Subscribe to Updates
Get the latest creative news from FooBar about art, design and business.
- ದೇಶದ 2ನೇ ಅತಿ ದೊಡ್ಡ ಕ್ರಿಕೆಟ್ ಕ್ರೀಡಾಂಗಣಕ್ಕೆ ಸಿಎಂ ಸಿದ್ದರಾಮಯ್ಯ ಶಂಕುಸ್ಥಾಪನೆ
- ಈ ವರ್ಷ 52 ಸಾವಿರ ಅತಿಥಿ ಶಿಕ್ಷಕರ ನೇಮಕ: ಸಚಿವ ಮಧು ಬಂಗಾರಪ್ಪ
- ಬೀದರ್ ಬ್ರಿಮ್ಸ್ (BRIMS) ಆಸ್ಪತ್ರೆಯಲ್ಲಿ ಕರ್ತವ್ಯ ನಿರತ ವೈದ್ಯರ ಮೇಲೆ ಭೀಕರ ಹಲ್ಲೆ: 7 ಮಂದಿ ಆರೋಪಿಗಳ ಬಂಧನ
- ತುಮಕೂರು ಜಿಲ್ಲೆಗೆ ‘ತುಮಕೂರು (ಬೆಂಗಳೂರು ಉತ್ತರ)’ ಎಂದು ಮರುನಾಮಕರಣ: ಗೃಹ ಸಚಿವ ಡಾ.ಜಿ.ಪರಮೇಶ್ವರ್
- ಮಾದಾವರ–ತುಮಕೂರು ಮೆಟ್ರೋ ರೈಲು ಯೋಜನೆ: ಸರ್ಕಾರಕ್ಕೆ ಸಲ್ಲಿಕೆಯಾಯ್ತು ಡಿಪಿಆರ್ ವರದಿ
- ಪಕ್ಷದ ಜವಾಬ್ದಾರಿ ನಿರ್ವಹಿಸದಿದ್ದರೆ ಶಿಸ್ತು ಕ್ರಮ: ಕಾಂಗ್ರೆಸ್ ಮುಖಂಡರ ಸಭೆಯಲ್ಲಿ ಶಾಸಕ ಕೆ. ಷಡಕ್ಷರಿ ಎಚ್ಚರಿಕೆ
- ಗುಬ್ಬಿ ಶಾಸಕರು, ಪುತ್ರನಿಂದ ಕುತಂತ್ರ ರಾಜಕಾರಣ: ಷಡ್ಯಂತ್ರಗಳಿಗೆ ಜಗ್ಗುವುದಿಲ್ಲ: ಜೆಡಿಎಸ್ ಮುಖಂಡ ನಾಗರಾಜು ಕಿಡಿ
- ತುಮಕೂರು: ಕುಲ್ಲಕ ವಿಷಯಕ್ಕೆ ಜಗಳ: ಕೊಲೆ
Author: admin
ಬೆಂಗಳೂರಿನ ನಮ್ಮ ಮೆಟ್ರೊ ನಿಲ್ದಾಣಗಳಿಗೆ ಸಂಪರ್ಕವನ್ನು ಹೆಚ್ಚಿಸಲು, ಇಂದಿರಾನಗರ ಮತ್ತು ಯಲಚೇನಹಳ್ಳಿ ಮೆಟ್ರೊ ನಿಲ್ದಾಣಗಳಲ್ಲಿ ಮಹಿಳೆಯರ ಚಾಲಿತ ಎಲೆಕ್ಟ್ರಿಕ್ ಆಟೋ ರಿಕ್ಷಾಗಳನ್ನು ಪರಿಚಯಿಸಲಾಯಿತು. ಕಡಿಮೆ ಇಂಗಾಲದ ಭವಿಷ್ಯಕ್ಕಾಗಿ ಪರಿಹಾರಗಳನ್ನು ನೀಡುವ ಬಹುರಾಷ್ಟ್ರೀಯ ಕಂಪನಿ ಅಲ್ಸ್ಟೋಮ್ ನ ಉಪಕ್ರಮವಾದ ಸಾರ್ವಜನಿಕ ಸಾರಿಗೆಗೆ ಕಡಿಮೆ ಹೊರಸೂಸುವಿಕೆ ಪ್ರವೇಶ (LEAP), ಸರ್ಕಾರದ ನೀತಿ & ನಾಗರಿಕ ಸಮಾಜದ ಕ್ರಮಗಳ ಮೇಲೆ ಪ್ರಭಾವ ಬೀರುವ ಗುರಿ ಹೊಂದಿರುವ ಸಂಶೋಧನಾ ಸಂಸ್ಥೆ WRI ಇಂಡಿಯಾದ ಸಹಯೋಗಲ್ಲಿ ಇದನ್ನು ಮಾಡಲಾಗಿದೆ. ಇಂದಿರಾನಗರವನ್ನು ಪ್ರಾಯೋಗಿಕ ಯೋಜನೆಯಾಗಿ ಆಯ್ಕೆ ಮಾಡಲಾಗಿ. ಏಕೆಂದರೆ ಇದು ನಗರ ಕೇಂದ್ರಕ್ಕೆ ಸಮೀಪವಿರುವ ವಾಣಿಜ್ಯ ಕೇಂದ್ರವಾಗಿದೆ ಮತ್ತು ಆದ್ದರಿಂದ ಭಾರೀ ಟ್ರಾಫಿಕ್ ಚಲನೆಗೆ ಸಾಕ್ಷಿಯಾಗಿದೆ. ಪ್ರಾಥಮಿಕವಾಗಿ ವಸತಿ ಪ್ರದೇಶವಾಗಿದ್ದರೂ, ಯಲಚೇನಹಳ್ಳಿ ಕೂಡ ಪ್ರಮುಖ ಐಟಿ ಕೇಂದ್ರವಾಗಿ ವೇಗವಾಗಿ ರೂಪಾಂತರಗೊಳ್ಳುತ್ತಿದೆ ಎಂದು ಲೋಯಿಸನ್ ಹೇಳಿದರು. ಈ ಎರಡು ನಿಲ್ದಾಣಗಳಲ್ಲಿನ ಸುಸ್ಥಿರ ಸಾರಿಗೆ ಆಯ್ಕೆಗಳು ಕೊನೆಯ ಮೈಲಿ ಸಂಪರ್ಕ ಸಮಸ್ಯೆಗಳನ್ನು ಕಡಿಮೆ ಮಾಡುವ ಮೂಲಕ ಮೆಟ್ರೋ ಪ್ರಯಾಣಿಕರಿಗೆ ಗಮನಾರ್ಹವಾಗಿ ಪ್ರಯೋಜನವನ್ನು ನೀಡುತ್ತವೆ.…
ತುಮಕೂರು: ತುಮಕೂರು ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಬಿಜೆಪಿ ಕಾರ್ಯಕರ್ತರು ಮುತ್ತಿಗೆ ಹಾಕಿದ ಸಂದರ್ಭದಲ್ಲಿ ಸ್ಥಳದಲ್ಲಿ ಬಂದೋಬಸ್ತ್ ನಲ್ಲಿದ್ದ ಡಿವೈಎಸ್ಪಿ ಚಂದ್ರಶೇಖರ್ ಅವರ ಮೇಲೆ ಹಲ್ಲೆ ನಡೆಸಿದ ಬಿಜೆಪಿ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ವೆಂಕಟೇಶ ಎಂಬ ಬಿಜೆಪಿ ಕಾರ್ಯಕರ್ತ ಪೊಲೀಸರೊಂದಿಗೆ ನಡೆದ ತಳ್ಳಾಟ ನೂಕಾಟದಲ್ಲಿ ಡಿವೈಎಸ್ಪಿ ಚಂದ್ರಶೇಖರ್ ಅವರ ಮೂಗಿಗೆ ರಕ್ತ, ಗಾಯ ಆಗೋ ರೀತಿಯಲ್ಲಿ ಹಲ್ಲೆ ನಡೆಸಿದ್ದು, ಹೀಗಾಗಿ ಆರೋಪಿ ವೆಂಕಟೇಶನನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ನಾಳೆ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಒಂದು ಕುಟುಂಬ ಹೊಸ ಮಾರುತಿ ಸೆಲೆರಿಯೊ ಕಾರನ್ನು ಖರೀದಿಸಲು ಮಾರುತಿ ಸುಜುಕಿ ಶೋರೂಂಗೆ ತೆರಳಿದ್ದಾರೆ. ಕಾರನ್ನು ಪಡೆದುಕೊಳ್ಳುವ ಚಿತ್ರವನ್ನು ತೆಗೆದುಕೊಂಡು ಖುಷಿಪಟ್ಟಿದ್ದಾರೆ. ಮಾರುತಿ ಶೋರೂಂ ಉದ್ಯೋಗಿಯೊಬ್ಬರು ಔಪಚಾರಿಕವಾಗಿ ಕಾರಿನ ಕೀಗಳನ್ನು ಅವರಿಗೆ ಹಸ್ತಾಂತರಿಸಿದರು. ಕಾರನ್ನು ವಿತರಣೆ ಪಡೆದ ನಂತರ ಅದರ ಮಾಲೀಕರು ಕಾರಿನೊಳಗೆ ಕುಳಿತು ಕಾರನ್ನು ಚಲಾಯಿಸಿದ್ದಾರೆ. ಈ ಕುರಿತು ಬಿಡುಗಡೆ ಮಾಡಿರುವ ವೀಡಿಯೋದಲ್ಲಿ ಕಾರಿನ ಚಾಲಕನ ಸೀಟಿನಲ್ಲಿ ಮಹಿಳೆಯೊಬ್ಬರು ಕುಳಿತಿರುವುದು ಕಂಡು ಬಂದಿದೆ. ಕಾರು ಹತ್ತಿದ ಬಳಿಕ ಕಾರನ್ನು ಸರಿಸಲು ಯತ್ನಿಸಿದ್ದಾರೆ. ನಂತರ ಕಾರು ವೇಗವಾಗಿ ಸಾಗಿದ್ದು, ಅವರು ಕಾರಿನ ನಿಯಂತ್ರಣ ಕಳೆದುಕೊಂಡಿದ್ದಾರೆ. ನಿಯಂತ್ರಣ ತಪ್ಪಿ ಶೋರೂಂನಿಂದ ಹೊರಗೆ ಹೋಗಿ ಎದುರಿನ ಪೊದೆಗೆ ಉರುಳಿದೆ. ದುರದೃಷ್ಟವಶಾತ್, ಹೊಸ ಕಾರು ಖರೀದಿಸಿದ ನಂತರ, ಶೋ ರೂಂನಿಂದ ಹೊರಬಂದ ನಂತರ ಕಾರು ಅಪಘಾತಕ್ಕೀಡಾಗಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾರಿಗೂ ಪ್ರಾಣಾಪಾಯ ಅಥವಾ ಗಾಯಗಳಾಗಿಲ್ಲ. ಅಪಘಾತಕ್ಕೀಡಾದ ಕಾರು ನೋಡಿ ಅಲ್ಲಿದ್ದವರು ಓಡಿ ಬಂದು ಕಾರಿನೊಳಗಿದ್ದವರನ್ನು ರಕ್ಷಿಸಿದ್ದಾರೆ. ಘಟನೆಯ ವೀಡಿಯೋ ನೋಡಿದರೆ ಕಾರು ಚಲಾಯಿಸಿದ ಮಹಿಳೆಗೆ ಡ್ರೈವಿಂಗ್…
ಬಿಜೆಪಿಯ ಹಿರಿಯ ನಾಯಕರಾಗಿರುವ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರ ಫೇಸ್ ಬುಕ್ ಖಾತೆಯನ್ನು ದುಷ್ಕರ್ಮಿಗಳು ಹ್ಯಾಕ್ ಮಾಡಿದ್ದಾರೆ. ಖಾತೆಗೆ 7.50 ಲಕ್ಷ ಹಣ ಬಂದಿದ್ದು, ನಾನು ಮಾಡಿದ ವ್ಯವಹಾರದಲ್ಲಿ ಆರಂಭದಲ್ಲೇ ಲಾಭ ಬಂದಿದೆ. ನೀವು ಸಹ ವ್ಯವಹಾರ ನಡೆಸಿ ಲಾಭ ಮಾಡಿಕೊಳ್ಳಿ ಎಂದು ಪೋಸ್ಟ್ ಮಾಡಲಾಗಿದೆ. ಇವಿಷ್ಟು ಮಾತ್ರವಲ್ಲದೇ ಕ್ರಿಸ್ಟಿನಾ ಪೆನಾಟೆ ಎಂಬುವರ ಸಲಹೆ ಪಡೆಯಬಹುದು ಎಂದು ಪೋಸ್ಟ್ ನಲ್ಲಿ ಬರೆಯಲಾಗಿದೆ. ತಂದೆಯ ಫೇಸ್ ಬುಕ್ ಖಾತೆ ಹ್ಯಾಕ್ ಆಗಿರುವ ಮಾಹಿತಿ ನೀಡಿದ ಪುತ್ರ ಸಂಕಲ್ಪ ಶೆಟ್ಟರ್, ಯಾರೂ ಕೂಡ ಹಣ ಹಾಕಬಾರದು ಎಂದು ನೆಟ್ಟಿಗರಿಗೆ ಮನವಿ ಮಾಡಿದ್ದಾರೆ. ಉತ್ತರ ಕರ್ನಾಟಕದ ಲಿಂಗಾಯತ ಪ್ರಭಾವಿ ನಾಯಕ ನಾಯಕ ಜಗದೀಶ್ ಶೆಟ್ಟರ್ ಅವರು ವಿಧಾನಸಭೆ ಚುನಾವಣೆಗೂ ಮುನ್ನ ಸ್ವಾಭಿಮಾನಕ್ಕೆ ಧಕ್ಕೆಯಾಯ್ತು ಎಂದು ತತ್ವಸಿದ್ಧಾಂತಗಳನ್ನು ಬದಿಗಿಟ್ಟು ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದರು. ಕಾಂಗ್ರೆಸ್ ನಿಂದ ಟಿಕೆಟ್ ಪಡೆದು ಚುನಾವಣೆಯಲ್ಲಿ ಸ್ಪರ್ಧಿಸಿ ಬಿಜೆಪಿ ವಿರುದ್ಧವೇ ಸೋಲು ಅನುಭವಿಸಿದ್ದರು. ಬಳಿಕ ಪರಿಷತ್ ಚುನಾವಣೆಯಲ್ಲಿ ಸ್ಪರ್ಧಿಸಿ ಎಂಎಲ್…
ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಗಲ್ಲು ಶಿಕ್ಷೆಗೆ ಗುರಿಯಾಗಿ ಸುಪ್ರೀಂ ಕೋರ್ಟ್ ಆದೇಶದ ಬಳಿಕ ಜೀವಾವಧಿ ಶಿಕ್ಷಾ ಬಂಧಿಯಾಗಿರುವ ಉಮೇಶ್ ರೆಡ್ಡಿ ಅಲಿಯಾಸ್ ಬಿಎ ಉಮೇಶ್ ತಾಯಿ ಸೆಂಟಿಮೆಂಟ್ ಬಳಸಿ ಪೆರೋಲ್ ಪಡೆಯಲು ಪ್ರಯತ್ನಿಸಿದ್ದಾನೆ. ಆದರೆ, ತಾಯಿಯ ಜೊತೆ ಕಳೆಯಲು, ಅವರ ಯೋಗ ಕ್ಷೇಮ ವಿಚಾರಿಸಲು 30 ದಿನ ಪೆರೋಲ್ ಬೇಕು ಎಂಬ ಆತನ ಬೇಡಿಕೆಯನ್ನು ಕರ್ನಾಟಕ ಹೈಕೋರ್ಟ್ ತಳ್ಳಿ ಹಾಕಿದೆ. ಎಲ್ಲರಿಗೂ ತಿಳಿದಿರುವಂತೆ ಉಮೇಶ್ ರೆಡ್ಡಿ ಒಬ್ಬ ರೇಪಿಸ್ಟ್. ಅತ್ಯಂತ ವಿಕೃತ ಕಾಮಿ. ಆತನ ಮೇಲೆ ಹತ್ತಾರು ಪ್ರಕರಣಗಳಿವೆ. ಮಹಿಳೆಯರನ್ನು ಅತ್ಯಂತ ಹೀನಾಯವಾಗಿ ಅತ್ಯಾಚಾರ ಮಾಡಿ ಕೊಲೆ ಮಾಡುತ್ತಿದ್ದ ಆತ, ಮಹಿಳೆಯರ ಒಳ ಉಡುಪುಗಳನ್ನು ಕದಿಯುವಷ್ಟು ವಿಕೃತನಾಗಿದ್ದ. ಹಲವು ಅಪರಾಧ ಕೃತ್ಯದಲ್ಲಿ ಭಾಗಿಯಾಗಿದ್ದ ಉಮೇಶ್ ರೆಡ್ಡಿಯನ್ನು 1998ರ ಮಾರ್ಚ್ 2ರಂದು ಐಪಿಸಿ ಸೆಕ್ಷನ್ ಗಳಾದ 302, 376 ಮತ್ತು 392 ಅಡಿ ಪ್ರಕರಣದಲ್ಲಿ ಬಂಧಿಸಲಾಗಿತ್ತು. ಮರಡಿ ಸುಬ್ಬಯ್ಯ ಅವರ ಪತ್ನಿ ಜಯಶ್ರೀ ಅವರನ್ನು ಅತ್ಯಾಚಾರ ಮಾಡಿ ಕೊಲೆ ಮಾಡಿದ ಆರೋಪ…
ತುಮಕೂರು: ಬೆಳಧರ ಶಾಲೆಯ ಆಟದ ಮೈದಾನವನ್ನು ಉಳಿಸುವಲ್ಲಿ ನಿರ್ಲಕ್ಷ್ಯ ತೋರಿರುವ ಜವಾಬ್ದಾರಿಯುತ ಸ್ಥಾನದಲ್ಲಿರುವ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಡಾ.ಸೂರ್ಯ ಕಲಾ ಹಾಗೂ ಉಪ ನಿರ್ದೇಶಕರ ಭತ್ಯೆ ಹಾಗೂ ಇನ್ನಿತರ ವೇತನವನ್ನು ಶಾಲಾ ಆಟದ ಮೈದಾನಕ್ಕೆ ಕಾಂಪೌಂಡ್ ಗೋಡೆ ನಿರ್ಮಿಸುವ ವರೆಗೂ ತಡೆಹಿಡಿಯ ಬೇಕೆಂದು ಭೀಮ್ ಆರ್ಮಿ ಸಂಘಟನೆಯ ಜಿಲ್ಲಾಧ್ಯಕ್ಷ ಶ್ರೀನಿವಾಸ್ ಮತ್ತು ಸಂಘಟನೆ ಸದಸ್ಯರೆಲ್ಲರೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳಾದ ಪ್ರಭು ಜಿ. ಅವರಿಗೆ ಮನವಿ ಸಲ್ಲಿಸಿದರು. ಇದಕ್ಕೆ ತಕ್ಷಣವೇ ಸ್ಪಂದಿಸಿದಂತ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳಾದ ಪ್ರಭು ಜಿ. ಅವರು, ನಾಳೆಯಿಂದಲೇ ಕೆಲಸ ಪ್ರಾರಂಭ ಮಾಡಿ ಶಾಲೆಯ ಆವರಣಕ್ಕೆ ಶಾಸಕರ ಅನುದಾನದಿಂದ ಬಿಡುಗಡೆಯಾದ 5 ಲಕ್ಷ ರೂ. ಗಳನ್ನು ಬಳಸಿಕೊಂಡು ಶಾಲಾ ಆಟದ ಮೈದಾನಕ್ಕೆ ತಂತಿ ಬೇಲಿಯನ್ನು ನಿರ್ಮಿಸಬೇಕೆಂದು ಸಂಬಂಧ ಪಟ್ಟ ಅಧಿಕಾರಿಗಳಿಗೆ ತಕ್ಷಣವೇ ಮೌಖಿಕವಾಗಿ ನಿರ್ದೇಶನ ನೀಡಿದರು. ಇದೇ ವೇಳೆ ಮಾತನಾಡಿದ ಅವರು, ಶಾಲೆಯ ಆಸ್ತಿ ಉಳಿಸುವುದು ನಮ್ಮೆಲ್ಲರ ಕರ್ತವ್ಯ, ನಾವು ಶಾಲೆಯ ಆಟದ ಮೈದಾನಕ್ಕೆ ಬೇಲಿಯನ್ನು…
ತುರುವೇಕೆರೆ : ತಾಲೂಕಿನ ಕಸಬಾ ಹೋಬಳಿ ಲೋಕಮ್ಮನಹಳ್ಳಿ ಗ್ರಾಮ ಪಂಚಾಯಿತಿ ಅಧಿಕಾರಿಗಳ ಬಗ್ಗೆ ಸಾರ್ವಜನಿಕರು ತುಮಕೂರಿನ ಲೋಕಾಯುಕ್ತರಿಗೆ ದೂರು ನೀಡಿದ ಹಿನ್ನೆಲೆಯಲ್ಲಿ ಲೋಕಾಯುಕ್ತ ತಂಡ ದಿಢೀರ್ ದಾಳಿ ನಡೆಸಿ ಹಲವು ದಾಖಲೆ ಪತ್ರಗಳನ್ನು ಪರಿಶೀಲಿಸಿ ವಶಕ್ಕೆ ಪಡೆದುಕೊಂಡ ಘಟನೆ ನಡೆದಿದೆ. ಈ ಸ್ವತ್ತುಗಳ ಮಾಡಿಕೊಡುವ ನರೇಗಾ ಯೋಜನೆ ಬಗ್ಗೆ ಹಲವು ಅಕ್ರಮಗಳು ನಡೆದಿದ್ದು, ಸಿಬ್ಬಂದಿ ಹಾಜರಾತಿ ಅಕ್ರಮ ಖಾತೆ ಬಗ್ಗೆ ಸಾರ್ವಜನಿಕರಿಂದ ದೂರು ಬಂದ ಹಿನ್ನೆಲೆಯಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯ ದಾಖಲಾತಿ ಮತ್ತು ಸರಿಯಾದ ಸಮಯಕ್ಕೆ ಸರಿಯಾಗಿ ಬಾರದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯ ಬಗ್ಗೆ ಗರಂ ಆದ ಲೋಕಾಯುಕ್ತ ಅಧಿಕಾರಿಗಳು ಇಂತಹ ಘಟನೆಗಳು ಮರುಕಳಿಸದಂತೆ ಎಚ್ಚರಿಕೆ ವಹಿಸಬೇಕು ಎಂದು ಖಡಕ್ ವಾರ್ನಿಂಗ್ ನೀಡಿದರಲ್ಲದೇ, 15ನೇ ಹಣಕಾಸು ನಿರ್ವಹಣೆ ಬಗ್ಗೆ ಸಹ ಅಧಿಕಾರಿಗಳು ಆಕ್ಷೇಪ ವ್ಯಕ್ತಪಡಿಸಿ ಇವುಗಳನ್ನು ಕೂಲಂಕುಶವಾಗಿ ತನಿಖೆ ನಡೆಸುವುದಾಗಿ ಹೇಳಿದರು. ಇದಕ್ಕೂ ಮುನ್ನ ಹರಿದಾಸನಹಳ್ಳಿಯ ಅಂಗನವಾಡಿ ಮತ್ತು ಸರ್ಕಾರಿ ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮಕ್ಕಳಿಗೆ ಕೊಡುವ ಆಹಾರದ…
ಮುಂದಿನ ಮಾರ್ಚ್ 17ರಂದು ಸ್ಯಾಂಡಲ್ವುಡ್ನ ‘ಪವರ್ ಸ್ಟಾರ್’ ನಟ ದಿವಂಗತ ಪುನೀತ್ ರಾಜ್ಕುಮಾರ್ ಜನ್ಮದಿನ. ಈ ಹೊಸ್ತಿಲಲ್ಲೇ ಅಭಿಮಾನಿಗಳಿಗೆ ಖುಷಿಯಾಗುವ ಸುದ್ದಿ ನೀಡಿದ್ದಾರೆ. ಮಾರ್ಚ್ 15ರಂದು ಪುನೀತ್ ನಟನೆಯ ಹಿಟ್ ಸಿನಿಮಾ ‘ಜಾಕಿ’ ರಿ ರಿಲೀಸ್ ಆಗಲಿದೆ. ಪುನೀತ್ ಅಗಲಿದ ದಿನದಿಂದಲೂ(2021ರ ಅ.29) ಒಂದಲ್ಲ ಒಂದು ರೀತಿಯಲ್ಲಿ ಅಭಿಮಾನಿಗಳು ತಮ್ಮ ನೆಚ್ಚಿನ ನಟನನ್ನು ಸಂಭ್ರಮಿಸುತ್ತಲೇ ಬಂದಿದ್ದಾರೆ. 2022ರ ಮಾರ್ಚ್ 17ರಂದು ‘ಪುನೀತ್’ ನಟನೆಯ ಕೊನೆಯ ಕಮರ್ಷಿಯಲ್ ಸಿನಿಮಾ ‘ಜೇಮ್ಸ್’ ಬಿಡುಗಡೆಗೊಂಡಿತ್ತು. ಅಂದು ವಿಶ್ವವ್ಯಾಪಿ 4 ಸಾವಿರಕ್ಕೂ ಅಧಿಕ ತೆರೆಗಳಲ್ಲಿ ‘ಜೇಮ್ಸ್’ ಪ್ರದರ್ಶನ ಕಂಡಿತ್ತು. ಇದನ್ನೊಂದು ಹಬ್ಬವಾಗಿ ಅಭಿಮಾನಿಗಳು ಆಚರಿಸಿದ್ದರು. ಈ ಮೂಲಕ ನೆಚ್ಚಿನ ನಟನಿಗೆ ನಮನ ಸಲ್ಲಿಸಿದ್ದರು. ಇದಾದ ಬಳಿಕ ಎಸ್. ನಾಗೇಂದ್ರ ಪ್ರಸಾದ್ ನಿರ್ದೇಶನದ ‘ಲಕ್ಕಿಮ್ಯಾನ್’ 2022ರ ಸೆ.9ರಂದು ತೆರೆಕಂಡಿತ್ತು. ಇದರಲ್ಲಿ ಪುನೀತ್ ಪ್ರೇಕ್ಷಕರೆದುರು ದೇವರಾಗಿ ಪ್ರತ್ಯಕ್ಷವಾಗಿದ್ದರು. ಇದನ್ನು ಕಂಡು ಅಭಿಮಾನಿಗಳು ಭಾವುಕರಾಗಿದ್ದರು. 2022ರ ಅಕ್ಟೋಬರ್ 28ರಂದು ಪಿಆರ್ ಕೆ ಪ್ರೊಡಕ್ಷನ್ಸ್ ನಡಿ, ‘ವೈಲ್ಡ್ ಕರ್ನಾಟಕ’ ಖ್ಯಾತಿಯ ಅಮೋಘವರ್ಷ ಜೊತೆಗೂಡಿ…
ಬೆಂಗಳೂರು: ಗೃಹ ಜ್ಯೋತಿ ಯೋಜನೆ ಜೊತೆಗೆ ವಿದ್ಯುತ್ ಗ್ರಾಹಕರಿಗೆ ಮತ್ತೊಂದು ಸಿಹಿ ಸುದ್ದಿ ಸಿಕ್ಕಿದ್ದು ಸರ್ಕಾರ ವಿದ್ಯುತ್ ದರ ಇಳಿಕೆ ಮಾಡಿ ಆದೇಶ ಹೊರಡಿಸಿದೆ. ಸರಾಸರಿ 100 ಯುನಿಟ್ ಗಿಂತ ಹೆಚ್ಚಿನ ವಿದ್ಯುತ್ ಬಳಸುವ ಬಳಕೆದಾರರಿಗೆ ಯುನಿಟ್ ಮೇಲೆ 1 ರೂಪಾಯಿ 10 ಪೈಸ್ ಇಳಿಕೆ ಮಾಡಿದ್ದು ವಾಣಿಜ್ಯ ಬಳಕೆದಾರರಿಗೂ ಕೂಡ ಪ್ರತಿ ಯುನಿಟ್ಗೆ 1 ರೂಪಾಯಿ 25 ಪೈಸೆ ಇಳಿಕೆ ಮಾಡಿ ಕೆಇಆರ್ ಸಿ ಆದೇಶ ಹೊರಡಿಸಿದೆ. ಹೊಸ ದರ ಮಾರ್ಚ್ 1 ರಿಂದ ಅನ್ವಯವಾಗಲಿದೆ. ಹೆಚ್ ಟಿ ಆಸ್ಪತ್ರೆ ಮತ್ತು ಶಿಕ್ಷಣ ಸಂಸ್ಥೆಗಳಿಗೆ ಪ್ರತಿ ಯೂನಿಟ್ಗೆ 40 ಪೈಸೆ ಇಳಿಕೆ ಮಾಡಲಾಗಿದೆ. ಬೇಡಿಕೆಯ ಶುಲ್ಕಗಳು ಪ್ರತಿ ರೂ.10 ರಷ್ಟು ಕಡಿಮೆಯಾಗಿದೆ. ಹೆಚ್ಟಿ ಖಾಸಗಿ ಏತ ನೀರಾವರಗೆ ಪ್ರತಿ ಯೂನಿಟ್ ಗೆ 200 ಪೈಸೆ ಕಡಿಮೆಯಾಗಿದೆ. ಲೋಕಸಭೆ ಚುನಾವಣೆ ಬೆನ್ನಲ್ಲೇ ರಾಜ್ಯದ ಜನತೆಗೆ ಸರ್ಕಾರ ವಿದ್ಯುತ್ ದರ ವಿಚಾರದಲ್ಲಿ ಕೊಂಚ ರಿಲೀಫ್ ನೀಡಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ…
ಊಟದ ನಂತರ ವೀಳ್ಯದೆಲೆ ತಿನ್ನುವುದು ಉತ್ತಮ: ಅನೇಕ ಜನರು ಊಟದ ನಂತರ ವೀಳ್ಯದೆಲೆಯನ್ನು ತಿನ್ನುತ್ತಾರೆ. ಇದು ನಮ್ಮ ಜೀರ್ಣಕ್ರಿಯೆಗೆ ಸಂಬಂಧಿಸಿದ ಅನೇಕ ಸಮಸ್ಯೆಗಳನ್ನು ನಿವಾರಿಸುತ್ತದೆ. ಇದು ವಿಟಮಿನ್, ಕ್ಯಾರೋಟಿನ್ ಮತ್ತು ಕ್ಯಾಲ್ಸಿಯಂನಲ್ಲಿ ಸಮೃದ್ಧವಾಗಿದೆ. ವೀಳ್ಯದೆಲೆ ತಿಂದರೆ ಅಜೀರ್ಣವಾಗುವುದಿಲ್ಲ. ದುರ್ವಾಸನೆ ಬರಲ್ಲ. ಇದು ಕೆಟ್ಟ ಕೊಬ್ಬನ್ನು ಕಡಿಮೆ ಮಾಡಲು ತುಂಬಾ ಉಪಯುಕ್ತವಾಗಿದೆ. ಜೊತೆಗೆ ಋತುಚಕ್ರದ ಸಮಸ್ಯೆ ಇರುವ ಮಹಿಳೆಯರಿಗೆ ನೋವನ್ನು ನಿವಾರಿಸುತ್ತದೆ. ಪೋಷಕಾಂಶದ ಸಂಪತ್ತು ನೇರಳೆ ಎಲೆಕೋಸು: ಈ ತರಕಾರಿ ತಿಂದರೆ ಹಲವು ಲಾಭ..! ನೇರಳೆ ಎಲೆಕೋಸನ್ನು ಕೆಂಪು ಎಲೆಕೋಸು ಎಂದೂ ಕರೆಯುತ್ತಾರೆ. ಇದು ಪೋಷಕಾಂಶಗಳಿಂದ ಸಮೃದ್ಧವಾಗಿದೆ. ನೇರಳೆ ಎಲೆಕೋಸು ಆಹಾರದ ಫೈಬರ್ಗಳು, ಉತ್ತಮ ಗುಣಮಟ್ಟದ ಕಾರ್ಬೋಹೈಡ್ರೆಟ್ ಗಳು, ಪೊಟ್ಯಾಸಿಯಮ್, ವಿಟಮಿನ್ ಸಿ, ಫೋಲೇಟ್ ಮತ್ತು ಪ್ರೋಟೀನ್ಗಳಂತಹ ಪೋಷಕಾಂಶಗಳಲ್ಲಿ ಸಮೃದ್ಧವಾಗಿದೆ. ಇದು ಜೀರ್ಣಕ್ರಿಯೆಗೆ ಪರಿಣಾಮಕಾರಿಯಾಗಿ ಸಹಾಯ ಮಾಡುತ್ತದೆ & ಅಧಿಕ ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡುತ್ತದೆ. ಇದು ಸುಕ್ಕುಗಳಂತಹ ವಯಸ್ಸಾದ ಆರಂಭಿಕ ಚಿಹ್ನೆಗಳನ್ನು ತಡೆಯುತ್ತದೆ. ಅಲ್ಲದೆ, ರೋಗನಿರೋಧಕ ಶಕ್ತಿಯನ್ನು ಸುಧಾರಿಸುತ್ತದೆ. ಮಕ್ಕಳಿಗೆ ಹೊಟ್ಟೆ ಹುಳು ಆದ್ರೆ…