಿತು. ಪ್ರಾಂಶುಪಾಲರಾದ ಪಾತಲಿಂಗಪ್ಪ ಮಾತನಾಡಿ, ಶಿವರಾತ್ರಿ ಹಬ್ಬದ ಪ್ರಯುಕ್ತದಿಂದ ಶ್ರೀ ಸಿದ್ಧೇಶ್ವರ ಸ್ವಾಮಿಯ ಗಿರಿಜಾ ಕಲ್ಯಾಣೋತ್ಸವದಿಂದ ಕೊನೆತನಕ ಮಹಾಮಂಡಲ ದಿನದವರೆಗೂ ಎಂಟು ದಿನಗಳವರೆಗೂ ಹಬ್ಬವನ್ನು ಆಚರಣೆ ಮಾಡುತ್ತಾ ನಾವು ಬಂದಿದ್ದೇವೆ. ಇವತ್ತು ವಿಶೇಷವಾಗಿ ಕಲ್ಲುಗಾಲ್ಲಿನ ರಥೋತ್ಸವವನ್ನು ಈ ದೇವಸ್ಥಾನದ ಹರಿಹರಪುರ ಗ್ರಾಮದಲ್ಲಿ ನೆಲೆಸಿರುವ ಶ್ರೀ ಸಿದ್ದೇಶ್ವರ ಸ್ವಾಮಿ ದೇವಸ್ಥಾನದ ರಥೋತ್ಸವಕ್ಕೆ ಅಕ್ಕ ಪಕ್ಕದ ಗ್ರಾಮದ ಎಂಟು ಹಳ್ಳಿಗಳಿಂದ ಭಕ್ತರು ಬಂದು ಸ್ವಾಮಿಗೆ ಪಾತ್ರರಾಗಿರುತ್ತಾರೆ ಎಂದರು. ಭಕ್ತಾದಿಗಳು ರಥೋತ್ಸವವನ್ನು ಮುಂದಕ್ಕೆ ಎಳೆದು ಮತ್ತೆ ಸಾಯಂಕಾಲ ಅದೇ ಜಾಗಕ್ಕೆ ರಥವನ್ನು ಎಳೆಯುತ್ತಾರೆ, ಈ ದೇವಸ್ಥಾನವನ್ನು ಮುಜರಾಯಿ ಇಲಾಖೆಗೆ ಸೇರಿರುವುದರಿಂದ ತಾಲೂಕಿನ ಕಂದಾಯ ಇಲಾಖೆ ಸಿಬ್ಬಂದಿಗಳು ಮತ್ತು ಪೊಲೀಸ್ ಸಿಬ್ಬಂದಿಯವರು ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಕಂದಾಯ ಇಲಾಖೆ ರಾಮಲಿಂಗಪ್ಪ, ಅರುಂಧತಿ ನಾಗಲಿಂಗಪ್ಪ ಗ್ರಾಮ ಪಂಚಾಯತ್ ಸದಸ್ಯ, ದೊಡ್ಡಣ್ಣ…
ಬೆಂಗಳೂರು: ಒಂದು ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದ ವೇಳೆ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಭ್ರಷ್ಟರು ಬಿದ್ದಿದ್ದಾರೆ. ಬೆಂಗಳೂರಿನ ಕೆಆರ್ ಪುರಂ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಮತ್ತು ಪಿಎಸ್ಐ ಒಂದು ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ. ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದವರು ಕೆಆರ್ ಪುರಂ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ವಜ್ರಮುನಿ ಮತ್ತು ಪಿಎಸ್ಐ ರಮ್ಯಾ ಎಂದು ತಿಳಿದು ಬಂದಿದೆ. ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ಸ್ಪೆಕ್ಟರ್ ವಜ್ರಮುನಿ ಹಾಗೂ ಸಬ್ ಇನ್ಸ್ಪೆಕ್ಟರ್ ರಮ್ಯ ಅವರು ಆರೋಪಿಯನ್ನು ವಶಕ್ಕೆ ಪಡೆದಿದ್ದರು. ಆತನನ್ನು ತಮ್ಮ ವಶದಿಂದ ಬಿಡಲು ಐದು ಲಕ್ಷ ರೂ. ಡಿಮ್ಯಾಂಡ್ ಮಾಡಿದ್ದರು ಎನ್ನಲಾಗಿದೆ. ಇದರಲ್ಲಿ ಆಗಲೇ ಐವತ್ತು ಸಾವಿರ ರೂ. ಮೊದಲು ಪಡೆದುಕೊಂಡಿದ್ದರು. ಎರಡನೇ ಕಂತಾಗಿ ಒಂದು ಲಕ್ಷ ರೂ.ಗೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಈ ಕುರಿತು ವಂಚನೆ ಆರೋಪಿಯ ಕಡೆಯವರು ಎರಡನೇ ಕಂತು ಕೊಡುವ ಮುನ್ನ ಲೋಕಾಯುಕ್ತರಿಗೆ…
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಲೋಕಸಭಾ ಕಾವು ಹೆಚ್ಚುತ್ತಿರುವ ಹಿನ್ನೆಲೆ ಇದೀಗ ಕೆಪಿಸಿಸಿ ಅಧ್ಯಕ್ಷ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನೀಡಿರುವ ಒಂದು ಹೇಳಿಕೆ ಬಿಜೆಪಿ ನಾಯಕರಿಗೆ ನಡುಕ ಹುಟ್ಟಿಸಿದೆ. ಬಿಜೆಪಿಯಲ್ಲಿನ 10 ಮಂದಿ ಹಾಲಿ ಸಂಸದವರಿಗೆ ಟಿಕೆಟ್ ಕೈತಪ್ಪಲಿದೆ ಎಂದು ಆಗ ಹೇಳಿದ್ದೆ, ಅದು ಈಗ ಸತ್ಯವಾಗಿದೆ. ಬಿಜೆಪಿಯ ಟಿಕೆಟ್ ವಂಚಿತರು ಕಾಂಗ್ರೆಸ್ ನತ್ತ ಮುಖ ಮಾಡಿರುವ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ಕಾಂಗ್ರೆಸ್ ಗೆಲುವಿಗೆ ಬಿಜೆಪಿ ಟಿಕೆಟ್ ವಂಚಿತರ ಸೇರ್ಪಡೆ ಸದ್ಯಕ್ಕೆ ಗುಟ್ಟಾಗಿಯೇ ಇರಲಿ. ಮುಂದಿನ ದಿನಗಳಲ್ಲಿ ಟಿಕೆಟ್ ವಂಚಿತ ಅಭ್ಯರ್ಥಿಗಳು ಕಾಂಗ್ರೆಸ್ ಸೇರ್ಪಡೆಗೊಳ್ಳಲು ಇಚ್ಚಿಸಿದರೆ ಅವರಿಗೆ ಖಂಡಿತ ಅವಕಾಶ ನೀಡಲಾಗುವುದು ಎಂದು ತಿಳಿಸಿದರು. ಸದ್ಯಕ್ಕೆ ಬಿಜೆಪಿ ಪಕ್ಷದ ಬೆಳವಣಿಗೆಯನ್ನು ಕಾದು ನೋಡುತ್ತಿದ್ದೇವೆ ಮುಂದಿನ ದಿನಗಳಲ್ಲಿ ಬಿಜೆಪಿ ರೆಬೆಲ್ ನಾಯಕರು ಪಕ್ಷ ಸೇರುವ ಸಾಧ್ಯತೆ ಇದೆ ಎಂದು ಡಿ.ಕೆ. ಶಿವಕುಮಾರ್ ಹೇಳಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್…
ಬೀದರ್: ಬೀದರ್ ಜಿಲ್ಲೆಯ ಔರಾದ ತಾಲೂಕಿನ ಬೆಳಕುಣಿ ಚೌದ್ರಿ ಗ್ರಾಮ ಪಂಚಾಯತ್ ನಲ್ಲಿ ಮೂಲಭೂತ ಸೌಕರ್ಯ ಒದಗಿಸಬೇಕೆಂದು ಪ್ರತಿಭಟನೆ ನಡೆಸಲಾಯಿತು. ಸುಮಾರು ಎರಡು ವರ್ಷಗಳಿಂದ ಗ್ರಾಮ ಪಂಚಾಯಿತಿಗೆ ಅರ್ಜಿ ನೀಡಿದರೂ ಏನು ಪ್ರಯೋಜನ ಆಗಿಲ್ಲ, ತಕ್ಷಣವೇ ಮೂಲಭೂತ ಸೌಕರ್ಯ ಕಲ್ಪಿಸ ಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು. ನೀರು, ಚರಂಡಿ ಸ್ವಚ್ಛತೆ ಸೇರಿದಂತೆ ಹಲವು ಸಮಸ್ಯೆಗಳನ್ನು ಪರಿಹರಿಸುವಂತೆ ಪ್ರತಿಭಟನಾಕಾರರು ಪಂಚಾಯತ್ ಅಭಿವೃದ್ಧಿ ಅಧಿಕಾರಿಯನ್ನು ಒತ್ತಾಯಿಸಿದರು. ಗ್ರಾಮದ ಸಮಸ್ಯೆ ಬಗ್ಗೆ ಹೇಳಿದರೆ ಪಿಡಿಓ ಉದ್ಧಟತನದಿಂದ ಮಾತನಾಡುತ್ತಾರೆ, ನಾನು ಬೆಳಕುಣಿ ಗ್ರಾಮ ಪಂಚಾಯತ್ ಗೆ ಬಂದು ಒಂದು ತಿಂಗಳಾಯಿತು, ನನಗೆ ಏನೂ ಗೊತ್ತಿಲ್ಲ ಎಂದು ಉಡಾಫೆಯ ಉತ್ತರ ನೀಡುತ್ತಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. ಇದೇ ವೇಳೆ ಔರಾದ ತಾಲೂಕು ಪಂಚಾಯತ್ ಅಧಿಕಾರಿಗಳು, ಸುದೀಸ್ ಕುಮಾರ್ ಸಹಾಯಕ ನಿರ್ದೇಶಕರು ಭೇಟಿ ನೀಡಿ ಸುಮಾರು ಒಂದು ತಾಸು ಗ್ರಾಮಸ್ಥರ ಜೊತೆಗೆ ಮಾತಕತೆ ನಡೆಸಿದರು. ನಮಗೆ ಯಾವುದೇ ಸೌಲಭ್ಯ ಸಿಗ್ತಾ ಇಲ್ಲ, ಪಂಚಾಯತ್ ನಲ್ಲಿ ಭೋಗಸ್ ಕಾಮಗಾರಿ ನಡೆದಿದೆ. ವಸತಿ ಯೋಜನೆಯಡಿ…
ಮಾಜಿ ಐಪಿಎಸ್ ಅಧಿಕಾರಿ, ಪ್ರಸ್ತುತ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಅವರು ನಟಿಸಿರುವ ಮೊದಲ ಕನ್ನಡ ಸಿನಿಮಾ ʼಅರಬ್ಬಿʼಯ ಟ್ರೈಲರ್ ಬಿಡುಗಡೆ ಆಗಿದೆ. ಅಣ್ಣಾಮಲೈ ಅವರು ಕನ್ನಡ ಸಿನಿಮಾದಲ್ಲಿ ನಟಿಸಿದ್ದು, ಐಪಿಎಸ್ ಅಧಿಕಾರಿ ವೃತ್ತಿಯಿಂದ ಸ್ವಯಂ ನಿವೃತ್ತಿ ಪಡೆದುಕೊಂಡ ಮೇಲೆ. ಈ ಸಿನಿಮಾದಲ್ಲಿ ಪ್ರಧಾನ ಪಾತ್ರ ವಹಿಸಿರುವ ಅಣ್ಣಾಮಲೈ ಅವರು ಆಕ್ಷನ್ ದೃಶ್ಯಗಳಲ್ಲಿ ಸಖತ್ ಮಿಂಚಿದ್ದಾರೆ. ಎರಡೂ ಕೈಗಳಿಲ್ಲದಿದ್ದರೂ ಈಜು ಸ್ಪರ್ಧೆಯಲ್ಲಿ ಭಾಗವಹಿಸಿ ಸಾಧನೆ ಮಾಡಿದ ಕನ್ನಡಿಗ ಕೆ.ಎಸ್.ವಿಶ್ವಸ್ ಅವರ ಜೀವನದ ಕುರಿತ ನಿರ್ಮಿಸಲಾಗಿರುವ ಸಿನಿಮಾವೇ ʼಅರಬ್ಬಿʼ. ವಿಶ್ವಾಸ್ ಅವರು ತಮ್ಮ ಪಾತ್ರದಲ್ಲಿ ತಾವೇ ನಟಿಸಿದ್ದು, ಸಮಾಜದಲ್ಲಿ ಅವರು ಕೈಗಳಿಲ್ಲದೆ ಹೇಗೆ ಸಮಸ್ಯೆಗಳನ್ನು ಎದುರಿಸಿದರು ಎಂದು ಹೇಳಲಾಗಿದೆ. ಅಣ್ಣಾಮಲೈ ಅವರು ಈ ಸಿನಿಮಾದಲ್ಲಿ ವಿಶ್ವಾಸ್ ಅವರ ತರಬೇತುದಾರನ ಪಾತ್ರ ಮಾಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಘೋಷಣೆಯಾದ ಬೆನ್ನಲ್ಲೇ ಸಂಸದ ಬಿ.ವೈ ರಾಘವೇಂದ್ರ ಅವರ ಎಕ್ಸ್ ಖಾತೆ ಹ್ಯಾಕ್ ಆಗಿದೆ. ಇದೀಗ ಬಿ.ವೈ. ರಾಘವೇಂದ್ರ ಅವರ ಸಾಮಾಜಿಕ ಜಾಲತಾಣ ಖಾತೆ ಹ್ಯಾಕ್ ಆಗಿದೆ. ಹ್ಯಾಕ್ ಆಗಿರುವ ಕುರಿತು ರಾಘವೇಂದ್ರ ಅವರು ಸೋಶಿಯಲ್ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಂಡಿದ್ದು, ಯಾವುದೇ ಅಸಂಬದ್ಧ ಪೋಸ್ಟ್ ಅಥವಾ ಸಂದೇಶ ಬಂದರೆ ನಿರ್ಲಕ್ಷಿಸುವಂತೆ ಮನವಿ ಮಾಡಿದ್ದಾರೆ. ಎಕ್ಸ್ ಖಾತೆಯನ್ನು ಮರಳಿ ಪಡೆಯಲು ಪ್ರಯತ್ನ ಮಾಡಲಾಗುತ್ತಿದೆ ಎಂದು ರಾಘವೇಂದ್ರ ಅವರು ಪೋಸ್ಟ್ ಮಾಡಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296