Author: admin

ಸರಗೂರು: ಲ್ಯಾಂಡ್‌ ಲಾರ್ಡ್‌ ಸಿನೆಮಾ‌ದ ನಾಯಕ ರಾಚಯ್ಯ ಸಂವಿಧಾನದ ಸ್ವರೂಪವಾಗಿಯೂ, ಆತ ಬಳಸುವ ಕೊಡಲಿಯು ಸಂವಿಧಾನ ಜಾರಿ ಮಾಡುವ ಕಾನೂನಿನ ರೂಪಕವಾಗಿರುವ ಸಿನಿಮಾ ನನ್ನ ಎಲ್ಲಾ ಸಮುದಾಯದ ಬಂಧುಗಳು ಸಿನಿಮಾ ನೋಡಬೇಕಾಗಿರುವ ಸಿನಿಮಾ ಎಂದು ಉದ್ಯಮಿ ಹಾಗೂ ಸಮಾಜ ಸೇವಕ ಮದನ್ ಮ್ಯಾಡಿ ತಿಳಿಸಿದರು. ಪಟ್ಟಣದ ಶಂಕರ್ ಟಾಕೀಸ್ ನಲ್ಲಿ ಲ್ಯಾಂಡ್ ಲಾರ್ಡ್ ಸಿನಿಮಾ ನೋಡಲು ಬುಧವಾರದಂದು ಉಚಿತವಾಗಿ ಒಂದು ದಿನದ ಟಿಕೆಟ್ ಯನ್ನು ವಿತರಿಸಿ ಮಾತನಾಡಿದರು. ಈ ಗ್ರಾಮಿಣ ಭಾಗದ ಜನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಉಚಿತವಾಗಿ ಸಿನಿಮಾ ಟಿಕೆಟ್ ನೀಡುತ್ತಿದ್ದೇವೆ.ಅದರಿಂದ ಈ ಸಿನಿಮಾ ನೋಡಿ ಹಳ್ಳಿ ಹಳ್ಳಿಯ ಜನರು ಬಂದು ನೋಡಿ ಎಂದು ಕರೆ ನೀಡಿದರು. ಸಿನಿಮಾದಲ್ಲಿ ಪಾಳೇಗಾರ ಸಣ್ಣಧಣಿಯ ಮಾತಿನಿಂದ ಹೊರಡುವ ಕಾನೂನುಗಳು ಬದಲಾದರೂ‌ ಕಟ್ಟಳೆಗಳು ಬದಲಾಗುವುದಿಲ್ಲ. ದೇಶಕ್ಕೆ ಸ್ವಾತಂತ್ರ್ಯ ಬಂದಿರಬಹುದು.‌‌ ಆದರೆ, ನಮ್ಮ ಗ್ರಾಮಕ್ಕಲ್ಲ. ಕೂಲಿಗೆ ಕಾಳು ಮಾತ್ರವೇ.‌ ಆಳು ಆಳಾಗಿಯೇ ಇರಬೇಕೆಂದು ಧ್ವನಿಸುವ ಮಾತುಗಳು ಪಾಳೇಗಾರಿಕೆಯ ಜಡ್ಡುಗಟ್ಟಿದ ಮನಃಸ್ಥಿತಿ ಸುಲಭವಾಗಿ ಹೋಗುವಂತಹದ್ದಲ್ಲ. ಸಂವಿಧಾನ ಜಾರಿ ಮಾಡುವವರು…

Read More

ಕೊರಟಗೆರೆ: ನಮ್ಮ ಹಳ್ಳಿಗಳು ಅಭಿವೃದ್ಧಿಯ ಜೊತೆಗೆ ಬದಲಾವಣೆಯಾಗಬೇಕಾದರೆ ದೇವತಾ ಕಾರ್ಯಗಳು ಹೆಚ್ಚು ಹೆಚ್ಚಾಗಿ ನಡೆಯಬೇಕು, ಇಂತಹ ಹಬ್ಬಗಳನ್ನು ಗ್ರಾಮೀಣ ಪ್ರದೇಶಗಳಲ್ಲಿ ಜಾತ್ಯಾತೀತವಾಗಿ ಆಚರಿಸಬೇಕು ಎಂದು ಎಲೆರಾಂಪುರ ನರಸಿಂಹಗಿರಿ ಸುಕ್ಷೇತ್ರ ಡಾ.ಹನುಮಂತನಾಥ ಸ್ವಾಮೀಜಿ ತಿಳಿಸಿದರು. ತಾಲ್ಲೂಕಿನ ಹೊಳವನಹಳ್ಳಿ ಹೋಬಳಿ ಮಾವತ್ತೂರು ಗ್ರಾ.ಪಂ ವ್ಯಾಪ್ತಿಯ ಲಿಂಗಾಪುರದಲ್ಲಿ ಶ್ರೀಮಾರಮ್ಮ ದೇವಿ ಸೇವಾ ಸಮಿತಿಯಿಂದ ಹಮ್ಮಿಕೊಂಡಿದ್ದ ಗ್ರಾಮ ದೇವತೆ ಶ್ರೀಮಾರಮ್ಮ ದೇವಿಯ ಉತ್ಸವ ಮೂರ್ತಿ ಪ್ರತಿಷ್ಠಾಪನಾ ಧಾರ್ಮಿಕ ಕಾರ್ಯಕ್ರಮದಲ್ಲಿ ದಿವ್ಯ ಸಾನಿಧ್ಯ ವಹಿಸಿ ಮಾತನಾಡಿದರು. ಕಳೆದ ಎರಡು ದಿನಗಳಿಂದ ಶಾಸ್ತ್ರೋಕ್ತವಾಗಿ ಧಾರ್ಮಿಕ ಕಾರ್ಯಕ್ರಮ ನಡೆದಿದೆ, ಹೋಮ, ಹವನ, ವಿಶೇಷ ಪೂಜೆಯ ಮೂಲಕ ಮಾರಮ್ಮ ದೇವಿಗೆ ಶಕ್ತಿ ನೀಡಿದ್ದಾರೆ, ಪ್ರತಿಯೊಬ್ಬರು ಸ್ವಾರ್ಥಿಗಳಾಗಿ ಬದುಕದೇ ಈಶ ಸೇವೆ ದೇಶ ಸೇವೆ ಎಂಬಂತೆ ಭಾವನೆ ಇಟ್ಟುಕೊಂಡು ಸೇವಾ ಪುರಸ್ಕಾರಗಳು ಆಗಬೇಕು. ನಾವು ಹುಟ್ಟಿದ ಗ್ರಾಮ, ಬೆಳೆದಂತಹ ಸ್ಥಳ ಸ್ವರ್ಗಕ್ಕಿಂತಲೂ ಶ್ರೇಷ್ಠವಾದದ್ದು ಎಂದು ಹೇಳಿದರು. ಕರವೇ (ಪ್ರವೀಣ್ ಶೆಟ್ಟಿ ಬಣ) ಅಧ್ಯಕ್ಷ ನರಸಿಂಹರಾಜು ಮಾತನಾಡಿ, ಮಾಜಿ ಜಿಪಂ ಸದಸ್ಯ ಪಿ.ಎನ್ ಕೃಷ್ಣಮೂರ್ತಿ ಅಣ್ಣನವರ…

Read More

ತುಮಕೂರು: ಜಿಲ್ಲೆಯಾದ್ಯಂತ ಈ ಬಾರಿ ಮಾವಿನ ಮರಗಳು ಹೂವಿನಿಂದ ಕಂಗೊಳಿಸುತ್ತಿದ್ದು, ಬಂಪರ್ ಇಳುವರಿಯ ಮುನ್ಸೂಚನೆ ಸಿಕ್ಕಿದೆ. ಸುಮಾರು 83 ಸಾವಿರ ಮೆಟ್ರಿಕ್ ಟನ್ ಮಾವು ಉತ್ಪಾದನೆಯಾಗುವ ನಿರೀಕ್ಷೆಯಿದೆ. ಆದರೆ, ಈ ಸಂತಸದ ನಡುವೆಯೇ ಮಾರುಕಟ್ಟೆಯಲ್ಲಿ ಬೆಲೆ ಕುಸಿಯಬಹುದು ಎಂಬ ಆತಂಕ ರೈತರನ್ನು ಕಾಡತೊಡಗಿದೆ. ಇಳುವರಿಯ ಆಶಾಭಾವನೆ: ಕಳೆದ ಎರಡು ವರ್ಷಗಳಿಂದ ಹವಾಮಾನ ವೈಪರೀತ್ಯ ಹಾಗೂ ಅಕಾಲಿಕ ಮಳೆಯಿಂದಾಗಿ ಮಾವು ಬೆಳೆಗಾರರು ತೀವ್ರ ನಷ್ಟ ಅನುಭವಿಸಿದ್ದರು. ಕಳೆದ ವರ್ಷ ಹೂವಿಗಿಂತ ಮರಗಳಲ್ಲಿ ಚಿಗುರು ಹೆಚ್ಚಾಗಿ ಕಂಡುಬಂದಿತ್ತು, ಇದರಿಂದ ಇಳುವರಿ ಗಣನೀಯವಾಗಿ ಕುಸಿದಿತ್ತು. ಆದರೆ ಈ ಬಾರಿ ಮರ ತುಂಬಾ ಹೂವುಗಳು ಬಿಟ್ಟಿರುವುದು ರೈತರಲ್ಲಿ ಹೊಸ ಭರವಸೆ ಮೂಡಿಸಿದೆ. ಕಾಡುತ್ತಿರುವ ಆತಂಕಗಳು ತಾಪಮಾನ ಏರಿಕೆ: ಫೆಬ್ರವರಿಯಲ್ಲೇ ಬಿಸಿಲಿನ ತಾಪ ಹೆಚ್ಚಾಗುತ್ತಿದ್ದು, ಮಾರ್ಚ್ ವೇಳೆಗೆ ಇದು ಮತ್ತಷ್ಟು ಏರಲಿದೆ. ಅತಿಯಾದ ಉಷ್ಣಾಂಶದಿಂದ ಹೂವುಗಳು ಉದುರಿ, ಕಾಯಿ ಕಟ್ಟುವ ಪ್ರಕ್ರಿಯೆಗೆ ತೊಂದರೆಯಾಗಬಹುದೇ ಎಂಬ ಭೀತಿ ಇದೆ. ಗಾಳಿ-ಮಳೆ: ಮುಂಗಾರು ಬೇಗನೆ ಆರಂಭವಾಗಿ ಜೋರಾದ ಗಾಳಿ ಬೀಸಿದರೆ ಮರದಲ್ಲಿರುವ…

Read More

ಪಾವಗಡ: ಗಡಿ ಹಾಗೂ ಹಿಂದುಳಿದ ತಾಲ್ಲೂಕು ಎಂಬ ಹಣೆಪಟ್ಟಿ ಹೊತ್ತಿರುವ ಪಾವಗಡ ತಾಲ್ಲೂಕಿನಲ್ಲಿ, ಸಂಕಷ್ಟದಲ್ಲಿರುವವರ ಪಾಲಿಗೆ ಹೆಲ್ಪ್ ಸೊಸೈಟಿ ಸಂಸ್ಥೆಯು ‘ಬರದ ನಾಡಿನ ಭಗೀರಥ’ನಂತೆ ಕಾರ್ಯನಿರ್ವಹಿಸುತ್ತಿದೆ ಎಂದು ವ್ಯವಸಾಯ ಸೇವಾ ಸಹಕಾರ ಸಂಘದ ನಿರ್ದೇಶಕ ಲೋಕೇಶ್ ಪಾಳೇಗಾರ್ ಬಣ್ಣಿಸಿದರು. ತಾಲ್ಲೂಕಿನ ಕರಿಯಮ್ಮನಪಾಳ್ಯದ ಸರ್ಕಾರಿ ಕಿರಿಯ ಪ್ರಾಥಮಿಕ ಪಾಠ ಶಾಲೆಯಲ್ಲಿ ಹೆಲ್ಪ್ ಸೊಸೈಟಿ ವತಿಯಿಂದ ಏರ್ಪಡಿಸಲಾಗಿದ್ದ ಶುದ್ಧ ಕುಡಿಯುವ ನೀರಿನ ಘಟಕ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಫ್ಲೋರೇಡ್ ಮುಕ್ತ ಆರೋಗ್ಯಕರ ಸಮಾಜದತ್ತ ಹೆಜ್ಜೆ:  ಆರೋಗ್ಯ, ಉದ್ಯೋಗ, ಸರ್ಕಾರಿ ಶಾಲೆಗಳ ಸಬಲೀಕರಣ, ಬಡತನ ನಿರ್ಮೂಲನೆ ಹಾಗೂ ಪ್ರಕೃತಿ ವಿಕೋಪದಂತಹ ಸಂದರ್ಭಗಳಲ್ಲಿ ಹೆಲ್ಪ್ ಸೊಸೈಟಿ ಸದಾ ಮುಂಚೂಣಿಯಲ್ಲಿದೆ.  ತಾಲ್ಲೂಕಿನ ನೀರಿನಲ್ಲಿ ಫ್ಲೋರೇಡ್ ಅಂಶ ಹೆಚ್ಚಾಗಿದ್ದು, ಸಾವಿರಾರು ಜನರು ಹಾಗೂ ಮಕ್ಕಳು ಅಂಗವಿಕಲತೆಯ ಭೀತಿ ಎದುರಿಸುತ್ತಿದ್ದಾರೆ. ಇದನ್ನು ಮನಗಂಡು ಶಾಲೆಗಳಿಗೆ ಶುದ್ಧ ನೀರಿನ ಘಟಕಗಳನ್ನು ನೀಡುತ್ತಿರುವುದು ಶ್ಲಾಘನೀಯ  ಎಂದರು. “ಸಂಕಷ್ಟದಲ್ಲಿರುವವರಿಗೆ ಸಹಾಯ ಹಸ್ತ ಚಾಚುವ ಹೆಲ್ಪ್ ಸೊಸೈಟಿಯ ಕಾರ್ಯವೈಖರಿ ತಾಲ್ಲೂಕಿನ ಅಭಿವೃದ್ಧಿಗೆ ಪೂರಕವಾಗಿದೆ.” -…

Read More

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಅವರಗುಪ್ಪದಲ್ಲಿ ಅಕ್ರಮ ಸಂಬಂಧದ ಹಿನ್ನೆಲೆಯಲ್ಲಿ ನಡೆದ ಗಲಾಟೆ ಭೀಕರ ಹತ್ಯೆಯಲ್ಲಿ ಅಂತ್ಯಗೊಂಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಮತ್ತು ಸುಚಿತ್ರಾ ಸೇರಿದಂತೆ ಒಟ್ಟು ಏಳು ಜನರನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆಯ ವಿವರ: ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದ ಮಹೇಶ್ ನಾಯ್ಕ್ ಅವರ ಪತ್ನಿ ಸುಚಿತ್ರಾ, ಸಿದ್ದಾಪುರದಲ್ಲಿ ಇಬ್ಬರು ಹೆಣ್ಣುಮಕ್ಕಳೊಂದಿಗೆ ವಾಸವಾಗಿದ್ದರು. ಈ ಸಮಯದಲ್ಲಿ ಆಕೆಗೆ ಜ್ಯೋತಿಷಿ ಕಮಲಾಕರ್ ಭಟ್ ಪರಿಚಯವಾಗಿ, ಇಬ್ಬರ ನಡುವೆ ಅಕ್ರಮ ಸಂಬಂಧ ಬೆಳೆದಿತ್ತು. ಕಮಲಾಕರ್ ಭಟ್ ಆಗಾಗ ಸುಚಿತ್ರಾ ಮನೆಗೆ ಬಂದು ಹೋಗುತ್ತಿದ್ದನು. ಈ ವಿಚಾರ ತಿಳಿದ ಹಿರಿಯ ಮಗಳು ತನ್ನ ತಂದೆ ಮಹೇಶ್ ನಾಯ್ಕ್‌ಗೆ ಮಾಹಿತಿ ನೀಡಿದ್ದಾಳೆ. ಇದರಿಂದ ಕೆರಳಿದ ಮಹೇಶ್ ನಾಯ್ಕ್ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ದೂರು ನೀಡಿದ ನಂತರ ಅವರು ತಮ್ಮ ಸಹೋದರ ವಸಂತ್ ನಾಯ್ಕ್ ಅವರ ಮನೆಗೆ ತೆರಳಿದ್ದರು. ತಮ್ಮ ವಿರುದ್ಧ ದೂರು ನೀಡಿದ ವಿಷಯ ತಿಳಿದ ಸುಚಿತ್ರಾ,…

Read More

ಬೆಂಗಳೂರು: ಕೇಂದ್ರ ಸರ್ಕಾರ ಇತ್ತೀಚೆಗೆ ಜಾರಿಗೆ ತಂದಿರುವ ವಿಕಸಿತ ಭಾರತ್ ಗ್ರಾಮೀಣ್ ರೋಜ್‌ಗಾರ್ ಮತ್ತು ಅಜೀವಿಕಾ ಮಿಷನ್ (VB-G RAM G) ಕಾಯ್ದೆಯನ್ನು ತಕ್ಷಣವೇ ರದ್ದುಗೊಳಿಸಬೇಕು ಮತ್ತು ಯುಪಿಎ ಸರ್ಕಾರದ ಅವಧಿಯ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (MGNREGA) ಯನ್ನು ಮರುಸ್ಥಾಪಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ಸರ್ಕಾರ ವಿಧಾನಸಭೆಯಲ್ಲಿ ಮಂಗಳವಾರ ಮಹತ್ವದ ನಿರ್ಣಯ ಮಂಡಿಸಿದೆ. ಒಕ್ಕೂಟ ವ್ಯವಸ್ಥೆಗೆ ಧಕ್ಕೆ: ಹೊಸ ‘ವಿಬಿ-ಜಿ ರಾಮ್ ಜಿ’ ಕಾಯ್ದೆಯು ಫೆಡರಲ್ ತತ್ವಗಳಿಗೆ ವಿರುದ್ಧವಾಗಿದೆ ಮತ್ತು ರಾಜ್ಯಗಳ ಹಕ್ಕುಗಳನ್ನು ಹತ್ತಿಕ್ಕುವಂತಿದೆ ಎಂದು ಸಿಎಂ ಪ್ರತಿಪಾದಿಸಿದರು. ಪಂಚಾಯತ್‌ಗಳ ಅಧಿಕಾರ ಕಡಿತ: ಈ ಕಾಯ್ದೆಯು ವಿಕೇಂದ್ರೀಕರಣ ತತ್ವಕ್ಕೆ ವಿರುದ್ಧವಾಗಿದ್ದು, ಗ್ರಾಮ ಪಂಚಾಯತ್‌ಗಳ ಸ್ವಾಯತ್ತತೆ ಮತ್ತು ಅಧಿಕಾರವನ್ನು ಕಸಿದುಕೊಳ್ಳುತ್ತಿದೆ ಎಂದು ಅವರು ಆತಂಕ ವ್ಯಕ್ತಪಡಿಸಿದರು. ಆರ್ಥಿಕ ಹೊರೆ: ಹೊಸ ವ್ಯವಸ್ಥೆಯು ರಾಜ್ಯದ ಖಜಾನೆಗೆ ಅನಗತ್ಯ ಹೊರೆಯಾಗಲಿದೆ ಎಂದು ಸರ್ಕಾರ ದೂರಿದೆ. ಮನರೇಗಾ ಅಗತ್ಯ: ಗ್ರಾಮೀಣ ಬಡವರ ಬದುಕಿಗೆ ‘ಸಂಜೀವಿನಿ’ಯಂತಿದ್ದ ಮನರೇಗಾ ಯೋಜನೆಯನ್ನು ಅದರ ಮೂಲ ಸ್ವರೂಪದಲ್ಲಿಯೇ…

Read More

ಬೆಂಗಳೂರು: ಅಬಕಾರಿ ಇಲಾಖೆಯಲ್ಲಿನ ಭ್ರಷ್ಟಾಚಾರದ ಆರೋಪಗಳಿಗೆ ಸಂಬಂಧಿಸಿದಂತೆ ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ಅವರು ಮಂಗಳವಾರ ಸ್ಪಷ್ಟನೆ ನೀಡಿದ್ದು, ತಾವು ಯಾವುದೇ ತಪ್ಪು ಮಾಡಿಲ್ಲದ ಕಾರಣ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದು ಖಡಾಖಂಡಿತವಾಗಿ ಹೇಳಿದ್ದಾರೆ. ರಾಜೀನಾಮೆಗೆ ನಕಾರ: ಬಿಜೆಪಿ ಮಾಡುತ್ತಿರುವ ಭ್ರಷ್ಟಾಚಾರದ ಆರೋಪಗಳನ್ನು ತಳ್ಳಿ ಹಾಕಿದ ಸಚಿವರು, “ಅಧಿಕಾರಿಗಳು ಯಾರಾದರೂ ಸಚಿವರ ಅಥವಾ ಮುಖ್ಯಮಂತ್ರಿಗಳ ಹೆಸರು ದುರುಪಯೋಗಪಡಿಸಿಕೊಂಡು ಲಂಚ ಪಡೆದಿದ್ದರೆ ಅವರ ವಿರುದ್ಧ ಕ್ರಮ ಕೈಗೊಳ್ಳಲಿ. ನಾನು ತಪ್ಪು ಮಾಡದಿದ್ದ ಮೇಲೆ ರಾಜೀನಾಮೆ ಏಕೆ ನೀಡಲಿ?” ಎಂದು ಪ್ರಶ್ನಿಸಿದ್ದಾರೆ. ಆಡಿಯೋ ಕ್ಲಿಪ್ ಬಗ್ಗೆ ಪ್ರತಿಕ್ರಿಯೆ: ತಮ್ಮ ಹಾಗೂ ತಮ್ಮ ಪುತ್ರರ ಹೆಸರಿರುವ ಆಡಿಯೋ ಕುರಿತು ಪ್ರತಿಕ್ರಿಯಿಸಿದ ಅವರು, ಈ ಹಿಂದೆ ಬಿ.ಎಸ್. ಯಡಿಯೂರಪ್ಪ ಅವರ ವಿರುದ್ಧದ ಆಡಿಯೋಗಳು ಕೂಡ ಸುಳ್ಳೆಂದು ಸಾಬೀತಾಗಿದ್ದವು ಎಂಬುದನ್ನು ನೆನಪಿಸಿದರು. ಸಂಘದ ಅಸ್ತಿತ್ವದ ಬಗ್ಗೆ ಪ್ರಶ್ನೆ: ಲೋಕಾಯುಕ್ತಕ್ಕೆ ದೂರು ನೀಡಿದ ‘ಫೆಡರೇಶನ್ ಆಫ್ ವೈನ್ ಮರ್ಚೆಂಟ್ಸ್ ಅಸೋಸಿಯೇಶನ್’ ಕಾನೂನಾತ್ಮಕವಾಗಿ ಅಸ್ತಿತ್ವದಲ್ಲಿದೆಯೇ? ಅದು ಆಡಿಟ್ ಮತ್ತು ಸಭೆಗಳನ್ನು…

Read More

ಗುಬ್ಬಿ: ತಾಲೂಕಿನ ಹಿಂಡಿಸ್ಗೆರೆ ಮಹಿಳಾ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿ ಸುಜಾತ, ಉಪಾಧ್ಯಕ್ಷರಾಗಿ ಗೀತಾ ಅವಿರೋಧವಾಗಿ ಆಯ್ಕೆಯಾದರು. ಸುಮಾರು ಎಂಟು ವರ್ಷಗಳ ಬಳಿಕ ಹಿಂಡಿಸ್ ಗೆರೆ  ಹಾಲು ಉತ್ಪಾದಕರ ಸಹಕಾರ ಸಂಘದ ಚುನಾವಣೆ ನಡೆದಿದ್ದು,  ಅಧ್ಯಕ್ಷ ಸ್ಥಾನಕ್ಕೆ ಸುಜಾತ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಗೀತಾ ಮಾತ್ರ ಅಭ್ಯರ್ಥಿಯಾಗಿ ನಾಮಪತ್ರವನ್ನು ಸಲ್ಲಿಸಿದ್ದರಿಂದ ಚುನಾವಣೆ ಅಧಿಕಾರಿಗಳು ಅವಿರೋಧವಾಗಿ ಆಯ್ಕೆ ಮಾಡಿದರು.  ಚುನಾವಣೆ ಅಧಿಕಾರಿಯಾಗಿ ಲಿಯಾಖಾತ್ ಅಲಿಖಾನ್ ಚುನಾವಣೆ ಪ್ರಕ್ರಿಯೆಗಳನ್ನ ನಡೆಸಿಕೊಟ್ಟರು. ನಂತರ ನೂತನ ಅಧ್ಯಕ್ಷೆ ಸುಜಾತ ಸುದ್ದಿಗಾರರ ಜೊತೆ ಮಾತನಾಡಿ, ನಮ್ಮ ಎಲ್ಲ  ನಿರ್ದೇಶಕ ಸಹಕಾರ ಪಡೆದು ಹಿಂಡಿಸ್ ಗೆರೆ  ಮಹಿಳಾ ಹಾಲು ಉತ್ಪಾದಕರ ಸಹಕಾರ ಸಂಘದ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ.   ಸರ್ಕಾರದಿಂದ ಬರುವ ಸೌಲಭ್ಯಗಳನ್ನು ಹಾಲು ಉತ್ಪಾದಕರಿಗೆ ಹಾಗೂ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸಲು ಪ್ರಯತ್ನ ಮಾಡುತ್ತೇನೆ.  ಗ್ರಾಮೀಣ ಭಾಗದ ರೈತರು ಹೈನುಗಾರಿಕೆಗೆ ಹೆಚ್ಚು ಆದ್ಯತೆಯನ್ನು ಕೊಟ್ಟು ಪ್ರತಿ ಮನೆಯಲ್ಲೂ ಹಸುಗಳನ್ನು ಕಟ್ಟಿಕೊಂಡು ಡೈರಿಗಳಿಗೆ  ಹಾಲು ಹಾಕುವುದರ ಮೂಲಕ ಸ್ವಾವಲಂಬಿ ಬದುಕನ್ನ…

Read More

ಬೆಂಗಳೂರು: ಕರ್ನಾಟಕದಲ್ಲಿ ಅಕ್ರಮವಾಗಿ ನೆಲೆಸಿರುವ ಬಾಂಗ್ಲಾದೇಶದ ವಲಸಿಗರ ಕುರಿತು ಗೃಹ ಸಚಿವ ಜಿ. ಪರಮೇಶ್ವರ ಅವರು ವಿಧಾನಸಭೆಯಲ್ಲಿ ಮಹತ್ವದ ಮಾಹಿತಿ ನೀಡಿದ್ದಾರೆ. ರಾಜ್ಯದಲ್ಲಿ ಇದುವರೆಗೆ ಒಟ್ಟು 370 ಬಾಂಗ್ಲಾ ಪ್ರಜೆಗಳನ್ನು ಗುರುತಿಸಲಾಗಿದ್ದು, ಈ ಪೈಕಿ 196 ಜನರನ್ನು ಈಗಾಗಲೇ ಗಡಿಪಾರು ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ. ಎಲ್ಲೆಲ್ಲಿ ಎಷ್ಟು ಜನ?: ಗುರುತಿಸಲಾದ 370 ಜನರಲ್ಲಿ ಅತಿ ಹೆಚ್ಚು ಅಂದರೆ 284 ಮಂದಿ ಬೆಂಗಳೂರಿನಲ್ಲಿದ್ದಾರೆ. ಉಳಿದಂತೆ ಬೆಂಗಳೂರು ಗ್ರಾಮಾಂತರದಲ್ಲಿ 37, ಶಿವಮೊಗ್ಗದಲ್ಲಿ 12 ಮತ್ತು ಹಾಸನದಲ್ಲಿ 3 ಬಾಂಗ್ಲಾ ಪ್ರಜೆಗಳನ್ನು ಪತ್ತೆ ಹಚ್ಚಲಾಗಿದೆ. ಹಲವು ನಗರಗಳಿಗೆ ವಲಸೆ: ಅಕ್ರಮ ವಲಸಿಗರು ಸಾಮಾನ್ಯವಾಗಿ ಕೋಲ್ಕತ್ತಾ ಮೂಲಕ ದೇಶದ ಒಳಗೆ ನುಸುಳುತ್ತಾರೆ. ಅಲ್ಲಿಂದ ಕೆಲಸ ಅರಸಿ ಬೆಂಗಳೂರು, ಮುಂಬೈ ಸೇರಿದಂತೆ ದೇಶದ ವಿವಿಧ ನಗರಗಳಿಗೆ ವಲಸೆ ಹೋಗುತ್ತಾರೆ ಎಂದು ಸಚಿವರು ವಿವರಿಸಿದರು. ಲಕ್ಷಾಂತರ ಜನರಿದ್ದಾರೆ ಎಂಬ ಆರೋಪ ತಳ್ಳಿಹಾಕೆ: ರಾಜ್ಯದಲ್ಲಿ ಲಕ್ಷಾಂತರ ಸಂಖ್ಯೆಯಲ್ಲಿ ಬಾಂಗ್ಲಾ ವಲಸಿಗರಿದ್ದಾರೆ ಎಂಬ ವಿರೋಧ ಪಕ್ಷದ ಆರೋಪವನ್ನು ಸಚಿವರು ನಿರಾಕರಿಸಿದರು. “ಇಷ್ಟು…

Read More

ಬೆಂಗಳೂರು: “ನಮ್ಮ ಸರ್ಕಾರ ಹಾದಿ ತಪ್ಪಿಲ್ಲ ಮತ್ತು ನಾನು ಅಸಹಾಯಕ ಮುಖ್ಯಮಂತ್ರಿಯಲ್ಲ. ಜನರಿಗೆ ನೀಡಿದ್ದ ಭರವಸೆಗಳನ್ನು ಎರಡೂವರೆ ವರ್ಷಗಳಲ್ಲಿ ಈಡೇರಿಸಿದ್ದೇವೆ,” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸಭೆಯಲ್ಲಿ ಪ್ರತಿಪಾದಿಸಿದರು. ರಾಜ್ಯಪಾಲರ ಭಾಷಣದ ಮೇಲಿನ ವಂದನಾ ನಿರ್ಣಯದ ಚರ್ಚೆಗೆ ಸೋಮವಾರ ಸುದೀರ್ಘ ಉತ್ತರ ನೀಡಿದ ಅವರು, ವಿರೋಧ ಪಕ್ಷಗಳ ಟೀಕೆಗಳಿಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದರು. ಅಸಹಾಯಕನಲ್ಲ: ವಿರೋಧ ಪಕ್ಷದವರು ಸರ್ಕಾರವನ್ನು ‘ಅಸಹಾಯಕ’ ಮತ್ತು ‘ಸಂವಿಧಾನರಹಿತ’ ಎಂದು ಟೀಕಿಸಿದ್ದಕ್ಕೆ ಪ್ರತಿಕ್ರಿಯಿಸಿದ ಸಿಎಂ, “ಕೆಲವೊಮ್ಮೆ ಅಸತ್ಯದ ಎದುರು ಸತ್ಯ ಅಸಹಾಯಕವಾಗುತ್ತದೆ ಅಷ್ಟೇ. ಆದರೆ ನಾನು ಅಸಹಾಯಕನಲ್ಲ,” ಎಂದು ಸ್ಪಷ್ಟಪಡಿಸಿದರು. ಕರ್ನಾಟಕ ಮಾದರಿ ಅಭಿವೃದ್ಧಿ: ಕರ್ನಾಟಕದ ಅಭಿವೃದ್ಧಿ ಮಾದರಿಯನ್ನು ಕೇಂದ್ರ ಸಚಿವರು ಸೇರಿದಂತೆ ಹಲವು ರಾಜ್ಯಗಳ ಮುಖ್ಯಮಂತ್ರಿಗಳು ಶ್ಲಾಘಿಸಿದ್ದಾರೆ. ನಾವು ಜನಪರ ಮತ್ತು ಸಮಾಜಮುಖಿ ಆಡಳಿತ ನೀಡುತ್ತಿದ್ದೇವೆ ಎಂದು ಎದೆತಟ್ಟಿ ಹೇಳಿದರು. ವಿರೋಧ ಪಕ್ಷದವರ ವಿರುದ್ಧ ವಾಗ್ದಾಳಿ: ಬಿಜೆಪಿ ಸರ್ಕಾರದ ಅವಧಿಯಲ್ಲಿ ಆಕ್ಸಿಜನ್ ಇಲ್ಲದೆ ಜನರು ಮೃತಪಟ್ಟಾಗ ನಿಮ್ಮ ಸಂವೇದನೆ ಎಲ್ಲಿತ್ತು? ನೀವು ಕೃಷಿ ಸಾಲ, ಕೃಷಿ ಭಾಗ್ಯದಂತಹ…

Read More