Subscribe to Updates
Get the latest creative news from FooBar about art, design and business.
- ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್ ಲೈನ್ ಸಹಿ ಸಂಗ್ರಹ
- ಸುಧಾಮೂರ್ತಿ ಹಾಗೂ ರಮೇಶ್ ಅರವಿಂದ್ ಅವರಿಂದ ಕೆ.ಎನ್ ಗಣೇಶಯ್ಯ ಅವರ “ಪುಣ್ಯಕೋಟಿ ಶತಕರುಣಿ” ದೃಶ್ಯಕಾವ್ಯದ ಲೋಕಾರ್ಪಣೆ
- ಆ.8ಕ್ಕೆ ಬೆಂಗಳೂರಿನಲ್ಲಿ ಪತ್ರಕರ್ತರ ನಾಲ್ಕನೇ ರಾಜ್ಯ ಸಮ್ಮೇಳನ: ಜಾನಸನ್ ಘೋಡೆ
- ಚಿತ್ರಕಲಾ ಶಿಕ್ಷಕರ ನೇಮಕ: ಇನ್ನೆಷ್ಟು ವಿಳಂಬ?
- ತುಮಕೂರು: ಎಸ್.ಐ.ಆರ್ ಪ್ರಕ್ರಿಯೆಗೆ ಸೂಕ್ತ ಮಾರ್ಗದರ್ಶನ ನೀಡಿ
- ತುಮಕೂರು: ಜುಲೈ 22ರಂದು ಉದ್ಯಮಶೀಲತೆ ತಿಳುವಳಿಕೆ ಶಿಬಿರ
- ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಮೀನುಗಾರಿಕೆ ತರಬೇತಿ ಕೇಂದ್ರ ಸ್ಥಾಪಿಸಲು ಕ್ರಮ: ಶಾಸಕ ಸಿ.ಬಿ.ಸುರೇಶ್ ಬಾಬು
- ಕೊರಟಗೆರೆ: ವಿಷಪೂರಿತ ಆಹಾರ ಸೇವನೆ: 59 ಕುರಿಗಳ ಸಾವು
Author: admin
ತುಮಕೂರು: ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದಲ್ಲಿ, ಕಾಂಗ್ರೆಸ್ ಪಕ್ಷದಿಂದ ಕುಕ್ಕರ್ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಕ್ರಮಕ್ಕೆ ಒತ್ತಾಯಿಸಿ ಚುನಾವಣಾ ಆಯೋಗಕ್ಕೇ ಪತ್ರ ಬರೆಯಲಾಗಿದೆ ಎಂದು ಬಿಜೆಪಿ ಅಭ್ಯರ್ಥಿ ಡಾಕ್ಟರ್ ಮಂಜುನಾಥ ತಿಳಿಸಿದ್ದಾರೆ. ತುಮಕೂರಿನ ಸಿದ್ದಗಂಗಾ ಮಠದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಈಗಾಗಲೇ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್ಐಆರ್ ಕೂಡ ದಾಖಲಾಗಿದ್ದು ಸಾಕಷ್ಟು ಪ್ರಚಾರವನ್ನು ಕೂಡ ಮಾಧ್ಯಮಗಳೇ ನೀಡಿವೆ ಎಂದು ಹೇಳಿದರು. ಚುನಾವಣಾ ಆಯೋಗ ಈ ಬಗ್ಗೆ ಕ್ರಮ ತೆಗೆದುಕೊಳ್ಳುತ್ತದೆ ಎಂಬ ವಿಶ್ವಾಸವಿದೆ ಎಂದು ತಿಳಿಸಿದರು. ಇವತ್ತು ಮಠಕ್ಕೆ ಭೇಟಿ ನೀಡಿ, ಶಿವಕುಮಾರ ಶ್ರೀಗಳ ಗದ್ದುಗೆ ದರ್ಶನ ಪಡೆದು ಪೂಜೆ ಸಲ್ಲಿಸಿದ್ದೇನೆ. ನಾಳೆ ಸಂಜೆ ಚನ್ನಪಟ್ಟಣದಲ್ಲಿ ಕಾರ್ಯಕ್ರಮ ಇದೆ. ಕಾರ್ಯಕ್ರಮಕ್ಕೆ ಅಮಿತ್ ಷಾ ಆಗಮಿಸಲಿದ್ದಾರೆ ಎಂದರು. ನಾನು 4 ರಂದು ಗುರುವಾರ ನಾಮಪತ್ರ ಸಲ್ಲಿಕೆ ಮಾಡಲಿದ್ದೇನೆ. ಎರಡು ಪಕ್ಷದ ಮುಖಂಡರು ಅಭಿಮಾನಿಗಳು, ಹಿತೈಷಿಗಳು ಬೆಂಬಲಿಗರು ಸಾವಿರಾರು ಸಂಖ್ಯೆಯಲ್ಲಿ ಭಾಗಿಯಾಗಲಿದ್ದಾರೆ. ರ್ಯಾಲಿ ಮೂಲಕ ಆಗಮಿಸಿ ನಾಮಪತ್ರ ಸಲ್ಲಿಸಲಿದ್ದೇನೆ ಎಂದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು…
ಸ್ನೇಹ ಸಂಬಂಧಗಳೇ ಹಾಗೆ. ಏನನ್ನೂ ಮುಚ್ಚಿಡಲು ಸಾಧ್ಯವಾಗುವುದಿಲ್ಲ. ಇಡಬೇಕೆಂದರೂ ಮನಸ್ಸೂ ಒಪ್ಪುವುದಿಲ್ಲ. ಸ್ನೇಹಿತರಲ್ಲೇ ಎಲ್ಲಾ ಸಮಸ್ಯೆ ಹೇಳೋಣ, ಏನಾದರೂ ಒಂದು ಪರಿಹಾರ ದೊರೆಯಬಹುದು, ಇಲ್ಲಾ ಅಟ್ಲೀಸ್ಟ್ ಸಮಾಧಾನ ಆದರೂ ಆಗಬಹುದು ಎಂಬ ನಂಬಿಕೆ. ಆದರೆ ಇದೇ ನಂಬಿಕೆ ಇಲ್ಲೊಬ್ಬಳ ಜೀವವನ್ನೇ ತೆಗೆದಿದೆ. ಆಂಧ್ರದ ವಾರಾಂಗಲ್ ಜಿಲ್ಲೆಯಲ್ಲಿ ನಡೆದ ಭಯಾನಕ ಕೃತ್ಯದ ಬಗ್ಗೆ ಕೇಳಿದ್ರೆ ನೀವೇ ಶಾಕ್ ಆಗ್ತೀರಾ. ಮಲ್ಲಂಪಲ್ಲಿ ಮಂಡಲದ ಜಂಗಲಪಲ್ಲಿಯ ಅಕುನೂರಿ ಸುಪ್ರಿಯಾ(27) ಹೈದರಾಬಾದ್ ನಲ್ಲಿ ಫುಡ್ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿರುವ ಶಶಿಕಾಂತ್ ಹೈಸ್ಕೂಲ್ ನಲ್ಲಿ ಸಹಪಾಠಿಗಳು. ಇಲ್ಲಿ ಅಕುನೂರಿ ಸುಪ್ರಿಯ ಶಶಿಕಾಂತ್ ನನ್ನು ಬಾಲ್ಯ ಸ್ನೇಹಿತನೆಂದು ನಂಬಿ ಎಲ್ಲಾ ಸಮಸ್ಯೆ ಹೇಳಿಕೊಂಡರೆ ತನ್ನನ್ನು ನಂಬಿದ ಆಕೆಯನ್ನು ಈ ಪಾಪಿ ಬರ್ಬರವಾಗಿ ಕೊಂದಿದ್ದಾನೆ. ಅದೂ ತನ್ನ ಗೆಳತಿಯೊಂದಿಗೆ ಸೇರಿ!! ಅಂದಹಾಗೆ ಶಶಿಕಾಂತ್ ಗೆ ಇನ್ನೂ ಮದುವೆಯಾಗಿಲ್ಲ. ಆದರೆ ನಗರದಲ್ಲಿ ಮುಲುಗು ಜಿಲ್ಲೆಯ ಅಜೀರಾ ಶಿರೀಫಾ ಎಂಬ ವಿವಾಹಿತ ಮಹಿಳೆಯೊಂದಿಗೆ ವಾಸವಾಗಿದ್ದಾನೆ. ಇತ್ತ ಸುಪ್ರಿಯಾ ಮೈಸಂಪಲ್ಲಿಯ ವೆಂಗಲ ರಾಜ್…
ತುಮಕೂರು: ಶ್ರೀ ಶಿವಕುಮಾರ ಸ್ವಾಮೀಜಿಯವರ 117ನೇ ಜನ್ಮ ಜಯಂತಿ ಹಿನ್ನೆಲೆಯಲ್ಲಿ, ಇಂದು ಸಿದ್ದಗಂಗಾ ಮಠಕ್ಕೆ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಮಂಜುನಾಥ್ ಭೇಟಿ ನೀಡಿ ಸ್ವಾಮೀಜಿಯ ಗದ್ದುಗೆ ದರ್ಶನ ಪಡೆದರು. ಇದೇ ವೇಳೆ ಸ್ಥಳೀಯ ಬಿಜೆಪಿ ಮುಖಂಡರು ಅವರನ್ನು ಆತ್ಮೀಯವಾಗಿ ಬರಮಾಡಿಕೊಂಡರು. ಈ ಸಂದರ್ಭದಲ್ಲಿ ಬಿಜೆಪಿ ಮುಖಂಡ ರುದ್ರೇಶ್ ಸೇರಿದಂತೆ ಬಿಜೆಪಿ ಮುಖಂಡರು ಹಾಜರಿದ್ದರು. ಗದ್ದುಗೆ ದರ್ಶನ ಪಡೆದ ಡಾ. ಮಂಜುನಾಥ್ ಅವರು ವಿಶೇಷ ಪೂಜೆಯನ್ನು ಸಲ್ಲಿಸಿದರು. ಇದೇ ವೇಳೆ ತುಮಕೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿ. ಸೋಮಣ್ಣ ಕೂಡ ಅವರೊಂದಿಗೆ ಜೊತೆಗೂಡಿ ಸ್ವಾಮೀಜಿಯವರ ಗದ್ದುಗೆ ದರ್ಶನ ಪಡೆದರು. ಅಲ್ಲದೆ ಇಬ್ಬರು ಬಿಜೆಪಿ ಅಭ್ಯರ್ಥಿಗಳು ಗದ್ದುಗೆಗೆ ವಿಶೇಷ ಪೂಜೆಯನ್ನು ಕೂಡ ಸಲ್ಲಿಸಿದರು. ಈ ಸಂದರ್ಭದಲ್ಲಿ ಶಾಸಕ ಜ್ಯೋತಿ ಗಣೇಶ್ ಸೇರಿದಂತೆ ಸ್ಥಳೀಯ ಬಿಜೆಪಿ ಮುಖಂಡರು ಹಾಜರಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್…
ಎಂಎಲ್ ಸಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಮೂರು ದಿನಗಳ ನಂತರ, ಮಾಜಿ ಪತ್ರಕರ್ತೆ ತೇಜಸ್ವಿನಿ ಗೌಡ ಅವರು ಶನಿವಾರ ನವದೆಹಲಿಯಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರಾದ ಪವನ್ ಖೇರಾ ಮತ್ತು ಸಂಸದ ಜೈರಾಮ್ ರಮೇಶ್ ಅವರ ಸಮ್ಮುಖದಲ್ಲಿ ಕಾಂಗ್ರೆಸ್ಗೆ ಮರು ಸೇರ್ಪಡೆಗೊಂಡಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಕಣಕ್ಕಿಳಿಸದಿದ್ದಕ್ಕೆ ಬೇಸರಗೊಂಡು ಬಿಜೆಪಿ ತೊರೆದಿದ್ದಾರೆ. 2004 ರಿಂದ 2009 ರವರೆಗೆ ಕಾಂಗ್ರೆಸ್ ಸಂಸದರಾಗಿದ್ದ ತೇಜಸ್ವಿನಿ ಗೌಡ ಅವರು ಕಾಂಗ್ರೆಸ್ನಿಂದ ಪಕ್ಷಾಂತರಗೊಂಡು 2014 ರಲ್ಲಿ ಬಿಜೆಪಿ ಸೇರಿದರು. 2018 ರಲ್ಲಿ ಬಿಜೆಪಿಯಿಂದ ವಿಧಾನ ಸಭಾ ಕ್ಷೇತ್ರದಿಂದ ಪರಿಷತ್ತಿಗೆ ಆಯ್ಕೆಯಾಗಿದ್ದರು. “ಕರ್ನಾಟಕ ರಾಜಕೀಯದಲ್ಲಿ ಸಕ್ರಿಯ ನಾಯಕಿಯಾಗಿರುವ ತೇಜಸ್ವಿನಿ ಗೌಡ ಅವರನ್ನು ನಾವು ಕಾಂಗ್ರೆಸ್ಗೆ ಮರಳಿ ಸ್ವಾಗತಿಸುತ್ತೇವೆ. ತೇಜಸ್ವಿನಿ ಅವರು ಮುಂಬರುವ ಚುನಾವಣೆಯಲ್ಲಿ ಸಕ್ರಿಯರಾಗುತ್ತಾರೆ ಎಂಬ ಸಂಪೂರ್ಣ ವಿಶ್ವಾಸವಿದೆ ಎಂದು ರಮೇಶ್ ಹೇಳಿದರು. ತೇಜಸ್ವಿ ಗೌಡ ತಮ್ಮ ಹೇಳಿಕೆಯಲ್ಲಿ, “ಕಾಂಗ್ರೆಸ್ ಕೇವಲ ಮಾತನ್ನು ನಂಬದೆ ಕ್ರಿಯೆಯನ್ನು ನಂಬುತ್ತದೆ. ಇದು ಉತ್ತಮ ಸಮಯ, ಮತ್ತು ಪ್ರಾಮಾಣಿಕವಾಗಿ, ನಾನು ಪಕ್ಷಕ್ಕಾಗಿ ಕೆಲಸ ಮಾಡಲು…
ತುಮಕೂರು: ಇಂದು ಶ್ರೀ ಶಿವಕುಮಾರಸ್ವಾಮಿಗಳ 117ನೇ ಜನ್ಮದಿನೋತ್ಸವ ಹಿನ್ನೆಲೆಯಲ್ಲಿ, ಸಿದ್ದಗಂಗಾ ಮಠದಲ್ಲಿ ಶ್ರೀಗಳ ಹುಟ್ಟುಹಬ್ಬ ಆಚರಣೆ ನಡೆಯುತ್ತಿದೆ. ಬೆಳಗ್ಗೆ 5 ಗಂಟೆಯಿಂದಲೇ ಶಿವಕುಮಾರ ಶ್ರೀಗಳ ಗದ್ದುಗೆಗೆ ವಿಶೇಷ ಪೂಜೆ,ಅಭಿಷೇಕ ನೆರವೇರಿಸಲಾಯಿತು. ಬೆಳಗ್ಗೆ 8 ಗಂಟೆಗೆ ಶ್ರೀಗಳ ಪುತ್ಥಳಿಯನ್ನ ರುದ್ರಾಕ್ಷಿ ಮಂಟಪದಲ್ಲಿಟ್ಟು ವಾದ್ಯಮೇಳ, ಪೂರ್ಣಕುಂಬದೊಂದಿಗೆ ಮೆರವಣಿಗೆ ಮಾಡಲಾಯಿತು. ಹರಗುರುಶರಣರ ನೇತೃತ್ವದಲ್ಲಿ ಸಿದ್ದಗಂಗಾ ಮಠದ ಆವರಣದಲ್ಲಿ ಮೆರವಣಿಗೆ ಮಾಡಲಾಯಿತು. ಮುಖ್ಯವಾಗಿ ಶ್ರೀ ಶಿವಕುಮಾರ ಸ್ವಾಮೀಜಿಯವರ ಗದ್ದುಗೆಯನ್ನು ವಿವಿಧ ಹಣ್ಣುಗಳಿಂದ ಅಲಂಕಾರ ಮಾಡಲಾಗಿರುವುದು ವಿಶೇಷವಾಗಿದೆ. ಅದರಲ್ಲೂ ಶಶಿಕುಮಾರ್ ಸ್ವಾಮೀಜಿ ನಿತ್ಯ ಬಳಸುತ್ತಿದ್ದಂತಹ ಪರಂಗಿ ಹಣ್ಣು ಅಲಂಕಾರದಲ್ಲಿ ಬಳಸಲಾಗಿರುವುದು ಗಮನಾರ್ಹ ಅಂಶವಾಗಿದೆ. ಹಲಸಿನ ಹಣ್ಣು, ಕಿತ್ತಳೆ ಹಣ್ಣು, ಮೂಸಂಬಿ, ಪಪ್ಪಾಯ ಸೇರಿದಂತೆ ಹತ್ತಕ್ಕೂ ಹೆಚ್ಚು ಹಣ್ಣುಗಳಿಂದ ಅಲಂಕರಿಸಲಾಗಿದೆ. ಸಾವಿರಾರು ಭಕ್ತರು ಮಠಕ್ಕೆ ಭೇಟಿ ನೀಡಿ ಶ್ರೀ ಶಿವಕುಮಾರ ಸ್ವಾಮೀಜಿಯವರ ಗದ್ದುಗೆಯ ದರ್ಶನ ಪಡೆಯುತ್ತಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ರಾಜ್ಯ ಪಠ್ಯಕ್ರಮದ ಶಾಲೆಗಳ 5,8,9 ತರಗತಿಯ ಮಕ್ಕಳಿಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ನಡೆಸಿದ ಮೌಲ್ಯಾಂಕನ ಪರೀಕ್ಷೆ ಕೆಲ ಖಾಸಗಿ ಶಾಲೆಗಳಲ್ಲಿ ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂಬಂತಾಗಿದೆ. ವಿವಿದೆಡೆ ಖಾಸಗಿ ಶಾಲೆಗಳು ಶಾಲಾ ಮಟ್ಟದಲ್ಲಿ ತಮ್ಮದೇ ಆದ ಮತ್ತೊಂದು ಪರೀಕ್ಷೆಯನ್ನು ಮಾಡಲು ತಯಾರಿ ಮಾಡಿಕೊಂಡಿದೆ. ಈ ಕುರಿತು ಮಕ್ಕಳು ಹಾಗೂ ಪೋಷಕರಿಗೆ ಮಾಹಿತಿಯನ್ನು ನೀಡಲಾಗಿದೆ. ಮಕ್ಕಳಿಗೆ ಏ.11 ರಿಂದ ಬೇಸಿಗೆ ರಜೆ ಪ್ರಾರಂಭವಾಗಲಿದ್ದು, ಅಷ್ಟರೊಳಗೆ ಪರೀಕ್ಷೆ ಮುಗಿಸಲು ಶಾಲೆಗಳು ಮುಂದಾಗಿದೆಯೆಂದು ವರದಿಯಾಗಿದೆ. ಈಗಷ್ಟೇ ಪರೀಕ್ಷೆ ಎಲ್ಲಾ ಮುಗಿದು ನಿರಾಳವಾಗಿದ್ದ ಮಕ್ಕಳಿಗೆ ಮತ್ತೊಂದು ಪರೀಕ್ಷೆಯ ಹೊರೆ ಬಿದ್ದಿದೆ. ಇದನ್ನು ತಪ್ಪಿಸಲು ಶಿಕ್ಷಣ ಇಲಾಖೆ ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಪೋಷಕರ ವಲಯದಲ್ಲಿ ಮಾತು ಬರುತ್ತಿದೆ. ಬೆಂಗಳೂರಿನ ರಾಜಾಜಿನಗರದ ಶಾಲೆ 5,8,9 ನೇ ತರಗತಿ ಮಕ್ಕಳಿಗೆ ಮತ್ತೊಮ್ಮೆ ಪರೀಕ್ಷೆ ನಡೆಸುವುದಾಗಿ ಪೋಷಕರಿಗೆ ಹೇಳಿದೆ. ತುಮಕೂರಿನ ಸರಸ್ವತಿಪುರಂನ ಪ್ರತಿಷ್ಠಿತ ಶಾಲೆ, ಗುಬ್ಬಿ ಪಟ್ಟಣದಲ್ಲಿ ಇರುವ ಪ್ರಮುಖ ಶಾಲೆಯಲ್ಲಿ ಕೂಡಾ ಸೋಮವಾರ ಪರೀಕ್ಷೆ ಇದ್ದು, ಮಕ್ಕಳು ಬರಲೇಬೇಕೆಂದು…
ಇನ್ ಸ್ಟಾಗ್ರಾಮ್ ರೀಲ್ಸ್ ಗಾಗಿ ಜನನಿಬಿಡ ರಸ್ತೆಯಲ್ಲಿ ತನ್ನ ಕಾರನ್ನು ನಿಲ್ಲಿಸಿ ಪೊಲೀಸ್ ಬ್ಯಾರಿಕೇಡ್ ಗಳಿಗೆ ಬೆಂಕಿ ಹಚ್ಚಿದ ವ್ಯಕ್ತಿಯೊಬ್ಬನಿಗೆ ದೆಹಲಿ ಟ್ರಾಫಿಕ್ ಪೊಲೀಸರು 36,000 ರೂಪಾಯಿ ದಂಡ ವಿಧಿಸಿ ಬಂಧಿಸಿದ್ದಾರೆ. ಪೊಲೀಸರು ವಾಹನವನ್ನು ವಶಪಡಿಸಿಕೊಂಡಿದ್ದು, ಪ್ರದೀಪ್ ಢಾಕಾ ವಿರುದ್ಧ ಮೋಟಾರು ವಾಹನ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಪ್ರದೀಪ್ ಢಾಕಾ ಎಂಬಾತ ದೆಹಲಿಯ ಪಶ್ಚಿಮ ವಿಹಾರ್ ನಲ್ಲಿರುವ ಫ್ಲೈಓವರ್ ನಲ್ಲಿ ಜನದಟ್ಟಣೆಯ ಸಮಯದಲ್ಲಿ ಕಾರನ್ನು ನಿಲ್ಲಿಸಿ, ಇನ್ಸ್ಟಾಗ್ರಾಮ್ ರೀಲ್ಸ್ ಮಾಡಿದ್ದಾನೆ. ಕಾರಿನ ಡೋರ್ ತೆರೆದು ವೇಗವಾಗಿ ವಾಹನವನ್ನು ಓಡಿಸಿಕೊಂಡು ಹೋಗಿದ್ದಾರೆ. ಇದಲ್ಲದೆ ಪಶ್ಚಿಮ ವಿಹಾರ್ ನಲ್ಲಿನ ಫ್ಲೈಓವರ್ ನಲ್ಲಿ ವಾಹನವನ್ನು ನಿಲ್ಲಿಸಿ ಸಂಚಾರಕ್ಕೆ ಅಡ್ಡಿಪಡಿಸಿದ್ದಾರೆ. ಪೊಲೀಸ್ ಬ್ಯಾರಿಕೇಡ್ ಗಳಿಗೆ ಬೆಂಕಿ ಹಂಚಿ ಅದರ ಮುಂದೆ ಪೋಸ್ ನೀಡಿದ್ದಾರೆ. ರೀಲ್ಸ್ ಅಪ್ಲೋಡ್ ಮಾಡಿದ ಬಳಿಕ ಪೊಲೀಸರು ವಿಡಿಯೋ ಆಧಾರದ ಮೇಲೆ ಕೃತ್ಯವೆಸಗಿದ ಪ್ರದೀಪ್ ನನ್ನು ಬಂಧಿಸಿ ಕಾರನ್ನು ಜಪ್ತಿ ಮಾಡಿ, 36,000 ರೂಪಾಯಿಯ ದಂಡವನ್ನು ವಿಧಿಸಿದ್ದಾರೆ. ಪೊಲೀಸರ ಮೇಲೆ ಪ್ರದೀಪ್ ಹಲ್ಲೆ ನಡೆಸಿದ್ದಾನೆ…
ರಾಷ್ಟ್ರಪತಿ ದ್ರೌಪದಿ ಮುರ್ಮು ನೆನ್ನೆ ಹಿರಿಯ ರಾಜಕಾರಣಿ ಎಲ್.ಕೆ. ಅಡ್ವಾಣಿ ಅವರಿಗೆ ದೇಶದ ಅತ್ಯುನ್ನತ ನಾಗರಿಕ ಗೌರವ ‘ಭಾರತ ರತ್ನ’ ಪ್ರಶಸ್ತಿಯನ್ನು ನಿವಾಸದಲ್ಲೇ ಪ್ರದಾನ ಮಾಡಿದರು. ಮಾಜಿ ಪ್ರಧಾನಿಗಳಾದ ಚೌಧರಿ ಚರಣ್ ಸಿಂಗ್, ಪಿ.ವಿ. ನರಸಿಂಹ ರಾವ್, ಕೃಷಿ ವಿಜ್ಞಾನಿ ಎಂ.ಎಸ್. ಸ್ವಾಮಿನಾಥನ್ ಮತ್ತು ಬಿಹಾರದ ಮಾಜಿ ಮುಖ್ಯಮಂತ್ರಿ ಕರ್ಪೂರಿ ಠಾಕೂರ್ ಅವರಿಗೂ ಮರಣೋತ್ತರವಾಗಿ ‘ಭಾರತ ರತ್ನ’ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗಿತ್ತು. ಅನಾರೋಗ್ಯದ ಕಾರಣ ನಿನ್ನೆ ನಡೆದ ಸಮಾರಂಭದಲ್ಲಿ ಭಾರತ ರತ್ನ ಪ್ರಶಸ್ತಿ ಸ್ವೀಕರಿಸಲು ಅಡ್ವಾಣಿ ಆಗಮಿಸಿರಲಿಲ್ಲ ಎಂದು ವರದಿಯಾಗಿತ್ತು. ಈ ವೇಳೆ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಉಪಸ್ಥಿತರಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಆಸ್ತಿ ವಿಚಾರದಲ್ಲಿ ನ್ಯಾಯ ಸಿಗಲಿಲ್ಲ ಎಂದು ಸಿಟ್ಟಾದ ಮಹಿಳೆಯೊಬ್ಬರು ಪೊಲೀಸ್ ಮೇಲೆ ಹಲ್ಲೆ ನಡೆಸಿರುವ ಆರೋಪವೊಂದು ಬೆಳಕಿಗೆ ಬಂದಿದೆ. ಮಧ್ಯಾಹ್ನ ಬೆಂಗಳೂರಿನ ಗಂಗಮ್ಮನ ಗುಡಿ ಪೊಲೀಸ್ ಠಾಣೆಯಲ್ಲಿ ಘಟನೆ ನಡೆದಿದೆ ಎಂದು ವರದಿ ತಿಳಿಸಿದೆ. ಅಶ್ವಿನಿ ಎಂಬಾಕೆ ಎಎಸ್ಐ ನಾಗರಾಜು ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದ್ದು, ಹಲವು ದಿನಗಳಿಂದ ಗಂಗಮ್ಮನ ಗುಡಿ ಪೊಲೀಸ್ ಠಾಣೆಗೆ ಅಶ್ವಿನಿ ಬಂದು ಹೋಗುತ್ತಿದ್ದರು. ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಅನೇಕ ಬಾರಿ ಅಶ್ವಿನಿ ನ್ಯಾಯಕ್ಕಾಗಿ ಹೋರಾಟ ಮಾಡುತ್ತಿದ್ದರು ಎನ್ನಲಾಗಿದೆ. ಆದರೆ ತನ್ನ ಸಮಸ್ಯೆಗೆ ನ್ಯಾಯ ಸಿಗುತ್ತಿಲ್ಲವೆಂಬ ಸಿಟ್ಟಿಗೆ ಹಲ್ಲೆ ನಡೆಸಿದ್ದಾರೆ ಎಂದು ವರದಿ ತಿಳಿಸಿದೆ. ಮಾನಸಿಕ ಅಸ್ವಸ್ಥತೆಯಾಗಿರುವ ಅಶ್ವಿನಿ ಕಳೆದ 15 ವರ್ಷಗಳಿಂದ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವರದಿ ತಿಳಿಸಿದೆ. ಠಾಣೆಗೆ ಬಂದ ಅಶ್ವಿನಿ ಎಎಸ್ಐ ನಾಗರಾಜು ಜತೆ ಮಾತುಕತೆ ನಡೆಸಿದ್ದಾಳೆ. ಈ ವೇಳೆ ಏಕಾಏಕಿ ಸಿಟ್ಟಾಗಿ ಕೈಗೆ ಸಿಕ್ಕ ವಸ್ತುವಿನಿಂದ ನಾಗರಾಜು ಮೇಲೆ ಹಲ್ಲೆ ನಡೆಸಿದ್ದಾಳೆ. ಸದ್ಯ ಹಲ್ಲೆಗೊಳಗಾದ ಎಎಸ್ಐ ನಾಗರಾಜುಗೆ ಸ್ಥಳೀಯ ಆಸ್ಪತ್ರೆಗೆ ದಾಖಲು…
ಹುಟ್ಟುಹಬ್ಬ ಆಚರಣೆಗೆ ಆನ್ ಲೈನ್ ನಲ್ಲಿ ಆರ್ಡರ್ ಮಾಡಿದ ಕೇಕ್ ತಿಂದು 10 ವರ್ಷದ ಬಾಲಕಿ ಕೊನೆಯುಸಿರೆಳೆದ ಘಟನೆ ಪಂಜಾಬ್ ನ ಪಟಿಯಾಲದಲ್ಲಿ ನಡೆದಿದೆ. ಕಳೆದ ವಾರ ಪಂಜಾಬ್ ನಲ್ಲಿ 10 ವರ್ಷದ ಬಾಲಕಿ ಮಾನ್ವಿ ಹುಟ್ಟುಹಬ್ಬದಂದು ಕೇಕ್ ಸೇವಿಸಿ ಕೊನೆಯುಸಿರೆಳೆದಿದ್ದಳು, ಈ ಘಟನೆ ತಡವಾಗಿ ದೃಢಪಟ್ಟಿದೆ. ಆನ್ ಲೈನ್ ನಲ್ಲಿ ಆರ್ಡರ್ ಮಾಡಿದ ಕೇಕ್ ಸೇವಿಸಿ ಆಕೆ ಉಸಿರು ಚೆಲ್ಲಿದ್ದಾಳೆ ಎಂದು ಸಂಬಂಧಿಗಳು ಆರೋಪಿಸಿದ್ದಾರೆ. ಕೇಕ್ ತಯಾರಿಸಿದ ಬೇಕರಿ ಮಾಲೀಕನ ಮೇಲೆ ಎಫ್ಐಆರ್ ದಾಖಲಾಗಿದೆ. ದೇಹದ ಪರೀಕ್ಷೆಯನ್ನು ಮಾಡಲಾಗಿದೆ. ಚಾಕಲೇಟ್ ಕೇಕ್ನ ಮಾದರಿಯನ್ನು ಸಹ ಪರೀಕ್ಷೆಗೆ ಕಳುಹಿಸಲಾಗಿದೆ. ನಾವು ವರದಿಗಳಿಗಾಗಿ ಕಾಯುತ್ತಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ. ಮಾನ್ವಿಯ ಹುಟ್ಟುಹಬ್ಬದ ಆಚರಣೆಗೆ ಆನ್ ಲೈನ್ ನಲ್ಲಿ ಕೇಕ್ ಆರ್ಡರ್ ಮಾಡಲಾಗಿತ್ತು. ಮಾರ್ಚ್ 24 ರಂದು ರಾತ್ರಿ 7 ಗಂಟೆಯ ವೇಳೆ ಮಾನ್ವಿ ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಿಸಿದ್ದಳು. ಅಂದು ರಾತ್ರಿ 10 ಗಂಟೆಯ ವೇಳೆ ಮಾನ್ವಿಯ ಇಡೀ ಕುಟುಂಬವೇ ಅಸ್ವಸ್ಥಗೊಂಡಿತು. ಇಬ್ಬರು…