Author: admin

ಉತ್ತರ ಕನ್ನಡ: ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಮಂಕಿಯಲ್ಲಿ ಕೆಎಸ್‌ ಆರ್‌ ಟಿಸಿ ಬಸ್ಸಿನಡಿ ಸಿಲುಕಿ ತಾಯಿ- ಮಗಳು ಸಾವನ್ನಪ್ಪಿದ್ದ ದಾರುಣ ಘಟನೆ ನಡೆದಿದೆ. ಸವಿತಾ ರಾಜು ಆಚಾರಿ (40) ಹಾಗೂ ಅಂಕಿತಾ ರಾಜು ಆಚಾರಿ(17) ಮೃತ ರ್ದುದೈವಿಗಳು. ಮಂಕಿ ಜಾತ್ರೆ ಪೇಟೆಗೆ ತೆರಳಿ ವಾಪಾಸ್ಸಾಗುತ್ತಿದ್ದ ವೇಳೆ ಮಂಗಳೂರಿನಿಂದ ಬೆಳಗಾವಿಯತ್ತ ತೆರಳುತ್ತಿದ್ದ ಬಸ್, ಸ್ಕೂಟಿಗೆ ಡಿಕ್ಕಿ ಹೊಡೆದಿತ್ತು. ಕೂಡಲೇ ಭಟ್ಕಳದ ಸರಕಾರಿ ಆಸ್ಪತ್ರೆಗೆ ಗಾಯಾಳುಗಳನ್ನು ದಾಖಲಿಸಲಾದರೂ, ಚಿಕಿತ್ಸೆ ಫಲಕಾರಿಯಾಗದೇ ತಾಯಿ-ಮಗಳು ಕೊನೆಯುಸಿರೆಳೆದಿದ್ದಾರೆ. ಈ ಕುರಿತು ಹೊನ್ನಾವರ ಮಂಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಹೊಸನಗರ: ಬೈಕ್‌ ನಲ್ಲಿ ಬಂದ ಅಪರಿಚಿತ ಯುವಕರು ಮಹಿಳೆಯೊಬ್ಬರಿಗೆ ಚಾಕುವಿನಿಂದ ಇರಿದು ಪರಾರಿಯಾಗಿರುವ ಘಟನೆ ನಡೆದಿದೆ. ನಾಜೀಮಾ (38) ಚೂರಿ ಇರಿತಕ್ಕೊಳಗಾದ ಮಹಿಳೆ. ಈ ಮಹಿಳೆಯು ಪಟ್ಟಣದ ಬ್ಯೂಟಿ ಪಾರ್ಲರ್‌ ವೊಂದರಲ್ಲಿ ಕೆಲಸ ಮಾಡುತ್ತಿದ್ದು, ಇಲ್ಲಿನ ಗಣಪತಿ ದೇವಸ್ಥಾನ ರಸ್ತೆಯ ಸಮೀಪದ ಮನೆಯಲ್ಲಿ ಊಟ ಮುಗಿಸಿ ಪಾರ್ಲರ್‌ ಗೆ ಮರಳುತ್ತಿರುವಾಗ ಬೈಕ್ ‌ನಲ್ಲಿ ಬಂದ ಇಬ್ಬರು ಅಪರಿಚಿತ ಯುವಕರು ಹರಿತವಾದ ಚಾಕುವಿನಿಂದ ಬಲಗೈ ಬಲ ತೋಳಿನ ಮೇಲ್ಭಾಗ ಇರಿದು ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ. ಗಾಯಗೊಂಡ ಮಹಿಳೆಯು ಹೊಸನಗರ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಕುರಿತು ಹೊಸನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಯಾದಗಿರಿ ತಾಲೂಕಿನ ಮಲ್ಹಾರ ಗ್ರಾಮದಲ್ಲಿ ವಿದ್ಯುತ್‌ ತಂತಿ ತಗುಲಿ ನಾಲ್ಕು ಎಮ್ಮೆ ಮತ್ತು ಒಂದು ಕೋಣ ಸಾವನ್ನಪ್ಪಿದ ಘಟನೆ ನಡೆದಿದೆ. ಸಾಬಣ್ಣ ಅವರಿಗೆ ಸೇರಿದ ಜಮೀನಿನಲ್ಲಿ ಎಮ್ಮೆಗಳ ಸಾವನ್ನಪ್ಪಿವೆ. ಮೃತಪಟ್ಟ ಪ್ರತಿಯೊಂದು ಎಮ್ಮೆಯೂ 2 ಲಕ್ಷ ರೂಪಾಯಿ ಬೆಲೆ ಬಾಳುತ್ತಿದೆ ಎಂದು ಹೇಳಲಾಗಿದೆ. ಜಮೀನಿನಲ್ಲಿ ಅಪಾಯಕಾರಿ ವಿದ್ಯುತ್ ತಂತಿ ಜೋತು ಬಿದ್ದಿರುವ ಬಗ್ಗೆ ಗ್ರಾಮಸ್ಥರು ಅಧಿಕಾರಿಗಳ ಗಮನಕ್ಕೆ ತಂದಿದ್ದರೂ, ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದರು ಎಂದು ಆರೋಪಿಸಲಾಗಿದೆ. ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ಕ್ರಮ ಕೈಗೊಳ್ಳಬೇಕು. ಹೈನುಗಾರಿಕೆ ಮಾಡಿಕೊಂಡು ಬದುಕು ಸಾಗಿಸುತ್ತಿದ್ದ ರೈತ ಕುಟುಂಬ ಈಗ ಸಂಕಷ್ಟದಲ್ಲಿದೆ. ಸೂಕ್ತ ಪರಿಹಾರ ಕಲ್ಪಿಸಲು ಒತ್ತಾಯ ಮಾಡಲಾಗಿದೆ. ಯಾದಗಿರಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಚಿಕ್ಕಮಗಳೂರು: ಭಾರತೀಯ ಸೇನೆಗೆ ಸೇರಲು ಅವಕಾಶ ಸಿಗಲಿಲ್ಲ ಎಂಬ ಕಾರಣದಿಂದ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಕಾರ್ತಿಕ್(23) ಮನನೊಂದು ಆತ್ಮಹತ್ಯೆ  ಮಾಡಿಕೊಂಡ ಯುವಕನಾಗಿದ್ದಾನೆ. ಭಾರತೀಯ ಸೇನೆ ಸೇರುವ ಮಹತ್ವಾಕಾಂಕ್ಷೆ ಹೊತ್ತು ಪರೀಕ್ಷೆ ಎದುರಿಸಿದ್ದ ಯುವಕನೊಬ್ಬ ಪರೀಕ್ಷೆಯಲ್ಲಿ ಫೇಲ್‌ ಆದ ಬೇಸರದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕಾರ್ತಿಕ್‌ ಕಳೆದ ಎರಡು ವರ್ಷದಿಂದ ಸೇನಾ ಪರೀಕ್ಷೆಗೆ ಸಂಬಂಧಿಸಿ ಸಾಕಷ್ಟು ಸಿದ್ಧತೆಗಳನ್ನು ನಡೆಸಿದ್ದ. ಇತ್ತೀಚೆಗೆ ಪರೀಕ್ಷೆಯೂ ನಡೆದಿತ್ತು. ಫಲಿತಾಂಶ ಬರುವಾಗ ಕಾರ್ತಿಕ್‌ ಸೇನೆಗೆ ಸೆಲೆಕ್ಟ್‌ ಆಗಿರಲಿಲ್ಲ. ಇದರಿಂದ ಮನನೊಂದು ಈ ತೀರ್ಮಾನ ಮಾಡಿದ್ದ. ಬುಧವಾರ ಮನೆಯಲ್ಲಿ ಯಾರೂ ಇಲ್ಲದ ವೇಳೆ ಡೆತ್‌ ನೋಟ್‌ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾನೆ. ಡೆತ್‌ ನೋಟ್‌: ʻʻಭಾರತೀಯ ಸೇನೆಯ ಪರೀಕ್ಷೆಯಲ್ಲಿ ಫೇಲ್ ಆಗಿದ್ದೇನೆ. ಇದನ್ನು ಮನೆಯವರಿಗೆ ಹೇಳುವ ಧೈರ್ಯ ನನ್ನ ಬಳಿ ಇಲ್ಲ. ಹೀಗಾಗಿ ನಿರ್ಗಮಿಸುತ್ತಿದ್ದೇನೆʼʼ ಎಂದು ಡೆತ್‌ ನೋಟ್ ‌ನಲ್ಲಿ ಬರೆದಿದ್ದಾನೆ. ಈ ಬಗ್ಗೆ ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ…

Read More

ಭಾರತೀಯ ನೌಕಾಪಡೆ ಮತ್ತು ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೊದ ಜಂಟಿ ಕಾರ್ಯಾಚರಣೆಯಲ್ಲಿ, ಗುಜರಾತ್ ಭಯೋತ್ಪಾದನಾ ನಿಗ್ರಹ ದಳವು (ಎಟಿಎಸ್) ₹1,000 ಕೋಟಿಗೂ ಹೆಚ್ಚು ಮೌಲ್ಯದ ಚರಸ್ ಮತ್ತು ಇತರ ನಿಷೇಧಿತ ವಸ್ತುಗಳನ್ನು ಸಾಗಿಸುತ್ತಿದ್ದ ನಾಲ್ವರು ಇರಾನಿನ ಸಿಬ್ಬಂದಿಗಳೊಂದಿಗೆ ಇರಾನಿನ ದೋಣಿಯನ್ನು ಬಂಧಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಸುಮಾರು 3,300 ಕೆಜಿ ಡ್ರಗ್ಸ್ ವಶಪಡಿಸಿಕೊಂಡಿದ್ದು, ಇದು ಇತ್ತೀಚಿನ ದಿನಗಳಲ್ಲಿ ಆದ ಕಾರ್ಯಾಚರಣೆಗಳಲ್ಲಿಯೇ ಅತಿದೊಡ್ಡ ಮಟ್ಟದ ಮಾದಕ ವಸ್ತುಗಳನ್ನು ಈ ಕಾರ್ಯಾಚರಣೆಯಲ್ಲಿ ವಶಪಡಿಸಿಕೊಳ್ಳಲಾಗಿದೆ ಎಂದು ನೌಕಾಪಡೆ ತಿಳಿಸಿದೆ. ಗುಜರಾತ್ ಎಟಿಎಸ್ಸ ಹಿರಿಯ ಅಧಿಕಾರಿಯು, ಸಮುದ್ರದ ಮಧ್ಯದ ಕಾರ್ಯಾಚರಣೆಯ ಸಮಯದಲ್ಲಿ ದೋಣಿಯಿಂದ ಚರಸ್ (ಹಶಿಶ್) ಸೇರಿದಂತೆ ವಿವಿಧ ರೀತಿಯ ಮಾದಕ ದ್ರವ್ಯಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಹೇಳಿದರು. ದೋಣಿಯನ್ನು ಸಿಬ್ಬಂದಿಗಳೊಂದಿಗೆ ತೀರಕ್ಕೆ ತರಲಾಗುತ್ತಿತ್ತು ಮತ್ತು ಅವರು ಫೆಬ್ರವರಿ 28ರಂದು ಪೋರಬಂದರ್ ನಲ್ಲಿ ಇಳಿಯುವ ನಿರೀಕ್ಷೆಯಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನಿರ್ದಿಷ್ಟ ಸುಳಿವಿನ ಆಧಾರದ ಮೇಲೆ, ಅರೇಬಿಯನ್ ಸಮುದ್ರದಲ್ಲಿ ಅಂತರರಾಷ್ಟ್ರೀಯ ಕಡಲ ಗಡಿ ರೇಖೆಯ (ಐಎಂಬಿಎಲ್) ಬಳಿ…

Read More

ರಿಯಾಲಿಟಿ ಶೋನಲ್ಲಿ ಅದೊಂದು ಪ್ರಶ್ನೆ ಕೇಳಿದ್ದಕ್ಕೆ ಗಾಯಕಿಯೊಬ್ಬರು ನಿರೂಪಕನಿಗೆ ಕೆನ್ನೆಗೆ ಬಾರಿಸಿರುವ ವಿಡಿಯೋ ಸೋಶಿಯಲ್‌ ಮೀಡಿಯಾದಲ್ಲಿ ಭಾರೀ ವೈರಲ್‌ ಆಗಿದೆ. ಹೌದು, ಕಾರ್ಯಕ್ರಮದ ಸಹ ನಿರೂಪಕನಾಗಿದ್ದ ಹಾಸ್ಯ ಕಲಾವಿದ ಶೆರಿ ನನ್ಹಾ, ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಷಾಜಿಯಾ ಮಂಜೂರ್ ಅವರ ಹನಿಮೂನ್ ಕುರಿತಾಗಿ ಕಾಮೆಂಟ್ ಮಾಡಿದ್ದರು. ‘ನಮ್ಮ ಮದುವೆಯಾದ ಬಳಿಕ ನಿಮ್ಮನ್ನು ನೇರವಾಗಿ ಮಾಂಟೆ ಕಾರ್ಲೋಗೆ ಹನಿಮೂನ್‌ ಗೆ ಕರೆದುಕೊಂಡು ಹೋಗುತ್ತೇನೆ. ನೀವು ಯಾವ ಕ್ಲಾಸ್‌ ನ ವಿಮಾನದ ಟಿಕೆಟ್ ‌ನಲ್ಲಿ ಪ್ರಯಾಣ ಮಾಡಲು ಇಚ್ಛಿಸ್ತಿರೀ ಅಂತಾ ತಿಳಿಸ್ತೀರಾ’ ಎಂದು ತಮಾಷೆಯಾಗಿ ಪ್ರಶ್ನೆ ಮಾಡಿದ್ದಾರೆ. ಆದರೆ ಇದು ಶಾಜಿಯಾ ಮಂಜೂರ್‌ ಗೆ ತಮಾಷೆಯಾಗಿ ಕಂಡಿಲ್ಲ. ಆಗ ಸಿಟ್ಟಾದ ಆಕೆ, ನಿರೂಪಕನನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ. ಅದು ಮಾತ್ರವಲ್ಲದೆ, ನಿರೂಪಕನ ಕೆನ್ನೆಗೂ ಬಾರಿಸಿ ಹಲ್ಲೆ ಮಾಡಿದ್ದಾರೆ. ಅಂದಹಾಗೆ ಇದೇ ಶೋನಲ್ಲಿ ಹಿಂದೊಮ್ಮೆ ಬಂದಿದ್ದ ಶಾಜಿಯಾ ಮಂಜೂರ್ ಆಕರ್ಷಕವಾಗಿ ತಮಾಷೆ ಮಾಡಿದ್ದರು. ಈ ಬಾರಿಯೂ ಕೂಡ ಇದು ತಮಾಷೆಯಾಗಿರಬಹುದು ಎಂದು ಅಭಿಮಾನಿಗಳು ಅಂದುಕೊಂಡಿದ್ದರು. ಆದರೆ ಈ…

Read More

ಖಾಸಗಿ ಆಸ್ಪತ್ರೆಯೊಂದರ ಐಸಿಯುಗೆ ದಾಖಲಾಗಿದ್ದ 24 ವರ್ಷದ ಮಹಿಳೆಯೊಬ್ಬರ ಮೇಲೆ ನರ್ಸಿಂಗ್ ಸಹಾಯಕ ಅತ್ಯಾಚಾರವೆಸಗಿರವ ಅಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ರಾಜಸ್ಥಾನದ ಅಲ್ವಾರ್ ಜಿಲ್ಲೆಯ ಖಾಸಗಿ ಆಸ್ಪತ್ರೆಯಲ್ಲಿ ಮನಮಿಡಿಯುವ ಘಟನೆಯೊಂದು ಬೆಳಕಿಗೆ ಬಂದಿದ್ದು, ಶ್ವಾಸಕೋಶದ ಸೋಂಕಿನಿಂದ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಈ ವೇಳೆ ಚಿರಾಗ್ ಯಾದವ್ ಮುಂಜಾನೆ 4 ಗಂಟೆ ಸುಮಾರಿಗೆ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ ಎನ್ನಲಾಗಿದೆ. ಅಂದಹಾಗೆ ಪತಿ ಮೊಬೈಲ್‌ ಗೆ ಕರೆ ಮಾಡಿದ ನಂತರ ಮಹಿಳೆಗೆ ಪ್ರಜ್ಞೆ ಬಂದಿದೆ. ನಂತರ ಆಕೆ ತನ್ನ ಕುಟುಂಬಕ್ಕೆ ಮಾಹಿತಿ ನೀಡಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ, ಆರೋಪಿ ಹಾಸಿಗೆಗೆ ಹೋಗಿ ಕರ್ಟನ್‌ ನಿಂದ ಮುಚ್ಚಿರುವುದು ಕಂಡುಬಂದಿದೆ. ಬಳಿಕ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದು, ಎಫ್‌ ಐಆರ್ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ಪೋಲೀಸರು ಹೇಳಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್…

Read More

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬುಧವಾರ ಬೆಂಗಳೂರು ತೆರಿಗೆ ಪಾವತಿದಾರರನ್ನು ಧೃಡವಾದ ಮತ್ತು ‘ವಿಕಾಸಿತ್ ಭಾರತ್’ ನಿರ್ಮಾಣದಲ್ಲಿ ನೀಡಿದ ಕೊಡುಗೆಗಾಗಿ ಶ್ಲಾಘಿಸಿದರು ಮತ್ತು ಕಂದಾಯ ಇಲಾಖೆಯು ತನ್ನ ಸಂಪೂರ್ಣ ರಾಷ್ಟ್ರೀಯ ಡಿಜಿಟಲ್ ಆದಾಯ ತೆರಿಗೆ ಮೌಲ್ಯಮಾಪನ ಯೋಜನೆಯನ್ನು ಕರ್ನಾಟಕದ ರಾಜಧಾನಿಯಿಂದ ನಡೆಸುತ್ತಿದೆ ಎಂದು ಹೇಳಿದರು. ಆದಾಯ ತೆರಿಗೆ ಅಧಿಕಾರಿಗಳು ಮತ್ತು ಸಿಬ್ಬಂದಿಗಾಗಿ ಮುಂಬರುವ ದಿನಗಳಲ್ಲಿ ನಿರ್ಮಾಣವಾಗಲಿರುವ “ಹೊಂಗಿರಣ” ಸಂಕೀರ್ಣ ಕಟ್ಟಡದ ಶಂಕುಸ್ಥಾಪನೆ ನೆರವೇರಿಸಿದ ನಂತರ ಮಾತನಾಡಿದ ಅವರು, ಬೆಂಗಳೂರಿನ ತೆರಿಗೆ ಪಾವತಿದಾರರು ನಮಗೆ ಸಂಪೂರ್ಣ ಉತ್ಸಾಹವನ್ನು ನೀಡುತ್ತಿದ್ದಾರೆ ಮತ್ತು ಈ ಪ್ರದೇಶವು ಎಲ್ಲಾ ವೈಯಕ್ತಿಕ ಮತ್ತು ಕಾರ್ಪೊರೇಟ್ ತೆರಿಗೆ ಪಾವತಿದಾರರಿಗೆ ಬಲವಾದ ಮತ್ತು ‘ವಿಕಸಿತ್ ಭಾರತ್’ ಅನ್ನು ನಿರ್ಮಿಸುವುದನ್ನು ಖಚಿತಪಡಿಸಿದ್ದಕ್ಕಾಗಿ ಧನ್ಯವಾದ ತಿಳಿಸಿದರು. ಇದೇ ವೇಳೆ ಕೇಂದ್ರ ಸರ್ಕಾರವು ಬೆಂಗಳೂರಿನಲ್ಲಿ ಮಾಡುತ್ತಿರುವ ಹೂಡಿಕೆಗಳ ಬಗ್ಗೆಯೂ ಸೀತಾರಾಮನ್ ಒತ್ತಿ ಹೇಳಿದರು. ತೆರಿಗೆ ಮೌಲ್ಯಮಾಪಕರಿಗೆ ಕಿರುಕುಳವಾಗದಂತೆ ಮತ್ತು ಅವರು ಹೋಗಿ ಕುಳಿತು ಮಾತನಾಡಬೇಕಾದ ಅಧಿಕಾರಿಯ ವಿವೇಚನೆಯು ಅವರ ತೆರಿಗೆ ಪಾವತಿಯನ್ನು ಕಷ್ಟಕರವಾಗಿಸುತ್ತದೆ…

Read More

ಜಾರ್ಖಂಡ್‌ ನಲ್ಲಿ ರೈಲು ಡಿಕ್ಕಿಯಾಗಿ 12 ಮಂದಿ ಸಾವು ಜಮ್ತಾರಾದ ಕಾಲಜ್ ಹರಿಯಾ ರೈಲು ನಿಲ್ದಾಣದಲ್ಲಿ ಈ ದುರಂತ ಸಂಭವಿಸಿದೆ. ರೈಲಿಗೆ ಬೆಂಕಿ ಹೊತ್ತಿಕೊಂಡಿದೆ ಎಂಬ ಸಂದೇಶ ಬಂದ ನಂತರ ಗಾಬರಿಗೊಂಡು ಹೊರಗೆ ಹಾರಿದವರಿಗೆ ಮತ್ತೊಂದು ರೈಲು ಡಿಕ್ಕಿ ಹೊಡೆದು ಸಾವು ಸಂಭವಿಸಿದೆ. ಭಾಗಲ್ಪುರಕ್ಕೆ ಹೋಗುವ ಅಂಗಾ ಎಕ್ಸ್‌ಪ್ರೆಸ್‌ನ ಪ್ರಯಾಣಿಕರು ಸಾವನ್ನಪ್ಪಿದ್ದಾರೆ. ಏನಾಯಿತು ಮತ್ತು ಸಂದೇಶ ಹೇಗೆ ಹರಡಿತು ಎಂಬುದು ಸ್ಪಷ್ಟವಾಗಿಲ್ಲ. ಅಂಗಾ ಎಕ್ಸ್‌ ಪ್ರೆಸ್‌ ನಿಂದ ಕೆಳಗೆ ಜಿಗಿದವರನ್ನು ಝಾಝಾ ಅಸನ್ಸೋಲ್ ಎಕ್ಸ್‌ ಪ್ರೆಸ್ ಗುದ್ದಿದೆ. ರೈಲಿಗೆ ಬೆಂಕಿ ಹೊತ್ತಿಕೊಂಡಿದೆ ಎಂದು ಯಾರೋ ಕೂಗಿದ್ದಾರೆ ಎಂಬ ಮಾಹಿತಿ ಹೊರಬೀಳುತ್ತಿದೆ. ಇದರ ಹಿಂದೆ ಯಾರಿದ್ದಾರೆ ಎಂಬುದು ತಿಳಿದಿಲ್ಲ. ರೈಲಿನಿಂದ ಕೆಳಗೆ ಜಿಗಿದ ಹಲವರು ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವರದಿಯಾಗಿದೆ. ಪ್ರದೇಶದಲ್ಲಿ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ರೈಲಿನಲ್ಲಿದ್ದವರಲ್ಲ, ಹಳಿಯಲ್ಲಿ ಪ್ರಯಾಣಿಸುತ್ತಿದ್ದವರೇ ಅಪಘಾತಕ್ಕೀಡಾಗಿದ್ದಾರೆ ಎಂಬ ಕೆಲವು ವರದಿಗಳೂ ಹೊರ ಬರುತ್ತಿವೆ. ಟ್ರ್ಯಾಕ್ ಮೇಲೆ ನಡೆದುಕೊಂಡು ಹೋಗುತ್ತಿದ್ದ ಇಬ್ಬರು ಸಾವನ್ನಪ್ಪಿದ್ದಾರೆ ಎಂಬ ಮಾಹಿತಿಯನ್ನು ಸುದ್ದಿ…

Read More

ಸೋವಿಯತ್ ಒಕ್ಕೂಟದ ಮಾಜಿ ಪ್ರಧಾನಿ ನಿಕೊಲಾಯ್ ರೈಜ್ಯೋವ್(94) ನಿಧನರಾಗಿದ್ದಾರೆ. ಮಿಖಾಯಿಲ್ ಗೋರ್ಬಚೇವ್ ಅವರು ರಾಷ್ಟ್ರದ ಮುಖ್ಯಸ್ಥರಾಗಿದ್ದಾಗ ಅವರು ಆರು ವರ್ಷಗಳ ಕಾಲ ಪ್ರಧಾನಿಯಾಗಿ ಸೇವೆ ಸಲ್ಲಿಸಿದರು. ಖಾಸಗಿ ವಲಯವನ್ನು ಉತ್ತೇಜಿಸಲು ಮತ್ತು ಆರ್ಥಿಕ ಮತ್ತು ರಾಜಕೀಯ ವಾತಾವರಣವನ್ನು ಬದಲಾಯಿಸಲು ಅವರು ಅನೇಕ ಕ್ರಮಗಳನ್ನು ತೆಗೆದುಕೊಂಡಿದ್ದರು ಎಂದು ತಿಳಿದು ಬಂದಿದೆ. ರೈಜ್ಯೋವ್ ಅವರ ಮರಣವನ್ನು ರಷ್ಯಾದ ಸಂಸತ್ತಿನ ಮೇಲ್ಮನೆಯ ಸ್ಪೀಕ‌ರ್ ವ್ಯಾಲೆಂಟಿನಾ ಮ್ಯಾಟ್ವಿಯೆಂಕೊ ಅವರು ಘೋಷಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More