Author: admin

ಇಂದು ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ವಿಧಾನಸೌಧದಲ್ಲಿ ಮತದಾನ ನಡೆಯುತ್ತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಈಗಾಗಲೇ ಮೂರು ಪಕ್ಷದ ಎಲ್ಲಾ ನಾಯಕರು ಮತದಾನ ಚಲಾಯಿಸಿದ್ದಾರೆ. ಮತದಾನದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನಮ್ಮ ಶಾಸಕರಿಗೆ ಆಮಿಷ ಆಸೆ ಒಡ್ಡುತ್ತಿದ್ದಾರೆ.  ನಮ್ಮ ಮೂವರು ಅಭ್ಯರ್ಥಿಗಳು ಗೆಲ್ಲುತ್ತಾರೆ. ಜೆಡಿಎಸ್ ಗೆ ಇರೋದೇ 19 ಮತಗಳು  ಅಭ್ಯರ್ಥಿ ಹಾಕಬೇಕಿರಲಿಲ್ಲ. ಆದರೂ ಹಾಕಿದ್ದಾರೆ . ಬೇರೆ ಪಕ್ಷದವರೂ ನಮಗೆ ವೋಟ್ ಹಾಕಬಹುದು ಎಂದರು. ನಮ್ಮ ಸರ್ಕಾರದ ಬಗ್ಗೆ ಒಳ್ಳೆಯ ಅಭಿಪ್ರಾಯ ಇರುವವರು ಬೇರೆ ಪಕ್ಷದ ಶಾಸಕರಿಂದ ಮತಗಳು ಬರಬಹುದು. ನಾವು ಯಾವತ್ತೂ ಕೂಡ ಬೇರೆ ಶಾಸಕರಿಗೆ ಆಮಿಷ ಒಡ್ಡಿಲ್ಲ. ನಮಗೆ ಒಳ್ಳೆಯ ಮತದಾನಗಳು ಇರುವಾಗ ಆಮಿಷ ಒಡ್ಡುವ ಪ್ರಮೇಯವೇ ಬರುವುದಿಲ್ಲ ಎಂದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ತಮಿಳುನಾಡಿನಲ್ಲಿ 17 ವರ್ಷದ ದಲಿತ ಬಾಲಕಿಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರವೆಸಗಲಾಗಿದೆ. ಸೇಲಂ ಜಿಲ್ಲೆಯ ಓಮಲ್ಲೂರು ಬಳಿ ಈ ಘಟನೆ ನಡೆದಿದ್ದು, ಆಟೋದಲ್ಲಿ ಬಂದ ಇಬ್ಬರು ಸದಸ್ಯರ ತಂಡ ಯುವತಿಯನ್ನು ಅಪಹರಿಸಿ ಚಿತ್ರಹಿಂಸೆ ನೀಡಿದ್ದಾರೆ. ಘಟನೆಯಲ್ಲಿ ಇಬ್ಬರು ಅಪ್ರಾಪ್ತರನ್ನು ಪೊಲೀಸರು ಬಂಧಿಸಿದ್ದಾರೆ. ಫೆಬ್ರವರಿ 13 ರಂದು ಈ ಘಟನೆ ನಡೆದಿದೆ. ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ದಲಿತ ಯುವತಿಯನ್ನು ಆರೋಪಿಗಳು ಆಟೋ ರಿಕ್ಷಾದಲ್ಲಿ ಅಪಹರಿಸಿ ಏಕಾಂತ ಸ್ಥಳಕ್ಕೆ ಕರೆದೊಯ್ದು ಕಟ್ಟಿ ಹಾಕಿ ,ಪರ್ಯಾಯವಾಗಿ ಚಿತ್ರಹಿಂಸೆ ನೀಡಿದ್ದಾರೆ. ಆರೋಪಿಗಳಲ್ಲಿ ಒಬ್ಬನು ತನ್ನ ಫೋನ್ ‌ನಲ್ಲಿ ಚಿತ್ರಹಿಂಸೆಯ ದೃಶ್ಯಗಳನ್ನು ಸಹ ರೆಕಾರ್ಡ್ ಮಾಡಿದ್ದಾನೆ. ಆರೋಪಿಗಳ ಪೈಕಿ ಓರ್ವ ಬಾಲಕಿಯೊಂದಿಗೆ ಅನ್ಯೋನ್ಯವಾಗಿದ್ದು, ವಿವಾಹದ ಭರವಸೆ ನೀಡಿದ್ದ ಎಂದು ದೀವಟ್ಟಿಪಟ್ಟಿ ಪೊಲೀಸರು ತಿಳಿಸಿದ್ದಾರೆ. ಅತಿಜೀತಾ ಅವರ ದೂರಿನ ಮೇರೆಗೆ ಪ್ರಕರಣ ದಾಖಲಾಗಿದೆ. ಪೋಕ್ಸೋ ಕಾಯಿದೆಯ ವಿವಿಧ ವಿಭಾಗಗಳು ಮತ್ತು SC/ST (POA) ಕಾಯಿದೆಯ ಸೆಕ್ಷನ್ 3 (2) (va) ಅನ್ನು ಸಲ್ಲಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು…

Read More

ಕರ್ನಾಟಕದ 4 ರಾಜ್ಯಸಭಾ ಸ್ಥಾನಗಳಿಗೆ ಮತದಾನ ಆರಂಭಗೊಂಡಿದ್ದು, ಶಾಸಕರು ಆಗಮಿಸಿ ತಮ್ಮ ಮತ ಚಲಾಯಿಸುತ್ತಿದ್ದಾರೆ. ಬೆಂಗಳೂರಿನ ವಿಧಾನಸೌಧದ ಕೊಠಡಿ ಸಂಖ್ಯೆ 106ರಲ್ಲಿ ರಾಜ್ಯಸಭಾ ಚುನಾವಣೆಗೆ ಮತದಾನ  ನಡೆಯುತ್ತಿದ್ದು, ಮೊದಲ ಮತವನ್ನೇ ಬಿಜೆಪಿ ಶಾಸಕ ಎಸ್.ಸುರೇಶ್ ಕುಮಾರ್ ಚಲಾಯಿಸಿದರು. ಕಾಂಗ್ರೆಸ್ ನಿಂದ ಅಜಯ್ ಮಾಕೆನ್, ಸೈಯದ್ ನಾಸೀರ್ ಹುಸೇನ್, ಜಿ.ಸಿ. ಚಂದ್ರಶೇಖರ್, ಬಿಜೆಪಿಯಿಂದ ನಾರಾಯಣಸಾ ಬಾಂಡಗೆ, ಜೆಡಿಎಸ್ ನಿಂದ ಕುಪೇಂದ್ರ ರೆಡ್ಡಿ ಕಣದಲ್ಲಿದ್ದಾರೆ.  ಕಾಂಗ್ರೆಸ್ 134, ಬಿಜೆಪಿ 66, ಜೆಡಿಎಸ್ 19, ಇತರರು 4 ಶಾಸಕರನ್ನು ಹೊಂದಿದ್ದಾರೆ. ಉಳಿದ ನಾಲ್ವರಲ್ಲಿ ಇಬ್ಬರು ಪಕ್ಷೇತರರು ಮತ್ತು ಸರ್ವೋದಯ ಕರ್ನಾಟಕ ಪಕ್ಷದ ದರ್ಶನ್ ಪುಟ್ಟಣ್ಣಯ್ಯ ಅವರ ಬೆಂಬಲವಿದೆ ಎಂದು ಕಾಂಗ್ರೆಸ್ ಹೇಳಿಕೊಂಡಿದೆ ಮತ್ತು ಮೂರು ಸ್ಥಾನಗಳನ್ನು ಗೆಲ್ಲುವ ವಿಶ್ವಾಸವಿದೆ. ಇನ್ನು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ವಿಪಕ್ಷ ನಾಯಕ ಆರ್.ಅಶೋಕ್, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮತಚಲಾಯಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್…

Read More

ಆದಿಸುಬ್ರಹ್ಮಣ್ಯ ಬಳಿ ಸಾಗುತ್ತಿದ್ದ ತಂಡವೊಂದರಲ್ಲಿ ಮಹಿಳೆಯೊಬ್ಬರು ಚಿಕ್ಕ ಮಗುವನ್ನು ರಸ್ತೆಯಲ್ಲಿ ಬಿಟ್ಟು ಪಕ್ಕದ ಅಂಗಡಿಗೆಂದು ಹಣ್ಣು ಕಾಯಿ ಖರೀದಿಸಲು ಹೋಗಿದ್ದರು. ಆಗ ಮಗು ರಸ್ತೆಯ ಬದಿಗೆ ಬಂದಿದೆ. ಅದೇ ಸಮಯದಲ್ಲಿ ನಾಗರಹಾವೊಂದು ರಸ್ತೆ ದಾಟುತ್ತಿತ್ತು. ಮಗು ಇನ್ನೇನು ಹಾವನ್ನು ತುಳಿಯಬೇಕು ಎನ್ನುವಷ್ಟರಲ್ಲಿ ಅಲ್ಲೇ ಮಲಗಿದ್ದ ನಾಯಿಯೊಂದು ಓಡಿ ಹೋಗಿ ಮಗುವಿಗೆ ಅಡ್ಡ ನಿಂತಿದೆ. ಹಾಗೂ ಹಾವನ್ನು ತುಳಿಯದಂತೆ ಹಾಗೂ ಹಾವು ಸರಾಗವಾಗಿ ಹೋಗಲು ಅವಕಾಶ ನೀಡಿದೆ. ನಾಗ ದೇವರ ಸನ್ನಿಧಿಯಲ್ಲಿ ಮಗುವಿನ ರಕ್ಷಕನಾಗಿ ನಾಯಿಯೊಂದು ಜೀವ ಉಳಿಸಿದ್ದು, ನಿಜಕ್ಕೂ ಆಶ್ಚರ್ಯಕರ. ಇದೀಗ ಈ ಘಟನೆಯ ಪ್ರತ್ಯಕ್ಷದರ್ಶಿಗಳು ಈ ಸುದ್ದಿಯನ್ನು ತಿಳಿಸಿದ್ದು, ಸಾಮಾಜಿಕ ಜಾಲತಾಣದಲ್ಲಿ ಈ ಬರಹ ವೈರಲ್ ಆಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಅಮಿ ಗೌತಮ್ ಅವರ ಆರ್ಟಿಕಲ್ 370  ಸಿನಿಮಾವನ್ನು  ಗಲ್ಫ್ ದೇಶಗಳಲ್ಲಿ ನಿಷೇಧಿಸಲಾಗಿದೆ. ಚಿತ್ರವು ಫೆಬ್ರವರಿ 23 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಗೊಂಡಿದ್ದು, ಜಾಗತಿಕ ಗಲ್ಲಾಪೆಟ್ಟಿಗೆಯಲ್ಲಿ ಉತ್ತಮ ಪ್ರತಿಕ್ರಿಯೆ ಪಡೆಯುತ್ತಿದೆ. ಆದರೆ, ಈಗ ಎಲ್ಲಾ ಗಲ್ಫ್ ರಾಷ್ಟ್ರಗಳಲ್ಲಿ ಇದನ್ನು ನಿಷೇಧಿಸಲಾಗಿದೆ. ಹೃತಿಕ್ ರೋಷನ್ ಮತ್ತು ದೀಪಿಕಾ ಪಡುಕೋಣೆ ಅಭಿನಯದ ಫೈಟರ್ ಅನ್ನು ಕಳೆದ ತಿಂಗಳು ಎಲ್ಲಾ ಗಲ್ಫ್ ದೇಶಗಳಲ್ಲಿ (ಯುಎಇ ಹೊರತುಪಡಿಸಿ) ನಿಷೇಧಿಸಿದ ಕೆಲವೇ ದಿನಗಳಲ್ಲಿ ಮತ್ತೆ ಬಾಲಿವುಡ್‌ ಸಿನಿಮಾ ನಿಷೇಧ ಪುನರಾವರ್ತನೆಗೊಂಡಿದೆ. ಆರ್ಟಿಕಲ್ 370 ಯಾಮಿ ಗೌತಮ್ ಝೂನಿ ಹಕ್ಸರ್ ಎಂಬ ಗುಪ್ತಚರ ಅಧಿಕಾರಿಯಾಗಿ ಕಾಣಿಸಿಕೊಂಡಿದ್ದಾರೆ. ಕೇಂದ್ರ ಸರ್ಕಾರವು ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನವನ್ನು ತೆಗೆದುಹಾಕುವುದರ ಸುತ್ತ ಚಿತ್ರ ಸುತ್ತುತ್ತದೆ. ಜತೆಗೆ ಚಿತ್ರವು ಕಣಿವೆಯಲ್ಲಿ ನಡೆಯುತ್ತದೆ. ನೈಜ ಘಟನೆಗಳಿಂದ ಸ್ಫೂರ್ತಿ ಪಡೆದಿದ್ದು, 370 ನೇ ವಿಧಿಯನ್ನು ಕೇಂದ್ರ ಸರ್ಕಾರವು 2019 ರಲ್ಲಿ ಹಿಂತೆಗೆದುಕೊಂಡಿತು. ಚಿತ್ರವು ದೇಶೀಯ ಗಲ್ಲಾಪೆಟ್ಟಿಗೆಯಲ್ಲಿ ಮೊದಲ ದಿನ 6.12 ಕೋಟಿ ರೂ.ಗಳಿದರೆ,  ಇಲ್ಲಿಯವರೆಗೆ ಕೇವಲ ಮೂರು ದಿನಗಳಲ್ಲಿ…

Read More

ಉತ್ತರ ಪ್ರದೇಶದಲ್ಲಿ ವ್ಯಾನ್ ಮರಕ್ಕೆ ಡಿಕ್ಕಿ ಹೊಡೆದು ನಾಲ್ವರು ವಿದ್ಯಾರ್ಥಿಗಳು ದಾರುಣ ಅಂತ್ಯ ಕಂಡಿದ್ದಾರೆ. ಆರು ಮಂದಿ ಗಾಯಗೊಂಡಿದ್ದಾರೆ. ವಿದ್ಯಾರ್ಥಿಗಳು ರಾಜ್ಯ ಬೋರ್ಡ್ ಪರೀಕ್ಷೆಗೆ ಹಾಜರಾಗಲು ಹೋಗುತ್ತಿದ್ದ ವಾಹನಕ್ಕೆ ಅಪಘಾತ ಸಂಭವಿಸಿದೆ. ಶಹಜಹಾನ್‌ ಪುರದ ಜರವಾವ್ ಗ್ರಾಮದ ಬಳಿ ಈ ದುರ್ಘಟನೆ ನಡೆದಿದೆ. ರಾಜ್ಯ ಬೋರ್ಡ್ ಪರೀಕ್ಷೆಗೆ ಹಾಜರಾಗಲು ವಿದ್ಯಾರ್ಥಿಗಳು ಕಾರಿನಲ್ಲಿ ಜೈತಿಪುರದ ಶಾಲೆಗೆ ಹೋಗುತ್ತಿದ್ದರು. ವಾಹನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದೆ ಎಂದು ಹೆಚ್ಚುವರಿ ಎಸ್ಪಿ(ನಗರ) ಸಂಜಯ್ ಕುಮಾರ್ ತಿಳಿಸಿದ್ದಾರೆ. ಅನುರಪ್ ಖುಷ್ವಾಹ (15), ಅನುರಾಗ್ ಶ್ರೀವಾಸ್ತವ (14) ಮತ್ತು ಪ್ರತಿಷ್ಠಾ ಮಿಶ್ರಾ (15) ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೋಹಿನಿ ಮೌರ್ಯ (16) ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಗಾಯಗೊಂಡಿರುವ ಇತರ ಆರು ಮಂದಿ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದೇ ವೇಳೆ ಉತ್ತರ ಪ್ರದೇಶದ ಬಲ್ಲಿಯಾ ಪ್ರದೇಶದಲ್ಲಿ ನಡೆದ ಮತ್ತೊಂದು ಅಪಘಾತದಲ್ಲಿ ಇಬ್ಬರು ಮಕ್ಕಳು ಸೇರಿದಂತೆ ಆರು ಮಂದಿ ಸಾವನ್ನಪ್ಪಿದ್ದಾರೆ. ಎರಡು ಕಾರುಗಳು ಮತ್ತು ಪಿಕಪ್ ಟ್ರಕ್ ಒಳಗೊಂಡ ಅಪಘಾತದಲ್ಲಿ ಹಲವಾರು…

Read More

ಕಾಡ್ಗಿಚ್ಚೆಂಬ ಕೆಂಬೂತವನ್ನು ತಡೆಯುವ ನಿಟ್ಟಿನಲ್ಲಿ ಅರಣ್ಯ ಇಲಾಖೆಯು ದೂರ ಸಂವೇದಿ ತಂತ್ರಜ್ಞಾನವನ್ನು ಮತ್ತೊಷ್ಟು ಅಭಿವೃದ್ಧಿ ಪಡಿಸುತ್ತಿರುವುದು ಒಳ್ಳೆಯ ಬೆಳವಣಿಗೆಯಾಗಿದೆ. ಇತ್ತೀಚೆಗೆ ಜಾಗತಿಕ ತಾಪಮಾನದಿಂದಾಗಿ ಹೆಚ್ಚುತ್ತಿರುವ ಕಾಡ್ಡಿಚ್ಚು ಲೆಕ್ಕವಿಲ್ಲದಷ್ಟು ಅರಣ್ಯ ಪ್ರದೇಶವನ್ನು ದಹಿಸುತ್ತಿದೆ. ಕಾಡ್ಗಿಚ್ಚಿಗೆ ಬ್ರೇಕ್ ಹಾಕಲು ಅರಣ್ಯ ಇಲಾಖೆ ಅಗ್ನಿವೀರರನ್ನು ಹಾಗೂ ಡ್ರೋನ್ ಕ್ಯಾಮೆರಾಗಳನ್ನು ಅಳವಡಿಸಿದರೂ ಪ್ರಯೋಜನವಾಗುತ್ತಿಲ್ಲ. ಈ ಸಮಸ್ಯೆಯನ್ನು ಹತೋಟಿಗೆ ತರುವಲ್ಲಿ ದೂರ ಸಂವೇದಿ ತಂತ್ರಜ್ಞಾನವು ಸಹಕಾರಿಯಾಗಲಿದೆ. 2023 ರಲ್ಲಿ ಕೆನಡಾ ದೇಶವು ಅತಿ ಹೆಚ್ಚು ಕಾಡ್ಗಿಚ್ಚಿಗೆ ತುತ್ತಾಗಿರುವ ದೇಶವಾಗಿದೆ. ಸುಮಾರು18 ಮಿಲಿಯನ್ ಹೆಕ್ಟೇ‌ರ್ ಪ್ರದೇಶ ನಾಶವಾಗಿದೆ. ಎನ್.ಸಿ.ಇ.ಐ ವರದಿಯ ಅನುಸಾರ 2023 ರ ಸಾಲಿನಲ್ಲಿ ವಿಶ್ವದಾದ್ಯಂತ ಸುಮಾರು 55,571 ಸ್ಥಳಗಳಲ್ಲಿ ಕಾಡ್ಗಿಚ್ಚು ಸಂಭವಿಸಿದ್ದು, ಆ ಪೈಕಿ 2,633,636 ಎಕರೆಯಷ್ಟು ಅರಣ್ಯ ಪ್ರದೇಶ ಬೆಂಕಿಗೆ ಆಹುತಿಯಾಗಿದೆ. ಇನ್ನೂ ಕರ್ನಾಟಕವೊಂದರಲ್ಲೇ ಸುಮಾರು 3793.13 SQ ಕಿಲೋಮೀಟರ್ ನಷ್ಟು ಅರಣ್ಯ ಪ್ರದೇಶ ನಾಶವಾಗಿದೆ. ಇದರಿಂದ ಸುಮಾರು 2170 ಮೆಗಾಟನ್ ನಷ್ಟು ಇಂಗಾಲ ಹೊರಸುಸುವಿಕೆ ಉಂಟಾಗಿದ್ದು, ಆ ಪೈಕಿ ಶೇ. 22ರಷ್ಟು ಕೆನಡಾದಲ್ಲಿ ಸಂಭವಿಸಿದ…

Read More

ತುಮಕೂರು: ಎನ್.ಹೆಚ್.ಎಂ. ಕಾರ್ಯಕ್ರಮದಡಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿದ್ದ ಮೂವರನ್ನು ಕರ್ತವ್ಯ ಲೋಪದ ಮೇಲೆ ಕರ್ತವ್ಯದಿಂದ ವಜಾಗೊಳಿಸಲಾಗಿದೆ. ಮೂವರು ರೋಗಿಗಳಾದ ಅನಿತಾ, ಅಂಜಲಿ, ನರಸಮ್ಮ ಮೃತಪಟ್ಟಿದ್ದರು. ರೋಗಿಗಳ ಮರಣಕ್ಕೆ ಸಂಬಂಧಿಸಿದಂತೆ ದಿ:24-02-2024 ರಂದು ಜಿಲ್ಲಾ ಆರೋಗ್ಯ ಮತ್ತು ಕುಟಂಬ ಕಲ್ಯಾಣಾಧಿಕಾರಿಗಳು ತುಮಕೂರು ಮತ್ತು ತನಿಖಾ ತಂಡ ಇವರು ಇಲ್ಲಿ ಖುದ್ದು ಭೇಟಿ ನೀಡಿ ಪರಿಶೀಲಿಸಿದೆ. ಶಸ್ತ್ರಚಿಕಿತ್ಸೆ ಮಾಡಿಕೊಂಡ ರೋಗಿಗಳಲ್ಲಿ ಸೋಂಕು ಹರಡಿಡುವ ಚಿಹ್ನೆಗಳು ಕಂಡುಬಂದಿದ್ದು ಮತ್ತು ಶಸ್ತ್ರಚಿಕಿತ್ಸಾ ಪ್ರಕ್ರಿಯೆಯಲ್ಲಿ ಲೋಪಕಂಡುಬಂದಿರುವುದು ಮೇಲ್ನೋಟಕ್ಕೆ ಕಂಡು ಬಂದಿರುತ್ತದೆ. ಸಾಮಾನ್ಯವಾಗಿ ಈ ರೀತಿ ಸೋಂಕು ಶಸ್ತ್ರಚಿಕಿತ್ಸಾ ಕೊಠಡಿ ಧೂಮಿಕರಣ ಮಾಡದೇ ಇದ್ದಾಗ ಹಾಗೂ ಶಸ್ತ್ರಚಿಕಿತ್ಸಾ ಕೊಠಡಿಯ ಸಲಕರಣೆಗಳನ್ನು AUTO CLAVE ಮಾಡದೇ ಇದ್ದ ಸಂಧರ್ಬದಲ್ಲಿ ಈ ರೀತಿಯ ಸೋಂಕು ಹರಡುವ ಸಾಧ್ಯತೆ ಇದ್ದು, ಈ ಕಾರಣದಿಂದ ಮೂರು ಮರಣಕ್ಕೆ ಕಾರಣವಾಗಿರುವುದು ಕಂಡು ಬಂದಿರುತ್ತದೆ. ಆದ್ದರಿಂದ ಜಿಲ್ಲಾ ಆರೋಗ್ಯ ಸಂಘದ ಕರಾರು ಒಪ್ಪಂದದ ಪ್ರಕಾರ ಕರ್ತವ್ಯ ಲೋಪ ಹಾಗೂ ಕರ್ತವ್ಯ ನಿರ್ಲಕ್ಷತನ, ಬೇಜವಬ್ದಾರಿತನ ತೋರಿದ ಹಿನ್ನಲೆಯಲ್ಲಿ…

Read More

ರಾಜ್ಯದಲ್ಲಿ ಬಿಸಿಲಿನ ಝಳಕ್ಕೆ ನಲುಗಿ ಹೋಗುತ್ತಿರುವ ಜನತೆಗೆ ಮಳೆರಾಯ ಸಿಹಿ ಸುದ್ದಿ ನೀಡಿದ್ದಾನೆ. ಮಾರ್ಚ್‌ ನಲ್ಲಿ ಬೆಂಗಳೂರು, ದಕ್ಷಿಣ ಕನ್ನಡ ಜಿಲ್ಲೆ, ಕೊಡಗು, ಮೈಸೂರು, ಚಿಕ್ಕಮಗಳೂರು, ದಾವಣಗೆರೆ ಸೇರಿದಂತೆ ಹಲವು ಭಾಗಗಳಲ್ಲಿ ಲಘು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇದು ರಾಜ್ಯದಲ್ಲಿ ಈ ವರ್ಷದ ಮೊದಲ ಮಳೆಯಾಗಲಿದ್ದು ಬಿಸಿಲಿನ ಬೇಗೆಯಿಂದ ಮುಕ್ತಿ ನೀಡಲಿದೆ. ಇನ್ನೂ, ಚಿತ್ರದುರ್ಗ, ಶಿವಮೊಗ್ಗ, ತುಮಕೂರು, ಬೆಂಗಳೂರು ಗ್ರಾಮಾಂತರಗಳಲ್ಲೂ ಮುಂಬರುವ ತಿಂಗಳ ಮೊದಲ ವಾರದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಬೆಳಗಾವಿ ಗ್ರಾಮೀಣ ಕ್ಷೇತ್ರದ ತುಮ್ಮರಗುದ್ದಿ ಗ್ರಾಮದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಶ್ರೀ ಹನುಮಾನ ಮಂದಿರವನ್ನು, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೋಮವಾರ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಗ್ರಾಮಸ್ಥರೆಲ್ಲ ಮುಂದಾಗಿ ಹನುಮಾನ್ ಗುಡಿ ಕಟ್ಟಬೇಕೆಂದು ನಿರ್ಧರಿಸಿದಾಗ ನನ್ನಿಂದ ಸಾಧ್ಯವಾದ ನೆರವು ನೀಡಿದೆ. ಅದಕ್ಕಿಂತ ಹೆಚ್ಚಾಗಿ ನೀವೆಲ್ಲ ಬಹಳಷ್ಟು ಶ್ರಮ ಪಟ್ಟು ಭಕ್ತಿಯಿಂದ ಈ ಮಂದಿರವನ್ನು ಸುಂದರವಾಗಿ ನಿರ್ಮಾಣ ಮಾಡಿದ್ದೀರಿ. ಗ್ರಾಮದಲ್ಲಿ ಅದ್ದೂರಿಯಿಂದ ನಡೆಯುತ್ತಿರುವ ಮಂದಿರದ ಉದ್ಘಾಟನೆಯ‌ ಕಾರ್ಯಕ್ರಮ ಮನಸ್ಸಿಗೆ ಖುಷಿ ತಂದಿದೆ. ದೇವರ ಆಶೀರ್ವಾದ ನನಗೆ, ನಿಮಗೆ ಎಲ್ಲರಿಗೂ ಸಿಕ್ಕಿದೆ. ನಾನು ರಾಜ್ಯದಲ್ಲಿ ಮಂತ್ರಿಯಾಗಿದ್ದೇನೆ. ಮುಂದಿನ ದಿನಗಳಲ್ಲಿ ಗ್ರಾಮಕ್ಕೆ ಇನ್ನಷ್ಟು ಒಳ್ಳೆಯದಾಗಲಿದೆ ಎಂದು ಹೇಳಿದರು. ಗ್ರಾಮೀಣ ಕ್ಷೇತ್ರಾದ್ಯಂತ ನೂರಾರು ದೇವಸ್ಥಾನಗಳನ್ನು ಕಳೆದ 5 ವರ್ಷದಲ್ಲಿ ನಿರ್ಮಾಣ ಮಾಡಲಾಗಿದೆ. ಆದರೆ ದೇವರ ಹೆಸರಿನಲ್ಲಿ ನಾನೆಂದೂ ರಾಜಕಾರಣ ಮಾಡುವುದಿಲ್ಲ, ದೇವರು, ಭಕ್ತಿ ಇವೆಲ್ಲ ನಮ್ಮ ಮನಸ್ಸಿನಲ್ಲಿದೆ. ಜನರು ನನ್ನ ಜೊತೆಗಿದ್ದಾರೆ, ದೇವರ ಆಶಿರ್ವಾದವಿದೆ. ಹಾಗಾಗಿ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕಾಮಗಾರಿ…

Read More