Author: admin

ಬೆಂಗಳೂರು: ಲೋಕಸಭಾ ಚುನಾವಣೆಗೆ 2 ಸುತ್ತಿನಲ್ಲಿ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಲಾಗುತ್ತದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೇರೆ ಪಕ್ಷದಿಂದ ಬಂದವರಿಗೆ ಟಿಕೆಟ್‌ ನೀಡುವ ಕುರಿತು ಪ್ರತಿಕ್ರಿಯೆ ನೀಡಿದರು. ರಾಜಕಾರಣದಲ್ಲಿ ಎಲ್ಲವೂ ಸಾಧ್ಯತೆಯಿದೆ. ಆದರೆ ಈಗಲೇ ಹೆಸರನ್ನು ಬಹಿರಂಗಪಡಿಸಲ್ಲ. 2 ಸುತ್ತಿನಲ್ಲಿ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಲಾಗುತ್ತದೆ ಎಂದು ತಿಳಿಸಿದರು. ಬಿಜೆಪಿ ಹಾಗೂ ಕಾಂಗ್ರೆಸ್‌ನಲ್ಲಿ ವ್ಯಕ್ತಿ ಮೇಲೆ ನಡೆಯಲ್ಲ. ವ್ಯಕ್ತಿಗಿಂತ ಹೆಚ್ಚು ಪಕ್ಷ, ಯೋಜನೆ, ಗ್ಯಾರಂಟಿಯ ಮೇಲೆ ನಡೆಯುತ್ತದೆ. ಅವರದ್ದೇ ಆದಂತಹ ಲೆಕ್ಕಾಚಾರ ಅವರೂ ಇಟ್ಕೊಂಡಿದ್ದಾರೆ. ನಮ್ಮದೇ ಆದಂತಹ ಲೆಕ್ಕಾಚಾರ ನಾವು ಇಟ್ಕೊಂಡಿದ್ದೇವೆ ಎಂದು ಹೇಳಿದರು. ಲೋಕಸಭೆ ಚುನಾವಣೆಯ ಕುರಿತು 6 ಗಂಟೆಗೆ ರಾಜ್ಯದ ಶಾಸಕ ಸಚಿವರೊಂದಿಗೆ ಹೈಕಮಾಂಡ್‌ ಸಭೆ ಇದೆ. ಹಾಗಾಗಿ ಎಲ್ಲರೂ ಬಂದಿದ್ದೇವೆ. ಶೇ. 50ರಷ್ಟು ಮುಗಿಯುತ್ತದೆ. ನಮ್ಮ ಚರ್ಚೆ ಮುಗಿಯುತ್ತದೆ ಎಂದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 …

Read More

ಸ್ನಾಯುವಿನ ಬಲವನ್ನು ಹೆಚ್ಚಿಸಲು ಈ ಆಹಾರಗಳನ್ನು ಸೇವಿಸಿ!: ಸ್ನಾಯುವಿನ ಬಲವನ್ನು ಹೆಚ್ಚಿಸಲು, ನೀವು ಉತ್ತಮ ಆಹಾರವನ್ನು ಸೇವಿಸಬೇಕು. ವಿಶೇಷವಾಗಿ ಬಾಳೆಹಣ್ಣು, ಕೋಳಿ ಮಾಂಸ, ಮೀನುಗಳು ತೂಕವನ್ನು ಹೆಚ್ಚಿಸುವುದು ಮಾತ್ರವಲ್ಲದೆ ಸ್ನಾಯುವಿನ ಬಲವನ್ನು ಹೆಚ್ಚಿಸುತ್ತದೆ ಎಂದು ಹೇಳಲಾಗುತ್ತದೆ. ಆಲೂಗಡ್ಡೆಯಲ್ಲಿ ಕಾರ್ಬೋಹೈಡ್ರೆಟ್ ಅಧಿಕವಾಗಿರುತ್ತದೆ. ಇದು ಸ್ನಾಯುವಿನ ಶಕ್ತಿಯನ್ನು ಹೆಚ್ಚಿಸುತ್ತದೆ ಮತ್ತು ತೂಕ ಹೆಚ್ಚಾಗಲು ಕೊಡುಗೆ ನೀಡುತ್ತದೆ ಎಂದು ಹೇಳಲಾಗುತ್ತದೆ. ತೂಕ ಕಡಿಮೆಮಾಡಬೇಕು ಎನ್ನುವವರಿಗೆ ರಾಗಿ ಮುದ್ದೆ ಬೆಸ್ಟ್ ಫುಡ್ !: ರಾಗಿಯಲ್ಲಿರುವ ಫೈಬರ್ ತೂಕ ಇಳಿಸಲು ಸಹಾಯ ಮಾಡುತ್ತದೆ. ರಾಗಿಯಲ್ಲಿ ಹೆಚ್ಚಿನ ಫೈಬರ್ ಅಂಶವು ತೂಕ ಇಳಿಕೆಗೆ ಸಹಾಯ ಮಾಡುವ ಪ್ರಮುಖ ಕಾರಣಗಳಲ್ಲಿ ಒಂದಾಗಿದೆ. ಕಾರ್ಬೋಹೈಡ್ರೆಟ್‌ಗಳಿಗೆ ಹೋಲಿಸಿದರೆ ಫೈಬರ್ ಜೀರ್ಣಿಸಿಕೊಳ್ಳಲು ಹೆಚ್ಚು ಸಮಯ ತೆಗೆದುಕೊಳ್ಳುತ್ತದೆ. ಇದು ಪೂರ್ಣತೆಯ ಭಾವನೆಯನ್ನು ಹೆಚ್ಚಿಸುತ್ತದೆ. ಆದ್ದರಿಂದ ಇದು ನಿಮ್ಮ ಕ್ಯಾಲೋರಿ ಸೇವನೆಯನ್ನು ಕಡಿಮೆ ಮಾಡುತ್ತದೆ. ಇತರ ಧಾನ್ಯಗಳಿಗೆ ಹೋಲಿಸಿದರೆ, ರಾಗಿ ಕಡಿಮೆ ಕೊಬ್ಬಿನಂಶ ಮತ್ತು ಅಮೈನೋ ಆಮ್ಲಗಳ ಉತ್ತಮ ಮೂಲವಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು…

Read More

ಗದಗ: ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಹಳ್ಳಿಗುಡಿ ಗ್ರಾಮದ ಬಳಿ ವೇಗವಾಗಿ ಸಾಗುತ್ತಿದ್ದ ಕ್ಯಾಂಟರ್ ಒಂದು ನಿಯಂತ್ರಣ ತಪ್ಪಿ ಪಲ್ಟಿಯಾಗಿ, ಒಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಇನ್ನಿಬ್ಬರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ನಡೆದಿದೆ. ಮೃತರು ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಹಿರೇನರ್ತಿ ಗ್ರಾಮದವರಾಗಿದ್ದು, ಕುಂದಗೋಳ ದಿಂದ ಕೊಪ್ಪಳ ಜಿಲ್ಲೆಯ ಕನಕಗಿರಿ ಹೋಗುತ್ತಿದ್ದಾಗ ಘಟನೆ ನಡೆದಿದೆ. ನವೀನ್ ಕುಂಬಾರ್ (23) ಸ್ಥಳದಲ್ಲೇ ಮೃತಪಟ್ಟರೆ, ನಾಗಪ್ಪ ಕಾಳಿ (23), ಗಂಗಪ್ಪ ಅಕ್ಕಿ (22) ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಮೃತಪಟ್ಟವರಾಗಿದ್ದಾರೆ. ಮೂವರು ಗಾಯಾಳುಗಳಿಗೆ ಗದಗ ಜಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ನಡೆಯುತ್ತಿದ್ದಂತೆಯೇ ಚಾಲಕ ಪರಾರಿಯಾಗಿದ್ದಾನೆ. ಮುಂಡರಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಕರಣ ದಾಖಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಲಕ್ನೋ: ಬಿಜೆಪಿ ಮುಖಂಡ ಪ್ರಮೋದ್ ಯಾದವ್ ಅವರನ್ನು ಉತ್ತರ ಪ್ರದೇಶದ ಜೌನ್‌ ಪುರ ಜಿಲ್ಲೆಯಲ್ಲಿ ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಕೊಂದ ಘಟನೆ ನಡೆದಿದೆ. ಪತ್ರಿಕೆ ಕೊಡುವ ನೆಪದಲ್ಲಿ ಪ್ರಮೋದ್ ಯಾದವ್ (55) ಅವರನ್ನು ತಡೆದ ದುಷ್ಕರ್ಮಿಗಳು 3 ಬಾರಿ ಗುಂಡು ಹಾರಿಸಿದ್ದು, ಬಳಿಕ ದಾಳಿಕೋರರು ಸ್ಥಳದಿಂದ ಸ್ವಲ್ಪ ದೂರದಲ್ಲಿ ಬೈಕನ್ನು ಬಿಟ್ಟು ಪರಾರಿಯಾಗಿದ್ದಾರೆ ಎನ್ನಲಾಗಿದೆ. ಘಟನೆಯ ನಂತರ ಯಾದವ್ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ವೈದ್ಯರು ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಿದ್ದಾರೆ. ದುಷ್ಕರ್ಮಿಗಳ ಬಂಧನಕ್ಕೆ ಹಲವಾರು ತಂಡಗಳನ್ನು ನಿಯೋಜಿಸಲಾಗಿದೆ ಮತ್ತು ಪ್ರಾಥಮಿಕ ತನಿಖೆಯಿಂದ ಕೆಲವು ಪ್ರಮುಖ ಸುಳಿವುಗಳು ದೊರೆತಿವೆ ಎಂದು ಜೌನ್‌ ಪುರ ಪೊಲೀಸ್ ವರಿಷ್ಠಾಧಿಕಾರಿ ಅಜೈಪಾಲ್ ಶರ್ಮಾ ಹೇಳಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಪುಡಿರೌಡಿಗಳು ಅಟ್ಟಹಾಸ ಮೆರೆದಿದ್ದು, ಯುವಕನ ಮೇಲೆ ವಿನಾಕಾರಣ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ. ಗೈಬುಖಾನ್ ಹಕೀಮ್ (29) ಹಲ್ಲೆಗೊಳಗಾದ ಯುವಕನಾಗಿದ್ದಾನೆ. ಹಲ್ಲೆಗೊಳಗಾದ ಗೈಬುಖಾನ್‌ ನನ್ನು ಕಿಮ್ಸ್‌ ಆಸ್ಪತ್ರೆಗೆ ದಾಖಲು ಮಾಡಿದ್ದು, ಕುಡಿದ ಮತ್ತಿನಲ್ಲಿ ಜಗಳ ತೆಗೆದ ಕೆಲ ಪುಡಿ ರೌಡಿಗಳು ಕಲ್ಲಿನಿಂದ ಹೊಡೆದು ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಪುಂಡರ ಅಟ್ಟಹಾಸದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಬೆಂಡಿಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಬೆಂಗಳೂರು: ಅನುಮಾನಾಸ್ಪದವಾಗಿ ಯುವಕನೊಬ್ಬ ಬೆಂಗಳೂರಿನ ಬಸವೇಶ್ವರ ನಗರ ಠಾಣಾ ವ್ಯಾಪ್ತಿಯಲ್ಲಿ ಮೃತಪಟ್ಟಿರುವ ಘಟನೆ ನಡೆದಿದೆ. ಯೋಗೇಶ್(21) ಮೃತ ದುರ್ದೈವಿಯಾಗಿದ್ದಾನೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಘಟನಾ ಸ್ಥಳಕ್ಕೆ ಬಸವೇಶ್ವರ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಯುಡಿಆರ್ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಶಿವಮೊಗ್ಗ:  ಶಿವಮೊಗ್ಗದ ಸಾಗರದ ಸೊರಬ ಗೇಟ್ ಸಮೀಪ ಕಾಲೇಜು ವಿದ್ಯಾರ್ಥಿನಿಯೊಬ್ಬಳು ರೈಲಿಗೆ ಸಿಲುಕಿ ಪ್ರಾಣ ಕಳೆದುಕೊಂಡ ಘಟನೆ ನಡೆದಿದೆ. ಭೂಮಿಕಾ (17) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯಾಗಿದ್ದಾಳೆ. ಭೂಮಿಕಾ ಸಿರಿವಂತೆ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದಳು. ಸ್ಥಳಕ್ಕೆ ಸಾಗರ ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ನಡೆಸುತ್ತಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಭಾವಚಿತ್ರದ ಪೋಸ್ಟರ್ ವೊಂದು ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಜನರಲ್ಲಿ ಪ್ರಶ್ನೆಗಳನ್ನು ಎಬ್ಬಿಸಿದೆ. ಈ ಪೋಸ್ಟರ್‌ನಲ್ಲಿ ಎಂಕೆ ಸ್ಟಾಲಿನ್ ಅವರ ಚಿತ್ರವಿದೆ, ಅದರ ಮೇಲೆ ‘ತಮಿಳುನಾಡಿನ ವಧು’ (bride of tamilnadu ) ಎಂದು ಬರೆಯಲಾಗಿದೆ. ಮೂಲಗಳ ಪ್ರಕಾರ, ಪೋಸ್ಟರ್ ಅನ್ನು ‘ಪ್ರೈಡ್ ಆಫ್ ತಮಿಳುನಾಡು’ ಅಂದ್ರೆ ʼ ತಮಿಳು ನಾಡಿನ ಹೆಮ್ಮೆ ʼ ಎಂದು ಮುದ್ರಿಸಲು ಯೋಜಿಸಲಾಗಿದೆ. ಆದರೆ ಮುದ್ರ ರಾಕ್ಷಸನ ಪರಿಣಾಮ, ಕಾಗುಣಿತ ದೋಷದಿಂದ ಪ್ರೈಡ್‌ ಬದಲಾಗಿ ಬ್ರೈಡ್‌ ಎಂದು ಪ್ರಿಂಟ್‌ ಮಾಡಲಾಗಿದೆ. ಇದರಿಂದ ಪೋಸ್ಟರ್‌ ನ ಭಾವಾರ್ಥ ಎಡವಟ್ಟಾಗಿದೆ. ಇದರ ಫಲಿತಾಂಶವು ಸಾಕಷ್ಟು ಸ್ವಾರಸ್ಯಗಳಿಗೆ ಕಾರಣವಾಗಿದೆ. ಪೋಸ್ಟರ್ ಹಾಕಿದ್ದು ಯಾರು, ಎಲ್ಲಿ ಹಾಕಿದ್ದಾರೆ ಎಂಬುದು ಸ್ಪಷ್ಟವಾಗಿಲ್ಲ. “ತಮಿಳುನಾಡಿನ ವಧು,”  X ನಲ್ಲಿ ಹಂಚಿಕೊಂಡಿರುವ ಚಿತ್ರಕ್ಕೆ ಹಲವಾರು ಮಂದಿ ಹಲವು ಬಗೆಯ ಕಮೆಂಟ್ಸ್‌ ಹಂಚಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್…

Read More

ರಾಮೇಶ್ವರಂ ಕೆಫೆ ಬ್ಲಾಸ್ಟ್‌ ನ ಶಂಕಿತ ಉಗ್ರನ ರೇಖಾಚಿತ್ರವನ್ನು ಸಿಸಿಬಿ ಪೊಲೀಸರು ಬಿಡುಗಡೆ ಮಾಡಿದ್ದಾರೆ. ನಿನ್ನೆಯಷ್ಟೇ ಶಂಕಿತ ಉಗ್ರನ ಸುಳಿವು ನೀಡಿದರೆ 10ಲಕ್ಷ ನಗದು ಬಹುಮಾನ ಕೊಡುವುದಾಗಿ ಸಿಸಿಟಿವಿ ಫೋಟೋವೊಂದನ್ನು ಎನ್‌ ಐಎ ಬಿಡುಗಡೆ ಮಾಡಿತ್ತು. ಖ್ಯಾತ ಸ್ಕೆಚ್‌ ಆರ್ಟಿಸ್ಟ್‌ ನಿಂದ ಬಾಂಬರ್‌ ನ ಇಮ್ಯಾಜಿನರಿ ಸ್ಕೆಚ್‌ ಬಿಡಿಸಲಾಗಿದ್ದು, ಎನ್ ‌ಐಎ ಬಿಡುಗಡೆ ಮಾಡಿದ ಸಿಸಿಟಿವಿ ಫೋಟೋವನ್ನು ಆಧರಿಸಿ ಮುಖದ ಇಮ್ಯಾಜಿನರಿ ಸ್ಕೆಚ್‌ ಮಾಡಲಾಗಿದೆ. ಆರ್ಟಿಸ್ಟ್‌ ಹರ್ಷ ಈ ರೇಖಾಚಿತ್ರವನ್ನು ಬಿಡಿಸಿರುವುದಾಗಿ ವರದಿಯಾಗಿದೆ. ವರದಿ: ಆಂಟೋನಿ ಬೇಗೂರು ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಮುಕೇಶ್​ ಅಂಬಾನಿ ಮತ್ತು ನೀತಾ ಅಂಬಾನಿ ಪುತ್ರ ಅನಂತ್​ ಅಂಬಾನಿ- ರಾಧಿಕಾ ಮದುವೆಯದ್ದೇ ಎಲ್ಲೆಡೆ ಸುದ್ದಿ. ಇದರಲ್ಲಿ ಬಹುತೇಕ ಎಲ್ಲಾ ಬಾಲಿವುಡ್​​ ನಟ-ನಟಿಯರೂ ಭಾಗವಹಿಸಿ, ವೇದಿಕೆ ಮೇಲೆ ಕುಣಿದು ಕುಪ್ಪಳಿಸಿದ್ದಾರೆ. ಅಷ್ಟಕ್ಕೂ ಇವರೇನು ಮದುವೆಯಲ್ಲಿ ಖುಷಿಯಿಂದ ಕುಣಿದವರಲ್ಲ. ಇಂಥ ಮದುವೆಗಳಲ್ಲಿ ಕುಣಿಯುವುದಕ್ಕಾಗಿಯೇ ಹಲವು ನಟ-ನಟಿಯರು ಕೋಟಿ ಕೋಟಿಗಟ್ಟಲೆ ಹಣವನ್ನು ಪಡೆದುಕೊಳ್ಳುತ್ತಾರೆ. ಆದರೆ ನೋಡುಗರಿಗೆ ಮಾತ್ರ ಅವರು ಮದುವೆಯ ದಿನ ತಮ್ಮ ಇಷ್ಟದಿಂದ ಖುಷಿಯಾಗಿ ಕುಣಿದರು ಎಂದೇ ಕಾಣಿಸುವುದು ಉಂಟು. ಇದೇ ಕಾರಣಕ್ಕೆ ಗರ್ಭಿಣಿಯಾಗಿರುವ ದೀಪಿಕಾ ಪಡುಕೋಣೆ ಕೂಡ ಸಾಕಷ್ಟು ಟ್ರೋಲ್ ​ಗೆ ಒಳಗಾಗಿದ್ದರು. ಎರಡು ತಿಂಗಳ ಗರ್ಭಿಣಿಯಾದರೂ ದುಡ್ಡಿನ ಆಸೆಗೆ ಬಿದ್ದು ಪತಿಯ ಜೊತೆ ಭರ್ಜರಿ ಸ್ಟೆಪ್​ ಹಾಕಿದ್ದಾರೆ ಎಂದು ಸೋಷಿಯಲ್​ ಮೀಡಿಯಾದಲ್ಲಿ ಸಾಕಷ್ಟು ಚರ್ಚೆಯೂ ಆಗಿತ್ತು ಎನ್ನಲಾಗಿದೆ. ಅದೇ ಇನ್ನೊಂದೆ ಶಾರುಖ್​ ಖಾನ್​, ಸಲ್ಮಾನ್​ ಖಾನ್​ ಮತ್ತು ಆಮೀರ್​ ಖಾನ್​ ಒಟ್ಟಿಗೇ, ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡಿರುವುದೂ ಸದ್ದು ಮಾಡುತ್ತಿದೆ. ಈ ಬಗ್ಗೆ ಟಾಂಗ್ ಕೊಟ್ಟಿರೋ ಕಾಂಟ್ರವರ್ಸಿ ಲೇಡಿ ಕಂಗನಾ ರಣಾವತ್​…

Read More