Subscribe to Updates
Get the latest creative news from FooBar about art, design and business.
- ಪಾವಗಡ: ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಪ್ರಾಂಶುಪಾಲರಿಗೆ ಬೀಳ್ಕೊಡುಗೆ ಸಮಾರಂಭ
- ದೇಶದ 2ನೇ ಅತಿ ದೊಡ್ಡ ಕ್ರಿಕೆಟ್ ಕ್ರೀಡಾಂಗಣಕ್ಕೆ ಸಿಎಂ ಸಿದ್ದರಾಮಯ್ಯ ಶಂಕುಸ್ಥಾಪನೆ
- ಈ ವರ್ಷ 52 ಸಾವಿರ ಅತಿಥಿ ಶಿಕ್ಷಕರ ನೇಮಕ: ಸಚಿವ ಮಧು ಬಂಗಾರಪ್ಪ
- ಬೀದರ್ ಬ್ರಿಮ್ಸ್ (BRIMS) ಆಸ್ಪತ್ರೆಯಲ್ಲಿ ಕರ್ತವ್ಯ ನಿರತ ವೈದ್ಯರ ಮೇಲೆ ಭೀಕರ ಹಲ್ಲೆ: 7 ಮಂದಿ ಆರೋಪಿಗಳ ಬಂಧನ
- ತುಮಕೂರು ಜಿಲ್ಲೆಗೆ ‘ತುಮಕೂರು (ಬೆಂಗಳೂರು ಉತ್ತರ)’ ಎಂದು ಮರುನಾಮಕರಣ: ಗೃಹ ಸಚಿವ ಡಾ.ಜಿ.ಪರಮೇಶ್ವರ್
- ಮಾದಾವರ–ತುಮಕೂರು ಮೆಟ್ರೋ ರೈಲು ಯೋಜನೆ: ಸರ್ಕಾರಕ್ಕೆ ಸಲ್ಲಿಕೆಯಾಯ್ತು ಡಿಪಿಆರ್ ವರದಿ
- ಪಕ್ಷದ ಜವಾಬ್ದಾರಿ ನಿರ್ವಹಿಸದಿದ್ದರೆ ಶಿಸ್ತು ಕ್ರಮ: ಕಾಂಗ್ರೆಸ್ ಮುಖಂಡರ ಸಭೆಯಲ್ಲಿ ಶಾಸಕ ಕೆ. ಷಡಕ್ಷರಿ ಎಚ್ಚರಿಕೆ
- ಗುಬ್ಬಿ ಶಾಸಕರು, ಪುತ್ರನಿಂದ ಕುತಂತ್ರ ರಾಜಕಾರಣ: ಷಡ್ಯಂತ್ರಗಳಿಗೆ ಜಗ್ಗುವುದಿಲ್ಲ: ಜೆಡಿಎಸ್ ಮುಖಂಡ ನಾಗರಾಜು ಕಿಡಿ
Author: admin
ತುಮಕೂರಿನ ಕರಾಮುವಿ ಪ್ರಾದೇಶಿಕ ಕೇಂದ್ರದಲ್ಲಿ 2023-24ನೇ ಶೈಕ್ಷಣಿಕ ಸಾಲಿನ ಜನವರಿ ಆವೃತ್ತಿ ಪ್ರವೇಶಾತಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಿದ್ದು, ಸ್ನಾತಕ/ ಸ್ನಾತಕೋತ್ತರ ಕೋರ್ಸ್ ಗಳಾದ ಬಿ.ಎ, ಬಿ.ಕಾಂ, ಬಿ.ಬಿ.ಎ, ಬಿ.ಸಿ.ಎ, ಬಿ.ಲಿಬ್.ಐ.ಎಸ್ಸಿ., ಬಿ.ಎಸ್ಸಿ., ಬಿ.ಎಸ್.ಡಬ್ಲ್ಯೂ., ಎಂ.ಎ., ಎಂ.ಸಿ.ಜೆ., ಎಂ.ಕಾಂ., ಎಂ.ಎಸ್ಸಿ., ಎಂ.ಲಿಬ್.ಐ.ಎಸ್ಸಿ., ಎಂ.ಬಿ.ಎ., ಎಂ.ಸಿ.ಎ., ಎಂ.ಎಸ್.ಡಬ್ಲ್ಯೂ ಮತ್ತು ಪಿ.ಜಿ ಸರ್ಟಿಫಿಕೇಟ್., ಡಿಪ್ಲೊಮಾ., ಸರ್ಟಿಫಿಕೇಟ್ ಕೋರ್ಸ್ ಗಳಿಗೆ ಪ್ರವೇಶಾತಿ ಮಾಡಿಕೊಳ್ಳಲಾಗುತ್ತಿದೆ. ಪ್ರಥಮ ವರ್ಷದ ಈ ಮೇಲ್ಕಂಡ ಕೋರ್ಸ್ ಗಳ ಪ್ರವೇಶಾತಿಗೆ 2024ರ ಮಾರ್ಚ್ 31 ಕಡೆಯ ದಿನಾಂಕವಾಗಿರುತ್ತದೆ. “ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಮಾತ್ರ ರಾಜ್ಯದಲ್ಲಿ ದೂರ ಶಿಕ್ಷಣ ನೀಡುವ ಏಕ ಮಾತ್ರ ವಿಶ್ವವಿದ್ಯಾನಿಲಯವಾಗಿರುತ್ತದೆ”. ಪ್ರಥಮ ವರ್ಷದ ಪ್ರವೇಶಾತಿ ಶುಲ್ಕದ ವಿವರ: ಬಿ.ಎ-ರೂ.7,700/-., ಬಿ.ಬಿ.ಎ/ಬಿ.ಎಲ್.ಐ.ಎಸ್ಸಿ-11,500/-., ಬಿ.ಕಾಂ.-ರೂ.8,200/-., ಬಿ.ಸಿ.ಎ/ಬಿ.ಎಸ್ಸಿ-ರೂ.22,500/-., ಬಿ.ಎಸ್.ಡಬ್ಲ್ಯೂ-ರೂ.12,000/-., ಎಂ.ಎ-ರೂ.9,800/-., ಎಂ.ಎಸ್ಸಿ/ಎಂ.ಬಿ.ಎ/ಎಂ.ಸಿ.ಎ-ರೂ.28,000/-., ಎಂ.ಕಾಂ-ರೂ.11,500/-. ಎಂ.ಸಿ.ಜೆ-ರೂ.15,100/-., ಎಂ.ಎಸ್.ಡಬ್ಲ್ಯೂ-ರೂ.20,000/-., ಎಂ.ಎಲ್.ಐ.ಎಸ್ಸಿ-ರೂ.17,000/-ಗಳಾಗಿರುತ್ತದೆ. ಬೋಧನಾ ಶುಲ್ಕ ರಿಯಾಯಿತಿ: ಬಿಪಿಎಲ್ ಕಾರ್ಡ್ ಹೊಂದಿರುವ ಮಹಿಳಾ ವಿದ್ಯಾರ್ಥಿಗಳಿಗೆ, ಡಿಫೆನ್ಸ್ / ಮಾಜಿ ಸೈನಿಕ ವಿದ್ಯಾರ್ಥಿಗಳಿಗೆ ಸ್ನಾತಕ/ಸ್ನಾತಕೋತ್ತರ ಪದವಿಗಳ ಬೋಧನಾ…
ತುಮಕೂರು: ಗುಬ್ಬಿ ತಾಲೂಕು ನಿಟ್ಟೂರು ಹೋಬಳಿಪುರ ಗ್ರಾಮದ ಶ್ರೀ ಕಲ್ಲೇಶ್ವರ ಸ್ವಾಮಿ ರಥಕ್ಕೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯೋರ್ವನನ್ನು ಪೊಲೀಸರು ಬಂಧಿಸಿದ್ದಾರೆ. ಉದಾರಿ ಬಿನ್ ರಾಧೇಶಾಂ ಘೋರಕ್(35) ಎಂಬಾತ ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಈತ ಉತ್ತರ ಪ್ರದೇಶದ ರಾಜ್ಯ ಮೂಲದವನು ಎಂದು ತಿಳಿದು ಬಂದಿದೆ. ಮಾರ್ಚ್ 11ರ ಮಧ್ಯಾಹ್ನ ಆರೋಪಿ ರಥಕ್ಕೆ ಬೆಂಕಿ ಹಚ್ಚಿದ್ದ. ಪರಿಣಾಮವಾಗಿ ದೇವರ ರಥವು ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಘಟನೆ ಸಂಬಂಧ ಗುಬ್ಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಘಟನಾ ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ನವದೆಹಲಿ: ಕೇಂದ್ರ ಸರ್ಕಾರವು ಪೌರತ್ವ ತಿದ್ದುಪಡಿ ಕಾಯ್ದೆಯ ಜಾರಿ ಸಂಬಂಧ ಅಧಿಸೂಚನೆ ಪ್ರಕಟಿಸಿದ ಹಿನ್ನೆಲೆಯಲ್ಲಿ ದೆಹಲಿಯ ಹಲವು ಪ್ರದೇಶಗಳಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಮುಖ್ಯವಾಗಿ ಈಶಾನ್ಯ ದೆಹಲಿಯ ಶಾಹೀನ್ ಬಾಗ್, ಜಾಮಿಯಾ ನಗರ ಸೇರಿದಂತೆ ಸೂಕ್ಷ್ಮ ಪ್ರದೇಶಗಳಲ್ಲಿ ಭದ್ರತಾ ಸಿಬ್ಬಂದಿ ಗಸ್ತು ತಿರುಗಾಟ ನಡೆಸುತ್ತಿದ್ದಾರೆ.ಈ ಕುರಿತು ಪ್ರಚೋದನಕಾರಿ ಪೋಸ್ಟ್ಗಳು ಹಾಗೂ ವದಂತಿಗಳನ್ನು ತಡೆಯಲು ದೆಹಲಿಯ ಸೈಬರ್ ಪೊಲೀಸರು ಸಾಮಾಜಿಕ ಮಾಧ್ಯಮಗಳ ಮೇಲೆ ನಿಗಾ ಇಟ್ಟಿದ್ದಾರೆ. ಪೌರತ್ವ ತಿದ್ದುಪಡಿ ಮಸೂದೆಗೆ (ಸಿಎಎ) ಸಂಸತ್ತು 2019ರ ಡಿಸೆಂಬರ್ 11ರಂದು ಅಂಗೀಕಾರ ನೀಡಿತ್ತು. ರಾಷ್ಟ್ರಪತಿಯವರು ಮಾರನೆಯ ದಿನವೇ ಅದಕ್ಕೆ ಅಂಕಿತ ಹಾಕಿದ್ದರು. ಇದು ದೇಶದಾದ್ಯಂತ ಪ್ರತಿಭಟನೆಗಳಿಗೆ ಕಾರಣವಾಗಿತ್ತು. ಜಾಮಿಯಾ ನಗರ ಮತ್ತು ಶಾಹೀನ್ ಬಾಗ್ ಪ್ರತಿಭಟನೆಯ ಕೇಂದ್ರಬಿಂದುವಾಗಿದ್ದವು. 2020ರ ಆರಂಭದಲ್ಲಿ ದೆಹಲಿಯ ಈಶಾನ್ಯ ಭಾಗವು ಕೋಮು ಗಲಭೆಗಳಿಗೆ ಸಾಕ್ಷಿಯಾಗಿತ್ತು. ಇದರಲ್ಲಿ 53 ಜನರು ಮೃತಪಟ್ಟಿದ್ದು500ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. ದೆಹಲಿಯ ಸೀಲಂಪುರ್, ಜಾಫ್ರಾಬಾದ್, ಮುಸ್ತಫಾಬಾದ್, ಭಜನ್ಪುರ, ಖಜೂರಿ ಖಾಸ್ ಮತ್ತು ಸೀಮಾಪುರಿ ಸೇರಿದಂತೆ 43 ಸೂಕ್ಷ್ಮ…
ಪ್ರಧಾನಿ ನರೇಂದ್ರ ಮೋದಿ ಇಂದು ಗುಜರಾತ್ ಮತ್ತು ರಾಜಸ್ಥಾನಕ್ಕೆ ಭೇಟಿ ನೀಡಲಿದ್ದಾರೆ. ರಾಜಸ್ಥಾನದ ಪೋಖ್ರಾನ್ನಲ್ಲಿ ‘ಭಾರತ ಶಕ್ತಿ’ ವ್ಯಾಯಾಮಕ್ಕೆ ಪ್ರಧಾನಿ ಸಾಕ್ಷಿಯಾಗಲಿದ್ದಾರೆ. ಎಲ್ಲಾ ಮೂರು ಸಶಸ್ತ್ರ ಪಡೆಗಳ ಯುದ್ಧಸಾಮಗ್ರಿ ಮತ್ತು ತಂತ್ರಗಳನ್ನು ಪರಿಶೀಲಿಸುವ ‘ಭಾರತ್ ಶಕ್ತಿ’, ರಕ್ಷಣೆಯಲ್ಲಿ ಸ್ವಾವಲಂಬನೆಯತ್ತ ದೇಶದ ದೃಢವಾದ ಚಾಲನೆಯನ್ನು ಉದಾಹರಿಸುತ್ತದೆ. ಅಹಮದಾಬಾದ್ನಲ್ಲಿ 85,000 ಕೋಟಿ ರೂ.ಗಳ ರೈಲ್ವೆ ಯೋಜನೆಗಳ ಶಂಕುಸ್ಥಾಪನೆಯನ್ನು ಪ್ರಧಾನಿ ನೆರವೇರಿಸಲಿದ್ದು, ಅದನ್ನು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ. ಮೀಸಲಾದ ಸರಕು ಸಾಗಣೆ ಕಾರಿಡಾರ್ ಯೋಜನೆಯ ವಿವಿಧ ಪ್ರಮುಖ ಭಾಗಗಳನ್ನು ಪ್ರಧಾನಮಂತ್ರಿಯವರು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ. ಅಲ್ಲದೆ, 10 ಹೊಸ ವಂದೇ ಭಾರತ್ ರೈಲುಗಳಿಗೆ ಪ್ರಧಾನಿ ಚಾಲನೆ ನೀಡಲಿದ್ದಾರೆ. ಕೊಚ್ರಾಬ್ ಆಶ್ರಮವನ್ನು ಪ್ರಧಾನಿ ಉದ್ಘಾಟಿಸಲಿದ್ದಾರೆ. ಸಬರಮತಿಯಲ್ಲಿ ಗಾಂಧಿ ಆಶ್ರಮ ಸ್ಮಾರಕದ ಯೋಜನಾ ಯೋಜನೆಯನ್ನು ಸಹ ಪ್ರಸ್ತುತಪಡಿಸಲಾಗುತ್ತದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA
ಮೊಳಕೆಯೊಡೆದ ಕಡಲೆ ಕಾಳು ತಿಂದರೆ ಈ ಎಲ್ಲಾ ಸಮಸ್ಯೆಗಳು ದೂರ..! ಮೊಳಕೆಯೊಡೆದ ಕಡಲೆಯಲ್ಲಿ ಫೈಬರ್ & ಪ್ರೊಟೀನ್ ಹೆಚ್ಚಿನ ಪ್ರಮಾಣದಲ್ಲಿರುತ್ತದೆ. ಇದರಲ್ಲಿರುವ ನಾರಿನಂಶದಿಂದಾಗಿ ರಕ್ತದಲ್ಲಿನ ಸಕ್ಕರೆ ಪ್ರಮಾಣ ನಿಯಂತ್ರಣದಲ್ಲಿರುತ್ತದೆ. ಇದು ಮೆಗ್ನಿಸಿಯಮ್, ಪೊಟ್ಯಾಸಿಯಮ್, ಜೀವಸತ್ವಗಳು ಮತ್ತು ವಿಟಮಿನ್ ಎ, ಬಿ 6, ಸತು ಮತ್ತು ಮ್ಯಾಂಗನೀಸ್ ನಂತಹ ಖನಿಜಗಳನ್ನು ಒಳಗೊಂಡಿದೆ. ಇದು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಕಾರಣವಾಗುತ್ತವೆ. ಇದು ಮ್ಯಾಂಗನೀಸ್ ಅನ್ನು ಹೊಂದಿದ್ದು ಇದು ಚರ್ಮದ ಸುಕ್ಕು ಮತ್ತು ವಯಸ್ಸಾದ ಚಿಹ್ನೆಗಳನ್ನು ತಡೆಯುತ್ತವೆ. ಜ್ವರದ ಸಮಯದಲ್ಲಿ ಇವುಗಳಿಂದ ದೂರವಿರಿ ಜ್ವರ ತುಂಬಾ ಸಾಮಾನ್ಯವಾಗಿದೆ. ಹವಾಮಾನದಲ್ಲಿ ಬದಲಾವಣೆಯಾದಾಗ, ನಮ್ಮ ರೋಗನಿರೋಧಕ ಶಕ್ತಿ ಕಡಿಮೆಯಾದಾಗ, ಕೆಮ್ಮು ಮತ್ತು ಶೀತದಂತಹ ವಿವಿಧ ಕಾರಣಗಳಿಂದ ಜ್ವರ ಬರುತ್ತದೆ. ಈ ವೇಳೆ ಕೆಲವು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಜ್ವರ ಬಂದಾಗ ಬಹಳಷ್ಟು ಜನರು ಚಹಾ ಮತ್ತು ಕಾಫಿ ಕುಡಿಯುತ್ತಾರೆ. ಆದರೆ ಈ ಸಮಯದಲ್ಲಿ ಇವುಗಳನ್ನು ಕುಡಿಯಬಾರದು. ಏಕೆಂದರೆ ಅವು ನಿಮ್ಮ ನಿದ್ದೆಯನ್ನು ಕೆಡಿಸುತ್ತವೆ. ಇದು ನಿಮ್ಮ ದೇಹವನ್ನು ನಿರ್ಜಲೀಕರಣಗೊಳಿಸುತ್ತದೆ.…
ಬೀದರ: ಜಿಲ್ಲಾ ಪಂಚಾಯಿತಿ ಉಪಕಾಯ೯ದಶಿ೯ ಸೂರ್ಯಕಾಂತ ಬಿರಾದಾರ ಅವರಿಗೆ ಸದ್ಯ ಕೆಲಸದಿಂದ ಅಮಾನತಿನಲ್ಲಿರುವ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಪ್ರಭುದಾಸ ಜಾಧವ ಎಂಬುವರು ಚಪ್ಪಲಿಯಿಂದ ಹೊಡೆದ ಘಟನೆ ನಗರದಲ್ಲಿ ಸೋಮವಾರ ನಡೆದಿದೆ. ಅಕ್ರಮ ಎಸಗಿ ಸರಕಾರಕ್ಕೆ ಆಥಿ೯ಕ ನಷ ಉಂಟು ಮಾಡಿದ ಆರೋಪದಡಿ ಔರಾದ ತಾಲೂಕಿನ ಸುಂದಾಳ ಗ್ರಾಮ ಪಂಚಾಯಿತಿಯಲ್ಲಿ ಪಿಡಿಒ ಆಗಿದ್ದ ಪ್ರಭುದಾಸ ಜಾಧವನನ್ನು ಜನವರಿಯಲ್ಲಿ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆಲಸದಿಂದ ಅಮಾನತುಗೊ ಳಿಸಿದ್ದರು. ಕೆಲಸಕ್ಕೆ ಮರು ನಿಯೋಜನೆಗೊಳಿಸುವ ವಿಷಯಕ್ಕೆ ಸಂಬಂಧಿಸಿದಂತೆ ಉಪಕಾಯ೯ದಶಿ೯ ಸೂರ್ಯಕಾಂತ ಬಿರಾದಾರ ಅವರ ಚೇಂಬರ್ ಗೆ ಹೋಗಿದ್ದಾರೆ. ಬಳಿಕ ಇಬ್ಬರು ನಡುವೆ ವಾಗ್ವಾದ ನಡೆದಿದೆ. ಪ್ರಭುದಾಸ ಜಾಧವ ಕೋಪೋದ್ರಿಕ್ತನಾಗಿ ಸೂರ್ಯಕಾಂತ ಅವರಿಗೆ ಕಪಾಳಮೋಕ್ಷ ಮಾಡಿದ್ದಾನೆ. ಆನಂತರ ಚಪ್ಪಲಿಯಿಂದ ಹೊಡೆದಿದ್ದಾರೆ ಎಂದು ಪ್ರತ್ಯಕ್ಷದಶಿ೯ಗಳು ತಿಳಿಸಿದ್ದಾರೆ. ವರದಿ: ಅರವಿಂದ ಮಲ್ಲಿಗೆ, ಬೀದರ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಬಿಜೆಪಿಯ ಹಡಗು ಮುಳುಗಲು ಪ್ರಾರಂಭಿಸಿದೆ ಅದಕ್ಕೆ ಸಿಎಎ ಹೊರತರಲಾಗಿದೆ. ಭಾರತ ಎಂದಿಗೂ ಬಿಜೆಪಿಯನ್ನು ಕ್ಷಮಿಸುವುದಿಲ್ಲ ಎಂದು ಸ್ಟಾಲಿನ್ ಎಕ್ಸ್ ಹೇಳಿದ್ದಾರೆ. ಕೇಂದ್ರದ ವಿಭಜಕ ಕಾರ್ಯಸೂಚಿಯು ಸಿಎಎಯನ್ನು ಸಜ್ಜುಗೊಳಿಸಿದೆ. ಜನರಿಗೆ ಭರವಸೆಯನ್ನು ನೀಡುವ ಮಾನವೀಯತೆಯ ಸಂಕೇತ ಬದಲಾಗಿ, ಕಾನೂನು ಮುಸ್ಲಿಮರು ಮತ್ತು ಶ್ರೀಲಂಕಾ ತಮಿಳರ ವಿರುದ್ಧ ತಾರತಮ್ಯವನ್ನು ಹೊಂದಿದೆ. ಪ್ರಧಾನಿಯವರದು ಪೊಳ್ಳು ಭರವಸೆಗಳು ಎಂದು ಸ್ಟಾಲಿನ್ ಹೇಳಿದ್ದಾರೆ. ನರೇಂದ್ರ ಮೋದಿಯವರು ಲೋಕಸಭೆ ಚುನಾವಣೆಯ ಮೇಲಿನ ಪ್ರೀತಿಯನ್ನು ತೋರಿಸುತ್ತಿದ್ದಾರೆ. ಕೇಂದ್ರವು ಎಲ್ಲ ರಾಜ್ಯಗಳನ್ನು ಸಮಾನವಾಗಿ ಕಾಣುತ್ತಿಲ್ಲ ಎಂದರು. ರಾಜ್ಯಗಳನ್ನು ಒಡೆಯುವ ಮೂಲಕ ನಮ್ಮ ಭಾಷೆ, ಸಂಪ್ರದಾಯ, ಜನಾಂಗವನ್ನು ನಾಶ ಮಾಡಲು ಕೇಂದ್ರ ಪ್ರಯತ್ನಿಸುತ್ತಿದೆ ಎಂದು ಎಂ.ಕೆ.ಸ್ಟಾಲಿನ್ ಹೇಳಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA
ಅಸ್ಸಾಂನಲ್ಲಿ ಕೂಡ ಪೌರತ್ವ ತಿದ್ದುಪಡಿ ಕಾಯ್ದೆಯ ಅನುಷ್ಠಾನದ ವಿರುದ್ಧ ಪ್ರತಿಭಟನೆ ನಡೆಸುತ್ತಿದೆ. ಸಿಎಎ ಅನುಷ್ಠಾನದ ವಿರುದ್ಧ ಅಸ್ಸಾಂನಲ್ಲಿ ‘ಸರ್ಬತ್ಮಕ್ ಹರ್ತಾಲ್’ಗೆ ಕರೆ ನೀಡಿರುವ ರಾಜಕೀಯ ಪಕ್ಷಗಳಿಗೆ ಗುವಾಹಟಿ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ. ಎಲ್ಲಾ ಅಸ್ಸಾಂ ವಿದ್ಯಾರ್ಥಿಗಳ ಒಕ್ಕೂಟವು CAA ಅಧಿಸೂಚನೆಯ ನಿಯಮಗಳ ಪ್ರತಿಯನ್ನು ಸುಟ್ಟು ಪ್ರತಿಭಟಿಸಿತು. ರಾಜ್ಯದ ವಿವಿಧೆಡೆ ಪ್ರತಿಭಟನಾ ಸಭೆಗಳನ್ನೂ ಆಯೋಜಿಸಲಾಗಿತ್ತು. ಅಸ್ಸಾಂನ ಸಂಯುಕ್ತ ವಿರೋಧ ವೇದಿಕೆ ಇಂದು ರಾಜ್ಯಾದ್ಯಂತ ಹರತಾಳ ಘೋಷಿಸಿದೆ. ಆರು ವರ್ಷಗಳ ಅಸ್ಸಾಂ ಆಂದೋಲನದ ನೇತೃತ್ವ ವಹಿಸಿದ್ದ ಆಲ್ ಅಸ್ಸಾಂ ವಿದ್ಯಾರ್ಥಿಗಳ ಒಕ್ಕೂಟ, ನ್ಯಾಯಾಲಯದ ಒಳಗೆ ಮತ್ತು ಹೊರಗೆ ಕಾನೂನು ಹೋರಾಟ ನಡೆಸುವುದಾಗಿ ಸ್ಪಷ್ಟಪಡಿಸಿದೆ. 2019 ರ ಸಿಎಎ ವಿರೋಧಿ ಆಂದೋಲನದಲ್ಲಿ ಪಾತ್ರಕ್ಕಾಗಿ 567 ದಿನಗಳನ್ನು ಜೈಲಿನಲ್ಲಿ ಕಳೆದ ಶಾಸಕ ಅಖಿಲ್ ಗೊಗೊಯ್, ಗೋಲಾಘಾಟ್ ಜಿಲ್ಲೆಯಲ್ಲಿ ಪ್ರತಿಭಟನಾ ರ್ಯಾಲಿಯನ್ನು ನಡೆಸಿದರು. 2019-20ರಲ್ಲಿ ರಾಜ್ಯದಲ್ಲಿ ಸಿಎಎ ವಿರೋಧಿ ಆಂದೋಲನದ ನಂತರ ರಚನೆಯಾದ ಅಸ್ಸಾಂ ರಾಷ್ಟ್ರೀಯ ಪರಿಷತ್ತು ರಾಜ್ಯದ ವಿವಿಧ ಭಾಗಗಳಲ್ಲಿ ಪ್ರತಿಭಟನೆಗಳನ್ನು ನಡೆಸಿತು. ಅಸ್ಸಾಂ ದೊಡ್ಡ…
ಹುಣಸೂರು ತಾಲ್ಲೂಕು ಚಿಕ್ಕಹೆಜ್ಜೂರು ಹಾಡಿ ಬಳಿ ಪಾಳು ಮನೆಯಲ್ಲಿ ಜಿಂಕೆ ಕಳೇಬರ ಪತ್ತೆಯಾಗಿದೆ. ಬೀದಿ ನಾಯಿಗಳ ದಾಳಿಗೆ ಸಿಲುಕಿ ಮೃತಪಟ್ಟಿದ್ದ ಜಿಂಕೆಯ ಕಳೇಬರ ವನ್ನು ಪಾಳು ಮನೆಯಲ್ಲಿ ಬಚ್ಚಿಟ್ಟಿರುವ ಆರೋಪ ಕೇಳಿ ಬಂದಿದೆ. ನಾಗರಹೊಳೆ ಉದ್ಯಾನದ ವೀರನಹೊಸಹಳ್ಳಿ ವನ್ಯಜೀವಿ ವಲಯದಂಚಿನ ಚಿಕ್ಕಹೆಜ್ಜೂರು ಹಾಡಿ-2ರಲ್ಲಿ ನೀಲಮ್ಮರಿಗೆ ಸೇರಿದ ಪಾಳು ಮನೆಯಲ್ಲಿ ಸುಮಾರು ಒಂದೂವರೆ ವರ್ಷದ ಗಂಡು ಜಿಂಕೆ ಕಳೇಬರ ಪತ್ತೆಯಾಗಿದೆ. ಜಿಂಕೆಯನ್ನು ಬೀದಿನಾಯಿಗಳು ಅಟ್ಟಾಡಿಸಿ ಕೊಂದು ಹಾಕಿದ್ದವು. ಈ ಬಗ್ಗೆ ಅರಣ್ಯ ಇಲಾಖೆಗೆ ಮಾಹಿತಿ ನೀಡುವ ಬದಲು ಕೆಲವರು ಸೇರಿಕೊಂಡು ಮಾಂಸ ತಿನ್ನುವ ಆಸೆಗಾಗಿ ಜಿಂಕೆ ಕಳೇಬರ ವನ್ನು ಬಚ್ಚಿಟ್ಟಿದ್ದರು ಎನ್ನಲಾಗಿದೆ. ಇದೀಗ ಜಿಂಕೆ ಮಾಂಸವನ್ನ ಅರಣ್ಯ ಇಲಾಖೆ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಲೋಕಸಭೆ ಚುನಾವಣೆಯಲ್ಲಿ ಟಿಕೆಟ್ ಕೈತಪ್ಪುವ ಆತಂಕ ದಕ್ಷಿಣ ಕನ್ನಡ ಜಿಲ್ಲೆಯ ಸಂಸದ ನಳಿನ್ ಕುಮಾರ್ ಕಟೀಲ್ ಅವರಿಗೂ ಎದುರಾಗಿದ್ದು ಈ ಕುರಿತು ಮಾತನಾಡುವ ವೇಳೆ ಭಾವುಕರಾದರು. ಬಿಜೆಪಿ ಟಿಕೆಟ್ ಕೈತಪ್ಪುವ ಸಾಧ್ಯತೆ ಎಂದು ವರದಿಯಾಗುತ್ತಿರುವ ಹಿನ್ನೆಲೆ ಈ ಕುರಿತು ಮಾತನಾಡಿದ ಸಂಸದ ನಳೀನ್ ಕುಮಾರ್ ಕಟೀಲ್, ಸಾಮಾನ್ಯ ಕಾರ್ಯಕರ್ತನನ್ನು ಗುರುತಿಸುವುದು ನಮ್ಮ ಪಕ್ಷದ ವಿಶೇಷತೆ. ಪಕ್ಷದ ರಾಷ್ಟ್ರೀಯ ನಾಯಕರು ಎಲ್ಲಾ ಯೋಚನೆ ಮಾಡಿ ಆಯ್ಕೆ ಮಾಡುತ್ತಾರೆ. ಹೈಕಮಾಂಡ್ ತೀರ್ಮಾನಕ್ಕೆ ಬದ್ದ. ಪಕ್ಷ ಕಸ ಗುಡಿಸಿ ಎಂದರೂ ಗುಡಿಸುತ್ತೇನೆ. ನನಗೆ ಮೂರು ಬಾರಿ ಅವಕಾಶ ನೀಡಿದ್ದಾರೆ . ಪಕ್ಷ ನಿಂತ ನೀರಾಗಬಾರದು. ಹೊಸಬರು ಬರ್ತಾ ಇರಬೇಕು ಚಲಾವಣೆ ಆಗುತ್ತಿರಬೇಕು ಎಂದು ಹೇಳಿದರು. ರಾಷ್ಟ್ರೀಯ ನಾಯಕರ ತೀರ್ಮಾನಕ್ಕೆ ನಾವೆಲ್ಲಾ ಬದ್ಧರಾಗಿರುತ್ತೇವೆ. ಯಾರೇ ಅಭ್ಯರ್ಥಿ ಆದರೂ ನರೇಂದ್ರ ಮೋದಿ ಮತ್ತೆ ಪ್ರಧಾನಿಯಾಗಬೇಕೆಂಬುದು ನಮ್ಮ ಗುರಿ. ರಾಷ್ಟ್ರೀಯ ನಾಯಕರ ಯೋಚನೆಗಳಿಗೆ ಬದ್ಧರಾಗಿ ಕೆಲಸ ಮಾಡುವವರು ನಾವು ಎಂದು ನಳಿನ್ ಹೇಳಿದರು. ಬಿಜೆಪಿಯಲ್ಲಿ ಯಾರನ್ನೂ ತುಳಿಯುವುದಿಲ್ಲ. ಅವಕಾಶ ಸಿಕ್ಕಾಗ…