Subscribe to Updates
Get the latest creative news from FooBar about art, design and business.
- ಸುಧಾಮೂರ್ತಿ ಹಾಗೂ ರಮೇಶ್ ಅರವಿಂದ್ ಅವರಿಂದ ಕೆ.ಎನ್ ಗಣೇಶಯ್ಯ ಅವರ “ಪುಣ್ಯಕೋಟಿ ಶತಕರುಣಿ” ದೃಶ್ಯಕಾವ್ಯದ ಲೋಕಾರ್ಪಣೆ
- ಆ.8ಕ್ಕೆ ಬೆಂಗಳೂರಿನಲ್ಲಿ ಪತ್ರಕರ್ತರ ನಾಲ್ಕನೇ ರಾಜ್ಯ ಸಮ್ಮೇಳನ: ಜಾನಸನ್ ಘೋಡೆ
- ಚಿತ್ರಕಲಾ ಶಿಕ್ಷಕರ ನೇಮಕ: ಇನ್ನೆಷ್ಟು ವಿಳಂಬ?
- ತುಮಕೂರು: ಎಸ್.ಐ.ಆರ್ ಪ್ರಕ್ರಿಯೆಗೆ ಸೂಕ್ತ ಮಾರ್ಗದರ್ಶನ ನೀಡಿ
- ತುಮಕೂರು: ಜುಲೈ 22ರಂದು ಉದ್ಯಮಶೀಲತೆ ತಿಳುವಳಿಕೆ ಶಿಬಿರ
- ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಮೀನುಗಾರಿಕೆ ತರಬೇತಿ ಕೇಂದ್ರ ಸ್ಥಾಪಿಸಲು ಕ್ರಮ: ಶಾಸಕ ಸಿ.ಬಿ.ಸುರೇಶ್ ಬಾಬು
- ಕೊರಟಗೆರೆ: ವಿಷಪೂರಿತ ಆಹಾರ ಸೇವನೆ: 59 ಕುರಿಗಳ ಸಾವು
- ತುಮಕೂರು: ಜು.18 ರಿಂದ 26ರವರೆಗೆ ಗಮಕ ಹಬ್ಬ
Author: admin
ಮದ್ಯ ನೀತಿ ಪ್ರಕರಣದಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬಂಧನದ ವಿರುದ್ಧ ದೆಹಲಿ ಪೊಲೀಸರು ಪ್ರತಿಭಟನಾ ಮೆರವಣಿಗೆಗೆ ಅನುಮತಿ ನಿರಾಕರಿಸಿದ್ದಾರೆ. ಇಂದು ಪ್ರಧಾನಿ ನರೇಂದ್ರ ಮೋದಿ ಅವರ ಅಧಿಕೃತ ನಿವಾಸಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆಗೆ ಪಕ್ಷದ ನಾಯಕತ್ವ ಕರೆ ನೀಡಿದೆ. ಪೊಲೀಸರು ಅನುಮತಿ ನಿರಾಕರಿಸಿದ್ದರು. ಆದರೆ ಆಮ್ ಆದ್ಮಿ ಪಕ್ಷ ಅನುಮತಿಯಿಲ್ಲದೆ ಪಾದಯಾತ್ರೆ ನಡೆಸಲು ನಿರ್ಧರಿಸಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಬಿಗಿ ಭದ್ರತೆ ಏರ್ಪಡಿಸಿದ್ದಾರೆ. ದೆಹಲಿಯ ಆಯಕಟ್ಟಿನ ಪ್ರಮುಖ ಪ್ರದೇಶಗಳಲ್ಲಿ ಕರ್ಫ್ಯೂ ವಿಧಿಸಲಾಗುವುದು. ತುಘಲಕ್ ರಸ್ತೆ, ಸಫ್ದರ್ ಜಂಗ್ ರಸ್ತೆ ಮತ್ತು ಕಮಲ್ ಅತಾತುರ್ಕ್ ಮಾರ್ಗದಲ್ಲಿ ಸಂಚಾರ ನಿರ್ಬಂಧಗಳನ್ನು ವಿಧಿಸಲು ನಿರ್ಧರಿಸಲಾಗಿದೆ. ಇಡಿ ಕಸ್ಟಡಿಯಲ್ಲಿ ಕೇಜ್ರಿವಾಲ್ ಅವರನ್ನು ಇನ್ನೂ ವಿಚಾರಣೆ ನಡೆಸಲಾಗುತ್ತಿದೆ. ಸಾಮಾಜಿಕ ಮಾಧ್ಯಮದಲ್ಲಿ ‘ಮೋದಿಯ ದೊಡ್ಡ ಭಯ, ಕೇಜ್ರಿವಾಲ್’ ಎಂಬ ಶೀರ್ಷಿಕೆಯೊಂದಿಗೆ ಪ್ರಚಾರವನ್ನು ಪ್ರಾರಂಭಿಸಿದ್ದರು. ಇದೇ ವೇಳೆ ಬಿಜೆಪಿ ಕೂಡ ಕೇಜ್ರಿವಾಲ್ ರಾಜೀನಾಮೆಗೆ ಆಗ್ರಹಿಸಿದೆ. ವೀರೇಂದ್ರ ಸಚ್ದೇವ ಅವರ ನೇತೃತ್ವದಲ್ಲಿ ಬಿಜೆಪಿ ಫಿರೋಜ್ ಷಾ ಕೋಟ್ಲಾ ಕ್ರೀಡಾಂಗಣದಿಂದ ದೆಹಲಿ ಸೆಕ್ರೆಟರಿಯೇಟ್ ಗೆ…
ಹೋಳಿ ಹಬ್ಬದ ಸಂಭ್ರಮ ಎಲ್ಲ ಕಡೆ ಆಚರಣೆ ಮಾಡಲಾಗುತ್ತಿದೆ. ಹಾಗೆನೇ ಇಲ್ಲೊಂದು ಕಡೆ ಮೆಟ್ರೋದಲ್ಲಿ ಯುವತಿಯರು ಹೋಳಿ ಸಂಭ್ರಮಾಚರಣೆಯಲ್ಲಿ ಪರಸ್ಪರ ರೋಮ್ಯಾನ್ಸ್ ಮೂಲಕ ಮಾಡಿದ್ದು, ಇದರ ವೀಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗ್ತಿದೆ. ಈ ವೀಡಿಯೋಗೆ ಇದೀಗ ಎಲ್ಲಾ ಕಡೆ ನೆಟ್ಟಿಗರಿಂದ ಭಾರೀ ಟೀಕೆಗಳು ವ್ಯಕ್ತವಾಗುತ್ತಿದೆ. ಕೆಲವು ನೆಟ್ಟಿಗರಂತೂ ಯುವತಿಯರ ವಿರುದ್ಧ ದೆಹಲಿ ಮೆಟ್ರೋ ರೈಲು ನಿಗಮ ಈ ಕುರಿತು ಕ್ರಮ ಕೈಗೊಳ್ಳಬೇಕೆಂದು ಆಗ್ರಹ ಮಾಡಿದ್ದಾರೆ. ಲಹುನ್ ಮೂ ಲಗ್ ಗಯಾ ಎಂಬ ಹಾಡಿಗೆ ಯುವತಿಯರು ರೀಲ್ಸ್ ಮಾಡುತ್ತಾ ಬಣ್ಣ ಎರಚಿಕೊಳ್ಳುತ್ತಾ ರೊಮ್ಯಾನ್ಸ್ ಮಾಡುವ ದೃಶ್ಯವಿದೆ. ಇದನ್ನು ಮೆಟ್ರೋದಲ್ಲಿ ಕೆಲವು ನೋಡಿದರೂ ಗಮನ ಹರಿಸದೇ ತಮ್ಮ ಪಾಡಿಗೆ ತಾವಿದ್ದಾರೆ. ಮೆಟ್ರೋದಲ್ಲಿ ಈ ವೀಡಿಯೋವನ್ನು ನಿಜವಾಗಿಯೂ ಚಿತ್ರೀಕರಿಸಲಾಗಿದೆಯೇ ಎಂದು ಪರಿಶೀಲನೆ ಮಾಡಲಾಗುತ್ತಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
“‘ಭಾರತ್ ಮಾತಾ ಕೀ ಜೈ’ ಮತ್ತು ‘ಜೈ ಹಿಂದ್’ ಘೋಷಣೆಗಳನ್ನು ಆರಂಭಿಸಿದ್ದು ಇಬ್ಬರು ಮುಸ್ಲಿಮರು” ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದ್ದಾರೆ. ಈ ಘೋಷಣೆಗಳನ್ನು ಬಿಟ್ಟುಕೊಡಲು ಸಂಘಪರಿವಾರ ಸಿದ್ಧವಿದೆಯೇ? ಎಂದು ಪ್ರಶ್ನಿಸಿದ್ದಾರೆ. ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ) ವಿರುದ್ಧ ಸಿಪಿಐಎಂ ರಾಜ್ಯದಲ್ಲಿ ಆಯೋಜಿಸಿದ್ದ ನಾಲ್ಕನೇ ಸತತ ರ್ಯಾಲಿಯನ್ನು ಉದ್ದೇಶಿಸಿ ವಿಜಯನ್ ಮಾತನಾಡಿದ್ದು, ದೇಶದ ಇತಿಹಾಸ ಮತ್ತು ಸ್ವಾತಂತ್ರ್ಯ ಚಳವಳಿಗೆ ಮುಸ್ಲಿಂ ಆಡಳಿತಗಾರರು, ಸಾಂಸ್ಕೃತಿಕ ಪ್ರತಿಮೆಗಳು ಮತ್ತು ಅಧಿಕಾರಿಗಳ ಮಹತ್ವದ ಕೊಡುಗೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ. ಐತಿಹಾಸಿಕ ಉದಾಹರಣೆಗಳೊಂದಿಗೆ ತಮ್ಮ ಸಮರ್ಥನೆಯನ್ನು ಬೆಂಬಲಿಸಿದ ವಿಜಯನ್, ಅಜೀಮುಲ್ಲಾ ಖಾನ್ ಎಂಬ ಮುಸ್ಲಿಂ ವ್ಯಕ್ತಿ ‘ಭಾರತ್ ಮಾತಾ ಕಿ ಜೈ’ ಘೋಷಣೆಯನ್ನು ರಚಿಸಿದ್ದಾರೆ ಎಂದು ಉಲ್ಲೇಖಿಸಿದ್ದಾರೆ. “ಈ ವೇಳೆ ಸಂಘಪರಿವಾರದ ಮುಖಂಡರು ‘ಭಾರತ್ ಮಾತಾ ಕಿ ಜೈ’ ಘೋಷಣೆ ಕೂಗುವಂತೆ ಹೇಳಿದ್ದಾರೆ. ಈ ಘೋಷಣೆಯನ್ನು ರೂಪಿಸಿದವರು ಅಜೀಮುಲ್ಲಾ ಖಾನ್ ಎಂದು ಸಂಘ ಪರಿವಾರಕ್ಕೆ ತಿಳಿದಿದೆಯೇ ಎಂದು ನನಗೆ ಖಚಿತವಿಲ್ಲ ಎಂದು ಸಂಘ ಪರಿವಾರದ ವಿರುದ್ಧ ಹರಿಹಾಯ್ದಿದ್ದಾರೆ.…
ನೀರಿನ ಬಿಕ್ಕಟ್ಟು ಉಲ್ಬಣಗೊಳ್ಳುತ್ತಿದ್ದಂತೆ, 15 ಲಕ್ಷಕ್ಕೂ ಹೆಚ್ಚು ಉದ್ಯೋಗಿಗಳು ಐಟಿ ಕಂಪನಿಗಳಿಗೆ ಮನೆಯಿಂದಲೇ ಕೆಲಸ ಮಾಡಲು ಅವಕಾಶ ನೀಡುವಂತೆ ಒತ್ತಾಯಿಸಿದ್ದಾರೆ, ಇದಕ್ಕೆ ತಜ್ಞರು ಸಹಮತ ವ್ಯಕ್ತಪಡಿಸಿದ್ದು, ಇದರಿಂದ ನಗರದಲ್ಲಿನ ಒತ್ತಡ ಕಡಿಮೆಯಾಗಲಿದೆ. ಜತೆಗೆ ನೀರಿನ ಬಿಕ್ಕಟ್ಟನ್ನು ನಿವಾರಿಸಲು ಸಹಾಯ ಮಾಡುತ್ತದೆ ಎಂದು ನಂಬಿದ್ದಾರೆ. 2,600 MLD ಗಳ ಅವಶ್ಯಕತೆಯ ವಿರುದ್ಧ ಬೆಂಗಳೂರು ದಿನಕ್ಕೆ ಸುಮಾರು 500 ಮಿಲಿಯನ್ ಲೀಟರ್ ನೀರಿನ (MLD) ಕೊರತೆಯನ್ನು ಎದುರಿಸುತ್ತಿರುವ ಕಾರಣ ಈ ಬೆಳವಣಿಗೆಯಾಗಿದೆ. ಆದ್ದರಿಂದ, ನೀರಿನ ಬಿಕ್ಕಟ್ಟು ಶಮನಗೊಳ್ಳುವ ತನಕ ಮನೆಯಿಂದಲೇ ಕೆಲಸ ಮಾಡಲು ಪ್ರೋತ್ಸಾಹಿಸುವಂತೆ ತಜ್ಞರು ಸರಕಾರವನ್ನು ಒತ್ತಾಯಿಸಿದ್ದಾರೆ. ಒಂದು ವರ್ಷದವರೆಗೆ ಮನೆಯಿಂದ ಕೆಲಸ ಮಾಡಲು ಅವಕಾಶ ನೀಡುವುದರಿಂದ ಸುಮಾರು 10 ಲಕ್ಷ ಜನರು ತಮ್ಮ ಊರುಗಳಿಗೆ ಮರಳಬಹುದು, ಇದರಿಂದಾಗಿ ಬೆಂಗಳೂರಿನ ಸಂಪನ್ಮೂಲಗಳ ಮೇಲೆ ಸ್ವಲ್ಪ ಒತ್ತಡ ಕಡಿಮೆ ಮಾಡಬಹುದು ಎನ್ನಲಾಗಿದೆ. 1980 ರ ದಶಕದಲ್ಲಿ, ನಗರದ ಜನಸಂಖ್ಯೆಯು 25 ರಿಂದ 30 ಲಕ್ಷದ ನಡುವೆ ಇತ್ತು, ಆದರೆ ಈಗ ಅದು 1.5 ಕೋಟಿಗೆ…
ಲೋಖಸಭೆ ಚುನಾವಣೆಗೆ ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಡಾ.ಸಿ.ಎನ್. ಮಂಜುನಾಥ್ ಚುನಾವಣೆಯಲ್ಲಿ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಕನಕಪುರದಲ್ಲಿ ಮಾತನಾಡಿದ ಡಾ.ಸಿ.ಎನ್. ಮಂಜುನಾಥ್, ಕನಕಪುರದಲ್ಲಿ ಬಿಜೆಪಿ-ಜೆಡಿಎಸ್ ಸಮ್ಮಿಲನ ಸಭೆ ನನಗೆ ಆತ್ಮವಿಶ್ವಾಸ ಹಿಮ್ಮಡಿಗೊಳಿಸಿದೆ. ಉರಿ ಬಿಸಿಲಿನಲ್ಲೂ ಜನರು ಕಿಕ್ಕಿರಿದು ತುಂಬಿದ್ದರು. ಈ ಬಾರಿ ನಾನು ಗೆಲ್ಲುವುದು ಶೇ. 100 ರಷ್ಟು ಖಚಿತವಾಗಿದೆ. ಟೀಕೆ ಟಿಪ್ಪಣಿಗಳಿಗೆ ನಗುವೇ ನನ್ನ ಉತ್ತರ ಎಂದರು. ಮಂಜುನಾಥ್ ಅವರಿಗೆ ಕ್ಷೇತ್ರ ಪರಿಚಯ ಇಲ್ಲ ಎಂದು ಕಾಂಗ್ರೆಸ್ ನಾಯಕರು ಹೇಳಿದ್ದಾರೆ. ನನಗೆ ಕ್ಷೇತ್ರ ಪರಿಚಯ ಇಲ್ಲದೇ ಇರಬಹುದು. ಆದರೆ ಜನ ಪರಿಚಯ ಇದ್ದಾರೆ. ನಿಮ್ಮ ಋಣ ತೀರಿಸುತ್ತೇವೆ ಅಂತಾ ಕ್ಷೇತ್ರದ ಜನರೇ ಹೇಳುತ್ತಿದ್ದಾರೆ. ಹೀಗಾಗಿ ವಿರೋಧಿಗಳ ಟೀಕೆ ಟಿಪ್ಪಣಿಗಳಿಗೆ ನಗುವೇ ನನ್ನ ಉತ್ತರ ಎಂದು ಮಂಜುನಾಥ್ ತಿಳಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಬೆಂಗಳೂರು ನಗರಗಳಲ್ಲಿ ಇತ್ತೀಚೆಗೆ ಲೈಂಗಿಕ ದೌರ್ಜನ್ಯ ಪ್ರಕರಣಗಳು ವಿಪರೀತ ಆಗುತ್ತಿವೆ. ಕಾಮುಕರಿಗೆ ಎಷ್ಟೇ ಬುದ್ಧಿ ಕಲಿಸಿದರೂ ಮತ್ತೆ ಮತ್ತೆ ಹುಟ್ಟಿಕೊಳ್ಳುತ್ತಿದ್ದಾರೆ. ಹುಡಗಿಯರು, ಯುವತಿಯರು ಒಂಟಿಯಾಗಿ ಓಡಾಡದಂತಾಗಿದೆ. ಅಂತೆಯೇ ಬೆಂಗಳೂರು ನಗರದಲ್ಲಿ ಇದೀಗ ಮತ್ತೊಂದು ಇಂತಹ ಪ್ರಕರಣ ಬೆಳಕಿಗೆ ಬಂದಿದೆ. ಹೌದು, ಬೆಂಗಳೂರು ನಗರದ ನಡು ರಸ್ತೆಯಲ್ಲಿ ಕಾಮುಕನೋರ್ವ ವಿದ್ಯಾರ್ಥಿನಿಯೋರ್ವಳನ್ನು ಹಿಂಬಾಲಿಸಿ ಬಂದು ಆಕೆಯ ಖಾಸಗಿ ಅಂಗ ಮುಟ್ಟಿ ಅಸಭ್ಯವಾಗಿ ವರ್ತಿಸಿ ಕಿರುಕುಳ ನೀಡಿದ ಘಟನೆ ನಡೆದಿದೆ. ಈ ಘಟನೆಯು ಸುರಾನ ಕಾಲೇಜು ಸಮೀಪದ ಚಾಯ್ ಪಾಯಿಂಟ್ ಬಳಿ ನಡೆದಿದೆ ಎನ್ನಲಾಗಿದೆ. ಅಂದಹಾಗೆ, ಕಾಮುಕ ಕಿರುಕುಳ ನೀಡುತ್ತಿದ್ದಂತೆ ವಿದ್ಯಾರ್ಥಿನಿಯು ಸಹಾಯಕ್ಕೆ ಕೂಗಿದ್ದು, ಕೂಡಲೇ ಸ್ಥಳೀಯರು ಹಾಗೂ ವಿದ್ಯಾರ್ಥಿಗಳು ಅಲ್ಲಿಗೆ ಧಾವಿಸಿ ಆ ಪಾಪಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಪೊಲೀಸರು ಲೈಂಗಿಕ ದೌರ್ಜನ್ಯ ಪ್ರಕರಣದಡಿ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತನನ್ನು ಜಯನಗರ ನಿವಾಸಿ ಸುರೇಶ್(26) ಎಂದು ಗುರುತಿಸಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ…
ಕೇಂದ್ರ ಸರ್ಕಾರವೇ ಬಂದು ನಿಂತರೂ ಚಿಕ್ಕಬಳ್ಳಾಪುರದಲ್ಲಿ ಬಿಜೆಪಿ ಅಭ್ಯರ್ಥಿ ಕೆ. ಸುಧಾಕರ್ ಗೆಲ್ಲೋಕೆ ಬಿಡಲ್ಲ. ಸುಧಾಕರ್ ಸಂಸತ್ ಮೆಟ್ಟಿಲು ಹತ್ತೋಕೆ ಬಿಡಲ್ಲ ಎಂದು ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಹೇಳಿದರು. ಮಾಧ್ಯಮಗಳ ಜೊತೆ ಮಾತನಾಡಿದ ಶಾಸಕ ಪ್ರದೀಪ್ ಈಶ್ವರ್, ಸುಧಾಕರ್ ರನ್ನು ಪಾರ್ಲಿಮೆಂಟ್ ಗೆ ಹೋಗೋಕೆ ಬಿಡಲ್ಲ. ಕೋವಿಡ್ ಸಮಯದಲ್ಲಿ 2200 ಕೋಟಿ ರೂ. ಅಕ್ರಮ ಆರೋಪವಿದೆ. ಯತ್ನಾಳ್ ಅವರೇ 40 ಸಾವಿರ ಅಕ್ರಮ ಎಂದಿದ್ದಾರೆ. 1 ಮಾಸ್ಕ್ ಗೆ 450 ರೂ ಕೊಟ್ಟು ಹಗರಣ ಮಾಡಿದ್ದಾರೆ. ಸುಧಾಕರ್ ಗೆ ಮತ ಹಾಕಿದ್ರೆ ಪ್ರಜಾಪ್ರಭುತ್ವಕ್ಕೆ ಮಾರಕ ಎಂದರು. ಇವರಿಗೆ ಬಿಜೆಪಿಯಿಂದ ಹೇಗೆ ಟಿಕೆಟ್ ಸಿಕ್ಕಿತ್ತು..? ಕೆಲ ಬಿಜೆಪಿ ನಾಯಕರು ಇವರಿಗೆ ಸಹಾಯ ಮಾಡಿದ್ದಾರೆ. ನಾನು ಹಗರಣ ಮಾಡಿಲ್ಲ ಎಂದು ಪ್ರಮಾಣ ಮಾಡುತ್ತೇನೆ. ಪ್ರಮಾಣ ಮಾಡಲು ಸುಧಾಕರ್ ರೆಡಿ ಇದ್ದಾರಾ ಎಂದು ಪ್ರದೀಪ್ ಈಶ್ವರ್ ಸವಾಲು ಹಾಕಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.…
ತಮಿಳುನಾಡು: 2019ರ ಲೋಕಸಭೆ ಚುನಾವಣೆಯಲ್ಲಿ ಡಿಎಂಕೆ ಪಕ್ಷದಿಂದ ಸ್ಪರ್ಧೆ ನಡೆಸಿ ಜಯ ಗಳಿಸಿದ್ದ ಗಣೇಶಮೂರ್ತಿ ಅವರಿಗೆ ಹೊಟ್ಟೆನೋವು ಕಾಣಿಸಿಕೊಂಡ ಹಿನ್ನೆಲೆ ಕುಟುಂಬಸ್ಥರು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ತಮಿಳುನಾಡಿನ ಈರೋಡ್ ಲೋಕಸಭಾ ಕ್ಷೇತ್ರದ ಸಂಸದ ಎ. ಗಣೇಶಮೂರ್ತಿ ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಅವರು ಕೀಟನಾಶಕ ಸೇವಿಸಿದ ಕಾರಣ ಆರೋಗ್ಯ ತೀರಾ ಹದಗೆಟ್ಟಿದೆ ಎನ್ನಲಾಗಿದೆ. ಕೀಟನಾಶಕ ಸೇವಿಸಿದ್ದಾರೆ ಎನ್ನುವ ಮಾಹಿತಿ ಇದೀಗ ಲಭ್ಯವಾಗಿದೆ. ಸದ್ಯ ಆಸ್ಪತ್ರೆಯಲ್ಲಿ ಅವರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇದೀಗ ಕೃತಕ ಉಸಿರಾಟ ವ್ಯವಸ್ಥೆಯಲ್ಲಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಬಳಿಕ ಕೊಯಮತ್ತೂರಿನ ಖಾಸಗಿ ಆಸ್ಪತ್ರೆಗೆ ಅವರನ್ನು ಶಿಫ್ಟ್ ಮಾಡಲಾಗಿದೆ. ಎಂಡಿಎಂಕೆ ನಾಯಕ ದುರೈ ವೈಕೋ ಆಸ್ಪತ್ರೆಗೆ ಭೇಟಿ ನೀಡಿದ್ದು, ಗಣೇಶಮೂರ್ತಿ ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದು ಬಂದಿದೆ. ಇಸಿಎಂಒ ಚಿಕಿತ್ಸೆಯಲ್ಲಿದ್ದಾರೆ ಎಂದು ಹೇಳಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯಬೇಕಾಗಿದ್ದ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬಗ್ಗೆ ವರದಿಯಾಗಿದೆ. ಶಿವಮೊಗ್ಗದ ಸಾಗರ ತಾಲೂಕಿನ ಆನಂದಪುರ ಸಮೀಪದ ಯಡೆಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಪರಶುರಾಮ್(17) ನೇಣಿಗೆ ಶರಣಾದ ವಿದ್ಯಾರ್ಥಿ. ಪರಶುರಾಮ್ ಆನಂದಪುರದ ಸರ್ಕಾರಿ ಪಬ್ಲಿಕ್ ಶಾಲೆಯಲ್ಲಿ ಎಸ್ ಎಸ್ ಎಲ್ ಸಿ ಓದುತ್ತಿದ್ದ. ಇಂದು ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯಬೇಕಾಗಿದ್ದ ಪರಶುರಾಮ್ ಮನೆಯ ಹಿಂಭಾಗದಲ್ಲಿ ನೇಣಿಗೆ ಶರಣಾದ್ದಾನೆ. ಪರೀಕ್ಷೆ ಭಯಕ್ಕೆ ಮೃತಪಟ್ಟನಾ ಅಥವಾ ಬೇರೆ ಯಾವುದಾದರೂ ವಿಚಾರಕ್ಕೆ ಮಾನಸಿಕವಾಗಿ ಖಿನ್ನತೆ ಅನುಭವಿಸುತ್ತಿದ್ದನಾ ಎಂಬುದು ನಿಖರ ಕಾರಣ ತಿಳಿದು ಬಂದಿಲ್ಲ. ಸದ್ಯ ಸ್ಥಳಕ್ಕೆ ಆನಂದಪುರದ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಮಗನ ಮೃತದೇಹವನ್ನು ಕಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಕಳ್ಳರ ಸಂಖ್ಯೆ ಮಿತಿ ಮೀರಿದೆ. ಎಲ್ಲಿ ಹೋದ್ರೂ ಕಳ್ಳರದ್ದೇ ಭಯ. ಯಾವುದೇ ಕಾರ್ಯಕ್ರಮಗಳಿರಲಿ ಅಥವಾ ಮನೆಯೇ ಆಗಿರಲಿ ಕಳ್ಳರ ಮೇಲೆ ಒಂದು ನಿಗಾ ಇಟ್ಟಿರಬೇಕಾಗುತ್ತದೆ. ಇದೀಗ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಅವರ ಪತ್ನಿ ಮಲ್ಲಿಕಾ ನಡ್ಡಾ ಅವರ ಕಾರು ಕಳ್ಳತನವಾದ ಘಟನೆಯೊಂದು ವರದಿಯಾಗಿದೆ. ದೆಹಲಿಯ ಗೋವಿಂದಪುರಿಯ ಸೇವಾ ಕೇಂದ್ರದಿಂದ ಕಾರು ಕಳ್ಳತನಾಗಿದೆ ಎಂದು ಹೇಳಲಾಗುತ್ತಿದೆ. ಮಲ್ಲಿಕಾ ನಡ್ಡಾ ಅವರು ಫಾರ್ಚೂನರ್ ಕಾರು ಬಳಸುತ್ತಿದ್ದರು. ಈ ಕಾರನ್ನು ಗೋವಿಂದಪುರಿಯ ಸರ್ವೀಸ್ ಸೆಂಟರ್ ನಲ್ಲಿ ಬಿಡಲಾಗಿತ್ತು. ಆದರೆ ಖದೀಮರು ಸರ್ವೀಸ್ ಸ್ಟೇಷನ್ ಬಳಿಯಿಂದಲೇ ಕಾರನ್ನು ಕದ್ದಿದ್ದಾರೆ ಎಂದು ತಿಳಿದುಬಂದಿದೆ. ಮಾರ್ಚ್ 19ರಂದು ಕಾರು ಕಳ್ಳತನವಾಗಿದೆ ಎಂದು ವರದಿಯಾಗಿದೆ. ಫಾರ್ಚೂನರ್ ಕಾರು ಕಳ್ಳತನ ಬಗ್ಗೆ ಡ್ರೈವರ್ ಜೋಗಿಂದರ್ ಸಿಂಗ್ ಅದೇ ದಿನ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದರು. ಸದ್ಯ ಕಾರು ಪತ್ತೆಗಾಗಿ ಪೊಲೀಸರು ಹುಡುಕಾಡುತ್ತಿದ್ದಾರೆ. ಕಾರು ಡ್ರೈವರ್ ಜೋಗಿಂದರ್ ಸಿಂಗ್ ಸರ್ವೀಸ್ ಸೆಂಟರ್ ಬಳಿ ಕಾರು ನಿಲ್ಲಿಸಿ ಬಳಿಕ ಊಟ ಮಾಡಿ ಮನೆಗೆ…