Subscribe to Updates
Get the latest creative news from FooBar about art, design and business.
- ದೇಶದ 2ನೇ ಅತಿ ದೊಡ್ಡ ಕ್ರಿಕೆಟ್ ಕ್ರೀಡಾಂಗಣಕ್ಕೆ ಸಿಎಂ ಸಿದ್ದರಾಮಯ್ಯ ಶಂಕುಸ್ಥಾಪನೆ
- ಈ ವರ್ಷ 52 ಸಾವಿರ ಅತಿಥಿ ಶಿಕ್ಷಕರ ನೇಮಕ: ಸಚಿವ ಮಧು ಬಂಗಾರಪ್ಪ
- ಬೀದರ್ ಬ್ರಿಮ್ಸ್ (BRIMS) ಆಸ್ಪತ್ರೆಯಲ್ಲಿ ಕರ್ತವ್ಯ ನಿರತ ವೈದ್ಯರ ಮೇಲೆ ಭೀಕರ ಹಲ್ಲೆ: 7 ಮಂದಿ ಆರೋಪಿಗಳ ಬಂಧನ
- ತುಮಕೂರು ಜಿಲ್ಲೆಗೆ ‘ತುಮಕೂರು (ಬೆಂಗಳೂರು ಉತ್ತರ)’ ಎಂದು ಮರುನಾಮಕರಣ: ಗೃಹ ಸಚಿವ ಡಾ.ಜಿ.ಪರಮೇಶ್ವರ್
- ಮಾದಾವರ–ತುಮಕೂರು ಮೆಟ್ರೋ ರೈಲು ಯೋಜನೆ: ಸರ್ಕಾರಕ್ಕೆ ಸಲ್ಲಿಕೆಯಾಯ್ತು ಡಿಪಿಆರ್ ವರದಿ
- ಪಕ್ಷದ ಜವಾಬ್ದಾರಿ ನಿರ್ವಹಿಸದಿದ್ದರೆ ಶಿಸ್ತು ಕ್ರಮ: ಕಾಂಗ್ರೆಸ್ ಮುಖಂಡರ ಸಭೆಯಲ್ಲಿ ಶಾಸಕ ಕೆ. ಷಡಕ್ಷರಿ ಎಚ್ಚರಿಕೆ
- ಗುಬ್ಬಿ ಶಾಸಕರು, ಪುತ್ರನಿಂದ ಕುತಂತ್ರ ರಾಜಕಾರಣ: ಷಡ್ಯಂತ್ರಗಳಿಗೆ ಜಗ್ಗುವುದಿಲ್ಲ: ಜೆಡಿಎಸ್ ಮುಖಂಡ ನಾಗರಾಜು ಕಿಡಿ
- ತುಮಕೂರು: ಕುಲ್ಲಕ ವಿಷಯಕ್ಕೆ ಜಗಳ: ಕೊಲೆ
Author: admin
ಮುಂಬರುವ ಲೋಕಸಭಾ ಚುನಾವಣೆ ಭಾರಿ ಕುತೂಹಲಕ್ಕೆ ಕಾರಣವಾಗಿದೆ. ರಾಜ್ಯದ ಅಭ್ಯರ್ಥಿಗಳ ಆಯ್ಕೆ ಕುರಿತಂತೆ ಕಸರತ್ತು ನಡೆಯುತ್ತಿದ್ದು, ಕೊಡಗು ಮೈಸೂರು ಕ್ಷೇತ್ರದಲ್ಲಿ ಭಾರಿ ಮಹತ್ವದ ಬೆಳವಣಿಗೆಗಳಾಗುತ್ತಿವೆ ಅನ್ನೋದರ ಬಗ್ಗೆ ಚರ್ಚೆಗಳು ನಡಿಯುತ್ತಿವೆ. ಅದಕ್ಕೆ ಕಾರಣ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ನೀಡಿರುವ ಆ ಒಂದು ಹೇಳಿಕೆ. ಹಾಗಾದರೆ ಅದೇನು ಅನ್ನೋದರ ಬಗ್ಗೆ ತಿಳಿದುಕೊಳ್ಳೋಣ ಬನ್ನಿ… ಹೌದು, ಈ ಬಾರಿ ಪ್ರತಾಪ್ ಸಿಂಹಗೆ ಟಿಕೆಟ್ ಮಿಸ್ ಆಗಲಿದೆಯಾ ಎನ್ನುವ ಪ್ರಶ್ನೆ ಎದ್ದಿದೆ. ವಿಜಯೇಂದ್ರ ನಾಲ್ಕು ಗೋಡೆ ಮಧ್ಯೆ ಅನೇಕ ವಿಚಾರ ಚರ್ಚೆ ಆಗಿದ್ದು, ಅದನ್ನು ಬಹಿರಂಗ ಪಡಿಸಲು ಸಾಧ್ಯವಿಲ್ಲ. ಊಹಾಪೋಹಗಳಿಗೆ ಉತ್ತರ ಕೊಡುವುದಿಲ್ಲ ಎಂದು ವಿಜಯೇಂದ್ರ ಹೇಳಿದ್ದಾರೆ. ಪರೋಕ್ಷವಾಗಿ ಪ್ರತಾಪ್ ಸಿಂಹ ಗೆ ಟಿಕೆಟ್ ಮಿಸ್ ಆಗುವ ಸುಳಿವು ನೀಡಿದರಾ? ಎಂಬ ಅನುಮಾನ ಮೂಡಿದೆ. ಮೈಸೂರಿಗೆ ಯದುವೀರ್ ಒಡೆಯರ್ ಸ್ಪರ್ಧೆ ವಿಚಾರವಾಗಿ ವಿಜಯೇಂದ್ರ ಹೇಳಿಕೆ ನೀಡಿದ್ದು, ನಾನು ಊಹಾಪೋಹಾಗಳಿಗೆ ಉತ್ತರ ಕೊಡಲ್ಲ. ನಾಲ್ಕು ಗೋಡೆಗಳ ಮಧ್ಯೆ ನಡೆದ ಚರ್ಚೆ ಬಹಿರಂಗಪಡಿಸಲ್ಲ. ಉತ್ತಮ, ಗೆಲ್ಲುವ…
ಕಾಟನ್ ಕ್ಯಾಂಡಿ ಹಾಗೂ ಗೋಬಿ ಮಂಚೂರಿಯನ್ನು ಬ್ಯಾನ್ ಮಾಡಬೇಕೆಂದು ಈ ಹಿಂದೆಯೇ ಚರ್ಚೆಯ ವಿಷಯವಾಗಿತ್ತು. ಬಳಿಕ ಕೆಲವೊಂದು ರಾಜ್ಯದಲ್ಲಿ ಇದನ್ನು ಬ್ಯಾನ್ ಮಾಡಲಾಗಿತ್ತು. ಇದೀಗ ಕರ್ನಾಟಕದಲ್ಲಿಯೂ ಬ್ಯಾನ್ ಮಾಡುವ ಬಗ್ಗೆ ಚಿಂತನೆ ನಡೆಸಲಾಗಿದೆ. ಹೌದು, ಕೆಲವೊಂದು ಹಾನಿಕಾರಕ ಅಂಶಗಳು ಪತ್ತೆಯಾದ ಹಿನ್ನೆಲೆ ಗೋವಾ, ತಮಿಳುನಾಡು ಈ ಆಹಾರಗಳನ್ನು ಬ್ಯಾನ್ ಮಾಡಿದೆ. ಈ ಹಿನ್ನೆಲೆ ಕರ್ನಾಟಕದಲ್ಲೂ ಗೋಬಿ ಮಂಚೂರಿ ಹಾಗೂ ಕಾಟನ್ ಕ್ಯಾಂಡಿ ಕಲರ್ ಜೆಲ್ಲಿಗಳನ್ನು ಸ್ಯಾಂಪಲ್ ಟೆಸ್ಟ್ ಗೆ ಒಳಪಡಿಸಿಲಾಗಿತ್ತು. ಇದೀಗ ಕಾಟನ್ ಕ್ಯಾಂಡಿ ಜೆಲ್ಲಿ ಹಾಗೂ ಗೋಬಿ ಮಂಚೂರಿಯ ಟೇಸ್ಟಿಂಗ್ ರಿಪೋರ್ಟ್ ಆರೋಗ್ಯ ಇಲಾಖೆ ಕೈ ಸೇರಿದೆ. ಆಹಾರ ಮತ್ತು ಸುರಕ್ಷತಾ ಇಲಾಖೆಯಿಂದ ರಿಪೋರ್ಟ್ ಆಧರಿಸಿ ನಿರ್ಧಾರ ಕೈಗೊಳ್ಳಲಿದ್ದು, ಸೋಮವಾರ (ಮಾ.11) ಆರೋಗ್ಯ ಸಚಿವರು ಮಹತ್ವದ ಸುದ್ದಿಗೋಷ್ಠಿ ನಡೆಸಲಿದ್ದಾರೆ. ಸ್ಯಾಂಪಲ್ನಲ್ಲಿ ಹಾನಿಕಾರಕ ಅಂಶ ಪತ್ತೆಯಾಗಿದೆ. ಕಾಟನ್ ಕ್ಯಾಂಡಿಯಲ್ಲಿ ಹಾನಿಕಾರಕ ಅಂಶ ಇರುವುದು ಪತ್ತೆಯಾಗಿದ್ದು, ಗೋಬಿ ಮಂಚೂರಿಯಲ್ಲಿ Sunset Yellow ಮತ್ತು Tartrazine ಅಂಶ ಇರುವುದು ಪತ್ತೆಯಾಗಿದೆ. ರಾಸಾಯನಿಕ ಕಲಬೆರಕೆ ಇರುವುದರಿಂದ…
ಇತ್ತೀಚಿನ ದಿನಗಳಲ್ಲಿ ಆರೋಗ್ಯ ಸಮಸ್ಯೆಗಳು ಹೆಚ್ಚಾಗಿ ಕಾಡುತ್ತಿದೆ. ಅದರಲ್ಲೂ ಕೆಲವೊಂದು ಕಾಯಿಲೆಗಳು ವೈದ್ಯ ಲೋಕಕ್ಕೆ ಸವಾಲಾಗಿ ಪರಿಣಮಿಸುತ್ತಿವೆ. ಇದೀಗ 19 ವರ್ಷ ವಯಸ್ಸಿನ ಯುವತಿಯ ಹೊಟ್ಟೆಯಲ್ಲಿ ಬರೋಬ್ಬರಿ 7.5 ಕೆಜಿ ಗಡ್ಡೆಯಿದ್ದು, ಅದನ್ನು ಶಸ್ತ್ರಚಿಕಿತ್ಸೆ ಮೂಲಕ ಹೊರತೆಗೆಯುವಲ್ಲಿ ಕ್ಯಾನ್ಸ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ವೈದ್ಯರು ಯಶಸ್ವಿಯಾಗಿದ್ದಾರೆ. ಬೆಂಗಳೂರು ನಗರದ ಯುವತಿಯ ಹೊಟ್ಟೆಯ ಸುತ್ತ ಕಳೆದ ಒಂದೂವರೆ ವರ್ಷಗಳಿಂದ ನಿರಂತರವಾಗಿ ಹೆಚ್ಚಳ ಕಂಡು ಬಂದಿತ್ತು. ಇದರಿಂದಾಗಿ ಯುವತಿಯ ಪೋಷಕರು ಆತಂಕಕ್ಕೆ ಒಳಗಾಗಿ ವಿದ್ಯಾರಣ್ಯಪುರ ಸಮೀಪವಿರುವ ಕ್ಯಾನ್ಸ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ತಪಾಸಣೆಗೆಂದು ಕರೆತಂದಿದ್ದರು. ಬಳಿಕ ಪ್ರಸೂತಿ ಮತ್ತು ಸ್ತ್ರೀ ರೋಗ ತಜ್ಞರಾದ ಡಾ. ಚೈತ್ರಾ ಎಸ್. ನಿರಂತರ ಅವರು ತಪಾಸಣೆ ನಡೆಸಿ ಪರೀಕ್ಷೆಗೊಳಪಡಿಸಿದಾಗ ಗರ್ಭಕೋಶದಲ್ಲಿ 7.5 ಕೆಜಿಯಷ್ಟು ಗಡ್ಡೆ ಇರುವುದು ಪತ್ತೆಯಾಗಿದೆ. ಸುಮಾರು ಒಂದೂವರೆ ಗಂಟೆಗಳ ಕಾಲ ಶಸ್ತ್ರಚಿಕಿತ್ಸೆ ನಡೆಸಿ ಗಡ್ಡೆಯನ್ನು ಹೊರತೆಗೆಯುವಲ್ಲಿ ಡಾ. ಚೈತ್ರಾ ಎಸ್. ನಿರಂತರ, ಡಾ ನಂದ ಕುಮಾರ್ ಮತ್ತು ತಂಡ ಯಶಸ್ವಿಯಾಗಿದೆ. ಶಸ್ತ್ರಚಿಕಿತ್ಸೆ ಬಳಿಕ ಯುವತಿ ಆರೋಗ್ಯವಾಗಿದ್ದು ಪೋಷಕರ ಆತಂಕ…
ತುಮಕೂರು: ಪಾಕಿಸ್ತಾನವನ್ನು ಯಾರಾದರೂ ಬೆಂಬಲಿಸಿದರೆ, ಗುಂಡಿಕ್ಕಿ ಕೊಲ್ಲಲಿ ಎಂದು ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ. ವಿಧಾನಸೌಧದಲ್ಲಿ ಪಾಕಿಸ್ತಾನ್ ಪರ ಘೋಷಣೆ ಕೂಗಿದ ವಿಚಾರಕ್ಕೆ ಸಂಬಂಧಿಸಿದಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಾಕಿಸ್ತಾನವನ್ನು ಯಾರಾದರೂ ಬೆಂಬಲಿಸಿದರೆ, ಪಾಕ್ ಪರ ಘೋಷಣೆ ಕೂಗಿದರೆ ಅಂತವರನ್ನು ಗುಂಡಿಕ್ಕಿ ಕೊಲ್ಲಲಿ ಎಂದರು. ಉತ್ತರ ಪ್ರದೇಶ ಮಾದರಿಯಲ್ಲಿ ನಮ್ಮಲ್ಲೂ ಕಠಿಣ ಕಾನೂನು ತರಲಿ. ಸಮಾಜಘಾತುಕರ ಮನೆಗಳನ್ನು ಕೆಡವುತ್ತಾರೆ. ಶಾಂತಿ ನೆಮ್ಮದಿಗಾಗಿ ಇಂತಹ ಕ್ರಮ ಅಗತ್ಯ ಎಂದು ಹೇಳಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಚಿಕ್ಕಬಳ್ಳಾಪುರ: ಪತಿಯೋರ್ವ ಪತ್ನಿಯನ್ನು ಚಾಕುವಿನಿಂದ ಇರಿದು, ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಚಿನ್ನಕಾಯಲಪಲ್ಲಿ ಗ್ರಾಮದಲ್ಲಿ ನಡೆದಿದೆ. ನರಸಮ್ಮ(48) ಹತ್ಯೆಗೀಡಾದ ಮಹಿಳೆಯಾಗಿದ್ದಾರೆ. ಪತಿ ಗಂಗುಲಪ್ಪ ತನ್ನ ಪತ್ನಿಯನ್ನು ಹತ್ಯೆ ಮಾಡಿದ ಆರೋಪಿಯಾಗಿದ್ದಾನೆ. ಆರೋಪಿ ನರಸಮ್ಮಳನ್ನು ಜಾನುವಾರುಗಳಿಗೆ ಹುಲ್ಲು ತರುವ ನೆಪದಲ್ಲಿ ಕರೆದೊಯ್ದು ಹುಲ್ಲಿನ ಬಣವೆ ಬಳಿ ಬರ್ಬರವಾಗಿ ಹತ್ಯೆ ಮಾಡಿದ್ದಾನೆ ಎಂದು ಹೇಳಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಆರೋಪಿ ಗಂಗುಲಪ್ಪನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಕೌಟುಂಬಿಕ ಕಲಹವೇ ಹತ್ಯೆಗೆ ಕಾರಣ ಎಂದು ಆರೋಪಿ ಪೊಲೀಸರಿಗೆ ತಿಳಿಸಿದ್ದಾನೆ. ಘಟನಾ ಸ್ಥಳಕ್ಕೆ ಪಾತಪಾಳ್ಯ ಠಾಣೆ ಪೊಲೀಸರು ಸ್ಥಳಕ್ಕೆ ಬೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಬೆಂಗಳೂರು: ಮುಂದಿನ 7 ವರ್ಷಗಳಲ್ಲಿ ರಾಜ್ಯದಲ್ಲಿ 60 ಸಾವಿರ ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆಯ ಗುರಿ ಹಮ್ಮಿಕೊಂಡಿದ್ದೇವೆ. ಈ ದಿಕ್ಕಿನಲ್ಲಿ ನಮ್ಮ ಸಿದ್ಧತೆಗಳು ಆಗಲೇ ಆರಂಭಗೊಂಡಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು. GKVK ಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ರೈತ ಸೌರಶಕ್ತಿ ಮೇಳ ಉದ್ಘಾಟಿಸಿದರು. ಬಳಿಕ ಕುಸುಮ್ “ಬಿ” ಮತ್ತು “ಸಿ” ಯೋಜನೆಗಳ ಚಾಲನೆ ನೀಡಿ ವಿದ್ಯುತ್ ಉಪಕೇಂದ್ರಗಳನ್ನು ಲೋಕಾರ್ಪಣೆ ಗೊಳಿಸಿ ಮಾತನಾಡಿದರು. ದೇಶದಲ್ಲೇ ಅತಿ ಹೆಚ್ಚು ಒಣಭೂಮಿ ಹೊಂದಿರುವ ಎರಡನೇ ರಾಜ್ಯ ಕರ್ನಾಟಕ. ಹೀಗಾಗಿ ಒಣಭೂಮಿಯ ಕೃಷಿಗೆ ಆಧ್ಯತೆ ನೀಡಿ ಸಂಶೋಧನೆಗಳು ನಡೆಯಬೇಕು. ಜನಸಂಖ್ಯೆ ಹೆಚ್ಚಾಗಿ ರೈತರ ಬೆಳೆಗಳ ಇಳುವರಿ ಪ್ರಮಾಣ ಕಡಿಮೆ ಆಗುತ್ತಿದೆ. ಆದ್ದರಿಂದ ಸಮಗ್ರ ಕೃಷಿಗೆ ಹೆಚ್ವಿನ ಬೆಂಬಲ ನೀಡುವ ಸಲುವಾಗಿ ಕೃಷಿಯ ಉಪಕಸುಬುಗಳ ಬೆಳವಣಿಗೆಗೆ ಸರ್ಕಾರ ಸಂಪೂರ್ಣ ಸಹಕಾರ, ಬೆಂಬಲ ನೀಡುತ್ತಿದೆ ಎಂದು ನುಡಿದರು. ಪ್ರಸ್ತುತ ರಾಜ್ಯದಲ್ಲಿ 32 ಸಾವಿರ ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆಯಾಗುತ್ತಿದೆ. ಮುಂದಿನ 7 ವರ್ಷಗಳಲ್ಲಿ 60 ಸಾವಿರ ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆಯ ಗುರಿ…
ಪಾವಗಡ: ಶಿವರಾತ್ರಿ ಹಬ್ಬದ ಪ್ರಯುಕ್ತ ಪಾವಗಡ ಪಟ್ಟಣದ ಎಸ್ ಎಸ್ ಕೆ ಬಯಲು ರಂಗಮಂದಿರದಲ್ಲಿ ಶುಕ್ರವಾರ ರಾತ್ರಿ ಪಾವಗಡದ ರೋಟರಿ ಕ್ಲಬ್ ಮತ್ತು ಹೆಲ್ಪ್ ಸೊಸೈಟಿ ಸಹಯೋಗದಲ್ಲಿ ಪಾವಗಡ ತಾಲೂಕಿನ ವಿವಿಧ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮಕ್ಕೆ ಪಾವಗಡ ಪುರಸಭೆಯ ಮಾಜಿ ಅಧ್ಯಕ್ಷರಾದ ಮಾನಂ ವೆಂಕಟಸ್ವಾಮಿ ಅವರು ಚಾಲನೆ ನೀಡಿ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಮಕ್ಕಳಲ್ಲಿ ಧಾರ್ಮಿಕ ಹಿತಾಸಕ್ತಿ ಕಮ್ಮಿಯಾಗುತ್ತಿದ್ದು, ಅದರ ಜೊತೆಗೆ ಕಲೆಯ ಮೇಲಿನ ಗೌರವ ಕ್ಷೀಣಿಸುತ್ತಿದೆ ಇಂತಹ ಸಂದರ್ಭದಲ್ಲಿ ಮಕ್ಕಳಿಗೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸುವುದರಿಂದ ಉತ್ತಮ ಫಲಿತಾಂಶವನ್ನು ಸಾಂಸ್ಕೃತಿಕವಾಗಿ ಮಕ್ಕಳು ಪಡೆಯಲಿದ್ದಾರೆ ಎಂದರು. ಕಾರ್ಯಕ್ರಮದಲ್ಲಿ ಪಾವಗಡ ತಾಲೂಕಿನ 25ಕ್ಕೂ ಅಧಿಕ ಶಾಲೆಗಳ ನೂರಾರು ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಗೀತೆಗಳಿಗೆ ನೃತ್ಯವನ್ನು ಪ್ರದರ್ಶಿಸಿದರು. ಕಾರ್ಯಕ್ರಮದಲ್ಲಿ ರೋಟರಿ ಕ್ಲಬ್ ನ ಅಧ್ಯಕ್ಷರಾದ ಸತ್ಯ ಲೋಕೇಶ್, ಹೆಲ್ಪ್ ಸೊಸೈಟಿ ಅಧ್ಯಕ್ಷರಾದ ಮಾನಂ ಶಶಿಕಿರಣ್, ಪುರಸಭಾ ಸದಸ್ಯರಾದ ಗೂರ್ತಿ ನಾಗರಾಜು, ಮಹಮದ್ ಇಮ್ರಾನ್, ರೋಟರಿ ಕ್ಲಬ್ ಮಾಜಿ ಅಧ್ಯಕ್ಷರಾದ ಪ್ರಭಾಕರ್, ಕಮಲ್ ಬಾಬು,…
ಬೇಸಿಗೆಯಲ್ಲಿ ನಮ್ಮ ತ್ವಚೆ ನಮಗೆ ಗೊತ್ತಿಲ್ಲದೆ ಹಾಳಾಗುತ್ತದೆ. ನೀವು ಬಿಸಿಲಿನಲ್ಲಿ ಇದ್ದರೆ, ಕ್ಯಾನ್ಸರ್ ಅಪಾಯವಿದೆ. ಈ ಸರಳ ಸಲಹೆಗಳೊಂದಿಗೆ ನಿಮ್ಮ ಚರ್ಮವನ್ನು ರಕ್ಷಿಸುವಾಗ ಶಾಖವನ್ನು ನಿಯಂತ್ರಣದಲ್ಲಿಟ್ಟುಕೊಳ್ಳಿ. ಸೌತೆಕಾಯಿ ಬೇಸಿಗೆಯಲ್ಲಿ ಅತ್ಯುತ್ತಮವಾಗಿ ದೊರೆಯುತ್ತದೆ. ಇದು ನಮ್ಮ ಚರ್ಮವನ್ನು ರಕ್ಷಿಸಬಲ್ಲದು. ಇದು ಚರ್ಮವನ್ನು ರಕ್ಷಿಸುವುದಲ್ಲದೆ ನಮ್ಮನ್ನು ಆರೋಗ್ಯವಾಗಿಡುತ್ತದೆ. ಸೂರ್ಯನ ಶಾಖದಿಂದ ಪರಿಹಾರವನ್ನು ನೀಡುತ್ತದೆ. ಇದರಲ್ಲಿ ನೀರಿನಂಶ ಅಧಿಕವಾಗಿರುವುದರಿಂದ, ಇದನ್ನು ತಿನ್ನುವುದರಿಂದ ತ್ವಚೆಯು ತೇವಾಂಶದಿಂದ ಕೂಡಿರುತ್ತದೆ ಮತ್ತು ಡಿ-ಹೈಡ್ರೇಟ್ ಆಗುವುದನ್ನು ತಡೆಯುತ್ತದೆ. ಸೌತೆಕಾಯಿ ಪೊಟ್ಯಾಸಿಯಮ್ ಮತ್ತು ಮೆಗ್ನೀಸಿಯಮ್ ಅಂಶಗಳಲ್ಲಿ ಸಮೃದ್ಧವಾಗಿದೆ. ಇವು ರಕ್ತ ಸಂಚಾರವನ್ನು ಉತ್ತಮಗೊಳಿಸುತ್ತವೆ. ಇದರಲ್ಲಿರುವ ನೀರು ದೇಹದಲ್ಲಿ ರಕ್ತದ ಪ್ರಮಾಣವನ್ನು ಹೆಚ್ಚಿಸುತ್ತದೆ. ಪರಿಣಾಮವಾಗಿ, ನಾವು ಬಲಶಾಲಿಯಾಗಿದ್ದೇವೆ ಮತ್ತು ನಾವು ಬಿಸಿಲಿನಲ್ಲಿದ್ದಾಗಲೂ ತಕ್ಷಣವೇ ಸುಸ್ತಾಗುವುದಿಲ್ಲ. ಸೌತೆಕಾಯಿ ಬೀಜಗಳಲ್ಲಿ ಪೊಟ್ಯಾಸಿಯಮ್ ಮತ್ತು ವಿಟಮಿನ್ ಇ ಇರುತ್ತದೆ.ಸುಕ್ಕುಗಳು ಮತ್ತು ಸುಕ್ಕುಗಳಿಂದ. ಕೆಲವು ಸೌತೆಕಾಯಿ ಬೀಜಗಳನ್ನು ನೀರಿನಲ್ಲಿ ಬೆರೆಸಿ ಮತ್ತು ನಿಯಮಿತವಾಗಿ ಸೇವಿಸಿ. ಆದ್ದರಿಂದ ನಿಮ್ಮ ಚರ್ಮವು ತುಂಬಾ ಸುಂದರ ಮತ್ತು ಮೃದುವಾಗಿರುತ್ತದೆ. ಕೀರಾ ಸೌತೆಕಾಯಿಯನ್ನು ತಂಪಾಗಿಸುತ್ತದೆ. ಇದನ್ನು…
ಬೆಂಗಳೂರಿನಲ್ಲಿ ನೀರಿನ ಸಮಸ್ಯೆ ಕುರಿತು ಬಿಜೆಪಿ ಮಾಡಿದ ಆರೋಪಗಳಿಗೆ ತಿರುಗೇಟು ನೀಡಿದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ವಿರೋಧ ಪಕ್ಷಕ್ಕೆ ಟೀಕಿಸೋದು ಬಿಟ್ಟು ಬೇರೇನು ಇಲ್ಲ. ರಚನಾತ್ಮಕ ಸಲಹೆ ಕೊಟ್ಟರೆ ಸ್ವೀಕಾರ ಮಾಡಲು ರೆಡಿ. ಮೊದಲ ಬಾರಿಗೆ ಟ್ಯಾಂಕರ್ ನಿಯಂತ್ರಣಕ್ಕೆ ತೆಗೆದುಕೊಂಡು ಟ್ಯಾಂಕರ್ ಮಾಫಿಯಾ ತಡೆಗಟ್ಟಲಾಗಿದೆ. ದರ ನಿಗದಿ ಮಾಡಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಬೇರೆ ಕಡೆ ಟ್ಯಾಂಕರ್ ತರಿಸಲು ಕೂಡ ಸೂಚಿಸಿದ್ದೇನೆ ಎಂದರು. ಕಾವೇರಿ ನೀರು ಜಾಸ್ತಿ ಬರುತ್ತಾ ಇದೆ. ಕಾವೇರಿ ನೀರು 25 ml ನೀರು ಹೆಚ್ಚು ಬರುತ್ತಿದೆ. ಕಾವೇರಿ ನೀರು ಹೆಚ್ಚು ಡ್ರಾ ಮಾಡುತ್ತಿದ್ದೇವೆ. 110 ಹಳ್ಳಿಗಳಿಗೆ ಮೇ ಅಂತ್ಯಕ್ಕೆ 5ನೇ ಹಂತ ಮುಕ್ತಾಯ ಆಗುತ್ತದೆ. ಅಲ್ಲಿಯವರೆಗೆ ನಾವು ಜಾಗೃತರಾಗಿರಬೇಕು ಎಂದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಬೆಂಗಳೂರು: ಕರ್ನಾಟಕ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನೀರಿನ ಸಮಸ್ಯೆ ಕಾಣಸಿಕೊಂಡಿದ್ದು, ಹವಲು ಪ್ರದೇಶಗಳ ಬೋರ್ವೆಲ್ಗಳಲ್ಲಿ ನೀರು ಬತ್ತಿ ಹೋಗಿದೆ. ಇದರಿಂದಾಗಿ ಜನರು ಪರದಾಡುವಂತಾಗಿದೆ. ಈ ಬಗ್ಗೆ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಆರ್. ಅಶೋಕ, ಕಾಂಗ್ರೆಸ್ ಮಾಡಿದ ತಪ್ಪಿನಿಂದ ಬೆಂಗಳೂರಲ್ಲಿ ನೀರಿನ ಸಮಸ್ಯೆ ಆಗಿದೆ ಎಂದು ಆರೋಪಿಸಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಜೋಡಿಯಿಂದ ನೀರಿನ ಸಮಸ್ಯೆ ಆಗಿದೆ. ಇಂತಹ ಕೆಟ್ಟ ಸರ್ಕಾರವನ್ನು ತೊಲಗಿಸಬೇಕಿದೆ. ದೇಶದಲ್ಲಿ ಮೋದಿ ಗ್ಯಾರಂಟಿ ಒಂದೇ. ಕಾಂಗ್ರೆಸ್ನ ಗ್ಯಾರಂಟಿಗಳು ನೀರಿನ ಮೇಲಿನ ಗುಳ್ಳೆಗಳಿದ್ದಂತೆ. ಸರ್ಕಾರದ ಬಳಿ ಬೋರ್ ವೆಲ್ ಕೊರಿಸುವುದಕ್ಕೂ ಹಣವಿಲ್ಲ. ನಿಮ್ಮ 2000 ರೂಪಾಯಿಯಿಂದ ಏನು ಆಗುತ್ತದೆ ಎಂದು ಗ್ಯಾರಂಟಿ ಯೋಜನೆಯನ್ನು ಟೀಕಿಸಿದರು. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಸಂಪೂರ್ಣ ದಿವಾಳಿಯಾಗಿದೆ. ವಿದೇಶ ಚಾನಲ್ನಲ್ಲಿ ಬೆಂಗಳೂರಿನ ಮರ್ಯಾದೆ ಹೋಗುತ್ತಿದೆ. ನೀರಿನ ಸಮಸ್ಯೆ ಇದೆ, ಅಲ್ಲಿ ಯಾರು ಹೋಗಬೇಡಿ ಅಂತಿದ್ದಾರೆ ಎಂದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್…