Subscribe to Updates
Get the latest creative news from FooBar about art, design and business.
- ದೇಶದ 2ನೇ ಅತಿ ದೊಡ್ಡ ಕ್ರಿಕೆಟ್ ಕ್ರೀಡಾಂಗಣಕ್ಕೆ ಸಿಎಂ ಸಿದ್ದರಾಮಯ್ಯ ಶಂಕುಸ್ಥಾಪನೆ
- ಈ ವರ್ಷ 52 ಸಾವಿರ ಅತಿಥಿ ಶಿಕ್ಷಕರ ನೇಮಕ: ಸಚಿವ ಮಧು ಬಂಗಾರಪ್ಪ
- ಬೀದರ್ ಬ್ರಿಮ್ಸ್ (BRIMS) ಆಸ್ಪತ್ರೆಯಲ್ಲಿ ಕರ್ತವ್ಯ ನಿರತ ವೈದ್ಯರ ಮೇಲೆ ಭೀಕರ ಹಲ್ಲೆ: 7 ಮಂದಿ ಆರೋಪಿಗಳ ಬಂಧನ
- ತುಮಕೂರು ಜಿಲ್ಲೆಗೆ ‘ತುಮಕೂರು (ಬೆಂಗಳೂರು ಉತ್ತರ)’ ಎಂದು ಮರುನಾಮಕರಣ: ಗೃಹ ಸಚಿವ ಡಾ.ಜಿ.ಪರಮೇಶ್ವರ್
- ಮಾದಾವರ–ತುಮಕೂರು ಮೆಟ್ರೋ ರೈಲು ಯೋಜನೆ: ಸರ್ಕಾರಕ್ಕೆ ಸಲ್ಲಿಕೆಯಾಯ್ತು ಡಿಪಿಆರ್ ವರದಿ
- ಪಕ್ಷದ ಜವಾಬ್ದಾರಿ ನಿರ್ವಹಿಸದಿದ್ದರೆ ಶಿಸ್ತು ಕ್ರಮ: ಕಾಂಗ್ರೆಸ್ ಮುಖಂಡರ ಸಭೆಯಲ್ಲಿ ಶಾಸಕ ಕೆ. ಷಡಕ್ಷರಿ ಎಚ್ಚರಿಕೆ
- ಗುಬ್ಬಿ ಶಾಸಕರು, ಪುತ್ರನಿಂದ ಕುತಂತ್ರ ರಾಜಕಾರಣ: ಷಡ್ಯಂತ್ರಗಳಿಗೆ ಜಗ್ಗುವುದಿಲ್ಲ: ಜೆಡಿಎಸ್ ಮುಖಂಡ ನಾಗರಾಜು ಕಿಡಿ
- ತುಮಕೂರು: ಕುಲ್ಲಕ ವಿಷಯಕ್ಕೆ ಜಗಳ: ಕೊಲೆ
Author: admin
ಸ್ಯಾಂಡಲ್ ವುಡ್ ನಟಿ, ನಿರ್ಮಾಪಕಿ ರಾಧಿಕಾ ಕುಮಾರಸ್ವಾಮಿ ಅವರು ಇದೀಗ ವಂಚಕ ಯುವರಾಜನ ಪ್ರಕರಣದಲ್ಲಿ ಸಿಸಿಬಿ ವಿಚಾರಣೆಗೆ ಒಳಗಾಗಿದ್ದಾರೆ. ಈ ಹಿನ್ನೆಲೆಯಲ್ಲಿ ರಾಧಿಕಾ ಕುಮಾರಸ್ವಾಮಿ ಕೆಲವು ದಿನಗಳಿಂದ ಸಿಕ್ಕಾಪಟ್ಟೆ ಸುದ್ದಿಯಲ್ಲಿದ್ದಾರೆ. ಇನ್ನು ಈ ಬಗ್ಗೆ ಮಾಜಿ ಎಚ್ ಡಿ ಕುಮಾರಸ್ವಾಮಿ ಅವರು ಮಾತನಾಡಿದ್ದಾರೆ. ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ನೇರಲೆಕೆರೆ ಗ್ರಾಮಕ್ಕೆ ಕುಮಾರಸ್ವಾಮಿ ಭೇಟಿ ಕೊಟ್ಟಿದ್ದರು. ಈ ವೇಳೆ ರಾಧಿಕಾ ಕುಮಾರಸ್ವಾಮಿಗೆ ಸಿಸಿಬಿ ನೋಟಿಸ್ ವಿಚಾರವಾಗಿ ಮಾಧ್ಯಮದವರು ಎಚ್ ಡಿಕೆಗೆ ಅಭಿಪ್ರಾಯ ಕೇಳಿದ್ದಾರೆ. ಇದಕ್ಕೆ ಕುಮಾರಸ್ವಾಮಿ, ಯಾರಪ್ಪ ಅದು.. ಅವರು ಯಾರು ಅಂತ ಗೊತ್ತಿಲ್ಲ.. ಗೊತ್ತಿಲ್ಲದಿದ್ದವರ ಬಗ್ಗೆ ನಾನ್ಯಾಕೆ ತಲೆಕೆಡಿಸಿಕೊಳ್ಳಲಿ. ನನಗೆ ಸಂಬಂಧಪಡದ ವಿಚಾರ ಕೇಳಲೇಬೇಡಿ ಎನ್ನುತ್ತ ಅಲ್ಲಿಂದ ಮುಂದೆ ಹೆಜ್ಜೆ ಇಟ್ಟರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಆಂಡ್ರಾಯ್ಡ್ ಬಳಕೆದಾರರು ತಮ್ಮ ಫೋನ್ ಗಳಲ್ಲಿ ಅಪ್ಲಿಕೇಶನ್ ಗಳು ಡೌನ್ ಲೋಡ್ ಮಾಡಲು ಗೂಗಲ್ ಪ್ಲೇ ಸ್ಟೋರ್ ತುಂಬಾ ಅಗತ್ಯ. ಯಾವುದೇ ಆ್ಯಪ್ ಬೇಕಾದರೂ ನಾವು ಗೂಗಲ್ ಪ್ಲೇ ಸ್ಟೋರ್ ಗೆ ಹೋಗ್ತೀವಿ. ಇಲ್ಲಿ ಬಳಕೆದಾರರಿಗೆ ಬೇಕಾದ ಹೊಸ ಅಪ್ಲಿಕೇಶನ್ ಗಳು ಇದ್ದು ಇದನ್ನು ಡೌನ್ ಲೋಡ್ ಮಾಡಬಹುದು. ಆದರೆ, ಅತಿ ವೇಗದ ಇಂಟರ್ನೆಟ್ ಸಂಪರ್ಕವನ್ನು ಹೊಂದಿದ್ದರೂ (Wi-Fi ಅಥವಾ 5G), ಇದುವರೆಗೆ ಗೂಗಲ್ ಪ್ಲೇ ಸ್ಟೋರ್ ನಲ್ಲಿ ಒಂದು ಬಾರಿಗೆ ಒಂದೇ ಒಂದು ಅಪ್ಲಿಕೇಶನ್ ಅನ್ನು ಮಾತ್ರ ಡೌನ್ ಲೋಡ್ ಮಾಡಲು ಮಾತ್ರ ಸಾಧ್ಯವಾಗುತ್ತಿತ್ತು. ಆದರೆ, ಶೀಘ್ರದಲ್ಲೇ ಈ ಸಮಸ್ಯೆ ನಿವಾರಣೆಯಾಗಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಇಲ್ಲಿ ಏಕಕಾಲದಲ್ಲಿ ಹಲವು ಅಪ್ಲಿಕೇಶನ್ ಗಳನ್ನು ಡೌನ್ ಲೋಡ್ ಮಾಡಲು ಅನುಕೂಲವನ್ನು ಕಲ್ಪಿಸುವ ಉದ್ದೇಶದಿಂದ ಗೂಗಲ್ ಪ್ರಸ್ತುತ ಹೊಸ ಮಾರ್ಗವನ್ನು ಪರೀಕ್ಷಿಸುತ್ತಿದೆ. ಗೂಗಲ್ ಪ್ಲೇ ಸ್ಟೋರ್ ನ ಹೊಸ ಅಪ್ ಡೇಟ್ (ಆವೃತ್ತಿ 40.0.13) ವಿಶೇಷ ವೈಶಿಷ್ಟ್ಯಗಳನ್ನು ಒಳಗೊಂಡಿದ್ದು, ಈ ವೈಶಿಷ್ಟ್ಯದ ಸಹಾಯದಿಂದ…
ಲೋಕಸಭಾ ಚುನಾವಣೆಗೆ ಬಿಜೆಪಿಯ ಮೊದಲ ಪಟ್ಟಿ ಬಿಡುಗಡೆ ಆಗಿದೆ. ಇದೀಗ ಎರಡನೆ ಪಟ್ಟಿ ಮೇಲೆ ಎಲ್ಲರ ಕಣ್ಣು ನೆಟ್ಟಿದ್ದು, ಕರ್ನಾಟಕದ ಅಭ್ಯರ್ಥಿಗಳು ಯಾರಾಗಬಹುದೆಂದು ಕುತೂಹಲ ಕೆರಳಿಸಿದೆ. ಈ ನಡುವೆ ಕೆಲವು ಕ್ಷೇತ್ರಗಳಿಗೆ ಕುತೂಹಲದ ರೀತಿ ಕೆಲವು ಅಭ್ಯರ್ಥಿಗಳ ಹೆಸರು ಕೇಳಿಬರುತ್ತಿದೆ. ಅಂತೆಯೇ ಹಿಂದುತ್ವವಾದಿ, ವಾಗ್ಮಿ ಚಕ್ರವರ್ತಿ ಸೂಲಿಬೆಲೆಗೂ ಈ ಸಲ ಬಿಜೆಪಿ ಟಿಕೆಟ್ ನೀಡಲಿದೆ ಎಂಬ ಸುದ್ದಿ ಚರ್ಚೆಯಾಗುತ್ತಿದೆ. ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಿಂದ ಈ ಬಾರಿ ಹಾಲಿ ಸಂಸದ ಅನಂತಕುಮಾರ್ ಹೆಗಡೆ ಅವರಿಗೆ ಬಿಜೆಪಿ ಟಿಕೆಟ್ ನೀಡುವುದಿಲ್ಲ ಎಂಬ ಸುದ್ದಿ ಭಾರೀ ಚರ್ಚೆಯಾಗುತ್ತಿದೆ. ಈ ಬೆನ್ನಲ್ಲೇ ಅವರಷ್ಟೇ ಹಿಂದುತ್ವದ ಪ್ರಖರವಾದಿಯಾದಿಯಾಗಿರುವ ಚಿಂತಕ ಚಕ್ರವರ್ತಿ ಸೂಲಿಬೆಲೆ ಅವರನ್ನು ಕಣಕ್ಕಿಳಿಸುವ ಬಗ್ಗೆ ಬಿಜೆಪಿ ಪಾಳೆಯದಲ್ಲಿ ಚರ್ಚೆ ನಡೆದಿದೆ ಎನ್ನಲಾಗಿದೆ. ಅಂದಹಾಗೆ ಈ ಹಿಂದೆಯೂ ಚುನಾವಣೆ ವೇಳೆ ಚಕ್ರವರ್ತಿ ಸೂಲಿಬೆಲೆ ಅವರ ಹೆಸರು ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಿಂದ ಕೇಳಿಬಂದಿತ್ತು. ಆದರೆ ಸೂಲಿಬೆಲೆ ಅವರು ಚುನಾವಣಾ ರಾಜಕಾರಣಕ್ಕೆ ಪ್ರವೇಶಿಸುವ ಬಗ್ಗೆ ನಿರಾಸಕ್ತಿ ತೋರಿದ್ದರು. ಮೋದಿ…
ಆನ್ ಲೈನ್ ಫುಡ್ ಡೆಲಿವರಿ ತಾಣ ಝೊಮಾಟೋ (Zomato) ಹಲವು ಬಾರಿ ಡೆಲಿವರಿ ವಿಷಯಕ್ಕೆ ಮತ್ತು ಅದರ ನೌಕರರ ವಿಷಯದಲ್ಲಿ ಸುದ್ದಿಯಾಗುತ್ತಲೇ ಇರುತ್ತದೆ. ಭಾರತದಲ್ಲಿ ಅತ್ಯಂತ ಜನಪ್ರಿಯ ಆನ್ಲೈನ್ ಫುಡ್ ಡೆಲಿವರಿ ಆ್ಯಪ್ ಗಳ ಪೈಕಿ ಇದೂ ಒಂದು. ಈ ಕಂಪೆನಿಯಲ್ಲಿ ಪುರುಷರ ಜತೆಗೆ ಮಹಿಳೆಯರೂ ಫುಡ್ ಡೆಲಿವರಿ ಮಾಡಿ ಯಾವ ಉದ್ಯೋಗ ಮಾಡುತ್ತಿದ್ದಾರೆ. ಇದೀಗ ಕಂಪೆನಿ ಹೊಸ ಪ್ರಯೋಗಕ್ಕೆ ಮುಂದಾಗಿದ್ದು, ಮಹಿಳಾ ಉದ್ಯೋಗಿಗಳಿಗೆ ಟೀ ಶರ್ಟ್ ಬದಲು ಕುರ್ತಾ ವಿತರಿಸಿದೆ. ಸದ್ಯ ಝೊಮಾಟೋದ ಕುರ್ತಾ ಸಮವಸ್ತ್ರದ ವೀಡಿಯೊ ವೈರಲ್ ಆಗಿದೆ. ಝೊಮಾಟೋದ ಮಹಿಳಾ ಉದ್ಯೋಗಿಗಳು ಸಮವಸ್ತ್ರದ ಭಾಗವಾಗಿ ಟೀ ಶರ್ಟ್ ಬದಲು ಕುರ್ತಾಗಳನ್ನು ಧರಿಸುವ ಆಯ್ಕೆಯನ್ನು ಹೊಂದಿರುತ್ತಾರೆ ಎಂದು ಕಂಪೆನಿ ಘೋಷಿಸಿದೆ. ಪಾಶ್ಚಿಮಾತ್ಯ ಶೈಲಿಯ ಟೀ ಶರ್ಟ್ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಹಲವು ಮಹಿಳಾ ಉದ್ಯೋಗಿಗಳ ಪರ್ಯಾಯ ಮಾರ್ಗ ಹುಡುಕುವಂತೆ ಮನವಿ ಮಾಡಿದ್ದರು. ಅದರ ಭಾಗವಾಗಿ ಕುರ್ತಾ ಪರಿಚಯಿಸಲಾಗುತ್ತಿದೆ ಎಂದು ಕಂಪೆನಿ ತಿಳಿಸಿದೆ. ಮಾತ್ರವಲ್ಲ ಹೊಸ ಸಮವಸ್ತ್ರದ ವಿಡಿಯೊವನ್ನು ಸೋಷಿಯಲ್…
ತಿಪಟೂರು: ತಿಪಟೂರು ಕಾಂಗ್ರೆಸ್ ಮುಖಂಡ, ನಿವೃತ್ತ ಎಸಿಪಿ ಲೋಕೇಶ್ವರ ಸಹಸ್ರಾರು ಸಂಖ್ಯೆಯಲ್ಲಿ ಬೆಂಬಲಿಗರ ಸಭೆಯನ್ನು ಭಾನುವಾರ ತಮ್ಮ ತೋಟದ ಮನೆಯಲ್ಲಿ ನಡೆಸಿ, ತಾಲ್ಲೂಕಿನ ಶಾಸಕರು, ಜಿಲ್ಲೆಯ ಕಾಂಗ್ರೆಸ್ ಪದಾಧಿಕಾರಿಗಳ ವಿರುದ್ಧ ಅಸಮಾಧಾನ ಹೊರ ಹಾಕಿದ್ದಾರೆ. ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಸಭೆಯಲ್ಲಿ ಲೋಕೇಶ್ವರರ ಮುಂದಿನ ನಡೆಯ ಬಗ್ಗೆ ತೀವ್ರ ಚರ್ಚೆಗಳು ಆಗಿದ್ದು, ಲೋಕಸಭೆಯ ಚುನಾವಣೆಯ ಹಿನ್ನೆಲೆಯಲ್ಲಿ ಸಭೆಯೂ ಮಹತ್ವ ಪಡೆದಿತ್ತು. ಕಳೆದ ಬಾರಿಯ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಪರವಾಗಿ ಮತಯಾಚನೆ ಮಾಡಿ ಕೆ.ಷಡಕ್ಷರಿರನ್ನು ಬೆಂಬಲಿಸಿದ್ದರು. ಚುನಾವಣೆಯ ನಂತರದಲ್ಲಿ ಶಾಸಕ ಕೆ.ಷಡಕ್ಷರಿ ಸಮರ್ಪಕವಾಗಿ ಸ್ಪಂದಿಸುತ್ತಿಲ್ಲ ಎಂಬ ಕಾರಣದಿಂದ ದೂರ ಉಳಿದಿದ್ದ ಲೋಕೇಶ್ವರ, ತಮ್ಮ ಬೆಂಬಲಿಗರಿಗೆ ಸೂಕ್ತ ಸ್ಥಾನಮಾನ ದೊರಕುತ್ತಿಲ್ಲ ಎಂದು ಅತೃಪ್ತರ ಸಭೆಯನ್ನು ನಡೆಸಿದ್ದರು. ಸಭೆಯ ಮೂಲಕ ಜಿಲ್ಲೆ ಮತ್ತು ರಾಜ್ಯ ಮುಖಂಡರುಗಳ ಗಮನ ಸೆಳೆಯಲು ಪ್ರಯತ್ನಿಸಿದ್ದರು. ಆದರೆ ಯಾವುದೇ ಕಾಂಗ್ರೆಸ್ ಮುಖಂಡರು ಇತ್ತ ಗಮನ ನೀಡದಿರುವುದು ಬೇಸರ ಮೂಡಿಸಿದೆ. ಅಲ್ಲದೇ ವಿವಿಧ ಬೋರ್ಡ್ಗಳಿಗೆ ನಾಮ ನಿರ್ದೇಶನ ಮಾಡಿದಾಗಲೂ ಲೋಕೇಶ್ವರ ಹೆಸರು…
ಗುಬ್ಬಿ: ಅಣ್ಣಪ್ಪ ಎಂಬ 38 ವರ್ಷ ವಯಸ್ಸಿನ ಯುವಕರೊಬ್ಬರು ನಾಪತ್ತೆಯಾಗಿದ್ದು, ಇವರು ಪತ್ತೆಯಾದರೆ ತಕ್ಷಣವೇ ಮಾಹಿತಿ ನೀಡುವಂತೆ ಮನವಿ ಮಾಡಲಾಗಿದೆ. ಸಿ ಹರಿವೇಸಂದ್ರ ಚೇಳೂರು ಹೋಬಳಿ ಗುಬ್ಬಿ ತಾಲ್ಲೂಕು ತುಮಕೂರು ಜಿಲ್ಲೆ ಯ ನಿವಾಸಿಯಾಗಿರುವ ಅಣ್ಣಪ್ಪ, ನರಸಿಂಹಯ್ಯ ಎಂಬವರ ಪುತ್ರರಾಗಿದ್ದಾರೆ. ಸಾಧಾರಣ ಮೈ ಬಣ್ಣ ಹೊಂದಿರುವ ಇವರು ಸುಮಾರು 65 ಕೆ.ಜಿ. ದಪ್ಪ, 5 ಅಡಿ ಎತ್ತರ ಹೊಂದಿದ್ದಾರೆ. ಯುವಕ ಮಾನಸಿಕ ಅಸ್ವಸ್ಥರಾಗಿದ್ದಾರೆ. ಇವರನ್ನು ಯಾರಾದರೂ ಕಂಡಲ್ಲಿ ಕೂಡಲೇ ಕೆಳಗಿನ ಸಂಖ್ಯೆಗೆ ಕರೆ ಮಾಡಿ ತಿಳಿಸಲು 9108972205, /9743928209 / 9900304746 / 7022993080 ಕೋರಲಾಗಿದೆ. ವರದಿ: ಸುರೇಶ್ ಬಾಬು ಎಂ. ತುರುವೇಕೆರೆ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಮಣ್ಣಿನ ಮಡಿಕೆಗಳು ಅಂದ್ರೆ ಮಾರುದ್ದ ದೂರ ಹೋಗುವವರೇ ಹೆಚ್ಚು. ಯಾಕೆಂದರೆ ಮಣ್ಣಿನ ಮಡಕೆಗಳನ್ನು ನಿಯಂತ್ರಣ ಮಾಡೋದೇ ಕಷ್ಟ. ಎಲ್ಲಾದ್ರೂ ಕೈಯಿಂದ ಜಾರಿ ಬಿದ್ರೆ ಎರಡು ತುಂಡಾಗೋದ್ರಲ್ಲಿ ಡೌಟೇ ಇಲ್ಲ. ಆದರೆ ಇದಕ್ಕೆ ಈಗ ಡಿಮ್ಯಾಂಡ್ ಬಂದಿದೆ. ಇಲ್ಲೊಂದು ಕಡೆ ಮಣ್ಣಿನ ಮಡಿಕೆಗಾಗಿ ಜನ ಕ್ಯೂ ನಿಂತುಕೊಂಡಿದ್ದಾರೆ.. ಅಷ್ಟಕ್ಕೂ ಈ ಕ್ಯೂ ಕಂಡು ಬಂದಿರೋದು ಬಿಸಿಲಿನ ನಗರವೆಂದೇ ಕರೆಯಲ್ಪಡುವ ಗಡಿ ಜಿಲ್ಲೆ ಬೀದರ್ನಲ್ಲಿ. ಇಲ್ಲಿ ಬಿಸಿಲಿನ ತಾಪಮಾನ ಏರುತ್ತಿದಂತೆ ಬಡವರ ಫ್ರಿಡ್ಜ್ ಗೆ ಬಾರಿ ಡಿಮ್ಯಾಂಡ್ ಬಂದಿದೆ. ಎರಡು ವರ್ಷದಿಂದ ವ್ಯಾಪಾರವಿಲ್ಲದೆ ನಷ್ಟ ಅನುಭವಿಸಿದ್ದ ಕುಂಬಾರರಿಗೆ (Potter) ಭರ್ಜರಿ ವ್ಯಾಪಾರವಾಗಿದೆ. ಎರಡು ವರ್ಷದಿಂದ ಆಗದ ವ್ಯಾಪಾರ ಬೇಸಿಗೆಯಲ್ಲಿ ಆಗಿದ್ದು ಕುಂಬಾರರು ಖಷಿಯಲ್ಲಿದ್ದಾರೆ. ಕೊರೊನಾ (Covid) ಸಂಕಷ್ಟ ಬೇಸಿಗೆಯಲ್ಲಿ ಸುರಿದ ಅಕಾಲಿಕ ಮಳೆಯಿಂದಾಗಿ ವ್ಯಾಪಾರವಿಲ್ಲದೆ ನಷ್ಟದಲ್ಲಿದ್ದವರಿಗೆ ಈ ವರ್ಷ ಬಂಪರ್ ವ್ಯಾಪಾರವಾಗಿದೆ. ಮಡಿಕೆಯಲ್ಲಿನ (Pot) ನೀರು ಆರೋಗ್ಯಕ್ಕೆ ಒಳ್ಳೆಯದೆಂದು ಜನ ಮಡಿಕೆ ಖರೀದಿಸಲು ಸರತಿ ಸಾಲಿನಲ್ಲಿ ನಿಂತಿದ್ದಾರೆ. ಬೀದರ್ ನಲ್ಲಿ ಕಳೆದೆರಡು ವಾರ 36…
ತುಮಕೂರು: ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿ ಯಾಗಿ ಈಗಾಗಲೇ ತೆರೆಮರೆಯಲ್ಲಿ ಬಹುತೇಕ ಮಾಜಿ ಸಚಿವ ವಿ. ಸೋಮಣ್ಣ ಅವರಿಗೆ ಅಂತಿಮ ಪ್ರಕ್ರಿಯೆ ನಡೆದಿದೆ. ಈ ವಿಷಯ ತುಮಕೂರು ಜಿಲ್ಲೆಯ ಬಿಜೆಪಿ ವಲಯದಲ್ಲಿ ಒಂದು ರೀತಿ ಮಿಂಚಿನ ಸಂಚಾರ ಉಂಟು ಮಾಡಿದ್ದು ಅಲ್ಲಲ್ಲಿ ಗೋ ಬ್ಯಾಕ್ ಸೋಮಣ್ಣ ಎಂಬ ಘೋಷಣೆಗಳೊಂದಿಗೆ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿರುವುದು ಬೆಳಕಿಗೆ ಬಂದಿದೆ. ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನಲ್ಲಿ ಕೆಲ ಬಿಜೆಪಿ ಕಾರ್ಯಕರ್ತರು ಒಂದೆಡೆ ಸೇರಿ ಗೋ ಬ್ಯಾಕ್ ಸೋಮಣ್ಣ ಎಂಬ ಘೋಷಣೆಗಳನ್ನು ಕೂಗುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಮೂಲಕ ಸೋಮಣ್ಣ ಅವರಿಗೆ ತುಮಕೂರು ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ನೀಡಬಾರದು ಎಂದು ಪರೋಕ್ಷವಾಗಿ ಒತ್ತಾಯಿಸಿದ್ದಾರೆ. ಇನ್ನೊಂದೆಡೆ ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿಯೂ ಕೂಡ ಬಿಜೆಪಿ ಕಾರ್ಯಕರ್ತರು ಗೋ ಬ್ಯಾಕ್ ಸೋಮಣ್ಣ ಎಂದು ಘೋಷಣೆ ಕೂಗುವ ಮೂಲಕ ಬೃಹತ್ ಪ್ರತಿಭಟನೆ ಒಂದನ್ನು ಮಾಡಿದ್ದಾರೆ. ಸ್ಥಳೀಯ ಬಿಜೆಪಿ ಮುಖಂಡರು ಹಾಗೂ ಪದಾಧಿಕಾರಿಗಳು ಈ ಪ್ರತಿಭಟನೆಯಲ್ಲಿ ಭಾಗವಹಿಸಿ ಆಕ್ರೋಶ…
ಲೋಕಸಭಾ ಚುನಾವಣೆ ಹೊತ್ತಲ್ಲೇ ಹರಿಯಾಣದ ಹಿಸಾರ್ ಕ್ಷೇತ್ರದ ಬಿಜೆಪಿ ಸಂಸದ ಬ್ರಿಜೇಂದ್ರ ಸಿಂಗ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಭಾನುವಾರ ರಾಜೀನಾಮೆ ನೀಡಿ, ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದಾರೆ. ತಮ್ಮ ರಾಜೀನಾಮೆ ಕುರಿತು ಬಹಿರಂಗಪಡಿಸಿದ ಬಳಿಕ ಬ್ರಿಜೇಂದ್ರ ಅವರು ನವದೆಹಲಿಯಲ್ಲಿರುವ ಎಐಸಿಸಿ(AICC) ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಮನೆಗೆ ಹೋಗಿ ಕಾಂಗ್ರೆಸ್ ಸೇರಿದರು. ಈ ವೇಳೆ ಕಾಂಗ್ರೆಸ್ನ ಹಿರಿಯ ನಾಯಕರಾದ ಅಜಯ್ ಮಾಕನ್, ಮುಕುಲ್ ವಾಸ್ನಿಕ್, ದೀಪಕ್ ಬಬಾರಿಯಾ ಉಪಸ್ಥಿತರಿದ್ದರು. ಅಂದಹಾಗೆ ಈ ಕುರಿತು ಪ್ರತಿಕ್ರಿಯಿಸಿದ ಅವರು ಬಲವಾದ ರಾಜಕೀಯ ಕಾರಣಗಳಿಂದ ನಾನು ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದೇನೆ. ನನಗೆ ಸೇವೆ ಸಲ್ಲಿಸಲು ಅವಕಾಶ ನೀಡಿದ ಪಕ್ಷಕ್ಕೆ, ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ಅವರಿಗೆ ನಾನು ಕೃತಜ್ಞತೆ ಸಲ್ಲಿಸುತ್ತೇನೆ ಎಂದಿದ್ದಾರೆ. 2019ರ ಲೋಕಸಭಾ ಚುನಾವಣೆಯಲ್ಲಿ ಬಿಜೇಂದ್ರ ಸಿಂಗ್ ಅವರು ಜೆಜೆಪಿಯ ದುಷ್ಯಂತ್ ಚೌಟಾಲಾ ಮತ್ತು ಆಗ ಕಾಂಗ್ರೆಸ್ನಲ್ಲಿದ್ದ ಭವ್ಯಾ ಬಿಷ್ಣೋಯ್ ಅವರನ್ನು ಸೋಲಿಸಿ ಹಿಸ್ಸಾರ್ ಲೋಕಸಭಾ…
ಆಸ್ಟ್ರೇಲಿಯಾದಲ್ಲಿ ಭಾರತೀಯ ಮೂಲದ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ. ಮಹಿಳೆಯ ಪತಿಯೇ ಆಕೆಯನ್ನು ಕೊಲೆ ಮಾಡಿದ್ದಾನೆ ಎಂಬುದು ಆರೋಪವಿದೆ. ಭಾರತೀಯ ಮೂಲದ ಚೈತನ್ಯ ಮದಗಣಿ(36) ಅವರ ಶವ ಶನಿವಾರ ಬಕ್ಲಿಯಲ್ಲಿ ರಸ್ತೆ ಬದಿಯ ವೀಲಿ ಬಿನ್ ನಲ್ಲಿ ಪತ್ತೆಯಾಗಿದೆ. ಮಹಿಳೆ ತನ್ನ ಪತಿ ಮತ್ತು ಮಗನೊಂದಿಗೆ ಆಸ್ಟ್ರೇಲಿಯಾದಲ್ಲಿ ವಾಸಿಸುತ್ತಿದ್ದರು. ಚೈತನ್ಯ ಅವರು ತಮ್ಮ ಪತಿ ಅಶೋಕ್ ಅವರೊಂದಿಗೆ ಆಸ್ಟ್ರೇಲಿಯಾದ ಪಾಯಿಂಟ್ ಕುಕ್ಕ್ ಎಂಬಲ್ಲಿ ವಾಸವಾಗಿದ್ದರು. ಈ ದಂಪತಿಗಳಿಗೆ ಒಂದು ಗಂಡು ಮಗು ಕೂಡಾ ಇದೆ. ಪೋಷಕರ ಪ್ರಕಾರ ಪತಿಯೇ ಮಗಳನ್ನು ಹತ್ಯೆಗೈದು ಕಸದ ತೊಟ್ಟಿಗೆ ಎಸೆದು ಭಾರತಕ್ಕೆ ಪರಾರಿಯಾಗಿರುವ ಶಂಕೆ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಹೈದರಾಬಾದ್ನ ಉಪ್ಪಲ್ ಶಾಸಕ ಬಂಡಾರಿ ಲಕ್ಷ್ಮ ರೆಡ್ಡಿ ಅವರು ಮಾಹಿತಿ ಪಡೆದಿದ್ದು, ತಕ್ಷಣ ಮಹಿಳೆಯ ಪೋಷಕರನ್ನು ಭೇಟಿ ಮಾಡಿದ್ದಾರೆ. ಪೋಷಕರ ಕೋರಿಕೆಯ ಮೇರೆಗೆ ಮಹಿಳೆಯ ಶವವನ್ನು ಹೈದರಾಬಾದ್ ಗೆ ತರಲು ವಿದೇಶಾಂಗ ಸಚಿವಾಲಯಕ್ಕೆ ಪತ್ರ ಬರೆದಿದ್ದೇನೆ ಎಂದು ಹೇಳಿದ್ದಾರೆ. ಮಹಿಳೆಯ ಪೋಷಕರ ಪ್ರಕಾರ, ಅವರ ಅಳಿಯ ತಮ್ಮ ಮಗಳನ್ನು ಕೊಂದಿರುವುದಾಗಿ…