Subscribe to Updates
Get the latest creative news from FooBar about art, design and business.
- ದೇಶದ 2ನೇ ಅತಿ ದೊಡ್ಡ ಕ್ರಿಕೆಟ್ ಕ್ರೀಡಾಂಗಣಕ್ಕೆ ಸಿಎಂ ಸಿದ್ದರಾಮಯ್ಯ ಶಂಕುಸ್ಥಾಪನೆ
- ಈ ವರ್ಷ 52 ಸಾವಿರ ಅತಿಥಿ ಶಿಕ್ಷಕರ ನೇಮಕ: ಸಚಿವ ಮಧು ಬಂಗಾರಪ್ಪ
- ಬೀದರ್ ಬ್ರಿಮ್ಸ್ (BRIMS) ಆಸ್ಪತ್ರೆಯಲ್ಲಿ ಕರ್ತವ್ಯ ನಿರತ ವೈದ್ಯರ ಮೇಲೆ ಭೀಕರ ಹಲ್ಲೆ: 7 ಮಂದಿ ಆರೋಪಿಗಳ ಬಂಧನ
- ತುಮಕೂರು ಜಿಲ್ಲೆಗೆ ‘ತುಮಕೂರು (ಬೆಂಗಳೂರು ಉತ್ತರ)’ ಎಂದು ಮರುನಾಮಕರಣ: ಗೃಹ ಸಚಿವ ಡಾ.ಜಿ.ಪರಮೇಶ್ವರ್
- ಮಾದಾವರ–ತುಮಕೂರು ಮೆಟ್ರೋ ರೈಲು ಯೋಜನೆ: ಸರ್ಕಾರಕ್ಕೆ ಸಲ್ಲಿಕೆಯಾಯ್ತು ಡಿಪಿಆರ್ ವರದಿ
- ಪಕ್ಷದ ಜವಾಬ್ದಾರಿ ನಿರ್ವಹಿಸದಿದ್ದರೆ ಶಿಸ್ತು ಕ್ರಮ: ಕಾಂಗ್ರೆಸ್ ಮುಖಂಡರ ಸಭೆಯಲ್ಲಿ ಶಾಸಕ ಕೆ. ಷಡಕ್ಷರಿ ಎಚ್ಚರಿಕೆ
- ಗುಬ್ಬಿ ಶಾಸಕರು, ಪುತ್ರನಿಂದ ಕುತಂತ್ರ ರಾಜಕಾರಣ: ಷಡ್ಯಂತ್ರಗಳಿಗೆ ಜಗ್ಗುವುದಿಲ್ಲ: ಜೆಡಿಎಸ್ ಮುಖಂಡ ನಾಗರಾಜು ಕಿಡಿ
- ತುಮಕೂರು: ಕುಲ್ಲಕ ವಿಷಯಕ್ಕೆ ಜಗಳ: ಕೊಲೆ
Author: admin
ನಟ, ಸಂಗೀತ ನಿರ್ದೇಶಕ ಸಾಧು ಕೋಕಿಲಾ ಅವರಿಗೆ ಟಿಕೆಟ್ ನೀಡುವಂತೆ ಪಕ್ಷದ ವರಿಷ್ಠರಿಗೆ ಕ್ರಿಶ್ಚಿಯನ್ ಸಮುದಾಯ ಒತ್ತಾಯಿಸಿದೆ ಎನ್ನಲಾಗಿದೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಸೆಂಟ್ರಲ್ ಕ್ಷೇತ್ರದಿಂದ ಸ್ಪರ್ಧಿಸಬೇಕೆನ್ನುವ ಒತ್ತಾಯಗಳು ಕೇಳಿ ಬಂದಿವೆ. ಹೆಚ್ಚಿನ ಸಂಖ್ಯೆಯಲ್ಲಿ ಕ್ರಿಶ್ಚಿಯನ್ ಸಮುದಾಯ ಈ ಭಾಗದಲ್ಲಿ ಇರುವುದರಿಂದ ಸಾಧು ಕೋಕಿಲಾ ಅವರಿಗೆ ಟಿಕೆಟ್ ನೀಡುವಂತೆ ಮನವಿ ಕೂಡ ಮಾಡಿದೆ. ಈ ಕುರಿತಂತೆ ಮಾತನಾಡಿರುವ ಸಾಧು ಕೋಕಿಲಾ, ನಾನು ಒಂದು ಧರ್ಮಕ್ಕೆ ಸೀಮಿತ ಆಗಿಲ್ಲ. ಬೆಂಗಳೂರಿನಲ್ಲಿ ನನ್ನನ್ನ ಎಲ್ಲಾ ಜಾತಿ ಧರ್ಮದವರು ಗುರುತಿಸುತ್ತಾರೆ. ನನ್ನ ಹಿನ್ನಲೆ ಜನರಿಗೆ ಗೊತ್ತಿದೆ. ನನ್ನನ್ನು ಯಾವ ಜಾತಿಗೂ ಸೇರಿಸಬೇಡಿ. ನಾನು ಎಲ್ಲರಿಗೂ ಸೇರಿದವನು. ಬೆಂಗಳೂರು 15 ಲಕ್ಷ ಜನ ಕ್ರಿಶ್ಚಿಯನ್ ಸಮುದಾಯದವರು ಇದ್ದಾರೆ. ಬೆಂಗಳೂರು ಸೆಂಟ್ರಲ್ ಕ್ಷೇತ್ರದಲ್ಲಿ ಹೆಚ್ಚು ಕ್ರಿಶ್ಚಿಯನ್ ಸಮುದಾಯದವರು ಇದ್ದಾರೆ. ಕ್ರಿಶ್ಚಿಯನ್ ಸಮುದಾಯದಿಂದ ಸಾಧು ಕೋಕಿಲಗೆ ಟಿಕೆಟ್ ಕೊಡಿ ಅಂತ ಕೇಳಿದ್ದಾರೆ. ನನಗೆ ಗೊತ್ತಿಲ್ಲ ಪಕ್ಷ ಏನ್ ಮಾಡುತ್ತೋ. ಯಾರಿಗೆ ಟಿಕೆಟ್ ಕೊಡ್ತಾರೆ ಗೊತ್ತಿಲ್ಲ’ ಎಂದಿದ್ದಾರೆ. ಅಲ್ಲದೇ, ಪಕ್ಷದ…
ರಾಮನಗರ: ತೋಟದ ಮನೆಯೊಂದರಲ್ಲಿ 30ಕ್ಕೂ ಅಧಿಕ ಮಾನವ ತಲೆಬುರುಡೆಗಳು ಪತ್ತೆಯಾಗಿವೆ. ರಾಮನಗರ ಜಿಲ್ಲೆ ಬಿಡದಿಯಲ್ಲಿ ಹಿರಿಯರಿಂದ ಹಿಡಿದು ಪುಟ್ಟ ಪುಟ್ಟ ಮಕ್ಕಳ ವರೆಗಿನ ನಾನಾ ಬಗೆಯ ತಲೆಬುರುಡೆಗಳು ಪತ್ತೆಯಾಗಿ ಭಾರಿ ಆತಂಕಕ್ಕೆ ಕಾರಣವಾಗಿದೆ. ಇದನ್ನು ಒಬ್ಬನೇ ವ್ಯಕ್ತಿ ತೆಗೆದಿಟ್ಟುಕೊಂಡಿದ್ದಾನೆ. ಹೀಗಿದೆ ಬುರುಡೆ ರಹಸ್ಯ: ಬಿಡದಿ ಬಳಿಯ ಜೋಗನಹಳ್ಳಿ ಗ್ರಾಮದ ತೋಟದ ಮನೆಯಲ್ಲಿ ತಲೆಬುರುಡೆಗಳು ಪತ್ತೆಯಾಗಿವೆ. ಬಲರಾಮ್ ಎಂಬಾತನಿಗೆ ಸೇರಿದ ಈ ತೋಟದ ಮನೆಯಲ್ಲಿ ಪತ್ತೆಯಾಗಿರುವ ತಲೆಬುರುಡೆಗಳನ್ನು ಒಂದೇ ಕೋಣೆಯಲ್ಲಿ ಸಂಗ್ರಹಿಸಿ ಇಡಲಾಗಿದ್ದು, ಇದರ ಹಿನ್ನೆಲೆ ಬೆಚ್ಚಿ ಬೀಳಿಸುವಂತಿದೆ. ತೋಟದ ಮನೆಯಲ್ಲಿರುವ ಈ ತಲೆ ಬುರುಡೆಗಳಿಗೆ ನಿತ್ಯ ಪೂಜೆ ಮಾಡಲಾಗುತ್ತದೆ. ಈ ಮೂಲಕ ಬಲರಾಮ ಕಂಡ ಕಂಡವರ ಮೇಲೆ ಮಾಟ ಮಂತ್ರ ಮಾಡುತ್ತಾನೆ ಎಂದು ಆರೋಪಿಸಲಾಗಿದೆ. ಗ್ರಾಮಸ್ಥರು ಇದರ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಆತನನ್ನು ಠಾಣೆಗೆ ಕರೆದುಕೊಂಡು ಬಂಧಿಸಿದ್ದಾರೆ. ಬಲರಾಮ ಈ ತಲೆಬುರುಡೆಗಳನ್ನು ಎಲ್ಲಿಂದ ತರುತ್ತಾನೆ? ಆತನೇ ಕೊಲೆ ಮಾಡಿ ತಲೆಬುರುಡೆ ಸಂಗ್ರಹ ಮಾಡಿದ್ದಾನೆ ಎಂಬ ಸಂಶಯಗಳು ಸಾರ್ವಜನಿಕರಿಗೆ ಇದೆ.…
ಬೆಂಗಳೂರು: ಬಿಜೆಪಿ ಸಂಸದ ಅನಂತ್ ಕುಮಾರ್ ಹೆಗ್ಡೆಯನ್ನು ತಕ್ಷಣವೇ ಬಿಜೆಪಿ ಪಕ್ಷದಿಂದ ಕಿತ್ತೊಗೆಯಲಿ ಎಂದು ಸಿಎಂ ಸಿದ್ದರಾಮಯ್ಯ ಬಿಜೆಪಿಗೆ ಸವಾಲು ಹಾಕಿದ್ದಾರೆ. ಅನಂತ್ ಕುಮಾರ್ ಹೆಗ್ಡೆ ಹೇಳಿಕೆ ಬೆನ್ನಲ್ಲೇ ಈ ಕುರಿತು ಸರಣಿ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ‘ಹಿಂದೂ ಧರ್ಮವನ್ನು ರಕ್ಷಿಸಬೇಕಾದರೆ ಸಂವಿಧಾನವನ್ನು ಬದಲಾಯಿಸಬೇಕು. ಅದಕ್ಕಾಗಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ 400 ಸ್ಥಾನಗಳನ್ನು ಗೆಲ್ಲಿಸಿಕೊಡಬೇಕು” ಎಂದು ಸಂಸದ ಅನಂತ್ಕುಮಾರ್ ಹೆಗಡೆ ಕರೆ ನೀಡಿರುವುದು ಅವರ ವೈಯಕ್ತಿಕ ಹೇಳಿಕೆ ಅಲ್ಲ ಅದು ಬಿಜೆಪಿ ಪಕ್ಷದ ಗುಪ್ತ ಅಜೆಂಡಾದ ಭಾಗವೇ ಆಗಿದೆ. ನಮ್ಮ ಸಂವಿಧಾನ ಸರ್ವಧರ್ಮಗಳನ್ನೂ ಸಮಭಾವದಿಂದ ನೋಡುತ್ತದೆ. ಪ್ರತಿಯೊಬ್ಬ ಪ್ರಜೆಗೂ ತನ್ನ ನಂಬಿಕೆಯ ಧರ್ಮವನ್ನು ಪಾಲಿಸಿಕೊಂಡು ಬರುವ ಸ್ವಾತಂತ್ರ್ಯವನ್ನು ನೀಡಿದೆ. ಹೀಗಿರುವಾಗ ಸಂವಿಧಾನವನ್ನೇ ಬದಲಾಯಿಸಿ ಅನಂತ್ ಕುಮಾರ್ ಹೆಗಡೆ ಅವರು ಯಾವ ಹಿಂದೂಧರ್ಮವನ್ನು ರಕ್ಷಿಸಲು ಹೊರಟಿದ್ದಾರೆ? ಹೆಗಡೆಯವರ ಹೇಳಿಕೆಯನ್ನು ಗಮನಿಸಿದರೆಬಾಬಾಸಾಹೇಬ್ ಅಂಬೇಡ್ಕರ್ ರಚಿಸಿ ಕೊಟ್ಟ ಸಂವಿಧಾನಕ್ಕಿಂತ ಮೊದಲು ಇದ್ದ ಮನು ಪ್ರಣೀತ ಸಂವಿಧಾನವನ್ನು ಜಾರಿಗೊಳಿಸುವ ದುಷ್ಠ ಆಲೋಚನೆ ಹೆಗಡೆ ಮತ್ತು ಬಿಜೆಪಿ…
ಬೆಂಗಳೂರು: ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಆಶಯಗಳನ್ನು ನಾಶ ಮಾಡುವುದೇ ಬಿಜೆಪಿಯ ಗುರಿ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಕ್ರೋಶ ಹೊರಹಾಕಿದ್ದಾರೆ. ಸಂವಿಧಾನ ಬದಲಾವಣೆ ಕುರಿತು ಬಿಜೆಪಿ ಸಂಸದ ಅನಂತಕುಮಾರ ಹೆಗಡೆ ನೀಡಿರುವ ಹೇಳಿಕೆಯನ್ನು ಡಿಕೆಶಿ ತೀವ್ರವಾಗಿ ಖಂಡಿಸಿದ್ದಾರೆ. ಸಂವಿಧಾನವನ್ನೇ ಬದಲಾಯಿಸುತ್ತೇವೆ ಎನ್ನುವ ಸಂಸದ ಅನಂತ ಕುಮಾರ ಹೆಗಡೆ ಅವರ ಹೇಳಿಕೆ ನೋಡಿದರೆ, ಬಿಜೆಪಿ ಅಜೆಂಡಾದಲ್ಲಿ ಅದ್ಯಾವ ಪರಿ ವಿಷ ತುಂಬಿಕೊಂಡಿದೆ ಎಂಬುದರ ಸ್ಯಾಂಪಲ್ ಸಿಕ್ಕಂತಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ. ಇದೇ ಸಂದರ್ಭದಲ್ಲಿ ಮಾತನಾಡಿದ ಅವರು, ಸರ್ಕಾರವನ್ನು ಬೀಳಿಸಲು ಬಿಜೆಪಿ ಎಲ್ಲಾ ಪ್ರಯತ್ನವನ್ನು ಮಾಡುತ್ತಿದೆ. ಇತ್ತೀಚೆಗೆ ವಿಧಾನಸಭೆಯಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿಯು ಕಾಂಗ್ರೆಸ್ ಶಾಸಕರಿಗೆ ತಲಾ 50 ಕೋಟಿ ರೂಪಾಯಿಯ ಆಮಿಷ ನೀಡಿದೆ ಎಂದು ಆರೋಪಿಸಿ ಬಿಜೆಪಿ ವಿರುದ್ದ ಆಕ್ರೋಶ ಹೊರಹಾಕಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಹರ್ಯಾಣ: ಹರ್ಯಾಣದಲ್ಲಿ ಮಹತ್ವದ ದ್ವಾರಕಾ ಎಕ್ಸ್ ಪ್ರೆಸ್ ವೇ ಉದ್ಘಾಟಿಸಿದ ಪ್ರಧಾನಿ ಯೋಜನೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಸಾರ್ವಜನಿಕ ಸಭೆ ಉದ್ದೇಶಿಸಿ ಮಾತನಾಡಿದ ಪ್ರಧಾನಿ, ಈಗ ದ್ವಾರಕಾ ಎಕ್ಸ್ ಪ್ರೆಸ್ ವೇ ಎಲ್ಲಿ ನಿರ್ಮಾಣವಾಗಿದೆಯೋ ಆ ಜಾಗವನ್ನು ಕೆಲ ವರ್ಷಗಳ ಹಿಂದೆ ಅಸುರಕ್ಷಿತ ಸ್ಥಳ ಎಂದು ಹೇಳಲಾಗುತ್ತಿತ್ತು. ಜನ ಇಲ್ಲಿಗೆ ಬರಲು ಹೆದರುತ್ತಿದ್ದರು. ಆದರೆ ಅಂತಹ ಜಾಗದಲ್ಲಿ ಸುರಕ್ಷಿತವಾದ, ಉತ್ತಮ ಗುಣಮಟ್ಟದ ಎಕ್ಸ್ ಪ್ರೆಸ್ ವೇ ನಿರ್ಮಾಣ ಮಾಡಲಾಗಿದೆ. ಇದು ಈಗ ಎನ್ ಸಿಆರ್ ನ ತ್ವರಿತ ಅಭಿವೃದ್ಧಿ ಕಾಣುತ್ತಿರುವ ಪ್ರದೇಶವಾಗಿದೆ ಎಂದು ಪ್ರಧಾನಿ ಹೇಳಿದರು. ಹಿಂದಿನ ಸರ್ಕಾರ ಸಣ್ಣ ಸಣ್ಣ ಯೋಜನೆಗಳನ್ನು ಜಾರಿಗೆ ತಂದು 5 ವರ್ಷಗಳ ಕಾಲ ಅದನ್ನೇ ಹೇಳುತ್ತಾ ಸಮಯ ಕಳೆದಿದೆ. ಆದರೆ ಬಿಜೆಪಿ ಹಾಗಲ್ಲ. 2024 ಆರಂಭವಾಗಿ 10 ಲಕ್ಷ ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿ , ಉದ್ಘಾಟಿಸಲಾಗಿದೆ. ಆಧುನಿಕ ತಂತ್ರಜ್ಞಾನದ ಮೂಲಕ ದೇಶದ ಕೋಟ್ಯಾಂತರ ಜನರನ್ನು ಒಗ್ಗೂಡಿಸಿಲಾಗುತ್ತಿದೆ, ಮೊದಲು ದೆಹಲಿಯಲ್ಲಿ ಮಾತ್ರ…
ಕೀಲು ನೋವನ್ನು ಕಡಿಮೆ ಮಾಡಲು ಈ ಆಹಾರಗಳನ್ನು ನಿಯಮಿತವಾಗಿ ಸೇವಿಸಿ!: ಇತ್ತೀಚಿನ ದಿನಗಳಲ್ಲಿ ವಯಸ್ಸಿನ ಭೇದವಿಲ್ಲದೆ ಕಾಲು ನೋವಿನ ಸಮಸ್ಯೆಗಳು ಹೆಚ್ಚಾಗುತ್ತಿವೆ. ವರದಿಗಳ ಪ್ರಕಾರ, ಸಂಧಿವಾತವು ಪುರುಷರಿಗಿಂತ ಮಹಿಳೆಯರಲ್ಲಿ ಕಂಡುಬರುತ್ತದೆ. ಅಧಿಕ ತೂಕದ ಜನರಲ್ಲಿ ಕೂಡಾ ಈ ಸಮಸ್ಯೆ ಹೆಚ್ಚು ಸಾಮಾನ್ಯವಾಗಿದೆ. ಕೀಲು ನೋವನ್ನು ತಡೆಯಲು ತರಕಾರಿಗಳು, ಹಣ್ಣುಗಳು, ಮೊಸರು, ಬೀನ್ಸ್, ಮೀನು ಮತ್ತು ಆಲಿವ್ ಎಣ್ಣೆಯನ್ನು ತಿನ್ನಲು ತಜ್ಞರು ಹೇಳುತ್ತಾರೆ. ಕಪ್ಪು ಗೋಧಿ ಹಿಟ್ಟಿನಿಂದ ಹೃದಯ ಸಮಸ್ಯೆಗಳಿಗೆ ಸಿಗುತ್ತೆ ಚಿಕಿತ್ಸೆ!: ಹೃದಯದ ಸಮಸ್ಯೆ ಇರುವವರು ಕಪ್ಪು ಗೋಧಿ ಹಿಟ್ಟನ್ನು ಬಳಸುವುದರಿಂದ ಹೃದಯದ ಸಮಸ್ಯೆಗಳನ್ನು ಕಡಿಮೆ ಮಾಡಬಹುದು. ಇದರಲ್ಲಿರುವ ಕೊಬ್ಬಿನಾಮ್ಲಗಳು ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡುತ್ತದೆ. ಇದು ಹೃದ್ರೋಗದ ಅಪಾಯವನ್ನು ಸಹ ತಡೆಯುತ್ತದೆ. ಇದರಲ್ಲಿರುವ ಆ್ಯಂಟಿಆಕ್ಸಿಡೆಂಟ್ ಮತ್ತು ಫೈಬರ್ ದೇಹದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡುತ್ತದೆ. ಇದರಿಂದ ಹೃದಯ ಆರೋಗ್ಯಕರವಾಗಿರುತ್ತದೆ. ಇದಲ್ಲದೆ, ಹೃದಯದ ಕಾರ್ಯವು ಸುಧಾರಿಸುತ್ತದೆ. ಹೃದಯಾಘಾತದ ಸಾಧ್ಯತೆಯೂ ಬಹಳ ಕಡಿಮೆಯಾಗುತ್ತದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು…
ನೀವು ಮನೆಯಲ್ಲಿ ನಾಯಿಯನ್ನು ಸಾಕಿದವರಾಗಿದ್ದರೆ ನಿಮ್ಗೆ ಗೊತ್ತಿರಬಹುದು. ರಾತ್ರಿಯಲ್ಲಿ ನಾಯಿಗಳು ಕೂಗುವ ಶಬ್ದವನ್ನು ಪ್ರತಿನಿತ್ಯ ನೀವೆಲ್ಲ ಕೇಳಿರಬಹುದು. ರಾತ್ರಿ ಹೊತ್ತಲ್ಲಿ ನಾಯಿಗಳು ಅತಿ ಹೆಚ್ಚು ಬೊಗಳುವುದು ಮತ್ತು ಜೋರಾಗಿ ಕೂಗುವುದನ್ನ ನೋಡಬಹುದು. ನಾಯಿಗಳು ಕೂಗುವುದು ಕೆಟ್ಟ ಶಕುನ ಎಂಬ ನಂಬಿಕೆಯೂ ಇದೆ. ಹಾಗಾದರೆ ಇದಕ್ಕೆ ಕಾರಣವೇನು? ರಾತ್ರಿ ಹೊತ್ತಲ್ಲಿ ನಾಯಿ ಕೂಗುವುದು ಅನೇಕ ಕೆಟ್ಟ ಘಟನೆಗಳ ಸಂಕೇತವಾಗಿದೆ ಎಂದು ಹೇಳಲಾಗಿದೆ. ಹಾಗೆಯೇ ಮನೆಯ ಹೊರಗೆ ನಾಯಿ ಕೂಗಿದರೆ ಅಶುಭ ಎಂಬ ನಂಬಿಕೆಯಿದೆ. ಇದೇ ಕಾರಣಕ್ಕೆ ಮನೆ ಮುಂದೆ ನಾಯಿ ಅತ್ತರೆ ಅದನ್ನು ಅಲ್ಲಿಂದ ಓಡಿಸುತ್ತಾರೆ. ನಾಯಿಯು ರಾತ್ರಿ ಹೊತ್ತು ಬೊಗಳಿದಾಗಲೆಲ್ಲಾ ಅದರ ಸುತ್ತಲೂ ಕೆಲವು ರೀತಿಯ ನಕಾರಾತ್ಮಕ ಶಕ್ತಿ ಇರುತ್ತದೆ ಎಂದು ಕೆಲವರು ಹೇಳುತ್ತಾರೆ. ಆ ನೆಗೆಟಿವ್ ಎನರ್ಜಿ ನೋಡಿದ ನಾಯಿಗಳು ಜೋರಾಗಿ ಬೊಗಳುತ್ತವೆ ಎನ್ನುತ್ತಾರೆ. ನಾಯಿಗಳು ಕತ್ತಲೆಯಲ್ಲಿ ದುಷ್ಟಶಕ್ತಿಗಳನ್ನು ನೋಡಬಹುದು ಎಂದು ಕೆಲವರು ನಂಬುತ್ತಾರೆ. ನಾಯಿ ಜೋರಾಗಿ ಬೊಗಳಿದರೆ ಇದು ಕೆಟ್ಟ ಶಕುನ ಎಂದು ಪರಿಗಣಿಸುತ್ತಾರೆ. ಮನುಷ್ಯರನ್ನು ಆಕರ್ಷಿಸಲು ನಾಯಿಗಳು…
ಮಧ್ಯಾಹ್ನ 1 ಲೋಟ ಮಜ್ಜಿಗೆ ಕುಡಿಯಿರಿ, ಹಲವು ಪ್ರಯೋಜನಗಳನ್ನ ಪಡೆಯಿರಿ: ಮಜ್ಜಿಗೆ ಆರೋಗ್ಯಕ್ಕೆ ಉತ್ತಮವಾಗಿರುವ ಪಾನೀಯ. ಮುಖ್ಯವಾಗಿ ಮಧ್ಯಾಹ್ನ ಊಟದ ನಂತರ ಒಂದು ಲೋಟ ಮಜ್ಜಿಗೆ ಸೇವನೆ ಮಾಡುವುದರಿಂದ ಅನೇಕ ಆರೋಗ್ಯ ಸಮಸ್ಯೆಗಳನ್ನು ದೂರ ಮಾಡಬಹುದು. ಇದು ನಮ್ಮ ದೇಹಕ್ಕೆ ಶಕ್ತಿಯನ್ನು ನೀಡುತ್ತದೆ. ಮಧ್ಯಾಹ್ನ ಮಜ್ಜಿಗೆ ಕುಡಿಯುವುದರಿಂದ ನಿಮ್ಮ ಪೌಷ್ಠಿಕ ಶಕ್ತಿ ಹೆಚ್ಚುತ್ತದೆ. ನೀವು ಫ್ರೆಶ್ ಮತ್ತು ಎನರ್ಜಿಟಿಕ್ ಆಗಿರುತ್ತೀರಿ. ಜೀರ್ಣಕ್ರಿಯೆಯನ್ನು ಸುಧಾರಣೆ ಮಾಡುತ್ತದೆ. ದೇಹವನ್ನು ಹೈಡ್ರೇಟ್ ಆಗಿಡುತ್ತದೆ. ಇದು ದೇಹಕ್ಕೆ ಬೇಕಾಗುವಂತಹ ಪೋಷಕಾಂಶಗಳನ್ನು ಒದಗಿಸುತ್ತದೆ. ಕರಿಬೇವಿನ ಎಲೆಗಳಿಂದ ದೇಹಕ್ಕಾಗುವ ಪ್ರಯೋಜನ ಇಂತಿವೆ: ಕರಿಬೇವಿನ ಎಲೆಗಳು ಎ, ಬಿ, ಸಿ & ಬಿ 2 ವಿಟಮಿನ್ ಗಳನ್ನು ಹೊಂದಿದ್ದು, ಇವು ತೂಕ ಇಳಿಕೆಗೆ ಸಹಾಯಕಾರಿಯಾಗಿದೆ. ಕೂದಲು ಬೆಳೆವಣಿಗೆಗೆ ಪೂರಕವಾಗಿರುವ ಕರಿಬೇವಿನಿಂದ ದೇಹದ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ಕರಿಬೇವಿನ ಎಲೆಗಳು ಅತ್ಯುತ್ತಮ ನೈಸರ್ಗಿಕ ಮೂಲಿಕೆಯಾಗಿದ್ದು, ಪಿತ್ತಜನಕಾಂಗವನ್ನು ಸಹ ರಕ್ಷಿಸಲಾಗುತ್ತದೆ. ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಸಹ ನಿಯಂತ್ರಣದಲ್ಲಿಡುತ್ತದೆ. ಇದು ಸೋಂಕುಗಳನ್ನು ದೂರವಿಡುತ್ತದೆ.…
ಬೆಂಗಳೂರು: ಕರ್ನಾಟಕದಲ್ಲಿ ನೀರಿನ ಸಮಸ್ಯೆ ಹೆಚ್ಚಾಗುತ್ತಿದ್ದು, ರಾಜ್ಯ ರಾಜಧಾನಿ ಬೆಂಗಳೂರಿನಲ್ಲೂ ಜಲಕ್ಷಾಮ ಉಂಟಾಗಿದೆ. ನೀರಿನ ಸಮಸ್ಯೆಯಿಂದಾಗಿ ಜನರು ಪರದಾಟ ನಡೆಸುತ್ತಿದ್ದಾರೆ. ಆದರೆ, ಲೋಕಸಭೆ ಚುನಾವಣೆಗೆ ಗ್ಯಾರಂಟಿಗಳನ್ನು ಮುಂದಿಟ್ಟುಕೊಂಡು ಪ್ರಚಾರ ಆರಂಭಿಸಿರುವ ಕಾಂಗ್ರೆಸ್ ಸರ್ಕಾರ ಅಲ್ಲಲ್ಲಿ ಸಮಾವೇಶಗಳನ್ನು ನಡೆಸುತ್ತಿದೆ. ನಡುವೆ ಸಮಾವೇಶಗಳನ್ನು ಆಯೋಜಿಸುತ್ತಿರುವ ರಾಜ್ಯ ಸರ್ಕಾರವನ್ನು ವಿಪಕ್ಷ ನಾಯಕ ಆರ್.ಅಶೋಕ ಅವರು ಟೀಕಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ ಅಶೋಕ, ‘ರಾಜ್ಯದಲ್ಲಿ ಜಲಕ್ಷಾಮದ ಸೂತಕ, ಕಾಂಗ್ರೆಸ್ ಸರ್ಕಾರಕ್ಕೆ ಗ್ಯಾರೆಂಟಿ ಉತ್ಸವ’ ಎಂದು ಜರಿದಿದ್ದಾರೆ. ಅಲ್ಲದೆ, ‘ ಅಜ್ಜಿಗೆ ಅರಿವೆ ಚಿಂತೆಯಾದರೆ ಮೊಮ್ಮಗಳಿಗೆ ಇನ್ನೇನೋ ಚಿಂತೆ ಎಂಬಂತೆ ಇಲ್ಲಿ ಜನ ಜಲಕ್ಷಾಮದಿಂದ ಹನಿ ನೀರಿಗೂ ಹಾಹಾಕಾರ ಪಡುತ್ತಿದ್ದರೆ, ಅತ್ತ ಸಿಎಂ ಸಿದ್ದರಾಮಯ್ಯ ಅವರು ಗ್ಯಾರೆಂಟಿ ಸಮಾವೇಶದ ಹೆಸರಿನಲ್ಲಿ ಜನರ ದುಡ್ಡಿನಲ್ಲಿ ಜಾತ್ರೆ ಮಾಡುತ್ತಿದ್ದಾರೆ’ ಎಂದರು. ‘ರಾಜ್ಯದಲ್ಲಿ 900 ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ಲಕ್ಷಾಂತರ ಕೃಷಿ ಕಾರ್ಮಿಕರು ಹೊಟ್ಟೆಪಾಡಿಗಾಗಿ ಊರು ಬಿಟ್ಟು ಗುಳೇ ಹೋಗಿದ್ದಾರೆ, 40ಕ್ಕೂ ಹೆಚ್ಚು ನೇಕಾರರು ದಿಕ್ಕು ಕಾಣದೆ…
ಯಾದಗಿರಿ: ಯಾದಗಿರಿ ತಾಲೂಕಿನ ಮಲ್ಹಾರ್ ತಾಂಡದಲ್ಲಿ ಪತ್ನಿಯನ್ನು, ಪತಿಯು ಕೊಚ್ಚಿ ಕೊಲೆ ಮಾಡಿರುವ ಘಟನೆ ನಡೆದಿದೆ. ಮೃತರನ್ನು ಸೋನಾಬಾಯಿ(40) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಮಗ ಅರ್ಜುನ(17) ಗಂಭೀರ ಗಾಯಗೊಂಡಿದ್ದಾನೆ. ರಾತ್ರಿ ತಾಯಿ ಸೋನುಬಾಯಿ ಹಾಗೂ ಮಗ ಅರ್ಜುನ ಮಲಗಿರುವಾಗ ಕುಡಿದ ನಶೆಯಲ್ಲಿ ಬಂದ ಆರೋಪಿ ಮಲ್ಲಪ್ಪ(45) ಕೊಡಲಿಯನ್ನು ತೆಗೆದುಕೊಂಡು ಪತ್ನಿಯ ಮೇಲೆ ಬೀಸಿದ್ದಾನೆ. ಈ ವೇಳೆ ತಾಯಿಯನ್ನು ಕಾಪಾಡಲು ಮಗ ಅಡ್ಡ ಬಂದಿದ್ದಾನೆ. ಕೊಡಲಿಯ ಹೊಡೆತಕ್ಕೆ ಗಂಭೀರ ಗಾಯಗೊಂಡಿದ್ದ ಸೋನುಬಾಯಿ ಸ್ಥಳದಲ್ಲೇ ಪ್ರಾಣಬಿಟ್ಟಿದ್ದಾಳೆ. ಗಲಾಟೆಯನ್ನು ಕಂಡು ನೆರೆಹೊರೆಯವರು ಪೊಲೀಸರಿಗೆ ಮಾಹಿತಿ ತಿಳಿಸಿದ್ದಾರೆ. ಕೂಡಲೇ ಘಟನಾ ಸ್ಥಳಕ್ಕೆ ಬಂದ ಪೊಲೀಸರು ಗಂಭಿರ ಗಾಯಗೊಂಡ ಅರ್ಜುನ್ ನನ್ನು ಕಲಬುರಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಮಹಿಳೆಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಯಾದಗಿರಿ ಗ್ರಾಮಾಂತರ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆಯನ್ನು ಕೈಗೊಂಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್…