Subscribe to Updates
Get the latest creative news from FooBar about art, design and business.
- ದೇಶದ 2ನೇ ಅತಿ ದೊಡ್ಡ ಕ್ರಿಕೆಟ್ ಕ್ರೀಡಾಂಗಣಕ್ಕೆ ಸಿಎಂ ಸಿದ್ದರಾಮಯ್ಯ ಶಂಕುಸ್ಥಾಪನೆ
- ಈ ವರ್ಷ 52 ಸಾವಿರ ಅತಿಥಿ ಶಿಕ್ಷಕರ ನೇಮಕ: ಸಚಿವ ಮಧು ಬಂಗಾರಪ್ಪ
- ಬೀದರ್ ಬ್ರಿಮ್ಸ್ (BRIMS) ಆಸ್ಪತ್ರೆಯಲ್ಲಿ ಕರ್ತವ್ಯ ನಿರತ ವೈದ್ಯರ ಮೇಲೆ ಭೀಕರ ಹಲ್ಲೆ: 7 ಮಂದಿ ಆರೋಪಿಗಳ ಬಂಧನ
- ತುಮಕೂರು ಜಿಲ್ಲೆಗೆ ‘ತುಮಕೂರು (ಬೆಂಗಳೂರು ಉತ್ತರ)’ ಎಂದು ಮರುನಾಮಕರಣ: ಗೃಹ ಸಚಿವ ಡಾ.ಜಿ.ಪರಮೇಶ್ವರ್
- ಮಾದಾವರ–ತುಮಕೂರು ಮೆಟ್ರೋ ರೈಲು ಯೋಜನೆ: ಸರ್ಕಾರಕ್ಕೆ ಸಲ್ಲಿಕೆಯಾಯ್ತು ಡಿಪಿಆರ್ ವರದಿ
- ಪಕ್ಷದ ಜವಾಬ್ದಾರಿ ನಿರ್ವಹಿಸದಿದ್ದರೆ ಶಿಸ್ತು ಕ್ರಮ: ಕಾಂಗ್ರೆಸ್ ಮುಖಂಡರ ಸಭೆಯಲ್ಲಿ ಶಾಸಕ ಕೆ. ಷಡಕ್ಷರಿ ಎಚ್ಚರಿಕೆ
- ಗುಬ್ಬಿ ಶಾಸಕರು, ಪುತ್ರನಿಂದ ಕುತಂತ್ರ ರಾಜಕಾರಣ: ಷಡ್ಯಂತ್ರಗಳಿಗೆ ಜಗ್ಗುವುದಿಲ್ಲ: ಜೆಡಿಎಸ್ ಮುಖಂಡ ನಾಗರಾಜು ಕಿಡಿ
- ತುಮಕೂರು: ಕುಲ್ಲಕ ವಿಷಯಕ್ಕೆ ಜಗಳ: ಕೊಲೆ
Author: admin
ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿದ ಎಫ್ ಎಸ್ ಎಲ್ ವರದಿ ಕೈಸೇರಿ 5-6 ಗಂಟೆ ಕಳೆದಿದ್ದರೂ ಇನ್ನೂ ವರದಿಯನ್ನ ಬಹಿರಂಗಪಡಿಸಲು ಮೀನ-ಮೇಷ ಎಣಿಸುತ್ತಿರುವ ಕಾಂಗ್ರೆಸ್ ಸರ್ಕಾರದ ನಡೆ ಅನುಮಾನ ಮೂಡಿಸುತ್ತಿದೆ. ವರದಿ ಬಹಿರಂಗ ಪಡಿಸುತ್ತೀರೋ ಇಲ್ಲವೋ ಎನ್ನುವ ನಡೆಯ ಮೇಲೆ ತಮ್ಮ @INCKarnataka ಪಕ್ಷ ನಿಜವಾಗಿಯೂ ದೇಶಪ್ರೇಮಿಗಳ ಪರ ಇದೆಯೋ ಅಥವಾ ದೇಶದ್ರೋಹಿಗಳ ಪರ ಇದೆಯೋ ಎಂಬುದನ್ನು ಕನ್ನಡಿಗರು ನಿರ್ಧಾರ ಮಾಡುತ್ತಾರೆ. ಟ್ವೀಟ್ ಮೂಲಕ ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ವಿಪಕ್ಷ ನಾಯಕ ಆರ್. ಅಶೋಕ್. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಸಿನೆಮಾ ಬಹಳ ಪ್ರಭಾವಿ ಮಾಧ್ಯಮ. ನೋಡುಗರ ಮನಸ್ಸು, ಆಲೋಚನೆಯ ಮೇಲೆ ಪ್ರಭಾವ ಬೀರುವ ಶಕ್ತಿ ಸಿನಿಮಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸಿನಿಮಾಗಳ ಮೂಲಕ ದೇಶದ ಒಳಗಿನ, ಇತರೆ ದೇಶಗಳ ಜನ ಸಂಸ್ಕೃತಿಯನ್ನು ಅರಿಯುವ ಮತ್ತು ಆ ಮೂಲಕ ನಮ್ಮ ಮಾನವೀಯ ಸಂಸ್ಕೃತಿಯನ್ನು ವಿಸ್ತರಿಸಿಕೊಳ್ಳಲು ನೆರವಾಗುತ್ತದೆ. ಇದಕ್ಕೆ ಅಂತಾರಾಷ್ಟ್ರೀಯ ಚಿತ್ರೋತ್ಸವ ವೇಗವರ್ದಕವಾಗಿ ಕೆಲಸ ಮಾಡುತ್ತದೆ ಎಂದು ಹೇಳಿದರು. ವಿಶ್ವದ ಬದುಕು ಸಂಸ್ಕೃತಿ ತಿಳಿಯಲು ಮತ್ತು ನಮ್ಮ ಸಮಾಜವನ್ನು ಇನ್ನಷ್ಟು ಮಾನವೀಯಗೊಳಿಸಲು ಅಂತಾರಾಷ್ಟ್ರೀಯ ಚಿತ್ರೋತ್ಸವ ನೆರವಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಇಡೀ ಜಗತ್ತು ಮಾನವೀಯ ಬೆಸುಗೆಯಲ್ಲಿ ಬೆರೆಯಲು, ಮನುಷ್ಯ ಮನುಷ್ಯನನ್ನು ಪ್ರೀತಿಸುವ ಸಂಸ್ಕೃತಿಯನ್ನು ಪಾಲಿಸಿದಾಗ ಜಗತ್ತಲ್ಲಿ ಶಾಂತಿ ನೆಲೆಸುತ್ತದೆ ಎಂದು ಹೇಳಿದರು. ಅಂಬೇಡ್ಕರ್ ಅವರು ರೂಪಿಸಿದ ಭಾರತೀಯ ಸಂವಿಧಾನದಲ್ಲಿ, ಇತರೆ ದೇಶಗಳ ಸಂವಿಧಾನದಲ್ಲಿ ಇಲ್ಲದ ಸಾಮಾಜಿಕ ನ್ಯಾಯದ ಮೌಲ್ಯಗಳಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಅಂಬೇಡ್ಕರ್ ಮತ್ತು ಅವರ…
ಬಿಜೆಪಿಯವರು ಶ್ರೀಮಂತರ ಪರವಾಗಿರುವ ಪಕ್ಷ. ಬಿಜೆಪಿಯವರು ಕೇಸರಿ ಶಾಲು ಹಾಕಿಕೊಂಡರೆ ದೇಶ ಭಕ್ತಿ ಬರುತ್ತದೆ ಎಂದುಕೊಂಡಿರುವುದು ಅವರ ತಪ್ಪು ಕಲ್ಪನೆ. ಇವರಿಗೆ ದೇಶದ ಬಗ್ಗೆ ಮಾತಾನಾಡುವ ಯಾವುದೇ ನೈತಿಕತೆ ಇಲ್ಲ ಎಂದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಧಾನಪರಿಷತ್ತಿನಲ್ಲಿ ಆಯವ್ಯಯ ಭಾಷಣ ಕುರಿತ ಚರ್ಚೆಗೆ ಉತ್ತರ ನೀಡಿದರು. ನಮ್ಮ ಸರ್ಕಾರ ಆರ್ಥಿಕವಾಗಿ, ಸಮಾಜಿಕವಾಗಿ, ಶೈಕ್ಷಣಿಕವಾಗಿ, ರಾಜಕೀಯವಾಗಿ ರಾಜ್ಯದ ಜನರಿಗೆ ಶಕ್ತಿ ತುಂಬುವ ಸಲುವಾಗಿ ಜನಪರ, ಬಡವರ ಪರ ಬಜೆಟ್ ಮಂಡಿಸಿದೆ ಎಂದರು. ಧರ್ಮ, ಜಾತಿ ಹೆಸರಿನಲ್ಲಿ ಸಮಾಜ ಒಡೆಯುವ ಕೆಲಸ ಬಿಜೆಪಿಯವರು ಮಾಡುತ್ತಿದ್ದಾರೆ. ಸುಳ್ಳೇ ಬಿಜೆಪಿಯ ಮನೆ ದೇವರು. ಇವರ ನಾಟಕವನ್ನು ರಾಜ್ಯದ ಜನರು ನೋಡುತ್ತಿದ್ದಾರೆ. ಅಧಿಕಾರದಲ್ಲಿ ಇದ್ದಾಗ ಬಿಜೆಪಿಯವರಿಗೆ ಜನರ ಆರ್ಶೀವಾದ ಮಾಡಿಲ್ಲ. ಹಿಂಬಾಗಿಲಿನಿಂದ ಬಂದು ಅಧಿಕಾರ ಮಾಡುವುದಕ್ಕೆ ಬಿಜೆಪಿ ನಾಯಕರಿಗೆ ನಾಚಿಕೆಯಾಗಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಹಸಿವು ಮುಕ್ತ ಭಾರತವನ್ನಾಗಿ ಮಾಡುತ್ತೇವೆ ಎಂದು ಹೇಳುವುದನ್ನು ಬಿಟ್ಟು, ಕಾಂಗ್ರೆಸ್ ಮುಕ್ತ ಭಾರತ ಎಂದು ಘೋಷಣೆ ಮಾಡುತ್ತಿದ್ದಾರೆ…
ಅಸ್ಸಾಂ ಕಾಂಗ್ರೆಸ್ ನ ಮಾಜಿ ಕಾರ್ಯಾಧ್ಯಕ್ಷ ರಾಣಾ ಗೋಸ್ವಾಮಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಮುಖ್ಯಮಂತ್ರಿ ಹಿಮಂತ ಬಿಸ್ವಶರ್ಮಾ ಅವರು ಗುವಾಹಟಿಯ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಪಕ್ಷದ ಸದಸ್ಯತ್ವವನ್ನು ನೀಡಿದರು. ರಾಣಾ ಗೋಸ್ವಾಮಿ ನಿನ್ನೆ ಕಾಂಗ್ರೆಸ್ ಗೆ ರಾಜೀನಾಮೆ ನೀಡಿದ್ದಾರೆ. ರಾಣಾ ಗೋಸ್ವಾಮಿ ಅವರು ಅಪ್ಪರ್ ಅಸ್ಸಾಂನಲ್ಲಿ ಕಾಂಗ್ರೆಸ್ ಉಸ್ತುವಾರಿ ನಾಯಕರಾಗಿದ್ದರು. ರಾಜೀನಾಮೆ ಅಂಗೀಕರಿಸಿದ ಬಳಿಕ ವೇಣುಗೋಪಾಲ್ ಅವರನ್ನು ಸಂಪರ್ಕಿಸಲು ಯತ್ನಿಸಿದರಾದರೂ ಸಫಲವಾಗಿಲ್ಲ ಎಂಬ ವರದಿಗಳಿವೆ. ಅಸ್ಸಾಂ ವಿರೋಧ ಪಕ್ಷದ ನಾಯಕ ದೇಬಬ್ರತ ಸೈಕಿ ಪ್ರತಿಕ್ರಿಯಿಸಿ, ಕಾಂಗ್ರೆಸ್ ಗೋಸ್ವಾಮಿಗೆ ಹಲವು ಹುದ್ದೆಗಳನ್ನು ನೀಡಿದೆ ಮತ್ತು ಪಕ್ಷವು ಅವರಿಗೆ ಮೋಸ ಮಾಡಿಲ್ಲ ಮತ್ತು ಅವರು ಏಕೆ ಪಕ್ಷವನ್ನು ತೊರೆದರು ಎಂಬುದನ್ನು ಅವರು ವಿವರಿಸಬೇಕು ಎಂದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ನೀವು ಮೈಕ್ರೋಸಾಫ್ಟ್ ಸಹ-ಸಂಸ್ಥಾಪಕ ಬಿಲ್ ಗೇಟ್ಸ್ ಹೆಸರನ್ನು ಕೇಳಿರ್ತೀರಿ. ಕೋಟಿ ಕೋಟಿ ರೂಗಳ ಒಡೆಯ. ಅವರು ಭಾರತಕ್ಕೆ ಭೇಟಿ ನೀಡಿದ್ದು, ಅವರ ವೈವಿಧ್ಯಮಯ ವಿಹಾರಗಳು ಅಂತರ್ಜಾಲದಲ್ಲಿ ವ್ಯಾಪಕ ಆಸಕ್ತಿ ಮತ್ತು ಚರ್ಚೆಯನ್ನು ಹುಟ್ಟುಹಾಕಿವೆ. ಇತ್ತೀಚೆಗೆ ಗೇಟ್ಸ್ ಹಂಚಿಕೊಂಡಿರುವ ವಿಡಿಯೋದಲ್ಲಿ ಅವರು ದಾರಿ ಬದಿಯಲ್ಲಿ ಚಹಾ ಸವಿಯುವುದನ್ನು ನೋಡಿ ಅವರ ಸರಳತೆಗೆ ನೆಟ್ಟಿಗರು ಫಿದಾ ಆಗಿದ್ದಾರೆ. ಈ ಬಗ್ಗೆ ಪೋಸ್ಟ್ ಜೊತೆ ಬರೆದುಕೊಂಡಿರುವ ಗೇಟ್ಸ್, ‘ಭಾರತದಲ್ಲಿ ನೀವು ಎಲ್ಲಿ ನೋಡಿದರಲ್ಲಿ ನಾವೀನ್ಯತೆಯನ್ನು ಕಾಣಬಹುದು. ಸರಳ ಚಹಾ ತಯಾರಿಕೆಯಲ್ಲಿ ಕೂಡಾ’ ಎಂದಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಿದ್ಧಿ ಪಡೆದಿರುವ ಡಾಲಿ ಚಾಯ್ ವಾಲಾ ಬಳಿ ಹೋಗಿ ‘ಒನ್ ಚಾಯ್ ಪ್ಲೀಸ್’ ಎಂದಿದ್ದಾರೆ ಬಿಲ್ ಗೇಟ್ಸ್. ನಂತರ ಚಾಯ್ ವಾಲಾ ತನ್ನ ವಿಶಿಷ್ಟ ವಿಧಾನ ಬಳಸಿ ಚಹಾವನ್ನು ತಯಾರಿಸುತ್ತಾನೆ. ಬಳಿಕ ಗೇಟ್ಸ್ ಒಂದು ಕಪ್ ಚಾಯ್ ಅನ್ನು ಕುಡಿದು ಆನಂದಿಸುತ್ತಿರುವುದನ್ನು ಕಾಣಬಹುದು. ವೀಡಿಯೋದ ಕೊನೆಯಲ್ಲಿ ಡಾಲಿ ಚಾಯ್ ವಾಲಾ ಅವರೊಂದಿಗೆ ಫೋಟೋಗೆ ಪೋಸ್ ನೀಡಿ, ತಾವು ಬಹಳಷ್ಟು…
ಅಭಿಮಾನಿ ಅವರ ಕಾರನ್ನು ಹಿಂಬಾಲಿಸುತ್ತಾ ಬರುತ್ತಿದ್ದಾಗ ಆತನ ಕಾಲುಗಳ ಮೇಲೆಯೇ ಯಶ್ ಬೆಂಗಾವಲು ವಾಹನ ಹರಿದಿರುವ ಘಟನೆ ಬಗ್ಗೆ ವರದಿಯಾಗಿದೆ. ಈ ಘಟನೆ ನಡೆದಿರೋದು ಬಳ್ಳಾರಿಯ ಹೊರವಲಯದಲ್ಲಿ ಇರುವ ಬಾಲಾಜಿ ಕ್ಯಾಂಪ್ ನಲ್ಲಿ. ಬಳ್ಳಾರಿ ಜಿಲ್ಲೆಯ ಸಿರಗುಪ್ಪ ಪಟ್ಟಣದ ವಸಂತ ಎಂಬ ಯುವಕನ ಕಾಲಿನ ಮೇಲೆ ಕಾರು ಹರಿದಿದ್ದು ಯುವಕ ಕಾಲಿಗೆ ಗಾಯವಾಗಿದೆ. ಬಳ್ಳಾರಿಯ ಬಾಲಾಜಿ ನಗರದಲ್ಲಿ ನೂತನವಾಗಿ ನಿರ್ಮಾಣವಾದ ಅಮೃತೇಶ್ವರ ಸ್ಪಟಿಕ ಲಿಂಗ ದೇವಸ್ಥಾನ ಉದ್ಘಾಟನೆಗೆ ಯಶ್ ಬಂದಿದ್ದರು. ಈ ವೇಳೆ ಯಶ್ ಅನ್ನು ನೋಡುವ ಸಲುವಾಗಿ ಅಲ್ಲಿಗೆ ಅವರ ಅಭಿಮಾನಿಗಳು ಕೂಡಾ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದಾರೆ. ತಮ್ಮ ನೆಚ್ಚಿನ ನಟನನ್ನು ನೋಡುವ ಭರದಲ್ಲಿ ಅಭಿಮಾನಿಗಳು ಯಶ್ ಇರುವ ಕಾರನ್ನು ಹಿಂಬಾಲಿಸಿಕೊಂಡು ಬಂದಿದ್ದಾರೆ. ಈ ವೇಳೆ ಅಚಾನಕಾಗಿ ಯಶ್ ಬೆಂಗಾವಲು ವಾಹನ ಅಭಿಮಾನಿಯೊಬ್ಬರ ಕಾಲಿನ ಮೇಲೆ ಹರಿದಿದೆ. ಬಳ್ಳಾರಿ ಜಿಲ್ಲೆಯ ಸಿರಗುಪ್ಪ ಪಟ್ಟಣದ ವಸಂತ ಎಂಬ ಯುವಕನ ಕಾಲಿನ ಮೇಲೆ ಯಶ್ ವಾಹನ ಹರಿದಿದೆ. ಯುವಕನನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ…
ಹುಕ್ಕಾ ಪದಾರ್ಥಗಳ ಮಾರಾಟ ಮತ್ತು ಬಳಕೆಯ ಮೇಲಿನ ರಾಜ್ಯ ಸರ್ಕಾರದ ನಿಷೇಧವನ್ನು ಪ್ರಶ್ನಿಸಿ ಹಲವಾರು ರೆಸ್ಟೋರೆಂಟ್ ಮಾಲೀಕರು ಕರ್ನಾಟಕ ಹೈಕೋರ್ಟ್ ಮೊರೆ ಹೋಗಿದ್ದಾರೆ. ಬಾರ್ ಮಾಲೀಕರ ಮನವಿಯನ್ನು ವಿರೋಧಿಸಿದ ಅಡ್ವೊಕೇಟ್ ಜನರಲ್ ಶಶೀಕಿರಣ್ ಶೆಟ್ಟಿ, ಕಾನೂನಿಗೆ ವಿರುದ್ಧವಾಗಿ, ಸಂಪೂರ್ಣ ಮಹಡಿಗಳು ಮತ್ತು ಕೆಫೆಗಳನ್ನು ಹುಕ್ಕಾಗಳ ಮಾರಾಟಕ್ಕೆ ಮೀಸಲಿಡಲಾಗಿದೆ ಮತ್ತು ಪರವಾನಗಿಗಳ ಅನುಪಸ್ಥಿತಿಯಲ್ಲಿ ರಾಜ್ಯ ಸರ್ಕಾರವು ನಿಷೇಧವನ್ನು ವಿಧಿಸಿದೆ ಎಂದು ಮಂಗಳವಾರ ಹೇಳಿದ್ದಾರೆ. ಈ ಕೇಸ್ ಸಂಬಂಧಪಟ್ಟಂತೆ ಮಾರ್ಚ್ 5ರ ಮಧ್ಯಾಹ್ನ ಈ ಪ್ರಕರಣದ ಮುಂದಿನ ವಿಚಾರಣೆ ನಡೆಯಲಿದೆ. ಕರ್ನಾಟಕ ಆರೋಗ್ಯ ಇಲಾಖೆಯು ಫೆಬ್ರವರಿ 7ರಂದು ತಕ್ಷಣದಿಂದ ಜಾರಿಗೆ ಬರುವಂತೆ ಹುಕ್ಕಾ ಮಾರಾಟ ಮತ್ತು ಬಳಕೆಯನ್ನು ನಿಷೇಧಿಸಿ ಅಧಿಸೂಚನೆ ಹೊರಡಿಸಿದೆ. ಸರ್ಕಾರವು ತನ್ನ ಆದೇಶದಲ್ಲಿ ಸಾರ್ವಜನಿಕ ಆರೋಗ್ಯ ಮತ್ತು ಅಗ್ನಿ ಸುರಕ್ಷತೆಯ ಕಾಳಜಿಯನ್ನು ಉಲ್ಲೇಖಿಸಿದೆ. ಅಗ್ನಿಶಾಮಕ ಮತ್ತು ಸುರಕ್ಷತಾ ನಿಯಮಗಳನ್ನು ಪಾಲಿಸದ ಕೋರಮಂಗಲದ ಬಾರ್ ನಲ್ಲಿ ಕಳೆದ ವರ್ಷ ಸಂಭವಿಸಿದ ಬೆಂಕಿಯ ಅಪಘಾತದ ಹಿನ್ನೆಲೆಯಲ್ಲಿ ಈ ನಿಷೇಧ ಹೇರಲಾಗಿದೆ ಎಂದು ತಿಳಿಸಿದೆ. ನಿಯಮ…
ಲೋಕಸಭೆ ಚುನಾವಣೆಗೆ ಬಿಜೆಪಿಯ ಮೊದಲ ಹಂತದ ಅಭ್ಯರ್ಥಿಗಳ ಪಟ್ಟಿ ಇಂದು ಪ್ರಕಟವಾಗಲಿದೆ. ಅಭ್ಯರ್ಥಿಗಳ ಪಟ್ಟಿಗೆ ಅನುಮೋದನೆ ನೀಡಲು ಕೇಂದ್ರ ಚುನಾವಣಾ ಸಮಿತಿ – ಸಂಸದೀಯ ಮಂಡಳಿ ಸಭೆಗಳು ನಿನ್ನೆ ರಾತ್ರಿ ನಡೆದಿವೆ. ಮೊದಲ ಪಟ್ಟಿಯಲ್ಲಿ ಸುಮಾರು 125 ಅಭ್ಯರ್ಥಿಗಳ ಹೆಸರುಗಳಿವೆ ಎಂದು ಸೂಚಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರ ಹೆಸರುಗಳು ಮೊದಲ ಹೆಜ್ಜೆಯಲ್ಲಿರುತ್ತವೆ. ಮತ್ತು ಬಿಜೆಪಿ ಕೇಂದ್ರಗಳಿಂದ ಬಂದಿರುವ ಮಾಹಿತಿಯ ಪ್ರಕಾರ ಚಲನಚಿತ್ರ ಮತ್ತು ಕ್ರಿಕೆಟ್ ಕ್ಷೇತ್ರದ ಕೆಲವು ಹೆಸರುಗಳು ಸಹ ಮೊದಲ ಪಟ್ಟಿಯಲ್ಲಿ ಸೇರ್ಪಡೆಗೊಳ್ಳುತ್ತವೆ. ಚಿತ್ರರಂಗದಿಂದ ಅಕ್ಷಯ್ ಕುಮಾರ್, ಕಂಗನಾ ರನೌತ್ ಮತ್ತು ಕ್ರಿಕೆಟಿಗ ಯುವರಾಜ್ ಸಿಂಗ್ ಕೂಡ ಅಭ್ಯರ್ಥಿಗಳ ಪಟ್ಟಿಯಲ್ಲಿದ್ದಾರೆ. ಕೇರಳದ ಎ ಪ್ಲಸ್ ಕ್ಷೇತ್ರಗಳು ಸೇರಿದಂತೆ ಎಂಟು ಸ್ಥಳಗಳ ಅಭ್ಯರ್ಥಿಗಳ ಹೆಸರುಗಳು ಮತ್ತು ದೆಹಲಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳ ರಾಜ್ಯಗಳ ಕೆಲವು ಹೆಸರುಗಳು…
ಇಂದು ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರ 71ನೇ ಹುಟ್ಟುಹಬ್ಬ. ಎಂ.ಕೆ. ಸ್ಟಾಲಿನ್ ಒಬ್ಬ ಶ್ರೇಷ್ಠ ಆಡಳಿತಗಾರ ಎಂಬ ಖ್ಯಾತಿ ಗಳಿಸಿದ ಜನಪ್ರಿಯ ನಾಯಕ. ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ನಾಯಕರು ಅವರಿಗೆ ಜನ್ಮದಿನದ ಶುಭಾಶಯ ಕೋರಿದರು. ಮರೀನಾ ಬೀಚ್ ನಲ್ಲಿರುವ ದಿವಂಗತ ಡಿಎಂಕೆ ನಾಯಕರಾದ ಸಿಎನ್ ಅಣ್ಣಾದೊರೈ ಮತ್ತು ಎಂ.ಕರುಣಾನಿಧಿ ಅವರ ಸ್ಮಾರಕಗಳಲ್ಲಿ ಸ್ಟಾಲಿನ್ ಶ್ರದ್ಧಾಂಜಲಿ ಸಲ್ಲಿಸಿದರು. ತಮಿಳುನಾಡು ಮುಖ್ಯಮಂತ್ರಿ ತಿರು@ಎಂಕೆ ಸ್ಟಾಲಿನ್ ಜಿ ಅವರಿಗೆ ಜನ್ಮದಿನದ ಶುಭಾಶಯಗಳು. ಅವರು ದೀರ್ಘಾಯುಷ್ಯ ಮತ್ತು ಆರೋಗ್ಯವಂತರಾಗಿ ಬಾಳಲಿ” ಎಂದು ‘ಎಕ್ಸ್’ ಪೋಸ್ಟ್ ನಲ್ಲಿ ಪ್ರಧಾನಿ ಮೋದಿ ಹೇಳಿದ್ದಾರೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೂಡ ತಮಿಳುನಾಡು ಮುಖ್ಯಮಂತ್ರಿಗೆ ಅವರ ಜನ್ಮದಿನದಂದು ಶುಭ ಹಾರೈಸಿದ್ದಾರೆ. “ನಾನು ನಿಮಗೆ ದೀರ್ಘಾಯುಷ್ಯ ಮತ್ತು ಉತ್ತಮ ಆರೋಗ್ಯವನ್ನು ಬಯಸುತ್ತೇನೆ,” ಎಂದು ಅವರು ಹಾರೈಸಿದ್ದಾರೆ. ನಟ ಹಾಗೂ ರಾಜಕೀಯ ನಾಯಕ ಕಮಲ್ ಹಾಸನ್ ಕೂಡ ಸ್ಟಾಲಿನ್ ಅವರಿಗೆ ಶುಭ ಕೋರಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು…
ನಮೋ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಜಿಲ್ಲಾ ಪ್ರವೇಶಕ್ಕೆ ಜಿಲ್ಲಾಡಳಿತ ನೀಡಿದ್ದ ತಡೆಯನ್ನು ಹೈಕೋರ್ಟ್ ತೆರವುಗೊಳಿಸಿತು. ಚಿತ್ತಾಪುರದಲ್ಲಿ ಕಾರ್ಯಕ್ರಮ ನಡೆಸಲು ಹಸಿರು ನಿಶಾನೆ ತೋರಿತು. ಆ ಮೂಲಕ ಜಿಲ್ಲಾಡಳಿತ ತೀವ್ರ ಮುಖಭಂಗ ಅನುಭವಿಸಿದೆ. ಚಿತ್ತಾಪುರ ಪಟ್ಟಣದಲ್ಲಿ ಆಯೋಜಿಸಿದ್ದ ನಮೋ ಭಾರತ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಹೊರಟಿದ್ದ ಚಕ್ರವರ್ತಿ ಸೂಲಿಬೆಲೆ ಅವರನ್ನು ತಡರಾತ್ರಿ ಕಮಲಾಪುರದ ಕಿಣ್ಣಿ ಸಡಕ್ ಬಳಿ ಪೊಲೀಸರು ತಡೆದು ವಾಪಸ್ ಕಳುಹಿಸಿದ್ದರು. ಸೂಲಿಬೆಲೆ ಭಾಷಣದಿಂದ ಜಿಲ್ಲೆಯಲ್ಲಿ ಶಾಂತಿಗೆ ಧಕ್ಕೆ ಬರುವ ಕಾರಣಕ್ಕೆ ಪ್ರವೇಶ ನಿರ್ಬಂಧಿಸಿ ಉಪ ವಿಭಾಗಾಧಿಕಾರಿ ಆದೇಶದ ವಿರುದ್ದ ಬಿಜೆಪಿ ಕಲಬುರಗಿ ಹೈಕೋರ್ಟ್ ಪೀಠದ ಮೊರೆ ಹೋಗಿತ್ತು. ಸೂಲಿಬೆಲೆ ಪರ ವಕೀಲ ಅರುಣ್ ಶ್ಯಾಮ್ ಹಾಗೂ ಬಸವಕಿರಣ ವಾದ ಮಂಡಿಸಿದ್ದರು. ತೀರ್ಪು ಪ್ರಕಟದ ಬೆನ್ನಲ್ಲಿ ವೀಡಿಯೊ ಮಾಡಿರುವ ಚಕ್ರವರ್ತಿ ಸೂಲಿಬೆಲೆ “ಬಾಬಾ ಸಾಹೇಬರ ಸಂವಿಧಾನದ ಶಕ್ತಿಯ ಫಲದಿಂದ ನ್ಯಾಯಾಲಯದಲ್ಲಿ ಚಿತ್ತಾಪುರ ಕಾರ್ಯಕ್ರಮಕ್ಕೆ ಅನುಮತಿ ಪಡೆದಿದ್ದೇವೆ,” ಎಂದು ಹೇಳಿದರು. ಬೆಳಗ್ಗೆ ಜಾಲತಾಣದಲ್ಲಿ ‘ಏ ಡರ್ ಅಚ್ಛಾ ಹೈ’ ಎಂದು ಚಿತ್ತಾಪುರ ಶಾಸಕ,…