Subscribe to Updates
Get the latest creative news from FooBar about art, design and business.
- ದೇಶದ 2ನೇ ಅತಿ ದೊಡ್ಡ ಕ್ರಿಕೆಟ್ ಕ್ರೀಡಾಂಗಣಕ್ಕೆ ಸಿಎಂ ಸಿದ್ದರಾಮಯ್ಯ ಶಂಕುಸ್ಥಾಪನೆ
- ಈ ವರ್ಷ 52 ಸಾವಿರ ಅತಿಥಿ ಶಿಕ್ಷಕರ ನೇಮಕ: ಸಚಿವ ಮಧು ಬಂಗಾರಪ್ಪ
- ಬೀದರ್ ಬ್ರಿಮ್ಸ್ (BRIMS) ಆಸ್ಪತ್ರೆಯಲ್ಲಿ ಕರ್ತವ್ಯ ನಿರತ ವೈದ್ಯರ ಮೇಲೆ ಭೀಕರ ಹಲ್ಲೆ: 7 ಮಂದಿ ಆರೋಪಿಗಳ ಬಂಧನ
- ತುಮಕೂರು ಜಿಲ್ಲೆಗೆ ‘ತುಮಕೂರು (ಬೆಂಗಳೂರು ಉತ್ತರ)’ ಎಂದು ಮರುನಾಮಕರಣ: ಗೃಹ ಸಚಿವ ಡಾ.ಜಿ.ಪರಮೇಶ್ವರ್
- ಮಾದಾವರ–ತುಮಕೂರು ಮೆಟ್ರೋ ರೈಲು ಯೋಜನೆ: ಸರ್ಕಾರಕ್ಕೆ ಸಲ್ಲಿಕೆಯಾಯ್ತು ಡಿಪಿಆರ್ ವರದಿ
- ಪಕ್ಷದ ಜವಾಬ್ದಾರಿ ನಿರ್ವಹಿಸದಿದ್ದರೆ ಶಿಸ್ತು ಕ್ರಮ: ಕಾಂಗ್ರೆಸ್ ಮುಖಂಡರ ಸಭೆಯಲ್ಲಿ ಶಾಸಕ ಕೆ. ಷಡಕ್ಷರಿ ಎಚ್ಚರಿಕೆ
- ಗುಬ್ಬಿ ಶಾಸಕರು, ಪುತ್ರನಿಂದ ಕುತಂತ್ರ ರಾಜಕಾರಣ: ಷಡ್ಯಂತ್ರಗಳಿಗೆ ಜಗ್ಗುವುದಿಲ್ಲ: ಜೆಡಿಎಸ್ ಮುಖಂಡ ನಾಗರಾಜು ಕಿಡಿ
- ತುಮಕೂರು: ಕುಲ್ಲಕ ವಿಷಯಕ್ಕೆ ಜಗಳ: ಕೊಲೆ
Author: admin
ಬರ್ವಾದಾ: ದೇಶವು ಮೋದಿ ಗ್ಯಾರಂಟಿಯನ್ನು ನೆಚ್ಚಿಕೊಂಡಿದೆ, ಹೀಗಾಗಿ ಮುಂದಿನ ಚುನಾವಣೆಯಲ್ಲಿ ಎನ್ ಡಿಎ ಮೈತ್ರಿಕೂಟವು 400ಕ್ಕೂ ಹೆಚ್ಚು ಸೀಟುಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಜಾರ್ಖಂಡ್ ನ ಧನ್ ಬಾದ್ ನಲ್ಲಿ ನಡೆದ ‘ವಿಜಯ ಸಂಕಲ್ಪ ಮಹಾರ್ಯಾಲಿ’ಯಲ್ಲಿ ಅವರು ಮಾತನಾಡಿದರು. ‘ಜಲ ಜೀವನ್ ಮಿಷನ್’, ‘ಪಿಎಂ ಆವಾಸ್ ಯೋಜನೆ’ ಕಾರ್ಯಕ್ರಮಗಳನ್ನು ಕಾರ್ಯಗತಗೊಳಿಸಲು ‘ಇಂಡಿಯಾ’ ಮೈತ್ರಿಕೂಟವೂ ಬಿಡುತ್ತಿಲ್ಲ ಎಂದೂ ಅವರು ಆರೋಪಿಸಿದರು. ಅದೊಂದು ಅಭಿವೃದ್ಧಿ ವಿರೋಧಿ, ಜನವಿರೋಧಿ ಮೈತ್ರಿಕೂಟ ಎಂದು ಅವರು ಕಿಡಿಕಾರಿದರು. ‘ಇತರರ ಎಲ್ಲಾ ಭರವಸೆಗಳು ಮುಗಿಯುವಾಗ ಮೋದಿ ಗ್ಯಾರಂಟಿ ಆರಂಭವಾಗುತ್ತದೆ. ಸಿಂದ್ರಿ ರಸಗೊಬ್ಬರ ವಿಭಾಗ ಹಾಗೂ ಉತ್ತರ ಕರಣ್ ಪುರ ವಿದ್ಯುತ್ ಯೋಜನೆ ಮುಂತಾದವುಗಳು ಮೋದಿ ಗ್ಯಾರಂಟಿ ಈಡೇರಿದ ಉದಾಹರಣೆಗಳು’ ಎಂದು ಅವರು ಹೇಳಿದರು. ಜೆಎಂಎಂ ನೇತೃತ್ವದ ರಾಜ್ಯ ಸರ್ಕಾರದ ವಿರುದ್ಧವೂ ವಾಗ್ದಾಳಿ ನಡೆಸಿದ ಅವರು, ‘ಸರ್ಕಾರ ರಾಜ್ಯವನ್ನು ಲೂಟಿ ಮಾಡಿದೆ. ಜಾರ್ಖಂಡ್ನಲ್ಲಿ ಇಷ್ಟೊಂದು ಬಂಡಲ್ ಪ್ರಮಾಣದ ಹಣ ವಶಪಡಿಸಿಕೊಂಡಿದ್ದನ್ನು ನಾನು ನೋಡಿಲ್ಲ. ಜನರಿಂದ ಲೂಟಿ ಮಾಡಿದ…
ವಾರದಲ್ಲಿ 2 ಬಾರಿ ಬೀಟ್ ರೂಟ್ ಸೇವಿಸಿ: ಬೀಟ್ ರೂಟ್ ನಲ್ಲಿ ವಿಟಮಿನ್ ಎ, ಸಿ ಕ್ಯಾಲ್ ಶಿಯಮ್, ಪೊಟ್ಯಾಷಿಯಂ ಅಂಶವು ಅಧಿಕ ಪ್ರಮಾಣದಲ್ಲಿ ಇರುತ್ತದೆ. ಬೀಟ್ ರೂಟ್ ನಲ್ಲಿರುವ ಉತ್ತಮ ಪೋಷಕಾಂಶಗಳು ದೇಹವನ್ನು ಸದಾ ಸದೃಢವಾಗಿರಿಸುತ್ತದೆ. ಹಾಗಾಗಿ ವಾರದಲ್ಲಿ ಎರಡು ಬಾರಿಯಾದರೂ ಬೀಟ್ ರೂಟ್ ಸೇವಿಸಬೇಕು ಅದು ಸಲಾಡ್ ರೂಪದಲ್ಲೇ ಆಗಿರಲಿ, ಅಥವಾ ಜ್ಯೂಸ್ ಇನ್ನಾವುದೇ ರೂಪದಲ್ಲಿ ಆಗಿರಲಿ. ಯಾರು ರಕ್ತಹೀನತೆ ಸಮಸ್ಯೆಯಿಂದ ಬಳಲುತ್ತಿರುತ್ತಾರೋ ಅಂತವರು ಬೀಟ್ ರೂಟ್ ಅನ್ನು ನಿಯಮಿತವಾಗಿ ಸೇವಿಸುತ್ತಾ ಬಂದರೆ ಈ ಸಮಸ್ಯೆ ಶಾಶ್ವತವಾಗಿ ನಿವಾರಣೆಯಾಗುತ್ತದೆ. ಜಾಯಿಕಾಯಿಯಿಂದ ನಿದ್ರಾಹೀನತೆಯ ಸಮಸ್ಯೆಗೆ ಪರಿಹಾರ..!: ಜಾಯಿಕಾಯಿಯಿಂದ ಅನೇಕ ಆರೋಗ್ಯ ಪ್ರಯೋಜನಗಳಿವೆ ಎಂದು ತಜ್ಞರು ಹೇಳುತ್ತಾರೆ. ಜಾಯಿಕಾಯಿಯಲ್ಲಿ ಫೈಬರ್, ಥಯಾಮಿನ್, ವಿಟಮಿನ್ ಬಿ6, ಕ್ಯಾಲ್ಸಿಯಂ, ಕಬ್ಬಿಣ, ಮ್ಯಾಂಗನೀಸ್ ಮತ್ತು ಪೊಟ್ಯಾಸಿಯಮ್ ಮುಂತಾದ ಪೋಷಕಾಂಶಗಳು ಹೇರಳವಾಗಿವೆ. ಇದು ಮಿರಿಸ್ಟಿಸಿನ್ & ಮೆಸ್ಲಿಗ್ನಾನ್ ಎಂಬ ಶಕ್ತಿಯುತ ವಸ್ತುಗಳನ್ನು ಒಳಗೊಂಡಿದೆ. ಇದು ದೇಹದಲ್ಲಿ ಉರಿಯೂತವನ್ನು ಕಡಿಮೆ ಮಾಡುತ್ತದೆ. ನಿದ್ರಾಹೀನತೆಯಿಂದ ಬಳಲುತ್ತಿದ್ದರೆ ಪ್ರತಿದಿನ ರಾತ್ರಿ ಬಿಸಿ…
ತುರುವೇಕೆರೆ: ಮಕ್ಕಳ ಅಂಗವಿಕಲತೆಯನ್ನು ತಡೆಗಟ್ಟಲು ಸರ್ಕಾರ ಯೋಜನೆಯನ್ನು ರೂಪಿಸಿದ್ದು, ಅದರಂತೆ ಮಕ್ಕಳಿಗೆ ಪೋಲಿಯೋ ಹನಿ ಹಾಕುವ ಯೋಜನೆಯನ್ನು ಹಮ್ಮಿಕೊಳ್ಳಲಾಗಿದೆ. ಕಡ್ಡಾಯವಾಗಿ ನಿಮ್ಮ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿಸಿ ಎಂದು ತಹಶೀಲ್ದಾರ್ ವೈ.ಎಂ. ರೇಣುಕುಮಾರ್ ಮನವಿ ಮಾಡಿಕೊಂಡರು. ಭಾರತ ಸರ್ಕಾರವು 03—03–24 ರಿಂದ 06—03–24 ರ ವರೆಗೆ ಹುಟ್ಟನಿಂದ 5 ವರ್ಷದ ಒಳಗಿನ ಎಲ್ಲಾ ಮಕ್ಕಳಿಗೆ ಪೋಲಿಯೋ ಲಸಿಕೆ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ,ಇದರ ಬಗ್ಗೆ ಆರೋಗ್ಯ ಇಲಾಖೆಯು ಸಕಲ ಸಿದ್ದತೆಯನ್ನು ಮಾಡಿಕೊಂಡಿದೆ. ಅದರಂತೆ ಮಾರ್ಚ್ 3 ರ ಭಾನುವಾರದಂದು ಬೂತ್ ಗಳನ್ನು ಸ್ಥಾಪಿಸಲಾಗಿದೆ ಎಂದು ಅವರು ತಿಳಿಸಿದರು. ನಮ್ಮ ತಾಲ್ಲೂಕಿಗೆ ಸಂಬಂಧಪಟ್ಟಂತೆ ಒಟ್ಟು 90 ಪೋಲಿಯೋ ಬೂತ್ ಗಳನ್ನು ಸ್ಥಾಪಿಸಲಾಗಿದೆ. ಅದರಲ್ಲಿ ಪಟ್ಟಣದಲ್ಲಿ 8 ಬೂತ್ ಗಳನ್ನು ಮಾಡಿದ್ದೇವೆ. ಗ್ರಾಮೀಣ ಪ್ರದೇಶಗಳಲ್ಲಿ 82 ಬೂತ್ ಗಳನ್ನೂ ಸ್ಥಾಪಿಸಲಾಗಿದೆ ಎಂದು ಅವರು ತಿಳಿಸಿದರು. ಪಟ್ಟಣದ ಬಸ್ ನಿಲ್ದಾಣದಲ್ಲಿಯೂ ಸಹ ಬೂತ್ ಸ್ಥಾಪಿಸಲಾಗಿದೆ. ಬಾಣಸಂದ್ರ ಮತ್ತು ಅಮ್ಮಸಂದ್ರ ರೈಲ್ವೆ ನಿಲ್ದಾಣಗಳಲ್ಲಿ ಪೋಲಿಯೋ ಲಸಿಕೆ ಹಾಕಲು ವ್ಯವಸ್ಥೆ…
ದೆಹಲಿಯ ನರೇಲಾ ಪ್ರದೇಶದ ಶಾಲೆಯ ಆವರಣದಲ್ಲಿ 28 ವರ್ಷದ ಬಿಜೆಪಿ ಕಾರ್ಯಕರ್ತೆಯೋರ್ವರ ಮೃತದೇಹ ಪತ್ತೆಯಾಗಿದೆ. ಸಂತ್ರಸ್ತೆಯನ್ನು ವರ್ಷಾ ಪವಾರ್ ಎಂದು ಗುರುತಿಸಲಾಗಿದೆ. ಹೌದು, ಫೆಬ್ರವರಿ 24ರಿಂದ ಭಾರತೀಯ ಜನತಾ ಪಕ್ಷದ (ಬಿಜೆಪಿ) ಕಾರ್ಯಕರ್ತೆ ವರ್ಷಾ ಅವರು ಕಳೆದ ಕೆಲವು ದಿನಗಳಿಂದ ಕಾಣೆಯಾಗಿದ್ದು ಪೊಲೀಸರು ತನಿಖೆ ಶುರುಮಾಡಿದ್ದರು. ಆದರೀಗ ಪ್ರಕರಣಕ್ಕೆ ರೋಚಕ ತಿರುವು ಸಿಕ್ಕಿದ್ದು ವರ್ಷಾಳ ಸಾವಿಗೆ ಶಾಲೆಯ ಓನರ್ ಒಬ್ಬ ಪ್ರಮುಖ ಕಾರಣನಾಗಿದ್ದಾನೆ. ವಿಚಿತ್ರ ಎಂದರೆ ಓನರ್ ಸೋಹನ್ ಲಾಲ್ ಕೂಡ ಸೋನಿಪತ್ ನಲ್ಲಿ ರೈಲಿನ ಮುಂದೆ ಜಿಗಿದು ಸಾವಿಗೆ ಶರಣಾಗಿದ್ದಾನೆ. ಅಂದಹಾಗೆ ಮೂಲಗಳ ಪ್ರಕಾರ ಮೃತ ವರ್ಷಾ, ನರೇಲಾದ ಸ್ವತಂತ್ರ ನಗರದಲ್ಲಿರುವ ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದಳು. ಅಲ್ಲದೆ, ಆ ಶಾಲೆಗೆಆಕೆಯು ಸಹ ಓನರ್ ಆಗಿದ್ದಳು. ಆಕೆಯ ಬಿಸಿನೆಸ್ ಪಾಲುದಾರ ಸೋಹನ್ ಲಾಲ್, ವರ್ಷಾಳ ಸಾವಿಗೆ ಪ್ರಮುಖ ಕಾರಣ ಎಂದು ಶಂಕಿಸಲಾಗಿದೆ. ಇನ್ನು ಸೋಹನ್ ಲಾಲ್ ಮತ್ತು ವರ್ಷಾ ನಡುವಿನ ಸಂಬಂಧದಲ್ಲಿದ್ದ ಕಲಹವೇ ಈ ದುರಂತಕ್ಕೆ ಕಾರಣ ಎನ್ನಲಾಗಿದೆ.…
ಬೆಂಗಳೂರು: ನಗರದ ಪ್ರತಿಷ್ಟಿತ ರಾಮೇಶ್ವರಂ ಕೆಫೆಯಲ್ಲಿ ನಿಗೂಢ ವಸ್ತು ಸ್ಪೋಟಗೊಂಡಿದ್ದು, ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಹೇಳಲಾಗಿದೆ. ಹೆಚ್ಎಎಲ್ ಪೊಲೀಸ್ ಠಾಣಾ ವ್ಯಾಪ್ತಿಯ ಕುಂದಲಹಳ್ಲಿಯಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ ಕೈ ತೊಳೆಯುವ ಜಾಗದಲ್ಲಿ ಸ್ಫೋಟ ಸಂಭವಿಸಿದೆ. ಸ್ಥಳದಲ್ಲಿ ಬ್ಯಾಟರಿ, ಬೋಲ್ಟ್ಗಳು ಪತ್ತೆಯಾಗಿದೆ. ಮಧ್ಯಾಹ್ನ 1:05ರ ವೇಳೆಗೆ ಈ ಸ್ಫೋಟ ಸಂಭವಿಸಿದೆ. ಘಟನೆಯಲ್ಲಿ ಒಟ್ಟು ಐವರು ಗಾಯಗೊಂಡಿದ್ದು ಒಬ್ಬರ ಸ್ಥಿತಿ ಗಂಭೀರವಾಗಿದೆ. ಏಕಾಏಕಿ ಸ್ಪೋಟ ನಡೆದಿದ್ದು ಗ್ರಾಹಕರು ದಿಕ್ಕಾಪಾಲಾಗಿ ಓಡಿದ್ದಾರೆ. ಘಟನೆಯಿಂದ ಐವರಿಗೆ ಗಾಯಗಳಾಗಿದ್ದು. ಕೆಫೆಗೆ ಬಂದಿದ್ದ ಅಪರಿಚಿತ ವ್ಯಕ್ತಿಯ ಬ್ಯಾಗ್ ನಲ್ಲಿ ಸ್ಪೋಟಗೊಂಡಿದೆ ಎಂದು ಹೇಳಲಾಗಿದ್ದು, ಅಧಿಕೃತ ಮಾಹಿತಿ ತಿಳಿದು ಬರಬೇಕಿದೆ. ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು ಅಗ್ನಿಶಾಮಕ ದಳದ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸಿದ್ದಾರೆ, ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಪೊಲೀಸರ ಜೊತೆ ಸ್ಥಳಕ್ಕೆ ವಿಧಿ ವಿಜ್ಞಾನ ಪ್ರಯೋಗಾಲಯದ (FSL) ಅಧಿಕಾರಿಗಳು ಭೇಟಿ ನೀಡಿದ್ದು ಪರಿಶೀಲನೆ ನಡೆಯುತ್ತಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.…
ತುರುವೇಕೆರೆ: ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕು ಮಾಯಸಂದ್ರ ಹೋಬಳಿಯ ಗಡಿ ಗ್ರಾಮವಾದ ಡಣ ನಾಯಕನ ಪುರ ಗ್ರಾಮ ಹುಟ್ಟಿನಿಂದ ಈ ಗ್ರಾಮಕ್ಕೆ ಮೂಲಭೂತ ಸೌಕರ್ಯವಾದ ಸ್ವಚ್ಚ ಕುಡಿಯುವ ನೀರು, ರಸ್ತೆ, ಆಶ್ರಯ ಮನೆಗಳಿಂದ ವಂಚಿತವಾಗಿರುವ ಬಗ್ಗೆ ಹಾಗೂ ಸರ್ಕಾರಿ ಶಾಲೆಯ ಹೆಚ್ಚುವರಿ ಕಟ್ಟಡ , ಶೌಚಾಲಯಕ್ಕೆ ಗ್ರಾಮಸ್ಥರು ವಿಶ್ವ ಮಾನವ ಹಕ್ಕುಗಳ ಸೇವಾ ಕೇಂದ್ರದ ಸಂಸ್ಥಾಪಕ ಅಧ್ಯಕ್ಷರಾದ ಶ್ರೀಸಿದ್ದಲಿಂಗೇಗೌಡರಿಗೆ ಮನವಿ ಮಾಡಿದ್ದರು. ಇದರ ಹಿನ್ನಲೆ ಶ್ರೀಸಿದ್ದಲಿಂಗೇಗೌಡರು ರಾಜ್ಯ ಮಾನವ ಹಕ್ಕುಗಳ ಆಯೋಗದ ರಾಜ್ಯ ಮಟ್ಟದ ಅಧಿಕಾರಿಗಳಿಗೆ ಮನವಿ ಮಾಡಿದ್ದು, ಈ ಸಂಬಂಧ ಜಿಲ್ಲಾ ಮಟ್ಟದ ಬರ ನಿರ್ವಹಣಾಧಿಕಾರಿ, ತಾಲ್ಲೂಕಿನ ದಂಡಾಧಿಕಾರಿ, ತಾಲ್ಲೂಕು ಪಂಚಾಯಿತಿಯ ಕಾರ್ಯನಿರ್ವಹಣಾಧಿಕಾರಿಗಳು, ಆರೋಗ್ಯ ಇಲಾಖೆಯ ವೈದ್ಯಾಧಿಕಾರಿಗಳು, ಸಿಬ್ಬಂಧಿ ವರ್ಗ, ಮಾಯಂದ್ರ ಪಂಚಾಯ್ತಿಯ PDO, ಸದಸ್ಯರು, ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು, ಕುಡಿಯುವ ನೀರು ಸರಬರಾಜು ಇಲಾಖೆ, ಹಾಗೂ ಮುಂತಾದ ಇಲಾಖೆಯ ಅಧಿಕಾರಿಗಳು ಗ್ರಾಮಕ್ಕೆ ಖುದ್ದು ಭೇಟಿ ನೀಡಿ ಗ್ರಾಮದಲ್ಲಿರುವ ನಿವೇಶನ ಮತ್ತು ಮನೆರಹಿತ ಸಂತ್ರಸ್ಥರಿಗೆ ಈಗಾಗಲೇ ಭೂಮಿ ಮಂಜೂರ…
ಹೆಚ್.ಡಿ.ಕೋಟೆ: ಸಾಗುವಳಿ ಚೀಟಿ ನೀಡಲು 20,000 ರೂಪಾಯಿ ಲಂಚಕ್ಕೆ ಬೇಡಿಕೆಯಿಟ್ಟ ಕಂದಾಯ ಇಲಾಖೆ ಸಿಬ್ಬಂದಿ ಗ್ರಾಮಸಹಾಯಕ ಕೃಷ್ಣ ಎಂಬಾತ ಲೋಕಾಯುಕ್ತರ ಬಲೆಗೆ ಬಿದ್ದಿದ್ದಾನೆ. ಹುಣಸೂರಿನ ನಿವಾಸಿ ಮರಿಸ್ವಾಮಿ ಎಂಬ ವ್ಯಕ್ತಿಗೆ ಸಾಗುವಳಿ ಚೀಟಿ ನೀಡಲು 20 ಸಾವಿರ ರೂಪಾಯಿಗೆ ಗ್ರಾಮಸಹಾಯಕ ಕೃಷ್ಣ ಬೇಡಿಕೆ ಇಟ್ಟಿದ್ದಾನೆ. ಅಂತೆಯೇ ಮರಿಸ್ವಾಮಿ ಮುಂಗಡವಾಗಿ 15,000 ಹಣವನ್ನು ನೀಡಿದರು. ಉಳಿದ 5 ಸಾವಿರ ರೂಪಾಯಿ ಪಡೆಯುತ್ತಿದ್ದ ವೇಳೆ ಲೋಕಾಯುಕ್ತರು ದಾಳಿ ನಡೆಸಿದ್ದು, ಲಂಚಬಾಕ ಅಧಿಕಾರಿ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾನೆ. ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಸಜಿತ್ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಡಿವೈಎಸ್ ಪಿ ಕೃಷ್ಣಯ್ಯ ವಿ, ಲೋಕಾಯುಕ್ತ ಪೊಲೀಸ್ ಉಪನಿರೀಕ್ಷಕರಾದ ರೂಪಶ್ರೀ, ಜಯರತ್ನ, ಉಮೇಶ್ ಮತ್ತು ಸಿಬ್ಬಂದಿಗಳಾದ ಗುರುಪ್ರಸಾದ್, ಗೋಪಿ, ನೇತ್ರಾವತಿ, ತ್ರಿವೇಣಿ, ಕಾಂತರಾಜು, ಪ್ರಕಾಶ್, ಮೋಹನ್ ಗೌಡ, ಶೇಖರ್, ಮೋಹನ್, ಲೋಕೇಶ್, ಪಾಲ್ಗೊಂಡಿದ್ದರು. ವರದಿ: ಮಲಾರ ಮಹದೇವಸ್ವಾಮಿ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್…
ಸರಗೂರು: ನೂರಾರು ವರ್ಷಗಳ ಇತಿಹಾಸ ಹೊಂದಿರುವ ಕಾಂಗ್ರೆಸ್ ಪಕ್ಷವನ್ನು ಬೇರು ಮಟ್ಟದಲ್ಲಿ ಬಲಪಡಿಸಲು, ಕಾರ್ಯಕರ್ತರು ಪ್ರಾಮಾಣಿಕವಾಗಿ ಶ್ರಮಿಸಬೇಕು. ಮುಂಬರುವ ಲೋಕಸಭಾ ಚುನಾವಣೆಗೆ ಕೈ ಜೋಡಿಸಬೇಕು ಎಂದು ಕಾಂಗ್ರೆಸ್ ಪಕ್ಷದ ಟೌನ್ ಅಧ್ಯಕ್ಷ ನಾಗರಾಜು ಕರೆ ನೀಡಿದರು. ತಾಲ್ಲೂಕಿನ ಪಟ್ಟಣದ ಕಾಂಗ್ರೆಸ್ ಪಕ್ಷದ ಕಛೇರಿಯಲ್ಲಿ ಶುಕ್ರವಾರ ರಂದು, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಹೈಕಮಾಂಡ್ ಚಾಮರಾಜನಗರ ಮೀಸಲು (ಎಸ್ಸಿ) ಕ್ಷೇತ್ರಕ್ಕೆ ಯಾರಿಗೆ ಟಿಕೆಟ್ ನೀಡಿದರೂ, ಅವರ ಪರವಾಗಿ ಕೆಲಸ ಮಾಡುತ್ತವೆ ಎಂದರು. ಮಾಜಿ ಲೋಕಸಭಾ ಸಂಸದರಾದ ದಿವಂಗತ ಆರ್. ಧ್ರುವನಾರಾಯಣ್ ಎರಡು ಬಾರಿ ಸಂಸದರಾಗಿ ಸಂದರ್ಭದಲ್ಲಿ ಹೆಚ್.ಡಿ. ಕೋಟೆ ಮತ್ತು ಸರಗೂರು ಬಗ್ಗೆ ಹೆಚ್ಚಿನ ಒತ್ತು ನೀಡುತ್ತಾ ಬಂದಿದ್ದಾರೆ. ಅದಕ್ಕೆ ಶಾಸಕ ಅನಿಲ್ ಚಿಕ್ಕಮಾದು ರವರನ್ನು 2018 ಸಾಲಿನ ಚುನಾವಣೆಯಲ್ಲಿ ಗೆಲ್ಲಿಸಿ. ನಂತರ ಎರಡನೇ ಬಾರಿ ಚುನಾವಣೆ ಬಂದಾಗ ಸಂದರ್ಭದಲ್ಲಿ ಹೆಚ್.ಡಿ.ಕೋಟೆ ತಾಲೂಕು ಇತಿಹಾಸದಲ್ಲೇ ಎರಡನೇ ಬಾರಿ ಯಾರು ಗೆದ್ದಿಲ್ಲ ಎಂದು ಹಣೆಪಟ್ಟಿ ಕಟ್ಟಿಕೊಂಡಿತ್ತು. ಮಾಜಿ ಶಾಸಕ ಎಸ್. ಚಿಕ್ಕಮಾದು ಹಾಗೂ ಧ್ರುವನಾರಾಯಣ್ ಅವರು…
ಕಲಬುರಗಿ: ಸಂಸದ ಡಾ.ಉಮೇಶ್ ಜಾಧವ್ ಬಲಗೈ ಬಂಟನನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಕಲಬುರಗಿಯಲ್ಲಿ ನಡೆದಿದೆ. ಗಿರೀಶ್ ಚಕ್ರ ಬರ್ಬರವಾಗಿ ಹತ್ಯೆಯಾದ ಬಿಜೆಪಿ ಮುಖಂಡ. ಕಲಬುರಗಿ ಜಿಲ್ಲೆ ಅಫಜಲಪುರ ತಾಲೂಕಿನ ಸಾಗನೂರ ಗ್ರಾಮದ ಜಮೀನಿನಲ್ಲಿ ಕೊಲೆ ಮಾಡಲಾಗಿದೆ. ಕಳೆದ ನಾಲ್ಕು ದಿನಗಳ ಹಿಂದೆ ಕಲಬುರಗಿ BSNL ಸಲಹಾ ಸಮಿತಿಗೆ ನಿರ್ದೇಶಕರಾಗಿ ಸಂಸದ ಜಾಧವ್ ಆಯ್ಕೆ ಮಾಡಿದ್ದರು. ಸಲಹಾ ಸಮಿತಿ ನಿರ್ದೇಶಕ ನೇಮಕ ಹಿನ್ನೆಲೆ ಪಾರ್ಟಿ ಕೊಡುವುದಾಗಿ ಜಮೀನಿಗೆ ಕರೆಸಿ ಸ್ನೇಹಿತರೇ ಬರ್ಬರವಾಗಿ ಕೊಲೆ ಮಾಡಿರುವ ಆರೋಪ ಕೇಳಿ ಬಂದಿದೆ. ಕೊಲೆಗೂ ಮುನ್ನ ಕಣ್ಣಿಗೆ ಖಾರದ ಪುಡಿ ಎರಚಿ ನಂತರ ಮಾರಕಾಸ್ತ್ರಗಳಿಂದ ಬರ್ಬರವಾಗಿ ಹತ್ಯೆಗೈಯಲಾಗಿದೆ. ಸಾಗನೂರ ಗ್ರಾಮದ ಸಚಿನ್ & ಗ್ಯಾಂಗ್ ನಿಂದ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಸದ್ಯ ಆರೋಪಿಗಳಿಗಾಗಿ ಪೊಲೀಸರು ತೀವ್ರ ಶೋಧ ನಡೆಸುತ್ತಿದ್ದಾರೆ. ಗಾಣಗಾಪುರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. …
ದಾವಣಗೆರೆ: ದೇವರಹಳ್ಳಿ ಗ್ರಾಮದ ಬಳಿ ಎರಡು ಬೈಕ್ ಗಳು ಮುಖಾಮುಖಿ ಡಿಕ್ಕಿಯಾಗಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ಘಟನೆ ನಡೆದಿದೆ. ಕೆ.ರಾಮೇನಹಳ್ಳಿ ಗ್ರಾಮದ ರಾಮಪ್ಪ(55) ಸಾವನ್ನಪ್ಪಿದ ದುರ್ದೈವಿ. ಅತಿಯಾದ ವೇಗವೇ ಅಪಘಾತಕ್ಕೆ ಕಾರಣ ಎಂದು ಹೇಳಲಾಗಿದೆ. ಗಂಭೀರವಾಗಿ ಗಾಯಗೊಂಡ ನಾಲ್ವರನ್ನು ಶಿವಮೊಗ್ಗ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಚನ್ನಗಿರಿ ಠಾಣೆಯ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ. ಈ ಪ್ರಕರಣ ಚನ್ನಗಿರಿ ಪೊಲೀಸ್ ಠಾಣೆಯಲ್ಲ ದಾಖಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296