Subscribe to Updates
Get the latest creative news from FooBar about art, design and business.
- ಜನರ ಏಳಿಗೆಗಾಗಿ ಯೋಜನೆಗಳು ಜಾರಿ, ಸರ್ಕಾರಿ ಯೋಜನೆಗಳು ಮತಗಳಿಕೆಗೆ ಅಲ್ಲ: ಶಾಸಕ ಕೆ.ಎನ್.ರಾಜಣ್ಣ
- ಪಾವಗಡ: ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಪ್ರಾಂಶುಪಾಲರಿಗೆ ಬೀಳ್ಕೊಡುಗೆ ಸಮಾರಂಭ
- ದೇಶದ 2ನೇ ಅತಿ ದೊಡ್ಡ ಕ್ರಿಕೆಟ್ ಕ್ರೀಡಾಂಗಣಕ್ಕೆ ಸಿಎಂ ಸಿದ್ದರಾಮಯ್ಯ ಶಂಕುಸ್ಥಾಪನೆ
- ಈ ವರ್ಷ 52 ಸಾವಿರ ಅತಿಥಿ ಶಿಕ್ಷಕರ ನೇಮಕ: ಸಚಿವ ಮಧು ಬಂಗಾರಪ್ಪ
- ಬೀದರ್ ಬ್ರಿಮ್ಸ್ (BRIMS) ಆಸ್ಪತ್ರೆಯಲ್ಲಿ ಕರ್ತವ್ಯ ನಿರತ ವೈದ್ಯರ ಮೇಲೆ ಭೀಕರ ಹಲ್ಲೆ: 7 ಮಂದಿ ಆರೋಪಿಗಳ ಬಂಧನ
- ತುಮಕೂರು ಜಿಲ್ಲೆಗೆ ‘ತುಮಕೂರು (ಬೆಂಗಳೂರು ಉತ್ತರ)’ ಎಂದು ಮರುನಾಮಕರಣ: ಗೃಹ ಸಚಿವ ಡಾ.ಜಿ.ಪರಮೇಶ್ವರ್
- ಮಾದಾವರ–ತುಮಕೂರು ಮೆಟ್ರೋ ರೈಲು ಯೋಜನೆ: ಸರ್ಕಾರಕ್ಕೆ ಸಲ್ಲಿಕೆಯಾಯ್ತು ಡಿಪಿಆರ್ ವರದಿ
- ಪಕ್ಷದ ಜವಾಬ್ದಾರಿ ನಿರ್ವಹಿಸದಿದ್ದರೆ ಶಿಸ್ತು ಕ್ರಮ: ಕಾಂಗ್ರೆಸ್ ಮುಖಂಡರ ಸಭೆಯಲ್ಲಿ ಶಾಸಕ ಕೆ. ಷಡಕ್ಷರಿ ಎಚ್ಚರಿಕೆ
Author: admin
ಲೋಕಸಭೆ ಚುನಾವಣೆಯಲ್ಲಿ ಟಿಕೆಟ್ ಕೈತಪ್ಪುವ ಆತಂಕ ದಕ್ಷಿಣ ಕನ್ನಡ ಜಿಲ್ಲೆಯ ಸಂಸದ ನಳಿನ್ ಕುಮಾರ್ ಕಟೀಲ್ ಅವರಿಗೂ ಎದುರಾಗಿದ್ದು ಈ ಕುರಿತು ಮಾತನಾಡುವ ವೇಳೆ ಭಾವುಕರಾದರು. ಬಿಜೆಪಿ ಟಿಕೆಟ್ ಕೈತಪ್ಪುವ ಸಾಧ್ಯತೆ ಎಂದು ವರದಿಯಾಗುತ್ತಿರುವ ಹಿನ್ನೆಲೆ ಈ ಕುರಿತು ಮಾತನಾಡಿದ ಸಂಸದ ನಳೀನ್ ಕುಮಾರ್ ಕಟೀಲ್, ಸಾಮಾನ್ಯ ಕಾರ್ಯಕರ್ತನನ್ನು ಗುರುತಿಸುವುದು ನಮ್ಮ ಪಕ್ಷದ ವಿಶೇಷತೆ. ಪಕ್ಷದ ರಾಷ್ಟ್ರೀಯ ನಾಯಕರು ಎಲ್ಲಾ ಯೋಚನೆ ಮಾಡಿ ಆಯ್ಕೆ ಮಾಡುತ್ತಾರೆ. ಹೈಕಮಾಂಡ್ ತೀರ್ಮಾನಕ್ಕೆ ಬದ್ದ. ಪಕ್ಷ ಕಸ ಗುಡಿಸಿ ಎಂದರೂ ಗುಡಿಸುತ್ತೇನೆ. ನನಗೆ ಮೂರು ಬಾರಿ ಅವಕಾಶ ನೀಡಿದ್ದಾರೆ . ಪಕ್ಷ ನಿಂತ ನೀರಾಗಬಾರದು. ಹೊಸಬರು ಬರ್ತಾ ಇರಬೇಕು ಚಲಾವಣೆ ಆಗುತ್ತಿರಬೇಕು ಎಂದು ಹೇಳಿದರು. ರಾಷ್ಟ್ರೀಯ ನಾಯಕರ ತೀರ್ಮಾನಕ್ಕೆ ನಾವೆಲ್ಲಾ ಬದ್ಧರಾಗಿರುತ್ತೇವೆ. ಯಾರೇ ಅಭ್ಯರ್ಥಿ ಆದರೂ ನರೇಂದ್ರ ಮೋದಿ ಮತ್ತೆ ಪ್ರಧಾನಿಯಾಗಬೇಕೆಂಬುದು ನಮ್ಮ ಗುರಿ. ರಾಷ್ಟ್ರೀಯ ನಾಯಕರ ಯೋಚನೆಗಳಿಗೆ ಬದ್ಧರಾಗಿ ಕೆಲಸ ಮಾಡುವವರು ನಾವು ಎಂದು ನಳಿನ್ ಹೇಳಿದರು. ಬಿಜೆಪಿಯಲ್ಲಿ ಯಾರನ್ನೂ ತುಳಿಯುವುದಿಲ್ಲ. ಅವಕಾಶ ಸಿಕ್ಕಾಗ…
ಲೋಕಸಭಾ ಚುನಾವಣಾ ಕಾವು ರಾಜ್ಯದಲ್ಲಿ ಹೆಚ್ಚಾಗುತ್ತಿದ್ದು ಇದೀಗ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸದಿರಲು ನಿರ್ಧರಿಸಿದ್ದಾರೆ ಎಂದು ಮಲ್ಲಿಕಾರ್ಜುನ ಖರ್ಗೆ ಅವರ ಆಪ್ತಮೂಲಗಳು ತಿಳಿಸಿವೆ. ಗುಲ್ಬರ್ಗಾ ಕ್ಷೇತ್ರಕ್ಕಾಗಿ ಕಳೆದ ವಾರ ಚರ್ಚಿಸಲಾದ ಅಭ್ಯರ್ಥಿಗಳ ಪಟ್ಟಿಯಲ್ಲಿ ಖರ್ಗೆ ಅವರು ಸರ್ವಾನುಮತದ ಹೆಸರಾಗಿದ್ದರು. ಆದರೆ ಅವರು ತಮ್ಮ ಅಳಿಯ ರಾಧಾಕೃಷ್ಣನ್ ದೊಡ್ಡಮಾನಿಯನ್ನು ನಾಮನಿರ್ದೇಶನ ಮಾಡುವ ಸಾಧ್ಯತೆಯಿದೆ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ. ಖರ್ಗೆ ಅವರು ಗುಲ್ಬರ್ಗಾ ಕ್ಷೇತ್ರದಿಂದ ಎರಡು ಬಾರಿ ಗೆದ್ದಿದ್ದರು ಆದರೆ 2019ರಲ್ಲಿ ಸೋಲನ್ನು ಅನುಭವಿಸಿದ್ದರು. ಅಂದಿನಿಂದ ಅವರು ರಾಜ್ಯಸಭೆಯಲ್ಲಿದ್ದು, ಮೇಲ್ಮನೆಯಲ್ಲಿ ಅವರಿಗೆ ಇನ್ನೂ ನಾಲ್ಕು ವರ್ಷಗಳ ಕಾಲಾವಧಿಯನ್ನು ಹೊಂದಿದ್ದಾರೆ. ಖರ್ಗೆ ಅವರು ಇತ್ತೀಚಿಗೆ ” ನಾನು ಕೇವಲ ಒಂದು ಕ್ಷೇತ್ರಕ್ಕೆ ಸೀಮಿತವಾಗಿರಲು ಬಯಸುವುದಿಲ್ಲ ಆದರೆ ದೇಶದಾದ್ಯಂತ ಗಮನ ಕೇಂದ್ರೀಕರಿಸಲು ಬಯಸುತ್ತೇನೆ” ಎಂದು ಹೇಳಿದ್ದಾರೆ. ಪಕ್ಷದ ಮುಖ್ಯಸ್ಥರು ಚುನಾವಣೆಯಲ್ಲಿ ಸ್ಪರ್ಧಿಸದಿರುವ ಬಗ್ಗೆ ಕಾಂಗ್ರೆಸ್ ಇದುವರೆಗೂ ಯಾವುದೇ ಹೇಳಿಕೆಯನ್ನು ಬಿಡುಗಡೆ ಮಾಡಿಲ್ಲ. ಇದೀಗ ಖರ್ಗೆಯವರ ಮೂಲಗಳು…
ಕೂದಲುದುರುವಿಕೆ ಮನುಷ್ಯರ ಅತಿ ದೊಡ್ಡ ಸಮಸ್ಯೆಗಳಲ್ಲಿ ಒಂದು. ಅದರಲ್ಲೂ ಕೇಶ ಪ್ರಿಯರಿಗೆ ಹಾಗೂ ಪುರುಷರಿಗಂತೂ ಇದು ದೊಡ್ಡ ತಲೆನೋವು. 20–25 ವರ್ಷಕ್ಕೆ ಹುಡುಗರಲ್ಲಿ ತಲೆ ಕೂದಲು ಇಲ್ಲದಾಗಿಬಿಡುತ್ತೆ. ಹೇಗಾದರೂ ಮಾಡಿ ತಲೆಯಲ್ಲಿ ಕೂದಲು ಉಳಿಸಿಕೊಳ್ಳಬೇಕೆಂದು ಅನೇಕರು ಹರಸಾಹಸ ಪಡುತ್ತಾರೆ. ಇಂದು ಕೂದಲು ಉದುರುವಿಕೆಯನ್ನು ತಡೆಯಲು ಮಾರುಕಟ್ಟೆಯಲ್ಲಿ ಅನೇಕ ತರದ ಮದ್ದುಗಳು ಬಂದಿವೆ. ಯಾವುದನ್ನು ಉಪುಯೋಗಿಸಿದರೂ ಅದು ಏನೂ ಪ್ರಯೋಜನ ಆಗುವುದಿಲ್ಲ. ಆದರೆ ಕೆಲವೊಂದು ನೈಸರ್ಗಿಕ ಟ್ರಿಕ್ಸ್ ಗಳು ಒಳ್ಳೆಯ ಫಲಿತಾಂಶ ನೀಡುತ್ತವೆ. ಅಂತೆಯೇ ನೀವು ದೇಹದ ಈ ಭಾಗಗಳಿಗೆ ಬಿಸಿನೀರು ಹಾಕೋದನ್ನು ನಿಲ್ಲಿಸಿದರೆ ಕೂದಲು ಉದುರುವಿಕೆ ಕೆಲವೇ ದಿನಗಳಲ್ಲಿ ನಿಲ್ಲುತ್ತದೆ. ಹೌದು, ಕೂದಲು ಉದುರುವುದನ್ನು ತಡೆಯಲು ಯಾವ ಮದ್ದು, ಎಣ್ಣೆ ಬಳಕೆ ಬೇಡ. ಬದಲಿಗೆ ಪುರುಷರು ತಮ್ಮ ಈ ಭಾಗಗಳಿಗೆ ಯಾವುದೇ ಕಾರಣಕ್ಕೂ ಬಿಸಿನೀರು ಹಾಕಬಾರದು. ಅದು ಯಾವುದೆಂದರೆ ಪುರುಷರ ವೃಷಣ, ಹೃದಯದ ಭಾಗ, ತಲೆ ಭಾಗ. ಈ ಭಾಗಗಳಿಗೆ ಯಾವುದೇ ಕಾರಣಕ್ಕೂ ಅತಿಯಾದ ಬಿಸಿನೀರು ಹಾಕಬಾರದು. ಇಂದಿನಿಂದಲೇ ತಣ್ಣನೆಯ ನೀರು…
ದೇಶದಾದ್ಯಂತ ಪೌರತ್ವ ತಿದ್ದುಪಡಿ ಕಾಯ್ದೆ ಅಧಿಕೃತವಾಗಿ ಜಾರಿಗೆ ಬಂದಿದ್ದು ದೆಹಲಿಯಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ. ಕೇಂದ್ರ ಗೃಹ ಸಚಿವಾಲಯವು ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ), 2019ರ ಅನುಷ್ಠಾನದ ನಿಯಮಗಳನ್ನು ಜಾರಿಗೆ ತರುವುದರೊಂದಿಗೆ, ದೆಹಲಿಯ ಹಲವಾರು ಭಾಗಗಳಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗಿದೆ. ಈಶಾನ್ಯ ದೆಹಲಿ, ಶಾಹೀನ್ ಬಾಗ್, ಜಾಮಿಯಾ ನಗರ ಮತ್ತು ಇತರ ಸೂಕ್ಷ್ಮ ಪ್ರದೇಶಗಳಲ್ಲಿ ಅರೆಸೈನಿಕ ಸಿಬ್ಬಂದಿಯ ತೀವ್ರ ಗಸ್ತು ವ್ಯವಸ್ಥೆ ಮಾಡಲಾಗಿದೆ. ಈ ಹಿಂದೆ 2020ರಲ್ಲಿ, ಸಿಎಎ ಮತ್ತು ಎನ್ ಆರ್ ಸಿ (ರಾಷ್ಟ್ರೀಯ ನಾಗರಿಕರ ನೋಂದಣಿ) ಘೋಷಣೆಯ ವಿರುದ್ಧ ರಾಜಧಾನಿಯಲ್ಲಿ ಗಲಭೆಗಳು ನಡೆದಿದ್ದವು, ಈ ಗಲಭೆಯು 53 ಜನರ ಸಾವಿಗೆ ಕಾರಣವಾಗಿತ್ತು ಮತ್ತು 500ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. ಈ ರೀತಿಯ ದುರ್ಘಟನೆ ಮತ್ತೆ ಮರುಕಳಿಸಬಾರದು ಎಂಬ ಕಾರಣಕ್ಕೆ ರಾಷ್ಟ್ರ ರಾಜಧಾನಿಯಲ್ಲಿ ಹೆಚ್ಚಿನ ಸಶಸ್ತ್ರ ತುಕಡಿಗಳನ್ನು ಕೇಂದ್ರ ಸರ್ಕಾರ ನಿಯೋಜನೆ ಮಾಡಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್…
ರಾಜ್ಯಾದ್ಯಂತ ಲೋಕಸಭಾ ಕಾವು ಹೆಚ್ಚಾದಂತೆ ಒಬ್ಬೊಬ್ಬ ರಾಜಕೀಯ ನಾಯಕರು ತಮ್ಮದೇ ರೀತಿಯ ಹೇಳಿಕೆಯನ್ನು ನೀಡುತ್ತಿದ್ದಾರೆ. ಇದೀಗ ಶೋಭಾ ಕರಂದ್ಲಾಜೆ ಅವರು ಸಹ ಟಿಕೆಟ್ ವಿಚಾರವಾಗಿ ತಮ್ಮ ನಿಲುವಿನ ಬಗ್ಗೆ ಮಾತನಾಡಿದ್ದಾರೆ. ರಾಜಕೀಯದಲ್ಲಿ ಗೆಲ್ಲುವ ಸೀಟನ್ನು ಎಲ್ಲರೂ ಕೇಳುತ್ತಾರೆ. ಹೀಗಾಗಿ ಗೊಂದಲ ಸಹಜ. ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ನಾನು ಸ್ಪರ್ಧೆ ಮಾಡಿಯೇ ಮಾಡುತ್ತೇನೆ ಎಂದು ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ. ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ಒಂದೆರಡು ದಿನಗಳಲ್ಲಿ ಬಿಜೆಪಿ ಟಿಕೆಟ್ ಘೋಷಣೆಯಾಗಲಿದೆ. ಪಕ್ಷ ಯಾವುದೇ ತೀರ್ಮಾನ ತೆಗೆದುಕೊಂಡರೂ ನಾವು ಅದಕ್ಕೆ ಬದ್ದ ಎಂದು ತಿಳಿಸಿದ್ದಾರೆ. ಪ್ರತಿಯೊಬ್ಬ ಬಿಜೆಪಿ ಸಂಸದರು ಕ್ಷೇತ್ರಗಳಲ್ಲೂ ಉತ್ತಮ ಅಭಿವೃದ್ಧಿ ಕೆಲಸಗಳು ನಡೆದಿವೆ. ರಸ್ತೆ, ರೈಲ್ವೆ, ಅಮೃತ ರೈಲ್ವೆ ಯೋಜನೆಗಳು ಜಾರಿಗೆ ಬಂದಿದೆ. ಯಾವುದೇ ಹಳ್ಳಿಗೆ ಹೋದರೂ ಜನ ಅಭಿವೃದ್ಧಿ ಕಂಡಿದ್ದಾರೆ. ಅಭಿವೃದ್ಧಿ ಆಧಾರದಲ್ಲಿ ಮತ ಕೇಳುತ್ತೇವೆ. ರಾಜ್ಯದ ಎಲ್ಲಾ ಮತ ಕ್ಷೇತ್ರಗಳಲ್ಲೂ ಬಿಜೆಪಿ ಗೆಲ್ಲಲಿದೆ ಎಂಬುದು ನಮ್ಮ ವಿಶ್ವಾಸ. ಪ್ರಧಾನಿ ಮೋದಿ ಅವರನ್ನು ಜನ ಪ್ರೀತಿಸುತ್ತಾರೆ. ಟಿಕೆಟ್…
ಪ್ರಾಯಶಃ ಇನ್ನು ಮೂರ್ನಾಲ್ಕು ದಿನದಲ್ಲಿ ಚುನಾವಣೆಯ ಅಧಿಸೂಚನೆ ಹೊರಬೀಳಬಹುದು. ಆ ನಿಟ್ಟಿನಲ್ಲಿ ಸಂಸದನಾಗಿ ನಾನು ಇನ್ನೂ ಮೂರ್ನಾಲ್ಕು ದಿನ ಮಾತ್ರ ಕೆಲಸ ಮಾಡಬಲ್ಲೆ.ಕಳೆದ 10 ವರ್ಷಗಳಲ್ಲಿ ನನ್ನನ್ನು ಹರಸಿದ, ಬೆಳೆಸಿದ ಎಲ್ಲರಿಗೂ ನಾನು ಆಭಾರಿಯಾಗಿದ್ದೇನೆ. ನನ್ನನ್ನು ಟೀಕೆಗಳ ಮೂಲಕ ತಿದ್ದಿದವರಿಗೂ ನಾನು ಆಭಾರಿಯಾಗಿದ್ದೇನೆ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದರು. ಫೇಸ್ ಬುಕ್ ಲೈವ್ ನಲ್ಲಿ ಮಾತನಾಡಿದ ಅವರು, ನನಗೆ ಟಿಕೆಟ್ ಸಿಗೋದು ಅನುಮಾನ ಎಂದಾಗ ನನ್ನ ಪರವಾಗಿ ಹಲವಾರು ಸಂಘ ಸಂಸ್ಥೆಗಳು ನಿಂತವು. ಜನರು ನಿಂತರು. ಅಚ್ಚರಿಯೆಂದರೆ, ನನ್ನನ್ನು ಟೀಕಿಸುತ್ತಿದ್ದ ಎಡಪಕ್ಷದವರೂ… ಛೇ… ಇವನು ಕೆಲಸ ಮಾಡಿದ್ದಾನೆ. ಇವನಿಗೆ ಟಿಕೆಟ್ ಸಿಗಬೇಕು ಎಂಬಂಥ ಮಾತುಗಳನ್ನಾಗಿದ್ದು ನನಗೆ ಅತ್ಯಂತ ಖುಷಿ ತಂದಿದೆ. ಕಳೆದ ನಾಲ್ಕು ದಿನಗಳಲ್ಲಿ ನೀವು ತೋರಿದ ಪ್ರೀತಿ, ನನ್ನ ಬಗ್ಗೆ ಇಟ್ಟಿರುವ ನಂಬಿಕೆ ನನ್ನಲ್ಲಿ ಮತ್ತಷ್ಟು ಕಿಚ್ಚು ಹೊತ್ತಿಸಿದೆ. ಜನಪರ ಕೆಲಸಗಳೆಂದರೆ ಅದು ಥ್ಯಾಂಕ್ ಲೆಸ್ ಜಾಬ್ ಎಂದುಕೊಂಡಿದ್ದೇನೆ ನಾನು. ಆದರೆ, ನಿಮ್ಮ ಪ್ರೀತಿ ನನ್ನ ಅಭಿಪ್ರಾಯವನ್ನು ಬದಲಾಯಿಸಿದೆ”…
ಮೊನ್ನೆಯಷ್ಟೇ ನಮ್ಮ ದೇಶದಲ್ಲಿ ಕುಬೇರ, ಆಗರ್ಭ ಶ್ರೀಮಂತ, ಕೋಟ್ಯಾಧೀಶ್ವರ ಎಂದು ಕರೆಸಿಕೊಳ್ಳುವ ಮುಕೇಶ್ ಅಂಬಾನಿ ಮಗ ಅನಂತ್ ಅಂಬಾನಿ ವಿವಾಹ ಪೂರ್ವ ಕಾರ್ಯಕ್ರಮ ಅದ್ದೂರಿಯಾಗಿ ನಡೆದಿತ್ತು. ಸಾವಿರಾರು ಜನ ಬಂದು ಅನಂತ್ ಹಾಗೂ ರಾಧಿಕಾರನ್ನು ಶುಭ ಹಾರೈಸಿದ್ದರು. ಅಂತೆಯೇ ಅಜ್ಜಿಯೊಬ್ಬರು ಬಂದು ರಾಧಿಕಾಗೆ ಹೂಗುಚ್ಛ ನೀಡಿದರೆ, ಅನಂತ್ ಗೆ 100 ರೂ. ಮುಯ್ಯಿ ನೀಡುತ್ತಾರೆ. ಆದರೆ, ಈ ಹಣವನ್ನು ಸ್ವಲ್ಪವೂ ಗರ್ವ ತೋರಿಸದೇ ಗೌರವವಾಗಿ ಸ್ವೀಕರಿಸಿದ ಅನಂತ್ ಅಂಬಾನಿ ನಡೆ ಹಾಗೂ ಅಜ್ಜಿಯ ಮದುವೆಗೆ ಉಡುಗೊರೆ ಕೊಡುವ ಸಂಪ್ರದಾಯ ನೋಡಿದ ನೆಟ್ಟಿಗರಿಂದ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ. ಹೌದು, ಅನಂತ್ ಅಂಬಾನಿ ಪ್ರೀ ವೆಡ್ಡಿಂಗ್ ಕಾರ್ಯಕ್ರಮವನ್ನು ನೋಡಿದವರು ಜನರೇ ಬೆರಗಾಗಿ ಹೋಗಿದ್ದರು. ಇದು ಕುಬೇರರ ಕಾರ್ಯಕ್ರಮವೆಂದೇ ಹೇಳಬಹುದು. ಈ ಸಮಾರಂಭಕ್ಕೆ ದೇಶದ ಬಹುತೇಕ ಹಾಗೂ ಜಗತ್ತಿನ ಹಲವು ಸೆಲೆಬ್ರಿಟಿಗಳು ಮತ್ತು ಶ್ರೀಮಂತರು ಬಂದು ಪಾಲ್ಗೊಂಡಿದ್ದಾರೆ. ಇನ್ನು ನಮ್ಮ ದೇಶದ ಎಲ್ಲ ಖ್ಯಾತ ಚಿತ್ರ ತಾರೆಯರು ಮತ್ತು ಕ್ರೀಡಾ ಪಟುಗಳು ಭಾಗವಹಿಸಿ ಕುಣಿದು ಕುಪ್ಪಳಿಸಿದ್ದರು.…
ಬೆಂಗಳೂರು: ವಿಕಲಚೇತನರು, ಅಂಗನವಾಡಿ ಕಾರ್ಯಕರ್ತರ ಸಮಸ್ಯೆಗಳಿಗೆ ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಭರವಸೆ ನೀಡಿದ್ದಾರೆ. ಅಂಗನವಾಡಿ ಕಾರ್ಯಕರ್ತರಿಗೆ ಕನಿಷ್ಠ ಎರಡು ಸಾವಿರ ರೂಪಾಯಿ ವೇತನ ಹೆಚ್ಚಿಸುವಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದರು. ವಿಧಾನಸೌಧದಲ್ಲಿ ಸೋಮವಾರ ನಡೆದ ಅಂಗನವಾಡಿ ಕಾರ್ಯಕರ್ತರ ಹಾಗೂ ವಿಕಲ ಚೇತನರ ಸಂಘಟನೆಗಳ ನಿಯೋಗದೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾದ ಸಚಿವರು, ಅಂಗನವಾಡಿ ಕಾರ್ಯಕರ್ತರು, ಆಶಾ ಕಾರ್ಯಕರ್ತರು ಅನುಭವಿಸುತ್ತಿರುವ ಸಮಸ್ಯೆಗಳನ್ನು ಮುಖ್ಯಮಂತ್ರಿಗಳ ಗಮನಕ್ಕೆ ತಂದರು. ಸಚಿವರ ಮನವಿಗೆ ಸ್ಪಂದಿಸಿದ ಸಿಎಂ ಸಿದ್ದರಾಮಯ್ಯ, ಶೀಘ್ರವೇ ಸಮಸ್ಯೆಗಳಿಗೆ ಪರಿಹಾರ ನೀಡಲಾಗುವುದು ಎಂದು ಭರವಸೆ ನೀಡಿದರು. ಈ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಗೃಹ ಸಚಿವ ಡಾ.ಜಿ.ಪರಮೇಶ್ವರ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಕೆ.ಗೋವಿಂದರಾಜು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳು, ಸಂಘಟನೆಗಳ ಸದಸ್ಯರು ಉಪಸ್ಥಿತರಿದ್ದರು.
ನವದೆಹಲಿ: ಸಿಎಎ ಜಾರಿಗೆ ತರುವುದು ಸ್ವೀಕಾರಾರ್ಹವಲ್ಲ, “ದೇಶದ ಎಲ್ಲಾ ನಾಗರಿಕರು ಸಾಮಾಜಿಕ ಸಾಮರಸ್ಯದಿಂದ ಬದುಕುವ ವಾತಾವರಣದಲ್ಲಿ ಭಾರತೀಯ ಪೌರತ್ವ ತಿದ್ದುಪಡಿ ಕಾಯ್ದೆ 2019 (ಸಿಎಎ) ಯಂತಹ ಯಾವುದೇ ಕಾನೂನನ್ನು ಜಾರಿಗೆ ತರುವುದು ಸ್ವೀಕಾರಾರ್ಹವಲ್ಲ ಎಂದು ನಟ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಮುಖ್ಯಸ್ಥ ತಳಪತಿ ವಿಜಯ್ ಹೇಳಿದ್ದಾರೆ. ಪೌರತ್ವ ಕಾಯ್ದೆ, 2019 ಅನ್ನು ಜಾರಿಗೆ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿದ್ದು, ಈ ಬಗ್ಗೆ ಟ್ವೀಟ್ ಮಾಡಿ ಅವರು ಪ್ರತಿಕ್ರಿಯಿಸಿದ್ದಾರೆ. ಈ ಕಾನೂನನ್ನು ತಮಿಳುನಾಡಿನಲ್ಲಿ ಜಾರಿಗೆ ತರದಂತೆ ನೋಡಿಕೊಳ್ಳಬೇಕು. ಈ ಕಾನೂನನ್ನು ತಮಿಳುನಾಡಿನಲ್ಲಿ ಜಾರಿಗೆ ತರದಂತೆ ನಾಯಕರು ನೋಡಿಕೊಳ್ಳಬೇಕು ಎಂದು ವಿನಂತಿ ಮಾಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಬೆಂಗಳೂರು: ರಾಜಕೀಯ ಉದ್ದೇಶದಿಂದ ಕೇಂದ್ರ ಸರ್ಕಾರ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ ಸಂಬಂಧಿಸಿ ಅಧಿಸೂಚನೆ ಹೊರಡಿಸಿದೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಅವರು ಸೋಮವಾರ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೌರತ್ವ ತಿದ್ದುಪಡಿ ಕಾಯ್ದೆಗೆ ಬಹಳಷ್ಟು ಜನರು ವಿರೋಧ ವ್ಯಕ್ತಪಡಿಸಿರುವುದನ್ನು ನಾವೆಲ್ಲ ನೋಡಿದ್ದೇವೆ. ಇದರ ನಡುವೆಯೂ ಕೇಂದ್ರ ಸರ್ಕಾರ ಇಂತಹ ನಿರ್ಧಾರಕ್ಕೆ ಬಂದಿದೆ. ಇದರಲ್ಲಿ ರಾಜಕೀಯ ಉದ್ದೇಶವಿದೆ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ ಎಂದು ಹೇಳಿದರು. ಬಿಜೆಪಿಯವರಿಗೆ ಎಲ್ಲೋ ಒಂದು ಕಡೇ ಸೋಲಿನ ಆತಂಕ ಕಾಡುತ್ತಿದೆ. ಹೆಚ್ಚು ಸ್ಥಾನ ಗೆಲ್ಲುತ್ತೇವೆ ಎಂದು ಹೇಳಿಕೊಳ್ಳುತ್ತರಾದರೂ ಸೋಲಿನ ಭಯವಿದೆ. ಬಿಜೆಪಿಯವರಿಗೆ ಮತ್ತೆ ಅಧಿಕಾರಕ್ಕೆ ಬರುತ್ತೇವೆ ಎಂಬ ವಿಶ್ವಾಸ ಕಡಿಮೆಯಾದಂತಿದೆ. ಅದಕ್ಕಾಗಿ ಇಂತಹ ತೀರ್ಮಾನ ತೆಗೆದುಕೊಂಡಿದ್ದಾರೆ ಎಂದು ತಿಳಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296