Author: admin

ಬೆಂಗಳೂರು: ರಾಜ್ಯದಲ್ಲಿ ಭೀಕರ ಬರಗಾಲ ಬಂದಿದೆ. ಕುಡಿಯುವ ನೀರಿಗೆ ತತ್ವಾರ ಇದೆ. ಕಾಂಗ್ರೆಸ್‌ ಸರ್ಕಾರ ಚುನಾವಣೆಯ ಹೊಂದಾಣಿಕೆಗಾಗಿ ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸುತ್ತಿದೆ. ಈ ಪಾಪರ್‌ ಸರ್ಕಾರದ ಬಳಿ ಬರ ಪರಿಹಾರ ನೀಡಲು ಹಣವಿಲ್ಲ. ಆದರೆ, ನೀರನ್ನು ಮಾತ್ರ ನೀಡುತ್ತಿದ್ದಾರೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌. ಅಶೋಕ್‌ ಆಕ್ರೋಶ ವ್ಯಕ್ತಪಡಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಆರ್.‌ ಅಶೋಕ್‌, ರಾಜ್ಯ ಕಾಂಗ್ರೆಸ್‌ ಸರ್ಕಾರ ತಮಿಳುನಾಡಿಗೆ ನಿರಂತರವಾಗಿ ಕಾವೇರಿ ನೀರನ್ನು ಹರಿಸಿದೆ. ರೈತರು ಹೋರಾಟ ಮಾಡುತ್ತಿದ್ದಾರೆ. ಜನರು ಖಾಲಿ ಬಿಂದಿಗೆ ಹಿಡಿದುಕೊಂಡು ಬೀದಿಗಿಳಿದಿದ್ದಾರೆ. ಬೆಂಗಳೂರಿನಲ್ಲಿ ನೀರಿಗೆ ಕೊರತೆಯಾಗಿದೆ. ಇಷ್ಟಾದರೂ ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸುತ್ತಾರೆ ಎಂದರೆ ಇಂತಹ ನಾಚಿಕೆಗೆಟ್ಟ ಸರ್ಕಾರ ಇತಿಹಾಸದಲ್ಲೇ ಇಲ್ಲ ಎನ್ನಬೇಕು. ನಮ್ಮ ಕುಡಿಯುವ ನೀರನ್ನು ಚುನಾವಣಾ ಹೊಂದಾಣಿಕೆಗಾಗಿ ಬಿಟ್ಟುಕೊಡುತ್ತಾರೆ. ಈಗಾಗಲೇ ಮತಕ್ಕಾಗಿ ಅಲ್ಪಸಂಖ್ಯಾತರನ್ನು ಓಲೈಸುವ ಕೆಲಸ ಮಾಡಿದ್ದಾರೆ. ಈಗ ಹೊಂದಾಣಿಕೆಗಾಗಿ ರಾಜ್ಯಕ್ಕೆ ಕಾಂಗ್ರೆಸ್‌ ದ್ರೋಹ ಬಗೆಯುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಮೇಕೆದಾಟು ಯೋಜನೆ ಜಾರಿ ಮಾಡುತ್ತೇವೆಂದು ಹೋರಾಟ ಮಾಡಿ, ಈಗ…

Read More

ಬೆಂಗಳೂರು: ನಗರದ ರಾಮೇಶ್ವರಂನಲ್ಲಿ ನಡೆದ ಬಾಂಬ್‌ ಸ್ಫೋಟವನ್ನು ಬಿಜೆಪಿಯವರು ಚುನಾವಣಾ ಅಸ್ತ್ರವನ್ನಾಗಿ ಬಳಸಿಕೊಳ್ಳುತ್ತಿದ್ದಾರೆ. ನಾವು ಕೂಡಾ ಬಿಜೆಪಿ ಅಧಿಕಾರದಲ್ಲಿದ್ದ ಅವಧಿಯಲ್ಲಿ ನಡೆದಿದ್ದ 6 ಬಾಂಬ್‌ ಸ್ಫೋಟ ಪ್ರಕರಣಗಳನ್ನು ಚುನಾವಣಾ ಅಸ್ತ್ರವನ್ನಾಗಿ ಬಳಸಿಕೊಳ್ಳುತ್ತೇವೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿಕೆ ನೀಡಿದ್ದಾರೆ. ಬಿಜೆಪಿಯ ಬಿಎಸ್‌ ಯಡಿಯೂರಪ್ಪ ಹಾಗೂ ಬಸವರಾಜ ಬೊಮ್ಮಾಯಿ ಅವರು ಸಿಎಂ ಆಗಿದ್ದ ಅವಧಿಯಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಹಾಗೂ ಮಂಗಳೂರಿನಲ್ಲಿ ಕುಕ್ಕರ್‌ ಬಾಂಬ್‌ ಸ್ಫೋಟ ನಡೆದಿತ್ತು. ಈ ವಿಚಾರವನ್ನು ನಾವು ಜನರ ಮುಂದಿಡುತ್ತೇವೆ. ಪ್ರಪಂಚ ಇರುವವರೆಗೂ ಅಪರಾಧ ಚಟುವಟಿಕೆಗಳು ನಡೆಯುತ್ತಲೇ ಇರುತ್ತವೆ ಎಂದರು. ಬಿಜೆಪಿ ಅವಧಿಯಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿತ್ತು. ನಾವು ಬಂದ ಮೇಲೆ ಸುಧಾರಣೆಯಾಗಿದೆ. ಬಿಜೆಪಿಯವರು ಒಂದು ವರ್ಷದ ಅವಧಿಗೆ ಸಬ್‌ ಇನ್ಸ್‌ ಪೆಕ್ಟರ್‌, ಇನ್ಸ್‌ಪೆಕ್ಟರ್‌ ಗಳ ವರ್ಗಾವಣೆ ಮಾಡುತ್ತಿದ್ದರು. ನಾವು 2 ವರ್ಷಗಳಿಗೊಮ್ಮೆ ಮಾಡುತ್ತಿದ್ದೇವೆ ಎಂದು ಹೇಳಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್…

Read More

ಬೆಳಗಾವಿ ಜಿಲ್ಲೆಯ  ನಿಪ್ಪಾಣಿಯ ರಾಮ ಮಂದಿರವನ್ನು  ಸ್ಫೋಟಿಸುವುದಾಗಿ ಬೆದರಿಕೆ ಪತ್ರ ವೊಂದು ಬಂದಿದ್ದು ಎಲ್ಲರನ್ನು ಬೆಚ್ಚಿ ಬೀಳಿಸುವಂತೆ ಮಾಡಿದೆ. ಇತಿಹಾಸ ಪ್ರಸಿದ್ದ ಕಾರಣಿಕ ಕ್ಷೇತ್ರ ಇದಾಗಿದ್ದು,ಇದನ್ನು ಸ್ಫೋಟ ನಡೆಸುವುದಾಗಿ ಹಿಂದಿಯಲ್ಲಿ ಬರೆದಿರುವ ಪತ್ರ ಬಂದಿದೆ.ಅಲ್ಲಾಹೋ ಅಕ್ಬರ್‌ ಎಂದೇ ಆರಂಭವಾಗುವ ಈ ಪತ್ರದಲ್ಲಿ ತಾಕತ್ತಿದ್ದರೆ ತಡೆಯಿರಿ ಎಂಬ ಸವಾಲು ಕೂಡಾ ಹಾಕಲಾಗಿದೆ.ಫೆಬ್ರವರಿ 7 ಮತ್ತು ಫೆಬ್ರವರಿ 28ರಂದು ಎರಡು ಪತ್ರಗಳು ಬಂದಿದ್ದು, ಮುಂದಿನ ಮಾರ್ಚ್‌ 20, 21 ತಾರೀಖಿನ ಒಳಗಡೆ ರಾಮ ಮಂದಿರವನ್ನು ದೊಡ್ಡ ಪ್ರಮಾಣದಲ್ಲಿ ಸ್ಫೋಟಿಸುವುದಾಗಿ ಎಂದು ಅನಾಮಧೇಯ ವ್ಯಕ್ತಿಗಳು ಪತ್ರ ಬರೆದಿದ್ದಾರೆ. ಮೊದಲನೆಯ ಪತ್ರ ರಾಮ ಮಂದಿರ ಗರ್ಭ ಗುಡಿಯ ಸಮೀಪ ಪತ್ತೆಯಾಗಿದೆ.ಎರಡನೇ ಪತ್ರ ಮಂದಿರದ ಆವರಣದ ಹನುಮಾನ್ ಮಂದಿರದಲ್ಲಿ ಪತ್ತೆಯಾಗಿವೆ.ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಪಟ್ಟಣದ ಓಲ್ಡ್ ಪಿಬಿ ರಸ್ತೆಯಲ್ಲಿರುವ ಶ್ರೀ ರಾಮಮಂದಿರ ಇದಾಗಿದ್ದು, ಪತ್ರವನ್ನು ಗಮನಿಸಿದ ದೇವಸ್ಥಾನದ ಅರ್ಚಕರ ಮೂಲಕ ನಿಪ್ಪಾಣಿ ನಗರ ಪೊಲೀಸರಿಗೆ ದೂರು ನೀಡಲಾಗಿದೆ. ದೇವಸ್ಥಾನದ ಅರ್ಚಕ ಸುರೇಶ ಜೀವಾಜಿ ದೇಶಪಾಂಡೆ ಅವರು ಮೊದಲು ಪತ್ರವನ್ನು…

Read More

ಜೆಕ್ ಗಣರಾಜ್ಯದ ಕ್ರಿಸ್ಟಿನಾ ಪಿಶ್ಕೋವಾ ವಿಶ್ವ ಸುಂದರಿ. ಭಾರತದಲ್ಲಿ ನಡೆದ ಸ್ಪರ್ಧೆಯಲ್ಲಿ 28 ವರ್ಷಗಳ ನಂತರ, ಭಾರತೀಯ ಸುಂದರಿ ಸಿನಿ ಶೆಟ್ಟಿ ಮೊದಲ ಎಂಟರೊಳಗೆ ಸ್ಥಾನ ಪಡೆದರು. ಆದರೆ ನಂತರ ಅಗ್ರ 4 ರೊಳಗೆ ತಲುಪಲು ವಿಫಲರಾಗಿ, ಭಾರತದ ಅವಕಾಶಗಳನ್ನು ಕೊನೆಗೊಳಿಸಿದರು. ಮುಂಬೈನ JIO ವರ್ಲ್ಡ್ ಕನ್ವೆನ್ಷನ್ ಸೆಂಟರ್‌ ನಲ್ಲಿ ವಿಶ್ವ ಸುಂದರಿ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಲೆಬನಾನ್ ‌ನ ಯಾಸ್ಮಿನ್, ಟ್ರಿನಿಡಾಡ್ ‌ನ ಎಚ್ ‌ಎಚ್ ಅಬ್ರಹಾಮ್ಸ್ ಮತ್ತು ಬೋಟ್ಸ್‌ ವಾನಾದ ಲೆಸೊಗೊ ಅವರು ಕ್ರಿಸ್ಟಿನಾ ಅವರನ್ನು ಹೊರತುಪಡಿಸಿ ಕೊನೆಯ ನಾಲ್ಕರಲ್ಲಿ ಸ್ಥಾನ ಪಡೆದಿದ್ದಾರೆ. ಮಿಸ್ ಲೆಬನಾನ್ ಮೊದಲ ರನ್ನರ್ ಅಪ್. ಈ ಸಂದರ್ಭದಲ್ಲಿ ರಿಲಯನ್ಸ್ ಫೌಂಡೇಶನ್ ಸಂಸ್ಥಾಪಕಿ ಮತ್ತು ಅಧ್ಯಕ್ಷೆ ನೀತಾ ಮುಖೇಶ್ ಅಂಬಾನಿ ಅವರಿಗೆ ವಿಶ್ವ ಸುಂದರಿ ಮಾನವೀಯ ಪ್ರಶಸ್ತಿ ನೀಡಿ ಗೌರವಿಸಲಾಯಿತು. ವಿಶ್ವ ಸುಂದರಿ ಸಂಸ್ಥೆಯ ಅಧ್ಯಕ್ಷೆ ಜೂಲಿಯಾ ಮೊರ್ಲಿ ಪ್ರಶಸ್ತಿ ಪ್ರದಾನ ಮಾಡಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್…

Read More

ತುಮಕೂರು: ಜಿಲ್ಲೆಯ ಶಿರಾ ತಾಲೂಕು ಸಾರ್ವಜನಿಕ ಆಸ್ಪತ್ರೆಯ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಆವರಣದಲ್ಲಿ ಸ್ವಚ್ಛತೆ ಇಲ್ಲದಿರುವುದನ್ನು ಗಮನಿಸಿದ, ಭಾರತೀಯ ಪರಿವರ್ತನ ಸಂಘದ ತುಮಕೂರು ಜಿಲ್ಲಾಧ್ಯಕ್ಷ ಎಚ್. ಕೆಂಚರಾಯ ಆಸ್ಪತ್ರೆಯ ಅಧಿಕಾರಿಗಳ ಗಮನಕ್ಕೆ ತಂದು ಸಮಸ್ಯೆ ಬಗೆಹರಿಸಿದ ಘಟನೆ ನಡೆದಿದೆ. ಆಸ್ಪತ್ರೆ ಆವರಣದಲ್ಲಿ ರೋಗಿಗಳಿಗೆ ಕುಳಿತುಕೊಳ್ಳಲು ಆಸನಗಳನ್ನಿಡಲಾಗಿದೆ. ಆದರೆ ಸ್ವಚ್ಛತೆಯ ಬಗ್ಗೆ ಪ್ರಜ್ಞೆ ಇಲ್ಲದ ರೋಗಿಗಳ ಸಹಾಯಕರು ಕಂಡ ಕಂಡಲ್ಲಿ ಊಟದ ಪೇಪರ್ ತಟ್ಟೆ, ಲೋಟ ಹಾಗೂ ಪ್ಲಾಸ್ಟಿಕ್ ಕವರ್ ಗಳನ್ನು ಎಸೆದು, ಆ ಅಶುಚಿತ್ವ ಹೊಂದಿರುವ ಸ್ಥಳದಲ್ಲೇ ಕುಳಿತುಕೊಂಡು ಊಟ ಮಾಡುತ್ತಿರುವುದು ಕಂಡು ಬಂದಿತ್ತು. ಈ ಸ್ಥಳವನ್ನು ಗಮನಿಸಿದ ಭಾರತೀಯ ಪರಿವರ್ತನ ಸಂಘ ತುಮಕೂರು ಜಿಲ್ಲಾಧ್ಯಕ್ಷ ಎಚ್.ಕೆಂಚರಾಯ, ಆಸ್ಪತ್ರೆಯ ಶುಚಿತ್ವಕ್ಕೆ ಆಗುತ್ತಿರುವ ತೊಂದರೆ ನಿವಾರಿಸುವ ನಿಟ್ಟಿನಲ್ಲಿ ನಗರಸಭಾ ಕಾರ್ಯಾಲಯಕ್ಕೆ ಭೇಟಿ ನೀಡಿ ಅಧ್ಯಕ್ಷರಾದ ಪೂಜಾ ಪೆದ್ದರಾಜು ಅವರನ್ನು ಭೇಟಿ ಮಾಡಿ ಸಮಸ್ಯೆಯನ್ನು ಗಮನಕ್ಕೆ ತಂದಿದ್ದಾರೆ. ಈ ದೂರಿಗೆ ತಕ್ಷಣವೇ ಸ್ಪಂದಿಸಿದ ಅವರು, ಆಸ್ಪತ್ರೆಯ ಆವರಣವನ್ನು ಸ್ವಚ್ಛಗೊಳಿಸಿದ್ದಾರೆ. ಇವರ ಕಾರ್ಯಕ್ಕೆ ತುಮಕೂರು…

Read More

ಜಗತ್ತಿನಲ್ಲೇ ಅತಿ ಉದ್ದದ ಅವಳಿ ಸುರಂಗ ಎಂಬ ಖ್ಯಾತಿಗೂ ಭಾಜನವಾದ ಸೆಲಾ ಸುರಂಗಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಚಾಲನೆ ನೀಡಿದ್ದಾರೆ. ಅರುಣಾಚಲ ಪ್ರದೇಶದ ಪಶ್ಚಿಮ ಕಮೆಂಗ್‌ ಜಿಲ್ಲೆಯಲ್ಲಿ, 13,700 ಅಡಿ ಎತ್ತರದಲ್ಲಿ ನಿರ್ಮಿಸಿರುವ ಸಂಪರ್ಕ, ಸಾಗಣೆ ಸೇರಿ ವ್ಯೂಹಾತ್ಮಕವಾಗಿಯೂ ಈ ಸುರಂಗವು ಅತ್ಯಂತ ಪ್ರಾಮುಖ್ಯತೆ ಪಡೆದ ಸುರಗವೆಂದೇ ಹೇಳಲಾಗಿದೆ. ಸುರಂಗಕ್ಕೆ ಬರೋಬ್ಬರಿ 825 ಕೋಟಿ ರೂ. ವ್ಯಯವಾಗಿದ್ದು, ಕೇಂದ್ರ ಸರ್ಕಾರದ ಗಡಿ ರಸ್ತೆ ಸಂಘಟನೆಯು (BRO) ಈ ಸುರಂಗ ನಿರ್ಮಿಸಿದೆ. ಸೆಲಾ ಸುರಂಗ ಯೋಜನೆ ಅಡಿಯಲ್ಲಿ ಎರಡು ಸುರಂಗಗಳನ್ನು ನಿರ್ಮಿಸಲಾಗಿದ್ದು, ಒಂದು ಸುರಂಗವು 980 ಮೀಟರ್‌ ಉದ್ದವಾಗಿದ್ದು, ಮತ್ತೊಂದು ಸುರಂಗವು 1,550 ಮೀಟರ್‌ ಉದ್ದ ಇದೆ. ಇದು ತೇಜ್‌ಪುರದಿಂದ ತವಾಂಗ್‌ ಗೆ ಸಂಪರ್ಕ ಕಲ್ಪಿಸಲಿದೆ. ಎರಡೂ ಸುರಂಗಗಳ ನಡುವೆ 1,200 ಮೀಟರ್‌ ಉದ್ದದ ಲಿಂಕ್‌ ರೋಡ್‌ ಕೂಡ ಇದೆ ಎನ್ನುವುದು ಗಮನಾರ್ಹ. ಅರುಣಾಚಲ ಪ್ರದೇಶದಲ್ಲಿ ಗಡಿ ತಂಟೆ ಮಾಡುವ ಚೀನಾಗೆ ಸೆಲಾ ಸುರಂಗವು ವ್ಯೂಹಾತ್ಮಕವಾಗಿ ಪ್ರಮುಖವಾಗಿದೆ. ಅದರಲ್ಲೂ, ತಮ್ಮ ದೇಶದ…

Read More

ಲೋಕಸಭಾ ಚುನಾವಣೆಯಲ್ಲಿ ನನ್ನ ಟಿಕೆಟ್‌ ತಪ್ಪಿಸಲು ಪಕ್ಷದಲ್ಲೇ ಪಿತೂರಿ  ನಡೆಯುತ್ತಿದೆಯಾದರೂ, ಇದರಿಂದ ನನಗೆ ಲಾಭವೇ ಆಗಲಿದೆ ಎಂದು ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಬೆಳಗಾವಿಯಲ್ಲಿ ಶನಿವಾರ ಬೆಳಗ್ಗೆ ಮಾತನಾಡಿದ ಅವರು, ಇದೆಲ್ಲ ವರ್ಕೌಟ್‌ ಆಗಲ್ಲ ಎಂದಿದ್ದಾರೆ. ʻʻಕೆಲವು ಹಾಲಿ ಸಂಸದರಿಗೆ ಟಿಕೆಟ್ ಮಿಸ್ ಆಗುತ್ತದೆ ಎಂಬುದು ನಮಗ್ಯಾರಿಗೂ ಗೊತ್ತಿಲ್ಲ. ಗೆಲ್ಲುವ ಪಕ್ಷಕ್ಕೆ ಬಹಳಷ್ಟು ಜನರು ಟಿಕೆಟ್ ಕೇಳುವುದು ಸಹಜ, ಟಿಕೆಟ್ ಕೇಳುವುದು ತಪ್ಪಲ್ಲ. ಹಲವು ವರ್ಷಗಳಿಂದ ಪಕ್ಷಕ್ಕಾಗಿ ದುಡಿದ ನಮ್ಮ ಕಾರ್ಯಕರ್ತರಿಗೆ ಟಿಕೆಟ್ ಕೇಳುವ ಹಕ್ಕಿದೆ. ಆದರೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಮ್ಮ ಕೇಂದ್ರ ಚುನಾವಣೆ ಮಂಡಳಿಯಿದೆ. ಯಾರಿಗೆ ಎಲ್ಲಿಂದ ಟಿಕೆಟ್ ಕೊಡಬೇಕು, ಏಕೆ ಕೊಡಬೇಕು, ಅದರಿಂದಾಗುವ ಲಾಭ ಏನು ಎನ್ನುವುದರ ಆಧಾರದ ಮೇಲೆ ಖಂಡಿತವಾಗಿ ನಮ್ಮ ನಾಯಕರು ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ಹೇಳಿದರು. ʻʻಯಾರಿಗೆಗೆ ಟಿಕೆಟ್ ಸಿಗುತ್ತೆ, ಸಿಗಲ್ಲ ಎಂಬುದು ನನಗೆ ಗೊತ್ತಿಲ್ಲ. ಈಗ ಹಾಲಿ ಸಂಸದರಿಗೆ ಟಿಕೆಟ್ ಮಿಸ್ ಆಗುತ್ತೆ ಎಂಬ ಸಂಗತಿ ಮಾಧ್ಯಮಗಳಲ್ಲಿ ಬರುತ್ತಿದೆ.…

Read More

ತುಮಕೂರು: ಉದ್ಯೋಗ ಕೌಶಲ್ಯ ತರಬೇತಿ ಹಾಗೂ ಬೋಧಕರಿಗೆ ಕಾರ್ಯಾಗಾರದ ಉದ್ಘಾಟನಾ ಕಾರ್ಯಕ್ರಮವು ಮಾರ್ಚ್ 11ರ ಸೋಮವಾರ ಬೆಳಿಗ್ಗೆ 9:30 ಗಂಟೆಗೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜರುಗಲಿದೆ ಎಂದು ಪ್ರಾಂಶುಪಾಲರಾದ ಪ್ರೊ.ತರನ್ನುಂ ನಿಖತ್ ಎಸ್. ತಿಳಿಸಿದ್ದಾರೆ. ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ತುಮಕೂರಿನಲ್ಲಿ ಸೋಮವಾರ ನಡೆಯುವ ಕಾರ್ಯಾಗಾರಕ್ಕೆ ಉನ್ನತ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀಕರ್ ಎಂ.ಎಸ್ ಅವರು ಚಾಲನೆ ನೀಡುವರು. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಆಯುಕ್ತರಾದ ಜಗದೀಶ್ ಜಿ., ತಾಂತ್ರಿಕ ಶಿಕ್ಷಣ ಇಲಾಖೆ ನಿರ್ದೇಶಕರಾದ ಪ್ರಸನ್ನ ಹೆಚ್., ಕಾಲೇಜು ಶಿಕ್ಷಣ ಇಲಾಖೆ ನಿರ್ದೇಶಕರಾದ ಡಾ.ಎಸ್.ಬಿ.ಅಪ್ಪಾಜಿಗೌಡ, ಕಾಲೇಜು ಶಿಕ್ಷಣ ಇಲಾಖೆ ಮುಖ್ಯ ಆಡಳಿತಾಧಿಕಾರಿಗಳಾದ ಶೋಭಾ ಟಿ.ಆರ್, ವಾಧ್ವಾನಿ ಪೌಂಡೇಶನ್ ಉಪಾಧ್ಯಕ್ಷರಾದ ಹರಿ ಬಾಲಚಂದನ್ ಹಾಗೂ ವಿಶೇಷ ಆಹ್ವಾನಿತರಾಗಿ ಕಾಲೇಜು ಶಿಕ್ಷಣ ಇಲಾಖೆ ಹೆಚ್ಚುವರಿ ನಿರ್ದೇಶಕರಾದ ಡಾ.ಶೋಭಾ ಜಿ., ಕಾಲೇಜು ಶಿಕ್ಷಣ ಇಲಾಖೆ ಜಂಟಿ ನಿರ್ದೇಶಕರಾದ ಡಾ.ರಾಮಕೃಷ್ಣರೆಡ್ಡಿ ಕೆ. ಮತ್ತು ವಾಧ್ವಾನಿ ಫೌಂಡೇಶನ್…

Read More

ಸಿಬಿಎಸ್‌ ಇ’ಯು 19ನೇ ಆವೃತ್ತಿಯ ಸೆಂಟ್ರಲ್‌ ಟೀಚರ್ ಎಲಿಜಿಬಿಲಿಟಿ ಟೆಸ್ಟ್‌ (CTET) ನೋಟಿಫಿಕೇಶನ್‌ ಅನ್ನು ಬಿಡುಗಡೆ ಮಾಡಲಾಗಿದೆ ಎಂದು ವರದಿ ತಿಳಿಸಿದೆ. 2024ನೇ ಸಾಲಿನ ಜುಲೈ ಸೆಷನ್‌ ಸಿಟಿಇಟಿ ಪರೀಕ್ಷೆಯನ್ನು ದಿನಾಂಕ 07-07-2024 ರಂದು ನಡೆಸಲು ದಿನಾಂಕವನ್ನು ನಿಗದಿಪಡಿಸಲಾಗಿದೆ. 2024ನೇ ಸಾಲಿನ ಜುಲೈ ಸೆಷನ್‌ ಕೇಂದ್ರ ಶಿಕ್ಷಕರ ಅರ್ಹತಾ ಪರೀಕ್ಷೆಯನ್ನು ಒಟ್ಟು 20 ಭಾಷೆಗಳಲ್ಲಿ 136 ಸಿಟಿಗಳಲ್ಲಿ ದೇಶದಾದ್ಯಂತ ಕೇಂದ್ರ ಪ್ರೌಢಶಿಕ್ಷಣ ಮಂಡಳಿಯು ನಡೆಸುವುದಾಗಿ ತಿಳಿಸಿದೆ. ಆನ್‌ ಲೈನ್‌ ಅರ್ಜಿ ಸ್ವೀಕಾರ ಆರಂಭಿಕ ದಿನಾಂಕ: 07-03-2024 ಮತ್ತು ಆನ್‌ ಲೈನ್‌ ಅರ್ಜಿ ಸ್ವೀಕರಿಸುವ ಕೊನೆ ದಿನಾಂಕ: 02-04-2024 ರ ರಾತ್ರಿ 11-59 ಗಂಟೆವರೆಗೆ. ಸಿಟಿಇಟಿ 2024 ಅರ್ಜಿ ಶುಲ್ಕ ಪಾವತಿಗೆ ಕೊನೆ ದಿನಾಂಕ : 02-04-2024 ರ ರಾತ್ರಿ 11-59 ಗಂಟೆವರೆಗೆ.ವಿದ್ಯಾರ್ಹತೆ : ಯಾವುದೇ ಪದವಿ ಜತೆಗೆ ಬಿ.ಇಡಿ, ಬಿಪಿ.ಇಡಿ (ದೈಹಿಕ ಶಿಕ್ಷಣ ಶಿಕ್ಷಕರ ತರಬೇತಿ ) ಪಾಸ್‌ ಮಾಡಿರಬೇಕು. ಹೆಚ್ಚಿನ ಮಾಹಿತಿಗೆ ನೋಟಿಫಿಕೇಶನ್‌ ಓದಿರಿ. ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ ರೂ.1000.…

Read More

ಉದ್ಯಮಿ ಎಲಾನ್ ಮಸ್ಕ್ ಈ ವರ್ಷ ತಮ್ಮ ಒಟ್ಟು ಆಸ್ತಿಯಲ್ಲಿ 40 ಬಿಲಿಯನ್ ಡಾಲ‌ರ್ ನಷ್ಟ ಅನುಭವಿಸಿದ್ದಾರೆ. ಒಂದು ಕಾಲದಲ್ಲಿ ವಿಶ್ವದ ಅತ್ಯಂತ ಶ್ರೀಮಂತ ವ್ಯಕ್ತಿಯಾಗಿದ್ದ ಮಸ್ಕ್ ಈಗ 189 ಬಿಲಿಯನ್ ಡಾಲರ್ ನಿವ್ವಳ ಮೌಲ್ಯದೊಂದಿಗೆ ಮೂರನೇ ಸ್ಥಾನದಲ್ಲಿದ್ದಾರೆ ಎಂದು ಬ್ಲೂಮ್‌ಬರ್ಗ್ ಬಿಲಿಯನೇರ್ಸ್ ಸೂಚ್ಯಂಕ ತಿಳಿಸಿದೆ. ಬರ್ನಾರ್ಡ್ ಅರ್ನಾಲ್ಡ್ ಪ್ರಸ್ತುತ 201 ಬಿಲಿಯನ್ ಡಾಲರ್ ನಿವ್ವಳ ಮೌಲ್ಯದೊಂದಿಗೆ ಅಗ್ರಸ್ಥಾನದಲ್ಲಿದ್ದರೆ, ಅಮೆಜಾನ್ ಸಂಸ್ಥಾಪಕ ಜೆಫ್ ಬೆಜೋಸ್ 198 ಬಿಲಿಯನ್ ಡಾಲರ್ ನಿವ್ವಳ ಮೌಲ್ಯದೊಂದಿಗೆ ಎರಡನೇ ಸ್ಥಾನದಲ್ಲಿದ್ದಾರೆ. ಎಲಾನ್ ಮಸ್ಕ್ ಮಸ್ಕ್ ‌ನ ಸಂಪತ್ತಿನ ಆಧಾರವೆಂದರೆ ವಿಶ್ವದ ಅತಿದೊಡ್ಡ ಎಲೆಕ್ಟ್ರಾನಿಕ್ ಕಾರು ತಯಾರಕ ಟೆಸ್ಲಾ. ಇದರಲ್ಲಿ ಮಸ್ಕ್‌ ಗೆ ಶೇ.21ರಷ್ಟು ಪಾಲಿದೆ. ಆದರೆ ಟೆಸ್ಲಾ ಷೇರುಗಳು ಕೆಲವು ಸಮಯದಿಂದ ನಿರಂತರವಾಗಿ ಕುಸಿಯುತ್ತಿವೆ. ಈ ವರ್ಷ ಇಲ್ಲಿಯವರೆಗೆ ಕಂಪನಿಯ ನಿವ್ವಳ ಮೌಲ್ಯವು ಶೇ.29ರಷ್ಟು ಕುಸಿದಿದೆ. ಟೆಸ್ಲಾಗೆ ಚೀನಾ ದೊಡ್ಡ ಮಾರುಕಟ್ಟೆಯಾಗಿದೆ. ಆದರೆ ಈ ವಾರ ಕಂಪನಿಯು ತನ್ನ ಚೀನಾ ಮಾರಾಟ ಅಂಕಿಅಂಶಗಳು ನಿರಾಶಾದಾಯಕವಾಗಿದೆ ಎಂದು ಹೇಳಿದೆ.…

Read More