Author: admin

ಬೀದರ್: ಸರ್ಕಾರದಿಂದ ಬಡ ಜನರಿಗೆ ಒದಗಿಸಲು ವಿತರಿಸಿದ ಪಡಿತರ ಅಕ್ಕಿ, ಮತ್ತು ಪೌಷ್ಠಿಕ ಆಹಾರವನ್ನು ಅಕ್ರಮ ಸಾಗಾಟ ನಡೆಸುತ್ತಿದ್ದ ಆರೋಪದಡಿ, ಮಾಲು ಸಹಿತ ಐದು ಜನರನ್ನು ಬೀದರ್ ಜಿಲ್ಲಾ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಬಂಧಿತರಿಂದ 23 ಲಕ್ಷಕ್ಕೂ ಅಧಿಕ ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಬೀದರ ಜಿಲ್ಲೆಯ ಖಟಕ ಚಿಂಚೋಳಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಬರುವ ಕೆ.ಇ.ಬಿ ಹತ್ತಿರ ಸರ್ಕಾರದಿಂದ ವಿತರಿಸುವ ಪಡಿತರ ಅಕ್ಕಿ ಅಕ್ರಮವಾಗಿ ಸಾಗಿಸುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಪಿ.ಎಸ್.ಐ ಹಣಮಂತ, ರಾಜೇಂದ್ರಕುಮಾರ ಮತ್ತು ಆಹಾರ ನಿರೀಕ್ಷಕರು ಭಾಲ್ಕಿ ಗುಡ್ಸ್ ವಾಹನ ಹಾಗೂ ಅದಲ್ಲಿದ್ದ 81,600 ರೂ. ಮೌಲ್ಯದ 24 ಕ್ವಿಂಟಾಲ್ ಅಕ್ಕಿ ವಶಕ್ಕೆ ಪಡೆದುಕೊಂಡರು. ಮನ್ನಾಏಖೇಳಿ ಪೊಲೀಸ್ ಠಾಣೆಯ ಪಿ.ಎಸ್.ಐ ಬಸವರಾಜ, ಶೇಖರ, ಆಹಾರ ನಿರೀಕ್ಷಕರು ಬೀದರ ರವರ ಸಮಕ್ಷಮದಲ್ಲಿ ನಡೆದ ದಾಳಿಯಲ್ಲಿ 6,80,000 ರೂ. ಬೆಲೆ ಬಾಳುವ 200 ಕ್ವಿಂಟಾಲ್ ಹಾಗೂ ಒಂದು ಲಾರಿಯನ್ನು ವಶಪಡಿಸಿಕೊಳ್ಳಲಾಗಿದೆ. ಹಳ್ಳಿಖೇಡ್–ಬಿ ಪೊಲೀಸ್ ಠಾಣೆಯ…

Read More

ಲೋಕಸಭಾ ಚುನಾವಣೆ ಹತ್ತಿರಾಗುತ್ತಿದ್ದಂತೆ ಇಡೀ ದೇಶವೇ ಮೋದಿಯೇ ಪ್ರಧಾನಿ ಎಂದು ಹೇಳುತ್ತಿದೆ. ಅನೇಕ ಸಮೀಕ್ಷೆಗಳು ಕೂಡ ಬಿಜೆಪಿ ಹ್ಯಾಟ್ರಿಕ್ ಭಾರಿಸೋದು ಪಕ್ಕಾ ಎನ್ನುತ್ತಿವೆ. ಈ ನಡುವೆಯೇ ತುಮಕೂರಿನ ಯಶವಂತ್ ಗುರೂಜಿ ಅವರು ಸ್ಪೋಟಕ ಭವಿಷ್ಯ ನುಡಿದಿದ್ದು, ಮೋದಿ ಪ್ರಧಾನಿ ಆಗಲು ಸಾಧ್ಯವಿಲ್ಲ. ಈ ಸಲ ಮಹಿಳೆ ಕೈಗೆ ದೇಶದ ಅಧಿಕಾರ ಹೋಗಲಿದೆ ಎಂದು ಸ್ಪೋಟಕ ಭವಿಷ್ಯ ನುಡಿದಿದ್ದಾರೆ. ಹೌದು, ತಿಪಟೂರು  ತಾಲೂಕಿನ ನೊಣವಿನಕೆರೆಯ ಯಶ್ವಂತ ಗುರೂಜಿ  ಮತ್ತೊಂದು ಸ್ಪೋಟಕ ಭವಿಷ್ಯ ನುಡಿದಿದ್ದು ಈ ಬಾರಿ ದೇಶದ ಚುಕ್ಕಾಣಿಯನ್ನು ಕಾಂಗ್ರೆಸ್ ಪಕ್ಷ ಹಿಡಿಯಲಿದ್ದು ದೇಶದ ಪ್ರಧಾನಿ ಒಬ್ಬ ಮಹಿಳೆ ಆಗಲಿದ್ದಾರೆ ಶಿವರಾತ್ರಿಯ ಕಾಲಜ್ಞಾನ ಭವಿಷ್ಯ ನುಡಿದಿದ್ದಾರೆ. ಅಂದಹಾಗೆ ದೊರೆತ ಮಾಹಿತಿ ಪ್ರಕಾರ ಕಾಲಜ್ಞಾನದ ಪ್ರಕಾರ ಪ್ರಧಾನಿಯಾಗೋ ಯೋಗ ಹೊಂದಿರೋದು ಪ್ರಿಯಾಂಕ ಗಾಂಧಿ ಅವರು. ಬಳಿಕ ರಾಹುಲ್ ಗಾಂಧಿಗೆ ಬಿಟ್ಟು ಕೊಡುವ ಸಾಧ್ಯತೆ ಇದೆ. ಶಿವರಾತ್ರಿಗೂ ಮುನ್ನ ಚುನಾವಣೆ ನಡೆದಿದ್ದರೇ ಮೋದಿ ಅವರಿಗೆ ಪ್ರಧಾನಿಯಾಗೋ ಯೋಗವಿತ್ತು. ಆದರೇ ಈಗ ಮೋದಿ ಅವರಿಗೆ ಆ ಯೋಗ…

Read More

ಪಾವಗಡ: ಪಟ್ಟಣದಲ್ಲಿ ಬಂಜಾರ ಸಮಾಜದ ಧರ್ಮ ಗುರು ಶ್ರೀ ಸಂತ ಸೇವಾಲಾಲ್ ಮಹಾರಾಜ್ ರ 285ನೇ ಜಯಂತೋತ್ಸವನ್ನು ಅದ್ದೂರಿಯಾಗಿ ನಡೆಸಲಾಗುತ್ತಿದೆ. ಪಟ್ಟಣದ ಎಪಿಎಂಸಿ ಆವರಣದಿಂದ ಪ್ರಾರಂಭಗೊಡ ಉತ್ಸವದಲ್ಲಿ ಶನಿಮಹಾತ್ಮ ಸರ್ಕಲ್ ವರೆಗೂ ಮುಂದುವರೆಯಿತು. ಮೆರವಣಿಗೆಯಲ್ಲಿ ಸರಿಗಮಪ ಖ್ಯಾತಿಯ ಹನುಮಂತು, ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದ ಸಂತ ಸೇವಾಲಾಲ್ ಮಹಾರಾಜರ ಪೀಠದ ಸೇವಾಲಾಲ್ ಸ್ವಾಮೀಜಿಯವರನ್ನು ಬೆಳ್ಳಿ ರಥದಲ್ಲಿ ಮೆರವಣಿಗೆ ಮಾಡಲಾಗಿದ್ದು, ಸಾವಿರಾರು ಸಂಖ್ಯೆಯಲ್ಲಿ ಪಾವಗಡ ತಾಲೂಕಿನ ಬಂಜಾರ ಸಮುದಾಯದ ಕುಲಬಾಂಧವರು ಡಿಜೆ ಸದ್ದಿಗೆ ಕುಣಿದು ಕುಪ್ಪಳಿಸಿದರು. ಬಳಿಕ SSK ಬಯಲು ರಂಗ ಮಂದಿರದಲ್ಲಿ ಸರಿಗಮಪ ಖ್ಯಾತಿಯ ಹನುಮಂತು ಅವರು ಲಂಬಾಣಿ ಹಾಡುಗಳನ್ನು ಹಾಡಿದರು. ಇದೇ ವೇಳೆ ಬಂಜಾರ ಜಾಗೃತ ದಳ ರಾಜ್ಯಾಧ್ಯಕ್ಷ ತಿಪ್ಪ ಸರ್ ನಾಯ್ಕ ಅವರು ಮಾಧ್ಯಮ ರೊಂದಿಗೆ ಮಾತನಾಡಿದರು. ವರದಿ: ನಂದೀಶ್ ನಾಯ್ಕ, ಪಾವಗಡ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಉತ್ತರ ಪ್ರದೇಶದ ಜಾನ್‌ಪುರ ಜಿಲ್ಲೆಯಲ್ಲಿ ಭೀಕರ ಅಪಘಾತವೊಂದು ಸಂಭವಿಸಿದ್ದು, ಈ ಭೀಕರ ಅಪಘಾತದಲ್ಲಿ ಆರು ಮಂದಿ ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರು ಸ್ಥಳಕ್ಕಾಗಮಿಸಿ ಮೃತದೇಹಗಳನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಅಲ್ಲದೆ ತನಿಖೆ ಆರಂಭಿಸಲಾಗಿದೆ. ಅನೀಶ್ ಶರ್ಮಾ (35), ಗಜಧರ ಶರ್ಮಾ (60), ಜವಾಹರ್ ಶರ್ಮಾ (57), ಗೌತಮ್ ಶರ್ಮಾ (17), ಸೋನಂ (34), ರಿಂಕು (32) ಮೃತ ವ್ಯಕ್ತಿಗಳು. ಇವರೆಲ್ಲರೂ ಸ್ಟೇಷನ್ ರೋಡ್ ರಿಗಾ ಪೊಲೀಸ್ ಠಾಣೆಯ ನಿವಾಸಿಗಳು. ಗಾಯಗೊಂಡವರಲ್ಲಿ ಕಾರು ಚಾಲಕ ಜೀತು ಶರ್ಮಾ (25), ಮೀನಾ ದೇವಿ (40), ಯುಗ್ ಶರ್ಮಾ (7) ಎಂದು ಗುರುತಿಸಲಾಗಿದೆ. ಶನಿವಾರ ರಾತ್ರಿ 2.30 ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಗೌರಬಾದ್‌ಶಹಪುರ ಪೊಲೀಸ್ ಠಾಣಾ ವ್ಯಾಪ್ತಿಯ ಜಾನ್‌ಪುರ-ಅಜಂಗಢ ಹೆದ್ದಾರಿಯ ಪ್ರಸಾದ್ ಕೆರಕಟ್ ಛೇದನದ ಬಳಿ ಈ ಭೀಕರ ಅಪಘಾತ ಸಂಭವಿಸಿದೆ. ಒಂದು ಕುಟುಂಬದ ಒಂಬತ್ತು ಸದಸ್ಯರು ಜುನ್ಸಿ ಹುಡುಗಿಯನ್ನು ನೋಡಲು ಬಿಹಾರದ ಸೀತಾಮರ್ಹಿಯಿಂದ ಪ್ರಯಾಗ್‌ರಾಜ್‌ಗೆ…

Read More

ಶನಿವಾರ ನಡೆದ ರಾಮಮಂದಿರ ನಿರ್ಮಾಣ ಸಮಿತಿಯ ಎರಡನೇ ಸಭೆಯಲ್ಲಿ ರಾಮನವಮಿ ಜಾತ್ರೆಗೆ ಬರುವ ಜನಸಂದಣಿ ನಿಯಂತ್ರಿಸುವ ಕುರಿತು ಚಿಂತನೆ ನಡೆಸಲಾಗಿದೆ. ಭದ್ರತಾ ಕಾರಣಗಳಿಗಾಗಿ, ರಾಮ ಜನ್ಮಭೂಮಿ ಪಥದಿಂದ ರಾಮ ಜನ್ಮಭೂಮಿ ಕಾಂಪ್ಲೆಕ್ಸ್‌ ವರೆಗೆ ಫೇಸ್ ರೆಕಗ್ನಿಷನ್ (ಎಫ್‌ಆರ್) ವ್ಯವಸ್ಥೆಯನ್ನು ಹೊಂದಿರುವ ಕ್ಯಾಮೆರಾಗಳನ್ನು ಅಳವಡಿಸಲಾಗುತ್ತಿದೆ. ಇದರಿಂದ ರಾಮಲಾಲ ದರ್ಶನಕ್ಕೆ ಬರುವ ಪ್ರತಿಯೊಬ್ಬ ಭಕ್ತರನ್ನು ಗುರುತಿಸಲು ಸಾಧ್ಯವಾಗುತ್ತದೆ. ಟ್ರಸ್ಟಿ ಡಾ. ಅನಿಲ್ ಮಿಶ್ರಾ ಮಾತನಾಡಿ, ಯಾವುದೇ ಅರಾಜಕತೆ ಜನಸಮೂಹಕ್ಕೆ ನುಗ್ಗಿದರೆ, ತಕ್ಷಣವೇ ಎಫ್ ಆರ್ ವ್ಯವಸ್ಥೆ ಮೂಲಕ ಗುರುತಿಸಬಹುದು. ಅಲ್ಲದೆ, ರಾಮನವಮಿಯ ಮೊದಲು, ರಾಮ ಜನ್ಮಭೂಮಿ ಪಥದ ಪ್ರವೇಶ ರಸ್ತೆಯಿಂದ ರಾಮ ಜನ್ಮಭೂಮಿ ಕಾಂಪ್ಲೆಕ್ಸ್‌ವರೆಗೆ ಬ್ಯಾರಿಕೇಡಿಂಗ್ ಕೆಲಸವನ್ನೂ ಪೂರ್ಣಗೊಳಿಸಲಾಗುವುದು. ಈ ಬಾರಿ ಸ್ಟೇನ್ ಲೆಸ್ ಬ್ಯಾರಿಕೇಡಿಂಗ್ ಅಳವಡಿಸಲಾಗುತ್ತಿದೆ. ಇದಕ್ಕೂ ಬ್ಯಾರಿಕೇಡ್ ಹಾಕಲಾಗಿದ್ದು, ಭಕ್ತರು ಕೂಡ ಇಲ್ಲಿ ಕುಳಿತು ವಿಶ್ರಾಂತಿ ಪಡೆಯಬಹುದಾಗಿದೆ. ಯಾತ್ರಿಕರ ಸೌಲಭ್ಯ ಕೇಂದ್ರದ ನೆಲ ಅಂತಸ್ತಿನ ಕಾಮಗಾರಿ ಏಪ್ರಿಲ್ 10ರೊಳಗೆ ಪೂರ್ಣಗೊಳ್ಳಲಿದೆ. ಏಳು ಸಾವಿರ ಹೊಸ ಲಾಕರ್‌ಗಳನ್ನು ಅಳವಡಿಸುವ ಕೆಲಸ ತ್ವರಿತ ಗತಿಯಲ್ಲಿ…

Read More

ಇತ್ತೀಚಿನ ದಿನಗಳಲ್ಲಿ ಮಾದಕ ವಸ್ತು ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ, ಇದೀಗ ಕಳೆದ ತಿಂಗಳು ಪತ್ತೆಯಾದ 2,000 ಕೋಟಿ ರೂಪಾಯಿ ಮೌಲ್ಯದ ಮಾದಕವಸ್ತು ಕಳ್ಳಸಾಗಣೆ ದಂಧೆಗೆ ಸಂಬಂಧಿಸಿದಂತೆ, ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಮಾಜಿ ಕಾರ್ಯಕರ್ತ ಮತ್ತು ತಮಿಳು ಚಲನಚಿತ್ರ ನಿರ್ಮಾಪಕ ಜಾಫರ್ ಸಾದಿಕ್ ನನ್ನು, ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್ಸಿಬಿ) ಬಂಧಿಸಿದೆ. ಎನ್ ಸಿಬಿ ಉಪ ಮಹಾನಿರ್ದೇಶಕ ಜ್ಞಾನೇಶ್ವರ್ ಸಿಂಗ್ ಅವರು ಸಾದಿಕ್ ಬಂಧನವನ್ನು ದೃಢಪಡಿಸಿದ್ದಾರೆ. “ಆತ ನಾವು ತನಿಖೆ ನಡೆಸುತ್ತಿದ್ದ ಭಾರತ-ಆಸ್ಟ್ರೇಲಿಯಾ-ನ್ಯೂಜಿಲೆಂಡ್ ಮಾದಕವಸ್ತು ಕಳ್ಳಸಾಗಣೆ ಜಾಲದ ಮುಖ್ಯಸ್ಥನಾಗಿದ್ದಾನೆ. ನಾವು ಮಧ್ಯಾಹ್ನ ವಿವರಗಳನ್ನು ಹಂಚಿಕೊಳ್ಳುತ್ತೇವೆ “ಎಂದು ಸಿಂಗ್ ಶನಿವಾರ ಹೇಳಿದರು. ಸಾದಿಕ್ ಒಬ್ಬ ಚಲನಚಿತ್ರ ನಿರ್ಮಾಪಕರಾಗಿದ್ದು, ಇದುವರೆಗೂ ನಾಲ್ಕು ಚಲನಚಿತ್ರಗಳನ್ನು ನಿರ್ಮಿಸಿದ್ದಾರೆ ಎಂದು ಎನ್ಸಿಬಿ ಅಧಿಕಾರಿಗಳು ತಿಳಿಸಿದ್ದಾರೆ. ಅವರ ಐದನೇ ಚಿತ್ರವು ಇದೇ ತಿಂಗಳ ಕೊನೆಯಲ್ಲಿ ಬಿಡುಗಡೆಯಾಗಲಿದೆ. ಆತನ ನಿರ್ಮಾಣ ಕಂಪನಿಯಲ್ಲಿ ಮಾದಕ ದ್ರವ್ಯದ ಹಣವನ್ನು ಬಳಸಲಾಗಿದೆಯೇ ಎಂದು ನಾವು ತನಿಖೆ ನಡೆಸುತ್ತಿದ್ದೇವೆ. ಅವರ ನಿರ್ಮಾಣ ಸಂಸ್ಥೆಯು ಹಣವನ್ನು ಲಾಂಡರಿಂಗ್ ಮಾಡಲು…

Read More

ರಾಜ್ಯದಲ್ಲಿ ಕಾಂಗ್ರೆಸ್ ಪಾರ್ಟಿ ಹಾಗೂ ಸರ್ಕಾರವು ಲೋಕಸಭಾ ಚುನಾವಣೆಗೆ ಭರ್ಜರಿ ತಯಾರಿ ನಡೆಸಿದೆ. ಈಗಾಗಲೇ 7ಕ್ಷೇತ್ರಗಳ ಅಭ್ಯರ್ಥಿಗಳ ಘೋಷಣೆ ಕೂಡ ಆಗಿದೆ. ಹೀಗಾಗಿ ಚಟುವಟಿಕೆಗಳು ಇನ್ನೂ ಚುರುಕಾಗಿವೆ. ಆದರೆ ಈ ಬೆನ್ನಲ್ಲೇ ಕಾಂಗ್ರೆಸ್ ಪ್ರಬಲ ನಾಯಕ ಸತೀಶ್ ಜಾರಕಿಹೊಳಿ  ಅವರು ತಮ್ಮ ಪಕ್ಷಕ್ಕೆ ಬಿಗ್ ಶಾಕ್ ನೀಡಿದ್ದಾರೆ. ಹಲವು ವರ್ಷಗಳಿಂದ ರಾಜ್ಯದಲ್ಲಿ ದಲಿತ ಸಿಎಂ ಕೂಗು ಕೇಳಿಬರುತ್ತಿದೆ. ಆಗಾಗ ಇದು ಹೆಚ್ಚು ಸದ್ದು ಮಾಡುತ್ತಿರುತ್ತದೆ. ಆದರೀಗ ಲೋಕಸಭಾ ಚುನಾವಣೆ ಹೊತ್ತಲ್ಲಿ ಈ ಚರ್ಚೆ ಮುನ್ನಲೆಗೆ ಬಂದಿದೆ. ದಲಿತ ನಾಯಕ, ಕಾಂಗ್ರೆಸ್ ಸಚಿವ ಸತೀಶ್ ಜಾರಕಿಹೊಳಿ ಅವರು ಈ ಚುನಾವಣೆ ಮುಗಿದ ಬಳಿಕ ರಾಜ್ಯದಲ್ಲಿ ದಲಿತ ಸಿಎಂ ವಿಚಾರವನ್ನು ಮುನ್ನಲೆಗೆ ತರುತ್ತೇವೆ ಎಂದಿದ್ದಾರೆ. ಹೌದು, ಈ ಬಗ್ಗೆ ಮಾತನಾಡಿದ ಅವರು ದಲಿತ ಸಿಎಂ ಆಗಬೇಕೆಂಬ ಕೂಗು ಮೊದಲಿನಿಂದಲೂ ಇದೆ. ಇದರಲ್ಲಿ ಹೊಸದೇನೂ ಇಲ್ಲ. ಎಸ್ಸಿ, ಎಸ್ಟಿ ಸಮಾಜದವರು ಕಾಂಗ್ರೆಸ್‌ ಪಕ್ಷಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸುತ್ತಾರೆ. ನಮ್ಮ ಕಡೆ ಸೈನಿಕರು ಜಾಸ್ತಿ ಇದ್ದಾರೆ.…

Read More

ಇಂದಿನ ಬಿಡುವಿಲ್ಲದ ಮತ್ತು ಬಿಡುವಿಲ್ಲದ ಜೀವನದಲ್ಲಿ.. ಜನರು ಯಾವಾಗ ಕಿರಿಕಿರಿಗೊಳ್ಳುತ್ತಾರೆ. ಅವರು ಯಾವಾಗ ಶಾಂತವಾಗಿರುತ್ತಾರೆ ಮತ್ತು ಅವರು ತಮ್ಮ ಕೋಪವನ್ನು ಏಕೆ ವ್ಯಕ್ತಪಡಿಸುತ್ತಾರೆ ಎಂದು ತಿಳಿಯುವುದು ಕಷ್ಟ. ಆದರೆ ಹೆಚ್ಚಿನ ಜನರು ಬಹಳ ಬೇಗ ಕೋಪಗೊಳ್ಳುತ್ತಾರೆ. ಸಣ್ಣ ಮಾತು.. ಹಾಸ್ಯಗಳನ್ನೂ ಸಹಿಸಲಾರದ ಕೆಲವರಿದ್ದಾರೆ. ಇದರಿಂದ ರಕ್ತದೊತ್ತಡ ಅಂದರೆ ಬಿಪಿಯಂತಹ ಸಮಸ್ಯೆಗಳು ಉಂಟಾಗುತ್ತವೆ. ಈಗ ಈ ಸಮಸ್ಯೆಯನ್ನು ಪರಿಹರಿಸುವ ಬಗ್ಗೆ ಜ್ಯೋತಿಷಿಗಳು ನೀಡುವ ಕೆಲವು ಸಲಹೆಗಳನ್ನು ನೋಡೋಣ. ವ್ಯಕ್ತಿಯ ಜಾತಕದಲ್ಲಿ ಸೂರ್ಯ, ಚಂದ್ರ ಮತ್ತು ಮಂಗಳ ಸಂಯೋಗದಲ್ಲಿದ್ದರೆ, ವ್ಯಕ್ತಿಯು ಕೋಪಗೊಳ್ಳುತ್ತಾನೆ. ಕೋಪವು ಬೆಂಕಿಯ ಅಂಶದ ಸೂಚಕವಾಗಿದೆ. ಇದು ಇತರ ಚಿಹ್ನೆಗಳು ಅಥವಾ ಗ್ರಹಗಳೊಂದಿಗೆ ಸಂಯೋಜಿಸಿದಾಗ, ಅದೂ ಅಲ್ಲದೆ ಮಂಗಳ ಗ್ರಹವು ಕೆಟ್ಟ ಸ್ಥಾನದಲ್ಲಿ ಇರುವವರು ತುಂಬಾ ಕೋಪಗೊಳ್ಳುತ್ತಾರೆ. ಅದರ ಹೊರತಾಗಿ ಚಂದ್ರನು ದುರ್ಬಲನಾಗಿದ್ದರೆ ಅಥವಾ ಚಂದ್ರನು ವ್ಯಕ್ತಿಯ ನಕಾರಾತ್ಮಕ ಸ್ಥಾನದಲ್ಲಿದ್ದರೆ. ಕಿರಿಕಿರಿ ಮತ್ತು ಕೋಪವು ಬೇಗನೆ ಬರುತ್ತದೆ. ಅಂತಹ ವ್ಯಕ್ತಿಗಳು ಕೋಪವನ್ನು ನಿಯಂತ್ರಿಸಲು ಬೆಳ್ಳಿಯ ಉಂಗುರ ಅಥವಾ ಪೆಂಡೆಂಟ್ ನಲ್ಲಿ ಮುತ್ತುಗಳನ್ನು ಧರಿಸಬೇಕು.…

Read More

ಲೋಕಸಭೆ ಚುನಾವಣೆಗೆ ಪಕ್ಷದ 2ನೇ ಎರಡನೇ ಅಭ್ಯರ್ಥಿಗಳ ಪಟ್ಟಿಯನ್ನು ಇಂದು(ಮಾ.೧೦) ಬಿಡುಗಡೆಯಾಗಲಿದೆ ಎಂದು ಮಾಜಿ ಸಿಎಂ ಮತ್ತು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ. ನಾನು ಇಂದು ಹೊಸದಿಲ್ಲಿಗೆ ಪ್ರಯಾಣ ಬೆಳೆಸಲಿದ್ದೇನೆ. ಸಂಜೆ ಚುನಾವಣಾ ಸಮಿತಿ ಸಭೆ ನಡೆಯಲಿದ್ದು, ಪ್ರಧಾನಿ ಮೋದಿ ಪಾಲ್ಗೊಳ್ಳಲಿದ್ದಾರೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಈಗಾಗಲೇ ಪೂರ್ವಭಾವಿ ಸಭೆ ನಡೆಸಲಾಗಿದೆ. ಎರಡನೇ ಪಟ್ಟಿಯ ಅಂತಿಮಗೊಳಿಸುವಿಕೆಯು ಇಂದು ಮುಕ್ತಾಯಗೊಳ್ಳುವ ನಿರೀಕ್ಷೆಯಿದೆ ಎಂದು ಹೇಳಿದರು. ಜೆಡಿಎಸ್‌ ಗೆ ಸೀಟು ಹಂಚಿಕೆ ವಿಚಾರವಾಗಿ ಮಾತನಾಡಿದ ಅವರು, ಜೆಡಿಎಸ್ ಜೊತೆ ಸೀಟು ಹಂಚಿಕೆ ವಿಚಾರ ಇನ್ನೂ ಚರ್ಚೆಯಲ್ಲಿದೆ. ಇಂದು ಅಂತಿಮ ನಿರ್ಧಾರಕ್ಕೆ ಬರಲಾಗುವುದು ಎಂದು ತಿಳಿಸಿದರು. ಹಲವು ಹಾಲಿ ಸಂಸದರಿಗೆ ಟಿಕೆಟ್ ಸಿಗದಿರುವ ಸಾಧ್ಯತೆಯ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿ, ಈ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ ಎಂದರು. ಶಿವಮೊಗ್ಗ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ನಟ ಶಿವರಾಜ್‌ಕುಮಾರ್‌ ಪತ್ನಿ…

Read More

ನಟಿ ರಶ್ಮಿಕಾ ಮಂದಣ್ಣ ಏನಾದರೊಂದು ಕಿರಿಕ್ ಮಾಡುತ್ತಲೇ ಇರುತ್ತಾರೆ. ಈ ಹಿಂದೆಯೇ ನಟಿ ರಶ್ಮಿಕಾ ಮಂದಣ್ಣ ದಕ್ಷಿಣ ಚಿತ್ರರಂಗದವರ ಕೆಂಗಣ್ಣಿಗೆ ಗುರಿಯಾಗಿದ್ದರು. ಈ ಹಿಂದೆ ಕನ್ನಡ ಚಿತ್ರೋದ್ಯಮದ ಜೊತೆ ಕಿರಿಕ್​ ಮಾಡಿಕೊಂಡಿದ್ದ ರಶ್ಮಿಕಾಗೆ ಇದಾಗಲೇ ಕನ್ನಡ ಚಲನಚಿತ್ರೋದ್ಯಮವು ನಿಷೇಧಿಸಿದೆ. ಈಗ  ಟಾಲಿವುಡ್ ಕೂಡ ಇದೇ ರೀತಿ ಮಾಡಬೇಕು. ಈಕೆ ವಿರುದ್ಧ ಕ್ರಮವನ್ನು ತೆಗೆದುಕೊಳ್ಳಬೇಕು ಎಂಬ ಕೂಗು ಜೋರಾಗಿ ಕೇಳಿಬರುತ್ತಿದೆ. ದಕ್ಷಿಣವೇ ಈಕೆಯ ಬೇರು. ಆದರೆ  ತನ್ನ ಸಕ್ಸಸ್​ ಅಡಿಪಾಯವನ್ನು ಈಕೆ ಗೌರವಿಸುತ್ತಿಲ್ಲ ಎಂದು ಸೋಷಿಯಲ್​ ಮೀಡಿಯಾದಲ್ಲಿ ಕೂಗು ಕೇಳಿ ಬಂದಿದೆ. ಅಷ್ಟಕ್ಕೂ ರಶ್ಮಿಕಾ ಸೌತ್​ ನವರ ಕೆಂಗಣ್ಣಿಗೆ ಗುರಿಯಾಗುತ್ತಿರುವುದಕ್ಕೆ ಕಾರಣವೂ ಇದೆ. ಬಾಲಿವುಡ್​ ಗೆ ಕಾಲಿಡುತ್ತಿದ್ದಂತೆಯೇ ಮತ್ತೆ  ದಕ್ಷಿಣ ಭಾರತದ ಚಲನಚಿತ್ರಗಳ ಬಗ್ಗೆ ಕಿರಿಕ್​ ಮಾಡಿಕೊಂಡಿದ್ದಾರೆ ನಟಿ. ಇದು ನೆಟ್ಟಿಗರನ್ನು ಹಾಗೂ ಸೌತ್​ ಇಂಡಸ್ಟ್ರಿಯನ್ನು ಕೆರಳಿಸಿದೆ. ಇತ್ತೀಚಿನ ಕಾರ್ಯಕ್ರಮವೊಂದರಲ್ಲಿ, ಸಿದ್ಧಾರ್ಥ್ ಮಲ್ಹೋತ್ರಾ ಅವರೊಂದಿಗೆ ಮಿಷನ್ ಮಜ್ನು ಸಿನಿಮಾದ ಕುರಿತು ಮಾತನಾಡುತ್ತಿದ್ದ ವೇಳೆ ಅವರು ಆಡಿರುವ ಮಾತುಗಳಿಗೆ ಜನರು ಕಿಡಿಕಿಡಿಯಾಗುತ್ತಿದ್ದಾರೆ. ಅಷ್ಟಕ್ಕೂ ನಟಿ…

Read More