Subscribe to Updates
Get the latest creative news from FooBar about art, design and business.
- ದೇಶದ 2ನೇ ಅತಿ ದೊಡ್ಡ ಕ್ರಿಕೆಟ್ ಕ್ರೀಡಾಂಗಣಕ್ಕೆ ಸಿಎಂ ಸಿದ್ದರಾಮಯ್ಯ ಶಂಕುಸ್ಥಾಪನೆ
- ಈ ವರ್ಷ 52 ಸಾವಿರ ಅತಿಥಿ ಶಿಕ್ಷಕರ ನೇಮಕ: ಸಚಿವ ಮಧು ಬಂಗಾರಪ್ಪ
- ಬೀದರ್ ಬ್ರಿಮ್ಸ್ (BRIMS) ಆಸ್ಪತ್ರೆಯಲ್ಲಿ ಕರ್ತವ್ಯ ನಿರತ ವೈದ್ಯರ ಮೇಲೆ ಭೀಕರ ಹಲ್ಲೆ: 7 ಮಂದಿ ಆರೋಪಿಗಳ ಬಂಧನ
- ತುಮಕೂರು ಜಿಲ್ಲೆಗೆ ‘ತುಮಕೂರು (ಬೆಂಗಳೂರು ಉತ್ತರ)’ ಎಂದು ಮರುನಾಮಕರಣ: ಗೃಹ ಸಚಿವ ಡಾ.ಜಿ.ಪರಮೇಶ್ವರ್
- ಮಾದಾವರ–ತುಮಕೂರು ಮೆಟ್ರೋ ರೈಲು ಯೋಜನೆ: ಸರ್ಕಾರಕ್ಕೆ ಸಲ್ಲಿಕೆಯಾಯ್ತು ಡಿಪಿಆರ್ ವರದಿ
- ಪಕ್ಷದ ಜವಾಬ್ದಾರಿ ನಿರ್ವಹಿಸದಿದ್ದರೆ ಶಿಸ್ತು ಕ್ರಮ: ಕಾಂಗ್ರೆಸ್ ಮುಖಂಡರ ಸಭೆಯಲ್ಲಿ ಶಾಸಕ ಕೆ. ಷಡಕ್ಷರಿ ಎಚ್ಚರಿಕೆ
- ಗುಬ್ಬಿ ಶಾಸಕರು, ಪುತ್ರನಿಂದ ಕುತಂತ್ರ ರಾಜಕಾರಣ: ಷಡ್ಯಂತ್ರಗಳಿಗೆ ಜಗ್ಗುವುದಿಲ್ಲ: ಜೆಡಿಎಸ್ ಮುಖಂಡ ನಾಗರಾಜು ಕಿಡಿ
- ತುಮಕೂರು: ಕುಲ್ಲಕ ವಿಷಯಕ್ಕೆ ಜಗಳ: ಕೊಲೆ
Author: admin
ತೆಲಂಗಾಣ ಮೂಲದ ಮೊಹಮ್ಮದ್ ಅಸ್ಫಾನ್ ಎಂಬ 30 ವರ್ಷದ ಯುವಕ ಉದ್ಯೋಗ ಅರಸಿ ರಷ್ಯಾ ತೆರಳಿದ್ದ. ಅಲ್ಲಿ ಆತನಿಗೆ ನೌಕರಿ ನೀಡುವುದಾಗಿ ಹೇಳಿ ರಷ್ಯಾ ಸೇನೆಯ ವ್ಯಾಗ್ನರ್ ಗ್ರೂಪ್ ಗೆ ಸೇರಿಸಿ ಮೋಸ ಮಾಡಲಾಗಿತ್ತು. ಇದೀಗ ಸಂಘರ್ಷದಲ್ಲಿ ಅವರು ಮೃತಪಟ್ಟಿದ್ದಾರೆ. ಪ್ರವಾಸ, ಉದ್ಯೋಗ ಅರಸಿ ರಷ್ಯಾಗೆ ತೆರಳಿರುವ ಭಾರತದ (India to Russia) ಯುವಕರನ್ನು ಅಲ್ಲಿನ ಅಧಿಕಾರಿಗಳು ಬಲವಂತವಾಗಿ ಅಥವಾ ಆಸೆ ತೋರಿಸಿ ಸೇನೆಗೆ ಸೇರಿಸಿಕೊಳ್ಳುತ್ತಿದ್ದು, ಇದರಿಂದ ಭಾರತದ ಯುವಕರು ಪ್ರಾಣ ಕಳೆದುಕೊಳ್ಳುವಂತಾಗಿದೆ ಎನ್ನುವ ಕೂಗು ಕೇಳಿಬಂದಿದೆ. ಮೊಹಮ್ಮದ್ ಸಾವಿನ ಕುರಿತು ರಷ್ಯಾದಲ್ಲಿರುವ ಭಾರತದ ರಾಯಭಾರಿ ಕಚೇರಿ ಮಾಹಿತಿ ಒದಗಿಸಿದ್ದು, ಈತನನ್ನು ಕೂಡಾ ರಷ್ಯಾ ಅಧಿಕಾರಿಗಳು ಬಲವಂತದಿಂದ ಸೇನೆ ಸೇರಿಸಿದ್ದರು ಎನ್ನುವ ಆಘಾತಕಾರಿ ಮಾಹಿತಿಯನ್ನು ರಾಯಭಾರಿ ಕಛೇರಿಯ ಅಧಿಕಾರಿಗಳು ಹೊರ ಹಾಕಿದ್ದಾರೆ. ಮೊಹಮ್ಮದ್ ಅಸ್ಫಾನ್ ಅವರು ಮೃತಪಟ್ಟಿರುವ ಅವರ ಕುಟುಂಬಸ್ಥರ ಜತೆ ಸಂಪರ್ಕದಲ್ಲಿದ್ದೇವೆ. ಮೊಹಮ್ಮದ್ ಅಸ್ಫಾನ್ ಅವರ ಪಾರ್ಥಿವ ಶರೀರವನ್ನು ಭಾರತಕ್ಕೆ ಕಳುಹಿಸುವ ಎಲ್ಲ ಪ್ರಯತ್ನ ಮಾಡುತ್ತಿದ್ದೇವೆ” ಎಂದು ರಾಯಭಾರಿ ಕಚೇರಿ…
ಇಂಧನ ಇಲಾಖೆಯ ಮಾಹಿತಿ ತಂತ್ರಜ್ಞಾನ ವ್ಯವಸ್ಥೆಯ ಉನ್ನತೀಕರಣದ ನಿಮಿತ್ತ, ಮಾರ್ಚ್ 10 ರಿಂದ 19 ರವರೆಗೆ ಒಟ್ಟು ಹತ್ತು ದಿನಗಳ ಕಾಲ ರಾಜ್ಯದ ಎಲ್ಲಾ ಎಸ್ಕಾಂಗಳ ಆನ್ ಲೈನ್ ಸೇವೆಗಳು (RAPDRP) ನಗರ ಪ್ರದೇಶದ ಗ್ರಾಹಕರಿಗೆ ಲಭ್ಯವಿರುವುದಿಲ್ಲ ಈ ಬಗ್ಗೆ ಪ್ರಕಟಣೆ ನೀಡಿರುವ ಇಂಧನ ಇಲಾಖೆ, ರಾಜ್ಯದ ಎಲ್ಲಾ ಎಸ್ಕಾಂಗಳ ವ್ಯಾಪ್ತಿಯಲ್ಲಿ ಒಟ್ಟು ಹತ್ತು ದಿನಗಳ ಕಾಲ ವಿದ್ಯುತ್ ಬಿಲ್ ಪಾವತಿ, ಹೊಸ ಸಂಪರ್ಕಕ್ಕಾಗಿ ಆನ್ ಲೈನ್ ಅರ್ಜಿ ಸಲ್ಲಿಕೆ, ಹೆಸರು ಮತ್ತು ಜಕಾತಿ ಬದಲಾವಣೆ ಸೇರಿದಂತೆ ಯಾವುದೇ ಆನ್ ಲೈನ್ ಸೇವೆಗಳು ಲಭ್ಯವಿರುವುದಿಲ್ಲ. ಆನ್ ಲೈನ್ ಸೇವೆಗಳು ಮಾತ್ರವೇ ತಾತ್ಕಾಲಿಕ ಸ್ಥಗಿತಗೊಂಡಿರುತ್ತವೆ ಹೊರತು ವಿದ್ಯುತ್ ಪೂರೈಕೆಯಲ್ಲಿ ಯಾವುದೇ ಬದಲಾವಣೆ ಆಗಲಿ, ಕಡಿತವಾಗಲಿ ಮಾಡುವುದಿಲ್ಲ. ಬಿಲ್ ತಂತ್ರಾಂಶವು ಕಾರ್ಯಾರಂಭಗೊಂಡ ನಂತರ ಸ್ಥಿರಗೊಳ್ಳಲು ಸುಮಾರು 15 ದಿನಗಳ ಕಾಲಾವಕಾಶ ಬೇಕಿರುವುದರಿಂದ ಈ ಸಮಯದಲ್ಲಿ ತಂತ್ರಾಂಶದ ಕಾರ್ಯನಿರ್ವಹಣೆಯಲ್ಲಿ ಸ್ವಲ್ಪ ಮಟ್ಟದ ವ್ಯತ್ಯಯ ಉಂಟಾಗಬಹುದು ಎಂದು ಪ್ರಕಟಣೆ ತಿಳಿಸಿದೆ. ಆದರೆ ಸಾಫ್ಟ್ ವೇರ್ ಉನ್ನತೀಕರಣ ಸಂದರ್ಭದಲ್ಲಿ…
ಖೇಲೋ ಇಂಡಿಯಾ ಕ್ರೀಡಾ ಕೂಟಗಳಲ್ಲಿ ಪದಕ ಗೆಲ್ಲುವ ಅಥ್ಲೀಟ್ ಗಳಿಗೆ ಇನ್ನು ಮುಂದೆ ಸರ್ಕಾರಿ ಹುದ್ದೆ ಪಡೆಯುವುದಕ್ಕೆ ಅರ್ಹರು ಎಂದು ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್ ತಿಳಿಸಿದ್ದಾರೆ. ಬುಧವಾರ ಅನುರಾಗ್ ಠಾಕೂರ್ “ಅತ್ಯುತ್ತಮ ಕ್ರೀಡಾ ವ್ಯವಸ್ಥೆ, ತಳಮಟ್ಟದಲ್ಲೇ ಪ್ರತಿಭೆಗಳನ್ನು ಪೋಷಿಸುವುದು ಪ್ರಧಾನಿ ಮೋದಿ ಅವರ ಕನಸು. ಇದಕ್ಕೆ ಅನುಗುಣವಾಗಿ ಖೇಲೋ ಇಂಡಿಯಾದ ಯೂತ್, ಯುನಿವರ್ಸಿಟಿ, ಪ್ಯಾರಾ ಹಾಗೂ ಚಳಿಗಾಲದ ಕ್ರೀಡಾಕೂಟಗಳಲ್ಲಿ ಪದಕ ಗೆದ್ದವರು ಇನ್ನು ಮುಂದೆ ಸರ್ಕಾರಿ ಹುದ್ದೆಗೆ ಅರ್ಹತೆ ಪಡೆಯಲಿದ್ದಾರೆ” ಎಂದು ಎಕ್ಸ್ ನಲ್ಲಿ ತಿಳಿಸಿದ್ದಾರೆ. ಸಿಬ್ಬಂದಿ ಹಾಗೂ ತರಬೇತಿ ಇಲಾಖೆಯು ಕ್ರೀಡಾ ಸಚಿವಾಲಯದೊಂದಿಗೆ ಸಮಾಲೋಚಿಸಿ ಕ್ರೀಡಾಪಟುಗಳು ಸರ್ಕಾರಿ ಉದ್ಯೋಗ ಪಡೆಯಲು ಎದುರು ನೋಡುತ್ತಿರುವವರಿಗೆ ಈ ಪರಿಷ್ಕೃತ ಆದೇಶ ಸಹಾಯಕವಾಗಲಿದೆ ಎಂದು ಠಾಕೂರ್ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಬದಲಾದ ಜಗತ್ತಿನಲ್ಲಿ ಹಣ ಗಳಿಸಲು ಸಾಕಷ್ಟು ಒಳ್ಳೆಯ ಮಾರ್ಗಗಳಿವೆ. ಆದರೆ ದುರಾಸೆಗೆ ಬಲಿಯಾಗಿ, ಸುಲಭದಲ್ಲಿ ಹೆಚ್ಚು ದುಡ್ಡುಮಾಡುವ ನಿಟ್ಟಿನಲ್ಲಿ ಅನೇಕರು ಅನ್ಯಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುತ್ತಾರೆ. ಅದರಲ್ಲಿ ಲೈಂಗಿಕ ಕ್ರಿಯೆಯೂ ಒಂದು. ಅಂತೆಯೇ ಇದೀಗ ಅಚ್ಚರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ದುಡ್ಡು ಮಾಡಲು ಬೆಂಗಳೂರಿನ ಜೋಡಿಯೊಂದು ತಮ್ಮದೇ ಪೋರ್ನ್ ವೀಡಿಯೋ ಮಾಡಿ ಅದನ್ನು ವೆಬ್ ಸೈಟ್ ಗೆ ಅಪ್ಲೋಡ್ ಮಾಡಿ ಸಿಕ್ಕಿಬಿದ್ದಿದ್ದಾರೆ. ಹೌದು, ಬೆಂಗಳೂರು ಮಹಾನಗರದಲ್ಲಿ ಯುವತಿಯೊಬ್ಬಳು ತನ್ನ ಪ್ರಿಯಕರನೊಂದಿಗೆ ಸೇರಿ ಲೈಂಗಿಕ ಚಟುವಟಿಕೆ ನಡೆಸಿ, ಚಿತ್ರೀಕರಿಸಿದ ವೀಡಿಯೋವನ್ನು ಪೋರ್ನ್ ವೆಬ್ ಸೈಟ್ ಗೆ ಅಪ್ಲೋಡ್ ಮಾಡುತ್ತಿದ್ದ ಪ್ರಕರಣ ಬೆಳಕಿಗೆ ಬಂದಿದೆ. ಈ ಬಗ್ಗೆ ಗುತ್ತಿಗೆದಾರ ಅಮರ್ ನಾಥ್ ಎಂಬವರು ಐಟಿ ಆಕ್ಟ್ (ಮಾಹಿತಿ ತಂತ್ರಜ್ಞಾನ ಕಾಯ್ದೆ) (IT Act) ಅಡಿಯಲ್ಲಿ ದೂರು ನೀಡಿದ್ದು, ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಲ್ಲದೆ ದೂರು ದಾಖಲಿಸುತ್ತಿದ್ದಂತೆ ಅಮರನಾಥ್ ಗೆ ಖತರ್ನಾಕ್ ಜೋಡಿಗಳು ಧಮ್ಕಿ ಹಾಕಿದ್ದು, ಪೊಲೀಸರ ಬಳಿ ದೂರುದಾರರು ರಕ್ಷಣೆ ಕೋರಿದ್ದಾರೆ. ದುಡ್ಡು ಮಾಡುವ…
ಸುಳ್ಳು ಜಾತಿ ಪ್ರಮಾಣ ಪತ್ರ ಪಡೆಯುವರನ್ನು ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯ ಬಂಧಿಸಲಿದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಹೇಳಿದ್ದಾರೆ. ಅಂಬೇಡ್ಕರ್ ಭವನದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ಎಸ್ಸಿ, ಎಸ್ಟಿ ನೌಕರರ ಸಮನ್ವಯ ಸಮಿತಿಯು ಏರ್ಪಡಿಸಿದ್ದ 5ನೆ ರಾಜ್ಯ ಮಟ್ಟದ ಜಾಗೃತ ಸಮಾವೇಶ ಉದ್ಘಾಟಿಸಿ ಮಾತನಾಡಿ, ಸುಳ್ಳು ಜಾತಿ ಪ್ರಮಾಣ ಪತ್ರ ಪಡೆಯುವರ ಮತ್ತು ನೀಡುವರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಬಂಧಿಸುವ ಅಧಿಕಾರ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯಕ್ಕೆ ಸಿಗಲಿದೆ. ಇದರಿಂದ ನಕಲಿ ಜಾತಿ ಪ್ರಮಾಣಪತ್ರ ಹಾವಳಿಗೆ ಕಡಿವಾಣ ಬೀಳಲಿದೆ ಎಂದರು. ಜಾತಿಗಣತಿ ವರದಿಯಲ್ಲಿ ಯಾವ ಜಾತಿಯ ಜನಸಂಖ್ಯೆ ಹೆಚ್ಚಿದ್ದಾರೆ, ಯಾವ ಜಾತಿ ಜನ ಕಡಿಮೆ ಇದ್ದಾರೆ ಎಂಬುದು ಅನಧಿಕೃತವಾಗಿ ಗೊತ್ತಾದ ತಕ್ಷಣ ಅಸಹನೆಯ ಮಾತು ಕೇಳಿ ಬರುತ್ತಿವೆ. ಜಾತಿಗಣತಿ ವರದಿಗೆ ತೀವ್ರ ವಿರೋಧವಿದ್ದರೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅದನ್ನು ಸ್ವೀಕರಿಸಿದ್ದಾರೆ. ಈ ವರದಿಯನ್ನು ಜಾರಿಗೊಳಿಸುವ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಿ ಸದನದಲ್ಲಿ ಮಂಡಿಸುವುದಾಗಿ ಹೇಳಿದ್ದಾರೆ ಎಂದು ತಿಳಿಸಿದ್ದಾರೆ. ಎಸ್ಸಿ,…
ಬೀದರ: ಜಿಲ್ಲಾ ಪೊಲೀಸ್ ನ ವಿಶೇಷ ಮಹಿಳಾ ಘಟಕವಾದ ‘ಅಕ್ಕ ಪಡೆ’ಯ ಪಿ.ಎಸ್.ಐ ಸುವರ್ಣಾ ಅವರ ನೇತೃತ್ವದಲ್ಲಿ ಮಹಿಳಾ ಸಬಲೀಕರಣ ಮತ್ತು ರಸ್ತೆ ಸುರಕ್ಷತೆ ಅರಿವು ಮುಡಿಸಲು ಜಿಲ್ಲಾದ್ಯಂತ ಬೈಕ್ ಜಾಥಾಕ್ಕೆ ಚಾಲನೆ ನೀಡಲಾಯಿತು. ರೋಟರಿ ಕ್ಲಬ್ ರವರ ಸಹಯೋಗದೊಂದಿಗೆ ಈ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಈ ಜಾಥಾವು ಮಾರ್ಚ್ 5ರಿಂದ ಆರಂಭಗೊಂಡಿದ್ದು, 8ರವರೆಗೆ ಮೂರು ದಿನಗಳ ಕಾಲ ಜಿಲ್ಲೆಯಾದ್ಯಂತ ಸಂಚರಿಸಲಿದೆ. ಪೊಲೀಸ್ ಇಲಾಖೆಯ ಶ್ರೇಯೊಭಿವೃದ್ದಿಯಲ್ಲಿ ಮಹಿಳಾ ಅಧಿಕಾರಿಗಳು ಮತ್ತು ಸಿಬ್ಬಂದಿಯವರ ಕೊಡುಗೆ ಅಪಾರವಾದದ್ದು, ಸಮಾಜದ ದುರ್ಬಲ ವರ್ಗದವರ (ಮಹಿಳೆಯರು & ಮಕ್ಕಳು) ನ್ಯಾಯ ಮತ್ತು ಹಕ್ಕುಗಳನ್ನು ಕಾಪಾಡಲು ಬೀದರ ಜಿಲ್ಲಾ ಪೊಲೀಸ್ ಅದರಲ್ಲೂ ನಮ್ಮ ಮಹಿಳಾ ಅಧಿಕಾರಿ ಮತ್ತು ಸಿಬ್ಬಂದಿಯವರು ಸದಾ ಶ್ರಮಿಸುತ್ತಿದ್ದಾರೆ. ಈ ಜಾಥಾಕ್ಕೆ ಸಹಕರಿಸಿದ ರೋಟರಿ ಕ್ಲಬ್ ನ ಪದಾಧಿಕಾರಿ ಬೀದರ್ ಜಿಲ್ಲಾ ಪೊಲೀಸರು ಅಭಿನಂದನೆ ತಿಳಿಸಿದ್ದಾರೆ. ವರದಿ: ಅರವಿಂದ್ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149…
ಭೋಪಾಲ್: ‘ ಮನೆಯ ಟಿವಿಯಲ್ಲಿ ಮೋದಿ ಫೋಟೊ ಬಂದರೆ ಆ ಮನೆಗೆ ದಾರಿದ್ರ್ಯ ಸುತ್ತಿಕೊಳ್ಳುತ್ತದೆ’ ಇದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೀಡಿದ ಹೇಳಿಕೆ. ಮಧ್ಯಪ್ರದೇಶದ ಧಾರ್ ನಲ್ಲಿ ನಡೆಯುತ್ತಿರುವ ‘ಭಾರತ ಜೋಡೊ ಯಾತ್ರೆ’ ಸಂದರ್ಭದಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಆದರೆ ಮಾತಿನ ಭರದಲ್ಲಿ ವಿವಾದಾತ್ಮಕ ಹೇಳಿಕೆಯನ್ನೂ ನೀಡಿದ್ದಾರೆ. ‘ ಬೆಳಿಗ್ಗೆ ಟಿವಿ ಆನ್ ಮಾಡಿದರೆ ಮೊದಲು ಮೋದಿ ಅವರ ಫೋಟೊ ಕಾಣುತ್ತದೆ. ಯಾರ ಮನೆಯಲ್ಲಿ ಮೋದಿ ಫೋಟೊ ಕಾಣುವುದೋ ಆ ಮನೆಗೆ ದರಿದ್ರ ಅಂಟಿಕೊಳ್ಳುತ್ತದೆ’ ಎಂದು ಹೇಳಿದ್ದಾರೆ. ಖರ್ಗೆ ಈ ಹೇಳಿಕೆಗೆ ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೋದಿಗೆ ಅಭಿವೃದ್ಧಿ ಬೇಡ, ಅವರಿಗೆ ಬಡವರನ್ನು ಕಂಡರೆ ಆಗುವುದಿಲ್ಲ. ಬಡವರ ಮಕ್ಕಳು ಓದಿ ಮುಂದೆ ಬಂದರೆ ಬಿಜೆಪಿಗೆ ಸಮಸ್ಯೆ ಹೀಗಾಗಿ ಬಡವರ ವಿರುದ್ಧವೇ ಯೋಜನೆ ರೂಪಿಸುತ್ತಾರೆ ಎಂದು ಖರ್ಗೆ ವಾಗ್ದಾಳಿ ನಡೆಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ…
ಈ ಎಣ್ಣೆ ಹಾಕಿ.. ನಿಮ್ಮ ಆರೋಗ್ಯಕ್ಕೂ ಬೆಸ್ಟ್: ಸ್ನಾನ ಮಾಡಿ ಬಂದು ತಲೆ ಒಣಗಿಸಿಕೊಂಡ ಬಳಿಕ ನೆತ್ತಿಗೆ ಒಂದು ಚಮಚ ಎಳ್ಳು ಎಣ್ಣೆ ಹಾಕಿಕೊಂಡರೆ ದೇಹ ತಂಪಾಗಿರುತ್ತದೆ ಹಾಗೂ ಕಣ್ಣಿನ ಬದಿಯಲ್ಲಿ ಬರುವ ಮಡ್ಡಿ ದೂರವಾಗುತ್ತದೆ. ಚಳಿಗಾಲದಲ್ಲಿ ಕೈ, ಕಾಲು ಸೆಳೆತ ಎನ್ನುವವರು ಒಂದು ಚಮಚ ಎಳ್ಳೆಣ್ಣೆಯನ್ನು ಎರಡೂ ಕೈಗಳಿಂದ ಚೆನ್ನಾಗಿ ಉಜ್ಜಿ ಕೈ ಕಾಲಿಗೆ ಮಸಾಜು ಮಾಡಬೇಕು. ಇದರಿಂದ ದಿನವಿಡೀ ತ್ವಚೆ ಮೃದುವಾಗಿರುತ್ತದೆ. ಬೇರೆ ಎಣ್ಣೆಗಳಿಗೆ ಹೋಲಿಸಿದರೆ ಎಳ್ಳೆಣ್ಣೆ ಅಂಟು ಜಾಸ್ತಿ.. ಹಿಂಸೆ ಅನ್ನಸಿದ್ರೂ ಆರೋಗ್ಯದ ದೃಷ್ಟಿಯಿಂದ ಇದು ಬೆಸ್ಟ್. ಚಕೋತ ಹಣ್ಣು ತಿನ್ನುವುದರಿಂದ ಇವೆ ಹಲವಾರು ಆರೋಗ್ಯ ಪ್ರಯೋಜನಗಳು: ಚಕೋತ ಹಣ್ಣಿನಲ್ಲಿರುವ ಪೋಷಕಾಂಶಗಳು ಆರೋಗ್ಯಕ್ಕೆ ಹಲವಾರು ಪ್ರಯೋಜನಗಳನ್ನು ನೀಡುತ್ತದೆ. ಹೌದು, ಇದು ತೂಕ ಇಳಿಸುವ ಆಹಾರದ ಭಾಗವಾಗಿ ಬಳಕೆಯಾಗುತ್ತದೆ. ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಚಕೋತ ಹಣ್ಣುಗಳು ಮಧುಮೇಹವನ್ನು ತಡೆಯುತ್ತದೆ. ಹೃದಯದ ಆರೋಗ್ಯವನ್ನು ಸುಧಾರಿಸುತ್ತದೆ. ಮೂತ್ರಪಿಂಡದ ಆರೋಗ್ಯವನ್ನು ಉತ್ತೇಜಿಸುತ್ತದೆ. ದೇಹವನ್ನು ಹೈಡೇಟ್ ಮಾಡುತ್ತದೆ. ಮುಖದಲ್ಲಿನ ಕಪ್ಪು ಕಲೆಗಳನ್ನು ಕಡಿಮೆ ಮಾಡುತ್ತದೆ.…
ಹರ್ಯಾಣ: ಹರ್ಯಾಣದ ರೇವಾರಿಯಲ್ಲಿ ಸರ್ಕಾರಿ ಬಸ್ ಮತ್ತು ಕಾರು ಪರಸ್ಪರ ಮುಖಾಮುಖಿ ಡಿಕ್ಕಿ ಹೊಡೆದು ಈ ದುರಂತ ನಡೆದಿದ್ದು, ಐವರು ಮೃತಪಟ್ಟಿದ್ದಾರೆ. ಮೃತರನ್ನು ಚಾರ್ಖಿ ದಾದ್ರಿಯ ಚಾಂಗ್ರೋಡ್ ಗ್ರಾಮದ ಅಜಿತ್ (45), ಸುಂದರ್ (42), ಬಿಲ್ಲು (38) ಮತ್ತು ಭಿವಾನಿ ಜಿಲ್ಲೆಯ ಸೂರತ್ (70) ಮತ್ತು ಪ್ರತಾಪ್ (55) ಎಂದು ಗುರುತಿಸಲಾಗಿದೆ. ಮೃತರೆಲ್ಲ ಹರ್ಯಾಣದ ಚಾರ್ಕಿ ದಾದ್ರಿ ನಿವಾಸಿಗಳು. ಮೃತರು ಮದುವೆ ಸಮಾರಂಭವೊಂದನ್ನು ಮುಗಿಸಿ ಬರುತ್ತಿದ್ದಾಗ ಮಹೇಂದ್ರಗಢ ರಸ್ತೆಯಲ್ಲಿ ಅಪಘಾತ ಸಂಭವಿಸಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ, ಆಗಲೇ ಮೃತಪಟ್ಟಿದ್ದರು ಎಂದು ವೈದ್ಯರು ತಿಳಿಸಿದ್ದಾರೆ. “ಮೃತದೇಹಗಳನ್ನು ಶವಾಗಾರದಲ್ಲಿ ಇರಿಸಲಾಗಿದ್ದು, ಎಫ್ಐಆರ್ ದಾಖಲಿಸಿ, ತನಿಖೆ ಆರಂಭಿಸಲಾಗಿದೆ” ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಮೈಸೂರಿನ ಪ್ರಲಕ್ಷ ಚಾರಿಟೇಬಲ್ ಟ್ರಸ್ಟ್, ಚಾಮರಾಜನಗರ ಲೋಕಸಭಾ ಕ್ಷೇತ್ರದ ಡಾ. ಮೋಹನ್ ಎನ್.ಎಸ್. ಸ್ನೇಹ ಬಳಗ, ರಾಜ್ಯ ರೈತ ಕಿಸಾನ್ ಸಂಘ ಮತ್ತು ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಎಚ್.ಡಿ. ಕೋಟೆ ಪಟ್ಟಣದ ಅಂಬೇಡ್ಕರ್ ಭವನದಲ್ಲಿ ಬೆನ್ನುಹುರಿ ಮತ್ತು ಕೀಲುಮೂಳೆ ಶಸ್ತ್ರಚಿಕಿತ್ಸಾ ತಜ್ಞ ಹಾಗೂ ಪ್ರಲಕ್ಷ ಆಸ್ಪತ್ರೆಗಳ ಸಂಸ್ಥಾಪಕ ನಿರ್ದೇಶಕ ಡಾ. ಮೋಹನ್ ಎನ್.ಎಸ್. ರವರು ರಚಿಸಿರುವ ‘ರೈತರೇ ಆರೋಗ್ಯವಂತರಾಗಿ’ ಎಂಬ ಕೃತಿ ಲೋಕಾರ್ಪಣೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ರಾಜ್ಯ ರೈತ ಕಿಸಾನ್ ಸಂಘದ ಪ್ರಾಂತ್ಯ ಅಧ್ಯಕ್ಷ ನಾರಾಯಣಸ್ವಾಮಿ ಮಾತನಾಡಿ ‘ರಾಸಾಯನಿಕಯುಕ್ತ ಅಹಾರ ಪದಾರ್ಥಗಳನ್ನು ಸೇವಿಸುತ್ತಾ ಇಂದು ಮನುಷ್ಯನ ಆಯಸ್ಸು ಕಡಿಮೆಯಾಗುತ್ತಾ ಸಾಗಿದೆ, ಸಾವಯವ ಕೃಷಿಯನ್ನು ಪ್ರೋತ್ಸಾಹಿಸುವ ಕೆಲಸ ಸರ್ಕಾರಗಳು ಮಾಡಬೇಕಿದೆ. ರೈತನು ಬೆಳೆದ ಸಾವಯವ ಬೆಳೆಗಳಿಗೆ ಸೂಕ್ತ ಬೆಂಬಲ ಬೆಲೆ ನೀಡಬೇಕು’ ಎಂದು ಒತ್ತಾಯಿಸಿದರು. ಪುಸ್ತಕ ಬಿಡುಗಡೆಗೊಳಿಸಿದ ಆರ್.ಎಸ್.ಎಸ್ ನ ಮುಖಂಡ ಮ.ವೆಂಕರಾಮ್ ಜಿ ಮಾತನಾಡಿ ‘ರೈತರೇ ಆರೋಗ್ಯವಂತರಾಗಿ ಎಂಬ ಪುಸ್ತಕವನ್ನು ಅಧ್ಯಯನ ಮಾಡಿದಾಗ ರೈತರ ಹಲವಾರು ಸಮಸ್ಯೆಗಳು…