Subscribe to Updates
Get the latest creative news from FooBar about art, design and business.
- ದೇಶದ 2ನೇ ಅತಿ ದೊಡ್ಡ ಕ್ರಿಕೆಟ್ ಕ್ರೀಡಾಂಗಣಕ್ಕೆ ಸಿಎಂ ಸಿದ್ದರಾಮಯ್ಯ ಶಂಕುಸ್ಥಾಪನೆ
- ಈ ವರ್ಷ 52 ಸಾವಿರ ಅತಿಥಿ ಶಿಕ್ಷಕರ ನೇಮಕ: ಸಚಿವ ಮಧು ಬಂಗಾರಪ್ಪ
- ಬೀದರ್ ಬ್ರಿಮ್ಸ್ (BRIMS) ಆಸ್ಪತ್ರೆಯಲ್ಲಿ ಕರ್ತವ್ಯ ನಿರತ ವೈದ್ಯರ ಮೇಲೆ ಭೀಕರ ಹಲ್ಲೆ: 7 ಮಂದಿ ಆರೋಪಿಗಳ ಬಂಧನ
- ತುಮಕೂರು ಜಿಲ್ಲೆಗೆ ‘ತುಮಕೂರು (ಬೆಂಗಳೂರು ಉತ್ತರ)’ ಎಂದು ಮರುನಾಮಕರಣ: ಗೃಹ ಸಚಿವ ಡಾ.ಜಿ.ಪರಮೇಶ್ವರ್
- ಮಾದಾವರ–ತುಮಕೂರು ಮೆಟ್ರೋ ರೈಲು ಯೋಜನೆ: ಸರ್ಕಾರಕ್ಕೆ ಸಲ್ಲಿಕೆಯಾಯ್ತು ಡಿಪಿಆರ್ ವರದಿ
- ಪಕ್ಷದ ಜವಾಬ್ದಾರಿ ನಿರ್ವಹಿಸದಿದ್ದರೆ ಶಿಸ್ತು ಕ್ರಮ: ಕಾಂಗ್ರೆಸ್ ಮುಖಂಡರ ಸಭೆಯಲ್ಲಿ ಶಾಸಕ ಕೆ. ಷಡಕ್ಷರಿ ಎಚ್ಚರಿಕೆ
- ಗುಬ್ಬಿ ಶಾಸಕರು, ಪುತ್ರನಿಂದ ಕುತಂತ್ರ ರಾಜಕಾರಣ: ಷಡ್ಯಂತ್ರಗಳಿಗೆ ಜಗ್ಗುವುದಿಲ್ಲ: ಜೆಡಿಎಸ್ ಮುಖಂಡ ನಾಗರಾಜು ಕಿಡಿ
- ತುಮಕೂರು: ಕುಲ್ಲಕ ವಿಷಯಕ್ಕೆ ಜಗಳ: ಕೊಲೆ
Author: admin
ಬೆಂಗಳೂರಿನ ಪ್ರಸಿದ್ಧ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಸ್ಫೋಟದ ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಪ್ರಮುಖ ಸುಳಿವುಗಳನ್ನು ಪಡೆದುಕೊಂಡಿದೆ. ಪ್ರಕರಣದ ಶಂಕಿತನ ಮುಖ ಬೆಳಕಿಗೆ ಬಂದಿದ್ದು, ಆತನ ಪತ್ತೆಗಾಗಿ ತಂಡ ವಿವಿಧೆಡೆ ದಾಳಿ ನಡೆಸುತ್ತಿದೆ. ಇದಲ್ಲದೆ, ಈ ಶಂಕಿತನ ಕೆಲವು ಸಹಚರರನ್ನು ಸಹ ಗುರುತಿಸಲಾಗಿದೆ. ಶುಕ್ರವಾರ ಮತ್ತು ಶನಿವಾರದಂದು NIA ಬಿಡುಗಡೆ ಮಾಡಿದ ಹೊಸ ಸಿಸಿಟಿವಿ ಸ್ಟಿಲ್ ಚಿತ್ರಗಳಲ್ಲಿ, ಶಂಕಿತ ವ್ಯಕ್ತಿ ಟೋಪಿ ಇಲ್ಲದೆ ಕಾಣಿಸಿಕೊಂಡಿದ್ದಾನೆ. ತನಿಖೆಯ ವೇಳೆ, ಶಂಕಿತ ಆರೋಪಿಯು ಬಳ್ಳಾರಿ ಬಸ್ ನಿಲ್ದಾಣದ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಇದು ಸ್ಫೋಟಗೊಂಡ ದಿನದ ಸಂಜೆಯ ದೃಶ್ಯವಾಗಿತ್ತು ಎಂದು ಹೇಳಲಾಗಿದೆ. ಅಲ್ಲಿಂದ ಆತ ಒಂದು ಆಟೋ ಬಾಡಿಗೆ ಪಡೆದು ಹೋಗಿದ್ದು, ನಂತರ ಇಬ್ಬರು ವ್ಯಕ್ತಿಗಳೊಂದಿಗೆ ಮಾತನಾಡುತ್ತಿರುವುದು ಕೂಡಾ ಸಿಸಿಟಿಯಲ್ಲಿ ಕಂಡಿದೆ ಎಂದು ಹೇಳಲಾಗಿದೆ. ಈ ಇಬ್ಬರು ಕಲಬುರಗಿ (ಗುಲ್ಬರ್ಗಾ) ಮೂಲದವರು ಎಂದು ತನಿಖೆಯಿಂದ ತಿಳಿದು ಬಂದಿದೆ ಎಂದು ಹೇಳಲಾಗುತ್ತಿದೆ. ಇಬ್ಬರೂ ಕೆಎ 32 ಎಫ್ 1885 ನಂಬರ್ ಬಸ್ ನಲ್ಲಿ ಬಳ್ಳಾರಿಯಿಂದ ಕಲಬುರಗಿಗೆ…
ಹರಿಯಾಣದ ಹಿಸಾರ್ ಲುವಾಸ್ ನ ಶಸ್ತ್ರಚಿಕಿತ್ಸಾ ವಿಭಾಗದ ವಿಜ್ಞಾನಿ ಡಾ. ಸಂದೀಪ್ ಗೋಯಲ್ ಅವರು ಭಾನುವಾರ ಸಂಜೆ 5 ಗಂಟೆ ಸುಮಾರಿಗೆ ತಮ್ಮ 8 ವರ್ಷದ ಮಗಳು ಸನಾಯಾಳನ್ನು ತಮ್ಮ ಕಚೇರಿಯಲ್ಲಿ ಸರ್ಜಿಕಲ್ ಬ್ಲೇಡ್ನಿಂದ ಬರ್ಬರವಾಗಿ ಹತ್ಯೆ ಮಾಡಿದ್ದು, ನಂತರ ಅವರು ತಮ್ಮ ರಕ್ತನಾಳವನ್ನು ಕತ್ತರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಬ್ಬರ ಶವಗಳು ಕಚೇರಿಯಲ್ಲಿ ರಕ್ತಸಿಕ್ತ ಸ್ಥಿತಿಯಲ್ಲಿ ಪತ್ತೆಯಾಗಿವೆ. ಮಾಹಿತಿ ಪಡೆದ ಪೊಲೀಸ್ ವರಿಷ್ಠಾಧಿಕಾರಿ ಮೋಹಿತ್ ಹಂಡಾ, ಎಎಸ್ಪಿ ರಾಜೇಶ್ ಮೋಹನ್, ಸಿವಿಲ್ ಲೈನ್ ಪೊಲೀಸ್ ಠಾಣೆ ಪ್ರಭಾರಿ ರಾಜೀಂದ್ರ ಅವರು ಸ್ಥಳಕ್ಕೆ ಧಾವಿಸಿದ್ದು, ತನಿಖೆ ನಡೆಸುತ್ತಿದ್ದಾರೆ. ರಾತ್ರಿ 9 ಗಂಟೆ ಸುಮಾರಿಗೆ ಇಬ್ಬರ ಮೃತದೇಹಗಳನ್ನು ಸಿವಿಲ್ ಆಸ್ಪತ್ರೆಗೆ ಕೊಂಡೊಯ್ಯಲಾಯಿತು. ಮೃತ ದೇಹಗಳ ಮರಣೋತ್ತರ ಪರೀಕ್ಷೆ ಸೋಮವಾರ (ಇಂದು) ನಡೆಯಲಿದೆ. ಪೊಲೀಸರು ಪ್ರತಿಯೊಂದು ಆಯಾಮದಲ್ಲೂ ತನಿಖೆ ನಡೆಸುತ್ತಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಖಿನ್ನತೆಯಿಂದ ಈ ಕೃತ್ಯ ಎಸಗಲಾಗಿದೆ ಎಂದು ಹೇಳಲಾಗುತ್ತಿದೆ. ಪೊಲೀಸರ ಪ್ರಕಾರ, ಡಾ. ಸಂದೀಪ್ ಗೋಯಲ್ ಮೂಲತಃ ನರ್ವಾನಾ ನಿವಾಸಿಯಾಗಿದ್ದು, ಲುವಾಸ್ನಲ್ಲಿ ಶಸ್ತ್ರಚಿಕಿತ್ಸಾ…
ಲೋಕಸಭೆ ಚುನಾವಣೆಗೆ ಇದೇ ಮಾರ್ಚ್ 14 ಅಥವಾ 15 ರಂದು ಘೋಷಣೆಯಾಗುವ ಸಾಧ್ಯತೆ ಇದೆ. ಸೆಪ್ಟೆಂಬರ್ನೊಳಗೆ ಕೇಂದ್ರಾಡಳಿತ ಪ್ರದೇಶದಲ್ಲಿ ವಿಧಾನಸಭೆ ಚುನಾವಣೆ ನಡೆಸುವಂತೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿತ್ತು. ಅಲ್ಲದೆ ಕೇಂದ್ರಾಡಳಿತ ಪ್ರದೇಶದಲ್ಲಿ ವಿಧಾನಸಭೆ ಚುನಾವಣೆಯನ್ನು ಲೋಕಸಭೆ ಚುನಾವಣೆಯೊಂದಿಗೆ ಏಕಕಾಲದಲ್ಲಿ ನಡೆಸಬಹುದೇ ಎಂದು ನಿರ್ಣಯಿಸಲು ಕೇಂದ್ರ ಸಮಿತಿ ಕೇಳಿತ್ತು. ಈ ಬೆನ್ನಲ್ಲೇ ಸಮಿತಿ ಸೋಮವಾರದಿಂದ ಬುಧವಾರದವರೆಗೆ ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಲಿದ್ದು, ಅದರ ನಂತರ ಲೋಕಸಭೆ ಚುನಾವಣೆಯ ದಿನಾಂಕಗಳನ್ನು ತಕ್ಷಣವೇ ಬಹಿರಂಗಪಡಿಸುವ ಸಾಧ್ಯತೆಯಿದೆ ಎನ್ನಲಾಗಿದೆ. ಲೋಕಸಭೆ ಮಹಾ ಚುನಾವಣೆಗೆ ದಿನಾಂಕ ನಿಗದಿ ಜೊತೆಜೊತೆಗೆ ಈ ಸಲನೂ ಆಂಧ್ರಪ್ರದೇಶ ವಿಧಾನಸಭೆ ಚುನಾವಣೆಗೂ ಮುಹೂರ್ತ ನಿಗದಿ ಆಗಲಿದೆ. ಅಷ್ಟೇ ಅಲ್ಲ 10 ವರ್ಷಗಳ ಬಳಿಕ ಜಮ್ಮು ಕಾಶ್ಮೀರ ವಿಧಾನಸಭೆಗೂ ಚುನಾವಣೆಗೆ ದಿನಾಂಕ ಪ್ರಕಟಿಸುವ ಸಾಧ್ಯತೆಯಿದೆ. ಏಕೆಂದರೆ ಸೆಪ್ಟೆಂಬರ್ 2024ರೊಳಗೆ ಜಮ್ಮು-ಕಾಶ್ಮೀರದಲ್ಲಿ ಚುನಾವಣೆ ನಡೆಸಬೇಕು ಅಂತ ಚುನಾವಣಾ ಆಯೋಗಕ್ಕೆ ಸುಪ್ರೀಂಕೋರ್ಟ್ ಸೂಚಿಸಿದೆ. ಹೀಗಾಗಿ ಸೋಮವಾರದಿಂದ 3 ದಿನ ಜಮ್ಮು ಕಾಶ್ಮೀರಕ್ಕೆ ಮುಖ್ಯ ಚುನಾವಣಾ ಆಯುಕ್ತ…
ನೀಲಿ ತಾರೆ ಸೋಫಿಯಾ ಲಿಯೋನ್ ಅನುಮಾನಾಸ್ಪದ ರೀತಿಯಲ್ಲಿ ನಿಧನರಾಗಿದ್ದು ಈಗ ಎಲ್ಲೆಡೆ ಚರ್ಚೆಗೆ ಕಾರಣವಾಗಿದೆ. ನಟಿ ಸೋಫಿಯಾ ತನ್ನ 26ನೇ ವಯಸ್ಸಿನಲ್ಲಿ ಕೊನೆಯುಸಿರೆಳೆದಿದ್ದಾರೆ ಎನ್ನಲಾಗಿದೆ. ಸೋಫಿಯಾ ಶವ ಆಕೆಯ ಅಪಾರ್ಟ್ಮೆಂಟ್ ನಲ್ಲಿ ಪತ್ತೆಯಾಗಿದ್ದು, ನಟಿಯ ಸಾವಿನ ಸುದ್ದಿಯನ್ನು ಆಕೆಯ ಮಲತಂದೆ ಮೈಕ್ ರೊಮೆರೊ ಖಚಿತಪಡಿಸಿದ್ದಾರೆ. ಸೋಫಿಯಾ ಹಠಾತ್ ಸಾವು ಎಲ್ಲರನ್ನೂ ಅಚ್ಚರಿಗೊಳಿಸಿದೆ. ಸೋಫಿಯಾ ಲಿಯೋನ್ ಸಾವಿನಿಂದ ಇಡೀ ಕುಟುಂಬ ಆಘಾತಕ್ಕೊಳಗಾಗಿದೆ. ಅವಳ ತಾಯಿ ಮತ್ತು ಕುಟುಂಬದ ಪರವಾಗಿ, ನಮ್ಮ ಪ್ರೀತಿಯ ಸೋಫಿಯಾ ನಿಧನದ ಸುದ್ದಿಯನ್ನು ನಾನು ಭಾರವಾದ ಹೃದಯದಿಂದ ಹಂಚಿಕೊಳ್ಳುತ್ತೇನೆ ಎಂದು ಸೋಫಿಯಾ ಮಲತಂದೆ ಮೈಕ್ ರೊಮೆರೊ ಹೇಳಿದ್ದಾರೆ. ಮಾರ್ಚ್ 1ರಂದು ಸೋಫಿಯಾ ಮೃತಪಟ್ಟಿದ್ದು, ಪೊಲೀಸರು ಆತ್ಮಹತ್ಯೆ ಮಾಡಿಕೊಂಡಿರೋದಾಗಿ ಶಂಕೆ ವ್ಯಕ್ತಪಡಿಸಿದ್ದಾರೆ. ಸದ್ಯಕ್ಕೆ ತನಿಖೆ ನಡೆಯುತ್ತಿದ್ದ ಕಾರಣ ವಿಷಯ ತಡವಾಗಿ ಸೋಫಿಯಾ 1997ರ ಜೂನ್ 10ರಂದು ಅಮೆರಿಕಾದ ಮಿಯಾಮಿಯಲ್ಲಿ ಜನಿಸಿದ್ದರು. ಸೋಫಿಯಾ 18ನೇ ವಯಸ್ಸಿನಲ್ಲಿಯೇ ನೀಲಿ ಚಿತ್ರಗಳನ್ನು ಕಾಣಿಸಿಕೊಳ್ಳಲು ಆರಂಭಿಸಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್…
ಪಾವಗಡ: ತಾಲ್ಲೂಕಿನ ಹರಿಹರಾಪುರದ ಮಲ್ಲಪ್ಪ ಸ್ವಾಮಿಗಳ ಮಠದಲ್ಲಿ ಜಾತ್ರಾ ಮಹೋತ್ಸವ ನಡೆಯಿತು. ಶ್ರೀ ಸಿದ್ದೇಶ್ವರ ಸ್ವಾಮಿಗೆ ವಿಶೇಷ ಪೂಜೆ ಅಲಂಕಾರ ಮಾಡಲಾಗಿತ್ತು. ವರ್ಷದಿಂದ ವರ್ಷಕ್ಕೆ ಭಕ್ತರು ಆಗಮಿಸುವ ಸಂಖ್ಯೆಯಲ್ಲಿ ಹೆಚ್ಚಳ ಕಂಡು ಬಂತು. ಭಕ್ತರು ಕೊಂಡದಲ್ಲಿ ಧೂಪ ಹಾಕುವ ಮೂಲಕ ತಮ್ಮ ಹರಕೆ ತೀರಿಸಿಕೊಂಡಿದ್ದು ಕಂಡು ಬಂತು.. ವರದಿ: ನಂದೀಶ್ ನಾಯ್ಕ ಪಾವಗಡ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಸರ್ಕಾರಿ ಆಸ್ಪತ್ರೆಯಲ್ಲಿ ಕೆಲಸ ಮಾಡುವ ವೈದ್ಯನೊಬ್ಬ ಆಸ್ಪತ್ರೆಯ ಆವರಣದಲ್ಲಿ ಬೆತ್ತಲೆಯಾಗಿ ಮಲಗಿರುವ ವಿಡಿಯೋ ವೈರಲ್ ಆಗಿದ್ದು, ಈ ಘಟನೆ ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರ ಜಿಲ್ಲೆಯಲ್ಲಿ ವರದಿಯಾಗಿದೆ. ಆಘಾತಕಾರಿ ಸಂಗತಿಯೆಂದರೆ ವೈದ್ಯ ದೇಹದ ಮೇಲೆ ಪರಿವೇ ಇಲ್ಲದೆ ಆಸ್ಪತ್ರೆಯ ಆವರಣದಲ್ಲಿ ತಿರುಗಾಡುತ್ತಿದ್ದ ವೀಡಿಯೊ ಕೂಡ ಪೊಲೀಸರ ಕೈಗೆ ಸಿಕ್ಕಿದೆ. ಸ್ಥಳೀಯರ ಪ್ರಕಾರ ವೈದ್ಯ ಮಾದಕ ವ್ಯಸನಿಯಾಗಿದ್ದು ಅದರ ಪ್ರಭಾವದಲ್ಲಿದ್ದ. ಜತೆಗೆ ಕುಡಿದು ಈ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ. ಕಳೆದ ಎರಡು-ಮೂರು ದಿನಗಳಿಂದ ಛತ್ರಪತಿ ಸಂಭಾಜಿನಗರ ಜಿಲ್ಲೆಯ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಈ ವಿಡಿಯೋ ಪೈಥಾನ್ ತಾಲೂಕಿನ ಬಿಡ್ಕಿನ್ ನ ಗ್ರಾಮೀಣ ಆಸ್ಪತ್ರೆಯ ವೈದ್ಯರದ್ದು ಎಂದು ಹೇಳಲಾಗಿದೆ. ಇದರಲ್ಲಿ ಸರ್ಕಾರಿ ವೈದ್ಯನೊಬ್ಬ ತಮ್ಮ ದೇಹದ ಮೇಲೆ ಒಂದೇ ಬಟ್ಟೆಯಿಲ್ಲದೆ ಆಸ್ಪತ್ರೆಯ ಆವರಣದಲ್ಲಿ ನಡೆಯುತ್ತಿರುವುದನ್ನು ಕಾಣಬಹುದು. ಕುತೂಹಲಕಾರಿ ಸಂಗತಿಯೆಂದರೆ, ಈ ವೀಡಿಯೊ ಬಿಡ್ಕಿನ್ ಗ್ರಾಮೀಣ ಆಸ್ಪತ್ರೆಯ ಐಸಿಯು ಒಳಗಿನ ಸಿಸಿ ಟಿವಿ ಕ್ಯಾಮೆರಾದ್ದು ಎನ್ನಲಾಗಿದೆ. ಈ ವೈದ್ಯ ಮಾದಕವಸ್ತುಗಳಿಗೆ ವ್ಯಸನಿ ಎಂದು ಹೇಳಲಾಗುತ್ತಿದೆ.…
ಸ್ಟಾರ್ ನಟಿ ಮೀನಾ ಈಗಲೂ ಮುದ್ದು ಮುದ್ದಾಗಿ ಕಾಣಿಸಿಕೊಳ್ಳುತ್ತಿರುವ ನಟಿ. ಇವರು ಕಾರ್ಯಕ್ರಮಕ್ಕೆ ಬಂದಾಗ ಈಗಿನ ಯುವ ನಟಿಯರನ್ನೇ ಮೀರಿಸುವಂತಿದೆ ಇವರ ಸೌಂದರ್ಯ. ಕನ್ನಡ ಮಾತ್ರವಲ್ಲ ದಕ್ಷಿಣ ಭಾರತದ ಬಹುತೇಕ ಎಲ್ಲಾ ಭಾಷೆಗಳಲ್ಲಿಯೂ ಇವರು ನಟಿಸಿದ್ದು, ಜನಮನಗೆದ್ದಿದ್ದಾರೆ. ಇದೀಗ ತನ್ನ 15ನೇ ವಯಸ್ಸಿನಲ್ಲಿ ನಟಿ ಮೀನಾ ಗರ್ಭಿಣಿಯಾಗಿದ್ರಂತೆ. ಹೌದು, 1991ರಲ್ಲಿ ಕಾಲಿವುಡ್ನಲ್ಲಿ ಕಸ್ತೂರಿ ರಾಜ ನಿರ್ದೇಶನದಲ್ಲಿ ಎನ್ ರಾಸವಿನ್ ಮನಸಿಲೇ ಸಿನಿಮಾದಲ್ಲಿ 15 ವರ್ಷ ವಯಸ್ಸಿಗೆ ಗರ್ಭಿಣಿ ಪಾತ್ರದಲ್ಲಿ ನಟಿ ಮೀನಾ ನಟಿಸಿದ್ದರು. ಮೀನಾ ಅವರ 40ನೇ ಹುಟ್ಟುಹಬ್ಬದ ಸಮಯದಲ್ಲಿ ಈ ವಿಷಯ ಬೆಳಕಿಗೆ ಬಂದಿದೆ. ಹಿರಿಯ ನಟ ರವಿ ಕಿರಣ್, ಮೀನಾ ಅವರ ಕುರಿತು ಈ ವಿಚಾರ ಬಹಿರಂಗಪಡಿಸಿದ್ದಾರೆ. ಆದರೆ ನಟಿ ಮೀನಾ ಈ ವಿಚಾರವನ್ನು ಅಲ್ಲಗಳೆದಿದ್ದರು. ಪತಿ ಅಗಲಿಕೆಯ ನೋವಿನಿಂದ ನಾನಿನ್ನೂ ಹೊರಬಂದಿರಲಿಲ್ಲ. ಅದರ ಮಧ್ಯೆ ಈ ವದಂತಿ ನೋವಿನ ಸಂಗತಿ ಎಂದಿದ್ದರು. ವಿವಿಧ ಭಾಷೆಗಳಲ್ಲಿ ನಟಿಸಿರುವ ನಟಿ ಮೀನಾ ಇತ್ತೀಚೆಗೆ ಮದುವೆ ವಿಚಾರವಾಗಿ ಸುದ್ದಿಯಲ್ಲಿದ್ದರು. ಪತಿ ವಿದ್ಯಾಸಾಗರ್…
ಬೀದರ್: ಲಾರಿಯೊಂದನ್ನು ತಡೆದು ಪರಿಶೀಲಿಸಿದ ಪೊಲೀಸರು ಅದರಲ್ಲಿದ್ದ 1596 ಕೆ.ಜಿ. ಗಾಂಜಾವನ್ನು ವಶಕ್ಕೆ ಪಡೆದುಕೊಂಡಿರುವ ಘಟನೆ ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ವನಮಾರಪಳ್ಳಿ ಚೆಕ್ ಪೋಸ್ಟ್ ಬಳಿ ನಡೆದಿದೆ. ವನಮಾರಪಳ್ಳಿ ಚೆಕ್ ಪೋಸ್ಟ್ ಬಳಿ NCB ಬೆಂಗಳೂರು ಮತ್ತು ಬೀದರ್ ಜಿಲ್ಲಾ ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಗಾಂಜಾ ಸಹಿತ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಆಂಧ್ರಪ್ರದೇಶದಿಂದ ಮಹಾರಾಷ್ಟ್ರದೊಳಗೆ ತೆರಳುತ್ತಿದ್ದಂತಹ ಲಾರಿ, ಮಾರ್ಗ ಬದಲಿಸಿ ಕರ್ನಾಟಕದೊಳಗೆ ಪ್ರವೇಶಿಸಲು ಯತ್ನಿಸಿದೆ. ಚೆಕ್ ಪೋಸ್ಟ್ ಬಳಿ ಪೊಲೀಸರು ಲಾರಿಯನ್ನು ಪರಿಶೀಲನೆ ನಡೆಸಿದ ವೇಳೆ ಲಾರಿಯಲ್ಲಿ ಗಾಂಜಾ ಪತ್ತೆಯಾಗಿದೆ. ಸದ್ಯ ಮಾಲು ಸಹಿತ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ಲಾರಿಯ ಮಾಲಿಕನನ್ನು ಬಂಧಿಸಲು ಕಾರ್ಯಾಚರಣೆ ನಡೆಸುತ್ತಿದ್ದೇವೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಚನ್ನಬಸವಣ್ಣ ಎಸ್.ಎಲ್. ತಿಳಿಸಿದ್ದಾರೆ. ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಬೆಂಗಳೂರು: ಸದಾ ರಾಜ್ಯ ಸರ್ಕಾರದ ಕೆಲಸವನ್ನು ಕೊಂಕಾಡುವ ಬಿಜೆಪಿ ನೀರಿನ ಸಮಸ್ಯೆ ವಿರುದ್ಧ ನಾಳೆ ಪ್ರತಿಭಟನೆ ನಡೆಸಲಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, “ಬಿಜೆಪಿಗರಿಗೆ ಮರ್ಯಾದೆ ಇದ್ರೆ ಕೇಂದ್ರದಿಂದ ಪರಿಹಾರ ಕೊಡಿಸಲಿ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೇಸಿಗೆ ಆರಂಭಕ್ಕೂ ಮುನ್ನವೇ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನೀರಿನ ಹಾಹಾಕಾರ ಶುರುವಾಗಿದೆ. ಟ್ಯಾಂಕರ್ ಮೂಲಕ ನೀರಿನ ಪೂರೈಕೆ ಮಾಡಲಾಗುತ್ತಿದೆ. ಈ ನೀರಿನ ಸಮಸ್ಯೆಯಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ನಿರ್ಲಕ್ಷ್ಯ ಮಾಡಿದೆ ಎಂದು ಆರೋಪಿಸಿರುವ ಬಿಜೆಪಿ, ನಾಳೆ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಿದೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿರುವ ಡಿಸಿಎಂ, ಬಿಜೆಪಿಗರಿಗೆ ಮರ್ಯಾದೆ ಇದ್ರೆ ಮೊದಲು ಕೇಂದ್ರದಿಂದ ಪರಿಹಾರ ಕೊಡಿಸಲಿ. 150 ದಿನದೊಳಗೆ ಮಾಡಬೇಕೆಂಬ ಕಡ್ಡಾಯವಿದೆ. ಆದರೂ ಕೇಂದ್ರ ಸರ್ಕಾರ ಪರಿಹಾರ ನೀಡಿಲ್ಲ. ಅದನ್ನು ಮೊದಲು ಕೊಡಿಸಿ. ಅದನ್ನ ಬಿಟ್ಟು ಈ ಕಪಟ ನಾಟಕ ಆಡೋದು ಬಿಡಿ ಎಂದು ಕಿಡಿಕಾರಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್…
ಬೆಂಗಳೂರು: ಬಿಜೆಪಿ-ಜೆಡಿಎಸ್ ಅಪವಿತ್ರ ಮೈತ್ರಿ ಮಾಡಿಕೊಂಡಿವೆ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು. ಇಂದು ಬೆಂಗಳೂರಿನ ಸೂಲಿಕೆರೆ ಮೈದಾನದಲ್ಲಿ ನಡೆದ ಶಿಕ್ಷಕರ ಕೃತಜ್ಞತೆ ಸಭೆಯಲ್ಲಿ ಮಾತನಾಡಿದ ಅವರು, ಮುಂದಿನ ಜನ್ಮ ಇದ್ದರೇ ಮುಸ್ಲಿಂ ಆಗಿ ಹುಟ್ಟುತ್ತೇನೆ ಎಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಹೇಳಿದ್ದರು. ಕೋಮುವಾದಿಗಳ ಜೊತೆ ಹೋಗೊಲ್ಲ. ಅವರ ವಿರುದ್ಧ ಇರುತ್ತೇವೆ ಅವರ ವಿರುದ್ಧ ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತೇವೆ ಎಂದಿದ್ದರು. ಆದರೆ ಈಗ ಪಕ್ಷ ಉಳಿಸಿಕೊಳ್ಳಲು ಬಿಜೆಪಿಯೊಂದಿಗೆ ಹೊಂದಾಣಿಕೆ ಮಾಡಿಕೊಂಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ದೇವೇಗೌಡರು ಅವರ ಕುಟುಂಬದ ರಾಜಕಾರಣ ಉಳಿಯಲು ಏನ್ ಬೇಕಾದ್ರೂ ಮಾಡ್ತಾರೆ. ಪಕ್ಷ ಉಳಿಸುವ ನಿಟ್ಟಿನಲ್ಲಿ ಬಿಜೆಪಿ ಜತೆ ಅಪವಿತ್ರ ಮೈತ್ರಿ ಮಾಡಿಕೊಂಡಿದ್ದಾರೆ. ನಾವು ಏನೇ ತೀರ್ಮಾನ ಮಾಡಿದರೂ ಜನ ಕಣ್ಣು ಮುಚ್ಕೊಂಡು ಬೆಂಬಲಿಸುತ್ತಾರೆ ಅಂದುಕೊಂಡಿದ್ದಾರೆ. ಅವರು ಪ್ರಧಾನಿಯಾಗಿದ್ದವರು ಈ ರೀತಿ ಮಾಡುತ್ತಾರೆ ಎಂದುಕೊಂಡಿರಲಿಲ್ಲ ಎಂದು ಸಿದ್ದರಾಮಯ್ಯ ಹೇಳಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. …