Author: admin

ಆಂಟೋನಿ ಬೇಗೂರು ಪೋಲಿಯೋವನ್ನು ಭಾರತದಲ್ಲಿ ಪೋಲಿಯೊಮೈಲಿಟಿಸ್ ಅನ್ನು ತೊಡೆದುಹಾಕಲು ಭಾರತ ಸರ್ಕಾರದಿಂದ ಸ್ಥಾಪಿಸಲ್ಪಟ್ಟ ಪ್ರತಿರಕ್ಷಣಾ ಅಭಿಯಾನವಾಗಿದೆ. ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಪೋಲಿಯೊ ವೈರಸ್ ವಿರುದ್ಧ ಲಸಿಕೆಯನ್ನು ಹಾಕಿಸುವ ಅತ್ಯಂತ ವಿಶಿಷ್ಟ ಕಾರ್ಯಕ್ರಮವಾಗಿದೆ. ಈ ಯೋಜನೆಯು ದೊಡ್ಡ ಪ್ರಮಾಣದ ಲಸಿಕಾ ಕಾರ್ಯಕ್ರಮ ಮತ್ತು ಪೋಲಿಯೊಮೈಲಿಟಿಸ್ ಪ್ರಕರಣಗಳ ಮೇಲ್ವಿಚಾರಣೆಯ ಮೂಲಕ ಪೋಲಿಯೊ ವಿರುದ್ಧ ಹೋರಾಡುತ್ತದೆ. ಭಾರತದ ಪ್ರತಿಯೊಬ್ಬ ವ್ಯಕ್ತಿಯನ್ನು ತಲುಪುವುದು ಈ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮದ ಅತಿಮುಖ್ಯ ಗುರಿಯಾಗಿದೆ. ಸುಧಾರಿತ ಸಾಮಾಜಿಕ ಯೋಜನೆಗಳ ಮೂಲಕ ಪ್ರತಿ ಹಳ್ಳಿ ಹಳ್ಳಿಯ ಮಕ್ಕಳನ್ನು ತಲುಪಲು ಬಯಸುತ್ತದೆ. ಪ್ರತಿ ಒಬ್ಬ ಮಗು ಸಹ ಲಸಿಕೆಯಿಂದ ತಪ್ಪಿಸಿಕೊಳ್ಳಬಾರದು ಹಾಗೂ ಪೋಲಿಯೋ ಬಾರದಂತೆ ತಡೆಗಟ್ಟುವುದು ಬಹುಮುಖ್ಯವಾದ ಗುರಿಯಾಗಿದೆ. ತೀವ್ರವಾದ ಫ್ಲಾಸಿಡ್ ಪಾರ್ಶ್ವವಾಯು ಪ್ರಕರಣಗಳನ್ನು ಸಮಯೋಚಿತವಾಗಿ ವರದಿ ಮಾಡಬೇಕು ಮತ್ತು 14 ದಿನಗಳಲ್ಲಿ ಅವುಗಳ ಮಲ ಮಾದರಿಗಳನ್ನು ಸಂಗ್ರಹಿಸಬೇಕು. ತಕ್ಷಣವಾಗಿ ಪ್ರತಿಕ್ರಿಯೆ ಹಾಗೂ ಪ್ರತಿರಕ್ಷಣೆ ಸಾಧ್ಯವಾದಷ್ಟು ಬೇಗ ನಡೆಸಬೇಕು. ಹಾಗೂ ಪೋಲಿಯೊಮೈಲಿಟಿಸ್ ತಡೆಗಟ್ಟಲು ಉನ್ನತ ಮಟ್ಟದ ನಿಗಾ ವಹಿಸುವುದು ಅತ್ಯಂತ…

Read More

ಅಯೋಧ್ಯಾ ಶ್ರೀರಾಮನ ದರ್ಶನಕ್ಕೆ ಹೊರಟಿದ್ದ ವೇಳೆ ಅಪಘಾತಕ್ಕೀಡಾಗಿ ವಿದ್ಯಾರ್ಥಿಯೊಬ್ಬ ಕೊನೆಯುಸಿರೆಳೆದಿದ್ದು, ಆತನ ಅಂಗಾಂಗಗಳನ್ನು ಇಬ್ಬರು ರೋಗಿಗಳಿಗೆ ಕಸಿ ಮಾಡಿ ಜೀವದಾನ ಮಾಡಿದ ಘಟನೆ ವರದಿಯಾಗಿದೆ. ಮಧ್ಯಪ್ರದೇಶದ ವಿದಿಶಾ ಜಿಲ್ಲೆಯ ಮೂಲದ ದೇವಾಂಶ್​ ಜೋಶಿ (21) ಕೊನೆಯುಸಿರೆಳೆದ ವಿದ್ಯಾರ್ಥಿ ಎಂದು ಗುರುತಿಸಲಾಗಿದ್ದು, ಈತ ಇಲ್ಲಿನ ಕಾಲೇಜೊಂದರಲ್ಲಿ ಇಂಜಿನಿಯರಿಂಗ್​ ವ್ಯಾಸಂಗ ಮಾಡುತ್ತಿದ್ದ. ಫೆಬ್ರವರಿ 28 ರಂದು ಶ್ರೀರಾಮನ ದರ್ಶನಕ್ಕಾಗಿ ಅಯೋಧ್ಯೆಗೆ ತೆರಳುತ್ತಿದ್ದ. ಈ ವೇಳೆ ರಸ್ತೆ ಅಪಘಾತ ನಡೆದಿದೆ. ಘಟನೆಯಲ್ಲಿ ಜೋಶಿ ತಲೆಗೆ ತೀವ್ರ ಪೆಟ್ಟಾಗಿತ್ತು. ತಕ್ಷಣವೇ ಆತನನ್ನು ಇಂದೋರ್​ ಆಸ್ಪತ್ರೆಗೆ ದಾಖಲಿಸಲಾಗಿದೆ. ತಪಾಸಣೆ ನಡೆಸಿದ ವೈದ್ಯರು ಮೆದುಳು ನಿಷ್ಕ್ರಿವಾಗಿದ್ದನ್ನು ಗುರುತಿಸಿದ್ದಾರೆ. ಚಿಕಿತ್ಸೆ ನೀಡಿದರೂ, ಬದುಕುಳಿಯಲಾರ ಎಂದು ದೃಢವಾದ ಬಳಿಕ ಕುಟುಂಬಸ್ಥರ ಒಪ್ಪಿಗೆ ಮೇರೆಗೆ ಅಂಗಾಂಗ ದಾನ ಪಡೆಯಲಾಗಿದೆ. ಮಗ ಬ್ರೇನ್​ ಡೆಡ್​ನಿಂದ ಇನ್ನು ಬದುಕಲಾರ ಎಂದು ತಿಳಿದ ಕುಟುಂಬಸ್ಥರು, ಆತನ ಅಂಗಗಳು ಬೇರೊಬ್ಬರ ಜೀವ ಕಾಪಾಡಲಿ ಎಂದು ಆಶಿಸಿ, ಕಿಡ್ನಿ ಮತ್ತು ಮೂತ್ರಪಿಂಡವನ್ನು ದಾನಕ್ಕೆ ಒಪ್ಪಿಗೆ ಸೂಚಿಸಿದ್ದಾರೆ. ಅದರಂತೆ ಇಲ್ಲಿನ ಮಹಾತ್ಮ ಗಾಂಧಿ…

Read More

ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಪಕ್ಷದ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಕೃಷ್ಣನಗರದಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಟಿಎಂಸಿಯ ಆದ್ಯತೆ ರಾಜ್ಯದ ಅಭಿವೃದ್ಧಿಯಲ್ಲ, ಭ್ರಷ್ಟಾಚಾರ ಮತ್ತು ಸ್ವಜನಪಕ್ಷಪಾತವಾಗಿದೆ ಎಂದು ವಾಗ್ದಾಳಿ ನಡೆಸಿದರು. ಟಿಎಂಸಿ ಪಶ್ಚಿಮ ಬಂಗಾಳದ ಜನರನ್ನು ನಿರಾಶೆಗೊಳಿಸಿದೆ. ಆ ಪಕ್ಷಕ್ಕೆ ನಿರಂತರವಾಗಿ ಮತ ಹಾಕಿದವರಿಗೆ ದ್ರೋಹ ಮಾಡಿದೆ. ಈ ಪಕ್ಷವು ದೌರ್ಜನ್ಯ ಮತ್ತು ದ್ರೋಹಕ್ಕೆ ಮತ್ತೊಂದು ಹೆಸರಾಗಿದೆ ಎಂದು ಪ್ರಧಾನಿ ಹೇಳಿದರು. ಟಿಎಂಸಿ ಬಂಗಾಳದ ಜನರನ್ನು ಬಡವಾಗಿಡಲು ಬಯಸುತ್ತದೆ, ಇದರಿಂದಾಗಿ ತನ್ನ ರಾಜಕೀಯದ ಆಟ ಮುಂದುವರಿಯುತ್ತದೆ ಎಂದು ಭಾವಿಸಿದೆ. ಗೂಂಡಾಗಳು, ಮಾಫಿಯಾದ ಬೆಳವಣಿಗೆಗೆ ಕಾರಣವಾಗಿದೆ. ಆಡಳಿತ ಪಕ್ಷವು ಏಮ್ಸ್ ಆವರಣದಲ್ಲಿ ಕಲ್ಯಾಣಿ ನಿರ್ಮಾಣಕ್ಕೆ ಅಡ್ಡಿಪಡಿಸುತ್ತಿದೆ ಮತ್ತು ಹಸಿರು ನ್ಯಾಯಮಂಡಳಿಯ ಅನುಮತಿ ಪ್ರಶ್ನಿಸುತ್ತಿದೆ ಎಂದು ಪ್ರಧಾನಿ ಟೀಕಿಸಿದರು. ‘ನಾನು ಇತ್ತೀಚೆಗೆ ನಾಡಿಯಾ ಜಿಲ್ಲೆಯ ಕಲ್ಯಾಣಿಯಲ್ಲಿ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಎಐಐಎಂಎಸ್ ಅನ್ನು ಉದ್ಘಾಟಿಸಿದ್ದೇನೆ. ಆದರೆ, ಕಲ್ಯಾಣಿ ಏಮ್ಸ್ ನಿರ್ಮಾಣದ ಬಗ್ಗೆ ಪಶ್ಚಿಮ ಬಂಗಾಳ…

Read More

ಬೆಂಗಳೂರು: ಬೆಂಗಳೂರಿನ ನೀರಿನ ಅಭಾವ ನೀಗಿಸಲು ಕೊಳವೆಬಾವಿ ನೀರು ಪೂರೈಸುವ ಟ್ಯಾಂಕರ್ ಗಳನ್ನು ಸರ್ಕಾರದ ಸುಪರ್ದಿಗೆ ತೆಗೆದುಕೊಳ್ಳಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್, ಬೆಂಗಳೂರಿನಲ್ಲಿ ಕುಡಿಯುವ ನೀರಿಗೆ ಆಹಾಕಾರ ಎದುರಾಗಿದೆ. ಪ್ರತಿನಿತ್ಯ ಬಿಡಬ್ಲ್ಯೂಎಸ್‌ಎಸ್ ಬಿ ಹಾಗೂ ಪಾಲಿಕೆ ಅಧಿಕಾರಿಗಳು ಸಭೆ ಮಾಡುತ್ತಿದ್ದಾರೆ. ಕುಡಿಯುವ ನೀರಿನ ದಂಧೆ ತಡೆಯಲು ಕೊಳವೆಬಾವಿ ಹಾಗೂ ಅವುಗಳಿಂದ ನೀರು ಪೂರೈಕೆ ಮಾಡುವ ಟ್ಯಾಂಕರ್ ಗಳು ಮಾ.7 ರ ಒಳಗಾಗಿ ನೋಂದಣಿ ಮಾಡಿಕೊಳ್ಳುವಂತೆ ಸೂಚನೆ ನೀಡಿದ್ದೇವೆ ಎಂದರು. ಕೊಳವೆ ಬಾವಿಗಳ ಮೂಲಕ ಬೆಂಗಳೂರಿನ ಕುಡಿಯುವ ನೀರಿನ ಸಮಸ್ಯೆ ನೀಗಿಸಲಾಗುವುದು. ಈ ವಿಚಾರವಾಗಿ ಸೋಮವಾರ ಮಧ್ಯಾಹ್ನ 12 ಗಂಟೆಗೆ ಸಭೆ ಕರೆಯಲಾಗಿದೆ. ಇನ್ನು ನನ್ನ ಇಲಾಖೆ ಅನುದಾನದಿಂದ ಬೆಂಗಳೂರಿನ ಎಲ್ಲಾ ಕ್ಷೇತ್ರಗಳ ಕುಡಿಯುವ ನೀರಿನ ಪೂರೈಕೆಗೆ ತಲಾ 10 ಕೋಟಿ ರೂ. ನೀಡಲಾಗಿದೆ ಎಂದು ಹೇಳಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್…

Read More

ಕುಂಬಳಕಾಯಿಯ ಈ ಭಾಗ ಆರೋಗ್ಯಕ್ಕೆ ಒಳ್ಳೇದು: ಕುಂಬಳಕಾಯಿ ಮತ್ತು ಅದರ ಬೀಜಗಳು ಮಾತ್ರವಲ್ಲದೆ ಅವುಗಳ ಹೂವುಗಳೂ ಔಷಧೀಯ ಗುಣಗಳನ್ನು ಹೊಂದಿವೆ. ಕುಂಬಳಕಾಯಿ ಹೂವು ತಿನ್ನಲು ಸಹ ರುಚಿಕರವಾಗಿರುತ್ತದೆ. ಕುಂಬಳಕಾಯಿ ಹೂವುಗಳು ಸಾಕಷ್ಟು ಕ್ಯಾಲ್ಸಿಯಂ, ರಂಜಕ, ಜೀವಸತ್ವಗಳು ಮತ್ತು ಖನಿಜಗಳನ್ನು ಹೊಂದಿರುತ್ತವೆ. ಹೀಗಾಗಿ ಈ ಹೂವು ಅನೇಕ ರೋಗಗಳ ವಿರುದ್ಧ ಹೋರಾಡಲು ನಮಗೆ ಸಹಾಯ ಮಾಡುತ್ತದೆ. ಕುಂಬಳಕಾಯಿ ಹೂಗಳನ್ನು ತಿನ್ನುವುದರಿಂದ ಅನೇಕ ಆರೋಗ್ಯ ಪ್ರಯೋಜನಗಳಾಗಲಿವೆ. ಕುಂಬಳಕಾಯಿ ಹೂವುಗಳು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತವೆ. ಬಾಳೆ ಹೂವಿನ ಪಲ್ಯ ತಿನ್ನುವುದರಿಂದ ಎಷ್ಟೆಲ್ಲಾ ಆರೋಗ್ಯ ಪ್ರಯೋಜನಗಳಿವೆ ನಿಮಗೆ ಗೊತ್ತಾ?: ಬಾಳೆ ಹೂವಿನಲ್ಲಿ ವಿಟಮಿನ್ ಸಿ, ಎ, ಇ, ಫೈಬ‌ರ್ ಮತ್ತು ಪೊಟ್ಯಾಸಿಯಮ್ ಸಮೃದ್ಧವಾಗಿದ್ದು, ಇದು ಆರೋಗ್ಯಕರ ಪೋಷಕಾಂಶಗಳ ಮೂಲವಾಗಿದೆ. ಬಾಳೆ ಹೂವಿನ ಪಲ್ಯ ಸವಿಯುವುದರಿಂದ ನೀವು ಸಾಕಷ್ಟು ಆರೋಗ್ಯ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು. ಇದು, ದೇಹದಲ್ಲಿ ಮಲೇರಿಯಾ ಪರಾವಲಂಬಿಗಳ ಬೆಳವಣಿಗೆಯನ್ನು ತಡೆಯಲು ಸಹಾಯ ಮಾಡುತ್ತದೆ. ಮಧುಮೇಹ ಮತ್ತು ರಕ್ತಹೀನತೆ ಕಡಿಮೆ ಮಾಡುತ್ತದೆ. ಕೆಂಪು ರಕ್ತ ಕಣಗಳ ಉತ್ಪಾದನೆಗೆ…

Read More

ಕೆಲವರ ಮುಖದಲ್ಲಿ ನೀವು ನೋಡಿರುವಿರಿ ಮೊಡವೆ ಕಲೆಗಳು ಎದ್ದು ಕಾಣುತ್ತಿರುತ್ತವೆ. ಇದು ಮುಖದ ಅಂದವನ್ನೇ ಹಾಳು ಮಾಡುತ್ತದೆ. ಈ ಮೊಡವೆ ಕಲೆಗಳ ಸಮಸ್ಯೆಗೆ ಇಲ್ಲಿದೆ ಸಿಂಪಲ್ ಟಿಪ್ಸ್. ಕಿತ್ತಳೆ ಹಣ್ಣಿನ ಸಿಪ್ಪೆ: ಕಿತ್ತಳೆ ಹಣ್ಣು ತಿಂದ ಬಳಿಕ ಅದರ ಸಿಪ್ಪೆಯನ್ನು ಎಸೆಯದೆ ಬಿಸಿಲಿನಲ್ಲಿ ಒಣಗಿಸಿ ಪುಡಿ ಮಾಡಿ ಇಟ್ಟುಕೊಳ್ಳಿ. ಸಿಟ್ರಿಕ್ ಆಸಿಡ್‌ ಸಾಕಷ್ಟು ಪ್ರಮಾಣದಲ್ಲಿ ಇರುವ ಈ ಪುಡಿಯ ಪೇಸ್ಟ್ ತಯಾರಿಸಿ ನಿಮ್ಮ ಮುಖಕ್ಕೆ ಹಚ್ಚಿ. ಮೊಡವೆ ಕಲೆಗಳಿರುವ ಜಾಗಕ್ಕೆ ನಿಯಮಿತವಾಗಿ ಹಚ್ಚುತ್ತಾ ಬಂದರೆ ಈ ಕಲೆಗಳು ದೂರವಾಗುತ್ತವೆ. ಅದೇ ರೀತಿ ನಿಂಬೆ ಹಣ್ಣಿನಲ್ಲೂ ಸಿಟ್ರಿಕ್‌ ಆಮ್ಲ ಇರುವುದರಿಂದ ಬೇರೆ ಫೇಸ್ ಪ್ಯಾಕ್ ಗಳ ಜೊತೆ ನಿಂಬೆ ರಸವನ್ನು ಸೇರಿಸಿ ಹಚ್ಚಿಕೊಳ್ಳಿ. ಅಲೋವೆರಾ: ಕಲೆರಹಿತ ನೈಸರ್ಗಿಕವಾಗಿ ಹೊಳೆಯುವ ಚರ್ಮಕ್ಕಾಗಿ, ಅಲೋವೆರಾ ಪರಿಪೂರ್ಣ ಪರಿಹಾರವಾಗಿದೆ. ಅದರ ಉತ್ಕರ್ಷಣ ನಿರೋಧಕ ಮತ್ತು ಉರಿಯೂತದ ಗುಣಲಕ್ಷಣಗಳಿಂದಾಗಿ ಚರ್ಮದಲ್ಲಿನ, ಮೊಡವೆ ಗುರುತುಗಳು ಮತ್ತು ಸೋಂಕುಗಳಂತಹ ಚರ್ಮದ ತೊಂದರೆಗಳನ್ನು ಗುಣಪಡಿಸಲು ಸಹಾಯ ಮಾಡುತ್ತದೆ. ಇದು ಚರ್ಮದಲ್ಲಿನ ಮೊಡವೆ ಕಲೆಗಳು…

Read More

ತುಮಕೂರು: ತುಮಕೂರು ಜಿಲ್ಲೆಯ ಹೊಯ್ಸಳ ಕಟ್ಟೆ ಗ್ರಾಮದ ಮಕ್ಕಳಿಗೆ ಸಮರ್ಪಕವಾದ ಅಂಗನವಾಡಿ ಕೇಂದ್ರ ಇಲ್ಲ, ಈಗಾಗಲೇ ಹೊಸ ಅಂಗನವಾಡಿ ಕಟ್ಟಡವನ್ನು ನಿರ್ಮಿಸಲಾಗಿದ್ದರೂ ಕಟ್ಟಡದ ಉದ್ಘಾಟನೆಗೆ ಅಧಿಕಾರಿಗಳು ಮೀನಾಮೇಷ ಎಣಿಸುತ್ತಿದ್ದಾರೆ ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣ ಆಯೋಗಕ್ಕೆ ಲಂಚಮುಕ್ತ ಕರ್ನಾಟಕ ನಿರ್ಮಾಣ ವೇದಿಕೆಯ ರಾಜ್ಯ ಕಾರ್ಯದರ್ಶಿ ನರಸಿಂಹಮೂರ್ತಿ ಎನ್. ಅವರು ದೂರು ನೀಡಿದ್ದಾರೆ. ಈ ಗ್ರಾಮದಲ್ಲಿ ಪರಿಶಿಷ್ಟ ಜಾತಿ ಸಮುದಾಯದ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಅಂಗನವಾಡಿಗೆ ಬರುತ್ತಿದ್ದಾರೆ. ಹೊಯ್ಸಳ ಕಟ್ಟೆ ಪರಿಶಿಷ್ಟ ಜಾತಿ ಕಾಲೋನಿಯಲ್ಲಿ ನೂತನ ಅಂಗನವಾಡಿ ಕೇಂದ್ರವನ್ನು ನಿರ್ಮಾಣ ಮಾಡಲಾಗಿದೆ. ಉದ್ಘಾಟನೆಯ ಹಂತದಲ್ಲಿರುವ ಈ ಕಟ್ಟಡವನ್ನು ಇನ್ನೂ ಉದ್ಘಾಟಿಸದೇ ವಿಳಂಬ ನೀತಿ ಅನುಸಲಾಗುತ್ತಿದ್ದು, ಇದರಿಂದಾಗಿ ಬಡ ಮಕ್ಕಳು ಶಿಥಿಲಾವಸ್ಥೆಯಲ್ಲಿರುವ ಹಳೆಯ ಅಂಗನವಾಡಿಯಲ್ಲೇ ದಿನದೂಡುವಂತಾಗಿದೆ ಎಂದು ನರಸಿಂಹಮೂರ್ತಿ ಎನ್. ತಿಳಿಸಿದ್ದಾರೆ. ಈ ಬಗ್ಗೆ ನಮ್ಮತುಮಕೂರು ವಾಹಿನಿ ಜೊತೆಗೆ ಮಾತನಾಡಿದ ನರಸಿಂಹಮೂರ್ತಿ ಎನ್., ನಾವು ದೂರು ನೀಡಿದ ಬಳಿಕ ನಿಂತು ಹೋಗಿದ್ದ ಅಂಗನವಾಡಿ ಕಟ್ಟಡದ ಕಾಮಗಾರಿ ಕೇವಲ ಒಂದು ತಿಂಗಳೊಳಗೆ ಪೂರ್ಣಗೊಳಿಸಲಾಗಿದೆ.…

Read More

ಚಿಕ್ಕಬಳ್ಳಾಪುರ: ಚಲಿಸುತ್ತಿರುವ ಟಿಪ್ಪರ್ ಕೆಳಗೆ ಬಿದ್ದು ವ್ಯಕ್ತಿಯೊಬ್ಬರು ಪ್ರಾಣ ಕಳೆದುಕೊಂಡಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಬಾಗೇಪಲ್ಲಿ ತಾಲ್ಲೂಕಿನ ಜೂಲಪಾಳ್ಯ ಗ್ರಾಮ ಪಂಚಾಯಿತಿ ಕಾರ್ಯದರ್ಶಿಯಾಗಿರುವ ಗೋಪಾಲಯ್ಯ(59) ಮೃತ ದುರ್ದೈವಿಯಾಗಿದ್ದಾರೆ. ರಸ್ತೆ ಕಾಮಗಾರಿ ನಡೆಯುತ್ತಿದ್ದ ಸ್ಥಳದಲ್ಲಿ ಗೋಪಾಲಯ್ಯ ಅವರು ಟಿಪ್ಪರ್ ‌ನಲ್ಲಿ ಸಾಗುತ್ತಿದ್ದಾಗ ದುರಂತ ನಡೆದಿದೆ. ಸ್ಥಳಕ್ಕೆ ಶಾಸಕ ಎಸ್ ಎನ್ ಸುಬ್ಬಾರೆಡ್ಡಿ ಭೇಟಿ ನೀಡಿದ್ದಾರೆ. ಬಾಗೇಪಲ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಮೈಸೂರು:  ಬೈಕ್‌ ಮತ್ತು ಕ್ಯಾಂಟರ್‌ ನಡುವಿನ ಭೀಕರ ಅಪಘಾತದಲ್ಲಿ ದಂಪತಿ ಪ್ರಾಣ ಕಳೆದುಕೊಂಡ ಘಟನೆ ಮೈಸೂರು ಜಿಲ್ಲೆಯ ಹುಣಸೂರಿನಲ್ಲಿನಡೆದಿದೆ. ದಂಪತಿ ಬೈಕ್ ‌ನಲ್ಲಿ ಸಾಗುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಮಂಜುನಾಥ ಬಡಾವಣೆಯ ನಿವಾಸಿ ರಾಜು (64) ಮತ್ತು ಅವರ ಪತ್ನಿ ಸುನಂದಾ (55)ಮೃತ ದುರ್ದೈವಿಗಳಾಗಿದ್ದಾರೆ. ಮಂಜುನಾಥ್‌ ಅವರು ಬೈಕ್‌ ನಲ್ಲಿ ಸಾಗುತ್ತಿದ್ದಾಗ ಹುಣಸೂರು ಕಡೆಯಿಂದ ವೇಗವಾಗಿ ಬಂದ ಕ್ಯಾಂಟರ್ ಗೂಡ್ಸ್ ವಾಹನ ಬೈಕ್‌ ಗೆ ಡಿಕ್ಕಿ ಹೊಡೆದಿದೆ. ಅಪಘಾತ ನಡೆಸಿ ವಾಹನ ನಿಲ್ಲಿಸದೆಯೇ ಗೂಡ್ಸ್‌ ಚಾಲಕ ಪರಾರಿಯಾಗಿದ್ದಾನೆ. ಬಳಿಕ ಸಾರ್ವಜನಿಕರೇ ಬೆನ್ನಟ್ಟಿ ವಾಹನವನ್ನು ತಡೆದು ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ. ಹುಣಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಬೆಂಗಳೂರು: ಕೆಆರ್‌ ಮಾರ್ಕೆಟ್‌ ಬಳಿ ಬೆಳಗಿನ ಜಾವ ಆಟೋಗಾಗಿ ಕಾಯುತ್ತಿದ್ದ ಅಪರಿಚಿತ ಮಹಿಳೆಯನ್ನು ಚಾಲಕನೊಬ್ಬ ತನ್ನ ಆಟೋದಲ್ಲಿ ಹತ್ತಿಸಿಕೊಂಡು ಹೋಗಿ, ಆಕೆಯನ್ನು ಪಾಳು ಬಿದ್ದ ಕಟ್ಟಡಕ್ಕೆ ಕರೆದುಕೊಂಡು ಹೋಗಿ ಅಲ್ಲಿ ಆಕೆಯ ಮೇಲೆ ಅತ್ಯಾಚಾರ ಎಸಗಿ, ಬಳಿಕ ಅದೇ ಕಟ್ಟಡದಿಂದ ದೂಡಿ ಹತ್ಯೆ ಮಾಡಿದ್ದಾನೆ. ಆರೋಪಿಯನ್ನು ಮುಬಾರಕ್‌ (38) ಎಂದು ಗುರುತಿಸಲಾಗಿದೆ. ಅದೇ ದಿನ ಪೊಲೀಸರು ಸಂಪಂಗಿ ರಾಮನಗರದ ಜನತಾ ಸಹಕಾರಿ ಕಟ್ಟಡದ ಬಳಿಯ ಪಾಳು ಬಿದ್ದ ಕಟ್ಟಡದಲ್ಲಿ ಮಹಿಳೆಯ ಮೃತದೇಹವನ್ನು ಪತ್ತೆ ಮಾಡಿದ್ದರು. ಪ್ರಾಥಮಿಕ ತನಿಖೆಯಲ್ಲಿ ಮಹಿಳೆ ಕಟ್ಟಡದಿಂದ ಬಿದ್ದು ಸಾವನ್ನಪ್ಪಿದ್ದಾಳೆ ಎಂದು ಶಂಕಿಸಲಾಗಿತ್ತು. ಆದರೆ ಮರಣೋತ್ತರ ಪರೀಕ್ಷೆಯಲ್ಲಿ ಆಕೆಯ ಸಾವಿಗೂ ಮೊದಲು ಅತ್ಯಾಚಾರ ನಡೆದಿರುವುದು ತಿಳಿದುಬಂದಿದೆ. ಈ ಬಗ್ಗೆ ಪೊಲೀಸರು ಅತ್ಯಾಚಾರ ಮತ್ತು ಕೊಲೆ ಪ್ರಕರಣ ದಾಖಲಿಸಿಕೊಂಡು ತನಿಖೆ ಮಾಡಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆತ ಮಹಿಳೆ ಮೇಲೆ ಅತ್ಯಾಚಾರ ಎಸಗಿ ಬಳಿಕ ಕಟ್ಟಡದಿಂದ ತಳ್ಳಿ ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ. ಆದರೆ ಈ ವರೆಗೂ…

Read More