Author: admin

ಲೋಕಸಭಾ ಚುನಾವಣೆಗೆ ಕೆಲವು ವಾರಗಳು ಮಾತ್ರ ಬಾಕಿಯಿದ್ದು, ಪಕ್ಷಗಳು ಚುನಾವಣೆಗೆ ಭರ್ಜರಿ ತಯಾರಿ ಆರಂಭಿಸಿವೆ. ಮೊನ್ನೆ ತಾನೆ ಬಿಜೆಪಿ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದ್ದು 195 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ್ದು, ರಾಜ್ಯ ಬಿಜೆಪಿ ಕೋರ್‌ ಕಮಿಟಿ ಸದಸ್ಯರು ಕೂಡ ಸಭೆ ನಡೆಸಿ ಸಂಭಾವ್ಯ ಸಮರ್ಥ ಅಭ್ಯರ್ಥಿಗಳ ಹೆಸರನ್ನು ವರಿಷ್ಠರಿಗೆ ಸಲ್ಲಿಸಲು ನಿರ್ಧರಿಸಿದ್ದಾರೆ. ಈ ಬೆನ್ನಲ್ಲೇ ಕರ್ನಾಟಕ ಕಾಂಗ್ರೆಸ್ 15 ಅಭ್ಯರ್ಥಿಗಳ ಪಟ್ಟಿಯನ್ನು ಸಿದ್ದಪಡಿಸಿದೆ ಎನ್ನಲಾಗಿದೆ. ಹೌದು, ಕಾಂಗ್ರೆಸ್ ನ ರಾಜ್ಯ ಉಸ್ತುವಾರಿ ರಣದೀಪ್‌ ಸುರ್ಜೇವಾಲಾ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು ಸಂಭವನೀಯರ ಪಟ್ಟಿಯನ್ನು ರೆಡಿ ಮಾಡಿ ದೆಹಲಿಗೆ ಕಳುಹಿಸಲು ಸೋಮವಾರ ಚರ್ಚೆ ನಡೆಸಿದ್ದು, ಈ ಸಭೆಯಲ್ಲಿ ಸುಮಾರು 15 ಕ್ಷೇತ್ರಗಳ ಹೆಸರನ್ನು ಫೈನಲ್ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ. ಚರ್ಚೆಯಾಗಿರುವ ಮೊದಲ 15 ಮಂದಿಯ ಪಟ್ಟಿಯಲ್ಲಿ ಹಾಲಿ ಸಚಿವರ ಪೈಕಿ ಕೋಲಾರ ಕ್ಷೇತ್ರಕ್ಕೆ ಕೆ.ಎಚ್‌. ಮುನಿಯಪ್ಪ ಅವರ ಹೆಸರು ಮಾತ್ರ ಇದೆ. ಹಾಲಿ…

Read More

ತುಮಕೂರು: ನಫೇಡ್ ಮೂಲಕ ಕೊಬ್ಬರಿ ಖರೀದಿಗೆ ನೋಂದಣಿ ಪ್ರಕ್ರಿಯೆ ಆರಂಭವಾಗಿದ್ದು, ಕೊಬ್ಬರಿ ಬೆಳೆಗಾರರು ನೋಂದಣಿ ಮಾಡಿಸಲು ಹಗಲು ರಾತ್ರಿ ಎನ್ನದೆ ಕೊಬ್ಬರಿ ಖರೀದಿ ಕೇಂದ್ರಗಳಲ್ಲಿ ರೈತರು ಜಮಾಯಿಸಿರುವ ಘಟನೆ ಇಂದು ಕೂಡ ಮುಂದುವರಿದಿದೆ. ನಿನ್ನೆಯಿಂದ ಕೊಬ್ಬರಿ ಖರೀದಿ ಪ್ರಕ್ರಿಯೆಗೆ ನೋಂದಣಿ ಆರಂಭಿಸಲಾಗಿದ್ದು ನಿನ್ನೆಯಂತೆ ಇಂದು ರಾತ್ರಿಯೂ ರೈತರು ಸರತಿ ಸಾಲಿನಲ್ಲಿ ನಿಂತು ಕಾಯುತ್ತಿದ್ದಾರೆ. ತಿಪಟೂರು ಎಪಿಎಮ್ ಸಿ ಹಾಗೂ ಕರಡಾಳು ಎಪಿ ಎಮ್ ಸಿ ಯ ಮುಂದೆ ರೈತರ ಕ್ಯೂ ನಿಂತಿದ್ದಾರೆ. ತಮ್ಮ ಚಪ್ಪಲಿ, ಶೂ…ಬ್ಯಾಗ್ ಗಳನ್ನು ಬಿಟ್ಟು ಸ್ಥಳ ಕಾಯ್ದಿರಿಸಿಕೊಂಡ ಕೊಬ್ಬರಿ ಬೆಳೆಗಾರರು, ನೋಂದಣಿ ಮಾಡಿಸಲು ಹರಸಾಹಸ ಪಡುತ್ತಿದ್ದಾರೆ. ಕೇಂದ್ರ ಸರ್ಕಾರದ ಬೆಂಬಲ ಬೆಲೆ ಘೋಷಣೆ ಮಾಡಿದ್ದರಿಂದ ಖರೀದಿಗೆ ನೋಂದಣಿ ಆರಂಭವಾಗಿದೆ. ತುಮಕೂರು ಜಿಲ್ಲೆಯ ತೆಂಗು ಬೆಳೆಯುವಂತಹ ತಾಲೂಕುಗಳಾದ ತಿಪಟೂರು ತುರುವೇಕೆರೆ ತುಮಕೂರು ಚಿಕ್ಕನಾಯಕನಹಳ್ಳಿ ಹಾಗೂ ಗುಬ್ಬಿ ತಾಲೂಕು ಕೇಂದ್ರಗಳಲ್ಲಿ ಕೊಬ್ಬರಿ ಖರೀದಿಗೆ ಈಗಾಗಲೇ ಎಪಿಎಂಸಿಯಲ್ಲಿ ಖರೀದಿ ಪ್ರಕ್ರಿಯೆಯ ಆರಂಭವಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ…

Read More

ತುಮಕೂರು: ಹೇಮಾವತಿ ಎಕ್ಸ್ ಪ್ರೆಸ್ ಕೆನಾಲ್ ನಿಂದ ಕುಣಿಗಲ್ ಮುಖಾಂತರ ಮಾಗಡಿಗೆ ನೀರು ಹರಿಸುವ ಯೋಜನೆಗೆ ಮಾಜಿ ಸಚಿವ ಜೆ.ಸಿ.ಮಾಧುಸ್ವಾಮಿ ವಿರೋಧಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾತನಾಡಿದ ಅವರು, ಎಕ್ಸ್ ಪ್ರೆಸ್ ಕೆನಾಲ್ನಿಂದ ಮಾಗಡಿಗೆ ನೀರು ತೆಗೆದು ಕೊಂಡು ಹೋಗಲು ಯೋಜಿಸುತ್ತಿರುವುದು ತುಮಕೂರು ಜಿಲ್ಲೆಗೆ ಮಾಡಿದ ಅನ್ಯಾಯ. ಈಗಾಗಲೇ ಕುಣಿಗಲ್ ಗೆ 2 ಟಿಎಂಸಿ ನೀರು ಹರಿಯುತ್ತಿದೆ. ಡಿ.ಕೆ.ಶಿವಕುಮಾರ್ ಎಕ್ಸ್ ಪ್ರೆಸ್ ಕೆನಾಲ್ ನೆಪದಲ್ಲಿ ಮಾಗಡಿಗೆ ನೀರು ತೆಗೆದುಕೊಂಡು ಹೋಗಲು ಪ್ಲಾನ್ ಮಾಡಿದ್ದಾರೆ. ಅವರು ಬೆಂಗಳೂರು ಗ್ರಾಮಾಂತರ ಗೆಲ್ಲಲು ತುಮಕೂರು ಜಿಲ್ಲೆಗೆ ಅನ್ಯಾಯ ಮಾಡುತ್ತಿದ್ದಾರೆಂದರು. ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ್ ಗೆ ಯಾಕೋ ಶಕ್ತಿ ಕಡಿಮೆಯಾಗಿದೆ. ಕಳೆದ ಬಾರಿ ಅವರೇ ಈ ಯೋಜನೆಗೆ ವಿರೋಧ ವ್ಯಕ್ತಪಡಿಸಿದ್ದರು. ಗುಬ್ಬಿ ಶಾಸಕ ಎಸ್.ಆರ್.ಶ್ರೀನಿವಾಸ್ ಕೂಡ ವಿರೋಧಿಸಿದ್ದರು. ಈಗ ಯಾವುದೋ ಒತ್ತಡದಿಂದ ಅವರಿಬ್ಬರೂ ಸುಮ್ಮನಿದ್ದಾರೆಂದು ಹರಿಹಾಯ್ದರು. ಡಿ.ಕೆ. ಶಿವಕುಮಾರ್ ರಾಜ್ಯದ ಜನತೆ ತಮ್ಮ ಮಾತು ಕೇಳಬೇಕೆಂಬ ಸ್ವಭಾವ ಬಿಡಬೇಕು. ಲಿಂಕಿಂಗ್ ಕೆನಾಲ್ ನಿಂದ ತುಮಕೂರು ಜಿಲ್ಲೆಗೆ…

Read More

ಭೀಕರ ರಸ್ತೆ ಅಪಘಾತ ಸಂಭವಿಸಿ ಸ್ಥಳದಲ್ಲೇ ಐವರು ಸಾವನ್ನಪ್ಪಿರುವ ಧಾರುಣ ಘಟನೆ ಮೆಹಬೂಬ್ ನಗರ್ ಜಿಲ್ಲೆಯ   ಕೊತಕೋಟ ಬೈಪಾಸ್‌ ನ ತೆಕ್ಕಲಯ್ಯ ದರ್ಗಾ ಬಳಿ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ಸಂಭವಿಸಿದೆ. ಮೃತರ ವಿವರಗಳು ವಾಸಿ(01),  ಬುಸ್ರಾ (02), ಮಾರಿಯಾ, ಫಾತಿಮಾ (50), ಅಬ್ದುಲ್ ರಹಮಾನ್ (30) ಮೃತಪಟ್ಟವರು. ಮೂಲತಃ ಬಳ್ಳಾರಿಯ ದೇವಿನಗರದ ಬಸವನ ಕುಂಟೆ ನಿವಾಸಿಗಳಾದ ಅಬ್ದುಲ್ ರೆಹಮಾನ ಅವರ  ಕುಟುಂಬ ಸದಸ್ಯರು, ಬಳ್ಳಾರಿಯಿಂದ ಹೈದರಾಬಾದ್  ಕಡೆಗೆ ಹೋಗುತ್ತಿದ್ದಾಗ ಮೆಹಬೂಬ್ ನಗರ್ ಜಿಲ್ಲೆಯ   ಕೊತಕೋಟ ಬೈಪಾಸ್‌ ನ ತೆಕ್ಕಲಯ್ಯ ದರ್ಗಾ ಬಳಿ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ, ಭೀಕರ ರಸ್ತೆ ಅಪಘಾತವಾಗಿದೆ. ತೀವ್ರವಾಗಿ ಗಾಯಗೊಂಡ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ರೆಹಮಾನ್ ಅವರ  ಹರಿಟಿಗಾ ಕಾರು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮವಾಗಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಮತ್ತೊಂದು ಮಗು ಆಸ್ಪತ್ರೆಗೆ ಸಾಗಿಸುವ ವೇಳೆ ಸಾವನ್ನಪ್ಪಿದೆ. ಇಬ್ಬರಿಗೂ ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಮೆಹಬೂಬ್ ನಗರ್ ಜಿಲ್ಲೆಗೆ ಸ್ಥಳಾಂತರಿಸಲಾಗಿದೆ. ಮೂವರ ಸ್ಥಿತಿ…

Read More

ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪದ ಹಿನ್ನೆಲೆ ಚನ್ನಪಟ್ಟಣ ವಸತಿ ಶಾಲೆಯ ಪ್ರಾಂಶುಪಾಲ ಬಿ.ಎಂ ಸತೀಶ್ ಜೈಲುಪಾಲಾಗಿದ್ದಾನೆ. ಪ್ರಾಂಶುಪಾಲ ಸತೀಶ್, ಶಾಲೆಯ ಆರನೇ ತರಗತಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇರೆಗೆ ಸೋಮವಾರ, ಡಿವೈಎಸ್ಪಿ ಗಿರಿ ಮತ್ತು ನಗರ ಸಿಪಿಐ ರವಿಕಿರಣ್ ಮಾರ್ಗದರ್ಶನದಲ್ಲಿ ಪೂರ್ವ ಪೊಲೀಸ್ ಠಾಣೆ ಪಿಎಸ್‌ ಐ ಆಕಾಶ್ ಪತ್ತ‌ರ್ ಈತನನ್ನು ಬಂಧಿಸಿ, ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ. ಪಾವಗಡ ಮೂಲದ ಬಾಲಕಿ ವಸತಿ ಶಾಲೆಯಲ್ಲಿ ಆರನೇ ತರಗತಿ ವ್ಯಾಸಂಗ ಮಾಡುತ್ತಿದ್ದಳು. ವಿದ್ಯಾರ್ಥಿನಿಗೆ ಶನಿವಾರ ಜ್ವರ ಬಂದ ಹಿನ್ನೆಲೆಯಲ್ಲಿ ಪ್ರಾಂಶುಪಾಲರಿಂದ ಔಷಧ ಪಡೆಯಲು ಹೋದಾಗ, ಕೆಟ್ಟ ರೀತಿಯಲ್ಲಿ ಮೈಮುಟ್ಟಿ ಮಾತನಾಡಿಸಿ ಇರುವುದಾಗಿ‌ ವಿದ್ಯಾರ್ಥಿ, ಪಾಲಕರಿಗೆ ದೂರವಾಣಿ ಮೂಲಕ ತಿಳಿಸಿದ್ದಾಳೆ. ಶನಿವಾರ ಸಂಜೆ ಶಾಲೆಯ ಬಳಿ ಆಗಮಿಸಿದ ವಿದ್ಯಾರ್ಥಿನಿ ಪೋಷಕರು, ಶಾಲೆಯ ಬಳಿ ಗಲಾಟೆ ನಡೆಸಿದ್ದಾರೆ. ತದನಂತರ, ಪೂರ್ವಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರು ದಾಖಲಿಸಿದ್ದ ಪೊಲೀಸರು ಪ್ರಾಂಶುಪಾಲನನ್ನು ಬಂಧಿಸಲು ಹೋದಾಗ ಪ್ರಾಂಶುಪಾಲ ತಲೆಮರೆಸಿಕೊಂಡಿದ್ದ ಹೆಚ್ಚಿನ ತನಿಖೆಯ ನಂತರ ಆರೋಪಿಯನ್ನು…

Read More

ಕೊಡಗು ಜಿಲ್ಲೆಯಲ್ಲಿ ಕಾಡು ಪ್ರಾಣಿಗಳ ಅಟ್ಟಹಾಸ ಜೋರಾಗಿದೆ. ಅದರಲ್ಲೂ ಕಾಡಾನೆ ದಾಳಿಯಿಂದಾಗಿ ಅಲ್ಲಿನ ಜನ ತತ್ತರಿಸಿ ಹೋಗಿದ್ದಾರೆ. ಕ್ಷಣ ಕ್ಷಣದಲ್ಲಿ ಭಯದ ವಾತಾವರಣ, ಕಾಡಿಗೆ ಹೋದವರು ವಾಪಾಸ್ ಬರುತ್ತಾರೆನ್ನುವ ಗ್ಯಾರಂಟಿಯೇ ಇಲ್ಲ. ಹೀಗೆ ಇಲ್ಲಿನ ಜನರ ಪಾಡು ಹೇಳತೀರದಾಗಿದೆ. ಇದೀಗ ಕೊಡಗು ಜಿಲ್ಲೆಯಲ್ಲಿ ಮತ್ತೊಬ್ಬ ವ್ಯಕ್ತಿ ಆನೆ ದಾಳಿಗೆ  ಬಲಿಯಾಗಿದ್ದಾರೆ. ಕಳೆದ ಕೆಲವು ತಿಂಗಳಿನಿಂದ ಹಲವಾರು ಮಂದಿಯನ್ನು ಆನೆ ದಾಳಿಗೆ ಕಳೆದುಕೊಂಡಿರುವ ಕೊಡಗು ಜಿಲ್ಲೆಯಲ್ಲಿ ಇನ್ನೊಂದು ಜೀವ ಬಲಿಯಾಗಿದೆ. ಕೊಡಗು ಜಿಲ್ಲೆ ಮಡಿಕೇರಿ ಸಮೀಪ ನಿಶಾನಿ ಬೆಟ್ಟದಲ್ಲಿ ದುರಂತ ನಡೆದಿದೆ. ಗಾಳಿಬೀಡು ಗ್ರಾಮದ ನಿಶಾನಿಬೆಟ್ಟದಲ್ಲಿ ಗಾಳಿಬೀಡು ಗ್ರಾಮದ ವರಡ ನಿವಾಸಿ ಅಪ್ಪಚ್ಚ(60) ಅವರ ಶವ ಪತ್ತೆಯಾಗಿದೆ. ಅವರು ಕಾಡಾನೆ ತುಳಿದು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಅಪ್ಪಚ್ಚ ಅವರು ಶನಿವಾರ ಕೆಲಸಕ್ಕೆಂದು ಹೋಗಿದ್ದಾರೆ. ಆದರೆ ಅವರು ಮರಳಿ ಬಂದಿರಲಿಲ್ಲ. ಹೀಗಾಗಿ ರಾತ್ರಿ ಇಡೀ ಮನೆಯವರು ಹುಡುಕಾಟ ನಡೆಸಿದ್ದರೂ ಸಿಕ್ಕಿರಲಿಲ್ಲ. ಮುಂಜಾನೆ ನಿಶಾನಿ ಬೆಟ್ಟಕ್ಕೆ ಪ್ರವಾಸಿಗರು ಚಾರಣಕ್ಕೆ ತೆರಳುವ ವೇಳೆ ಪ್ರಕರಣ ಬೆಳಕಿಗೆ ಬಂದಿದೆ.…

Read More

ನೀವು ಪಿಯುಸಿ ಅಥವಾ ಡಿಪ್ಲೋಮಾ ಆಗಿ ಕೆಲಸ ಹುಡುಕುತ್ತಿದ್ದೀರಾ ಹಾಗಾದರೆ ಇಲ್ಲಿದೆ ನೋಡಿ ನಿಮಗೆ ಸುವರ್ಣಾವಕಾಶ!! ಕರ್ನಾಟಕ ಲೋಕಸೇವಾ ಆಯೋಗವು (ಕೆಪಿಎಸ್‌ ಸಿ) ಗ್ರಾಮ ಲೆಕ್ಕಾಧಿಕಾರಿ (VAO) ಹುದ್ದೆಗೆ ಆನ್‌ ಲೈನ್ ಅರ್ಜಿಗಳನ್ನು ಮಾರ್ಚ್ 4 ರಿಂದ ಏಪ್ರಿಲ್ 3, 2024 ರವರೆಗೆ ಸ್ವೀಕರಿಸುತ್ತದೆ. ಈಗಾಗ್ಲೇ ಅರ್ಜಿ ಸ್ವೀಕರಿಸಲು ಪ್ರಾರಂಭಿಸಿದ್ದು, ಒಟ್ಟು 1000 ಹುದ್ದೆಗಳಿಗೆ ಕೆಪಿಎಸ್‌ ಸಿ ಗ್ರಾಮ ಲೆಕ್ಕಿಗರ ನೇಮಕಾತಿ 2024 ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಪರೀಕ್ಷಾ ಪ್ರಾಧಿಕಾರವು ನಿಗದಿಪಡಿಸಿದ ಪೂರ್ವಾಪೇಕ್ಷಿತಗಳನ್ನು ಪೂರೈಸುವ ಆಸಕ್ತ ಅಭ್ಯರ್ಥಿಗಳು Kpsc.kar.nic.in ನಲ್ಲಿ ಅಧಿಕೃತ ಪೋರ್ಟಲ್‌ ನಲ್ಲಿ KPSC ಗ್ರಾಮ ಲೆಕ್ಕಿಗರ ನೇಮಕಾತಿಗಾಗಿ ಆನ್‌ ಲೈನ್‌ ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಬೇಕಾಗಿರುವ ವಿದ್ಯಾರ್ಹತೆ ಒಬ್ಬರು 12 ನೇ ತರಗತಿ ಅಥವಾ ಡಿಪ್ಲೋಮಾವನ್ನು ಉತ್ತೀರ್ಣರಾಗಿರಬೇಕು. ಶಾರ್ಟ್‌ಲಿಸ್ಟ್ ಮಾಡಿದ ಅಭ್ಯರ್ಥಿಗಳಿಗೆ ರೂ 21,400 ರಿಂದ ರೂ 42,000 ವರೆಗೆ ವೇತನ ಪಾವತಿಸಲಾಗುತ್ತದೆ. ಕರ್ನಾಟಕ ಗ್ರಾಮ ಲೆಕ್ಕಿಗರ ನೋಂದಣಿ ಪ್ರಕ್ರಿಯೆ, ಅರ್ಜಿ ಶುಲ್ಕ ಮತ್ತು ಇತರ…

Read More

ತುಮಕೂರು: ಸರ್ಕಾರಿ ಚಿತ್ರಕಲಾ ಪದವಿ ಕಾಲೇಜಿಗೆ  ಕಾಳಜಿ ಪೌಂಡೇಶನ್ ತಂಡದೊಂದಿಗೆ  ನೈಜ ಹೋರಾಟಗಾರರ ವೇದಿಕೆ ಬೆಂಗಳೂರು  ಇದರ ಎಚ್.ಎಂ.ವೆಂಕಟೇಶ್  ಹಾಗೂ ಲಂಚ ಮುಕ್ತ ನಿರ್ಮಾಣ ವೇದಿಕೆ ರಾಜ್ಯ  ಕಾರ್ಯದರ್ಶಿಗಳು ಆದ ನರಸಿಂಹ ಮೂರ್ತಿ.ಎನ್. ಬೆಂಗಳೂರು, ತಂಡ  ದಿಢೀರ್ ಭೇಟಿ ನೀಡಿದರು. ಇದೇ ವೇಳೆ ಮಾತನಾಡಿದ ನೈಜ್ಯ ಹೋರಾಟಗಾರರ ವೇದಿಕೆ ಹೆಚ್. ಎಂ. ವೆಂಕಟೇಶ್,  ಇದು ಸರ್ಕಾರದ ಕಾಲೇಜು ಅಂತ ಹೇಳಲು ನಾಚಿಕೆ ಆಗುತ್ತಿದೆ. ಪ್ರಾಂಶುಪಾಲರು ತುಂಬಾ ಆ್ಯಕ್ಟಿವ್ ಇದ್ದಾರೆ. ಇಲ್ಲಿ ಕಲಿತ ವಿದ್ಯಾರ್ಥಿಗಳು ಪದವಿ ಪಡೆದು ಉತ್ತಮ ಉದ್ಯೋಗದಲ್ಲಿದ್ದಾರೆ. ಆದ್ರೆ, ಈ ಕಾಲೇಜಿನ ಬಗ್ಗೆ ಸರ್ಕಾರ ಯಾಕೆ ಇಷ್ಟೊಂದು ಅಸಡ್ಡೆಯಿಂದ ವರ್ತಿಸುತ್ತಿದೆ  ಎನ್ನುವ ಬಗ್ಗೆ ನಮಗೆ ಆಶ್ಚರ್ಯವಾಗುತ್ತಿದೆ ಎಂದರು. ಈ ಕಾಲೇಜು  ಜೂನಿಯರ್ ಕಾಲೇಜಿನ  ಪ್ರಾಂಗಣದಲ್ಲಿದೆ.  ಆದರೆ ಆ ಕಾಲೇಜಿನ ಪ್ರಿನ್ಸಿಪಲ್  ಯಾವುದಕ್ಕೂ ಕೋಪರೇಟ್ ಮಾಡಲ್ಲ.   ಕಾಲೇಜಿನೊಳಗಡೆ ಯಾವುದೇ ರೀತಿಯ ಮೂಲಭೂತ ಸೌಕರ್ಯವಿಲ್ಲ, ಇದರೊಳಗೆ ಹೋಗಿ ಬಂದಾಗ ಹಸುವನ್ನು ಸಾಕುವ ಕೊಟ್ಟಿಗೆಯ ಒಳಗೆ ಹೋದಂತಹ ಅನುಭವವಾಯಿತು ಎಂದು ಅವರು ಬೇಸರ ವ್ಯಕ್ತಪಡಿಸಿದರು.…

Read More

ನವದೆಹಲಿ: ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯಲ್ಲಿ ತಂದೆಯೊಬ್ಬ ತನ್ನ ಮೂವರು ಮಕ್ಕಳನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ. ಮೃತರನ್ನು ರವಿ ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಕಾರ, ಅವರು ಸ್ವಲ್ಪ ಆರ್ಥಿಕ ಸಾಲವನ್ನು ಹೊಂದಿದ್ದರು ಮತ್ತು ಅದೇ ಕಾರಣದಿಂದ ಖಿನ್ನತೆಗೆ ಒಳಗಾಗಿದ್ದರು. ಇದರಿಂದಾಗಿ ಈ ಕೃತ್ಯ ಮಾಡಲಾಗಿದೆ ಎನ್ನಲಾಗಿದೆ. ಮೃತದೇಹಗಳನ್ನು ಆಸ್ಪತ್ರೆಗೆ ರವಾನಿಸಲಾಗಿದ್ದು, ಪ್ರಕರಣದ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಬೆಂಗಳೂರು: ‘ಅಲ್ಪಸಂಖ್ಯಾತರ ಮೇಲೆ ಆರೋಪ ಬಂದರೆ ಅದನ್ನು ಮುಚ್ಚಿಹಾಕಿ. ಬಹು ಸಂಖ್ಯಾತರ ಮೇಲೆ ಆರೋಪ ಬಂದರೆ ಕೂಡಲೇ ಕ್ರಮ ಕೈಗೊಳ್ಳಿ ಎಂಬುದಾಗಿ ಪೊಲೀಸ್ ಇಲಾಖೆಗೆ ಸರ್ಕಾರದಿಂದ ಸ್ಪಷ್ಟ ನಿರ್ದೇಶನವಿದೆ’ ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ್  ಗಂಭೀರ ಆರೋಪ ಮಾಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕರ್ನಾಟಕದ ಪ್ರಜೆಯಾಗಿ ಇದೆಲ್ಲಾ ನಮ್ಮ ಮನಸ್ಸಿಗೆ ಬೇಸರ ತರಿಸಿದೆ. ಹಾಗಿದ್ದರೆ, ಈಗ ಕೇಳಿಬಂದಿರುವ ಎರಡೂ ಆರೋಪಗಳು ಸಾಬೀತಾದರೆ ಸರ್ಕಾರ ವಿಸರ್ಜನೆ ಮಾಡುತ್ತಾರೆಯೇ ಎಂದು ಪ್ರಶ್ನಿಸಿದರು. ಎರಡೂ ಕಡೆ ನಡೆದಿರುವುದು ಭಯೋತ್ಪಾದನಾ ಘಟನೆ ಆದರೆ ಸರ್ಕಾರದ ಎಲ್ಲರೂ ರಾಜೀನಾಮೆ ಕೊಡುತ್ತಾರಾ? ಉದ್ಯಮ ಸಂಘರ್ಷದಿಂದ ದಾಳಿ ಎಂದು ಹೇಳಿದ್ದು ಯಾರು? ಹೀಗೆ ಹೇಳಿದರೆ ಕರ್ನಾಟಕದಲ್ಲಿ ಭಯೋತ್ಪಾದನಾ ಚಟುವಟಿಕೆ ಮುಂದುವರಿಸುತ್ತಾರೆ. ತಪ್ಪಿತಸ್ಥರ ವಿರುದ್ಧ ಕೂಡಲೇ ಕ್ರಮ ತೆಗೆದುಕೊಳ್ಳಬೇಕು ಎಂದು ಅಶೋಕ್ ಆಗ್ರಹಿಸಿದರು. ವಿಧಾನಸೌಧದ ಆವರಣದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ ಆರೋಪಕ್ಕೆ ಸಂಬಂಧಿಸಿ ಸರ್ಕಾರ ಏನೋ ಮುಚ್ಚಿಡುವ ಪ್ರಯತ್ನ ಮಾಡುತ್ತಿದೆ. ಮುಸ್ಲಿಂ ಭಯೋತ್ಪಾದಕರು ಮಾಡಿದ್ದಾರೆಂದು ಗೊತ್ತಾದರೆ ಸರ್ಕಾರಕ್ಕೆ ಹಿನ್ನಡೆ ಆಗುತ್ತದೆ ಎಂದು ಮುಚ್ಚಿಡುವ…

Read More