Subscribe to Updates
Get the latest creative news from FooBar about art, design and business.
- ದೇಶದ 2ನೇ ಅತಿ ದೊಡ್ಡ ಕ್ರಿಕೆಟ್ ಕ್ರೀಡಾಂಗಣಕ್ಕೆ ಸಿಎಂ ಸಿದ್ದರಾಮಯ್ಯ ಶಂಕುಸ್ಥಾಪನೆ
- ಈ ವರ್ಷ 52 ಸಾವಿರ ಅತಿಥಿ ಶಿಕ್ಷಕರ ನೇಮಕ: ಸಚಿವ ಮಧು ಬಂಗಾರಪ್ಪ
- ಬೀದರ್ ಬ್ರಿಮ್ಸ್ (BRIMS) ಆಸ್ಪತ್ರೆಯಲ್ಲಿ ಕರ್ತವ್ಯ ನಿರತ ವೈದ್ಯರ ಮೇಲೆ ಭೀಕರ ಹಲ್ಲೆ: 7 ಮಂದಿ ಆರೋಪಿಗಳ ಬಂಧನ
- ತುಮಕೂರು ಜಿಲ್ಲೆಗೆ ‘ತುಮಕೂರು (ಬೆಂಗಳೂರು ಉತ್ತರ)’ ಎಂದು ಮರುನಾಮಕರಣ: ಗೃಹ ಸಚಿವ ಡಾ.ಜಿ.ಪರಮೇಶ್ವರ್
- ಮಾದಾವರ–ತುಮಕೂರು ಮೆಟ್ರೋ ರೈಲು ಯೋಜನೆ: ಸರ್ಕಾರಕ್ಕೆ ಸಲ್ಲಿಕೆಯಾಯ್ತು ಡಿಪಿಆರ್ ವರದಿ
- ಪಕ್ಷದ ಜವಾಬ್ದಾರಿ ನಿರ್ವಹಿಸದಿದ್ದರೆ ಶಿಸ್ತು ಕ್ರಮ: ಕಾಂಗ್ರೆಸ್ ಮುಖಂಡರ ಸಭೆಯಲ್ಲಿ ಶಾಸಕ ಕೆ. ಷಡಕ್ಷರಿ ಎಚ್ಚರಿಕೆ
- ಗುಬ್ಬಿ ಶಾಸಕರು, ಪುತ್ರನಿಂದ ಕುತಂತ್ರ ರಾಜಕಾರಣ: ಷಡ್ಯಂತ್ರಗಳಿಗೆ ಜಗ್ಗುವುದಿಲ್ಲ: ಜೆಡಿಎಸ್ ಮುಖಂಡ ನಾಗರಾಜು ಕಿಡಿ
- ತುಮಕೂರು: ಕುಲ್ಲಕ ವಿಷಯಕ್ಕೆ ಜಗಳ: ಕೊಲೆ
Author: admin
ತೆಲಂಗಾಣ: ಭಾರತದ 140 ಕೋಟಿ ಜನರೂ ಸಹ ನನ್ನ ಕುಟುಂಬಸ್ಥರಾಗಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ತೆಲಂಗಾಣದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಕುಟುಂಬವಾದಿಗಳ ಚಹರೆ ಬೇರೆಯಾಗಿದ್ದರೂ ಚರಿತ್ರೆ ಒಂದೇ ಎಂದು ಟೀಕಿಸಿದರು. ಪಟ್ನಾದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಕೇಂದ್ರ ಮಾಜಿ ಸಚಿವ ಲಾಲೂ ಪ್ರಸಾದ್ ಯಾದವ್, ಪ್ರಧಾನಿ ನರೇಂದ್ರ ಮೋದಿಗೆ ಕುಟುಂಬವೇ ಇಲ್ಲ.., ಹೀಗಾಗಿ ಅವರು ವಂಶಪಾರಂಪರ್ಯ ಆಡಳಿತವನ್ನು ಸಹಿಸುವುದಿಲ್ಲ ಎಂದು ವ್ಯಂಗ್ಯವಾಡಿದ್ದರು. ಪರಿವಾರವಾದಿಗಳ ಚರಿತ್ರಯೆಲ್ಲಿ ಜೂಟ್ ಮತ್ತು ಲೂಟ್ (ಸುಳ್ಳು ಮತ್ತು ಲೂಟಿ) ಸಾಮಾನ್ಯವಾಗಿದೆ ಎಂದು ನುಡಿದ ಪ್ರಧಾನಿ ಮೋದಿ, ತೆಲಂಗಾಣದಲ್ಲಿ ಟಿಆರ್ ಎಸ್ ಬದಲಾಗಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿರುವುದರಿಂದ ಏನೂ ಬದಲಾಗಿಲ್ಲ. ಇಬ್ಬರೂ ಸಹ ಒಂದೇ ಮೂಲದಿಂದ ಬಂದವರಾಗಿದ್ದಾರೆ ಎಂದು ಆರೋಪಿಸಿದರು. ಟಿಆರ್ ಎಸ್ ಪಕ್ಷವು ಕಾಲೇಶ್ವರ ಹಗರಣ ನಡೆಸಿತು. ಕಾಂಗ್ರೆಸ್ ಅದರ ತನಿಖೆ ನಡೆಸದೆ ಬಾಯಿಮುಚ್ಚಿಕೊಂಡು ಕುಳಿತಿದೆ ಎಂದು ಆರೋಪಿಸಿದ ಪ್ರಧಾನಿ ಮೋದಿ, ನೀವೂ ಸರಿ ನಾವೂ ಸರಿ. ನೀವೂ ತಿಂದಿದ್ದೀರಿ ನಾವೂ ತಿನ್ನುತ್ತೇವೆ…
ಶಿವಮೊಗ್ಗ: ಈಗಾಗಲೇ ಬಿಜೆಪಿಯು 195 ಕ್ಷೇತ್ರದ ಲೋಕಸಭಾ ಟಿಕೆಟ್ ಪಟ್ಟಿ ಪ್ರಕಟಿಸಿದ್ದು, ದೆಹಲಿಯಲ್ಲಿ ನಾಡಿದ್ದು ನಡೆಯಲಿರುವ ಸಭೆಯಲ್ಲಿ ಕರ್ನಾಟಕದ ಪಟ್ಟಿ ಫೈನಲ್ ಆಗಲಿದೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಭೆಯಲ್ಲಿ ಭಾಗವಹಿಸಲು ಹೋಗುತ್ತಿದ್ದೇನೆ. ಎರಡನೇ ಪಟ್ಟಿಯಲ್ಲಿ ಕರ್ನಾಟಕದ ಪಟ್ಟಿ ಅಂತಿಮವಾಗಲಿದೆ. 28 ಕ್ಷೇತ್ರಗಳ ಪಟ್ಟಿ ಬಹುತೇಕ ಫೈನಲ್ ಆಗಬಹುದು. ಎಲ್ಲಾ ಕ್ಷೇತ್ರದ ಪಟ್ಟಿ ಫೈನಲ್ ಆಗುತ್ತದೆ ಎಂದು ಹೇಳಿದರು. ಹೊಸಬರಿಗೆ ಆದ್ಯತೆ ವಿಚಾರವಾಗಿ ದೆಹಲಿ ನಾಯಕರ ಮನಸ್ಸಿನಲ್ಲಿ ಏನಿದೆಯೋ ಗೊತ್ತಿಲ್ಲ. ಅವರ ತೀರ್ಮಾನವೇ ಅಂತಿಮ. ಬಿಜೆಪಿ – ಜೆಡಿಎಸ್ ಹೊಂದಾಣಿಕೆ ನಿಶ್ಚಿತ. ಆದರೆ ಸ್ಥಾನದ ಬಗ್ಗೆ ಅಂತಿಮವಾಗಿಲ್ಲ. ಮಂಡ್ಯದಿಂದ ಸುಮಲತಾ ಸ್ಪರ್ಧೆ ಬಗ್ಗೆ ಯಾವುದೇ ಸ್ಪಷ್ಟವಾದ ಮಾಹಿತಿಯಿಲ್ಲ ಎಂದೂ ಸ್ಪಷ್ಟನೆ ನೀಡಿದರು. ಗೋ ಬ್ಯಾಕ್ ಶೋಭ ಕರಂದ್ಲಾಜೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಬಿಎಸ್ವೈ, ಇದಕ್ಕೆ ಯಾವುದೇ ಅರ್ಥ ಇಲ್ಲ. ಅವರ ಒಳ್ಳೆಯ ಕೆಲಸ ಮಾಡುವುದನ್ನು ಸಹಿಸದೆ ಕೆಲವರು ಈ ರೀತಿ ಮಾಡಿದ್ದಾರೆ. ಇದಕ್ಕೆ ಕವಡೆ ಕಾಸಿನ…
ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ಮದರಂಕಪಲ್ಲಿ ಕ್ರಾಸ್ ನ ಬಳಿ ಕಾರು ಹಾಗೂ ದ್ವಿಚಕ್ರ ವಾಹನ ನಡುವೆ ಅಪಘಾತ ದ್ವಿಚಕ್ರ ವಾಹನ ಸವಾರ ಮೃತಪಟ್ಟಿರುವ ಘಟನೆ ನಡೆದಿದೆ. ಶಂಕರ(40) ಮೃತಪಟ್ಟ ದುರ್ದೈವಿಯಾಗಿದ್ದಾರೆ. ಅಪಘಾತದ ಬಳಿಕ ಶಂಕರ ಅವರು ಗಂಭೀರವಾಗಿ ಗಾಯಗೊಂಡಿದ್ದರು. ಸ್ಥಳೀಯರ ಸಹಾಯದೊಂದಿಗೆ ಆಸ್ಪತ್ರೆಗೆ ದಾಖಲಿಸಲಾಗಿದ್ದರೂ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ರಾಯಲ್ಪಾಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಬೆಂಗಳೂರು: ವಿಧಾನಸೌಧದಲ್ಲಿ ಪಾಕಿಸ್ತಾನದ ಪರ ಘೋಷಣೆ ಕೂಗಿರುವ ವಿವಾದಕ್ಕೆ ಸಂಬಂಧಿಸಿದಂತೆ ಬಿಜೆಪಿ ಬಿಡುಗಡೆ ಮಾಡಿರುವ ಎಫ್ಎಸ್ಎಲ್ ವರದಿಯ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಸೋಮವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಪ್ರಕರಣದಲ್ಲಿ ತಲೆಹಾಕಲು ಸಂವಾದ ದವರು ಯಾರು. ಇದಕ್ಕೂ ಅವರಿಗೂ ಏನು ಸಂಬಂಧ ಎಂದು ಕಿಡಿಕಾರಿದ್ದಾರೆ. ಬಿಜೆಪಿಯವರು ಖಾಸಗಿ ಸಂಸ್ಥೆಗಳನ್ನು ಇಟ್ಟುಕೊಂಡು ಖಾಸಗಿಯಾಗಿ ಫೋರೆನ್ಸಿಕ್ ವರದಿಗಳನ್ನು ತರಿಸಿಕೊಂಡು ಸಾರ್ವಜನಿಕರಲ್ಲಿ ಆತಂಕ ಸೃಷ್ಟಿ ಮಾಡುತ್ತಿದ್ದಾರೆ. ವಿವಾದ ಮಾಡುವುದೇ ಮೊದಲನೇ ದೇಶದ್ರೋಹದ ಕೆಲಸವಾಗಿದೆ. ಇದು ಸಾಮಾನ್ಯ ಪ್ರಕರಣ ಅಲ್ಲ, ದೇಶದ್ರೋಹದ ಘೋಷಣೆ ಕೂಗಿದ್ದಾರೆ ಎಂದು ಬಿಜೆಪಿಯವರೇ ಹೇಳುತ್ತಿದ್ದು, ಅದನ್ನು ಬಿಜೆಪಿಯವರು ಖಾಸಗಿ ಸಂಸ್ಥೆಗಳ ಹತ್ತಿರ ಹೋಗಿ ಅದನ್ನು ಪಬ್ಲಿಕ್ ಮಾಡುತ್ತಿರುವುದು ಮೊದಲನೇ ದೇಶದ್ರೋಹದ ಕೆಲಸ ಎಂದು ಪ್ರಿಯಾಂಕ್ ಹರಿಹಾಯ್ದರು. ಕ್ಲೂ ಫಾರ್ ಎವಿಡೆನ್ಸ್ ಫೋರೆನ್ಸಿಕ್ ಲ್ಯಾಬ್ ಅನ್ನೋ ಸಂಸ್ಥೆಯ ಕ್ರೆಡಿಬಿಲಿಟಿ ಏನು? ಎಂದು ಪ್ರಶ್ನಿಸಿದ ಸಚಿವರು, ಇವರು ಖಾಸಗಿಯಾಗಿ ಏನಾದರೂ ಮಾಡಿಕೊಳ್ಳಲಿ. ಆ ಸಂಸ್ಥೆಗೆ ಸರ್ಕಾರದ ಸರ್ಟಿಫಿಕೇಶನ್ ಇದಿಯೋ…
ಕೋಲಾರ: ತರಕಾರಿ ಸಾಗಾಟದ ಲಾರಿ ಮತ್ತು ದ್ವಿಚಕ್ರ ವಾಹನ ನಡುವಿನ ಅಫಘಾತದಲ್ಲಿ ಬೈಕ್ ಸವಾರ ಲಾರಿಯಡಿಗೆ ಸಿಲುಕಿ ಅಪ್ಪಚ್ಚಿಯಾದ ಘಟನೆ ಕೋಲಾರ ಜಿಲ್ಲೆ ಮಾಲೂರು ಪಟ್ಟಣದ ಸ್ಟೇಡಿಯಂ ಬಳಿ ನಡೆದಿದೆ. 23 ವರ್ಷದ ಮಣಿಕಂಠ ಮೃತಪಟ್ಟ ದುರ್ದೈವಿಯಾಗಿದ್ದಾರೆ. ಬೈಕ್ ಸವಾರ ಪಟ್ಟಣದ ಇಂದಿರಾ ನಗರಕ್ಕೆ ಹೋಗುವಾಗ ನಡೆದ ಅವಘಡ ಸಂಭವಿಸಿದೆ. ಮಾಲೂರು ಪಟ್ಟಣದ ಪೊಲೀಸರು ಸ್ಥಳಕ್ಕೆ ಭೇಟಿ ಪ್ರಕರಣ ದಾಖಲಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ಬಸ್ ಹರಿದು ಯುವಕನೊರ್ವ ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಬೈಕ್ ಗೆ ಬಸ್ ತಗುಲಿ ಕೆಳಗೆ ಬಿದ್ದ ಯುವಕನ ಕಾಲಿನ ಮೇಲೆ ಬಸ್ ಹರಿದಿದ್ದು, ಜನರು ಸೇರುತ್ತಿದ್ದಂತೆ ಘಟನಾ ಸ್ಥಳದಿಂದ ಚಾಲಕ ನಿರ್ವಾಹಕರಿಬ್ಬರು ಪರಾರಿ ಆಗಿದ್ದಾರೆ. ಕನಕದಾಸ ಸರ್ಕಲ್ ಬಳಿ ಅಪಘಾತ ನಡೆದಿದ್ದು, ಅಪಘಾತಕ್ಕೊಳಗಾದ ಯುವಕನನ್ನು ಸ್ಥಳೀಯರು ಆಸ್ಪತ್ರೆಗೆ ಸೇರಿಸಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ರಾಮನಗರ: ರಾಮನಗರದ ಮಾಗಡಿ ತಾಲೂಕಿನ ಬೈರನಹಳ್ಳಿಯಲ್ಲಿ ಕಾರು ಹಾಗೂ ಬೈಕ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಸವಾರರೊಬ್ಬರು ಮೃತಪಟ್ಟಿರುವ ದಾರುಣ ಘಟನೆ ನಡೆದಿದ್ದು, ಮೃತ ದುರ್ದೈವಿಯನ್ನು ನಂಜುಂಡಯ್ಯ (48) ಎಂದು ಗುರುತಿಸಲಾಗಿದೆ. ನಂಜುಂಡಯ್ಯನವರು ಸೀಗೆಕುಪ್ಪೆ ಗ್ರಾಮ ಪಂಚಾಯತಿಯ ಸಾದಮಾರನಹಳ್ಳಿ ವಾಟರ್ ಮ್ಯಾನ್ ಆಗಿದ್ದರು. ಬೆಳಗಿನ ಜಾವ ಮಾಗಡಿಗೆ ಹೋಗಬೇಕಾದರೆ ಬೈಕ್ ಗೆ ಕಾರು ಡಿಕ್ಕಿಯಾಗಿದ್ದು, ಡಿಕ್ಕಿ ರಭಸಕ್ಕೆ ಕೆಳಗೆ ಹಾರಿ ಬಿದ್ದ ನಂಜುಂಡಯ್ಯ ಅವರು ಗಂಭೀರ ಗಾಯಗೊಂಡು ಮೃತಪಟ್ಟಿದ್ದಾರೆ. ಮೃತದೇಹವನ್ನು ಮಾಗಡಿ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಮಾಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಗದಗ: ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಗದಗ ಲಕ್ಷ್ಮೇಶ್ವರ ತಾಲೂಕಿನ ಗೋನಾಳ ಗ್ರಾಮದಲ್ಲಿ ನಡೆದಿದೆ. ಮಂಜುನಾಥ ತೇಲಿ (26) ಸಾವಕ್ಕ ತೇಲಿ (40) ರೇಣವ್ವ (39) ಆತ್ಮಹತ್ಯೆಗೆ ಶರಣಾದವರು. ಟ್ರ್ಯಾಕ್ಟರ್ ಖರೀದಿಗೆ ಮಾಡಿದ ಸಾಲ ತೀರಿಸಲಾಗದೇ ಮನನೊಂದ ತಾಯಿ ಮಗ ರೈಲಿಗೆ ತಲೆಕೊಟ್ಟಿದ್ದಾರೆ. ಈ ವಿಷಯ ತಿಳಿದ ಕುಟುಂಬದ ಮತ್ತೊರ್ವ ಮಹಿಳೆ ನೇಣಿಗೆ ಶರಣಾದ ಹೃದಯವಿದ್ರಾವಕ ಘಟನೆ ನಡೆದಿದೆ. ಮಂಜುನಾಥ್ ಟ್ರ್ಯಾಕ್ಟರ್ ಖರೀದಿಗೆ ಸಾಲ ಮಾಡಿಕೊಂಡಿದ್ದು, ಸಾಲ ಮರುಪಾವತಿಸಲು ಸಾಧ್ಯವಾಗದೇ ಮನನೊಂದಿದ್ದ, ಮಗನ ಜೊತೆ ತಾಯಿ ರೇಣವ್ವ ಕೂಡ ಯಲವಿಗೆ ರೈಲು ನಿಲ್ದಾಣದ ಬಳಿ ಹಳಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ. ಇನ್ನು ಈ ಸುದ್ದಿ ತಿಳಿಯುತ್ತಿದ್ದಂತೆ ಗೋನಾಳ ಗ್ರಾಮದ ಮನೆಯಲ್ಲಿ ಸಾವಕ್ಕ ಕೂಡ ನೇಣಿಗೆ ಶರಣಾಗಿದ್ದಾರೆ. ಒಂದೇ ಕುಟುಂಬದ ಮೂವರು ಸಾಲಕ್ಕೆ ಬಲಿಯಾಗಿದ್ದು, ಸ್ಥಳಕ್ಕೆ ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.…
ಬೆಂಗಳೂರು: ಬೆಂಗಳೂರಲ್ಲಿ ಒಂದೇ ದಿನ 3 ವಂದೇ ಭಾರತ್ ರೈಲುಗಳ ಮೇಲೆ ಕಲ್ಲತೂರಾಟ ನಡೆಸಿ, ಕಿಡಿಗೇಡಿಗಳು ರೈಲುಗಳ ಕಿಟಕಿ ಗಾಜುಗಳನ್ನು ಒಡೆದಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿರುವ ಅಧಿಕಾರಿಗಳು, ಒಂದೇ ದಿನದಲ್ಲಿ 3 ಘಟನೆಗಳು ನಡೆದಿವೆ ಎಂದು ತಿಳಿಸಿದ್ದಾರೆ. ನಮ್ಮ ಪೊಲೀಸರು ವಿವಿಧ ಸ್ಥಳಗಳಿಗೆ ಧಾವಿಸಿದ್ದಾರೆ ಮತ್ತು ತನಿಖೆ ನಡೆಸುತ್ತಿದ್ದಾರೆ. ಈವರೆಗೆ ಯಾವುದೇ ಬಂಧನವಾಗಿಲ್ಲ ಎಂದು ತಿಳಿಸಿದ್ದಾರೆ. ಆರೋಪಿಗಳ ವಿರುದ್ಧ ಸೆಕ್ಷನ್ 147 (ರೈಲ್ವೆ ಹಳಿಯಲ್ಲಿ ಅತಿಕ್ರಮಣ) ಮತ್ತು ಸೆಕ್ಷನ್ 153 (ಉದ್ದೇಶಪೂರ್ವಕ ಕ್ರಿಯೆ ಅಥವಾ ಲೋಪದಿಂದ ರೈಲ್ವೆಯಲ್ಲಿ ಪ್ರಯಾಣಿಸುವ ವ್ಯಕ್ತಿಗಳ ಸುರಕ್ಷತೆಗೆ ಅಪಾಯವನ್ನುಂಟುಮಾಡುವುದು) ಅಡಿಯಲ್ಲಿ ಪ್ರಕರಣಗಳನ್ನು ದಾಖಲಿಸಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಲಕ್ನೋ: ಕಾರು ಕಾಲುವೆಗೆ ಬಿದ್ದ ಪರಿಣಾಮ ಕಾರಿನಲ್ಲಿದ್ದ ಎಂಟು ಮಂದಿಯ ಪೈಕಿ ಮೂವರು ಸಾವನ್ನಪ್ಪಿದ್ದು, ಮೂವರು ನಾಪತ್ತೆಯಾಗಿರುವ ಘಟನೆ ಉತ್ತರ ಪ್ರದೇಶದ ಬುಲಂದ್ ಶಹರ್ ಜಿಲ್ಲೆಯಲ್ಲಿ ನಡೆದಿದೆ. ಘಟನೆಯಲ್ಲಿ, ಕಾರಿನಲ್ಲಿದ್ದ ಐವರನ್ನು ಕಾಲುವೆಯಿಂದ ಮೇಲೆತ್ತಲಾಗಿದ್ದು, ಅದರಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೃತಪಟ್ಟ ಮೂವರು 18-22 ವರ್ಷದೊಳಗಿನವರಾಗಿದ್ದು, ಒಡಹುಟ್ಟಿದವರು ಎಂದು ತಿಳಿದುಬಂದಿದೆ. ಇನ್ನೂ ಇಬ್ಬರು ಗಾಯಗೊಂಡಿದ್ದಾರೆ. ಇಬ್ಬರು ಗಾಯಾಳುಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ. ಇನ್ನು ಘಟನೆಯಲ್ಲಿ ಐದು ವರ್ಷದ ಮಗು ಹಾಗೂ ಇಬ್ಬರು ಪುರುಷರು ನಾಪತ್ತೆಯಾಗಿದ್ದಾರೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ತಂಡವು ಘಟನಾ ಸ್ಥಳಕ್ಕೆ ತೆರಳಿದ್ದು, ನಾಪತ್ತೆಯಾಗಿರುವ ಮೂವರಿಗಾಗಿ ಶೋಧ ಕಾರ್ಯ ನಡೆಸುತ್ತಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296