Author: admin

ಬೆಂಗಳೂರು: ಕನ್ನಡದಲ್ಲಿ ಐಎಎಸ್ ಮಾಡಿದ ಮೊದಲ ಅಧಿಕಾರಿ ಹಾಗೂ ʻಬಾನಲ್ಲೆ ಮಧುಚಂದ್ರಕೆʼ ಸಿನಿಮಾ ನಟ ಕೆ.ಶಿವರಾಮ್ ಅವರು ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ನಗರದ ಎಚ್ ಸಿ ಜಿ ಆಸ್ಪತ್ರೆಯಲ್ಲಿ ಅಡ್ಮಿಟ್ ಆಗಿದ್ದಾರೆ. ಕಾರ್ಡಿಯಕ್ ಅರೆಸ್ಟ್ ಹಾಗೂ ಬ್ರೈನ್ ಡೆಡ್ ಆಗಿದೆ ಎಂಬ ಮಾಹಿತಿ ತಿಳಿದು ಬಂದಿದೆ. ನಟನ ಪರಿಸ್ಥಿತಿ ಚಿಂತಾಜನಕವಾಗಿದ್ದು ಸದ್ಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವರದಿಯಾಗಿದೆ. ಕನ್ನಡದಲ್ಲೇ ಐಎಎಸ್ ಬರೆದು, ನಂತರ ಬೆಂಗಳೂರು, ವಿಜಯಪುರ, ಕೊಪ್ಪಳ ಸೇರಿದಂತೆ ಹಲವಾರು ಜಿಲ್ಲೆಗಳಲ್ಲಿ ಅವರು ಕೆಲಸ ಮಾಡಿದ್ದಾರೆ. ʻಬಾನಲ್ಲೆ ಮಧುಚಂದ್ರಕೆʼ , ʻವಸಂತಕಾವ್ಯʼ ಚಿತ್ರದಲ್ಲಿ ನಟಿಸಿದ್ದರು. ರಾಜಕೀಯ ರಂಗದಲ್ಲೂ ನಟ ಗುರುತಿಸಿಕೊಂಡಿದ್ದರು.  ಪ್ರತಿಭಟನೆ, ಯಾರಿಗೆ ಬೇಡ ದುಡ್ಡು, ಪ್ರೀತಿಗಾಗಿ ಆಟ, ನಾಗ, ಮೂಡಲ ಸೀಮೆಯಲಿ, ಸುಭಾಷ್, ಟೈಗರ್ ಸೇರಿದಂತೆ ಅನೇಕ ಚಿತ್ರಗಳಲ್ಲಿ ನಟರಾಗಿದ್ದರು. ತಮ್ಮ ಸಿನಿ ಜೀವನದಲ್ಲಿ 2017ರವರೆಗೆ  10 ಸಿನೆಮಾದಲ್ಲಿ ನಟಿಸಿದ್ದಾರೆ. ಈಗ ನಟನಿಗೆ 71 ವರ್ಷ. ʻಬಾ ನಲ್ಲೆ ಮಧುಚಂದ್ರಕೆʼ ಚಿತ್ರದ ಮೂಲಕ ಕನ್ನಡ ಚಿತ್ರರಂಗದಲ್ಲಿ ಭರವಸೆ ಮೂಡಿಸಿದ್ದ ಕೆ…

Read More

ಖ್ಯಾತ ನಿರೂಪಕಿ ಅನುಶ್ರೀ ಮತ್ತು ಸಿಂಗರ್ ಜಸ್ ಕರಣ್ ಸಿಂಗ್ ಒಟ್ಟಿಗೇ ಇರುವ ಫೋಟೋಗಳನ್ನು ಗಾಯಕ ಜಸ್‌ಕರಣ್ ಸಿಂಗ್ ತಮ್ಮ ಸೋಷಿಯಲ್ ಮೀಡಿಯಾ ಅಕೌಂಟ್‌ ಗಳಲ್ಲಿ ಹಂಚಿಕೊಂಡಿದ್ದಾರೆ. ಇದಕ್ಕೆ ಕೆಲವರು ಹೀಗೆ ಹೇಳೋದಾ? ಅಷ್ಟಕ್ಕೂ ಅನುಶ್ರೀ ಸೆಲೆಬ್ರೆಟಿ ಆ್ಯಂಕರ್.. ಅವರ ಜತೆ ಅಭಿಮಾನದಿಂದ ಎಲ್ಲರೂ ಸೆಲ್ಫಿ ತೆಗೆದುಕೊಳ್ತಾರೆ. ಮಾತ್ರವಲ್ಲ ಕಷ್ಟ ಪಟ್ಟು ಮೇಲೆ ಬಂದ ಹುಡುಗಿ, ಹಲವು ಸವಾಲುಗಳನ್ನು ದಾಟಿ ಬಂದು ಮುನ್ನುಗ್ಗುತ್ತಾ ಮುಂದೆ ಸಾಗಿದವರು. ತಂದೆಯಿಲ್ಲದೇ ಬೆಳೆದ ನಿರೂಪಕಿಗೆ ಅನೇಕ ಸಮಸ್ಯೆಗಳು ಎದುರಾದವು. ಅವುಗಳನ್ನೆಲ್ಲಾ ತಲೆಗೆ ಹಾಕಿಕೊಳ್ಳದೇ ತಾನು ಆಯ್ತು,ತನ್ನ ಕೆಲಸವೂ ಆಯ್ತು ಎಂದು ಎಲ್ಲರಿಗೂ ಉತ್ತರ ಕೊಡುವಂತೆ ಬೆಳೆದು ನಿಂತರು. ಇದೀಗ ಅನುಶ್ರೀ ಹಾಗು ಸರಿಗಮಪ ಗಾಯಕ ಜಸ್ಕರಣ್ ಸಿಂಗ್ ಅವರ ಫೋಟೋಗಳಿಗೆ ಸೋಷಿಯಲ್ ಮೀಡಿಯಾಗಳಲ್ಲಿ ಬಹಳಷ್ಟು ಕಾಮೆಂಟ್‌ ಗಳು ಬಂದಿವೆ. ಆದರೆ ಅದರಲ್ಲಿ ಒಬ್ಬ ‘ಕೊನೆಗೂ ಅಕ್ಕನಿಗೆ ಒಳ್ಳೇ ಜೋಡಿ ಸಿಕ್ತು’ ಎಂದು ಕಾಮೆಂಟ್‌ ಮಾಡಿದ್ದಾನೆ. ಇದಿಷ್ಟು ಮಾತ್ರವಲ್ಲ ಅದನ್ನು ಹಲವಾರು ಮಂದಿ ಲೈಕ್ ಕೂಡ ಮಾಡಿದ್ದಾರೆ.…

Read More

ಯುಎಸ್ ಅಧ್ಯಕ್ಷ ಜೋ ಬಿಡನ್ ಇಸ್ರೇಲ್ ಗೆ ಎಚ್ಚರಿಕೆ ನೀಡಿದರು. ಗಾಜಾದಲ್ಲಿ ನರಮೇಧ ಮುಂದುವರಿದರೆ ಜಾಗತಿಕ ಮಟ್ಟದಲ್ಲಿ ಪ್ರತ್ಯೇಕಗೊಳ್ಳಲಿದೆ ಎಂದರು. ಮುಸ್ಲಿಮರ ಪವಿತ್ರ ತಿಂಗಳ ರಂಜಾನ್ ಸಮಯದಲ್ಲಿ ಗಾಜಾದಲ್ಲಿ ತಾತ್ಕಾಲಿಕ ಕದನ ವಿರಾಮಕ್ಕೆ ಇಸ್ರೇಲ್ ಒಪ್ಪಿಕೊಂಡಿದೆ ಎಂದು ಬಿಡೆನ್ ಹೇಳಿದ್ದಾರೆ. ಮುಂದಿನ ಸೋಮವಾರದ ವೇಳೆಗೆ ಕದನ ವಿರಾಮ ಸಾಧ್ಯವಾಗುವ ಭರವಸೆ ಇದೆ ಎಂದು ಬಿಡೆನ್ ಹೇಳಿದ್ದಾರೆ. ತಾತ್ಕಾಲಿಕ ಕದನ ವಿರಾಮ ಮತ್ತು ಒತ್ತೆಯಾಳುಗಳ ಬಿಡುಗಡೆ ಕುರಿತು ಪ್ಯಾರಿಸ್‌ ನಲ್ಲಿ ನಡೆದ ಸಭೆಯಲ್ಲಿ ಹಮಾಸ್ ಪ್ರತಿನಿಧಿಗಳು ಸೇರಿದಂತೆ ವಿವಿಧ ನಾಯಕರು ಒಪ್ಪಂದಕ್ಕೆ ಬಂದಿದ್ದಾರೆ ಎಂದು ಶ್ವೇತಭವನದ ರಾಷ್ಟ್ರೀಯ ಭದ್ರತಾ ಸಲಹೆಗಾರ ಜೇಕ್ ಸುಲ್ಲಿವಾನ್ ಪ್ರತಿಕ್ರಿಯಿಸಿದ್ದಾರೆ. ಹಮಾಸ್ ಕೆಲವು ಹೊಂದಾಣಿಕೆಗಳಿಗೆ ಸಿದ್ಧವಾಗಬಹುದು ಎಂದೂ ವರದಿಯಾಗಿದೆ. ಗಾಜಾದಲ್ಲಿ ಮಾನವ ಜೀವನವು ಹದಗೆಡುತ್ತಿರುವಂತೆ, ಈಜಿಪ್ಟ್, ಕತಾರ್, ಯುಎಸ್ ಮತ್ತು ಫ್ರಾನ್ಸ್‌ನಂತಹ ವಿವಿಧ ದೇಶಗಳ ಪ್ರತಿನಿಧಿಗಳು ಇಸ್ರೇಲ್-ಹಮಾಸ್ ಯುದ್ಧವನ್ನು ನಿಲ್ಲಿಸಲು ಮತ್ತು ಗಾಜಾದಲ್ಲಿ ಒತ್ತೆಯಾಳುಗಳನ್ನು ಬಿಡುಗಡೆ ಮಾಡಲು ತುರ್ತು ಮಾರ್ಗಗಳನ್ನು ಹುಡುಕುತ್ತಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ…

Read More

ನಿನ್ನೆ ನಡೆದ ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್  ಮೂವರು  ಬಿಜೆಪಿಯ ಓರ್ವ ಅಭ್ಯರ್ಥಿ ಜಯ ಸಾಧಿಸಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ನ ಅಭ್ಯರ್ಥಿ ನಾಸಿರ್ ಹುಸೇನ್ ಜಯಗಳಿಸಿ ಸಂದರ್ಭದಲ್ಲಿ ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂಬ ಘೋಷಣೆ ಕೂಗಿರುವ ಆರೋಪ ಕೇಳಿ ಬಂದಿದೆ. ಈ ವಿಚಾರ ಇದೀಗ ವಿಧಾನಮಂಡಲ ಅಧಿವೇಶನದಲ್ಲಿ ಪ್ರಸ್ತಾಪವಾಗಿದೆ. ವಿಧಾನಸಭೆಯಲ್ಲಿ ವಿಪಕ್ಷ ನಾಯಕ ಆರ್. ಅಶೋಕ್ ಈ ವಿಚಾರವನ್ನ ಪ್ರಸ್ತಾಪಿಸಿ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.  ವಿಧಾನಸೌಧದಂತ ಪವಿತ್ರ ಸ್ಥಳದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ್ದಾರೆ. ಆರೋಪಿಗಳನ್ನ ಇನ್ನೂ ಕೂಡ ಬಂಧಿಸಿಲ್ಲ. ಅವರನ್ನ ಬಿರಿಯಾನಿ ಹಾಕಿ ಸಾಕಿ ಎಂದು ಆಕ್ರೋಶ ಹೊರಹಾಕಿದರು. ಘೋಷಣೆ ಕೂಗಿದವರ ವಿರುದ್ದ ಈವರೆಗೆ ಯಾವುದೇ ಕ್ರಮವಿಲ್ಲ. ನಮಗೆ ಭಯ ಆಗುತ್ತಿದೆ.  ವಿಧಾನಸೌಧ ದಲ್ಲಿ ಇನ್ನೂ ಎಷ್ಟು ಉಗ್ರರು ಇದ್ದಾರೆಯೋ. ನಮಗೆ ಭಯ ಆಗುತ್ತಿದೆ ನಮಗೆ  ಭದ್ರತೆ ಇನ್ನೆಲ್ಲಿ ಸಿಗುತ್ತೆ ಹೇಳಿ ಎಂದು ಕಿಡಿಕಾರಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು…

Read More

ವ್ಯಕ್ತಿಯೊಬ್ಬರು, “ರಾಪಿಡೋ ಆಟೋ ಚಾಲಕ ತನ್ನನ್ನು ಒತ್ತೆಯಾಳಾಗಿ ” ಇಟ್ಟುಕೊಂಡಿದ್ದಾನೆ ಎಂದು ಸಾಮಾಜಿಕ ಜಾಲತಾಣದಲ್ಲಿ ಹೇಳಿದ್ದಾರೆ. ನನ್ನನ್ನು ರ್ಯಾಪಿಡೋ ಸವಾರ ಗಂಟೆಗಳ ಕಾಲ ಒತ್ತೆಯಾಳಾಗಿಟ್ಟುಕೊಂಡಿದ್ದರು ಎಂಬುದಾಗಿ ಎಕ್ಸಲ್ಲಿ ಪೋಸ್ಟ್ ಮಾಡಿದ್ದಾರೆ . ಈ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು. ನಿಖರವಾದ ಸ್ಥಳ ಇನ್ನೂ ತಿಳಿದಿಲ್ಲ. ಚಾಲಕನಿಗೆ ಯುಪಿಐ ಪಾವತಿಯಲ್ಲಿ ಸಮಸ್ಯೆ ಇದೆ ಎಂದು ಅವರು ಆರೋಪಿಸಿದ್ದಾರೆ. ” ನನಗೆ ಉಸಿರಾಟದ ಸಮಸ್ಯೆ ಮತ್ತು ಕಾಲು ಮುರಿದಿದ್ದು, ನಾನು ತಪ್ಪಿಸಿಕೊಳ್ಳಲು ಸಾಧ್ಯವಾಗಲಿಲ್ಲ” ಎಂದು ಅವರು ಹೇಳಿದ್ದಾರೆ. ದಯವಿಟ್ಟು ನನಗೆ ಕರೆ ಮಾಡಿ. ನನ್ನನ್ನು ಚಾಲಕ ಆಟೋದಲ್ಲಿ ಇಟ್ಟುಕೊಂಡಿದ್ದಾನೆ. ನನ್ನನ್ನು ಆಟೋದಿಂದ ಇಳಿಸಲು ಬಿಡುತ್ತಿಲ್ಲ. ನನಗೆ ಕಾಲು ಮುರಿತ ಮತ್ತು ಶ್ವಾಸಕೋಶದ ಸೋಂಕು ಇದೆ. ನಾನು 1 ಗಂಟೆಯಿಂದ ಆಟೋದಲ್ಲಿ ಲಾಕ್ ಆಗಿದ್ದೇನೆ,” ಎಂದು ಆರೋಪಿಸಿದ್ದಾರೆ. ನಂತರ 100ಕ್ಕೆ ಕರೆ ಮಾಡಿದಾಗ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾದೆ ಎಂದು ಆತ ಹೇಳಿದ್ದಾನೆ . ಬಳಕೆದಾರರು ಸಂದೇಶಗಳ ಸ್ಟ್ರೀನ್ಮಾಟ್ ಅನ್ನು ಸಹ ಹಂಚಿಕೊಂಡಿದ್ದು, ರ್ಯಾಪಿಡೋಗೆ ಈ ಕುರಿತು ಕ್ರಮ ಕೈಗೊಳ್ಳುವಂತೆ…

Read More

ಪಾಕಿಸ್ತಾನ ಪರ ಕೂಗಿದ ಘೋಷಣೆ ಈಗ ಭಾರಿ ಚರ್ಚೆಗೆ ಕಾರಣವಾಗಿದೆ. ರಾಜ್ಯ ಸಭೆಗೆ ಆಯ್ಕೆಯಾದ ನಾಸಿರ್ ಹುಸೇನ್ ಬೆಂಬಲಿಗರು ಪಾಕ್ ಪರ ಘೋಷಣೆ ಕೂಗಿದ್ದೇ ಇದೀಗ ದೊಡ್ಡ ಕೋಲಾಹಲಕ್ಕೆ ಕಾರಣವಾಗಿದೆ. ಇದೇ ವಿಚಾರವನ್ನು ಇಟ್ಟುಕೊಂಡು ಬಿಜೆಪಿ ಈಗ ಬಿರುಗಾಳಿಯನ್ನೇ ಸೃಷ್ಟಿಸಲು ಮುಂದಾಗಿದೆ. ಇಂದು ವಿಧಾನಮಂಡಲದ ಉಭಯ ಸಭೆಗಳಲ್ಲಿ ಕೋಲಾಹಲ ಏರ್ಪಡುವ ಸಾಧ್ಯತೆ ಇದೆ. ಪಾಕ್ ಪರ ಘೋಷಣೆ ಕೂಗಿದ ಕಿಡಿಗೇಡಿಗಳ ವಿರುದ್ಧ ಆದಷ್ಟು ಬೇಗ ಕ್ರಮ ತೆಗೆದುಕೊಳ್ಳಬೇಕೆಂದು ಒತ್ತಾಯಿಸಿ, ಬಿಜೆಪಿ ಶಾಸಕರು ಹಾಗೂ ಕಾರ್ಯಕರ್ತರು ಶಾಸಕರ ಭವನದಿಂದ ವಿಧಾನಸೌಧದ ವರೆಗೆ ರ‍್ಯಾಲಿ ಆಯೋಜಿಸಿದ್ದರು. ಶಾಸಕರ ಭವನದಿಂದ ವಿಧಾನಸೌಧದವರೆಗೂ ಬಿಜೆಪಿ ಶಾಸಕರ ಪ್ರತಿಭಟನಾ ರ್ಯಾಲಿ ಇಂದು ಬೆಳಗ್ಗೆ ನಡೆದಿದೆ. ಬಿಜೆಪಿ ರ್ಯಾಲಿಯಲ್ಲಿ ಭಾಗವಹಿಸಿದ ಶಾಸಕರು ತ್ರಿವರ್ಣ ಧ್ವಜ ಹಿಡಿದು ವಿಧಾನಸೌಧ ಪ್ರವೇಶಿಸಿದರು. ಬಳಿಕ ಸದನದಲ್ಲಿ ಈ ವಿಚಾರ ಪ್ರಸ್ತಾಪ ಮಾಡಲಿರುವ ಬಿಜೆಪಿ ಶಾಸಕರು ಸಿಎಂ ರಾಜೀನಾಮೆಗೆ ಪಟ್ಟು ಹಿಡಿದಿದ್ದು, ಸರ್ಕಾರ ಹಾಗೂ ನಾಸಿರ್ ಹುಸೇನ್ ಕ್ಷಮಾಪಣೆ ಕೇಳಬೇಕು ಎಂದು ಒತ್ತಾಯಿಸಿದ್ದಾರೆ. ಬಳಿಕ ರಾಜಭವನಕ್ಕೆ…

Read More

ವ್ಯಕ್ತಿಯೊಬ್ಬನ ಹೊಟ್ಟೆಯಿಂದ ಸುಮಾರು 39 ನಾಣ್ಯಗಳು ಮತ್ತು 37 ಅಯಸ್ಕಾಂತಗಳನ್ನು ವೈದ್ಯರು ಹೊರತೆಗೆದ ವಿಚಾರ ಇದೀಗ ಭಾರಿ ವೈರಲ್ ಆಗುತ್ತಿದೆ. ದಿಲ್ಲಿಯ ಸರ್ ಗಂಗಾ ರಾಮ್ ಆಸ್ಪತ್ರೆಯ ವೈದ್ಯರ ತಂಡವು ವ್ಯಕ್ತಿಯೊಬ್ಬನ ಕರುಳಿಗೆ ಸರ್ಜರಿ ನಡೆಸಿ, ಬರೋಬ್ಬರಿ 39 ನಾಣ್ಯಗಳು ಹಾಗೂ 37 ಆಯಸ್ಕಾಂತಗಳನ್ನು ಹೊರಗೆ ತೆಗೆದಿದ್ದಾರೆ. ಮನೋವೈದ್ಯಕೀಯ ಸಮಸ್ಯೆ ಹೊಂದಿರುವ ವ್ಯಕ್ತಿ, ಬಾಡಿ ಬಿಲ್ಡಿಂಗ್‌ಗೆ ಜಿಂಕ್ ಸಹಾಯ ಮಾಡುತ್ತದೆ ಎಂಬ ಕಲ್ಪನೆಯಿಂದ ನಾಣ್ಯಗಳು ಮತ್ತು ಮ್ಯಾಗ್ನೆಟ್‌ ಗಳನ್ನು ನುಂಗಿದ್ದ ಎಂದು ವರದಿಯಾಗಿದೆ. ಕಳೆದ 20ಕ್ಕೂ ಹೆಚ್ಚು ದಿನಗಳಿಂದ ಸತತ ವಾಂತಿ ಹಾಗೂ ಹೊಟ್ಟೆ ನೋವಿನ ಸಮಸ್ಯೆ ಹೊಂದಿದ್ದ 26 ವರ್ಷದ ವ್ಯಕ್ತಿಯನ್ನು ಸರ್ ಗಂಗಾ ರಾಮ್ ಆಸ್ಪತ್ರೆಯ ಎಮರ್ಜೆನ್ಸಿ ವಾರ್ಡ್‌ಗೆ ದಾಖಲಿಸಿದಾಗ ಘಟನೆ ಬೆಳಕಿಗೆ ಬಂದಿದೆ. ಆ ರೋಗಿ ಯಾವುದೇ ಆಹಾರ ಸೇವಿಸಲು ಸಾಧ್ಯವಾಗುತ್ತಿರಲಿಲ್ಲ. ರೋಗಿಯ ಸಂಬಂಧಿಕರು ಆತನ ಹೊಟ್ಟೆಯ ಎಕ್ಸ್‌ ರೇ ತೆಗೆಸಿದ್ದರು. ಆತನ ಹೊಟ್ಟೆಯ ಒಳಗೆ ನಾಣ್ಯಗಳು ಮತ್ತು ಆಯಸ್ಕಾಂತಗಳ ಆಕಾರದ ನೆರಳು ಕಾಣಿಸುತ್ತಿತ್ತು. ಅದರ ಮೂಲಕ…

Read More

ದೇವಸ್ಥಾನದ ಆದಾಯದ ವಿಚಾರವಾಗಿ ಆಢಳಿತಾರೂಢ ಕಾಂಗ್ರೆಸ್ ಮತ್ತು ವಿಪಕ್ಷ ಬಿಜೆಪಿ ನಡುವೆ ಕಿತ್ತಾಟ ಜೋರಾಗಿದ್ದು ವಿಜಯಪುರ ಜಿಲ್ಲೆಯಲ್ಲಿ ಬರಹವೊಂದು ವಿವಾದಕ್ಕೆ ಕಾರಣವಾಗಿದೆ. ಬಸವನಬಾಗೇವಾಡಿ ಪಟ್ಟಣದ ಐತಿಹಾಸಿಕ ಬಸವೇಶ್ವರ ದೇವಸ್ಥಾನದ ಹುಂಡಿ (ಕಾಣಿಕೆ ಪೆಟ್ಟಿಗೆ) ಮೇಲೆ ಅಧಿಕಾರಿಗಳು ಅಂಟಿಸಿರುವ ‘ಕಾಣಿಕೆ ಪೆಟ್ಟಿಗೆ ಸರಕಾರಕ್ಕೆ ಸೇರಿದ್ದು’ ಎಂಬ ಬರಹದ ಸ್ಟಿಕ್ಕರ್‌ ಚರ್ಚೆಗೆ ಕಾರಣವಾಗಿದೆ. ದೇವಸ್ಥಾನದ ಹುಂಡಿಗೆ ಭಕ್ತರು ಕಾಣಿಕೆ ಹಾಕುವುದನ್ನು ಕಡಿಮೆ ಮಾಡಿ ಎಂಬ ಪ್ರಚಾರ ರಾಜ್ಯದಲ್ಲಿ ಜೋರಾದ ಬೆನ್ನಲ್ಲೇ ಇಲ್ಲಿನ ಅಧಿಕಾರಿಗಳು ಈ ಸ್ಟಿಕ್ಕರ್‌ ಅಂಟಿಸಿ ಚರ್ಚೆಗೆ ಕಾರಣವಾಗಿದೆ. ಬಸವೇಶ್ವರ ದೇವಸ್ಥಾನಕ್ಕೆ ನಿತ್ಯವೂ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ದರ್ಶನ ಪಡೆಯುತ್ತಾರೆ. ಕಾಣಿಕೆ ಪೆಟ್ಟಿಗೆಗೆ ಕೈಲಾದಷ್ಟು ಹಣ ಹಾಕಿ ನಮಸ್ಕರಿಸುತ್ತಾರೆ. ಈಚೆಗೆ ಕಾಣಿಕೆ ಪೆಟ್ಟಿಗೆ ಒಡೆದಿದ್ದ ದೇವಸ್ಥಾನದ ಅಧಿಕಾರಿಗಳು ಒಟ್ಟು 8.53 ಲಕ್ಷ ರೂ. ಹಣ (2023, ಸೆಪ್ಟೆಂಬರ್‌ ತಿಂಗಳಿಂದ ಇಲ್ಲಿವರೆಗೆ) ವನ್ನು ಎಣಿಕೆ ಮಾಡಿದ್ದಾರೆ. ದಿಢೀರ್‌ ಸ್ಟಿಕ್ಕರ್‌ ಅಂಟಿಸಿದ ಬೆಳವಣಿಗೆ ಭಕ್ತರಲ್ಲೂ ಚರ್ಚೆಗೆ ಕಾರಣವಾಗಿದೆ. ”ದೇವಸ್ಥಾನಕ್ಕೆ ಸಂಬಂಧಿಸಿದ ಯಾವುದೇ ಹಣ ದೇವಸ್ಥಾನದ…

Read More

ಇಟಲಿಯ ಚರ್ಚ್   ತನ್ನ ವಿಚಿತ್ರವಾದ ನಂಬಿಕೆಯಿಂದ ಭಾರೀ ಸುದ್ದಿಯಲ್ಲಿದೆ. ಈ ಚರ್ಚ್​​​​ನ ಒಳಗೆ ಪ್ರವೇಶಿಸುತ್ತಿದ್ದಂತೆ ಮೇಲ್ಛಾವಣಿಯಲ್ಲಿ 500 ವರ್ಷಗಳಿಂದ ನೇತಾಡುತ್ತಿರುವ ಮೊಸಳೆಯೊಂದರ ಮೃತದೇಹದ ಬಗ್ಗೆ ಪ್ರಶ್ನೆಗಳು ಎದ್ದಿವೆ. ಈ ಚರ್ಚ್ 13 ನೇ ಶತಮಾನದಷ್ಟು ಹಿಂದಿನದ್ದು ಎಂದು ಹೇಳಲಾಗಿದೆ. ಹಾಗಾದರೆ ಆ ಮೊಸಳೆಯ ಮೃತದೇಹವನ್ನು ಅಲ್ಲಿ ಇಟ್ಟಿದ್ದೇಕೆ? ಅದಕ್ಕೆ ಕಾರಣವೇನು? ಇಟಲಿಯ ಲೊಂಬಾರ್ಡಿ ಪ್ರದೇಶದಲ್ಲಿರುವ ಈ ಚರ್ಚ್​ನ ಹೆಸರು Santurio della Beata Virgin Maria delle Grazie ಎಂದು. ಈ ಚರ್ಚ್‌ನಲ್ಲಿ ನಿಜವಾದ ಮೊಸಳೆಯ ಮೃತದೇಹವನ್ನು ನೇತು ಹಾಕಲಾಗಿದೆ ಅಂದರೆ ನೀವು ಅಚ್ಚರಿಗೆ ಒಳಗಾಗ್ತೀರಿ. ಆದರೆ ಇದು ಧಾರ್ಮಿಕ ಸಂಕೇತವೆಂದು ನಂಬಲಾಗಿದೆ. ಸಾಮಾನ್ಯವಾಗಿ ನೋಡಿದಾಗ ಅದು ನಕಲಿ ಮೊಸಳೆಯಂತೆ ಅನಿಸಬಹುದು. ಆದರೆ ಇದು ನಿಜವಾದ ಮೊಸಳೆ. ಇದನ್ನು ಸುಮಾರು 500 ವರ್ಷಗಳ ಹಿಂದೆ ನೇತು ಹಾಕಲಾಗಿದೆ ಎಂದು ಹೇಳಲಾಗುತ್ತದೆ. ಅಲ್ಲಿನ ಸ್ಥಳೀಯರು ಹೇಳುವಂತೆ ಫ್ರಾನ್ಸಿಸ್ಕೊ ​​ಗೊನ್ಜಾಗಾದಲ್ಲಿನ ಖಾಸಗಿ ಮೃಗಾಲಯದಿಂದ ತಪ್ಪಿಸಿಕೊಂಡ ಮೊಸಳೆಯನ್ನು ಇಲ್ಲಿ ಇಬ್ಬರು ಸಹೋದರರು ಸೆರೆಹಿಡಿದು ಕೊಂದಿದ್ದಾರೆ ಎಂದು…

Read More

ಬೆಂಗಳೂರು: ಶಾಲೆಯಲ್ಲಿ ಕೊಟ್ಟ ಪ್ರೊಟೀನ್ ಮಾತ್ರೆಯಿಂದ 4 ನೇ ತರಗತಿ ವಿದ್ಯಾರ್ಥಿನಿ ಸಾವನ್ನಪ್ಪಿರುವುದಾಗಿ ಪೋಷಕರು ಆರೋಪ ಮಾಡಿದ್ದಾರೆ. ಈ ಘಟನೆ ಬನಶಂಕರಿಯ ಕಾವೇರಿ ನಗರದಲ್ಲಿ ನಡೆದಿದೆ. ಜೋಯಾ (9) ಮೃತ ಬಾಲಕಿಯಾಗಿದ್ದಾಳೆ. ಕರಿಸಂದ್ರದ ನಮ್ಮೂರ ಸರ್ಕಾರಿ ಉರ್ದು ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರ ಮಕ್ಕಳಿಗೆ ಶಿಕ್ಷಕರು ಪೌಷ್ಠಿಕಾಂಶ ಮಾತ್ರೆ ನೀಡಿದ್ದು, ಇದನ್ನು ಸೇವಿಸಿದ ಜೋಯಾ ಅಲ್ಲೇ ಅಸ್ವಸ್ಥಳಾಗಿದ್ದಾಳೆ. ಕೂಡಲೇ ಶಾಲೆಯ ಶಿಕ್ಷಕರು ಸ್ಥಳೀಯ ಆಸ್ಪತ್ರೆಗೆ ಬಾಲಕಿಯನ್ನ ಸೇರಿಸಿದ್ದರು. ಆದರೆ ರಾತ್ರಿ ಬಾಲಕಿ ಮತ್ತೆ ಅಸ್ವಸ್ಥಳಾಗಿದ್ದು, ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾಳೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More