Author: admin

ಬೆಂಗಳೂರು: ಶಾಸಕರಿಗೆ ಆಮಿಷ ಒಡ್ಡುವುದು ಜೆಡಿಎಸ್‌ ಸಂಸ್ಕೃತಿಯಲ್ಲ, ಕಾಂಗ್ರೆಸ್‌ ಸಂಸ್ಕೃತಿಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್‌.ಡಿ. ಕುಮಾರಸ್ವಾಮಿ  ಹರಿಹಾಯ್ದರು. ಮಂಗಳವಾರ ನಡೆದ ರಾಜ್ಯಸಭಾ ಚುನಾವಣೆಯ ಮತದಾನದ ವೇಳೆ ವಿಧಾನಸೌಧದ ಬಳಿ ಮಾತನಾಡಿದ ಅವರು, ಕಾಂಗ್ರೆಸ್‌ ಪಕ್ಷದವರು ನಮ್ಮ ಶಾಸಕರನ್ನು ಸೆಳೆಯಲು ಇನ್ನಿಲ್ಲದಂತೆ ಪ್ರಯತ್ನಿಸುತ್ತಿದ್ದಾರ ಎಂದು ಆರೋಪಿಸಿದರು. ಕಳೆದ ಹತ್ತು ತಿಂಗಳಿಂದ ನಮ್ಮ ಶಾಸಕರಿಗೆ ಕಾಂಗ್ರೆಸ್‌ ನವರು ಗಾಳ ಹಾಕುತ್ತಲೇ ಇದ್ದಾರೆ. ಕರೆಮ್ಮ ಮತ್ತು ಶರಣಗೌಡ ಕಾಂಗ್ರೆಸ್‌ ಸೇರುತ್ತಾರೆ ಎಂದು ಸುದ್ದಿಯನ್ನೂ ಹಬ್ಬಿಸಿದ್ದರು. ಆದರೆ ನಮ್ಮ 19 ಮಂದಿ ಶಾಸಕರೂ ನಮ್ಮ ಜೊತೆಗಿದ್ದಾರೆ ಎಂದು ಕುಮಾರಸ್ವಾಮಿ ಹೇಳಿದರು. ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಬೆಳ್ಳಿ ಕಪ್‌ ಹಂಚಿ ಗೆದ್ದಿದ್ದಾರೆ. ಇದರ ಬಗ್ಗೆ ನನ್ನ ಬಳಿ ಸಾಕ್ಷ್ಯಾಧಾರಗಳಿವೆ. ಈ ಬಾರಿ ನಮಗೆ ಸೋಲು ಗೆಲುವು ಮುಖ್ಯವಲ್ಲ ಎಂದು ಹೆಚ್‌ಡಿಕೆ ಹೇಳಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಬೆಂಗಳೂರು: ನಮ್ಮ ಪಕ್ಷದ ಮೂವರೂ ಅಭ್ಯರ್ಥಿಗಳೂ ಜಯ ಸಾಧಿಸಲಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು. ಮಂಗಳವಾರ ರಾಜ್ಯಸಭಾ ಚುನಾವಣೆಯ ಮತದಾನದ ವೇಳೆ ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಂಖ್ಯಾಬಲದ ಪ್ರಕಾರ ಅಗತ್ಯ ಮತಗಳೇ ಇಲ್ಲದೇ ಬಿಜೆಪಿ – ಜೆಡಿಎಸ್‌ ಮೈತ್ರಿ ಅಭ್ಯರ್ಥಿ ಗೆಲ್ಲಲು ಹೇಗೆ ಸಾಧ್ಯ ಎಂದರು. ಆತ್ಮಸಾಕ್ಷಿಗೆ ಮತಹಾಕಿ ಎಂದು ಪ್ರತಿಪಕ್ಷದವರ ಮನವಿಗೆ ಪ್ರತಿಕ್ರಿಯಿಸಿದ ಸಿಎಂ ಆತ್ಮಸಾಕ್ಷಿ ಮತ ಎಂದರೇನು ಎಂದು ಪ್ರಶ್ನಿಸಿದರು. ಎಲ್ಲರೂ ಗೆಲ್ಲಬೇಕೆಂಬ ಉದ್ದೇಶದಿಂದ ಅಭ್ಯರ್ಥಿಗಳನ್ನು ಹಾಕುತ್ತಾರೆ. ಆದರೆ ಜೆಡಿಎಸ್‌ ಸೋಲುವ ಉದ್ದೇಶದಿಂದ ಅಭ್ಯರ್ಥಿಯನ್ನು ಹಾಕಿದೆ ಎಂದು ನುಡಿದ ಸಿಎಂ ಜೆಡಿಎಸ್‌ ಅಭ್ಯರ್ಥಿ ಗೆಲ್ಲಲು ಸಾಧ್ಯವೇ ಇಲ್ಲ. ಆದರೂ ಸಹ ಅವರು ಅಭ್ಯರ್ಥಿಯನ್ನು ನಿಲ್ಲಿಸಿರುವ ಉದ್ದೇಶವೇನು ಎಂದು ಟೀಕಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಅವಕಾಡೊ ಎಣ್ಣೆಯಲ್ಲಿದೆ ಹಲವಾರು ಆರೋಗ್ಯ ಪ್ರಯೋಜನಗಳು: ಅವಕಾಡೊ ಎಣ್ಣೆಯು ಅನೇಕ ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ. ಈ ಎಣ್ಣೆಯನ್ನು ಸಾಮಾನ್ಯವಾಗಿ ಅದರ ತಿರುಳಿನಿಂದ ತಯಾರಿಸಲಾಗುತ್ತದೆ. ಇದನ್ನು ಹೆಚ್ಚಾಗಿ ದಕ್ಷಿಣ ಮಧ್ಯ ಮೆಕ್ಸಿಕೋದಲ್ಲಿ ಬೆಳೆಯಲಾಗುತ್ತದೆ. ಇದರಲ್ಲಿ ಒಳಗೊಂಡಿರುವ ಮೊನೊಸಾಚುರೇಟೆಡ್ ಕೊಬ್ಬು ಆಲಿವ್ ಎಣ್ಣೆಯಂತೆ ಕಾರ್ಯನಿರ್ವಹಿಸುತ್ತದೆ. ಇದರಲ್ಲಿ ಅಗತ್ಯವಾದ ಕೊಬ್ಬಿನಾಮ್ಲಗಳು, ವಿಟಮಿನ್ ಎ, ಡಿ, ಇ ಇವೆ, ಇದು ಹೃದಯದ ಆರೋಗ್ಯವನ್ನು ಕಾಪಾಡುತ್ತದೆ. ತೂಕ ನಿಯಂತ್ರಣದಲ್ಲಿ ಸಹಾಯ ಮಾಡುತ್ತದೆ. ಕಣ್ಣು ಮತ್ತು ಚರ್ಮದ ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು. ಬೇಸಿಗೆಯಲ್ಲಿ ಪ್ರತಿದಿನ ಎಳನೀರು ಆರೋಗ್ಯಕ್ಕೆ ಉತ್ತಮ: ಬೇಸಿಗೆ ಕಾಲದ ಸಮಯದಲ್ಲಿ ಸರಿಯಾದ ಆರೋಗ್ಯ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಬೇಕು. ಇಲ್ಲದಿದ್ದರೆ, ನೀವು ಆರೋಗ್ಯ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಅದಕ್ಕಾಗಿಯೇ ಈ ಸಮಯದಲ್ಲಿ ಕೆಲವು ವಿಶೇಷ ಆಹಾರಗಳನ್ನು ತಿನ್ನಲು ತಜ್ಞರು ಹೇಳುತ್ತಾರೆ. ಪ್ರತಿದಿನ ಎಳನೀರನ್ನು ಕುಡಿಯಿರಿ ಇದಲ್ಲದೆ, ಮೊಸರು ಸಹ ಆಹಾರದ ಭಾಗವಾಗಿರಬೇಕು ಎಂದು ಹೇಳಲಾಗುತ್ತದೆ. ಈ ಸಮಯದಲ್ಲಿ ಸಾಧ್ಯವಾದಷ್ಟು ಬಿಸಿ ಆಹಾರವನ್ನು ತ್ಯಜಿಸುವುದು ಉತ್ತಮ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು…

Read More

ಬೆಂಗಳೂರು: ಎಸ್‌.ಟಿ. ಸೋಮಶೇಖರ್‌ ಅವರು ಯಾರಿಗೆ ಮತ ಹಾಕಿದಾರೋ ನನಗೆ ಗೊತ್ತಿಲ್ಲ. ಅದನ್ನು ಬಿಜೆಪಿಯವರೇ ಖಚಿತ ಪಡಿಸಬೇಕು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಹೇಳಿದ್ದಾರೆ. ರಾಜ್ಯಸಭಾ ಚುನಾವಣೆಯ ಮತದಾನದ ಬಳಿಕ ಮಾಧ್ಯಮಗಳೊಂದಿಗೆ ಪ್ರತಿಕ್ರಿಯಿಸಿದ ಅವರು, ಬಿಜೆಪಿಯವರೇ ಹೇಳಿದ್ದಂತೆ ಅವರು ಆತ್ಮಸಾಕ್ಷಿಗೆ ಮತ ಹಾಕಿರಬಹುದು ಎಂದು ವ್ಯಂಗ್ಯವಾಡಿದರು. ಜೆಡಿಎಸ್‌ ಪಕ್ಷದಿಂದ ಮತ್ತೊಂದು ಅಭ್ಯರ್ಥಿಯನ್ನು ಹಾಕಿಸಿದ್ದೇ ಬಿಜೆಪಿಯವರು. ಅವರ ಅಭ್ಯರ್ಥಿ ಗೆಲ್ಲಲು 48 ಮತ ಸಾಕಾಗಿತ್ತು. ಈಗ ಕುಪೇಂದ್ರ ರೆಡ್ಡಿಯವರನ್ನು ಕರೆತಂದ ಮೇಲೆ ಅವರನ್ನು ಗೆಲ್ಲಿಸುವ ಜವಾಬ್ದಾರಿ ಬಿಜೆಪಿಯವರದ್ದೇ ಆಗಿದೆ ಎಂದರು. ಎಸ್‌.ಟಿ. ಸೋಮಶೇಖರ್‌ ವಿರುದ್ದ ಬಿಜೆಪಿಯವರು ಕಾನೂನು ಕ್ರಮ ಕೈಗೊಳ್ಳಲಿದ್ದು, ಅವರಿಗೆ ನೀವು ನೆರವು ನೀಡುತ್ತೀರಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಡಿ.ಕೆ. ಶಿವಕುಮಾರ್‌, ಮುಂದೆ ನಡೆಯುವ ಬೆಳವಣಿಗೆಗಳನ್ನು ನೋಡಿ ಆ ಕುರಿತು ನಿರ್ಧಾರ ಕೈಗೊಳ್ಳಲಾಗುವುದು ಎಂದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಚಿಕ್ಕಮಗಳೂರು: ಅವಕಾಶವಾದಿಗಳನ್ನು ಬೆಂಬಲಿಸುವುದು ಅನೈತಿಕ ರಾಜಕಾರಣಕ್ಕೆ ವೇದಿಕೆ ಸೃಷ್ಟಿಸಿದಂತೆ. ರಾಜಕಾರಣದಲ್ಲಿ ವ್ಯಭೀಚಾರ ಮಾಡುವವರು ಎಲ್ಲಾ ಕಡೆ ಸಲ್ಲುತ್ತಾರೆ ಎಂದು ಮಾಜಿ ಶಾಸಕ ಸಿ.ಟಿ. ರವಿ ಹೇಳಿದರು. ರಾಜ್ಯಸಭೆ ಚುನಾವಣೆಯಲ್ಲಿ, ಎಸ್.ಟಿ. ಸೋಮಶೇಖರ್ ಅಡ್ಡ ಮತದಾನದ ಕುರಿತು ಪ್ರತಿಕ್ರಿಯಿಸಿದ ಅವರು, ವ್ಯಕ್ತಿ ಸಂಬಂಧಕ್ಕಾಗಿ ರಾಜೀ ರಾಜಕಾರಣ ಒಳ್ಳೆಯದಲ್ಲ ಎಂದು ಹೇಳಿದರು. ರಾಜಕೀಯದಲ್ಲಿ ವ್ಯಭಿಚಾರ ನಡೆಸುವವರು ಎಲ್ಲೆಡೆಯು ಸುಲಭವಾಗಿ ಸೆಟ್ ಆಗ್ತಾರೆ. ಇಂಥವರು ಎಲ್ಲರೊಂದಿಗೂ ಚೆನ್ನಾಗಿ ಇರುತ್ತಾರೆ. ವ್ಯಭಿಚಾರದ ರಾಜಕಾರಣಕ್ಕೆ ಯಾರೂ ಮಣೆ ಹಾಕಬಾರದು ಎಂದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಹಾಸನ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮಾಜಿ ಸಿಎಂ ಹೆಚ್​.ಡಿ. ಕುಮಾರಸ್ವಾಮಿ, ಹಾಸನದಿಂದಲೇ ಸ್ಪರ್ಧೆ ಮಾಡಿದರೇ ಜೆಡಿಎಸ್​ ಕಾರ್ಯಕರ್ತರಿಗೆ ಸ್ಪೂರ್ತಿ ಜೊತೆಗೆ ಉಳಿದ ಅಭ್ಯರ್ಥಿಗಳಿಗೂ ಶಕ್ತಿ ನೀಡಿದಂತಾಗುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ಹೇಳಿದ್ದಾರೆ. ಮಾಧ್ಯಮದೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ಹಾಸನದಿಂದ ಸ್ಪರ್ಧೆ ಮಾಡಿದರೆ ಒಳ್ಳೆಯದು. ಇದರಿಂದ ಇಡೀ ರಾಜ್ಯದಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳು, ಕಾರ್ಯಕರ್ತರನ್ನು ಹುರಿದುಂಬಿಸಿದಂತಾಗುತ್ತದೆ ಎಂದು ಅಭಿಪ್ರಾಯ ಪಟ್ಟಿದ್ದಾರೆ. ಬಿಜೆಪಿ – ಜೆಡಿಎಸ್ ಮೈತ್ರಿಯಲ್ಲಿ ಮಂಡ್ಯ, ಹಾಸನ ಕ್ಷೇತ್ರಗಳು ಜೆಡಿಎಸ್ ಪಾಲಾಗುತ್ತದೆಯೇ ಎಂಬ ಪ್ರಶ್ನೆಗೆ, ಹಾಸನ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯನ್ನು ನಮ್ಮ ತಾತ ಡಿಕ್ಲೇರ್ ಮಾಡಿದರೆ.. ಲೋಕಸಭೆ ಚುನಾವಣೆಯಲ್ಲಿ ಹೆಚ್‌ ಡಿಕೆ ಸ್ಪರ್ಧಿಸಲಿ ಎಂದು ಉತ್ತರಿಸಿದರು. ಲೋಕಸಭೆಗೆ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ವಿಚಾರದಲ್ಲಿ ನನಗೆ ಮಾಹಿತಿಯಿಲ್ಲ. ನನಗೇನೂ ಗೊತ್ತಿಲ್ಲ. ನಮ್ಮ ಜಿಲ್ಲೆ ಬಿಟ್ಟು ಹೊರಗಡೆ ಜಿಲ್ಲೆಯ ಬಗ್ಗೆ ಮಾಹಿತಿಯಿಲ್ಲ ಎಂದು ಸುಮ್ಮನಾದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. …

Read More

ಕೋಲಾರ: ಕೋಲಾರ ತಾಲ್ಲೂಕಿನ ಮಟ್ನಹಳ್ಳಿ ಗ್ರಾಮದಲ್ಲಿ ಬೈಕ್ ಕಳ್ಳತನ ಮಾಡಿದ ಮೂವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ನಡೆದಿದೆ. ಕುಡಿದು ಬೈಕ್ ಕಳ್ಳತನ ಮಾಡಿದ್ದ ಮೂವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಶ್ರೀಧರ್, ಅರುಣ್, ನವೀನ್ ಬೈಕ್ ಕಳ್ಳತನ ಮಾಡಿದ ಖದೀಮರಾಗಿದ್ದಾರೆ. ಮೂವರು ಕಳ್ಳರ ಫೈಕಿ ಇಬ್ಬರು ಸರ್ಕಾರಿ ಉದ್ಯೋಗಿ ಎಂಬ ಮಾಹಿತಿ ಸಿಕ್ಕಿದೆ. ಈ ಕುರಿತು ಪೊಲೀಸರು ವಿಚಾರಣೆ ನಡೆಸುತ್ತಿದ್ದು, ಕೋಲಾರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರಿಗೆ ದೂರು ಕೊಟ್ಟ ಮೇಲೆ ಕಳ್ಳರು ಬೈಕ್ ತಂದು ಕೊಟ್ಟಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಹಾಸನ: ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ಅರೆಹಳ್ಳಿಯಲ್ಲಿ ಅಣ್ಣನೇ ಒಡಹುಟ್ಟಿದ ತಮ್ಮನನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಡೆದಿದೆ. ಅರೆಹಳ್ಳಿ ಗ್ರಾಮದ ಕೇಶವ ನಗರದ ನಿವಾಸಿ ಸಂಗಯ್ಯ(58) ಮೃತ ರ್ದುದೈವಿಯಾಗಿದ್ದಾನೆ. ಜಮೀನು ವಿವಾದ ಹಿನ್ನೆಲೆ ಅಣ್ಣ ಈರಯ್ಯ ಎಂಬಾತ ಮಚ್ಚಿನಲ್ಲಿ ಹಲ್ಲೆ ಮಾಡಿ ಕೊಲೆ ಮಾಡಿದ್ದಾನೆ. ಕೊಲೆ ಆರೋಪಿ ಈರಯ್ಯನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಕುರಿತು ವಿಚಾರಣೆ ನಡೆಯುತ್ತಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ನವದೆಹಲಿ: ಕಳೆದ ವರ್ಷ ನವೆಂಬರ್‌ 30 ರಂದು ವಿವಾಹವಾಗಿದ್ದ ನವ ವಿವಾಹಿತ ಜೋಡಿಯೊಂದು 24 ಗಂಟೆಯೊಳಗೆ ದಾರುಣ ಅಂತ್ಯ ಕಂಡಿರುವ ಘಟನೆ ಗಾಜಿಯಾಬಾದ್‌ ನಲ್ಲಿ ನಡೆದಿದೆ. ವ್ಯಕ್ತಿ ಹೃದಯಾಘಾತದಿಂದ ಮೃತಪಟ್ಟರೆ, ಪತಿಯ ಸಾವಿನಿಂದ ಆಘಾತಗೊಂಡು ಪತ್ನಿ ಕೂಡ ಕಟ್ಟಡದಿಂದ ಜಿಗಿದು ಸಾವನ್ನಪ್ಪಿದ್ದಾರೆ. ನವವಿವಾಹಿತ ಜೋಡಿ ದೆಹಲಿಯ ಮೃಗಾಲಯಕ್ಕೆ ಭೇಟಿ ನೀಡಿದಾಗ ದುರ್ಘಟನೆ ನಡೆದಿದ್ದು, ಅಲ್ಲಿ ಅಭಿಷೇಕ್‌ (25) ಗೆ ಎದೆನೋವು ಕಾಣಿಸಿಕೊಂಡಿತ್ತು. ಅಂಜಲಿ ತಕ್ಷಣ ತನ್ನ ಸ್ನೇಹಿತರನ್ನು ಕರೆದು ಪತಿಯನ್ನು ಆಸ್ಪತ್ರೆಗೆ ಸೇರಿಸಿದರು. ಅಲ್ಲಿ ಅಭಿಷೇಕ್‌ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ. ಆತನಿಗೆ ಹೃದಯಾಘಾತವಾಗಿದ್ದಾಗಿ ತಿಳಿಸಿದ್ದಾರೆ. ಪತಿಯ ಸಾವಿನ ಸುದ್ದಿಯನ್ನು ಅರಗಿಸಿಕೊಳ್ಳಲಾಗದೆ ಅಂಜಲಿ 7ನೇ ಮಹಡಿಯ ಬಾಲ್ಕನಿಯಿಂದ ಜಿಗಿದಿದ್ದಾಳೆ. ಗಂಭೀರವಾಗಿ ಗಾಯಗೊಂಡಿದ್ದ ಆಕೆಯನ್ನು ವೈಶಾಲಿ ಮ್ಯಾಕ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಇಂದು ಮುಂಜಾನೆ ಆಕೆಯೂ ಕೊನೆಯುಸಿರೆಳೆದಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಇತ್ತೀಚೆಗಷ್ಟೇ ಚಿತ್ರದ ಒಂದು ಹಾಡಿನ ಪ್ರೋಮೋ ಸೋಷಿಯಲ್ ಮೀಡಿಯಾದಲ್ಲಿ ಹರಿಬಿಟ್ಟಿದ್ದ ಉಪ್ಪಿಗೆ ನೆಟ್ಟಿಗರಿಂದ ವ್ಯಾಪಕ ಪ್ರತಿಕ್ರಿಯೆಗಳು ಲಭಿಸಿತ್ತು. ಮಾತ್ರವಲ್ಲ ಹಲವಾರು ಮಂದಿ ಉಪ್ಪಿಗೆ ಪ್ರಶ್ನೆಗಳ ಮೇಲೆ ಪ್ರಶ್ನೆಗಳನ್ನು ಕೇಳತೊಡಗಿದ್ದಾರೆ. ಈ ಕುರಿತಂತೆ ಅಭಿಮಾನಿಗಳಲ್ಲಿಯೂ ಸಹ ಸಾಕಷ್ಟು ಗೊಂದಲ ಹುಟ್ಟಿಕೊಂಡಿತ್ತು. ಇದೇ ಬಗೆಹರಿದಿಲ್ಲ ಆಗಲೇ ಮತ್ತೊಂದು ಅನಿವಾರ್ಯ ಕಾರಣ ಹೊರಬಿದ್ದಿದೆ. ಅಸಲಿಗೆ ಏನಿದು ಅನಿವಾರ್ಯ ಕಾರಣಗಳಿಂದ ಎಂಬುದು ಸದ್ಯ ಎಲ್ಲರ ಪ್ರಶ್ನೆಯಾಗಿದೆ. ಸದಾ ಡಿಫರೆಂಟ್ ಆಗಿ ತೋರಿಸುವುದು,ಚಿತ್ರರಸಿಕರ ತಲೆಗೆ ಹುಳಬಿಡುವುದು ಉಪೇಂದ್ರ ಅವರ ರಿಯಲ್ ಸ್ಟೈಲ್​. ಇನ್ನೊಂದು ವಿಚಾರವೆಂದ್ರೆ ಕರಿಮಣಿ ಮಾಲೀಕ ನೀನಲ್ಲ ಎನ್ನುವ ೨೫ ವರ್ಷಗಳ ಹಿಂದಿನ ಹಾಡೊಂದು ಇತ್ತೀಚೆಗೆ ವೈರಲ್ ಆಗಿರುವ ಬಗೆಗಿನ ವಿಚಾರ ನಿಮ್ಗೆ ಗೊತ್ತೆ ಇದೆ. ಒಂದೇ ಪದದಲ್ಲಿ ಎರಡೆರಡು ಅರ್ಥವನ್ನ ಹೇಳುವ ಹಾಡೊಂದು ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗಿತ್ತು. ಇದೀಗ ಅದೇ ರೀತಿಯಲ್ಲಿ ಭಾರಿ ಸಂಚಲನ ಸೃಷ್ಟಿಸುತ್ತಾ ಹಾಗೂ ವಿಭಿನ್ನವಾಗಿರುವ ‘ಚೀಪ್ ಚೀಪ್’ ಲಿರಿಕಲ್ ವೀಡಿಯೋ ಕೂಡ ಸದ್ಯದಲ್ಲೇ ಹೊರಬೀಳಲಿದೆ. ಈ ಬಗ್ಗೆ…

Read More