Author: admin

ಕೊರಟಗೆರೆ: ಶಿವರಾತ್ರಿ ಹಬ್ಬದ ಪ್ರಯುಕ್ತ ಹೊಳೆ ನಂಜುಂಡೇಶ್ವರ ದೇವಸ್ಥಾನದಲ್ಲಿ ಭಕ್ತ ಸಾಗರವೇ ನೆರೆದಿತ್ತು. ಮುಂಜಾನೆ 3 ಗಂಟೆಯಿಂದಲೇ ನಂಜುಡೇಶ್ವರನ ದರ್ಶನಕ್ಕೆ ಭಕ್ತರು ಆಗಮಿಸಿದರು. ಹೊಳೆ ನಂಜುಂಡೇಶ್ವರ ಸ್ವಾಮಿಗೆ ರುದ್ರಾಭಿಷೇಕ, ಪಂಚಾಮೃತ ಅಭಿಷೇಕದೊಂದಿಗೆ ಅರ್ಚಕರು ಭಕ್ತರ ಸಮ್ಮುಖದಲ್ಲಿ ವಿಶೇಷ ಪೂಜೆ ಸಲ್ಲಿಸಿದರು ದಕ್ಷಿಣ ಕಾಶಿ ಎಂದೇ ಪ್ರಸಿದ್ಧವಾಗಿರುವ ಕೊರಟಗೆರೆ ಕ್ಷೇತ್ರದಲ್ಲಿ ಎಲ್ಲ ದೇವಸ್ಥಾನಗಳಲ್ಲೂ ವಿಶೇಷ ಪೂಜೆ ಸಲ್ಲಿಸಲಾಯಿತು. ಶಿವರಾತ್ರಿ ಹಬ್ಬದ ಪ್ರಯುಕ್ತ ಭಕ್ತರು ಶಿವನನ್ನು ಕಣ್ತುಂಬಿ ಕೊಂಡರು. ಕೊರಟಗೆರೆಯ ಗವಿ ಗಂಗಾಧರೇಶ್ವರ ಸ್ವಾಮಿಯ ಸನ್ನಿಧಾನದಲ್ಲಿ ಸಂಜೆ 6 ಗಂಟೆಗೆ ಲಕ್ಷದೀಪೋತ್ಸವ ನಡೆಯಿತು. ಹೊಳೆ ನಂಜುಂಡೇಶ್ವರ ಸ್ವಾಮಿಯ ಸನ್ನಿಧಾನದಲ್ಲಿ ರಾತ್ರಿ 9 ತನಕ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶ ನೀಡಲಾಯಿತು. ದೇವರ ದರ್ಶನಕ್ಕೆ ಬಂದ ಭಕ್ತರಿಗೆ ಬೆಳಗಿನ ಸಂಜೆವರೆಗೂ ಮಜ್ಜಿಗೆ ಪಾನಕದ ಜೊತೆ ಪ್ರಸಾದ ವಿನಿಯೋಗ ಮಾಡಲಾಯಿತು. ವರದಿ: ಮಂಜುಸ್ವಾಮಿ ಎಂ.ಎನ್. ಕೊರಟಗೆರೆ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್…

Read More

ಬೀದರ್: ಜಿಲ್ಲೆಯ ವಿವಿಧೆಡೆ ಮಹಾಶಿವರಾತ್ರಿ ಪ್ರಯುಕ್ತ ವಿಶಿಷ್ಟವಾಗಿ ಸಾಮಾಜಿಕ ಇಷ್ಟಲಿಂಗ ಪೂಜೆ ನಗರದ ಬಸವ ಮಂಟಪ ಕೆ.ಎಚ್.ಬಿ.ಕಾಲೋನಿಯಲ್ಲಿ ನಡೆಯಿತು. ಇಷ್ಟಲಿಂಗ ಪೂಜೆಯಲ್ಲಿ ಎಲ್ಲಾ ಶರಣರು ಪಾಲ್ಗೊಂಡು ನಂತರ ಎಲ್ಲಾ ಭಕ್ತರು ಹಣ್ಣು ಹಂಪಲು ಸೇವಿಸಿದರು. ಪ್ರಮುಖರಾಗಿ ಸುವರ್ಣ ಚಿಮಕೊಡೇ ಅವರ ನೇತೃತ್ವದಲ್ಲಿ ಕಾರ್ಯಕ್ರಮದಲ್ಲಿ ನಡೆಯಿತು. ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಪಾವಗಡ: ತಾಲ್ಲೂಕಿನ ವೈ.ಎನ್.ಹೊಸಕೋಟೆ ಹೋಬಳಿಯ ಮೇಗಳಪಾಳ್ಯ ತಾಂಡದಲ್ಲಿ ಸಂತ ಸೇವಾಲಾಲ್ ಮಹರಾಜ್ ರವರ 285ನೇ ಜಯಂತೋತ್ಸವವನ್ನು ಲಂಬಾಣಿ ಸಮುದಾಯ ವಿಜೃಂಭಣೆಯಿಂದ ಆಚರಿಸಿತು. ಬೆಳಿಗ್ಗೆ ವಿಶೇಷ ಪೂಜೆ ನೆರವೇರಿದ ನಂತರ ಸಮುದಾಯದ ಹಿರಿಯರು ಸೇರಿ ಅಗ್ನಿಕುಂಡಕ್ಕೆ ವಿವಿಧ ವಸ್ತುಗಳನ್ನು ಸಮರ್ಪಿಸುವ ಮೂಲಕ ಬೋಗ್ ಆಚರಣೆ ನೆರವೇರಿಸಿದರು. ಗ್ರಾಮದ ಹೊರವಲಯದಲ್ಲಿರುವ ಆಂಜನೇಯಸ್ವಾಮಿ ದೇವಾಲಯಕ್ಕೆ ತಂಬಿಟ್ಟು ಜ್ಯೋತಿಗಳೊಂದಿಗೆ ಮೆರವಣಿಗೆ ಸಾಗಿದ ಮಹಿಳೆಯರು ಆರತಿ ಬೆಳಗಿದರು. ಸಂತ ಸೇವಾಲಾಲ್ ರ ಭಾವಚಿತ್ರ ಮೆರವಣಿಗೆ ಹಮ್ಮಿಕೊಳ್ಳಲಾಗಿತ್ತು. ಲಂಬಾಣಿ ಮಹಿಳೆಯರು ಸಾಂಪ್ರದಾಯಿಕ ನೃತ್ಯ ಮಾಡಿದರೆ ಯುವಜನತೆ ವಾದ್ಯಗಳ ತಾಳಕ್ಕೆ ತಕ್ಕಂತೆ ಕುಣಿದು ಸಂತಸ ಹಂಚಿಕೊಂಡರು. ವರದಿ: ನಂದೀಶ್, ಪಾವಗಡ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಪಾವಗಡ: ತಾಲ್ಲೂಕಿನ ಅರಸೀಕೆರೆ ಗ್ರಾಮದ ಸರ್ಕಾರಿ ಪ್ರೌಡಶಾಲೆಯಲ್ಲಿ ಪ್ರತಿ ವರ್ಷ ದಂತೆ ಈ ವರ್ಷವು ಕೂಡಾ 10 ನೇ ತರಗತಿಯ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ, ಶಾರದಾ ಪೂಜಾ ಕಾರ್ಯಕ್ರಮ ಹಾಗೂ ಶಾಲಾ ವಾರ್ಷಿಕೋತ್ಸವ ವನ್ನು ಆಚರಿಸಲಾಯಿತು. ರೇಣುಕರಾಜ್. ಜಿ.ಹೆಚ್. ಪ್ರಾಸ್ತಾವಿಕವಾಗಿ ಮಾತನಾಡಿದರು. ಅತಿಥಿಗಳಾದ ರಂಗಸ್ವಾಮಿ ಎಂ. ವಿದ್ಯಾರ್ಥಿಗಳಿಗೆ ಹಿತನುಡಿಗಳನ್ನು ತಿಳಿಸಿದರು. ಮುಖ್ಯ ಶಿಕ್ಷಕರಾದ ಗೋವಿಂದಪ್ಪ ಓದಿನ ಮಹತ್ವ ವಿವರಿಸಿದರು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿಧ್ಯಾರ್ಥಿಗಳಿಗೆ ಅತಿಥಿಗಳಿಂದ ಬಹುಮಾನ ವಿತರಣೆ ಮಾಡಲಾಯಿತು. ನಂತರ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕ್ರೃತಿಕ ಕಾರ್ಯಕ್ರಮಗಳನ್ನು ನಡೆಸಲಾಯಿತು. ಕಾರ್ಯಕ್ರಮದಲ್ಲಿ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಗುರುರಾಜ್, ಉಪಾಧ್ಯಕ್ಷೆ ಲಕ್ಕಮ್ಮ, ಸದಸ್ಯರುಗಳಾದ ಜಯರಾಮಪ್ಪ, ರತ್ನಮ್ಮ, ಗೀತಮ್ಮ, ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕರಾದ ಸಿದ್ದೇಶ್ವರಪ್ಪ, ಪ್ರೌಢಶಾಲೆ ಮತ್ತು ಪ್ರಾಥಮಿಕ ಶಾಲೆಯ ಶಿಕ್ಷಕ ವರ್ಗ,ಹಳೆಯ ವಿದ್ಯಾರ್ಥಿಗಳು, ಪೋಷಕರುಗಳು ಭಾಗವಹಿಸಿದ್ದರು. ವರದಿ: ನಂದೀಶ್ ನಾಯ್ಕ, ಪಾವಗಡ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ದಾವಣಗೆರೆ: ಬೈಕ್ ಮತ್ತು ಕಾರು ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಕಾಕನೂರ ಗ್ರಾಮದಲ್ಲಿ ನಡೆದಿದೆ. ಸಂತೋಷ(26) ಮೃತಪಟ್ಟ ಸವಾರನಾಗಿದ್ದಾನೆ. ಕಾರ್ ನಲ್ಲಿದ್ದ ಇಬ್ಬರಿಗೆ ಸಣ್ಣ ಪುಟ್ಟಗಾಯಗಳಾಗಿದ್ದು, ಬೈಕ್‌ ಹಿಂಬದಿಯಲ್ಲಿ ಪ್ರಯಾಣಿಸುತ್ತಿದ್ದ ಸಹಸವಾರ ತೀವ್ರವಾಗಿ ಗಾಯಗೊಂಡಿದ್ದಾರೆ ಎನ್ನಲಾಗಿದೆ. ಚನ್ನಗಿರಿ ಕಡೆಯಿಂದ ಸಂತೆ ಬೆನ್ನೂರಿಗೆ ಬರುತ್ತಿದ್ದ ಕಾರು ಹಾಗೂ ಎದುರು ಬರುತ್ತಿರುವ ಬೈಕ್ ಗಳು ಮುಖಾಮುಖಿ ಡಿಕ್ಕಿ ಹೊಡೆದುಕೊಂಡಿದ್ದು, ಬಳಿಕ ಕಾರು ಮತ್ತು ಬೈಕ್ ‌ಗಳು ರಸ್ತೆಯಿಂದ ಕೆಳಗಿನ ಗುಂಡಿಗೆ ಬಿದ್ದಿವೆ. ಗಾಯಾಳುಗಳನ್ನು ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಸಂತೆಬೆನ್ನೂರು ಠಾಣೆಯ‌ ಪೊಲೀಸರು ಸ್ಥಳಕ್ಕೆ ಭೇಟಿ‌ ನೀಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ರಾಮನಗರ: ರಾಮನಗರದ ಕನಕಪುರ ನಗರದ ಮರಳೇಬೇಕುಪ್ಪೆ ವೃತ್ತ ಬಳಿ ಇರುವ ಅರ್ಕಾವತಿ ನದಿಗೆ ಜಿಗಿದು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮುತ್ತು (28) ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಯುವಕನಾಗಿದ್ದಾನೆ. ಕನಕಪುರದ ಸಾಮಿಲ್ ನಲ್ಲಿ ಕೆಲಸ ಮಾಡುತ್ತಿದ್ದ ಮುತ್ತು ಮೂಲತಃ ಮಳವಳ್ಳಿ ತಾಲೂಕಿನ ನಿಂಗನಾಪುರದೊಡ್ಡಿ ನಿವಾಸಿಯಾಗಿದ್ದ. ಬಾಮೈದನ ಜತೆಗೆ ಅರ್ಕಾವತಿ ನದಿ ಬಳಿ ಹೋಗಿದ್ದ ಮುತ್ತು ಬಾಮೈದನಿಗೆ ಕ್ಷಮೆಕೋರಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಅಗ್ನಿಶಾಮಕ ದಳ, ಸ್ಥಳೀಯರ ಸಹಾಯದಿಂದ ಮೃತದೇಹವನ್ನು ಹೊರ ತೆಗೆಯಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ತುಮಕೂರು: ಶಾಲಾ ಆವರಣ ಕಬಳಿಕೆಯಿಂದ ಮಕ್ಕಳ ಶಿಕ್ಷಣಕ್ಕೆ ಧಕ್ಕೆಯಾಗುತ್ತಿರುವ ಬಗೆಗಿನ ದೂರಿಗೆ ಸಂಬಂಧಿಸಿದಂತೆ ನಿಗದಿತ ಅವಧಿಯೊಳಗೆ ವರದಿ ಸಲ್ಲಿಸದ ತುಮಕೂರು ತಾಲ್ಲೂಕು ತಹಶೀಲ್ದಾರರು, ಕ್ಷೇತ್ರಶಿಕ್ಷಣಾಧಿಕಾರಿಗಳು, ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಬೆಳಧರ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯ ಮುಖ್ಯಶಿಕ್ಷಕರಿಗೆ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸಮನ್ಸ್ ಜಾರಿಗೊಳಿಸಿದ್ದು, ವಿಚಾರಣೆ ಹಾಜರಾಗಲು ಸೂಚಿಸಿದೆ. ತುಮಕೂರು ತಾಲ್ಲೂಕಿನ ಬೆಳಧರ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯ ಆವರಣವನ್ನು ಕೆಲವು ವ್ಯಕ್ತಿಗಳು ಕಬಳಿಸಲು ಅತಿಕ್ರಮ ಪ್ರವೇಶ ಮಾಡುತ್ತಿದ್ದು, ಇದರಿಂದಾಗಿ ಮಕ್ಕಳ ಶಿಕ್ಷಣಕ್ಕೆ ಧಕ್ಕೆಯಾಗುತ್ತಿರುವ ಬಗ್ಗೆ ಆಯೋಗಕ್ಕೆ ದೂರು ಸಲ್ಲಿಕೆಯಾಗಿತ್ತು. ಈ ಸಂಬಂಧ ಶಾಲೆಯ ಆಸ್ತಿಯನ್ನು ರಕ್ಷಿಸುವ ಸಂಬಂಧ ಸೂಕ್ತ ಕ್ರಮ ಕೈಗೊಂಡು,  ಕೈಗೊಂಡ ವರದಿಯನ್ನು ಆಯೋಗಕ್ಕೆ ಸಲ್ಲಿಸಲು ಅಧಿಕಾರಿಗಳಿಗೆ ಸೂಚಿಸಲಾಗಿತ್ತು. ಆದರೆ ನಿಗದಿತ ಅವಧಿಯೊಳಗೆ ಯಾವುದೇ ವರದಿ ಬಂದಿಲ್ಲವಾದುದರಿಂದ ತುಮಕೂರು ತಾಲ್ಲೂಕು ತಹಶೀಲ್ದಾರರು, ಕ್ಷೇತ್ರಶಿಕ್ಷಣಾಧಿಕಾರಿಗಳು, ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಶಾಲೆಯ ಮುಖ್ಯಶಿಕ್ಷಕರಿಗೆ ಆಯೋಗವು ಸಮನ್ಸ್ ಜಾರಿಗೊಳಿಸಿದ್ದು ಮಾರ್ಚ್ 19ರಂದು ಈ ಬಗ್ಗೆ ವಿಚಾರಣೆಗೆ…

Read More

ದೆಹಲಿ ಪೋಲೀಸ್‌ ನಲ್ಲಿ ಸಬ್ ಇನ್ಸ್‌ ಪೆಕ್ಟರ್ ಆಗಿ ನಿರ್ಮಲಾ ಸಿಂಗ್ ಮಹಿಳೆಯರ ವಿರುದ್ಧ ಕನಿಷ್ಠ 100 ಅಪರಾಧ ಪ್ರಕರಣಗಳನ್ನು ತನಿಖೆ ಮಾಡಿದ್ದಾರೆ. ಆದರೆ ಈಗ ಅವರು ನ್ಯಾಯಾಧೀಶರಾಗಿ ಹಲವಾರು ಮಹಿಳೆಯರಿಗೆ ನ್ಯಾಯವನ್ನು ಖಚಿತಪಡಿಸಿಕೊಳ್ಳಲು ಸಿದ್ಧರಾಗಿದ್ದಾರೆ. 34 ವರ್ಷದ ನಿರ್ಮಲ ಸಿಂಗ್ ಅವರು 2022 ರ ದೆಹಲಿ ನ್ಯಾಯಾಂಗ ಸೇವೆಗಳ ಪರೀಕ್ಷೆಯನ್ನು (DJS) ಪಡೆದಿರುವುದರಿಂದ ಶೀಘ್ರದಲ್ಲೇ ನ್ಯಾಯಾಧೀಶರಾಗುತ್ತಾರೆ. ಹರಿಯಾಣದ ಪಲ್ವಾಲ್ ಜಿಲ್ಲೆಯ ಸಣ್ಣ ಹಳ್ಳಿಯಿಂದ ಬಂದ ಸಿಂಗ್, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳಿಗೆ ಸ್ಫೂರ್ತಿಯಾಗಿದ್ದಾರೆ. ಅವರು ಸ್ಪರ್ಧೆಗಳಿಗೆ ಅಧ್ಯಯನ ಮಾಡಲು ಪ್ರಾರಂಭಿಸಿದಾಗ, ಅವರು ನ್ಯಾಯಾಧೀಶರಾಗುವ ಬಗ್ಗೆ ಯೋಚಿಸಿರಲಿಲ್ಲ. “ನನ್ನ ಕುಟುಂಬದಲ್ಲಿ ಮತ್ತು ಸಂಬಂಧಿಕರಲ್ಲಿ, ಯಾರೂ ನ್ಯಾಯಾಂಗದಲ್ಲಿ ಅಥವಾ ದೆಹಲಿ ಪೊಲೀಸ್‌ ಇಲಾಖೆಯಲ್ಲಿ ಇರಲಿಲ್ಲ. ನಾನು ಫೌಜಿಗಳ ಕುಟುಂಬದಿಂದ ಬಂದಿದ್ದೇನೆ ಮತ್ತು ಅವರಂತೆಯೇ ನಾನು ಕೂಡ ಏನಾದರೂ ಮಾಡುವ ಮೂಲಕ ಸಮಾಜಕ್ಕೆ ಸೇವೆ ಸಲ್ಲಿಸಲು ಬಯಸುತ್ತೇನೆ” ಎಂದು ಸಿಂಗ್ ಹೇಳಿದರು, 2014 ರಲ್ಲಿ, ದೆಹಲಿ ವಿಶ್ವವಿದ್ಯಾನಿಲಯದಿಂದ  ಪದವಿಯನ್ನು ಪೂರ್ಣಗೊಳಿಸಿದ ನಂತರ, ದೆಹಲಿ…

Read More

ಬೆಂಗಳೂರು: ಪತ್ರಕರ್ತರ ಜೀವಕ್ಕೆ ಯಾವುದೇ ರಕ್ಷಣೆ ಇಲ್ಲ ರಾಜ್ಯದಲ್ಲಿ ಪತ್ರಕರ್ತರು ಸುದ್ದಿ ಮಾಡುವ ಸಂದರ್ಭದಲ್ಲಿ ಎಷ್ಟು ಹಲ್ಲೆ ಮತ್ತು ಕೊಲೆಗಳಾಗಿರುವ ಉದಾಹರಣೆಗಳಿವೆ. ಆದ್ದರಿಂದ ಸರ್ಕಾರ ಕೂಡಲೇ ರಕ್ಷಣಾ ಕಾಯ್ದೆ ಜಾರಿಗೆ ತರಬೇಕು ಎಂದು ಕಾ.ನಿ.ಪ.ಧ್ವನಿ ಸಂಘಟನೆ ರಾಜ್ಯಾಧ್ಯಕ್ಷ  ಮಲ್ಲಿಕಾರ್ಜುನ್ ಬಂಗ್ಲೆ ಸರ್ಕಾರವನ್ನು ಒತ್ತಾಯಿಸಿದರು. ಅವರು ಬೆಂಗಳೂರಿನ ಪ್ರೀಡಂ ಪಾರ್ಕನಲ್ಲಿ ಕಾ.ನಿ. ಪತ್ರಕರ್ತರ ದ್ವನಿ ಸಂಘಟನೆ ವತಿಯಿಂದ ಆಯೋಜಿಸಿದ್ದ ಪ್ರತಿಭಟನೆ ಉದ್ದೇಶಿಸಿ ಮಾತನಾಡಿದರು. ಕಾ.ನಿ.ಪ.ದ್ವನಿ ಕೆಲವೇ ದಿನಗಳಲ್ಲಿ ಪತ್ರಕರ್ತರ ನಾನಾ ಬೇಡಿಕೆಗಳ ಮುಂದಿಟ್ಟು ಸಾವಿರಾರು ಪತ್ರಕರ್ತರ ಜೊತೆ ಹೋರಾಟ ಮಾಡಲಾಗಿದೆ. ಪತ್ರಕರ್ತರ ಜೀವ ರಕ್ಷಣಾ ಕಾಯ್ದೆ ಬಹು ಮುಖ್ಯವಾಗಿದೆ.  ಹಲವು ಮೂಲಭೂತ ಸೌಕರ್ಯಗಳ ಬಗ್ಗೆ ಬೆಂಗಳೂರಿನ ಪ್ರೀಡಂ ಪಾರ್ಕ್ ಸೇರಿದಂತೆ ಹಲವು ಭಾಗಗಳಲ್ಲಿ ಪ್ರತಿಭಟನೆ ಮಾಡಲಾಗಿತ್ತು. ಪ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸಿದ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ಸಲಹೆಗಾರರಾದ ಪ್ರಭಾಕರ್ ಅವರೇ ನೇರವಾಗಿ ಪ್ರತಿಭಟನಾ ಸ್ಥಳಕ್ಕೆ ಬಂದು ಮನವಿ ಪತ್ರ ಸ್ವೀಕರಿಸಿದ್ದರು. ಅದೇ ರೀತಿ ಬೆಳಗಾಂ ಅಧಿವೇಶನ ಸಂದರ್ಭದಲ್ಲಿ ಸುವರ್ಣ ಸೌಧದ ಮುಂದೆ ಪ್ರತಿಭಟನೆ…

Read More

ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬೆಳಿಗ್ಗೆ ಅಸ್ಸಾಂನ ಕಾಜಿರಂಗ ರಾಷ್ಟ್ರೀಯ ಉದ್ಯಾನವನ ಮತ್ತು ಹುಲಿ ಮೀಸಲು ಪ್ರದೇಶದಲ್ಲಿ ಆನೆ ಮತ್ತು ಜೀಪ್ ಸಫಾರಿಯನ್ನು ಕೈಗೊಂಡಿದ್ದಾರೆ. ಪ್ರಧಾನಿ ಮೋದಿ ಅವರು ಯುನೆಸ್ಕೋ ವಿಶ್ವ ಪರಂಪರೆಯ ತಾಣಕ್ಕೆ ತಮ್ಮ ಮೊದಲ ಭೇಟಿಯಲ್ಲಿ , ಮೊದಲು ಉದ್ಯಾನವನದ ಮಧ್ಯ ಕೊಹೋರಾ ಶ್ರೇಣಿಯ ಮಿಹಿಮುಖ್ ಪ್ರದೇಶದಲ್ಲಿ ಆನೆ ಸಫಾರಿಯನ್ನು ಕೈಗೊಂಡರು ಬಳಿಕ ಜೀಪ್ ನಲ್ಲಿ ಸಫಾರಿಯನ್ನು ಕೈಗೊಂಡಿದ್ದಾರೆ. ಅವರು ಇಂದು ಜೋರ್ಹತ್ನಲ್ಲಿ ಪ್ರಸಿದ್ಧ ಅಹೋಮ್ ಜನರಲ್ ಲಚಿತ್ ಬರ್ಫುಕನ್ ಅವರ 125 ಅಡಿ ಎತ್ತರದ ‘ಶೌರ್ಯದ ಪ್ರತಿಮೆ’ ಯನ್ನು ಉದ್ಘಾಟಿಸಲಿದ್ದು, ನಂತರ ಪ್ರಧಾನಮಂತ್ರಿಯವರು ಜೋರ್ಹತ್ ಜಿಲ್ಲೆಯಲ್ಲಿರುವ ಮೆಲೆಂಗ್ ಮೆಟೆಲಿ ಪೋಥಾರ್ಗೆ ತೆರಳಲಿದ್ದು, ಅಲ್ಲಿ ಅವರು ಸುಮಾರು 18,000 ಕೋಟಿ ರೂಪಾಯಿ ಮೌಲ್ಯದ ಕೇಂದ್ರ ಮತ್ತು ರಾಜ್ಯ ಯೋಜನೆಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಲಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296…

Read More