Subscribe to Updates
Get the latest creative news from FooBar about art, design and business.
- ದೇಶದ 2ನೇ ಅತಿ ದೊಡ್ಡ ಕ್ರಿಕೆಟ್ ಕ್ರೀಡಾಂಗಣಕ್ಕೆ ಸಿಎಂ ಸಿದ್ದರಾಮಯ್ಯ ಶಂಕುಸ್ಥಾಪನೆ
- ಈ ವರ್ಷ 52 ಸಾವಿರ ಅತಿಥಿ ಶಿಕ್ಷಕರ ನೇಮಕ: ಸಚಿವ ಮಧು ಬಂಗಾರಪ್ಪ
- ಬೀದರ್ ಬ್ರಿಮ್ಸ್ (BRIMS) ಆಸ್ಪತ್ರೆಯಲ್ಲಿ ಕರ್ತವ್ಯ ನಿರತ ವೈದ್ಯರ ಮೇಲೆ ಭೀಕರ ಹಲ್ಲೆ: 7 ಮಂದಿ ಆರೋಪಿಗಳ ಬಂಧನ
- ತುಮಕೂರು ಜಿಲ್ಲೆಗೆ ‘ತುಮಕೂರು (ಬೆಂಗಳೂರು ಉತ್ತರ)’ ಎಂದು ಮರುನಾಮಕರಣ: ಗೃಹ ಸಚಿವ ಡಾ.ಜಿ.ಪರಮೇಶ್ವರ್
- ಮಾದಾವರ–ತುಮಕೂರು ಮೆಟ್ರೋ ರೈಲು ಯೋಜನೆ: ಸರ್ಕಾರಕ್ಕೆ ಸಲ್ಲಿಕೆಯಾಯ್ತು ಡಿಪಿಆರ್ ವರದಿ
- ಪಕ್ಷದ ಜವಾಬ್ದಾರಿ ನಿರ್ವಹಿಸದಿದ್ದರೆ ಶಿಸ್ತು ಕ್ರಮ: ಕಾಂಗ್ರೆಸ್ ಮುಖಂಡರ ಸಭೆಯಲ್ಲಿ ಶಾಸಕ ಕೆ. ಷಡಕ್ಷರಿ ಎಚ್ಚರಿಕೆ
- ಗುಬ್ಬಿ ಶಾಸಕರು, ಪುತ್ರನಿಂದ ಕುತಂತ್ರ ರಾಜಕಾರಣ: ಷಡ್ಯಂತ್ರಗಳಿಗೆ ಜಗ್ಗುವುದಿಲ್ಲ: ಜೆಡಿಎಸ್ ಮುಖಂಡ ನಾಗರಾಜು ಕಿಡಿ
- ತುಮಕೂರು: ಕುಲ್ಲಕ ವಿಷಯಕ್ಕೆ ಜಗಳ: ಕೊಲೆ
Author: admin
ಮಲೆಯಾಳಂನ ‘ಮಂಜುಮ್ಮೆಲ್ ಬಾಯ್ಸ್’ ಈಗ ಭಾರತೀಯ ಚಿತ್ರರಂಗದಲ್ಲಿ ಅತಿ ಹೆಚ್ಚು ಹಣಗಳಿಕೆ ಮಾಡಿದ ಸಿನಿಮ ಎಂಬ ಗರಿಮೆಗೆ ಪಾತ್ರವಾಗಿದೆ. ಈ ತನಕ ದೇಶದಲ್ಲಿ ಅತಿ ಹೆಚ್ಚು ಹಣ ಗಳಿಸಿದ ಮಲಯಾಳಂ ಚಲನಚಿತ್ರದ ದಾಖಲೆಯನ್ನು ‘೨೦೧೮ʼ ಮಲೆಯಾಳಂ ಸಿನಿಮಾ ಹೊಂದಿದೆ. ಎರಡು ವಾರದಲ್ಲಿ ರೂ.107 ಕೋಟಿ ಸಂಗ್ರಹದ ದಾಖಲೆ. ಆದರೆ, ಈಗ ಮಂಜುಮ್ಮೆಲ್ ಬಾಯ್ಸ್ ಇದನ್ನು ಮೀರಿ ಅಂತಿಮವಾಗಿ 125 ಕೋಟಿ ರೂ. ಸಂಗ್ರಹಿಸಿದೆ ಎನ್ನಲಾಗಿದೆ. ಮಂಜುಮ್ಮೆಲ್ ಬಾಯ್ಸ್ ನಿನ್ನೆ ಗಳಿಕೆ ಸುಮಾರು 5.50 ಕೋಟಿ ರೂ. ಇದು 2 ನೇ ಶುಕ್ರವಾರಕ್ಕಿಂತ 15 ಶೇಕಡಾ ಹೆಚ್ಚಾಗಿದೆ. ಇದು ತಮಿಳುನಾಡು ಮತ್ತು ಕರ್ನಾಟಕದಿಂದ ಬಂದ ಅಂಕಿಅಂಶ. ಇದರ ಮಧ್ಯೆ, ಕೇರಳದಲ್ಲಿ ಸಿನಿಮಾದ ಬಳಿಕೆ ಅತ್ಯಂತ ಹೆಚ್ಚಾಗಿಯೇ ಇದೆ. ಬಾಕ್ಸ್ ಆಫೀಸ್ ನಲ್ಲಿ ಮಂಜುಮ್ಮೆಲ್ ಬಾಯ್ಸ್ ಒಂದು ವಾರ – ರೂ. 32 ಕೋಟಿ (8 ದಿನಗಳು) 2 ನೇ ಶುಕ್ರವಾರ – ರೂ. 4.75 ಕೋಟಿ 2ನೇ ಶನಿವಾರ – ರೂ. 9…
ಶಿವಮೊಗ್ಗ: ಸೊರಬ ಪುರಸಭೆ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದು, ಲಂಚ ಸ್ವೀಕರಿಸುವ ವೇಳೆ ರೆವಿನ್ಯೂ ಇನ್ ಸ್ಪೆಕ್ಟರ್ (ಕಂದಾಯ ನಿರೀಕ್ಷಕ) ವಿನಾಯಕ, ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಹೊನ್ನಾವರದ ಪ್ರತಿಭಾ ಎಂ. ನಾಯ್ಕ ಎನ್ನುವವರು ನೀಡಿದ ದೂರಿನ ಮೇರೆಗೆ ಲೋಕಾಯುಕ್ತ ಅಧಿಕಾರಿಗಳು ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ದೂರುದಾರೆ ಪ್ರತಿಭಾ ಹಳೇ ಸೊರಬ ವ್ಯಾಪ್ತಿಯ ಕಸಬಾ ಹೋಬಳಿಯಲ್ಲಿ ಖಾಲಿ ನಿವೇಶನ ಹೊಂದಿದ್ದು, ಗ್ರಾಮ ಪಂಚಾಯಿತಿಯಿಂದ ಸೊರಬ ಪುರಸಭೆಗೆ ಸೇರಿದ್ದ ಇ ಸ್ವತ್ತಿನ ಜಾಗ ಸೇರಿತ್ತು. ಇದರಿಂದಾಗಿ ಪುರಸಭೆಗೆ ಸೇರಿಸಿ ಖಾತೆ ಮಾಡಿಕೊಡುವಂತೆ ಪ್ರತಿಭಾ ಅರ್ಜಿ ಸಲ್ಲಿಸಿದ್ದರು. ಆದರೆ, ಕಂದಾಯ ನಿರೀಕ್ಷಕ ಅರ್ಜಿದಾರರ ಕೆಲಸ ಮಾಡಿಕೊಡಲು 40 ಸಾವಿರ ರೂಪಾಯಿ ಲಂಚಕ್ಕಾಗಿ ಬೇಡಿಕೆ ಇಟ್ಟಿದ್ದು, ಇದರಿಂದ ಪ್ರತಿಭಾ ಅವರು ಲೋಕಾಯುಕ್ತರಿಗೆ ದೂರು ನೀಡಿದ್ದಾರೆ. ಇದರಂತೆ ಲೋಕಾಯುಕ್ತ ಡಿಎಸ್ ಪಿ ಉಮೇಶ್ ಈಶ್ವರ ನಾಯ್ಕ್ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ, 40 ಸಾವಿರ ರೂಪಾಯಿ ಲಂಚದ ಹಣ ಸ್ವೀಕರಿಸುವಾಗ ರೆವಿನ್ಯೂ ಇನ್ಸ್ ಪೆಕ್ಟರ್ ನನ್ನು ರೆಡ್…
ಬೆಂಗಳೂರು ಗ್ರಾಮೀಣ ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ನೀಡಿದ ದೂರಿನ ಮೇರೆಗೆ, ನೆಲಮಂಗಲ ಪೊಲೀಸರು ಇತ್ತೀಚೆಗೆ ಬೆಂಗಳೂರು-ಹೊನ್ನಾವರ ರಸ್ತೆಯ ಸುಭಾಷನಗರದಲ್ಲಿರುವ ಆಸರೆ ಆಸ್ಪತ್ರೆಯ ಮೇಲೆ ದಾಳಿ ನಡೆಸಿದರು. ಡಾ. ಎಸ್. ಆರ್. ಮಂಜುನಾಥ ಅವರ ದೂರಿನಲ್ಲಿ, ಡಾ. ರವಿಕುಮಾರ್ ಅವರು ಸ್ಥಾಪಿಸಿದ ಆಸ್ಪತ್ರೆಯು 2021 ರಿಂದ ಕನಿಷ್ಠ 74 ಅಕ್ರಮ ಭ್ರೂಣ ಹತ್ಯೆಗಳನ್ನು ನಡೆಸಿದೆ ಎಂದು ಆರೋಪಿಸಲಾಗಿದೆ. ಆದಾಗ್ಯೂ, ಗರ್ಭಪಾತವಾದ ಭ್ರೂಣಗಳು ಹೆಣ್ಣು ಮಕ್ಕಳದ್ದೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. “ಅಂತಹ ಕಾರ್ಯಾಚರಣೆಗಳನ್ನು ನಡೆಸಲು ವೈದ್ಯಕೀಯ ಗರ್ಭಪಾತ ಕಾಯ್ದೆಯಡಿ ಆಸ್ಪತ್ರೆಗೆ ಪರವಾನಗಿ ಇಲ್ಲ. ಭ್ರೂಣ ಹತ್ಯೆಗಳಿಗೆ ಸಂಬಂಧಿಸಿದಂತೆ ಆಸ್ಪತ್ರೆಯು ಎಂ. ಟಿ. ಪಿ. ಪ್ರವೇಶ ದಾಖಲಾತಿಗಳನ್ನು ನಿರ್ವಹಿಸಿಲ್ಲ. ಬದಲಿಗೆ, ಅವರು 74 ಭ್ರೂಣ ಹತ್ಯೆಗಳ ವಿವರಗಳನ್ನು ಆಪರೇಷನ್ ಥಿಯೇಟರ್ ನಲ್ಲಿ ಇರಿಸಲಾಗಿರುವ ಲೆಡ್ಜರ್ನಲ್ಲಿ ದಾಖಲಿಸಿದ್ದಾರೆ. ಇದಲ್ಲದೆ, ಶೇಕಡಾ 90ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಅಲ್ಟ್ರಾಸೌಂಡ್ ಸ್ಕ್ಯಾನಿಂಗ್ ವರದಿಗಳು ಕಾಣೆಯಾಗಿವೆ “ಎಂದು ದೂರಿನಲ್ಲಿ ತಿಳಿಸಿದ್ದಾರೆ. ಆಸರೆ ಆಸ್ಪತ್ರೆ ಪ್ರಕರಣದಲ್ಲಿ, ನೆಲಮಂಗಲ ಪೊಲೀಸರು ತಾವು ಎಲ್ಲಾ ಸಂಬಂಧಿತ…
ತುಮಕೂರು: ಗೆಳೆಯನ ಜತೆ ಜಾತ್ರೆಗೆ ಬಂದಿದ್ದ ಬಾಲಕಿಗೆ ಬ್ಲ್ಯಾಕ್ ಮೇಲ್ ಮಾಡಿ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಈ ಸಂಬಂಧ ಮೂವರನ್ನು ಬಂಧಿಸಲಾಗಿದೆ. ಬಂಡೇಪಾಳ್ಯದಲ್ಲಿ ವಾಸವಿದ್ದ ಬಾಗಲಕೋಟೆ ಮೂಲದ ಅಮೋಘ (22), ಹನುಮಂತ (22), ಪತಾಪ್ (20) ಬಂಧಿತರು. ಸೋಮವಾರ ಸ್ನೇಹಿತನ ಜತೆ ಸಿದ್ಧಗಂಗಾಮಠದ ಜಾತ್ರೆಗೆ ಬಂದಿದ್ದ ಪಿಯು ವಿದ್ಯಾರ್ಥಿನಿ ಬೆಟ್ಟಕ್ಕೆ ಹೋಗುವ ದಾರಿಯಲ್ಲಿ ಕುಳಿತಿದ್ದಾಗ ಆರೋಪಿಗಳು ಮೊಬೈಲ್ ನಲ್ಲಿ ವಿಡಿಯೋ ಚಿತ್ರೀಕರಿಸಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಡುವುದಾಗಿ ಹೆದರಿಸಿದ್ದರು. ಬಳಿಕ ಬೈಕ್ ನಲ್ಲಿ ಬಾಲಕಿಯನ್ನು ರೂಮ್ ಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾರೆ ಎನ್ನಲಾಗಿದೆ. ದೌರ್ಜನ್ಯ ಎಸಗಿದ ಬಳಿಕ ಸಂತ್ರಸ್ತೆಯನ್ನು ಮತ್ತೆ ಮಠದ ಬಳಿ ತಂದು ಬಿಟ್ಟು ಪರಾರಿಯಾಗಿದ್ದಾರೆ. ಈ ಸಂಬಂಧ ಕ್ಯಾತ್ಸಂದ್ರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಪ್ರಕರಣದಲ್ಲಿ ಇನ್ನೂ ಯಾರನ್ನೂ ಬಂಧಿಸಿಲ್ಲ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ತಿಳಿಸಿದ್ದಾರೆ. ಈ ಕುರಿತು ಮಾತನಾಡಿದ ಗೃಹ ಸಚಿವ ಡಾ.ಜಿ. ಪರಮೇಶ್ವರ್, ರಾಮೇಶ್ವರಂ ಕೆಫೆ ಬಾಂಬ್ ಪ್ರಕರಣದಲ್ಲಿ ಕೆಲವು ಮಹತ್ವದ ಸುಳಿವು ಸಿಕ್ಕಿದೆ. ಬಟ್ಟೆ ಬದಲಾಯಿಸಿಕೊಂಡ ಸುಳಿವು ಸಿಕ್ಕಿದೆ. ಅದಷ್ಟು ಬೇಗ ಆರೋಪಿಯನ್ನ ಹಿಡಿಯುತ್ತಾರೆ. ಬಸ್ ನಲ್ಲಿ ಪ್ರಯಾಣ ಮಾಡಿರೋದು ಗೊತ್ತಾಗಿದೆ. ಎಲ್ಲದರ ಬಗ್ಗೆ ತನಿಖೆ ನಡೆಯುತ್ತಿದೆ ಎಂದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವರನ್ನ ಕರೆದು ವಿಚಾರಣೆ ನಡೆಸಲಾಗಿದೆ. ಈವರೆಗೆ ಯಾರನ್ನು ಬಂಧಿಸಿಲ್ಲ. ಆರೋಪಿಯನ್ನ ಅರೆಸ್ಟ್ ಮಾಡಿದ್ದಾರೆ ಎಂದು ಸಿಎಂ ಗೊಂದಲದಲ್ಲೇ ಹೇಳಿದ್ದಾರೆ. ಯಾರನ್ನು ಬಂಧಿಸಿಲ್ಲ ತನಿಖೆ ಮುಂದುವರೆಯುತ್ತಿದೆ ಎಂದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಅರಣ್ಯ ರಕ್ಷಕ ಅಪ್ಪಣ್ಣ ರೈ ಮೇಲೆ ಹಲ್ಲೆ ಪ್ರಕರಣ: ಆರೋಪಿಗೆ 10 ವರ್ಷ ಶಿಕ್ಷೆ ಮತ್ತು 15,500 ರೂ.ದಂಡ ವಿಧಿಸಿದ ಕೋರ್ಟ್
2022ರ ಮೇ 11ರಂದು ಅರಣ್ಯ ರಕ್ಷಕರೋರ್ವರ ಮೇಲೆ ಕತ್ತಿಯಿಂದ ಹಲ್ಲೆ ನಡೆಸಿ ಗಂಭೀರವಾಗಿ ಗಾಯಗೊಳಿಸಿದ ಆರೋಪ ಸಾಬೀತಾದ ಹಿನ್ನೆಲೆ ಅಪರಾಧಿಗೆ ಶಿಕ್ಷೆ ವಿಧಿಸಿದೆ. ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ 10 ವರ್ಷ ಕಠಿಣ ಶಿಕ್ಷೆ ಮತ್ತು 15,500 ರೂ. ದಂಡ ವಿಧಿಸಿ ತೀರ್ಪು ನೀಡಿದೆ. ಗಾಳಿಬೀಡು ಕಾನೆಕಂಡಿ ನಿವಾಸಿ ತಿಮ್ಮಯ್ಯ ಶಿಕ್ಷೆಗೆ ಗುರಿಯಾದ ಅಪರಾಧಿಯಾಗಿದ್ದಾನೆ ಎಂದು ತಿಳಿದು ಬಂದಿದೆ. ಅರಣ್ಯ ರಕ್ಷಕ ಅಪ್ಪಣ್ಣ ರೈ ಅವರು ನಡೆದುಕೊಂಡು ಹೋಗುತ್ತಿದ್ದ ಸಂದರ್ಭ ಅವರನ್ನು ದಾರಿ ಮಧ್ಯೆ ತಡೆದ ತಿಮ್ಮಯ್ಯ ಈ ಕೃತ್ಯವೆಸಗಿದ್ದಾನೆ. ಗಾಳಿಬೀಡು ಪಂಚಾಯಿತಿಗೆ ಕಸ ವಿಲೇವಾರಿ ಮಾಡಲು ತಮ್ಮ ಮನೆಯ ಪಕ್ಕದ ಜಾಗವನ್ನು ತೋರಿಸಿಕೊಟ್ಟಿದ್ದೀಯ ಎಂದು ಪ್ರಶ್ನಿಸಿ ಕತ್ತಿಯಿಂದ ಕಡಿಯಲು ಮುಂದಾಗಿದ್ದ. ಈ ವೇಳೆ ಅಪ್ಪಣ್ಣ ರೈ ಅವರು ಎಡಕೈಯಿಂದ ತಡೆದಾಗ ಅವರ ಕೈ ಬೆರಳುಗಳು ತುಂಡಾಗಿದ್ದವು. ತಿಮ್ಮ ಯ್ಯ ಮತ್ತೂಮ್ಮೆ ಹಲ್ಲೆ ಮಾಡಿದಾಗ ಅಪ್ಪಣ್ಣ ರೈ ತಮ್ಮ ಬಲಕೈಯಿಂದ ತಡೆಯಲು ಪ್ರಯತ್ನಿಸಿದಾಗ ಬಲ ಕೈಗೆ ಕೂಡ ಗಂಭೀರ ಗಾಯವಾಗಿತ್ತು…
ರೆಸ್ಟೋರೆಂಟ್ ಗೆ ಆಹಾರ ಸೇವಿಸಲು ಬಂದ ಐವರು ಗ್ರಾಹಕರಿಗೆ ಡ್ರೈ ಐಸ್ ನೀಡಲಾಗಿದೆ. ಮೌಥ್ ಫ್ರೆಶ್ನರ್ ಆಗಿ ಈ ಡ್ರೈಸ್ ಐಸ್ ನೀಡಿದ್ದಾರೆ. ಆದರೆ ಡ್ರೈ ಐಸ್ ಸೇವಿಸದ ಬೆನ್ನಲ್ಲೇ ಗ್ರಾಹಕರಲ್ಲಿ ವಾಂತಿಯಾಗಿದೆ. ಕೆಲವೇ ಕ್ಷಣಗಳಲ್ಲಿ ಬಾಯಿ ತುರಿಕೆ ಆರಂಭಗೊಂಡು ರಕ್ತ ವಾಂತಿ ಮಾಡಿದ ಘಟನೆ ಗುರುಗ್ರಾಂನ ಲ್ಯಾಫೋರೆಸ್ಟಾ ರೆಸ್ಟೋರೆಂಟ್ ನಲ್ಲಿ ನಡೆದಿದೆ. ಇದರಿಂದ ರೆಸ್ಟೋರೆಂಟ್ ಮ್ಯಾನೇಜರ್ ಇದೀಗ ಅರೆಸ್ಟ್ ಆಗಿದ್ದಾರೆ ಎಂದು ವರದಿ ತಿಳಿಸಿದೆ. ಐವರು ಗೆಳೆಯರು ಹಾಗೂ ಗೆಳತಿಯರು ಗುರುಗ್ರಾಂ 90 ಸೆಕ್ಟರ್ ನಲ್ಲಿರುವ ಲ್ಯಾಫೋರೆಸ್ಟಾ ಕೆಫ್ ಕಮ್ ರೆಸ್ಟೋರೆಂಟ್ ಗೆ ತೆರಳಿದ್ದಾರೆ. ತಮಗಿಷ್ಟವಾದ ತಿನಿಸುಗಳನ್ನು ಆರ್ಡರ್ ಮಾಡಿದ್ದಾರೆ. ಈ ವೇಳೆ ರೆಸ್ಟೋರೆಂಟ್ ಮ್ಯಾನೇಜರ್ ಮೌಥ್ ಫ್ರೆಶ್ನರ್ ಆಗಿ ಡ್ರೈ ಐಸ್ ನೀಡಿದ್ದಾರೆ. ಈ ಡ್ರೈಸ್ ಐಸ್ ತಿಂದ ಬೆನ್ನಲ್ಲೇ ತುರಿಕೆ ಆರಂಭಗೊಂಡಿದೆ. ಬಾಯಿ ಸುಟ್ಟ ಅನುಭವವಾಗಿದೆ. ಕೆಲವೇ ಕ್ಷಣಗಳಲ್ಲಿ ವಾಂತಿ ಶುರುವಾಗಿದೆ. ಕೆಲ ಹೊತ್ತಲ್ಲೇ ರಕ್ತ ವಾಂತಿ ಮಾಡಿ ಅಸ್ವಸ್ಥರಾಗಿದ್ದಾರೆ. ಅಸ್ವಸ್ಥಗೊಂಡ ಐವರು ಸ್ಥಳೀಯ ಆಸ್ಪತ್ರೆಗೆ ತೆರಳಿ…
1 ಗಂಟೆ ಫೇಸ್ಬುಕ್, ಇನ್ ಸ್ಟಾಗ್ರಾಮ್ ಸ್ಥಗಿತ: ಮೆಟಾ ಸಿಇಒ ಮಾರ್ಕ್ ಝುಕರ್ ಬರ್ಗ್ ಗೆ 24,871 ಕೋಟಿ ರೂಪಾಯಿ ನಷ್ಟ
ಮೆಟಾ ಸಂಸ್ಥೆಯ ಪ್ರಮುಖ ಸಾಮಾಜಿಕ ಜಾಲತಾಣಗಳಾದ ಫೇಸ್ಬುಕ್ ಮತ್ತು ಇನ್ ಸ್ಟಾಗ್ರಾಂ ಇವುಗಳು ಮಂಗಳವಾರ(ಮಾರ್ಚ್ 6) ಒಂದು ಗಂಟೆ ಕಾಲ ಎದುರಿಸಿದ ಜಾಗತಿಕ ಸ್ಥಗಿತದ ನಂತರ ಒಂದೇ ದಿನದಲ್ಲಿ ಮೆಟಾ ಸಿಇಒ ಮಾರ್ಕ್ ಝುಕರ್ ಬರ್ಗ್ ಅವರು 3 ಬಿಲಿಯನ್ ಡಾಲರ್ (ಸುಮಾರು 24,871 ಕೋಟಿ ರೂ.) ಕಳೆದುಕೊಂಡಿದ್ದಾರೆ ಎಂದು ವರದಿ ತಿಳಿಸಿದೆ. ಬ್ಲೂಮ್ ಬರ್ಗ್ ಬಿಲಿಯನೇರ್ಸ್ ಇಂಡೆಕ್ಸ್ ನಲ್ಲಿ ಝುಕರ್ ಬರ್ಗ್ ಅವರ ಒಟ್ಟು ಸಂಪತ್ತು ಒಂದು ದಿನದಲ್ಲಿ 2.79 ಬಿಲಿಯನ್ ಡಾಲರ್ ಇಳಿಕೆಯಾಗಿ 176 ಬಿಲಿಯನ್ ಡಾಲರ್ ಗೆ ತಲುಪಿದೆ. ಒಂದು ಗಂಟೆ ಕಾಲ ಇದ್ದ ಜಾಗತಿಕ ಸ್ಥಗಿತದಿಂದಾಗಿ ಮೆಟಾ ಷೇರುಗಳ ಮೌಲ್ಯವೂ ಶೇ 1.6ರಷ್ಟು ಕುಸಿತ ಕಂಡು ಝುಕರ್ ಬರ್ಗ್ ಅವರ ಸಂಪತ್ತಿನ ಮೌಲ್ಯದಲ್ಲಿ ಇಳಿಕೆಗೆ ಕಾರಣವಾಯಿತು. ಮಂಗಳವಾರದ ಟ್ರೇಡಿಂಗ್ ಅವಧಿ ವಾಲ್ ಸ್ಟ್ರೀಟ್ ನಲ್ಲಿ ಅಂತ್ಯವಾಗುವ ವೇಳೆ ಮೆಟಾ ಷೇರು ಬೆಲೆ 490.22 ಆಗಿತ್ತು ಎನ್ನಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ…
ಇಲ್ಲೊಬ್ಬಳು ಸೊಸೆ ಅತ್ತೆಯ ಮೇಲಿನ ಸಿಟ್ಟಿನಿಂದ 50 ರೂಪಾಯಿ ನೋಟು ತೆಗೆದುಕೊಂಡು ಅದರಲ್ಲಿ ಅತ್ತೆಯ ಮೇಲಿನ ಸಿಟ್ಟು ತೋರಿಸಿದ್ದಾಳೆ. ಈಕೆಯ ಕೆಲಸ ಇದೀಗ ವೈರಲ್ ಆಗುತ್ತಿದೆ. ಅತ್ತೆಗೆ ಒಳ್ಳೆಯದಾಗಲಿ ಎಂದು ಕೆಲವು ಸೊಸೆಯರು ದೇವರಲ್ಲಿ ಕೇಳಿಕೊಂಡಿದ್ದರೆ ಇಲ್ಲೊಬ್ಬಳು ಸೊಸೆ ನಮ್ಮ ಅತ್ತೆ ಬೇಗ ಸಾಯಬೇಕು ಸ್ವಾಮಿ ಎಂದು ದೇವರಿಗೆ ಹರಕೆ ನೀಡಿದ್ದಾಳೆ. ಅಂದ ಹಾಗೆಯೇ ಇದು ದೇವಲ ಗಾಣಗಾಪುರದ ಶ್ರೀ ದತ್ತಾತ್ರೇಯ ದೇವರಲ್ಲಿ ಬೇಡಿಕೊಂಡಿರುವ ಪರಿ. ಈ ವಿಚಿತ್ರವನ್ನು ಕಂಡು ಇದೀಗ ಎಲ್ಲರು ಕೂಡ ಬೆರಗಾಗಿದ್ದಾರೆ. ಕಲಬುರಗಿ ಜಿಲ್ಲೆಯ ಅಫಜಲಪುರ ತಾಲ್ಲೂಕಿನ ದೇವಲ ಗಾಣಗಾಪುರದ ದತ್ತಾತ್ರೇಯ ದೇವರ ಗುಂಡಿಯಲ್ಲಿ ಕಾಣಿಕೆ ಹಾಕಿರುವ 50 ರೂಪಾಯಿ ಮುಖ ಬೆಲೆಯ ನೋಟ್ ನಲ್ಲಿ ಇಂತಹದ್ದೊಂದು ಬರಹ ಪತ್ತೆಯಾಗಿದೆ. ನೋಟಿನ ಮೇಲೆ ನಮ್ಮ ಅತ್ತೆ ಬೇಗ ಸಾಯಬೇಕು ಸ್ವಾಮಿ ಅನ್ನೋದನ್ನ ಬರೆಯಲಾಗಿದೆ. ಇದನ್ನು ಕಂಡು ಕೆಲವರು ಇದೆಂಥ ಕಾಲವಯ್ಯ ಎಂದು ಅಚ್ಚರಿಗೊಂಡಿದ್ದಾರೆ. ಇತ್ತೀಚೆಗೆ ದತ್ತನ ಹುಂಡಿ ಎಣಿಕೆ ಸಂದರ್ಭದಲ್ಲಿ ವಿಚಿತ್ರವಾಗಿ ಬರೆದಿರುವ 50 ರೂಪಾಯಿ ನೋಟ್…
ತುಮಕೂರು: ಬೆಂಗಳೂರಿನ ರಾಮೇಶ್ವರಂ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಯು ತುಮಕೂರು ನಗರದ ಕಡೆಗೆ ಓಡಾಡಿರುವ ಶಂಕೆಯ ಮೇರೆಗೆ ಬೆಂಗಳೂರು ಪೊಲೀಸ ಅಧಿಕಾರಿಗಳ ತಂಡ ಹಾಗೂ ಸ್ಥಳೀಯ ಪೊಲೀಸ್ ಅಧಿಕಾರಿಗಳ ತಂಡ ನಗರದ ಪ್ರಮುಖ ಸಿಸಿಟಿವಿಗಳ ಪರಿಶೀಲನೆಯಲ್ಲಿ ತೊಡಗಿದೆ. ನಿನ್ನೆ ರಾತ್ರಿ ದಿಢೀರ್ ಎಂದು ಬಂದ ಬೆಂಗಳೂರು ಪೊಲೀಸರ ತಂಡ ಸ್ಥಳೀಯ ಪೊಲೀಸ್ ಜಿಲ್ಲಾ ಪೊಲೀಸ್ ವರಿಷ್ಠ ಅಧಿಕಾರ ಅವರ ಜೊತೆ ತುಮಕೂರು ಮಹಾನಗರ ಪಾಲಿಕೆ ಆವರಣದಲ್ಲಿರುವ ಸ್ಮಾರ್ಟ್ ಸಿಟಿ ಯ ಸಿಸಿಟಿವಿ ಕಂಟ್ರೋಲ್ ರೂಮ್ ಗೆ ತೆರಳಿ ಸಾಕಷ್ಟ್ ಮಾಹಿತಿಯನ್ನು ಕಲೆ ಹಾಕಿತು. ಈ ನಡುವೆ ತುಮಕೂರು ನಗರದ ಹಾಗೂ ಬಸ್ ನಿಲ್ದಾಣ ಸೇರಿದಂತೆ ಪ್ರಮುಖ ಸ್ಥಳಗಳಲ್ಲಿರುವ ಸಿಸಿಟಿವಿಗಳ ವೀಡಿಯೊವನ್ನು ಪಡೆದುಕೊಂಡಿತು. ಅಲ್ಲದೆ ತಡ ರಾತ್ರಿಯವರೆಗೂ ಪೊಲೀಸರ ತಂಡ ಸುದೀರ್ಘ ಪರಿಶೀಲನೆ ನಡೆಸಿತು. ವಿಡಿಯೋ ನೋಡಿ: ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್…