Author: admin

ಕೋಲಾರ: ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಕೋಡಿಪಲ್ಲಿ ಗ್ರಾಮದಲ್ಲಿ ತಾಯಿ, ಮಗು ಕಾಲು ಜಾರಿ ಕೆರೆಗೆ ಬಿದ್ದು ಮೃತಪಟ್ಟ ಘಟನೆ ನಡೆದಿದೆ. ಗೀತಾ (26) ಯಶವಂತ್ (6) ಮೃತ ದುರ್ದೈವಿಗಳಾಗಿದ್ದಾರೆ. ಕೋಡಿಪಲ್ಲಿ ಗ್ರಾಮದ ಸಂಬಂಧಿಕರ ಮನೆಗೆ ಬಂದಿದ್ದ ವೇಳೆ ಯಶವಂತ್ ಕಾಲು ಜಾರಿ ಕೆರೆಗೆ ಬಿದ್ದಿದ್ದು, ಆತನನ್ನು ರಕ್ಷಿಸಲು ಹೋದ ಗೀತಾ ಕೂಡ ನೀರುಪಾಲಾಗಿದ್ದಾರೆ. ಗೌನಿಪಲ್ಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಚಿತ್ರದುರ್ಗ: ಹೆರಿಗೆ ಬಳಿಕ ಮಗುವಿಗೆ ಚಿಕಿತ್ಸೆ ನೀಡದೇ 4 ದಿನದ ಹಸುಗೂಸು ಸಾವನ್ನಪ್ಪಿದ್ದು, ಚಿತ್ರದುರ್ಗ ಜಿಲ್ಲಾಸ್ಪತ್ರೆಯ ವೈದ್ಯರ ವಿರುದ್ಧ ನಿರ್ಲಕ್ಷ್ಯ ಆರೋಪ ಕೇಳಿ ಬಂದಿದೆ. ವೈದ್ಯರ ವಿರುದ್ಧ ಮೃತ ಮಗುವಿನ ಸಂಬಂಧಿಕರು ಆರೋಪಿಸಿದ್ದಾರೆ. 4 ದಿನದ ಹಿಂದೆ ಹೆರಿಗೆಗಾಗಿ ಕವಿತಾ ಅವರು ಆಸ್ಪತ್ರೆಗೆ ದಾಖಲಾಗಿದ್ದರು. ಹೆರಿಗೆ ಬಳಿಕ ಮಗುವಿಗೆ ಚಿಕಿತ್ಸೆ ನೀಡದೇ ವೈದ್ಯರ ನಿರ್ಲಕ್ಷ್ಯ ತೋರಿದ್ದಾರೆ. ಮಕ್ಕಳ ತಜ್ಞ ವೈದ್ಯ‌ ಶ್ರೀರಾಮ್ ವಿರುದ್ಧ ಸಂಬಂಧಿಕರು ಆರೋಪಿಸಿದ್ದಾರೆ. ಈ ಹಿನ್ನಲೆ ಜಿಲ್ಲಾ ಸರ್ಜನ್ ಡಾ.ರವೀಂದ್ರ ಅವರು ಈ ಕುರಿತು ಸೂಕ್ತ ಕ್ರಮದ ಭರವಸೆ‌ ನೀಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296  

Read More

ನವದೆಹಲಿ: ಇನ್‌ಫೋಸಿಸ್‌ ಸಹಸಂಸ್ಥಾಪಕಿ ಸುಧಾ ಮೂರ್ತಿಯವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಲಾಗಿದೆ. ಈ ಕುರಿತು ಪ್ರಧಾನಿ ಮೋದಿ ಈ ಕುರಿತು ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಪ್ರಧಾನಿ ಮೋದಿ ಸುಧಾ ಮೂರ್ತಿ ನಾಮನಿರ್ದೇಶನಕ್ಕೆ ಸಂತಸ ವ್ಯಕ್ತಪಡಿಸಿ ಅವರಿಗೆ ಅಭಿನಂದಿಸಿದ್ದಾರೆ. ಸಮಾಜಸೇವೆ, ಉದ್ಯಮರಂಗ,ಶಿಕ್ಷಣ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಸಾಧನೆಗೈದಿರುವ ಸುಧಾಮೂರ್ತಿಯವರು ರಾಜ್ಯಸಭೆಗೆ ನಾಮನಿರ್ದೇಶನಗೊಂಡಿರುವುದು ಅತ್ಯಂತ ಸಂತಸದ ವಿಚಾರ. ಈ ಮೂಲಕ ನಾರಿಯರಿಗೆ ಹೆಚ್ಚು ಬಲ ತುಂಬಿರುವ ಬಿಜೆಪಿ, ನಾರಿಶಕ್ತಿ ಎಂಬ ಧ್ಯೇಯವನ್ನು ನಾವು ಮತ್ತೊಮ್ಮೆ ಸಾಬೀತುಪಡಿಸಿದೆ ಎಂದು ಮೋದಿ ಬರೆದುಕೊಂಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

“ಲೋಕಸಭೆ ಚುನಾವಣೆಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಹೈಕಮಾಂಡ್ ನಾಯಕರು ಶೀಘ್ರವೇ ಬಿಡುಗಡೆ ಮಾಡಲಿದ್ದಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್  ತಿಳಿಸಿದರು. ದೆಹಲಿಯಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದ ಶಿವಕುಮಾರ್ ಅವರು, “ಲೋಕಸಭೆ ಚುನಾವಣೆ ಸಂಬಂಧ ನಿನ್ನೆ ನಮ್ಮ ಪಕ್ಷದ ಅಧ್ಯಕ್ಷರು ಹಾಗೂ ಇತರ ನಾಯಕರ ಸಮ್ಮುಖದಲ್ಲಿ ಚರ್ಚೆ ನಡೆಸಲಾಗಿದೆ. ಎಷ್ಟು ಅಭ್ಯರ್ಥಿಗಳ ಪಟ್ಟಿ ಅಂತಿಮವಾಗಿದೆ, ಯಾರ ಹೆಸರು ಅಂತಿಮವಾಗಿದೆ ಎಂದು ನಾನು ಬಹಿರಂಗಪಡಿಸಲು ತಯಾರಿಲ್ಲ. ಎಐಸಿಸಿ ನಾಯಕರು ಮೊದಲ ಪಟ್ಟಿ ಅಂತಿಮಗೊಳಿಸಿ ಶೀಘ್ರವೇ ಬಿಡುಗಡೆ ಮಾಡುತ್ತಾರೆ. ನಾವು ಸಭೆಯಲ್ಲಿ ಶೇ.50ರಷ್ಟು ಕ್ಷೇತ್ರಗಳ ಬಗ್ಗೆ ಮಾತ್ರ ಚರ್ಚೆ ಮಾಡಿದ್ದೇವೆ” ಎಂದು ತಿಳಿಸಿದರು. ಮುಖ್ಯಮಂತ್ರಿ ಸ್ಥಾನದ ಬಗ್ಗೆ ಸಚಿವ ಮಹದೇವಪ್ಪ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಒಳ್ಳೆಯದಾಗಲಿ, ಆಸೆ ಪಡುವುದರಲ್ಲಿ ತಪ್ಪಿಲ್ಲ. ಯಾರ್ಯಾರೋ ಏನೇನೋ ಆಸೆ ಪಡುತ್ತಾರೆ. ಮಹದೇವಪ್ಪ ಅವರು ಆಸೆಪಡುವುದರಲ್ಲಿ ತಪ್ಪಿಲ್ಲ” ಎಂದು ತಿಳಿಸಿದರು. ಖರ್ಗೆ ಅವರು ಕರ್ನಾಟಕದಿಂದ ಸ್ಪರ್ಧೆ ಮಾಡುತ್ತಾರಾ ಎಂದು ಕೇಳಿದಾಗ, “ಅವರು ಎಐಸಿಸಿ ಅಧ್ಯಕ್ಷರು. ಅನೇಕರು…

Read More

ಇತ್ತೀಚೆಗೆ ಹೆತ್ತ ತಾಯಿಯಿಂದಲೇ ಮಕ್ಕಳ ಮೇಲೆ ಹಲ್ಲೆ ಪ್ರಕರಣಗಳು ಹೆಚ್ಚಾಗುತ್ತಿದ್ದು, ಇಂತಹ ಪ್ರಕರಣಗಳು ಮತ್ತೆ ಮತ್ತೆ ಮರುಕಳಿಸುತ್ತಿವೆ. ಇದೀಗ ಬೆಂಗಳೂರು ನಗರದಲ್ಲಿ  ಮತ್ತೊಬ್ಬ ಮಹಿಳೆಯೊಬ್ಬಳು ತನ್ನ ಸ್ವಂತ ಮಗುವಿನ ಮೇಲೆ ಕ್ರೌರ್ಯ ಮೆರೆದ ಅಮಾನವೀಯ ಘಟನೆ ನಡೆದಿದೆ. ಪತಿ ಮೇಲಿನ ಕೋಪಕ್ಕೆ ಪ್ರಿಯಕರನೊಂದಿಗೆ ಸೇರಿ ತನ್ನ ಮೂರು ವರ್ಷದ ಮಗುವಿಗೆ ತಾಯಿ ಚಿತ್ರ ಹಿಂಸೆ ನೀಡಿದ ಆರೋಪ ಕೇಳಿಬಂದಿದೆ. ಆಯೇಷಾ ಎಂಬಾಕೆ ಇಮ್ರಾನ್ ಖಾನ್ ಎಂಬಾತನನ್ನು ಮದುವೆಯಾಗಿದ್ದು, ಅವರ ದಾಂಪತ್ಯದಲ್ಲಿ ಒಂದು ಹೆಣ್ಣು ಮಗು ಕೂಡ ಜನಿಸಿತ್ತು. ಬಳಿಕ ಪತಿಯಿಂದ ವಿಚ್ಛೇದನ ಪಡೆದುಕೊಂಡ ಆಯೇಷಾ ತವರಿಗೆ ಹೋಗಿ ನೆಲೆಸಿದ್ದಳು. ಆಯೇಷಾಗೆ ಸಲೀಂ ಎಂಬ ಪ್ರಿಯಕರ ಇದ್ದು, ಅದರಂತೆ, ಪತಿ ಇಮ್ರಾನ್ ಖಾನ್ ಮೇಲಿನ ಕೋಪಕ್ಕೆ ಆಯೇಷಾ ತನ್ನ ಪ್ರಿಯಕರ ಸಲೀಂ ಜೊತೆ ಸೇರಿಕೊಂಡು,  ಮಗುವಿಗೆ ಹಲ್ಲೆ ನಡೆಸಿದ್ದಾಳೆ. ಮಗುವನ್ನು ಕಚ್ಚಿ, ಮಗುವಿಗೆ ಫ್ರಿಡ್ಜ್ ನೀರು ಸರಿದು ಚಿತ್ರಹಿಂಸೆ ನೀಡಲಾಗಿದೆ. ಅಲ್ಲದೆ, ಮಗಳ ಕೈಗೆ ಸಿಗರೇಟ್ ​ನಿಂದ ಸುಡಲಾಗಿದೆ. ಬಳಿಕ ಈ ಮಗುವಿನ…

Read More

ನಟಿ ಕಾಜಲ್ ಅಗರ್ವಾಲ್ ಇತ್ತೀಚೆಗೆ ಹೈದರಾಬಾದ್ ನಲ್ಲಿ ತಂದೆ ವಿನಯ್ ರೊಂದಿಗೆ ಮಳಿಗೆಯೊಂದರ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿದ್ದರು. ಆದರೆ ಅಭಿಮಾನಿಯೊಬ್ಬರು ಸೆಲ್ಫಿ ಕ್ಲಿಕ್ಕಿಸುವಾಗ ನಟಿಯ ಜತೆ ಅನುಚಿತವಾಗಿ ವರ್ತಿಸಿದ್ದಾರೆ ಎನ್ನಲಾಗಿದ್ದು, ಈಗ ವೀಡಿಯೋ ವೈರಲ್ ಆಗಿದೆ. ಫೋಟೊ ಕ್ಲಿಕ್ಕಿಸಿಕೊಳ್ಳಲು ಬಂದ ವ್ಯಕ್ತಿಯೊಬ್ಬನು ಕಾಜಲ್ ಸೊಂಟವನ್ನು​ ಅಸಭ್ಯವಾಗಿ ಮುಟ್ಟಿದ್ದಾನೆ ಎಂದು ಆರೋಪಿಸಲಾಗಿದೆ. ನಟಿ ತಕ್ಷಣ ಕೈ ಸನ್ನೆ ಮಾಡಿ ದೂರ ಸರಿದಿದ್ದಾರೆ ಮತ್ತು ಮುಜುಗರಗೊಂಡಿದ್ದಾರೆ ಎನ್ನಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಲೋಕಸಭಾ ಚುನಾವಣೆ ಸಮೀಪಿಸುತ್ತಿದೆ. ಇದಕ್ಕಾಗಿ ಭಾರಿ ತಯಾರಿಗಳು ಈಗಾಗ್ಲೇ ಆರಂಭಗೊಂಡಿವೆ. ರಾಜಕಾರಣಿಗಳು , ಕಾರ್ಯಕರ್ತರು ತೆರೆ ಮರೆಯಲ್ಲಿಯೇ ನಾನಾ ರೀತಿಯ ಪ್ಲ್ಯಾನ್‌ ಗೆ ರೆಡಿಯಾಗುತ್ತಿದ್ದಾರೆ. ಹೀಗಿರುವಾಗ ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕೆಂದು ಹಲವರು ಕನಸು ಕಾಣುತ್ತಿದ್ದಾರೆ. ಅದರಲ್ಲಿ ಇಲ್ಲೊಬ್ಬರು ಅಜ್ಜಿ ಮೋದಿಗಾಗಿ ಮಲೆಮಾದೇಶ್ವರ ಬೆಟ್ಟಕ್ಕೆ ಹರಕೆ ಕಟ್ಟಿಕೊಂಡು ಬೆಟ್ಟ ಹತ್ತಿದ ಘಟನೆಯೊಂದು ಬೆಳಕಿಗೆ ಬಂದಿದೆ. 102 ವರ್ಷದ ಅಜ್ಜಿ ಈ ಸಾಹಸ ಮಾಡಿದ್ದು ಅಚ್ಚರಿಯನ್ನುಂಟು ಮಾಡಿದೆ. ಅಜ್ಜಿಯು ಕಾಲು ನಡಿಗೆಯ ಮೂಲಕ ಕಾಡು ದಾರಿಯಲ್ಲಿ ಬೆಟ್ಟ ಹತ್ತಿದ್ದಾರೆ. ಮೋದಿ ಗೆಲ್ಲಬೇಕು, ದೇಶಕ್ಕೆ ಒಳ್ಳೆದು ಮಾಡಬೇಕು ಎಂದು ಹೇಳುತ್ತಾ ಬೆಟ್ಟ ಏರಿದ್ದಾರೆ. ಇವರ ವೀಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ವೀಡಿಯೋದಲ್ಲಿ ಅಜ್ಜಿ “ದೇಶಕ್ಕೆ ಒಳ್ಳೆದಾಗಬೇಕು, ರೈತರಿಗೆ ಒಳ್ಳೆದಾಗಬೇಕು, ಕಾಡು ಪ್ರಾಣಿಗಳಿಗೆ ನೀರಿಲ್ಲ. ದೇಶನೂ ಉದ್ಧಾರ ಆಗುತ್ತೆ. ಮೋದಿ ಬರ್ಬೇಕು” ಎಂದು ಹೇಳಿದ್ದಾರೆ. ಇದಕ್ಕೆ ಅಲ್ಲಿ ನೆರೆದಿದ್ದವರು ಚಪ್ಪಾಳೆ ತಟ್ಟುತ್ತಾ, ಸೂಪರ್​ ಅಜ್ಜಿ ಎಂದು ಜೋರಾಗಿ ಕೂಗಿದ್ದಾರೆ. ಸದ್ಯ ಟ್ವಿಟ್ಟರ್ ​ನಲ್ಲಿ ಈ…

Read More

ಮುಸ್ಲಿಂ ಯುವತಿಯೋರ್ವಳು ಹಿಜಾಬ್‌ ಧರಿಸಿದ ಕಾಲೇಜಿಗೆ ಬಂದಿದ್ದಕ್ಕೆ ವಿದ್ಯಾರ್ಥಿಗಳ ಗುಂಪೊಂದು ಪ್ರತಿಭಟನೆ ನಡೆಸಿದ ಘಟನೆಯೊಂದು ನಡೆದಿದೆ. ಈ ಘಟನೆ ನಡೆದಿರುವುದು ಹಾಸನದ ಖಾಸಗಿ ಕಾಲೇಜಿನಲ್ಲಿ. ವಿದ್ಯಾಸೌಧ ಕಾಲೇಜಿನ ಪ್ರಾಂಶುಪಾಲ ರಂಗೇಗೌಡ ಅವರು ಹೇಳಿರುವ ಪ್ರಕಾರ, ಈ ಘಟನೆ ನಡೆದಿರುವುದು ಎರಡು ದಿನಗಳ ಹಿಂದೆ. ಅಧಿಕಾರಿಗಳು ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಪೋಷಕರೊಂದಿಗೆ ಸಭೆ ನಡೆಸಿದ್ದು, ಅವರು ಮತ್ತೆ ಹಿಜಾಬ್‌ ಧರಿಸದಿರಲು ಒಪ್ಪಿಕೊಂಡಿದ್ದಾರೆ ಎಂದು ಹೇಳಿದರು. ಅದು ಹಿಜಾಬ್‌ ಆಗಿರಲಿಲ್ಲ. ಹಿಜಾಬ್‌ ಅನ್ನು ಹೋಲುವ ಬಟ್ಟೆಯನ್ನು ಧರಿಸಲಾಗಿತ್ತು. ಅದನ್ನು ಧರಿಸಿದ ವಿದ್ಯಾರ್ಥಿನಿ ತನಗೆ ಕಿವಿ ಸಮಸ್ಯೆ ಇದೆ ಮತ್ತು ಅದ್ದರಿಂದ ಕಿವಿಯನ್ನು ಮುಚ್ಚಿಕೊಂಡಿರುವುದಾಗಿ ಹೇಳಿದ್ದಳು. ನಾವು ವಿದ್ಯಾರ್ಥಿ ಮತ್ತು ಪೋಷಕರೊಂದಿಗೆ ಸಭೆ ನಡೆಸಿದ್ದಾಗಿ ಮತ್ತು ಅದನ್ನು ಪುನರಾವರ್ತನೆ ಮಾಡುವುದಿಲ್ಲ ಎಂದು ಹೇಳಿರುವುದಾಗಿ ಪ್ರಾಂಶುಪಾಲರು ಹೇಳಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ನಿನ್ನೆ ದಿನ ಮಧ್ಯಾಹ್ನದಿಂದಲೇ ಯಾದಗಿರಿಯ ಜಿಲ್ಲಾ ಕ್ರೀಡಾಂಗಣದಲ್ಲಿ ಸಾವಿರಾರು ಜನರು ಸೇರಿದ್ದರು. ಆದರೆ ಕೊನೇ ಕ್ಷಣಕ್ಕೆ ಕಾರ್ಯಕ್ರಮ ರದ್ದು ಆಗಿರುವ ಬಗ್ಗೆ ಯಾದಗಿರಿ ಡಿಸಿ ಸುಶೀಲಾ ಬಿ ಮತ್ತು ಎಸ್ಪಿ ಸಂಗೀತಾ ಜಿ ಮಾಹಿತಿ ನೀಡಿದ್ದಾರೆ. ಹೀಗಾಗಿ ರಿಯಾಲಿಟಿ ಶೋ ನೋಡಲು ಬಂದಿದ್ದ ಸಾವಿರಾರು ಪ್ರೇಕ್ಷಕರಲ್ಲಿ ಗೊಂದಲ ಉಂಟಾಗಿದೆ. ಅಲ್ಲದೆ ಇದರಿಂದಾಗಿ ಬೇರೆ ಬೇರೆ ಜಿಲ್ಲೆಗಳಿಂದ ಕಾರ್ಯಕ್ರಮ ನೋಡಲು ಬಂದಿದ್ದ ಸಾವಿರಾರು ಜನರಿಗೂ ತುಂಬಾ ಬೇಸರವಾಗಿದೆ. ಆದರೆ ಯಾಕೆ ಕಾರ್ಯಕ್ರಮ ರದ್ಧುಪಡಿಸಲಾಗಿದೆ ಎಂದು ತಿಳಿದುಬಂದಿಲ್ಲ. ಮೂಲಗಳ ಪ್ರಕಾರ ಸ್ಥಳೀಯ ರಾಜಕೀಯ ಮುಖಂಡರುಗಳಿಗೆ ಮತ್ತು ಹಿರಿಯರಿಗೆ ಕಾರ್ಯಕ್ರಮಕ್ಕೆ ಆಹ್ವಾನ ನೀಡದಿರುವುದೇ ಶೋ ರದ್ದಾಗಲು ಕಾರಣವೆನ್ನಲಾಗುತ್ತಿದೆ. ಬೆಂಗಳೂರಿನ ಗುಂಡೂರಾವ್ ಅವರನ್ನು ಆಹ್ವಾನಿಸಿ ಸ್ಥಳೀಯ ಕಾಂಗ್ರೆಸ್ ನಾಯಕ ಯಾದಗಿರಿ ಜಿಲ್ಲೆ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರ್ ಅವರನ್ನು ಕಡೆಗಣಿಸಿದ ಕಾರಣಕ್ಕೆ ಸಾವಿರಾರು ಜನರು ಸೇರಿದ್ದ sa re ga ma pa ಕಾರ್ಯಕ್ರಮ ರದ್ದಾಯ್ತಾ? ಎಂದು ಪ್ರಶ್ನಿಸಿದ್ದಾರೆ ಇನ್ನು ಯಾದಗಿರಿ ಜಿಲ್ಲೆಯಲ್ಲಿ ಶಂಕಿತ ಬಾಂಬರ್ ಸಂಚಾರ…

Read More

ಭಾರತೀಯರು ಆಚರಿಸುವ ಹಬ್ಬಗಳಲ್ಲೊಂದಾದ ಮಹಾಶಿವರಾತ್ರಿ ಹಬ್ಬದ ಕುರಿತು ಅನೇಕ ಕಥೆಗಳಿವೆ. ​ಕೈಲಾಸವಾಸಿ ಶಿವನಿಗೆ ಶಿವರಾತ್ರಿ ಅತ್ಯಂತ ಪ್ರಿಯವಾದ ದಿನ. ಶಿವರಾತ್ರಿಯಂದು ತನ್ನನ್ನು ಪೂಜಿಸುವ ಭಕ್ತರಿಗೆ ತಾನು ವಿಶೇಷವಾಗಿ ಅನುಗ್ರಹ ನೀಡುವುದಾಗಿ ಸ್ವತ: ಶಿವನೇ ಪಾರ್ವತಿಗೆ ಅರುಹಿದ್ದಾನೆ ಎನ್ನುತ್ತದೆ ಶಿವಪುರಾಣ. ಶಿವನು ಪಾರ್ವತಿ ದೇವಿಯನ್ನು ವಿವಾಹವಾದ ದಿನ ಮಹಾಶಿವರಾತ್ರಿ. ಅಲ್ಲದೆ, ದೇವತೆ ಹಾಗೂ ಅಸುರರ ನಡುವೆ ನಡೆದ ಸಮುದ್ರ ಮಂಥನ ಕಾಲದಲ್ಲಿ ಉದ್ಭವವಾದ ವಿಷ ಶಿವ ಕುಡಿದ. ವಿಷ ಗಂಟಲೊಳಗಿಂದ ಇಳಿಯದಂತೆ ಪಾರ್ವತಿ ಇಡೀ ರಾತ್ರಿ ತಡೆದಳು ಎನ್ನುತ್ತದೆ ಶಿವಪುರಾಣದ ಇನ್ನೊಂದು ಮಹಿಮೆ. ಜೊತೆಗೆ, ಭಗೀರಥನ ತಪಸ್ಸಿಗೆ ಮೆಚ್ಚಿ ಇಳೆಗೆ ಇಳಿದು ಬಂದ ಗಂಗೆಯನ್ನು ಶಿವ ತನ್ನ ಜಡೆಯಲ್ಲಿ ತುಂಬಿಸಿಕೊಂಡ. ಇದರಿಂದ ವಿಚಲಿತನಾದ ಭಗೀರಥ ಗಂಗೆಯನ್ನು ಭೂಮಿಗೆ ಹರಿಸುವಂತೆ ಶಿವನನ್ನು ಪ್ರಾರ್ಥಿಸಿದ. ಆತನ ಭಕ್ತಿಗೆ ಮೆಚ್ಚಿ ಶಿವ ಗಂಗೆಯನ್ನು ಹರಿಯಬಿಟ್ಟಿದ್ದು ಇದೇ ದಿನ ಎನ್ನುತ್ತದೆ ಪುರಾಣ. ಇನ್ನು, ಶಿವನ ಆದಿ ಮತ್ತು ಅಂತ್ಯ ಹುಡುಕಲು ಹೊರಟ ವಿಷ್ಣು ಹಾಗೂ ಬ್ರಹ್ಮನಿಗೆ, ಶಿವರಾತ್ರಿಯಂದು ಶಿವ…

Read More