Author: admin

ಯೋಗ ಗುರು ಬಾಬಾ ರಾಮ್ದೇವ್ ಅವರ ಪತಂಜಲಿ ಆಯುರ್ವೇದದ ದಾರಿತಪ್ಪಿಸುವ ಜಾಹೀರಾತಿಗೆ ಸಂಬಂಧಿಸಿದ ಪ್ರಕರಣವನ್ನು ಇಂದು ಸುಪ್ರೀಂ ಕೋರ್ಟ್ ನಲ್ಲಿ ಮತ್ತೆ ವಿಚಾರಣೆ ನಡೆಸಿತು. ನವೆಂಬರ್ ನಲ್ಲಿ ನೀಡಿದ್ದ ಆದೇಶವನ್ನು ಉಲ್ಲಂಘಿಸಿದ್ದಕ್ಕಾಗಿ ಅದರ ವ್ಯವಸ್ಥಾಪಕ ನಿರ್ದೇಶಕ ಆಚಾರ್ಯ ಬಾಲಕೃಷ್ಣ ಅವರಿಗೆ ನ್ಯಾಯಾಂಗ ನಿಂದನೆ ನೋಟಿಸ್ ಜಾರಿ ಮಾಡಿದೆ. ನ್ಯಾಯಮೂರ್ತಿಗಳಾದ ಅಹ್ಸಾನುದ್ದೀನ್ ಅಮಾನುಲ್ಲಾ ಮತ್ತು ಪ್ರಶಾಂತ್ ಕುಮಾರ್ ಮಿಶ್ರಾ ಅವರ ವಿಭಾಗೀಯ ಪೀಠವು ಈ ಪ್ರಕರಣದ ವಿಚಾರಣೆ ನಡೆಸಿತು. ಈ ವೇಳೆ, ನ್ಯಾಯಮೂರ್ತಿ ಅಮಾನುಲ್ಲಾ ಕೋಪಗೊಂಡು “ನ್ಯಾಯಾಲಯದ ಆದೇಶದ ಹೊರತಾಗಿಯೂ ದಾರಿತಪ್ಪಿಸುವ ಜಾಹೀರಾತನ್ನು ಪ್ರಕಟಿಸಲು ನಿಮಗೆ ಹೇಗೆ ಧೈರ್ಯವಾಯಿತು” ಎಂದು ಪತಂಜಲಿ ಆಯುರ್ವೇದವನ್ನು ಪ್ರತಿನಿಧಿಸುವ ವಕೀಲರನ್ನು ಪ್ರಶ್ನಿಸಿದ್ದಾರೆ. ಡ್ರಗ್ಸ್ ಮತ್ತು ಮ್ಯಾಜಿಕ್ ರೆಮಿಡೀಸ್(ಆಕ್ಷೇಪಾರ್ಹ ಜಾಹೀರಾತುಗಳು) ಕಾಯಿದೆಯಲ್ಲಿ ನಿರ್ದಿಷ್ಟಪಡಿಸಿದ ಕಾಯಿಲೆಗಳಿಗೆ ಚಿಕಿತ್ಸೆ ನೀಡಲು ಉದ್ದೇಶಿಸಿರುವ ಜಾಹೀರಾತು ಅಥವಾ ಔಷಧೀಯ ಉತ್ಪನ್ನಗಳ ಮಾರುಕಟ್ಟೆಯಿಂದ ಪತಂಜಲಿಯನ್ನು ನಿಷೇಧಿಸಲಾಗಿದೆ. ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ವಿಭಾಗಿಯ ಪೀಠವು “ಸರ್ಕಾರ ಕಣ್ಣು ಮುಚ್ಚಿ ಕುಳಿತಿದೆ. ಇದು ಬಹಳ ದುರದೃಷ್ಟಕರ ಸಂಗತಿ.…

Read More

ಮಣಿಪುರದಲ್ಲಿ ಅಪಹರಣಕ್ಕೊಳಗಾಗಿದ್ದ ಪೊಲೀಸ್ ಅಧಿಕಾರಿಯನ್ನು ಸೇನೆ ರಕ್ಷಿಸಿದೆ. ಸುಮಾರು 200 ಶಸ್ತ್ರಸಜ್ಜಿತ ದಾಳಿಕೋರರು ಪೊಲೀಸ್ ಅಧಿಕಾರಿಯನ್ನು ಅಪಹರಿಸಿದ್ದಾರೆ. ಇಂಫಾಲ್ ಪಶ್ಚಿಮ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಅಮಿತ್ ಸಿಂಘಿನೆನ್ ಅವರನ್ನು ಅಪಹರಿಸಲಾಗಿದೆ. ಪೊಲೀಸ್ ಅಧಿಕಾರಿಯ ಮನೆಯನ್ನು ಲೂಟಿ ಮಾಡಲಾಗಿದೆ ಮತ್ತು ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ. ಮಾಹಿತಿಯ ನಂತರ, ಸೇನೆಯು ನಡೆಸಿದ ಕಾರ್ಯಾಚರಣೆಯ ಮೂಲಕ ಅಧಿಕಾರಿಯನ್ನು ರಕ್ಷಿಸಲಾಯಿತು. ಘಟನೆಯ ನಂತರ, ಇಂಫಾಲ್‌ ನಲ್ಲಿ ಹೆಚ್ಚಿನ ಪಡೆಗಳನ್ನು ನಿಯೋಜಿಸಲಾಗಿದೆ. ಹಿಂಸಾಚಾರದ ಹಿಂದೆ ಮೈತಿ ಬಣದ ಕೈವಾಡವಿದೆ ಎಂದು ಆರೋಪಿಸಲಾಗಿದೆ. ಅಮಿತ್ ಸಿಂಗ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಆರೋಗ್ಯ ಸ್ಥಿತಿ ತೃಪ್ತಿಕರವಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ತುಮಕೂರು: ”ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಕೂಗಿದ್ದಾರೆಂಬ ಆರೋಪ ಪ್ರಕರಣದ ಹಿನ್ನೆಲೆಯಲ್ಲಿ ತುಮಕೂರು ನಗರದಲ್ಲಿ ಬಿಜೆಪಿ ಪಕ್ಷದ ವತಿಯಿಂದ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಯಿತು. ನಗರದ ಭದ್ರಮ್ಮ ಚೌಲ್ಟ್ರಿ ವೃತ್ತದಲ್ಲಿರುವಂತಹ ಕಾಂಗ್ರೆಸ್ ಕಚೇರಿ ಎದುರು ಜಮಾಯಿಸಿದ ಬಿಜೆಪಿ ಕಾರ್ಯಕರ್ತರು ಸಂಸದ ಜಿ ಎಸ್ ಬಸವರಾಜ್ ನೇತೃತ್ವದಲ್ಲಿ ಸರ್ಕಾರದ ವಿರುದ್ಧ ಹಾಗೂ ದೇಶದ್ರೋಹಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಾಯಿತು. ಕಾಂಗ್ರೆಸ್ ಕಚೇರಿ ಎದುರು ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯಬಾರದು ಎಂಬ ಹಿನ್ನೆಲೆಯಲ್ಲಿ ಪೊಲೀಸರು ಮುಂಜಾಗ್ರತಾ ಕ್ರಮವಾಗಿ ಕಾಂಗ್ರೆಸ್ ಕಚೇರಿ ಸುತ್ತಲೂ ಬಿಗಿ ಪೊಲೀಸ್ ಬಂದೋಬಸ್ ವ್ಯವಸ್ಥೆ ಮಾಡಿದ್ದರು. ಇನ್ನು ಕೆಲ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಕಚೇರಿ ಒಳಗೆ ನುಗ್ಗಲು ಯತ್ನಿಸಿದ ಸಂದರ್ಭದಲ್ಲಿ ಪೊಲೀಸರು ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಭಾರಿ ಮಾತಿನ ಚಕಮಕಿ ನಡೆಯಿತು. ಸುಮಾರು 50ಕ್ಕೂ ಹೆಚ್ಚು ಮಂದಿ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿ ವಶಕ್ಕೆ ತೆಗೆದುಕೊಂಡರು ಅಲ್ಲದೆ ಪರಿಸ್ಥಿತಿಯನ್ನು ಹತೋಟಿಗೆ ತರಲಾಯಿತು. ಈ ಸಂದರ್ಭದಲ್ಲಿ ಡಿವೈಎಸ್ಪಿ ಚಂದ್ರಶೇಖರ್…

Read More

ಬೀದರ್: ಬೀದರ್‌ ಜಿಲ್ಲೆಯ ಭಾಲ್ಕಿ ತಾಲೂಕಿನ ಸೇವಾನಗರ ತಾಂಡಾ ಬಳಿ ಟಾಟಾ ಎಸ್‌ ಹಾಗೂ ಟ್ರಕ್‌ ನಡುವೆ ಡಿಕ್ಕಿ ಸಂಭವಿಸಿದ್ದು ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದು , ಐವರು ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಮೃತರನ್ನ ದಸ್ತಗಿರಿ ದಾವಲ್‌ ಸಾಬ್ (36), ರಸೀದಾ ಶೇಕ್‌( 41), ಚಾಲಕ ವಲಿ( 31) , ಅಮಾಮ್‌ ಶೇಕ್‌( 51) ಎಂದು ಗುರುತಿಸಲಾಗಿದೆ. ಐವರು ಗಾಯಾಳುಗಳನ್ನು ಬೀದರ್ ನ ಬ್ರಿಮ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸಂತ್ರಸ್ತರು ಮಹಾರಾಷ್ಟ್ರದ ಉಗ್ಗೀರ್‌ ಮೂಲದವರು ಎಂದು ತಿಳಿದುಬಂದಿದೆ. ಒಟ್ಟೂ 14 ಜನರು ಉಗ್ಗೀರ್‌ ನಿಂದ ಹೈದ್ರಾಬಾದ್‌ ಗೆ ತೆರಳುತ್ತಿದ್ದಾಗ ಟ್ರಕ್‌ ಹಾಗೂ ಟಾಟಾ ಎಸ್‌ ನಡುವೆ ಮುಖಾಮುಖಿ ಡಿಕ್ಕಿ ಸಂಭಸಿದೆ. ದನ್ನೂರು ಪೊಲೀಸ್‌ ಠಾಣೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಕೈಗೊಂಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ರಾಜೀವ್ ಗಾಂಧಿ ಹತ್ಯೆ ಪ್ರಕರಣದಲ್ಲಿ ಜೈಲಿನಿಂದ ಬಿಡುಗಡೆಯಾಗಿದ್ದ ಶಾಂತನ್ ನಿಧನರಾದರು. ಅವರಿಗೆ 55 ವರ್ಷ ವಯಸ್ಸಾಗಿತ್ತು. ಅವರು ಹೃದಯಾಘಾತದಿಂದ ಚೆನ್ನೈನ ರಾಜೀವ್ ಗಾಂಧಿ ಆಸ್ಪತ್ರೆಯಲ್ಲಿ ನಿಧನರಾದರು. ಶಾಂತನ್‌ ಗೆ ಶ್ರೀಲಂಕಾಕ್ಕೆ ಹೋಗಲು ಕೇಂದ್ರವು ಇತ್ತೀಚೆಗೆ ನಿರ್ಗಮನ ಪರವಾನಗಿಯನ್ನು ನೀಡಿತ್ತು. ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಏಳು ಮಂದಿ ಆರೋಪಿಗಳ ಪೈಕಿ ಶಾಂತನ್ ಅಲಿಯಾಸ್ ಸುತೇಂದ್ರರಾಜ, ಶಿಕ್ಷೆ ಪೂರ್ಣಗೊಳ್ಳುವ ಮುನ್ನವೇ ಬಿಡುಗಡೆಗೊಂಡಿದ್ದರು. ಶಾಂತನ್ ತನ್ನ ವಯಸ್ಸಾದ ತಾಯಿಯನ್ನು ಭೇಟಿ ಮಾಡಲು ಶ್ರೀಲಂಕಾಕ್ಕೆ ಭೇಟಿ ನೀಡಲು ಮತ್ತು ಅಲ್ಲಿಯೇ ಉಳಿಯಲು ಶ್ರೀಲಂಕಾ ಅಧ್ಯಕ್ಷರ ಸಹಾಯವನ್ನು ಈ ಹಿಂದೆ ಕೋರಿದ್ದರು. ಮೇ 2022 ರಲ್ಲಿ, ಸುಪ್ರೀಂ ಕೋರ್ಟ್ ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಏಳು ಆರೋಪಿಗಳನ್ನು ಅವರ ಶಿಕ್ಷೆಯ ಅವಧಿ ಮುಗಿಯುವ ಮೊದಲು ಬಿಡುಗಡೆ ಮಾಡಿತು. ಜೈಲಿನಿಂದ ಹೊರಬಂದ ಬಳಿಕ ಶಾಂತನ್ ತಿರುಚ್ಚಿಯ ವಿಶೇಷ ಶಿಬಿರದಲ್ಲಿ ತಂಗಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್…

Read More

ಭಾರತದ ಮಾನವ ಸಹಿತ ಬಾಹ್ಯಾಕಾಶ ಮಿಷನ್‌ ಗಗನಯಾನಕ್ಕೆ ಆಯ್ಕೆಯಾದ ನಾಲ್ಕು ಗಗನಯಾತ್ರಿಗಳಿಗೆ ವಿಂಗ್‌ ಗಳನ್ನು ಪ್ರಧಾನಿ ನರೇಂದ್ರ ಮೋದಿ  ತಿರುವನಂತಪುರಂನಲ್ಲಿರುವ ವಿಕ್ರಂ ಸಾರಾಭಾಯಿ ಬಾಹ್ಯಾಕಾಶ ಕೇಂದ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಘೋಷಿಸಲಾಯಿತು. ಈ ಬಾಹ್ಯಾಕಾಶ ಮಿಷನ್‌ ಗೆ ಆಯ್ಕೆಯಾಗಿರುವ ಗಗನಯಾತ್ರಿಗಳ ಹೆಸರುಗಳು ಹೀಗಿದ್ದು, ಗ್ರೂಪ್‌ ಕ್ಯಾಪ್ಟನ್‌ ಪ್ರಶಾಂತ್‌ ಬಾಲಕೃಷ್ಣನ್ ನಾಯರ್‌, ಗ್ರೂಪ್‌ ಕ್ಯಾಪ್ಟನ್‌ ಅಜಿತ್‌ ಕೃಷ್ಣನ್‌, ಗ್ರೂಪ್‌ ಕ್ಯಾಪ್ಟನ್‌ ಅಂಗದ್‌ ಪ್ರತಾಪ್‌ ಮತ್ತು ವಿಂಗ್‌ ಕಮಾಂಡರ್‌ ಶುಭಾಂಶು ಶುಕ್ಲಾ ಎಂಬುದಾಗಿದೆ. ಈ ನಾಲ್ವರನ್ನೂ ಪ್ರಧಾನಿ ನರೇಂದ್ರ ಮೋದಿ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಬೇಸಗೆಯ ಧಗೆಗೆ ಅನೇಕರು ಕಲ್ಲಂಗಡಿ ಹಣ್ಣಿನ ಮೊರೆಹೋಗುತ್ತಿದ್ದಾರೆ. ಕೆಜಿ ಗಟ್ಟಲೆ ಕೊಂಡು ಮನೆಗೆ ತರುತ್ತಾರೆ. ಅಂತೆಯೇ ಹೀಗೆ ಕೊಂಡುಕೊಂಡು ಬಂದು ಮನೆಯ ಅಡುಗೆ ಕೋಣೆಯಲ್ಲಿಟ್ಟ ಕಲ್ಲಂಗಡಿ ಹಣ್ಣೊಂದು ಸ್ಫೋಟವಾಗಿ ಅಕ್ಕಪಕ್ಕದವರು ಬೆಚ್ಚಿಬಿದ್ದ ಘಟನೆಯೊಂದು ಬೆಳಕಿಗೆ ಬಂದಿದೆ. ಕೇರಳದ ಪೊನ್ನನಿಯ ನಸ್ರುದ್ದೀನ್ ಎಂಬುವರ ಮನೆಯ ಅಡುಗೆ ಕೋಣೆಯಲ್ಲಿ ಸೋಮವಾರ ಬೆಳಗ್ಗೆ ಇಂತಹ ಒಂದು ವಿಚಿತ್ರ ಘಟನೆ ನಡೆದಿದೆ. ಅಂಗಡಿಯಿಂದ ಖರೀದಿಸಿ ಮನೆಗೆ ತಂದ ಕಲ್ಲಂಗಡಿ ಹಣ್ಣು ಸ್ಫೋಟಿಸಿದೆ. ಅಂದಹಾಗೆ ಹತ್ತಿರದ ಎಂಇಎಸ್‌ ಕಾಲೇಜಿನಿಂದ ಕಲ್ಲಂಗಡಿ ಹಣ್ಣನ್ನು ಖರೀದಿಸಿ ತರಲಾಗಿತ್ತು. ಅಡುಗೆ ಮನೆಯಲ್ಲಿ ಸ್ಫೋಟಗೊಂಡ ಶಬ್ಧ ಕೇಳಿ ಬೆಚ್ಚಿಬಿದ್ದ ಅಕ್ಕಪಕ್ಕದ ಮನೆಯವರು ಓಡಿ ಬಂದು ನೋಡಲು, ನೆಲದ ಮೇಲೆ ಅಲ್ಲಲ್ಲಿ ಕೊಳಕು ವಾಸನೆಯೊಂದಿಗೆ ಕಲ್ಲಂಗಡಿ ಹಣ್ಣು ಚಿಧ್ರವಾಗಿ ಬಿದ್ದಿತ್ತು. ಮಾಹಿತಿ ತಿಳಿದು ಆರೋಗ್ಯ ಇಲಾಖೆ ಮತ್ತು ಮುನ್ಸಿಪಾಲಿಟಿಯ ಆಹಾರ ಸುರಕ್ಷತಾ ಅಧಿಕಾರಿಗಳು ಮನೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ವಿಚಾರಣೆ ನಡೆಸಿದ ಬಳಿಕ ಹಣ್ಣನ್ನು ಖರೀದಿ ಮಾಡಿದ ಅಂಗಡಿಗೆ ತೆರಳಿ ಹಣ್ಣಿನ ಸ್ಯಾಂಪಲ್ ಪಡೆದು…

Read More

ಆಧಾರ್​ ಕಾರ್ಡ್​, ಪಡಿತರ ಚೀಟಿ, ಪಾವತಿ, ದಾಖಲಾತಿ ನೋಂದಣಿ, ಅರ್ಜಿ, ಬ್ಯಾಂಕ್ ವಿವರ ಹೀಗೆ ಹತ್ತು ಹಲವಾರು ಕೆಲಸಗಳು ಈಗ ನಡೆಯುತ್ತಿರುವುದು ಆನ್​ ಲೈನ್​ ನಲ್ಲಿ ಮಾತ್ರ. ಆನ್​ ಲೈನ್​ ವಹಿವಾಟುಗಳು ಬಹುಸಂಖ್ಯೆಯಲ್ಲಿ ಚಾಲ್ತಿಯಲ್ಲಿರುವುದರಿಂದ ಈ ವ್ಯವಸ್ಥೆ ಈಗ ಎಲ್ಲಾ ನಾಗರಿಕರಿಗೂ ಅನುಕೂಲವೇ ಆಗಿದೆ. ಆದರೆ ವಿದ್ಯೆ ಇರುವವರಿಗೆ ಇದು ಹೆಚ್ಚು ಅನುಕೂವಾಗುತ್ತಿದೆ. ಪಾಪ ಗ್ರಾಮೀಣ ಭಾಗದಲ್ಲಿ ವಯಸ್ಸಾದ ವೃದ್ಧರೂ ಏನೂ ತಿಳಿಯದೇ ತೊಂದರೆಗೀಡಾಗುತ್ತಿದ್ದಾರೆ. ಇದರ ಬಗ್ಗೆ ಇಂದಿಗೂ ಹೆಚ್ಚಿನ ಮಾಹಿತಿ ಇಲ್ಲ. ಇದ್ದರೂ ಅದನ್ನು ಹೇಗೆ ಅರ್ಥೈಸಿಕೊಳ್ಳಬೇಕು ಎಂಬುದು ತಿಳಿಯುತ್ತಿಲ್ಲ. ಓದಲು, ಬರೆಯಲು ಬಾರದ ವೃದ್ಧರು ನಾಡಕಛೇರಿ, ಆಧಾರ್​ ಕಛೇರಿಗಳಿಗೆ ಹೋದರೆ ಭಾರಿ ಕಷ್ಟವನ್ನೇ ಎದುರಿಸಬೇಕಾಗುತ್ತದೆ. ಇದೀಗ ಇಲ್ಲೊಬ್ಬ ಹಿರಿಯರು ತಮ್ಮ ಆಧಾರ್ ಲಿಂಕ್ ಆಗಿರುವ ಫೋನ್ ತೆಗೆದುಕೊಂಡು ಬನ್ನಿ ಎಂದರೆ, ಮನೆಯಲ್ಲಿದ್ದ ಲ್ಯಾಂಡ್ ಲೈನ್‌ ನ್ನೇ ತೆಗೆದುಕೊಂಡು ಬಂದಿದ್ದಾರೆ..! ಆಧಾರ್ ಕೇಂದ್ರದಲ್ಲಿ ಕೆಲಸ ಮಾಡುತ್ತಿದ್ದ ಯುವತಿಯೊಬ್ಬಳು ಅಜ್ಜನಿಗೆ ನೀವು ಬರುವಾಗ ಒಟಿಪಿಗಾಗಿ ನಿಮ್ಮ ಆಧಾರ್ ಲಿಂಕ್ ಸಂಖ್ಯೆ ನೋಂದಣಿಯಾಗಿರುವ…

Read More

ಕರ್ನಾಟಕ ಮಾಜಿ ಸಿಂಗಂ ಮಾಜಿ ಐಪಿಎಸ್ ಅಧಿಕಾರಿ, ತಮಿಳುನಾಡಿನ ಬಿಜೆಪಿ ನಾಯಕ ಅಣ್ಣಾಮಲೈ ವಿರುದ್ಧ ತಮಿಳುನಾಡಿನಲ್ಲಿ ದ್ವೇಷ ಭಾಷಣಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ ಕ್ರಿಮಿನಲ್ ಪ್ರಕರಣಕ್ಕೆ ಸುಪ್ರೀಂಕೋರ್ಟ್ ತಡೆ ನೀಡಿದೆ. ದೀಪಾವಳಿ ಸಮಯದಲ್ಲಿ ಪಟಾಕಿ ನಿಷೇಧಿಸುವಂತೆ ಕೋರಿ ಸುಪ್ರೀಂಕೋರ್ಟ್‌ನಲ್ಲಿ ಸಲ್ಲಿಸಲಾಗಿರುವ ಅರ್ಜಿಯ ಹಿಂದೆ ಕ್ರಿಶ್ಚಿಯನ್ ಮಿಷನರಿಗಳಿಗೆ ಸೇರಿದ ಎನ್‌ಜಿಒಗಳ ಕೈವಾಡ ಇದೆ ಎಂದು ಅಣ್ಣಾಮಲೈ ಸಂದರ್ಶನವೊಂದರಲ್ಲಿ ಆರೋಪಿಸಿದ್ದರು. ಈ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿತ್ತು ಎನ್ನಲಾಗಿದೆ. ಸೇಲಂ ಮೂಲದ ಸಾಮಾಜಿಕ ಕಾರ್ಯಕರ್ತ ವಿ. ಪಿಯೂಷ್ ಅಣ್ಣಾಮಲೈ ವಿರುದ್ಧ ಈ ಪ್ರಕರಣ ದಾಖಲಿಸಿದ್ದರು. ಈ ಪ್ರಕರಣವನ್ನು ವಜಾ ಮಾಡುವಂತೆ ಮದ್ರಾಸ್ ಹೈಕೋರ್ಟ್‌ಗೆ ಅಣ್ಣಾಮಲೈ ಮೇಲ್ಮನವಿ ಸಲ್ಲಿಸಿದ್ದರು. ಆದರೆ ಮದ್ರಾಸ್ ಹೈಕೋರ್ಟ್ ಈ ಅರ್ಜಿಯನ್ನು ತಿರಸ್ಕರಿಸಿತ್ತು. ಈ ಹಿನ್ನೆಲೆಯಲ್ಲಿ ಅಣ್ಣಾಮಲೈ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಅಣ್ಣಾಮಲೈ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಜಸ್ಟೀಸ್ ಸಂಜೀವ ಖನ್ನಾ ಅವರಿದ್ದ ಏಕಸದಸ್ಯ ಪೀಠ ಪ್ರಕರಣಕ್ಕೆ ತಡೆ ನೀಡಿ ದೂರು ದಾಖಲಿಸಿದ ವಿ. ಪಿಯೂಷ್ ಗೆ ನೋಟಿಸ್ ನೀಡಿದ್ದಾರೆ. ಇವರ ಪರ…

Read More

ತುರುವೇಕೆರೆ: ತಾಲೂಕಿನ ಮಾಯಸಂದ್ರ ಹೋಬಳಿ ಮಾಯಸಂದ್ರ ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷರಾಗಿ  “ಪೂರ್ಣಿಮ ವಾಸು” ರವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಹಿಂದೆ ಅಧ್ಯಕ್ಷರಾಗಿದ್ದ ಮಂಜುನಾಥ್ ಎಂ.ಜಿ. ರವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಮಂಗಳವಾರ ಚುನಾವಣೆ ನಡೆಯಿತು. 15 ಸದಸ್ಯ ಬಲವುಳ್ಳ ಪಂಚಾಯತಿಯಲ್ಲಿ, ಪೂರ್ಣಿಮ ವಾಸು ಮಾತ್ರ ನಾಮಪತ್ರ ಸಲ್ಲಿಸಿದ್ದರಿಂದ ಚುನಾವಣಾಧಿಕಾರಿಯಾದ ತಹಶೀಲ್ದಾರ್ ವೈ.ಎಂ. ರೇಣುಕುಮಾರ್ ರವರು ಅವಿರೋಧ ಆಯ್ಕೆ ಎಂದು ಘೋಷಿಸಿದರು. ಈ ವೇಳೆ ಪತ್ರಕರ್ತರೊಂದಿಗೆ ನೂತನ ಅಧ್ಯಕ್ಷೆ ಪೂರ್ಣಿಮ ವಾಸುರವರು ಮಾತನಾಡಿ, ಅವಿರೋಧವಾಗಿ ಆಯ್ಕೆಯಾಗಲು ಸಹಕರಿಸಿದ ಸರ್ವ‌ ಸದಸ್ಯರಿಗೂ ಎಲ್ಲರಿಗೂ ಧನ್ಯವಾದಗಳನ್ನು ಅರ್ಪಿಸುತ್ತೇನೆ. ಮತ್ತು ನಮ್ಮ ಪಂಚಾಯತಿ ವ್ಯಾಪ್ತಿಯಲ್ಲಿನ ಎಲ್ಲಾ ಹಳ್ಳಿಗಳಿಗೂ ಮೂಲಸೌಲಭ್ಯ ಒದಗಿಸುವ ಕಾರ್ಯದಲ್ಲಿ ಪ್ರವೃತ್ತರಾಗಿರುತ್ತೇನೆ. ಹಾಗೂ ನಮ್ಮ  ಪಂಚಾಯಿತಿ ವ್ಯಾಪ್ತಿಯಲ್ಲಿ‌ನ ಅಭಿವೃದ್ಧಿಗಾಗಿ ಒತ್ತು ನೀಡುವುದರ ಮೂಲಕ, ಸಾರ್ವಜನಿಕರ ಸಮಸ್ಯೆಗೆ ಸದಾ ಸ್ಪಂದಿಸುವುದಾಗಿ ತಿಳಿಸಿದರು. ನೂತನ ಅಧ್ಯಕ್ಷರ ಆಯ್ಕೆಯ ಘೋಷಣೆಯಾಗುತ್ತಿದ್ದಂತೆ ತಮ್ಮ ಬೆಂಬಲಿಗರು, ಅಭಿಮಾನಿಗಳು, ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು ಹಾಗೂ ‌ ಸ್ಥಳೀಯ ಮುಖಂಡರುಗಳು, ಗ್ರಾ.ಪಂ.…

Read More