Subscribe to Updates
Get the latest creative news from FooBar about art, design and business.
- ಉದ್ಯೋಗ ಅರಸಿ ನಗರಗಳಿಗೆ ವಲಸೆ ಹೋಗಬೇಡಿ: ನಿಮ್ಮೂರಲ್ಲೇ ಕೆಲಸ ನೀಡಲಿದೆ ‘ವಿಬಿ-ಜಿ ರಾಮ್ ಜಿ’ ಯೋಜನೆ
- ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್ ಲೈನ್ ಸಹಿ ಸಂಗ್ರಹ
- ಸುಧಾಮೂರ್ತಿ ಹಾಗೂ ರಮೇಶ್ ಅರವಿಂದ್ ಅವರಿಂದ ಕೆ.ಎನ್ ಗಣೇಶಯ್ಯ ಅವರ “ಪುಣ್ಯಕೋಟಿ ಶತಕರುಣಿ” ದೃಶ್ಯಕಾವ್ಯದ ಲೋಕಾರ್ಪಣೆ
- ಆ.8ಕ್ಕೆ ಬೆಂಗಳೂರಿನಲ್ಲಿ ಪತ್ರಕರ್ತರ ನಾಲ್ಕನೇ ರಾಜ್ಯ ಸಮ್ಮೇಳನ: ಜಾನಸನ್ ಘೋಡೆ
- ಚಿತ್ರಕಲಾ ಶಿಕ್ಷಕರ ನೇಮಕ: ಇನ್ನೆಷ್ಟು ವಿಳಂಬ?
- ತುಮಕೂರು: ಎಸ್.ಐ.ಆರ್ ಪ್ರಕ್ರಿಯೆಗೆ ಸೂಕ್ತ ಮಾರ್ಗದರ್ಶನ ನೀಡಿ
- ತುಮಕೂರು: ಜುಲೈ 22ರಂದು ಉದ್ಯಮಶೀಲತೆ ತಿಳುವಳಿಕೆ ಶಿಬಿರ
- ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಮೀನುಗಾರಿಕೆ ತರಬೇತಿ ಕೇಂದ್ರ ಸ್ಥಾಪಿಸಲು ಕ್ರಮ: ಶಾಸಕ ಸಿ.ಬಿ.ಸುರೇಶ್ ಬಾಬು
Author: admin
ಆರ್ಥಿಕ ವರ್ಷದ ಮೊದಲ ದಿನ ಎಲ್ ಪಿಜಿ ದರವನ್ನು ಕಡಿಮೆ ಮಾಡಲಾಗಿದ್ದು, ಸರ್ಕಾರ ಗ್ಯಾಸ್ ಬಳಕೆದಾರರಿಗೆ ಗುಡ್ ನ್ಯೂಸ್ ನೀಡಿದೆ. ವಾಣಿಜ್ಯ ಬಳಕೆಯ 19 ಕೆಜಿ ಸಿಲಿಂಡರ್ ಬೆಲೆ 30.50 ರೂ. ಇಳಿಕೆಯಾಗಿದೆ ಎಂದು ವರದಿ ತಿಳಿಸಿದೆ. ಇನ್ನು 5ಕೆಜಿ ಎಫ್ ಟಿಎಲ್ (ಫ್ರೀ ಟ್ರೇಡ್ ಎಲ್ ಪಿಜಿ) ಸಿಲಿಂಡರ್ ಬೆಲೆ 7.50 ರೂಪಾಯಿ ಇಳಿಕೆಯಾಗಿದೆ. ಈ ಪರಿಷ್ಕೃತ ದರ ಇಂದು (ಏಪ್ರಿಲ್ 01) ರಿಂದಲೇ ಅನ್ವಯವಾಗಲಿದೆ ಎನ್ನಲಾಗಿದೆ. ಈ ಹಿಂದೆ ಮಾರ್ಚ್ 1ರಿಂದ ಅಂದರೆ ಇಂದಿನಿಂದ ಸಿಲಿಂಡರ್ ಬೆಲೆಯಲ್ಲಿ ಏರಿಕೆಯಾಗಿತ್ತು ಮಾರ್ಚ್ ಮೊದಲ ದಿನವೇ. ತೈಲ ಕಂಪನಿಗಳು ವಾಣಿಜ್ಯ ಎಲ್ ಪಿಜಿ ಸಿಲಿಂಡರ್ ಗಳ ಬೆಲೆಯನ್ನು ಹೆಚ್ಚಿಸಿದ್ದವು. ಈ ಹಿಂದೆ ಜನವರಿ, ಫೆಬ್ರವರಿ ತಿಂಗಳಲ್ಲೂ ಬೆಲೆ ಏರಿಕೆಯಾಗಿತ್ತು. ಈಗ ಆರ್ಥಿಕ ವರ್ಷದ ಆರಂಭದಲ್ಲಿ ವಾಣಿಜ್ಯ ಸಿಲಿಂಡರ್ ಗಳಿಗೆ ಇಳಿಕೆ ಮಾಡಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್…
ಕೊರಟಗೆರೆ : ಪಟ್ಟಣದ ಎಸ್ ಎಸ್ ಆರ್ ವೃತದಲ್ಲಿ ತ್ರಿವಿಧ ದಾಸೋಹಿ ನಡೆದಾಡುವ ದೇವರು ಕಾಯಕಯೋಗಿ ಡಾ.ಶಿವಕುಮಾರ ಸ್ವಾಮೀಜಿಯವರ 117ನೇ ಜಯಂತೋತ್ಸವ ಕಾರ್ಯಕ್ರಮವನ್ನು ಅದ್ದೂರಿಯಾಗಿ ನೆರವೇರಿಸಲಾಯಿತು. ಬಿಜೆಪಿ ಮುಖಂಡ ಪವನ್ ಕುಮಾರ್ ಮಾತನಾಡಿ, ಪ್ರತಿ ವರ್ಷದಂತೆ ಕೊರಟಗೆರೆಯಲ್ಲಿ ಸಮಸ್ತ ನಾಗರಿಕರ ಸಹಕಾರದಿಂದ ಸ್ವಾಮೀಜಿಯವರ ಜಯಂತೋತ್ಸವ ಕಾರ್ಯಕ್ರಮವನ್ನು ಆಚರಿಸಿಕೊಂಡು ಬರುತ್ತಿದ್ದೇವೆ. ಹಾಗೆಯೇ ಇಂದು ಕೂಡ ಡಾ.ಶಿವಕುಮಾರ ಸ್ವಾಮೀಜಿಯವರ 117ನೇ ಜಯಂತೋತ್ಸವ ಕಾರ್ಯಕ್ರಮವನ್ನು ಸ್ವಾಮೀಜಿಯವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪುಷ್ಪಾರ್ಚನೆಯನ್ನು ಮಾಡಿ ಹಬ್ಬದ ರೀತಿ ಆಗಮಿಸಿದ್ದ ಭಕ್ತಾದಿಗಳಿಗೆ ಪ್ರಸಾದ ವಿನಿಯೋಗ ಮಾಡುತ್ತಿದ್ದೇವೆ ಎಂದು ತಿಳಿಸಿದರು. ಬಿಜೆಪಿ ಮಂಡಲ ಅಧ್ಯಕ್ಷರಾದ ದರ್ಶನ್ ಮಾತನಾಡಿ, ನಮಗೆ ತಿಳಿದಿರುವ ಹಾಗೆ ಡಾ.ಶಿವಕುಮಾರ್ ಸ್ವಾಮೀಜಿಯವರ ಕೊಡುಗೆ ಏನೆಂಬುದು ನಮ್ಮ ರಾಜ್ಯಕ್ಕೆ ಅಲ್ಲ ಇಡೀ ದೇಶಕ್ಕೆ ತಿಳಿದಿದೆ. ಸ್ವಾಮೀಜಿಗಳು ಎಂದರೆ ಹೀಗಿರಬೇಕು. ಮಠದಲ್ಲಿ ವಾಸಿಸುವ ಸಾವಿರಾರು ಮಕ್ಕಳಿಗೆ ವಿದ್ಯಾಭ್ಯಾಸ ಕೊಡುವುದರ ಜೊತೆಗೆ ಆ ಮಕ್ಕಳಿಗೆ ಊಟದ ವ್ಯವಸ್ಥೆ ಆ ಮಕ್ಕಳಿಗೆ ಬೇಕಾಗಿರುವ ಎಲ್ಲಾ ಮೂಲಭೂತ ಸೌಕರ್ಯಗಳನ್ನು ಒದಗಿಸಿ ಇಂದು ಪ್ರಪಂಚದ ಮೂಲೆ…
ಮಾಜಿ ಸಿಎಂ ಯಡಿಯೂರಪ್ಪಹಾಗೂ ಅವರ ಮಕ್ಕಳ ವಿರುದ್ಧ ಸಿಡಿದೆದ್ದಿರುವ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ, “ಈ ಲೋಕಸಭಾ ಚುನಾವಣೆ ಬಳಿಕ ವಿಜಯೇಂದ್ರ ಪಕ್ಷದ ಅಧ್ಯಕ್ಷ ಸ್ಥಾನದಲ್ಲಿ ಉಳಿಯಲ್ಲ” ಎಂದು ಭವಿಷ್ಯ ನುಡಿದಿದ್ದಾರೆ. ಸುದ್ದಿಘೋಷ್ಟಿ ನಡೆಸಿ ಮಾತನಾಡಿದ ಈಶ್ವರಪ್ಪ, ‘ಬಿಎಸ್ ವೈ ಪೂರ್ತಿ ಕುಟುಂಬ ಮೋಸದ ಕುಟುಂಬ, ಬರೀ ಮೋಸದ ರಾಜಕಾರಣ ಮಾಡುತ್ತಿದ್ದಾರೆ. ಒಂದು ನಗರಸಭಾ ಟಿಕೆಟ್ಗೆ 5 ಜನರಿಗೆ ಮಾತು ಕೊಟ್ಟು ಕಾರ್ಯಕರ್ತರಿಗೆ ಮೋಸ ಮಾಡುತ್ತಿದ್ದಾರೆ . ಈ ಚುನಾವಣೆ ಬಳಿಕ ವಿಜಯೇಂದ್ರ ಪಕ್ಷದ ಅಧ್ಯಕ್ಷ ಸ್ಥಾನದಲ್ಲಿ ಇರುವುದಿಲ್ಲ. ಯಾಕೆಂದರೆ, ಕಳೆದ ಬಾರಿ 25 ಸೀಟು ಗೆದ್ದಿತ್ತು. ಆದರೆ ಈ ಬಾರಿ ಯಾರ್ಯಾರನ್ನೋ ಅಭ್ಯರ್ಥಿ ಮಾಡಿದ್ದಾರೆ, ಎಷ್ಟು ಗೆಲ್ಲುತ್ತೇವೆ ಗೊತ್ತಿಲ್ಲ. ರಾಘವೇಂದ್ರ ಈ ಬಾರಿ ಆಯ್ಕೆಯಾಗುವುದಿಲ್ಲ ಅಲ್ಲಿಗೆ ಕುಟುಂಬ ರಾಜಕಾರಣ ನಿಲ್ಲುತ್ತದೆ’ ಎಂದು ಹೇಳಿದರು. “ನನಗೆ ಪಕ್ಷದಲ್ಲಿ ನಿಷ್ಠಾವಂತ ಕಾರ್ಯಕರ್ತ ಎಂಬ ಹೆಸರಿದೆ ಅದನ್ನು ಉಳಿಸಿಕೊಂಡು ಹೋಗ್ತೇನೆ ಎಂದರು. ಇನ್ನು ಮುಸ್ಲಿಂ ಮತಗಳನ್ನು ನಿರೀಕ್ಷೆ ಮಾಡ್ತೀರಾ ಎಂಬ ಪ್ರಶ್ನೆಗೆ ರಾಷ್ಟ್ರವಾದಿ…
ಬೆಂಗಳೂರು: ಬಾಂಬ್ ಹಾಕುವುದೇ ಬ್ರ್ಯಾಂಡ್ ಬೆಂಗಳೂರು ಮಾದರಿಯಾಗಿದೆ. ಬೆಂಗಳೂರನ್ನು ಬಾಂಬ್ ನಿಂದ ರಕ್ಷಣೆ ಮಾಡಲು ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕು. ರಾಜ್ಯಸಭೆ ಚುನಾವಣೆಯಲ್ಲಿ ನಾಸೀರ್ ಹುಸೇನ್ ಗೆದ್ದಾಗ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಮೊಳಗಿದವು. ಕಾಂಗ್ರೆಸ್ ನಾಯಕರು ಬ್ರ್ಯಾಂಡ್ ಬೆಂಗಳೂರು ಮಾಡುತ್ತೇವೆ ಅಂದರು, ಆದರೆ ಈಗ ಬಾಂಬ್ ಬೆಂಗಳೂರು ಆಗಿದೆ ಎಂದು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಮಾಜಿ ಸಚಿವ ಸಿಟಿ ರವಿ ಹರಿಹಾಯ್ದರು. ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, 2023ರ ಚುನಾವಣೆಯಲ್ಲಿ ಬೆಳಗಾವಿ ಉತ್ತರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಾಗಲೂ ಕೂಡ ಪಾಕಿಸ್ತಾನ ಜಿಂದಾಬಾದ್ ಅಂತ ಕೂಗಲಾಗಿದೆ. ರಾಜ್ಯಸಭಾ ಚುನಾವಣೆಯಲ್ಲಿ ನಾಸೀರ್ ಹುಸೇನ್ ಗೆಲುವನ್ನು ಪಾಕಿಸ್ತಾನ ಜಿಂದಾಬಾದ್ ಅಂತ ಕೂಗಿ ಸಂಭ್ರಮಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹೇಳಿಕೆಗಳನ್ನು ನೀಡುತ್ತಾ ಸಿಎಂ, ಡಿಸಿಎಂ, ಪರಮೇಶ್ವರ್, ದಿನೇಶ್ ಗುಂಡೂರಾವ್ ನಮ್ಮ ಕಿವಿಗೆ ಹೂವು ಮೂಡಿಸಲು ಪ್ರಯತ್ನ ಮಾಡಿದರು ಎಂದು ವಾಗ್ದಾಳಿ ಮಾಡಿದರು. ಡಿಜೆ ಹಳ್ಳಿ ಕೆಜಿ ಹಳ್ಳಿ ಗಲಾಟೆಯಲ್ಲಿ ಪಾಲ್ಗೊಂಡವರನ್ನು ಅಮಾಯಕರು ಎಂದು ಕಾಂಗ್ರೆಸ್ ವಕಾಲತ್ತು…
ಬೆಂಗಳೂರು: ಹೆಚ್.ಡಿ. ಕುಮಾರಸ್ವಾಮಿ ಅವರು ಕಮಲದ ಧ್ವಜ ಹಾಕಿದ್ದಾರೆ, ಬದುಕಿದ್ದು ಸತ್ತಂತೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ. ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ. ಶಿವಕುಮಾರ್, “ರಾಜ್ಯದ ಜನರಿಗೆ ನಾವು ಹೇಳಿದಂತೆ ಮಾತು ಉಳಿಸಿಕೊಂಡಿದ್ದೇವೆ. ಮಂಡ್ಯದ ಜನತೆ ಸ್ವಾಭಿಮಾನಕ್ಕೆ ಮತಕೊಡಿ ಎಂದು ಮನವಿ ಮಾಡಿದರು. ಮಂಡ್ಯ ರಾಜಕಾರಣ ನೋಡಿದರೆ ನಾಚಿಗೆ ಆಗುತ್ತೆ. ಪುಟ್ಟರಾಜು ಟಿಕೆಟ್ ಗಾಗಿ ಕಾದು ಕುಳಿತಿದ್ದ, ಇದೀಗ ಗೋವಿಂದ. ಕುಮಾರಸ್ವಾಮಿ ಕಮಲದ ಧ್ವಜ ಹಾಕಿಕೊಂಡಿದ್ದಾರೆ. ಬದುಕಿದ್ದು ಸತ್ತಂತೆ ಎಂದರು. ಕಳೆದ ಬಾರಿ ಮೈತ್ರಿಯಂತೆ ಕುಮಾರಸ್ವಾಮಿ ಅವರಿಗೆ ಸಹಾಯ ಮಾಡಲು ಬಂದಿದ್ದೆ. ಆದರೆ ಅವರಿಗೆ ಅಧಿಕಾರ ಉಳಿಸಿಕೊಳ್ಳಲು ಆಗಿಲ್ಲ. ಆದರೆ ಈಗ ತಮ್ಮ ಅಧಿಕಾರ ತೆಗೆದವರ ಜೊತೆಯೇ ಕುಮಾರಸ್ವಾಮಿ ಹೋಗಿದ್ದಾರೆ” ಎಂದರು. “ಹೆಚ್.ಡಿ. ಕುಮಾರಸ್ವಾಮಿ ಹಾಸನದಿಂದ ರಾಮನಗರಕ್ಕೆ ಬಂದಿದ್ದರು. ಇದೀಗ ಮಂಡ್ಯಕ್ಕೆ ಬಂದಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಯಾರು ಎಲ್ಲಿ ಬೇಕಾದರೂ ಸ್ಪರ್ಧೆ ಮಾಡಬಹುದು, ಮಾಡಲಿ. ಬೆಂಗಳೂರು ಗ್ರಾಮಾಂತರದಲ್ಲಿ ಭಾವನನ್ನು ಬಿಜೆಪಿಯಿಂದ ನಿಲ್ಲಿಸಿದ್ದಾರೆ. ಎಲ್ಲಾ ಕಡೆ ನೀವೇ ನಿಂತರೆ ಕಾರ್ಯಕರ್ತರು ಏನು…
ಮೈಸೂರು: ಮೈಸೂರು-ಕೊಡಗು ಹಾಗೂ ಚಾಮರಾಜನಗರ ಲೋಕಸಭಾ ಕ್ಷೇತ್ರ ಗೆಲ್ಲಲು ಪಣ ತೊಟ್ಟಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಬಿಳಿಗೆರೆಯಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿ, “ನಾನು ಸಿಎಂ ಸ್ಥಾನದಲ್ಲಿ ಇರಬೇಕೋ ಬೇಡವೋ? ನಾನು ಸಿಎಂ ಸ್ಥಾನದಲ್ಲಿರಬೇಕು ಅಂದರೇ ವರುಣಾ ಕ್ಷೇತ್ರದಲ್ಲಿ 60 ಸಾವಿರ ಲೀಡ್ ಕೊಟ್ಟು ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಿ” ಎಂದು ಮನವಿ ಮಾಡಿದರು. “ವರುಣಾ ನನ್ನ ಪಾಲಿಗೆ ಅದೃಷ್ಟದ ಕ್ಷೇತ್ರ. ನಿಮ್ಮಿಂದ ಎರಡು ಬಾರಿ ಮುಖ್ಯಮಂತ್ರಿಯಾದೆ. ವರುಣಾ ಕ್ಷೇತ್ರದಲ್ಲಿ 60 ಸಾವಿರ ಲೀಡ್ ಕೊಡಿ. ನನಗಿಂತ ಹೆಚ್ಚು ಲೀಡ್ ಕೊಟ್ಟು ಸುನಿಲ್ ಬೋಸ್ ಗೆಲ್ಲಿಸಿ. ಆಗ ನನ್ನನ್ನು ಯಾರೂ ಮುಟ್ಟಲ್ಲ” ಎಂದು ಹೇಳಿದರು. “ನಮ್ಮ ಕಾಂಗ್ರೆಸ್ ಪಕ್ಷದ ಗ್ಯಾರಂಟಿಗಳಿಂದಾಗಿ ರಾಜ್ಯದಲ್ಲಿ ಹೆಣ್ಣುಮಕ್ಕಳ ಆರ್ಥಿಕ ಸಾಮರ್ಥ್ಯ ಹೆಚ್ಚಿದೆ. ದುಡಿಯುವ ಅವಕಾಶವೂ ಹೆಚ್ಚಿದೆ. ಪುರುಷರ ಜೇಬಿಗೆ ಹಣ ಉಳಿತಾಯವಾಗಿದೆ. ಜನಸಾಮಾನ್ಯರ ಜೇಬಿಗೆ ಹಣ ಹಾಕಿ ನಮ್ಮ ಜನರ ಕೊಳ್ಳುವ ಶಕ್ತಿ ಹೆಚ್ಚಿಸಿದ್ದೇವೆ. ಇದನ್ನು ವಿರೋಧಿಸುವ ಬಿಜೆಪಿಯ ಕಾರ್ಯಕರ್ತರೂ, ಬೆಂಬಲಿಗರೂ ನಮ್ಮ ಗ್ಯಾರಂಟಿ ಯೋಜನೆಗಳ ಫಾಲಾನುಭವಿಗಳಾಗಿದ್ದಾರೆ” ಎಂದರು. ನಮ್ಮತುಮಕೂರಿನ…
ರಾಗಿ ಅಂಬಲಿ ಕುಡಿಯದೇ ಇದ್ರೆ ನಿಮಗೆ ದೊಡ್ಡ ನಷ್ಟ! ರಾಗಿ ಅಂಬಲಿ ಕುಡಿಯುವುದರಿಂದ ಹೊಟ್ಟೆಗೆ ತುಂಬಾ ಆರಾಮದಾಯಕ ಮತ್ತು ತಂಪಾಗಿರುತ್ತದೆ. ರಾಗಿ ಅಂಬಲಿಯಲ್ಲಿ ಫೈಬರ್ ಮತ್ತು ಪ್ರೊಟೀನ್ ಸಮೃದ್ಧವಾಗಿದೆ. ನೀವು ರಾಗಿ ಅಂಬಲಿಯನ್ನು ಒಂದು ಲೋಟ ಕುಡಿದರೂ ನಾಲ್ಕು ಗಂಟೆಯಾದರೂ ಹಸಿವಾಗುವುದಿಲ್ಲ. ಹೊಟ್ಟೆ ತುಂಬಿದ ಭಾವನೆ. ಇದು ಕೊಲೆಸ್ಟ್ರಾಲ್ ಮಟ್ಟವನ್ನು ಸಹ ಕಡಿಮೆ ಮಾಡುತ್ತದೆ. ತೂಕವನ್ನು ಸುಲಭವಾಗಿ ಕಳೆದುಕೊಳ್ಳಬಹುದು. ಬೇಸಿಗೆಯಲ್ಲಿ ಮಾತ್ರವಲ್ಲದೆ ಪ್ರತಿನಿತ್ಯ ರಾಗಿ ಜಾವ ಕುಡಿದರೆ ಎಲುಬುಗಳು ಕೂಡ ಆರೋಗ್ಯಕರವಾಗಿರುತ್ತದೆ. ಮೀನು ಬೇಯಿಸಿದಾಗ ಹೀಗೆ ಮಾಡಿದರೆ ವಾಸನೆ ಬರುವುದಿಲ್ಲ..! ಮೀನನ್ನು ಬೇಯಿಸಿದ ನಂತರ, ಸಾಧ್ಯವಾದಷ್ಟು ಬೇಗ ಅಡಿಗೆ ಸ್ವಚ್ಛಗೊಳಿಸಿ. ಇದರಿಂದ ವಾಸನೆ ಕಡಿಮೆಯಾಗುತ್ತದೆ. ಸ್ಟೌ ಮತ್ತು ಕೌಂಟರ್ ಟಾಪ್ ಗಳನ್ನು ಸ್ವಚ್ಛಗೊಳಿಸುವುದರಿಂದ ವಾಸನೆ ದೂರವಾಗುತ್ತದೆ. ಇನ್ನು ಯಾವುದೇ ಸಲಹೆಗಳನ್ನು ಅನುಸರಿಸಲು ಬಯಸದವರು ಸ್ವಲ್ಪ ಸಮಯದವರೆಗೆ ಫ್ಯಾನ್ ಅನ್ನು ಆನ್ ಮಾಡಬಹುದು ಮತ್ತು ಏರ್ ಫ್ರೆಶ್ನರ್ ಗಳನ್ನು ಬಳಸಬಹುದು. ಮೀನು ಹುರಿಯುವಾಗ ಬೇರೆ ಬಾಣಲೆಯಲ್ಲಿ ನೀರನ್ನು ಕುದಿಸಿ. ಇದಕ್ಕೆ 2-3 ಸ್ಪೂನ್…
ಬೆಂಗಳೂರು: ಬಿಜೆಪಿ ನಾಯಕರ ಕುರಿತು ಸುಳ್ಳು ಮಾಹಿತಿ ಇರುವ ಪೋಸ್ಟ್ ಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್ ಲೋಡ್ ಮಾಡಿರುವ ಪ್ರಕರಣದಲ್ಲಿ ಡಿ.ಕೆ. ಶಿವಕುಮಾರ್ ಅವರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸೇರಿ ಹಲವು ನಾಯಕರು, ಸಂಸದರು, ಶಾಸಕರ ವಿರುದ್ಧ ಪೋಸ್ಟ್ ಹಾಕಿದ ಆರೋಪದಲ್ಲಿ ಡಿ.ಕೆ. ಶಿವಕುಮಾರ್ ವಿರುದ್ಧ ಕೇಸ್ ದಾಖಲಿಸಲಾಗಿದೆ. ಬಿಜೆಪಿ ನಾಯಕರ ಕೈಗೆ ಸ್ಲೇಟ್ ಕೊಟ್ಟು, ಸುಳ್ಳು ಬರಹದ ಪೋಸ್ಟ್ ಹಾಕಿದ ಹಿನ್ನೆಲೆಯಲ್ಲಿ ಯೋಗೇಂದ್ರ ಹೊಡಾಘಟ್ಟ ಎಂಬುವರು ಪಿಸಿಆರ್ ದಾಖಲಿಸಿದ್ದರು. ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈಗ ನ್ಯಾಯಾಲಯವು ಡಿ.ಕೆ. ಶಿವಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಆದೇಶಿಸಿದೆ. ಡಿ.ಕೆ. ಶಿವಕುಮಾರ್ ಹಾಗೂ ಬಿ.ಆರ್. ನಾಯ್ಡು ಅವರ ವಿರುದ್ಧ ಕೇಸ್ ದಾಖಲಿಸಬೇಕು ಎಂಬುದಾಗಿ 42ನೇ ಎಸಿಎಂಎಂ ಜನಪ್ರತಿನಿಧಿಗಳ ನ್ಯಾಯಾಲಯವು ಆದೇಶಿಸಿದೆ. ಕೋರ್ಟ್ ಆದೇಶದಂತೆ ಡಿ.ಕೆ. ಶಿವಕುಮಾರ್ ವಿರುದ್ಧ ಭಾರತೀಯ ದಂಡ ಸಂಹಿತೆಯ (IPC) 153(A), 504, 506 ಹಾಗೂ…
ಪಾವಗಡ: ಸೋಮವಾರ ಪಾವಗಡ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಮುಂಭಾಗದಲ್ಲಿ ಕರ್ನಾಟಕ ರತ್ನ, ನಡೆದಾಡುವ ದೇವರು, ಅಕ್ಷರ ದಾಸೋಹ ಲಿಂಗೈಕ್ಯ ಡಾ. ಶಿವಕುಮಾರ ಸ್ವಾಮೀಜಿಯರ 117ನೇ ಜನ್ಮೋತ್ಸವವನ್ನು, ಪಾವಗಡ ಸಾರ್ವಜನಿಕ ಆಸ್ಪತ್ರೆಯ ಆಂಬುಲೆನ್ಸ್ ಚಾಲಕರ ಒಕ್ಕೂಟ ಮತ್ತು ಡಿ ಗ್ರೂಪ್ ನೌಕರರ ಸಹಯೋಗದಲ್ಲಿ ಆಚರಿಸಲಾಗಿದೆ. ಇದರ ಪ್ರಯುಕ್ತ ಆಸ್ಪತ್ರೆಯಲ್ಲಿರುವ ರೋಗಿಗಳಿಗೆ ಮತ್ತು ಸಾರ್ವಜನಿಕರಿಗೆ ಅನ್ನ ದಾಸೋಹವನ್ನು ಏರ್ಪಡಿಸಲಾಗಿತ್ತು. ಆಸ್ಪತ್ರೆಯ ಆಡಳಿತ ವೈದ್ಯ ಅಧಿಕಾರಿ ಎ ಎಸ್ ಎಲ್ ಬಾಬು ಮಾತನಾಡಿ, “ತುಮಕೂರು ಜಿಲ್ಲೆಯ ಸಿದ್ದಗಂಗಾ ಮಠದಲ್ಲಿ ತಮ್ಮದೇ ಆದ ರೀತಿಯಲ್ಲಿ ಚಾಪು ಮೂಡಿಸಿ, ಅನೇಕ ಸಾವಿರ ಮಕ್ಕಳಿಗೆ ಅನ್ನ ಮತ್ತು ಅಕ್ಷರವನ್ನು ನೀಡಿ ಸಾಕಿದ್ದಾರೆ. ಅಂತಹವರ ಜಯಂತಿ ಮಾಡುತ್ತಿರುವುದು ಪುಣ್ಯ” ಎಂದರು. ಈ ಸಂದರ್ಭದಲ್ಲಿ ತಾಲೂಕು ವೈದ್ಯಾಧಿಕಾರಿ ಡಾ, ತಿರುಪತಯ್ಯ, ಅಂಬರೀಷ್ ಚಾಲಕರ ಒಕ್ಕೂಟದ ವೆಂಕಟೇಶ್, ಪೊನ್ನ ಸಮುದ್ರ ಈರಣ್ಣ, ಸಾಗರ್, ನಂದೀಶ್, ಭಾರತಿ, ಅಜಿತ್, ಆಸ್ಪತ್ರೆಯ ಕೃಷ್ಣಪ್ಪ, ಆರೋಗ್ಯ ನಿರೀಕ್ಷಕರಾದ ಚಂದ್ರಶೇಖರ್, ಸುರೇಶ್, ಕ್ಯಾಂಟೀನ್ ರವಿ, ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.…
ಬೇಸಿಗೆ ಕಾಲದಲ್ಲಿ ಈ ಆಹಾರಗಳನ್ನು ತಿನ್ನಬೇಡಿ: ಬೇಸಿಗೆಯಲ್ಲಿ ಕರಿದ ಪದಾರ್ಥಗಳು, ಪಿಜ್ಜಾ, ಬರ್ಗರ್ ಗಳನ್ನು ಜೀರ್ಣಿಸಿಕೊಳ್ಳಲು ದೇಹವು ಶ್ರಮಪಡಬೇಕಾಗುತ್ತದೆ. ಬೇಸಿಗೆಯಲ್ಲಿ ಕರಿದ ಆಹಾರವನ್ನು ತ್ಯಜಿಸುವುದು ಉತ್ತಮ. ಈ ಆಹಾರಗಳು ಜೀರ್ಣಕ್ರಿಯೆಯ ಮೇಲೆ ಪರಿಣಾಮ ಬೀರುತ್ತವೆ. ಸಂಸ್ಕರಿಸಿದ ಆಹಾರದಲ್ಲಿ ಬಳಸುವ ಕೃತಕ ಸಿಹಿ ಮತ್ತು ರುಚಿಗಳು ದೇಹಕ್ಕೆ ಹಾನಿಕಾರಕವಾಗಿದೆ. ಶಾಖದ ಸಮಯದಲ್ಲಿ, ಮಾಂಸಾಹಾರವನ್ನು ಜೀರ್ಣಿಸಿಕೊಳ್ಳಲು ದೇಹವು ಹೆಚ್ಚು ಸಮಯ ತೆಗೆದುಕೊಳ್ಳುತ್ತದೆ, ಇದರಿಂದಾಗಿ ದೇಹವು ಅಧಿಕ ಬಿಸಿಯಾಗುವುದರಿಂದ ನಿರ್ಜಲೀಕರಣಗೊಳ್ಳಬಹುದು. ಖಾಲಿ ಹೊಟ್ಟೆಯಲ್ಲಿ ಪಪ್ಪಾಯ ಹಣ್ಣು ತಿಂದ್ರೆ ಏನೆಲ್ಲಾ ಲಾಭಗಳಿವೆ ಗೊತ್ತೇ?: ಪಪ್ಪಾಯ ಹಣ್ಣನ್ನು ಸೇವಿಸುವುದರಿಂದ ಹಲವು ಆರೋಗ್ಯ ಪ್ರಯೋಜನಗಳು ಇವೆ. ವಿಶೇಷವಾಗಿ ಖಾಲಿ ಹೊಟ್ಟೆಯಲ್ಲಿ ತಿನ್ನುವಾಗ ಇದರ ಪ್ರಯೋಜನಗಳು ಹೆಚ್ಚು. ಹೌದು, ಹೊಳೆಯುವ ಚರ್ಮವನ್ನು ನೀಡುತ್ತದೆ. ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ತೂಕವನ್ನು ಇಳಿಸಿಕೊಳ್ಳಲು ಸಹಾಯ ಮಾಡುತ್ತದೆ. ನಿಮ್ಮ ಮೆದುಳನ್ನು ಚುರುಕುಗೊಳಿಸುತ್ತದೆ. ಕಣ್ಣಿನ ಆರೋಗ್ಯಕ್ಕೆ ಉತ್ತಮ. ಜೀರ್ಣಕ್ರಿಯೆಯನ್ನು ಹೆಚ್ಚಿಸುತ್ತದೆ. ಉರಿಯೂತವನ್ನು ಕಡಿಮೆ ಮಾಡುತ್ತದೆ. ಮಲಬದ್ಧತೆ ನಿವಾರ. ಹೃದಯದ ಆರೋಗ್ಯವನ್ನು ಉತ್ತೇಜಿಸುತ್ತದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು…