Author: admin

ಧ್ಯಾನ: ನಮ್ಮ ಮನಸ್ಸನ್ನು ನಿಯಂತ್ರಿಸಲು ಮತ್ತು ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಲು ಸಹಾಯಕ. ಒತ್ತಡ, ಕೋಪ, ಕಿರಿಕಿರಿ ಇಂದ ದೂರವಾಗಲು ಧ್ಯಾನ ಅವಶ್ಯಕ. ಸಕಾರಾತ್ಮಕ ಚಿಂತನೆ: ಯಾವಾಗಲೂ ಸಕಾರಾತ್ಮಕ ಚಿಂತನೆ ಮಾಡಿದರೆ ನಮ್ಮ ಮನಸ್ಸಿಗೂ, ದೇಹಕ್ಕೂ ,ಜೀವನಕ್ಕೂ ಒಳ್ಳೆಯದು. ಎಲ್ಲದರಲ್ಲೂ ಒಳ್ಳೆಯದನ್ನು ಕಾಣಬೇಕು. ಯೋಗ ಅಥವಾ ವ್ಯಾಯಾಮ: ಮನಸ್ಸಿಗೆ ಧ್ಯಾನ, ದೇಹಕ್ಕೆ ವ್ಯಾಯಾಮ ಅಗತ್ಯ. ಏಕೆಂದರೆ ಸದೃಢ ದೇಹದಲ್ಲಿ ಸದೃಢ ಮನಸ್ಸು ಇರಲು ಸಾಧ್ಯ. ಓದುವುದು ಶೈಲಿ ರೂಢಿಸಿಕೊಳ್ಳಿ: ಓದುವ ಶೈಲಿ ರೂಢಿಸಿಕೊಂಡರೆ ನಮ್ಮ ಜ್ಞಾನ ಹೆಚ್ಚುತ್ತದೆ ಮತ್ತು ಒಂದು ರೀತಿಯ ನಿಮ್ಮದಿಯ ಅನುಭವ ಆಗುತ್ತದೆ. ಆತ್ಮ ಸಂವಹನ: ದಿನ ೫ ನಿಮಿಷ ನಮ್ಮ ಜೊತೆ ಮಾತನಾಡುವುದನ್ನು ಅಭ್ಯಾಸ ಮಾಡಿಕೊಳ್ಳಬೇಕು. ನಮ್ಮ ಒಡಕು, ತೊಡಕುಗಳ ಬಗ್ಗೆ ತಿಳಿದುಕೊಳ್ಳಲು ಅವಶ್ಯಕ. ಇದು ನಮ್ಮ ಜೀವನವನ್ನೇ ಬದಲಿಸುತ್ತದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

“ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿಯ ಭರವಸೆ ನೀಡಿದ್ದ ಪ್ರಧಾನಿ ಮೋದಿ ವಿದ್ಯಾರ್ಥಿಗಳು, ಯುವಜನರ ಮತ ಗಳಿಸಿದರು. ಈ ಲೆಕ್ಕದಲ್ಲಿ 10 ವರ್ಷದಲ್ಲಿ 20 ಕೋಟಿ ಉದ್ಯೋಗ ಸೃಷ್ಟಿಸಬೇಕಿತ್ತು. ಆದರೆ, ಮೋದಿಯವರು ಇರುವ ಉದ್ಯೋಗವನ್ನೂ ಕಸಿದುಕೊಂಡ ಕಾರಣ ನಿರುದ್ಯೋಗ ಪ್ರಮಾಣ ದೇಶದಲ್ಲಿ ಶೇ 8.40ಕ್ಕೆ ಏರಿಕೆಯಾಗಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದರು ಬೆಂಗಳೂರಿನ ಅರಮನೆ ಮೈದಾನದಲ್ಲಿ ರಾಜ್ಯ ಸರ್ಕಾರದಿಂದ ಆಯೋಜಿಸಿರುವ ಬೃಹತ್ ಯುವ ಸಮೃದ್ಧಿ ಸಮ್ಮೇಳನ ಮತ್ತು ಉದ್ಯೋಗ ಮೇಳವನ್ನು ಉದ್ಘಾಟಿಸಿ ಮಾತನಾಡಿದ ಅವರು, ನಿರುದ್ಯೋಗಿ ಯುವಕರಿಗೆ ಯುವನಿಧಿ ಸಹಾಯಧನ ಕೊಡುವ ಜೊತೆಗೆ ಉದ್ಯೋಗ ಸೃಷ್ಟಿಸಲಾಗುವುದು ಮತ್ತು ಉದ್ಯೋಗ ಮಾಡಲು ಅಗತ್ಯವಾದ ತರಬೇತಿಗಳನ್ನೂ ನೀಡಲಾಗುವುದು ಎಂದು ಹೇಳಿದರು. “ನಿರುದ್ಯೋಗ ದೇಶದ ಪ್ರಮುಖ ಸಮಸ್ಯೆಯಾಗಿದೆ. ಕಳೆದ 10 ವರ್ಷಗಳಲ್ಲಿ ನಿರುದ್ಯೋಗ ಪ್ರಮಾಣ ಬೃಹತ್ತಾಗಿ ಬೆಳೆದಿದೆ. 2014ರಲ್ಲಿ ಪ್ರಧಾನಿ ಮೋದಿ ಪ್ರತಿ ವರ್ಷ 2 ಕೋಟಿ ಉದ್ಯೋಗ ಸೃಷ್ಟಿ ಮಾಡುತ್ತೀನಿ ಎಂದು ಭರವಸೆ ನೀಡಿ ಯುವ ಸಮೂಹದ ಮತ ಗಳಿಸಿದ್ದರು. ಈ 10 ವರ್ಷದಲ್ಲಿ…

Read More

ಬೆಂಗಳೂರು: ಕೆಂಗೇರಿಯ ಬಳಿಯಿರುವ ಹೊಯ್ಸಳ ವೃತ್ತದಲ್ಲಿ ಕಾಟನ್‌ ಉಡುಪುಗಳ ಮಳಿಗೆಯ ಶೆಡ್‌ ಗೆ ಬೆಂಕಿ ಬಿದ್ದು ಬಟ್ಟೆ ಮತ್ತಿತರ ವಸ್ತುಗಳು ಸುಟ್ಟು ಬೂದಿಯಾಗಿರುವ ಘಟನೆ ಸೋಮವಾರ ಬೆಳಗ್ಗೆ ನಡೆದಿದೆ. ಯಾವುದೇ ಪ್ರಾಣಾಪಾಯ, ಗಾಯಗಳು ಸಂಭವಿಸಿಲ್ಲ. ರಸ್ತೆಯ ಬದಿಯಲ್ಲಿ ಒಣಗಿದ ಎಲೆಗಳನ್ನು ಒಟ್ಟುಗೂಡಿಸಿ ಬೆಂಕಿಯಿಟ್ಟಿದ್ದೇ ಈ ಅನಾಹುತಕ್ಕೆ ಕಾರಣವೆನ್ನಲಾಗಿದೆ. ತಕ್ಷಣ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ನಂದಿಸುವ ಕಾರ್ಯದಲ್ಲಿ ಯಶಸ್ವಿಯಾದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಆನೇಕಲ್: ಬೆಂಗಳೂರು-ಹೊಸೂರು ರಾಷ್ಟ್ರೀಯ ಹೆದ್ದಾರಿ ವೀರಸಂದ್ರ ಬಳಿ ರಾಯಲ್ ಇನ್ಫೀಲ್ಡ್ ಬೈಕ್ ಮತ್ತು ಕಾರಿನ ನಡುವೆ ಅಪಘಾತ ನಡೆದಿದೆ. ಪರಿಣಾಮ ಬೈಕ್‌ ನ ಹಿಂಬದಿ ಕುಳಿತಿದ್ದ ಮಹಿಳೆ ದಾರುಣವಾಗಿ ಮೃತಪಟ್ಟಿದ್ದಾರೆ. ಹೊಸೂರು ಮೂಲದ ಹಿಂದೂಮತಿ ಮೃತ ದುರ್ದೈವಿ. ಸೋಮವಾರ ಬೆಳಗ್ಗೆ ಹೊಸೂರಿನಿಂದ ಎಲೆಕ್ಟ್ರಾನಿಕ್ ಸಿಟಿ ಕಡೆಗೆ ಬೈಕ್‌ ನಲ್ಲಿ ಬರುವಾಗ ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಕೆಳಗೆ ಬಿದ್ದ ಹಿಂದೂಮತಿ ತಲೆಗೆ ಗಂಭೀರ ಗಾಯಗೊಂಡಿದ್ದು, ಕೂಡಲೇ ಸ್ಥಳೀಯರು ಆಸ್ಪತ್ರೆಗೆ ರವಾನೆ ಮಾಡಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಹೆಬ್ಬಗೋಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕಾರು ಹಾಗೂ ಬೈಕ್‌ ಅನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಚಿತ್ರದುರ್ಗ: ಚಿತ್ರದುರ್ಗ ತಾಲೂಕಿನ ಕೂನಬೇವು ಗ್ರಾಮದಲ್ಲಿ‌ ಪತಿಯೊಬ್ಬ ನಂಬಿ ಬಂದವಳನ್ನು ಬಿಟ್ಟು ಮತ್ತೊಬ್ಬ ಮಹಿಳೆಯನ್ನ ವಿವಾಹವಾದ ವಿಚಾರ ತಿಳಿದ ಮಹಿಳೆ‌ ನೇಣಿಗೆ ಶರಣಾಗಿರುವ ಘಟನೆ‌ ನಡೆದಿದೆ. ನೇಣಿಗೆ ಶರಣಾದ ಮಹಿಳೆಯನ್ನು ವಿಶಾಲಾಕ್ಷಿ(21) ಎಂದು ಗುರುತಿಸಲಾಗಿದೆ. ಈಕೆಯ ಮನೆಯ ಹತ್ತಿರವೇ ವಾಸವಿದ್ದ ತಿಪ್ಪೇಸ್ವಾಮಿ, ಜಿಟಿಟಿಸಿಯಲ್ಲಿ ತರಬೇತಿ ಪಡೆಯುತ್ತಿದ್ದ ವಿಶಾಲಾಕ್ಷಿಯನ್ನು ಪ್ರೀತಿಸಿ ಕಳೆದ ವರ್ಷವಷ್ಟೇ ವಿವಾಹವಾಗಿದ್ದ. ತಿಪ್ಪೇಸ್ವಾಮಿ ಎಸ್ಟಿ (ನಾಯಕ) ಸಮುದಾಯಕ್ಕೆ ಸೇರಿದ್ದರೆ, ವಿಶಾಲಾಕ್ಷಿ ಎಸ್ಸಿ (ಮಾದಿಗ) ಸಮುದಾಯಕ್ಕೆ ಸೇರಿದ್ದಳು. ಹೀಗಾಗಿ, ಅಂತರ್ಜಾತಿ ವಿವಾಹಕ್ಕೆ ಪೋಷಕರ ವಿರೋಧವಿತ್ತು. ಆದರೂ ವಿರೋಧದ ನಡುವೆ ಇಬ್ಬರೂ ಊರು ತೊರೆದು ನಾಯಕನಹಟ್ಟಿ ಬಳಿಯ ಚೌಡಮ್ಮ ದೇಗುಲದಲ್ಲಿ ಮದುವೆ ಆಗಿದ್ದರು. ಇದನ್ನು ತಿಪ್ಪೇಸ್ವಾಮಿ ಕುಟುಂಬಸ್ಥರು ವಿರೋಧಿಸಿದ್ದರಿಂದ ಆಸಾಮಿ ಪತ್ನಿಯಿಂದ ದೂರವಾಗಿದ್ದ. ದಾರಿಕಾಣದ ವಿಶಾಲಾಕ್ಷಿ ಕೂನಬೇವು ಗ್ರಾಮದಲ್ಲಿದ್ದ ತನ್ನ ತವರು ಮನೆಯಲ್ಲಿದ್ದುಕೊಂಡೇ ಮತ್ತೆ ಜಿಟಿಟಿಸಿ ತರಬೇತಿಯಲ್ಲಿ ತೊಡಗಿಸಿಕೊಂಡಿದ್ದರು. ಈ ನಡುವೆ ತಿಪ್ಪೇಸ್ವಾಮಿ ಬೇರೊಬ್ಬ ಮಹಿಳೆಯೊಂದಿಗೆ ವಿವಾಹವಾದ ವಿಚಾರ ತಿಳಿದು ವಿಶಾಲಾಕ್ಷಿ ನೇಣಿಗೆ ಶರಣಾಗಿದ್ದಾಳೆ. ಈ ಸಂಬಂಧ ತುರುವನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.…

Read More

ಬೆಂಗಳೂರು ಗ್ರಾಮಾಂತರ ಜಿಲ್ಲೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಟೌನ್ ಟೋಲ್ ಬಳಿ ಬೈಕ್​ ವ್ಹೀಲಿಂಗ್ ಹುಚ್ಚಾಟಕ್ಕೆ ಓರ್ವ ಯುವಕ ಬಲಿಯಾಗಿದ್ದಾನೆ. ದಾಸರಹಳ್ಳಿಯ ರಾಜೀಶ್(18) ಮೃತ ದುರ್ದೈವಿ. ವ್ಹೀಲಿಂಗ್ ವೇಳೆ ಎರಡು ಬೈಕ್ ​ಗಳ ನಡುವೆ ಡಿಕ್ಕಿ ಸಂಭವಿಸಿದ್ದು ಬೈಕ್ ಸವಾರ ಮೃತಪಟ್ಟಿದ್ದಾನೆ. ಘಟನೆಯಲ್ಲಿ ಮೂವರು ಗಾಯಗೊಂಡಿದ್ದಾರೆ. ವ್ಹೀಲಿಂಗ್ ಬೈಕ್ ನಲ್ಲಿದ್ದ ಮತ್ತೊಬ್ಬ ಸೊಹೈಲ್ ಗೆ ಗಂಭೀರ ಗಾಯಗಳಾಗಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮತ್ತೊಂದು ಬೈಕ್​ನ ಕೆಂಪರಾಜು, ತರುಣ್​ ಗೂ ಚಿಕಿತ್ಸೆ ನೀಡಲಾಗುತ್ತಿದೆ. ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಸ್ಕೂಟರ್‌ ಗೆ ಟೆಂಪೋ ಡಿಕ್ಕಿಯಾಗಿ ಸ್ಕೂಟರ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.  ಚಾಮರಾಜನಗರ ತಾಲೂಕು ಸಂತೇಮರಹಳ್ಳಿಯಲ್ಲಿ ಸಿಲ್ಕಲ್‌ ಪುರದ ರಾಜಣ್ಣ ಎಂಬಾತ ಮೃತಪಟ್ಟ ದುರ್ದೈವಿಯಾಗಿದ್ದಾನೆ. ಇನ್ನು ಹಿಂಬದಿ ಸವಾರನ ಸ್ಥಿತಿ ಚಿಂತಾಜನಕವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ. ಎಳೆನೀರು ತುಂಬಿಕೊಂಡು ಹೋಗುತ್ತಿದ್ದ ಟೆಂಪೋ ಓವರ್ ಟೇಕ್ ಮಾಡುವ ಭರದಲ್ಲಿ ಅಪಘಾತ ಸಂಭವಿಸಿದೆ. ಚಾಮರಾಜನಗರ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಪಾಟ್ನಾ: ಬಿಹಾರದಲ್ಲಿ ಭೀಕರ ಅಪಘಾತ ಸಂಭವಿಸಿದೆ. ಬಿಹಾರದ ಕೈಮೂರ್ ನಲ್ಲಿ ಟ್ರಕ್, ಜೀಪ್ ಮತ್ತು ಬೈಕ್ ನಡುವೆ ಸಂಭವಿಸಿದ ಸರಣಿ ಅಪಘಾತದಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ ಒಂಬತ್ತು ಜನ ಸಾವನ್ನಪ್ಪಿದ ಘಟನೆ ನಡೆದಿದೆ. ಜೀಪ್‍ ನಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ 8 ಮಂದಿ ಪ್ರಯಾಣಿಸುತ್ತಿದ್ದರು. ಈ ವೇಳೆ ಅದೇ ದಿಕ್ಕಿನಲ್ಲಿ ಚಲಿಸುತ್ತಿದ್ದ ಬೈಕ್‍ಗೆ ಜೀಪ್ ಡಿಕ್ಕಿ ಹೊಡೆದಿದೆ. ಬಳಿಕ ಎದುರಿನಿಂದ ಬರುತ್ತಿದ್ದ ಟ್ರಕ್ ಬೈಕ್ ಮತ್ತು ಟ್ರಕ್‍ಗೆ ಡಿಕ್ಕಿಯಾಗಿದೆ. ಪರಿಣಾಮ ಸ್ಥಳದಲ್ಲೇ ಬೈಕ್ ಸವಾರ ಹಾಗೂ ಜೀಪ್ ‍ನಲ್ಲಿದ್ದ 8 ಜನ ಸೇರಿದಂತೆ 9 ಮಂದಿ ಸಾವನ್ನಪ್ಪಿದ್ದಾರೆ. ಅಪಘಾತದ ಬಳಿಕ ಟ್ರಕ್ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ. ಟ್ರಕ್‍ನ್ನು ವಶಪಡಿಸಿಕೊಳ್ಳಲಾಗಿದೆ ಮತ್ತು ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ. ಅಪಘಾತದಲ್ಲಿ ಮೃತಪಟ್ಟವರ ಗುರುತು ಇನ್ನೂ ಪತ್ತೆಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತದ ಬಗ್ಗೆ ಬಿಹಾರ ಸಿಎಂ ನಿತೀಶ್ ಕುಮಾರ್ ತೀವ್ರ ಸಂತಾಪ ಸೂಚಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು…

Read More

ಭ್ರಷ್ಟಾಚಾರ ಪ್ರಕರಣದಲ್ಲಿ ತಮಿಳುನಾಡು ಗ್ರಾಮೀಣಾಭಿವೃದ್ಧಿ ಸಚಿವ ಐ ಪೆರಿಯಸ್ವಾಮಿ ತಿರುಗೇಟು ನೀಡಿದ್ದಾರೆ. ಹೌಸಿಂಗ್ ಬೋರ್ಡ್ ಪ್ರಕರಣದಲ್ಲಿ ಖುಲಾಸೆಗೊಳಿಸಿದ ವಿಶೇಷ ನ್ಯಾಯಾಲಯದ ಆದೇಶವನ್ನು ಮದ್ರಾಸ್ ಹೈಕೋರ್ಟ್ ರದ್ದುಗೊಳಿಸಿದೆ. ಅಲ್ಲದೆ ಪ್ರಕರಣದ ಮರು ವಿಚಾರಣೆ ನಡೆಸುವಂತೆಯೂ ಆದೇಶಿಸಲಾಗಿದೆ. ಹೈಕೋರ್ಟ್ ನ್ಯಾಯಮೂರ್ತಿ ಎನ್ ಆನಂದ್ ವೆಂಕಟೇಶ್ ಅವರು ಸ್ವಯಂಪ್ರೇರಿತ ಪರಿಷ್ಕರಣೆ ಆಧಾರದ ಮೇಲೆ ತೀರ್ಪು ನೀಡಿದ್ದಾರೆ. 2006ರಿಂದ 2011ರವರೆಗೆ ಗೃಹ ಮಂಡಳಿ ಸಚಿವರಾಗಿದ್ದ ಐ ಪೆರಿಯಸಾಮಿ ಅವರು, ದಿವಂಗತ ಮಾಜಿ ಮುಖ್ಯಮಂತ್ರಿ ಕರುಣಾನಿಧಿ ಅವರ ಅಂಗರಕ್ಷಕರಾಗಿದ್ದ ಗಣೇಶನ್ ಅವರಿಗೆ, ಗೃಹ ಮಂಡಳಿ ಒಡೆತನದ ಮನೆಯನ್ನು ಅಕ್ರಮವಾಗಿ ಮಂಜೂರು ಮಾಡಿದ್ದಾರೆ ಎಂದು ಪ್ರಕರಣದಲ್ಲಿ ಆರೋಪಿಸಲಾಗಿದೆ. ಕಳೆದ ಮಾರ್ಚ್‌ನಲ್ಲಿ ಸಂಸದರು ಮತ್ತು ಶಾಸಕರ ವಿರುದ್ಧದ ಪ್ರಕರಣಗಳ ವಿಚಾರಣೆ ನಡೆಸಿದ ವಿಶೇಷ ನ್ಯಾಯಾಲಯ ಸಚಿವ ಐ ಪೆರಿಯಾಸಾಮಿ ಅವರನ್ನು ಖುಲಾಸೆಗೊಳಿಸಿತ್ತು. ಈ ಆದೇಶವನ್ನು ಪರಿಶೀಲಿಸಲು ಮದ್ರಾಸ್ ಹೈಕೋರ್ಟ್ ನ್ಯಾಯಾಧೀಶ ಎನ್. ಆನಂದ್ ವೆಂಕಟೇಶ್ ಅವರು ಸ್ವಯಂಪ್ರೇರಿತವಾಗಿ ಪ್ರಕರಣವನ್ನು ಕೈಗೆತ್ತಿಕೊಂಡರು. ಪ್ರಕರಣದ ವಿಚಾರಣೆ ಫೆಬ್ರವರಿ 13 ರಂದು ಪೂರ್ಣಗೊಂಡಿತು. ಇಂದು ತೀರ್ಪು…

Read More

ಲೋಕಸಭೆ ಚುನಾವಣೆಗೂ ಮುನ್ನ ತಮಿಳುನಾಡಿನಲ್ಲಿ ಬಿಜೆಪಿ ಮೈತ್ರಿ ಮಾಡಿಕೊಂಡಿದೆ. ‘ತಮಿಳು ಮಾನಿಲಾ ಕಾಂಗ್ರೆಸ್’ (ಟಿಎಂಸಿ) ಬಿಜೆಪಿಯೊಂದಿಗೆ ಮೈತ್ರಿಯನ್ನು ಘೋಷಿಸಿತು. ಪಕ್ಷದ ಅಧ್ಯಕ್ಷ ಜಿ.ಕೆ. ವಾಸನ್ ಈ ಘೋಷಣೆ ಮಾಡಿದ್ದಾರೆ. ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಎನ್‌ ಡಿಎ ಮಿತ್ರಪಕ್ಷ ಬಿಜೆಪಿ ನಾಯಕತ್ವದಲ್ಲಿ ಟಿಎಂಸಿ ಸ್ಪರ್ಧಿಸಲಿದೆ ಎಂದು ವಾಸನ್ ಹೇಳಿದ್ದಾರೆ. ಲೋಕಸಭೆ ಚುನಾವಣೆಗೂ ಮುನ್ನ ತಮಿಳುನಾಡಿನಲ್ಲಿ ಬಿಜೆಪಿಯ ಮೊದಲ ಅಧಿಕೃತ ಮೈತ್ರಿ ಇದಾಗಿದೆ. ಬಲಿಷ್ಠ ಮತ್ತು ಸಮೃದ್ಧ ಭಾರತವಾಗಿರುವ ತಮಿಳುನಾಡು ಮತ್ತು ತಮಿಳರ ಕಲ್ಯಾಣದ ಮೇಲೆ ಬಿಜೆಪಿಯೊಂದಿಗೆ ಕೈಜೋಡಿಸುವ ನಿರ್ಧಾರವಾಗಿದೆ. ಫೆ.27ರಂದು ತಿರುಪುರ್ ಜಿಲ್ಲೆಯ ಪಲಡಂನಲ್ಲಿ ನಡೆಯಲಿರುವ ಪ್ರಧಾನಮಂತ್ರಿ ರ್ಯಾಲಿ ಯಲ್ಲಿಯೂ ಭಾಗವಹಿಸುವುದಾಗಿ ವಾಸನ್ ತಿಳಿಸಿದ್ದಾರೆ. ತಮಿಳುನಾಡಿನ ಮತದಾರರು ಭಾರಿ ಜನಬೆಂಬಲದೊಂದಿಗೆ ಬಿಜೆಪಿ ಎರಡು ಬಾರಿ ಗೆದ್ದಿದ್ದಾರೆ. ಆರ್ಥಿಕ ಅಭಿವೃದ್ಧಿ ಮತ್ತು ಬಡವರ ಅಭ್ಯುದಯವನ್ನು ಖಚಿತಪಡಿಸಿಕೊಳ್ಳಲು ಕೇಸರಿ ಪಕ್ಷವು ಮೂರನೇ ಬಾರಿಗೆ ಅಧಿಕಾರಕ್ಕೆ ಬರಬೇಕೆಂದು ಅವರು ಬಯಸುತ್ತಾರೆ. ಮೋದಿ ನೇತೃತ್ವದ ಮೂರನೇ ಆಡಳಿತವು ದೇಶವನ್ನು ಆರ್ಥಿಕ ಸಮೃದ್ಧಿ ಮತ್ತು ಬಡತನ ನಿವಾರಣೆಯತ್ತ ಕೊಂಡೊಯ್ಯುತ್ತದೆ ಎಂಬುದನ್ನು…

Read More