Author: admin

ಲೋಕಸಭಾ ಚುನಾವಣೆ ಸದ್ದಿಲ್ಲದೆ ಕಾವೇರುತ್ತಿದೆ. ಈಗಾಗಲೇ ಕೆಲವು ಪಕ್ಷಗಳು ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿ ರಣಕಹಳೆ ಊದಿವೆ. ಸಮೀಕ್ಷೆಗಳೂ ಬಿಡುಗಡೆಯಾಗುತ್ತಿವೆ. ಈ ನಡುವೆ ಸಿಎಂ ಕಾಂಗ್ರೆಸ್ ನೇತಾರ ರಾಹುಲ್ ಗಾಂಧಿ ಅವರು 5 ಹೊಸ ಗ್ಯಾರಂಟಿ ಘೋಷಿಸಿದ್ದಾರೆ. ಹೌದು, ಕೇಂದ್ರದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ 30 ಲಕ್ಷ ಹುದ್ದೆಗಳ ಭರ್ತಿ, ಪ್ರಶ್ನೆಪತ್ರಿಕೆ ಸೋರಿಕೆ ತಡೆಗೆ ಕಾನೂನು, ಡಿಪ್ಲೊಮಾ ಪದವೀಧರರಿಗೆ ಶಿಷ್ಯವೇತನ, ‌ ಕಾರ್ಮಿಕರ ಭದ್ರತೆಗೆ ಕಾನೂನು ಸೇರಿದಂತೆ ವಿವಿಧ ಗ್ಯಾರಂಟಿಗಳನ್ನು ನೀಡುವುದಾಗಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ  ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಚಿಕ್ಕಬಳ್ಳಾಪುರ: ಅಪ್ರಾಪ್ತೆ ಮೇಲೆ ಯುವಕನೋರ್ವ ಲೈಂಗಿಕ ದೌರ್ಜನ್ಯವನ್ನು ಎಸಗಿದ್ದು, 7ನೇ ತರಗತಿಯ ವಿದ್ಯಾರ್ಥಿನಿ ಇದೀಗ 5 ತಿಂಗಳ ಗರ್ಭಿಣಿಯಾಗಿದ್ದಾಳೆ. ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. 7ನೇ ತರಗತಿ ವಿದ್ಯಾರ್ಥಿನಿ ಮೇಲೆ ಸಂಬಂಧಿ ಯುವಕನಿಂದಲೇ ಅತ್ಯಾಚಾರದ ಆರೋಪ ಕೇಳಿ ಬಂದಿದೆ. ಲೈಂಗಿಕ ಸಂಪರ್ಕ ಬೆಳೆಸಿದ ಪರಿಣಾಮ ಆಕೆ ಗರ್ಭಿಣಿಯಾಗಿದ್ದಾಳೆ. ಈ ಬಗ್ಗೆ ತಿಳಿದು ಬಾಲಕಿಯ ಪಾಲಕರು ಕಂಗಾಲಾಗಿದ್ದಾರೆ.ಈ ವಿಚಾರವನ್ನು ಸ್ಥಳೀಯರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಓದುವ ವಯಸ್ಸಿನಲ್ಲಿ ಗರ್ಭಿಣಿಯಾದ ಅಪ್ರಾಪ್ತೆಯನ್ನು ರಕ್ಷಿಸಿ ಸರ್ಕಾರಿ ಬಾಲಕಿಯರ ಬಾಲಮಂದಿರಲ್ಲಿ ಆರೈಕೆ ಮಾಡಲಾಗುತ್ತಿದೆ. ಚಿಕ್ಕಬಳ್ಳಾಪುರ ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ. ಈ ಸಂಬಂಧ ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಬೆಂಗಳೂರು: ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಿದ್ದು, ಸಾಕಷ್ಟು ಚರ್ಚೆಗೆ ಗ್ರಾಸವಾಗಿದ್ದ ತುಮಕೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಮುದ್ದಹನುಮೇಗೌಡ ಅವರ ಪಾಲಾಗಿದೆ. ನವದೆಹಲಿಯ ಎಐಸಿಸಿ ಕಚೇರಿಯಲ್ಲಿ ಕೆ.ಸಿ.ವೇಣುಗೇಪಾಲ್‌, ಅಜಯ್ ಮಕೇನ್‌, ಪವನ್ ಖೇರಾ ಅವರು ಸುದ್ದಿಗೋಷ್ಠಿ ನಡೆಸಿ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದ್ದಾರೆ. ಕರ್ನಾಟಕದ 7 ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳನ್ನು ಘೋಷಿಸಲಾಗಿದೆ.  ಇದೀಗ ಬಿಡುಗಡೆಯಾಗಿರುವ 7 ಲೋಕಸಭಾ ಕ್ಷೇತ್ರದ ಅಭ್ಯರ್ಥಿಗಳ ಪಟ್ಟಿ ಇಲ್ಲಿದೆ. ಶಿವಮೊಗ್ಗ: ಗೀತಾ ಶಿವರಾಜ್ ಕುಮಾರ್ ಬೆಂಗಳೂರು ಗ್ರಾಮಾಂತರ- ಡಿ.ಕೆ.ಶಿವಕುಮಾರ್ ತುಮಕೂರು: ಮುದ್ದಹನುಮೇಗೌಡ ಹಾಸನ-ಶ್ರೇಯಸ್ ಪಟೇಲ್ ವಿಜಯಪುರ: ಎಸ್.ಆರ್.ಆಲಗೂರು ಹಾವೇರಿ: ಆನಂದ್ ಗಡ್ಡ ದೇವರಮಠ ಮಂಡ್ಯ: ವೆಂಕಟರಾಮೇಗೌಡ (ಸ್ಟಾರ್ ಚಂದ್ರು) ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಅಕ್ಕಿ ತೊಳೆದ ನೀರಿನಿಂದ ಆಗುವ ಪ್ರಯೋಜನಗಳು: ಅಕ್ಕಿಯನ್ನು ಸ್ವಲ್ಪ ಸಮಯದವರೆಗೆ ನೀರಿನಲ್ಲಿ ನೆನೆಸಿ ತೊಳೆದ ನೀರಿನಲ್ಲಿ ಅನೇಕ ಜೀವಸತ್ವಗಳು, ಖನಿಜಗಳು, ಅಮೈನೋ ಆಮ್ಲಗಳು ಮತ್ತು ಆರೋಗ್ಯಕರ ಪೋಷಕಾಂಶಗಳಿವೆ. ಇವು ಚರ್ಮವನ್ನು ಹೊಳೆಯುವಂತೆ ಮಾಡುತ್ತದೆ. ಇದು ಚರ್ಮವನ್ನು ಮೃದುಗೊಳಿಸುವ ಉತ್ಕರ್ಷಣ ನಿರೋಧಕಗಳು ಮತ್ತು ಫೆರುಲಿಕ್ ಆಮ್ಲವನ್ನು ಹೊಂದಿರುತ್ತದೆ. ಇವು ಚರ್ಮವನ್ನು ಪುನರುಜ್ಜೀವನಗೊಳಿಸಲು ಸಹಾಯ ಮಾಡುತ್ತದೆ. ನಿಮ್ಮ ಒಣಕೂದಲನ್ನು ಸುಗಮಗೊಳಿಸುತ್ತದೆ ಮತ್ತು ಹೆಚ್ಚು ಹೊಳಪನ್ನು ನೀಡುತ್ತದೆ.ನಿಮ್ಮ ಕೂದಲಿಗೆ ಅಕ್ಕಿ ನೀರನ್ನು ಹಚ್ಚಿ ಒಂದು ಗಂಟೆಗೂ ಕಾಲ ಹೆಚ್ಚು ಇರಿಸಿ ನಂತರದಲ್ಲಿ ಸೌಮ್ಯವಾದ ಶಾಂಪೂವಿನಿಂದ ತೊಳೆಯಿರಿ. ಅನಂತರದಲ್ಲಿ ಕಂಡೀಷನರ್ ಬಳಸಿ.ಇದು ನೀವು ನಿಮ್ಮ ಕೂದಲಿಗೆ ಮಾಡಿಕೊಳ್ಳುವ ಉತ್ತಮ ಆರೈಕೆಯಾಗಿದೆ. ನಿಮ್ಮ ಸ್ನಾನಕ್ಕೆ ಸ್ವಲ್ಪ ಅಕ್ಕಿ ನೀರು ಸೇರಿಸಿ, ಇದು ನಿಮ್ಮ ದೇಹವನ್ನು ಉದ್ವೇಗ ಮತ್ತು ಆಯಾಸಗೊಂಡಿದ್ದರೆ ಅದನ್ನು ಶಮನಗೊಳಿಸಿ ನಿಮ್ಮ ಮನಸ್ಸನ್ನು ಉಲ್ಲಸಿತವಾಗಿ ಇರುವಂತೆ ಮಾಡುತ್ತದೆ. ಅಕ್ಕಿ ನೀರನ್ನು ಸೇವಿಸುವುದರಿಂದ ಇದು ದೇಹದ ಉಷ್ಣತೆಯನ್ನು ನಿಯಂತ್ರಿಸುತ್ತದೆ. ಬೇಸಿಗೆಗೆ ಉತ್ತಮವಾದ ಪಾನೀಯವಾಗಿದೆ.ನಿಮ್ಮ ದೇಹವನ್ನು ತಂಪಾಗಿಸುತ್ತದೆ ಮತ್ತು ತೇವಾಂಶದಿಂದ…

Read More

ಬೆಂಗಳೂರು: ಈ ಬಾರಿಯ ಲೋಕಸಭಾ ಚುನಾವಣೆಗೆ ಕೆಲವರನ್ನು ವಯಸ್ಸು, ಆರೋಗ್ಯ ಕಾರಣದಿಂದ ಬದಲಾವಣೆ ಮಾಡಲಾಗುತ್ತದೆ. ಬಹುತೇಕ ಚರ್ಚೆ ಒಂದು ಹಂತಕ್ಕೆ ಬಂದಿದ್ದು, ಗೊಂದಲ ಇರುವ ಕೆಲ ಕ್ಷೇತ್ರಗಳ ಬಗ್ಗೆ ಚರ್ಚೆ ಆಗಬೇಕಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎರಡು ದಿನಗಳ ಕಾಲ ದೆಹಲಿಯಲ್ಲಿ ಸಭೆ ನಡೆಸಲಾಯ್ತು. ದೆಹಲಿಗೆ ನಮ್ಮನ್ನ ನಮ್ಮ ರಾಷ್ಟ್ರೀಯ ನಾಯಕರು ಕರೆದಿದ್ರು. ರಾಜ್ಯದ ಲೋಕಸಭಾ ಚುನಾವಣೆ ತಯಾರಿ, ಅಭ್ಯರ್ಥಿಗಳ ಪಟ್ಟಿ ಬಗ್ಗೆ ಚರ್ಚೆ ಮಾಡಿದ್ದಾರೆ. ಒಂದು ಸುತ್ತಿನ ಮಾತುಕತೆ ನಡೆದಿದೆ. ರಾಜ್ಯ ಕೋರ್ ಕಮಿಟಿ ಕಳಿಸಿದ್ದ ಪಟ್ಟಿ ಬಗ್ಗೆ ಚರ್ಚೆ ಆಗಿದೆ. ಸವಿಸ್ತಾರವಾಗಿ ಅಮಿತ್ ಶಾ, ಜೆ.ಪಿ ನಡ್ಡಾ, ಸಂತೋಷ್ ಅವರ ಜೊತೆ ಚರ್ಚೆ ಆಗಿದೆ. ಅಭ್ಯರ್ಥಿಗಳ ಮಾಹಿತಿ, ಹಿನ್ನೆಲೆ ತಗೊಂಡಿದ್ದಾರೆ ಎಂದರು. ಈ ಬಾರಿಯೂ ಅಚ್ಚರಿ ಮತ್ತು ಹೊಸಮುಖಗಳಿಗೆ ಟಿಕೆಟ್ ಸಿಗಬಹುದು. ಜೆಡಿಎಸ್ ಗೆ ಯಾವುದೆಲ್ಲ ಕ್ಷೇತ್ರ ಬಿಟ್ಟು ಕೊಡಬೇಕು ಅಂತಾನೂ ಚರ್ಚೆ ಆಗಿದೆ. ಕುಮಾರಸ್ವಾಮಿ ಅವರು ಅರೋಗ್ಯ ಸರಿ ಇಲ್ಲ…

Read More

ಕಲಬುರ್ಗಿ: ಲೋಕಸಭಾ ಚುನಾವಣೆ ಬಳಿಕ ರಾಜ್ಯ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂದು ಭವಿಷ್ಯ ನುಡಿದಿರುವ ಬಿಜೆಪಿ ಶಾಸಕ ಬಸನಗೌದ ಪಾಟೀಲ್ ಯತ್ನಾಳ್ ಹೇಳಿಕೆಗೆ ಸಚಿವ ಮಧು ಬಂಗಾರಪ್ಪ ಕಿಡಿಕಾರಿದ್ದಾರೆ. ಕಲಬುರ್ಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಮಧು ಬಂಗಾರಪ್ಪ, ಯತ್ನಾಳ್ ಗೆ ಮಾಡಲು ಕೆಲಸವಿಲ್ಲ, ಬಸ್ ನಿಲ್ದಾಣದಲ್ಲಿ ಕುಳಿತು ಭವಿಷ್ಯ ಹೇಳಲಿ ಎಂದಿದ್ದಾರೆ. ಇದೇ ವೇಳೆ ಕಾಂಗ್ರೆಸ್ ಜನರನ್ನು ಹುಚ್ಚರನ್ನಾಗಿಸುತ್ತಿದೆ ಎಂಬ ಸಂಸದ ಅನಂತ ಕುಮಾರ್ ಹೆಗಡೆ ಹೇಳಿಕೆ ತಿರುಗೇಟು ನೀಡಿರುವ ಸಚಿವರು, ಅನಂತ ಕುಮಾರ್ ಹೆಗಡೆಯೇ ದೊಡ್ಡ ಹುಚ್ಚ. ಆತ ಎಲೆಕ್ಷನ್ ಬರುವವರೆಗೂ ಮಲ್ಕೊಂಡಿರ್ತಾನೆ. ಎಲೆಕ್ಷನ್ ಬಂದ ಬಳಿಕ ಎದ್ದು ಬರ್ತಾನೆ. ಈ ಬಾರಿ ಆತನನ್ನು ರಾಜಕೀಯವಾಗಿ ಪರ್ಮನೆಂಟ್ ಆಗಿ ಮಲಗಿಸುತ್ತೇವೆ ಎಂದು ಕಿಡಿಕಾರಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಕೊಡಗು:  ಕಾವೇರಿ ನದಿಯಲ್ಲಿ ಮುಳುಗಿ ಮೂವರು ಯುವಕರು ಮೃತಪಟ್ಟ ಘಟನೆ  ಕೊಡಗು ಜಿಲ್ಲೆ ಕುಶಾಲ ನಗರ ಸಮೀಪದ ಕೂಡಿಗೆಯಲ್ಲಿ ಸಂಭವಿಸಿದೆ. ಕುಶಾಲ ನಗರದ ಕೂಡಿಗೆಯಲ್ಲಿ ಕಾವೇರಿ ನದಿಗೆ ಈಜಲು ತೆರಳಿದ್ದ ಮೂವರು ಯುವಕರಾದ ವಿನೋದ್, ಸಚಿನ್, ಶ್ರೀನಿವಾಸ್ ಎಂಬ ಯುವಕರು ಮೃತಪಟ್ಟಿದ್ದಾರೆ. ಯುವಕರು ಒಂದೇ ಕಾರಿನಲ್ಲಿ ಬಂದಿದ್ದರು ಎನ್ನಲಾಗಿದೆ. ಕಾರು ನದಿಯ ಬದಿಯಲ್ಲಿ ನಿಂತಿದೆ. ಈಜಲು ತೆರಳಿದ್ದ ಮೂವರು ನೀರಿನಲ್ಲಿ ಮುಳುಗಿ‌ ಸಾವನ್ನಪ್ಪಿರುವ ಶಂಕೆ ಇದೆ. ಸ್ಥಳಕ್ಕೆ ಕುಶಾಲನಗರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಗ್ನಿಶಾಮಕ ಸಿಬ್ಬಂದಿಗಳು ನಾಪತ್ತೆಯಾದವರ ಹುಡುಕಾಟ ನಡೆಸುತ್ತಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಮಡಿಕೇರಿ: ನವಜಾತ ಶಿಶುವಿನ ಮೃತದೇಹವೊಂದು ಕೊಡಗು ಜಿಲ್ಲೆ ಸುಂಟಿಕೊಪ್ಪ ಸಮೀಪದ ಗದ್ದೆಹಳ್ಳದ ಚೆಟ್ಟಳ್ಳಿ ರಸ್ತೆಯಲ್ಲಿರುವ ಯಂಕನ ದೇವರಾಜು ಎಂಬುವವರ ಗದ್ದೆಯಲ್ಲಿ ಮಣ್ಣಿನೊಳಗೆ ಪತ್ತೆಯಾಗಿದೆ. ಗುರುವಾರ ಬೆಳಿಗ್ಗೆ ಈ ಘಟನೆ ನಡೆದಿದ್ದು, ಗದ್ದೆಯಲ್ಲಿ ಯಾರೋ ಗುಂಡಿ‌ ಅಗೆದು ಹಾಕುತ್ತಿರುವುದನ್ನು ಸ್ಥಳೀಯರು ನೋಡಿಧ್ದರೂ ಸತ್ತ ಪ್ರಾಣಿಗಳ ಮೃತದೇಹವನ್ನು ಹೂಳಿರಬಹುದು ಎಂದು ಭಾವಿಸಿದ್ದರು. ಆದರೂ ಸಂಜೆ ವೇಳೆಗೆ ಸ್ಥಳೀಯರಲ್ಲಿ ಸಂಶಯ ಮೂಡಿ ಆ ಸ್ಥಳದ ಮಣ್ಣನ್ನು ತೆಗೆದು ನೋಡಿದಾಗ ಇಂದೇ ಜನಿಸಿದ ಮಗುವಿನ ಮೃತದೇಹ ಕಂಡುಬಂದಿದೆ. ಈ ಮೃತದೇಹವನ್ನು ಮಣ್ಣಿನಲ್ಲಿ ಹೂತು ಹಾಕಿದ್ದು ಯಾರು? ಯಾಕಾಗಿ ಹೂತು ಹಾಕಿದರು? ಎಂಬ ಪ್ರಶ್ನೆಗಳು ಗೊಂದಲಕ್ಕೀಡು ಮಾಡಿದೆ. ಸ್ಥಳಕ್ಕೆ ಸುಂಟಿಕೊಪ್ಪ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಮುಂದಿನ ಕ್ರಮ ಕೈಗೊಂಡಿದ್ದಾರೆ. ಈ ಮಗುವಿನ ಸಾವಿನ ಬಗ್ಗೆ ನಿಖರವಾದ ಮಾಹಿತಿ ಸಿಕ್ಕದ ಹಿನ್ನಲೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಔರಾದ: ಇಲ್ಲಿನ ಹಂದಿಖೇರಾ ಗ್ರಾಮದಲ್ಲಿ ಸೂಕ್ತ ರಸ್ತೆ, ಚರಂಡಿ ವ್ಯವಸ್ಥೆ ಇಲ್ಲದಿರುವುದರಿಂದ ರಸ್ತೆಗಳೇ ಚರಂಡಿಯಂತಾಗಿವೆ. ಇದರಿಂದ ಗ್ರಾಮಸ್ಥರು ಬೇಸತ್ತು ಹೋಗಿದ್ದಾರೆ. ಚಿಮ್ಮೆಗಾಂವ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ಈ ಗ್ರಾಮದಲ್ಲಿ ಸುಮಾರು 300 ಮನೆಗಳಿವೆ. ಆದರೆ ಸೂಕ್ತ ಚರಂಡಿ ಇಲ್ಲದಿರುವುದರಿಂದ ಹೊಲಸು ನೀರು ರಸ್ತೆಯ ಮೇಲೆಯೇ ಹರಿಯುತ್ತಿದೆ. ಇದರಿಂದ ಎಲ್ಲೆಡೆ ದುರ್ವಾಸನೆ ಬೀರುತ್ತಿದೆ. ಕೊಳಚೆ ನೀರಿನ ಮೇಲೆಯೇ ಮಕ್ಕಳು, ಮಹಿಳೆಯರು, ವಯೋವೃದ್ಧರು ನಿತ್ಯ ಓಡಾಟ ಮಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಇದರಿಂದ ಗ್ರಾಮಸ್ಥರಿಗೆ ಸಾಂಕ್ರಾಮಿಕ ರೋಗ ಭೀತಿ ಕಾಡುತ್ತಿದೆ. ಗ್ರಾಮದ ಅಭಿವೃದ್ಧಿ ಮಾಡಬೇಕಾದ ಅಧಿಕಾರಿಗಳು ಮಾತ್ರ ಇದಕ್ಕೂ ನಮಗೂ ಸಂಬಂಧವಿಲ್ಲ ಎನ್ನುವಂತೆ ವರ್ತಿಸುತ್ತಿರುವುದು ಅವರ ಬೇಜವಾಬ್ದಾರಿತನಕ್ಕೆ ಸಾಕ್ಷಿಯಾಗಿದೆ ಎಂದು ಗ್ರಾಮಸ್ಥರು ದೂರಿದಾರೆ. ಈಗಾಗಲೇ ಹಲವು ಬಾರಿ ಇಲ್ಲಿನ ಅವ್ಯವಸ್ಥೆಯ ಬಗ್ಗೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗೆ ತಿಳಿಸಲಾಗಿದೆ. ಆದರೂ ಕೂಡ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿಲ್ಲ, ಬದಲಾಗಿ ಎರಡು ಮೂರು ದಿನಗಳಲ್ಲಿ ಬಂದು ಸರಿಪಡಿಸುತ್ತೇವೆ ಎಂದು ಹೇಳುತ್ತಾರೆ. ಆದರೆ ಸ್ಥಳಕ್ಕೆ ಬರುವುದೇ…

Read More

ದೆಹಲಿ: ತಂದೆಯೇ ಮಗನಿಗೆ ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಘಟನೆ ದೆಹಲಿಯಲ್ಲಿ ನಡೆದಿದ್ದು, ಮದುವೆ ಗೆಲವೇ ಗಂಟೆಗಳು ಬಾಕಿ ಇರುವಾಗ ಈ ಘಟನೆ ನಡೆದಿದೆ. 29 ವರ್ಷದ ಜಿಮ್ ತರಬೇತುದಾರ ಗೌರವ್ ಸಿಂಘಾಲ್ ಮೃತ ದುರ್ದೈವಿಯಾಗಿದ್ದಾನೆ. ರಕ್ತದ ಮಡುವಿನಲ್ಲಿ ಬಿದ್ದ ಗೌರವ್ ಎಂಬಾತನನ್ನು ತಕ್ಷಣ ಆಸ್ಪತ್ರೆಗೆ ಕರೆದುಕೊಂಡು ಹೋಯಿತಾದರೂ ಯಾವುದೇ ಪ್ರಯೋಜನವಾಗಲಿಲ್ಲ. ಮದುವೆಗೆ ಇನ್ನು ಕೆಲವೇ ಗಂಟೆಗಳು ಬಾಕಿ ಇರುವಾಗ ಜಿಮ್ ಟ್ರೈನರ್ನನ್ನು ತಂದೆಯೇ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾರೆ. ಮನೆಯಲ್ಲಿ ಮುಂಜಾನೆ, ಮದುವೆಗೂ ಕೆಲವೇ ಗಂಟೆಗಳ ಮೊದಲು ಅವರ ಎದೆಗೆ 15 ಬಾರಿ ಇರಿಯಲಾಗಿದ್ದು, ಕೊಲೆಯ ಪ್ರಮುಖ ಆರೋಪಿಯಾಗಿರುವ ತಂದೆಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಕೊಲೆಯ ಹಿಂದಿನ ಉದ್ದೇಶ ಇನ್ನೂ ಸ್ಪಷ್ಟವಾಗಿಲ್ಲ, ಇಲ್ಲಿಯವರೆಗೆ, ತಂದೆ ಮತ್ತು ಮಗನ ನಡುವೆ ವೈಮನಸ್ಸು ಇತ್ತು ಎಂದಷ್ಟೇ ತಿಳಿದುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಮುಖ ಆರೋಪಿಯ ಬಂಧನದ ನಂತರ ಎಲ್ಲವೂ ಸ್ಪಷ್ಟವಾಗುತ್ತದೆ ಎಂದು ಅಧಿಕಾರಿ ಹೇಳಿದರು. ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಏಮ್ಸ್ ಶವಾಗಾರಕ್ಕೆ…

Read More