Author: admin

ಲೋಕಸಭೆ ಚುನಾವಣೆ ದಿನಾಂಕ ಘೋಷಣೆಯಾಗದಿದ್ದರೂ ಎಲ್ಲ ಮೋರ್ಚಾಗಳು ಚುನಾವಣಾ ಪ್ರಚಾರಕ್ಕೆ ಇಳಿದಿವೆ. ಬಿಜೆಪಿ ಮೊದಲ ಹಂತದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ಬಿಜೆಪಿಯ ಚುನಾವಣಾ ಪ್ರಚಾರವು ಗೀಚುಬರಹವನ್ನು ಮೀರಿದೆ ಮತ್ತು ಬೃಹತ್ ಸಭೆಗಳು ಸಾಲುಗಟ್ಟಿ ನಿಂತಿವೆ. ಡಿಜಿಟಲ್ ಪ್ರಚಾರದಲ್ಲಿ ಬಿಜೆಪಿ ಬಹಳ ಮುಂದಿದೆ ಎಂದು ಅಂಕಿ ಅಂಶಗಳು ತೋರಿಸುತ್ತವೆ. ಉತ್ತರ ಭಾರತದಲ್ಲಿ ಜಾಹೀರಾತುಗಳೊಂದಿಗೆ ಬಿಜೆಪಿ ತನ್ನ ಡಿಜಿಟಲ್ ಪ್ರಚಾರವನ್ನು ತೀವ್ರಗೊಳಿಸುತ್ತಿದೆ. ಗೂಗಲ್, ಮತ್ತು ಅದರ ಸಂಬಂಧಿತ ಪ್ಲಾಟ್‌ ಫಾರ್ಮ್‌ಗಳಾದ ಯೂಟ್ಯೂಬ್‌ ನಲ್ಲಿ ಬಿಜೆಪಿ ಒಂದು ತಿಂಗಳಲ್ಲಿ ಜಾಹೀರಾತುಗಳಿಗೆ ಕೋಟಿಗಳನ್ನು ನೀಡಿದೆ. ಫೆಬ್ರವರಿ 1 ರಿಂದ ಮಾರ್ಚ್ 4 ರವರೆಗೆ ಬಿಜೆಪಿ ಈ ರೀತಿಯ ಡಿಜಿಟಲ್ ಪ್ರಚಾರಕ್ಕಾಗಿ, 30 ಕೋಟಿ ರೂ. ಬಿಜೆಪಿಯ ಜಾಹೀರಾತು ಡಿಜಿಟಲ್ ಪ್ರಚಾರಕ್ಕೆ ಬಳಸಬಹುದಾದ ಎಲ್ಲಾ ವೇದಿಕೆಗಳನ್ನು ತಲುಪಲು ಪ್ರಾರಂಭಿಸಿದೆ. ಈ ಜಾಹೀರಾತುಗಳನ್ನು ಮುಖ್ಯವಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಕೇಂದ್ರ ಸರ್ಕಾರದ ವಿವಿಧ ಯೋಜನೆಗಳನ್ನು ಬಹು ಭಾರತೀಯ ಭಾಷೆಗಳಲ್ಲಿ ಪ್ರಚಾರ ಮಾಡಲು ಬಳಸಲಾಗುತ್ತದೆ. 2019ರ ಲೋಕಸಭೆ…

Read More

ಎಲ್ಲಿ ನೋಡಿದರೂ ನೀರಿಗಾಗಿ ಜನ ಪರದಾಡುವಂತಾಗಿದೆ. ಆದರೆ ಈ ನಡುವೆ ಸಿಎಂ ಕಚೇರಿಗೂ ನೀರಿನ ಸಮಸ್ಯೆಯ ಬಿಸಿ ಮುಟ್ಟಿದೆ. ರಾಜ್ಯದಲ್ಲಿ ನೀರಿನ ಸಮಸ್ಯೆ ದಿನಕಳೆದಂತೆ ಹೆಚ್ಚಾಗುತ್ತಿದೆ. ಸಿಎಂ ಕಚೇರಿಗೂ ನೀರಿನ ಸಮಸ್ಯೆ ಎದುರಾಗಿದೆ. ಹೀಗಾಗಿ ಜಲಮಂಡಳಿ ಟ್ಯಾಂಕರ್‌ ನಿಂದ ಕುಮಾರಕೃಪಾ ರಸ್ತೆಯಲ್ಲಿರುವ ಸಿಎಂ ಕಚೇರಿಗೆ ಇಂದು(ಮಾರ್ಚ್ ೫) ನೀರು ಪೂರೈಕೆ ಮಾಡಲಾಗಿದೆ. ಸಿಎಂ ಕಚೇರಿಯಲ್ಲಿ ನೀರಿಲ್ಲ ಎನ್ನುವ ಸುದ್ದಿ ಜನರಿಗೆ ಆಶ್ಚರ್ಯವನ್ನುಂಟು ಮಾಡಿದೆ. ಸಿಎಂ ಕಚೇರಿಗೇ ನೀರಿಲ್ಲ ಎನ್ನುವುದಾದರೆ ಜನಸಾಮಾನ್ಯರ ಗತಿ ಏನು ಎಂದು ಎಲ್ಲರೂ ಹೇಳಿಕೊಳ್ಳುವಂತಾಗಿದೆ. ಇನ್ನೂ ಬೇಸಿಗೆ ಆರಂಭವಾಗಿಲ್ಲ. ಆರಂಭದಲ್ಲೇ ಡ್ಯಾಂಗಳಲ್ಲಿ ನೀರು ಕಾಣಸಿಗುತ್ತಿಲ್ಲ. ರಾಜ್ಯದಲ್ಲಿ ಬರ ಪರಿಸ್ಥಿತಿ ನಿರ್ಮಾಣವಾಗಿದೆ. ನೀರಿನ ಮೂಲಗಳು ಬತ್ತಿ ಹೋಗಿವೆ. ಮುಂದಿನ ದಿನಗಳಲ್ಲಿ ಕುಡಿಯುವ ನೀರು ಸಿಗದೇ ಹೋಗುವ ಆತಂಕ ಎದುರಾಗಿದೆ. ಹೀಗಾಗಿ ಈಗಾಗಲೇ ಬೇಸಿಗೆ ಮುನ್ನವೇ ಬೆಂಗಳೂರಿಗೆ ಬರಗಾಲ ಎದುರಾಗಿದೆ. ಇಷ್ಟು ಮಾತ್ರವಲ್ಲದೆ ಕುಡಿಯುವ ನೀರಿನ ಟ್ಯಾಂಕರ್ ಮಾಫಿಯಾ ಕೂಡ ಶುರುವಾಗಿದೆ ಎಂದು ಜನರು ಆರೋಪಿಸುತ್ತಿದ್ದಾರೆ.ಈ ಬಗ್ಗೆ ಡಿಸಿಎಂ ಸಭೆ ಮಾಡಿದರೂ…

Read More

ತಮಿಳುನಾಡಿನಲ್ಲಿ ನಾಪತ್ತೆಯಾಗಿದ್ದ ಒಂಬತ್ತು ವರ್ಷದ ಬಾಲಕಿಯ ಮೃತದೇಹ ಆಕೆಯ ಮನೆ ಸಮೀಪದ ಹೊಳೆಯಲ್ಲಿ ಪತ್ತೆಯಾಗಿದೆ. ಮೃತದೇಹವನ್ನು ಕಟ್ಟಲಾಗಿತ್ತು. ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಬಳಿಕ ಶವವನ್ನು ಚರಂಡಿಗೆ ಎಸೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯಲ್ಲಿ ಇಬ್ಬರನ್ನು ಬಂಧಿಸಲಾಗಿದೆ. ಮುತ್ಯಾಲಪೆಟ್ಟ ಸರ್ಕಾರಿ ಶಾಲೆಯಲ್ಲಿ 5ನೇ ತರಗತಿ ಓದುತ್ತಿದ್ದ ಬಾಲಕಿ ಮಾರ್ಚ್ 2ರಂದು ಸಂಜೆ ನಾಪತ್ತೆಯಾಗಿದ್ದಳು. ಕೂಡಲೇ ಪೋಷಕರು ಪೊಲೀಸರಿಗೆ ದೂರು ನೀಡಿ ಮಗುವಿನ ಹುಡುಕಾಟ ಆರಂಭಿಸಿದ್ದಾರೆ. ನಿನ್ನೆ ಮಧ್ಯಾಹ್ನ ಶೋಲೈನಗರದ ಮನೆಯ ಸಮೀಪದ ಚರಂಡಿಯಲ್ಲಿ ಮೃತದೇಹ ಪತ್ತೆಯಾಗಿದೆ. ಮೃತದೇಹವನ್ನು ಬೆಡ್ ಶೀಟ್ ನಲ್ಲಿ ಸುತ್ತಿ ಕಾಲುಗಳನ್ನು ಕಟ್ಟಲಾಗಿತ್ತು. ದೇಹ ಕೊಳೆಯಲು ಆರಂಭಿಸಿತ್ತು. ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಪುದುಚೇರಿ ಮೂಲದ ವಿವೇಕಾನಂದನ್(54) ಮತ್ತು ಕರುಣಾಸ್(19) ಬಂಧಿತರು. ವಿವರವಾದ ತನಿಖೆ ನಡೆಯುತ್ತಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

‘ಬೆಳ್ಳುಳ್ಳಿ ಕಬಾಬ್ ಮಾಡ್ಕೊಳಿ ತಿನ್ಕೊಳಿ’ ಅಂತ ರೆಸಿಪಿಗಳ ವಿಡಿಯೋ ಮಾಡ್ತಿದ್ದ ಚಂದ್ರು, ಕರಿಮಣಿ ಮಾಲೀಕಾ ರಾವುಲ್ಲಾ ಅಂತ ಡೈಲಾಗ್ ಹೇಳ್ತಾ ಫೇಮಸ್ ಆದವರು ಈಗ ಅನಾರೋಗ್ಯದಿಂದ ಹಾಸಿಗೆ ಹಿಡಿದಿದ್ದಾರೆ ಎಂದು ವರದಿ ತಿಳಿಸಿದೆ. ಇನ್ಸ್ಟಾಗ್ರಾಮ್ ನಲ್ಲಿ ಅಪಾರ ಫಾಲೋವರ್ಸ್ ಹೊಂದಿರುವ ಚಂದ್ರು ಇದೀಗ ಹಾಸಿಗೆ ಹಿಡಿದಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಚಂದ್ರು ವಿಡಿಯೋ ಸಿಕ್ಕಪಟ್ಟೆ ಸದ್ದು ಮಾಡುತ್ತಿದ್ದು ಈಗ ಕಾಲು ಜಾರಿ ಬಿದ್ದಿದ್ದಾರೆ ಎನ್ನಲಾಗಿದೆ. ಹೋಟೆಲ್ ಹತ್ತಿರ ಕಾಲು ಜಾರಿ ಬಿದ್ದೆ. ಮೂಳೆ ಮುರಿದಿದೆ ಅಂತ ಡಾಕ್ಟರ್ ಹೇಳಿದ್ರು. ವಯಸ್ಸಾಗಿದೆ ರಿಸ್ಕ್ ಬೇಡ ಅಂತ ಆಪರೇಷನ್ ಮಾಡಿಸಿಕೊಂಡು ರೆಸ್ಟ್ ಮಾಡ್ತಿದ್ದೀನಿ ಎಂದು ಬೆಳ್ಳುಳ್ಳಿ ಕಬಾಬ್ ಚಂದ್ರು ಹೇಳಿಕೊಂಡಿದ್ದಾರೆ. ಉಪ್ಪಿ ಯುಐ ಚಿತ್ರದ ಹಾಡಿನ ಬಗ್ಗೆ ಬೆಳ್ಳುಳ್ಳಿ ಕಬಾಬ್ ಚಂದ್ರು ಸಂತಸ ವ್ಯಕ್ತಪಡಿಸಿದ್ದಾರೆ. ಹಾಡನ್ನು ಬರೆಯೋಕು ಮುನ್ನ ನನಗೆ ಉಪ್ಪಿ ಸರ್ ಕಾಲ್ ಮಾಡಿ ಕೇಳಿದ್ರು. ನಾನು ನಿಮ್ಮಿಷ್ಟ ಬಂದ ಹಾಗೇ ಮಾಡಿಕೊಳ್ಳಿ ಸರ್ ಅಂತ ಹೇಳ್ದೆ. ಮೊನ್ನೆ ಹಾಡು ಕಳ್ಸಿದ್ರು ನೋಡಿದೆ, ಹಾಡು…

Read More

ಮಾಲ್ಡೀವ್ಸ್ ಮತ್ತು ಭಾರತದ ಲಕ್ಷದ್ವೀಪಗಳ ಪ್ರವಾಸೋಧ್ಯಮ ಮತ್ತು ರಾಜತಾಂತ್ರಿಕ ಜಟಾಪಟಿಯ ನಡುವೆ, ಮಾಲ್ಡೀವ್ಸ್‌ ಗೆ ಸನಿಹದಲ್ಲೇ ನೌಕಾನೆಲೆಯೊಂದನ್ನು ಸ್ಥಾಪನೆ ಮಾಡುವ ಮೂಲಕ ದ್ವೀಪರಾಷ್ಟ್ರಕ್ಕೆ ಸಡ್ಡು ಹೊಡೆಯಲು ಭಾರತ ಮಂದಾಗಿದೆ ಎಂದು ವರದಿ ತಿಳಿಸಿದೆ. ಲಕ್ಷದ್ವೀಪದ ದಕ್ಷಿಣ ಭಾಗದಲ್ಲಿರುವ ಕೊನೆಯ ದ್ವೀಪ ಪ್ರದೇಶ ಮಿನಿಕಾಯ್ ‌ನಲ್ಲಿ ‘ಐಎನ್‌ ಎಸ್‌ ಜಟಾಯು’ ಹೆಸರಿನ ವಾಯುನೆಲೆ ಸ್ಥಾಪನೆ ಮಾಡುವ ಉದ್ದೇಶ ಹೊಂದಿರುವುದಾಗಿ ಭಾರತೀಯ ನೌಕಾಪಡೆ ತಿಳಿಸಿದೆ. ಮಾಲ್ಡೀವ್ಸ್‌ ನಿಂದ ಉತ್ತರ ದಿಕ್ಕಿಗೆ ಉದ್ದೇಶಿತ ಸ್ಥಳ 130 ಕಿ.ಮೀ. ದೂರದಲ್ಲಿದೆ. ಜಟಾಯು ವಾಯುನೆಲೆಯಿಂದ ಅರಬ್ಬೀ ಸಮುದ್ರದಲ್ಲಿ ಭಾರತದ ಬಲ ಮತ್ತಷ್ಟು ವೃದ್ಧಿಯಾಗಲಿದೆ. ಹಡಗು ಕಳ್ಳರು ಹಾಗೂ ಮಾದಕ ವಸ್ತು ದಂಧೆ ವಿರುದ್ಧದ ಹೋರಾಟಕ್ಕೆ ಮತ್ತಷ್ಟು ಪುಷ್ಟಿ ಸಿಗಲಿದೆ. ಜತೆಗೆ ಭಾರತದ ಮುಖ್ಯ ಭೂಮಿ ಹಾಗೂ ಲಕ್ಷದ್ವೀಪ ನಡುವಣ ಸಂಪರ್ಕಕ್ಕೂ ಅನುಕೂಲವಾಗಲಿದೆ. ಭಾರತ ಈಗಾಗಲೇ ಲಕ್ಷದ್ವೀಪದ ಕರವಟ್ಟಿಯಲ್ಲಿ ‘ದ್ವೀಪರಕ್ಷಕ’ ಎಂಬ ನೌಕಾ ನೆಲೆಯನ್ನು ಹೊಂದಿದೆ ಎಂದು ವರದಿ ತಿಳಿಸಿದೆ. ಕಳೆದ ವರ್ಷ ಮೊಹಮ್ಮದ್‌ ಮುಯಿಜು ಅವರು ಮಾಲ್ಡೀವ್ಸ್‌ ಅಧ್ಯಕ್ಷರಾಗಿ…

Read More

ಸನಾತನ ಧರ್ಮದ ವಿರುದ್ಧ ಸದಾ ಕಿಡಿಕಾರುವ ಡಿಎಂಕೆ ನಾಯಕರಿಂದ ಮತ್ತೊಂದು ವಿವಾದಾತ್ಮಕ ಹೇಳಿಕೆ ಹೊರ ಬಿದ್ದಿದೆ. ಡಿಎಂಕೆ ಸಂಸದ ಎ. ರಾಜಾ ತಮ್ಮ ಭಾಷಣದಲ್ಲಿ ಮತ್ತೊಮ್ಮೆ ನಾಲಿಗೆ ಹರಿಬಿಟ್ಟಿದ್ದು ತೀವ್ರ ಸಂಚಲನ ಸೃಷ್ಟಿಸಿದೆ. ತಮಿಳುನಾಡಿನಲ್ಲಿ ನಡೆದಿರುವ ಡಿಎಂಕೆ ಪಕ್ಷದ ಕಾರ್ಯಕ್ರಮದಲ್ಲಿ ಮಾತನಾಡಿದ ಎ.ರಾಜಾ ನಾವು ಶ್ರೀರಾಮನ ಶತ್ರುಗಳು. ನಾವು ಜೈ ಶ್ರೀರಾಮ ಘೋಷಣೆಯನ್ನು ಒಪ್ಪಲ್ಲ. ನಾವು ಭಾರತ್ ಮಾತಾ ಕೀ ಜೈ ಘೋಷಣೆಯನ್ನು ಒಪ್ಪಲ್ಲ. ನಮಗೆ ರಾಮಾಯಣದಲ್ಲಿ ನಂಬಿಕೆ ಇಲ್ಲ ಎಂದಿದ್ದಾರೆ. ನಮ್ಮ ರಾಮ ಜಾತಿ, ಧರ್ಮ ನೋಡಲ್ಲ. ಬಿಜೆಪಿಯ ರಾಮ ಅಸಹ್ಯಕರ. ತಮಿಳುನಾಡು ಬಿಜೆಪಿಯ ಶ್ರೀರಾಮನನ್ನು‌ ಒಪ್ಪಲ್ಲ. ನಾವು ಬಿಜೆಪಿಯವರ ಶ್ರೀರಾಮಚಂದ್ರನ ಶತ್ರುಗಳು. ನಾವು ಬಿಜೆಪಿಯವರ ರಾಮಾಯಣದಲ್ಲಿ ನಂಬಿಕೆಯನ್ನು ಇಟ್ಟುಕೊಳ್ಳದವರು. ಮೂರ್ಖರಿಗೆ ಮಾತ್ರ ಜೈ ಶ್ರೀರಾಮ್ ಘೋಷಣೆ ಎಂದು ಎ. ರಾಜಾ ಟೀಕಿಸಿದ್ದಾರೆ. ಭಾರತ ದೇಶವಲ್ಲ, ಭಾರತವು ಒಂದು ಉಪಖಂಡ. ತಮಿಳುನಾಡೇ ಒಂದು ದೇಶ. ಕೇರಳವೇ ಒಂದು ದೇಶ. ಒಡಿಶಾವೇ ಒಂದು ದೇಶ, ಒಂದು ನಾಡು. ಈ ಎಲ್ಲಾ ದೇಶಗಳು…

Read More

ಸಿಲಿಕಾನ್‌ ಸಿಟಿಯಲ್ಲಿ ಬೇಸಿಗೆ ಧಗೆ ಹೆಚ್ಚಾಗಿದೆ. ಜೊತೆ ಜೊತೆಗೆ ನೀರಿನ ಹಾಹಾಕಾರ ಕೂಡಾ ಉಂಟಾಗಿದೆ. ಈ ಬಾರಿ ಬೇಸಿಗೆಗೆ ಕೂಡಾ ಕುಡಿಯುವ ನೀರಿನ ಸಮಸ್ಯೆ ಸಿಲಿಕಾನ್‌ ಸಿಟಿಯಲ್ಲಿ ಹೆಚ್ಚಿದೆ. ಇದರ ಮಧ್ಯೆ ಒಬ್ಬರಿಗೆ ಒಂದೇ ಕ್ಯಾನ್‌ ನೀರು ಮಾತ್ರ ನೀಡಲಾಗುತ್ತಿರುವ ಕುರಿತು ವರದಿಯಾಗಿದೆ. ಬೋರ್‌ ವೆಲ್ ‌ನಲ್ಲಿ ನೀರಿಲ್ಲ, ಕಾವೇರಿ ನೀರು ಸರಿಯಾಗಿ ಬರುತ್ತಿಲ್ಲ. ಟ್ಯಾಂಕರ್‌ ನೀರಿನ ಬೆಲೆ ದುಬಾರಿಯಾಗಿದೆ. ಇದರಿಂದ ಬಹುತೇಕ ಮಂದಿ ನೀರಿಗಾಗಿ ಮುಗಿ ಬೀಳುತ್ತಿದ್ದಾರೆ. ಇದೀಗ ನೀರಿನ ಅಭಾವದ ಜೊತೆಗೆ ಎಲ್ಲರಿಗೂ ನೀರು ಕೊಡಬೇಕಾಗಿರುವುದರಿಂದ ಹೊಸ ನಿಯಮವೊಂದು ಶುರುವಾಗಿದೆ. ಒಬ್ಬರಿಗೆ ಒಂದೇ ಕ್ಯಾನ್‌ ನೀರು ಎಂದು ನೀಡಲಾಗುತ್ತಿದೆ. ನಗರದ ಹಲವೆಡೆ ಅದರಲ್ಲೂ ರಾಜರಾಜೇಶ್ವರಿ ನಗರದ ಆರ್‌ಒ ಪ್ಲಾಂಟ್ ‌ನಲ್ಲಿ ಈ ಬೋರ್ಡ್‌ ಕಾಣಸಿಗುತ್ತಿದೆ. ಈಗಾಗಲೇ ಕೆಲವು ಕಡೆ ಬೆಳಗ್ಗೆ 8 ರಿಂದ ರಾತ್ರಿ 8 ರವರೆಗೆ ನೀರು ಬಿಡಲಾಗುತ್ತಿತ್ತು. ಇದೀಗ ಎರಡು ಗಂಟೆ ಬೆಳಗ್ಗೆ ಸಂಜೆ ಎರಡು ಗಂಟೆ ನೀರು ಪೂರೈಕೆ ಮಾಡಲಾಗುತ್ತಿದೆ. ಕೆಲವು ಕಡೆ ಆರ್‌ಓ…

Read More

ರೈತರು ಇಂದು ದೆಹಲಿಗೆ ಮರಳಿದ್ದಾರೆ. ಪ್ರತಿಭಟನೆಯನ್ನು ತೀವ್ರಗೊಳಿಸಲು ನಿರ್ಧರಿಸಿರುವ ರೈತರು ಇಂದು ಬಸ್ ಮತ್ತು ರೈಲುಗಳಲ್ಲಿ ದೆಹಲಿ ತಲುಪಲಿದ್ದಾರೆ. ಮೆರವಣಿಗೆ ಹಿನ್ನೆಲೆಯಲ್ಲಿ ಗಡಿಯಲ್ಲಿ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಇದಲ್ಲದೇ ರೈಲು ನಿಲ್ದಾಣಗಳು ಮತ್ತು ಮೆಟ್ರೋ ನಿಲ್ದಾಣಗಳಲ್ಲಿ ಭದ್ರತೆಯನ್ನು ಹೆಚ್ಚಿಸಲಾಗುವುದು. ಕಳೆದ ಕೆಲವು ದಿನಗಳ ಹಿಂದೆ ದೆಹಲಿ-ಹರಿಯಾಣ ಹೆದ್ದಾರಿ ಗಡಿಯನ್ನು ಸಾರ್ವಜನಿಕ ಸಂಚಾರಕ್ಕೆ ತೆರೆಯಲಾಗಿತ್ತು. ಆದರೆ ರೈತರು ಆಗಮಿಸುತ್ತಾರೆ ಎಂಬ ಎಚ್ಚರಿಕೆ ಇದ್ದ ಕಾರಣ ಮಧ್ಯರಾತ್ರಿಯಿಂದಲೇ ಮತ್ತೆ ಭದ್ರತೆ ಬಿಗಿಗೊಳಿಸಲಾಗಿದೆ. ನಗರದ ವಿವಿಧೆಡೆ ತಪಾಸಣೆ ನಡೆಯಲಿದೆ. ಇದಕ್ಕೂ ಮುನ್ನ ಹರ್ಯಾಣ-ಪಂಜಾಬ್ ಗಡಿಯಲ್ಲಿ ಟ್ರ್ಯಾಕ್ಟರ್ ‌ಗಳಲ್ಲಿ ಬಂದ ರೈತರನ್ನು ಭದ್ರತಾ ಪಡೆಗಳು ತಡೆದಿದ್ದರು. ರೈತರ ಮುಷ್ಕರದ ವೇಳೆ ಮತ್ತೊಬ್ಬ ರೈತ ಸಾವನ್ನಪ್ಪಿದ್ದ. ಖಾನೌರಿ ಗಡಿಯಲ್ಲಿ ಹೋರಾಡಿದ ಪಟಿಯಾಲ ಮೂಲದ ಕರ್ನೈಲ್ ಸಿಂಗ್ ಮೃತಪಟ್ಟರು. ಅಶ್ರುವಾಯು ಬಳಕೆಯಿಂದ ಶ್ವಾಸಕೋಶದ ಸೋಂಕಿನಿಂದ ಕಳೆದ ತಿಂಗಳು ಅವರು ನಿಧನರಾದರು. ಮುಷ್ಕರದ ವೇಳೆ ಸಾವನ್ನಪ್ಪಿದ ಆರನೇ ರೈತ ಕರ್ನೈಲ್ ಸಿಂಗ್. ಹರ್ಯಾಣ ಪೊಲೀಸರ ದೌರ್ಜನ್ಯಕ್ಕೆ ಬಲಿಯಾದ ಸುಭ್ ಕರಣ್ ಸಿಂಗ್…

Read More

ರಾಜ್ಯಸಭಾ ಸದಸ್ಯ ಸಯ್ಯದ್ ನಾಸಿರ್ ಹುಸೇನ್ ಜೊತೆಗೆ ಶಿವಾಜಿನಗರ ಠಾಣಾ ವ್ಯಾಪ್ತಿಯ ರೌಡಿಶೀಟರ್ ಇಸ್ತಿಯಾಕ್ ಪೈಲ್ವಾನ್ ಅಹ್ಮದ್ ಇರುವ ಫೋಟೋ ವೈರಲ್ ಆಗಿದೆ. ಫೋಟೋದಲ್ಲಿ ರೌಡಿಶೀಟರ್ ಇಸ್ತಿಯಾಕ್ ರಾಜ್ಯಸಭಾ ಸದಸ್ಯ ನಾಸಿ‌ರ್ ಹುಸೇನ್ ಅವರಿಗೆ ಹೂಗುಚ್ಛ ನೀಡಿ ಶುಭ ಕೋರುತ್ತಿದ್ದಾರೆ. ಫೆಬ್ರವರಿ 27ರಂದು ರಾಜ್ಯಸಭಾ ಚುನಾವಣೆಯ ಫಲಿತಾಂಶ ಬಂದ ನಂತರ ಕಾಂಗ್ರೆಸ್ ಅಭ್ಯರ್ಥಿ ನಾಸಿರ್ ಹುಸೇನ್ ಬೆಂಬಗಲಿಗರು ವಿಜಯೋತ್ಸವದ ವೇಳೆ, ವಿಧಾನಸೌಧದ ಒಳಗೆ ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಸಾರಂಗ ಬೇಟೆ ಮಾಡಿ, ಮಾಂಸ ಸಾಗಾಟ ಮಾಡಲು ಯತ್ನಿಸಿದ್ದು, ಆರು ಮಂದಿಯನ್ನು ಬಂಧಿಸಲಾಗಿದೆ. ಮಲೆ ಮಹದೇಶ್ವರ ವನ್ಯಜೀವಿ ಧಾಮನದ ಕೋಣನಕೆರೆ ಬಳಿ ಬಂಧನವಾಗಿದೆ. ಸರಕು ಸಾಗಾಣಿಕೆ ವಾಹನದಲ್ಲಿ ಜಿಂಕೆ ಮಾಂಸ ಸಾಗಾಟ ಮಾಡಲಾಗಿದ್ದು, ಖಚಿತ ಮಾಹಿತಿ ಮೇರೆಗೆ ಅರಣ್ಯ ಸಿಬ್ಬಂದಿ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹನೂರು ಬಸಪ್ಪನ ದೊಡ್ಡಿ ಗ್ರಾಮದ ಇರ್ಫಾನ್, ವಹೀದ್, ಅಂಬಿಕಾಪುರದ ಕುಮಾರಸ್ವಾಮಿ, ಅಪ್ಪು, ಕಾಂಚಳ್ಳಿ ಗ್ರಾಮದ ಯಶ್ವಂತ್, ಕುರುಬರದೊಡ್ಡಿ ಗ್ರಾಮದ ಸೈಯದ್ ಆರೀಪ್ ಬಂಧಿತ ಆರೋಪಿಗಳು. ಎಸಿಎಫ್ ಚಂದ್ರಶೇಖರ್ ಪಾಟೀಲ್ ,ರಾಮಾಪುರ ಆ ಎಫ್ ಓ ಕಾಂತರಾಜು ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಬಂಧಿತರಿಂದ ಸಾರಂಗ ಮಾಂಸ, ವಾಹನ ವಶಕ್ಕೆ ಪಡೆಯಲಾಗಿದೆ. ಅರಣ್ಯ ಇಲಾಖೆ ಸಿಬ್ಬಂದಿಯು ಬಂಧಿತ ಆರೋಪಿಗಳನ್ನು ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More