Subscribe to Updates
Get the latest creative news from FooBar about art, design and business.
- ಇ–ಪೌತಿ ಖಾತಾ ಆಂದೋಲನ–2 : ರೈತರಿಂದ ಅರ್ಜಿಗಳ ಸ್ವೀಕಾರ — ಬಾಕಿ ಆರ್ ಆರ್ ಟಿ ಅರ್ಜಿಗಳ ಶೀಘ್ರ ವಿಲೇವಾರಿಗೆ ಸೂಚನೆ
- ನೀಟ್ ಮರು ಪರೀಕ್ಷೆ ; ಕಟ್ಟುನಿಟ್ಟಿನ ಸಿದ್ಧತೆಗೆ ಎಡಿಸಿ ಸೂಚನೆ
- ಕೆಪಿಎಸ್ ಶಾಲೆಗೆ ಕುಂಕಮನಹಳ್ಳಿ ಶಾಲೆಯನ್ನು ವಿಲೀನಗೊಳಿಸದಂತೆ ಆಗ್ರಹ
- ಜೂನ್ 19ರಂದು ತುಮಕೂರಿನಲ್ಲಿ ಪ್ರಧಾನ ಮಂತ್ರಿ ವಿಕಸಿತ ಭಾರತ ಉದ್ಯೋಗ ಯೋಜನೆ ಫಲಾನುಭವಿಗಳಿಗೆ ಪ್ರೋತ್ಸಾಹಧನ ವಿತರಣೆ
- ಸಿರಾನಗರಸಭೆ ವ್ಯಾಪ್ತಿಯಲ್ಲಿ ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
- ಜು.18: ನ್ಯಾಯಾಲಯಗಳಲ್ಲಿ ವಿಶೇಷ ಲೋಕ ಅದಾಲತ್: ವಿವಿಧ ಬಾಕಿ ಪ್ರಕರಣಗಳ ಇತ್ಯರ್ಥಕ್ಕೆ ಸಹಕಾರಿ
- ಕೊರಟಗೆರೆ: ಆಟೋ ಡಿಕ್ಕಿಯಾಗಿ ಯುವಕ ಸಾವು
- ಸಮಾಜ ಕಲ್ಯಾಣ ಇಲಾಖೆ: ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಆರಂಭ
Author: admin
ಬೆಂಗಳೂರು: ಕರ್ನಾಟಕದ ಕಾಂಗ್ರೆಸ್ ಸರ್ಕಾರ ಮಂಡಿಸಿದ್ದ ಬಹುಚರ್ಚಿತ ‘ದ್ವೇಷ ಭಾಷಣ ಮಸೂದೆ’ (Hate Speech Bill) ಈಗ ರಾಷ್ಟ್ರಪತಿಗಳ ಅಂಗಳಕ್ಕೆ ತಲುಪಿದೆ. ಮಸೂದೆಗೆ ಸಹಿ ಹಾಕಲು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ನಿರಾಕರಿಸಿದ್ದು, ಈ ನಿರ್ಧಾರಕ್ಕೆ ಸಂಬಂಧಿಸಿದಂತೆ ಬರೋಬ್ಬರಿ 29 ಪ್ರಮುಖ ಕಾರಣಗಳನ್ನು ಉಲ್ಲೇಖಿಸಿದ್ದಾರೆ. ಅಸ್ಪಷ್ಟ ವ್ಯಾಖ್ಯಾನ: ಮಸೂದೆಯಲ್ಲಿ ‘ದ್ವೇಷ ಭಾಷಣ’ ಎಂಬ ಪದದ ವ್ಯಾಖ್ಯಾನವೇ ಅಸ್ಪಷ್ಟವಾಗಿದೆ. ಇದರಿಂದ ಧರ್ಮ, ಜಾತಿ ಅಥವಾ ವ್ಯಕ್ತಿಗಳ ಮೇಲೆ ಪೂರ್ವಾಗ್ರಹ ಪೀಡಿತ ಕ್ರಮ ಜರುಗುವ ಸಾಧ್ಯತೆ ಇದೆ ಎಂದು ರಾಜ್ಯಪಾಲರು ಆತಂಕ ವ್ಯಕ್ತಪಡಿಸಿದ್ದಾರೆ. ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆ: ಮಸೂದೆಯು ಸಂವಿಧಾನ ನೀಡಿರುವ ಅಭಿವ್ಯಕ್ತಿ ಸ್ವಾತಂತ್ರ್ಯ ಎಂಬ ಮೂಲಭೂತ ಹಕ್ಕನ್ನು ಕಸಿದುಕೊಳ್ಳುವ ಭೀತಿ ಇದೆ. ಪ್ರಜಾಪ್ರಭುತ್ವದ ಮುಕ್ತ ಚರ್ಚೆಗಳಿಗೆ ಇದು ಅಡ್ಡಿಯಾಗಬಹುದು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಅಸಮರ್ಪಕ ಚರ್ಚೆ: ಉಭಯ ಸದನಗಳಲ್ಲಿ (ವಿಧಾನಸಭೆ ಮತ್ತು ವಿಧಾನ ಪರಿಷತ್ತು) ಈ ಮಸೂದೆಯ ಬಗ್ಗೆ ಸಮರ್ಪಕ ಮತ್ತು ಅರ್ಥಪೂರ್ಣ ಚರ್ಚೆ ನಡೆಯದೆ ಅಂಗೀಕರಿಸಲಾಗಿದೆ ಎಂದು ರಾಜ್ಯಪಾಲರು ಆಕ್ಷೇಪಿಸಿದ್ದಾರೆ. ದುರುಪಯೋಗದ…
ಸರಗೂರು: ವಿದ್ಯಾರ್ಥಿಗಳು ಕಠಿಣ ಪರಿಶ್ರಮದಿಂದ ಓದಿ ಮುಂದೆ ಬರಬೇಕು. ಮಕ್ಕಳ ಬಗ್ಗೆ ಪೋಷಕರಿಗೆ ಇರುವಷ್ಟೇ ಶಿಕ್ಷಕರಿಗೂ ಇರುತ್ತದೆ ಎಂದು ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೈಸೂರು ಜಿಲ್ಲಾ ನಿರ್ದೇಶಕ ವಿ.ವಿಜಯ ಕುಮಾರ್ ನಾಗನಾಳ ತಿಳಿಸಿದರು. ಪಟ್ಟಣದ ಪಟ್ಟಣ 11 ನೇ ವಾರ್ಡಿನ ವ್ಯಾಪ್ತಿಯ ಪಡುವಲ ವಿರಕ್ತ ಮಠದ ಶ್ರೀ ಕಾಳ ಓಡಯ ಗುರುಗಳ ಮಹಾವಿಧ್ಯಾಪೀಠದಲ್ಲಿ ಶನಿವಾರದಂದು ಗುರುಕುಲೋತ್ಸವ 2026 ಸಾಲಿನ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಮಕ್ಕಳು ಹೆಚ್ಚಿನ ಸಮಯ ಶಿಕ್ಷಕರೊಂದಿಗೆ ಶಾಲೆಯಲ್ಲಿ ಕಳೆಯುತ್ತಾರೆ. ಮಕ್ಕಳ ಮೇಲೆ ಶಿಕ್ಷಕರು ಪ್ರಭಾವ ಬೀರುವುದರಿಂದ ಮಕ್ಕಳ ಉತ್ತಮ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡುವಂತೆ ಹೇಳಿದರು. ಮಕ್ಕಳಿಗೆ ಪಠ್ಯಕ್ರಮ ಎಷ್ಟು ಮುಖ್ಯವೋ ಪಠ್ಯೇತರ ಚಟುವಟಿಕೆ ಅಷ್ಟೇ ಮುಖ್ಯ. ಪ್ರತಿಯೊಬ್ಬ ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಯಲ್ಲಿ ಪಾಲ್ಗೊಳ್ಳ ಬೇಕು. ಉತ್ತಮ ಶಿಕ್ಷಣದೊಂದಿಗೆ ಉತ್ತಮ ದೇಹದಾರ್ಡ್ಯ ಹಾಗೂ ಆರೋಗ್ಯ ಹೊಂದುವಂತೆ ತಿಳಿಸಿದರು. ರಾಷ್ಟ್ರನಾಯಕರು, ಮಹಾನ್ ವ್ಯಕ್ತಿಗಳ ಸಾಧನೆ ಇಂದಿನ ಯುವ ಜನಾಂಗಕ್ಕೆ ಮಾದರಿಯಾಗಿ ಪ್ರೇರಣೆಯಾಗಬೇಕು’ ಎಂದರು…
ಸರಗೂರು: ಪಟ್ಟಣದಲ್ಲಿ ಶನಿವಾರ ಹಿಂದೂ ಸಮಾಜೋತ್ಸವದ ವತಿಯಿಂದ ಬೃಹತ್ ಶೋಭಾಯಾತ್ರೆ, ವಿಜೃಂಭಣೆಯಿಂದ ನೆರವೇರಿತು. ಸ್ನೇಹಸ್ತ್ರೀ ಸಮಾಜದ ಸಂಸ್ಥಾಪಕ ಅಧ್ಯಕ್ಷೆ ಸುಧಾ ಮೃತ್ಯುಂಜಪ್ಪ ಮಾತನಾಡಿ, ಇವಾಗ ಎಲ್ಲರು ಹಿಂದೂ ಸಂಸ್ಕೃತಿ ಬಿಟ್ಟು ವಿದೇಶ ಸಂಸ್ಕೃತಿಗೆ ಮಾರು ಹೋಗುತ್ತಿದ್ದಾರೆ. ವಿದೇಶಿಗಳು ನಮ್ಮ ಭಾರತ ಸಂಸ್ಕೃತಿ ಬಗ್ಗೆ ಮಾರು ಹೋಗಿ ನಮ್ಮ ಸಂಸ್ಕೃತಿ ದೊಡ್ಡದು ಎಂದು ತಿಳಿದು ಬರುತ್ತಿದ್ದಾರೆ. ಸಂಘಟನೆ ಮಾಡಬೇಕು, ದೇವಾಲಯಕ್ಕೆ ಹೋಗಬೇಕು, ಉಡುಗೆ ತೊಡುಗೆಯಿಂದ ನಮ್ಮ ಸಂಸ್ಕೃತಿ ಬಗ್ಗೆ ತಿಳಿಸುತ್ತದೆ ಎಂದರು. ರಾಷ್ಟ್ರೀಯ ಸ್ವಯಂ ಸೇವಕ ಸಂಘದ ದಕ್ಷಿಣ ಪ್ರಾಂತ ಕಾರ್ಯಕಾರಿಣಿ ಸದಸ್ಯ ರಾಧಾಕೃಷ್ಣ ಹೊಳ್ಳ ಮಾತನಾಡಿ, ಹಿಂದೂಗಳಾದ ನಮ್ಮಲ್ಲಿ ನಮ್ಮ ದೇಶದ, ನಮ್ಮಗಳ ಶಕ್ತಿ ಸಾಮರ್ಥ್ಯ ಏನು ಎಂಬುದನ್ನು ಪರಿಚಯಿಸಲು ಮತ್ತು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಶತಮಾನೋತ್ಸವದ ಹಿನ್ನೆಲೆಯಲ್ಲಿ ಎಲ್ಲೆಡೆ ಹಿಂದೂ ಸಮಾಜೋತ್ಸವ ಆಚರಿಲಾಗುತ್ತಿದೆ. ಮೊದಲು ಹಿಂದೂಗಳಲ್ಲಿ ಜಾಗೃತಿ ಮೂಡಿಸಬೇಕಿದೆ ಎಂದು ತಿಳಿಸಿದರು. ಭಾರತಾಂಬೆ ಏಕತೆ, ಸಂಸ್ಕೃತಿ ಹಾಗೂ ಪರಂಪರೆಯನ್ನು ಉಳಿಸಿ ಬೆಳೆಸುವುದು ಹಿಂದೂ ಸಮಾಜೋತ್ಸವದ ಉದ್ದೇಶವಾಗಿದೆ ಎಂದರು. ಹಂಚಿಪುರ…
ಪುತ್ತೂರು: ಸಾಂಸ್ಕೃತಿಕ ಶ್ರೀಮಂತಿಕೆಯ ಕರಾವಳಿಯ ಕ್ರೀಡೆ 33ನೇ ವರ್ಷದ ಹೊನಲು ಬೆಳಕಿನ ಕೋಟಿ ಚೆನ್ನಯ ಜೋಡುಕರೆ ಕಂಬಳವು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ದೇವಮಾರು ಗದ್ದೆಯಲ್ಲಿ ಜ.24 ರಂದು ಹಲವು ವಿಶೇಷಗಳಲ್ಲಿ ಜಾಗತಿಕವಾಗಿ ಜೇನು ಗಡ್ಡ ದಾರಿ ಜೇನು ಕೃಷಿ ವಿಶಿಷ್ಟ ಬರಹ ಸಂಶೋಧನೆ ಬೋರ್ಡ ದ್ರಾವಣ ಟೆಕ್ನಿಕ್ ರಾಷ್ಟ್ರೀಯ ಪ್ರಶಸ್ತಿ ಹಲವು ಪ್ರಶಸ್ತಿ ಸನ್ಮಾನ ಸಾಧಕ ಕೋತಿ ಕೋವಿ ಪರಿಸರ ಉಳಿವಿಗಾಗಿ ಸಿಮೆಂಟ್ ಶೀಟಿನಲ್ಲಿ ಜೇನು ಪೆಟ್ಟಿಗೆ ಪ್ರಕೃತಿ ವೈಚಿತ್ರಗಳ ಗಿಡಮೂಲಿಕೆಗಳ ಔಷಧಿಯ ವೈವಿಧ್ಯ ಬರಹಗಳನ್ನು ಸುಂದರ ಲೇಖನಗಳನ್ನು ನಾಡಿನಾದ್ಯಂತ ಪತ್ರಿಕೆಗಳಲ್ಲಿ ಗ್ರಾಮೀಣ ಭಾಗದ ಹವ್ಯಾಸಿ, ವರದಿಗಾರರಾಗಿ ಅಲ್ಲವೇ ವಿನೂತನ ಪರಿಕಲ್ಪನೆ ಯೊಂದಿಗೆ ಸ್ವರ ಸಿಂಚನ ಕಲಾತಂಡ ದ ಸಂಗೀತವನ್ನು ಪ್ರಸರಿಸುವಲ್ಲಿ ಸಲ್ಲಿಸಿದ ಅನುಪಮ ಸೇವೆಗಾಗಿ ಕಲಾ ಪ್ರೋತ್ಸಾಹಕರಾಗಿ ಕಲಾ ನಿರ್ದೇಶಕರಾಗಿದ್ದು ಕೃಷಿ ಸಾಹಿತ್ಯ ಕ್ಷೇತ್ರದಲ್ಲಿ ಕುಮಾರ್ ಪೆರ್ನಾಜೆ ಸಾಧನೆಗೆ ಸಮಾರಂಭದ ಅಧ್ಯಕ್ಷರು ಶಾಸಕರು ಆದ ಅಶೋಕ್ ಕುಮಾರ್ ರೈ ಶಾಲು ಪೇಟ ಹೊದಿಸಿ ಸನ್ಮಾನ ಪತ್ರಗಳನ್ನಿತ್ತು ಸನ್ಮಾನಿಸಿದರು. ಕಂಬಳ…
ಬೆಂಗಳೂರಿನಲ್ಲಿ ಮನೆಗೆಲಸಕ್ಕೆ ಸೇರಿಕೊಂಡು ಮಾಲೀಕರ ವಿಶ್ವಾಸ ಗಳಿಸಿ, ಬರೋಬ್ಬರಿ 18 ಕೋಟಿ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ದೋಚಿದ್ದ ನೇಪಾಳಿ ದಂಪತಿಯ ಪ್ರಕರಣವೊಂದು ಈಗ ಬೆಳಕಿಗೆ ಬಂದಿದೆ. ಈ ಸಂಬಂಧ ಮಾರತಹಳ್ಳಿ ಪೊಲೀಸರು ತನಿಖೆ ತೀವ್ರಗೊಳಿಸಿದ್ದು, ಆರೋಪಿಗಳ ಪತ್ತೆಗಾಗಿ ಬಲೆ ಬೀಸಿದ್ದಾರೆ. ದಿನೇಶ್ ಮತ್ತು ಕಮಲ (ಅಥವಾ ಸಲೀನಾ) ಎಂಬ ನಕಲಿ ಹೆಸರುಗಳನ್ನು ಬಳಸಿಕೊಂಡು ಈ ದಂಪತಿ ಮನೆಯಲ್ಲಿ ಕೆಲಸಕ್ಕೆ ಸೇರಿಕೊಂಡಿದ್ದರು. ನಕಲಿ ಗುರುತಿನ ಚೀಟಿಗಳನ್ನು ನೀಡಿ ಮಾಲೀಕರನ್ನು ನಂಬಿಸಿದ್ದ ಇವರು, ಸಂಚು ರೂಪಿಸಿ ಕೋಟ್ಯಂತರ ರೂಪಾಯಿ ಮೌಲ್ಯದ ಬಂಗಾರವನ್ನು ಹೊತ್ತೊಯ್ದಿದ್ದಾರೆ. ತನಿಖೆಯ ವೇಳೆ ಈ ಜೋಡಿಯು ಈ ಹಿಂದೆ ಮಹಾರಾಷ್ಟ್ರದ ಪುಣೆಯಲ್ಲಿಯೂ ಇದೇ ರೀತಿಯ ಕೃತ್ಯ ಎಸಗಿರುವುದು ತಿಳಿದುಬಂದಿದೆ. ಅಲ್ಲಿನ ನಿವೃತ್ತ ಸರ್ಕಾರಿ ಅಧಿಕಾರಿಯೊಬ್ಬರ ಮನೆಯಲ್ಲಿ ಸುಮಾರು 16 ಲಕ್ಷ ರೂ. ಮೌಲ್ಯದ ಆಭರಣಗಳನ್ನು ಕಳವು ಮಾಡಿದ್ದರು. ಪ್ರಸ್ತುತ ಆರೋಪಿಗಳು ನೇಪಾಳಕ್ಕೆ ಪರಾರಿಯಾಗಿರುವ ಶಂಕೆ ವ್ಯಕ್ತವಾಗಿದ್ದು, ಅವರನ್ನು ಸೆರೆಹಿಡಿಯಲು ಪೊಲೀಸರು ಮುಂಬೈ, ಕೋಲ್ಕತ್ತಾ ಮತ್ತು ನೇಪಾಳದ ಗಡಿ ಭಾಗಗಳಲ್ಲಿ ಏಳು ವಿಶೇಷ…
ಕೊರಟಗೆರೆ : ಭಾರತ ದೇಶವನ್ನು ಅನೇಕ ರಾಜ ಮನೆತನಗಳು ಆಳ್ವಿಕೆ ಮಾಡಿದ ಇತಿಹಾಸವಿದೆ ಶೋಷಿತ ಸಮುದಾಯದ ಮಹಾರಾಜನೊಬ್ಬ ಮೇಲ್ಜಾತಿಗಳ ನಾಯಕತ್ವವಹಿಸಿ ದಕ್ಷಿಣ ಭಾಗದ ಸಂಜೀವಿನಿ ಕ್ಷೇತ್ರ ಸಿದ್ದರತಪೋ ವನ ಎಂದೇ ಪ್ರಖ್ಯಾತಿ ಹೊಂದಿರುವ ಸಿದ್ದರಬೆಟ್ಟ (ಬೂದಗವಿ) ಸಂಸ್ಥಾನದ ಮಹಾರಾಜರಾಗಿ ಆಳ್ವಿಕೆ ಮಾಡಿರುವ ಮಾದಿಗ ಸಮುದಾಯದ ಮೊದಲ ರಾಜ ಅರಸು ಕುರಂಗರಾಜನ 278ನೇ ಪಟ್ಟಾಭಿಷೇಕ ಮಹೋತ್ಸವವನ್ನು ದಲಿತ ಮುಖಂಡರು ಹಾಗೂ ಚಿಂತಕರು ಅದ್ದೂರಿಯಾಗಿ ಆಚರಣೆ ಮಾಡಿದರು. ಪಟ್ಟಣದ ಎಸ್ ಎಸ್ ಆರ್ ಸರ್ಕಲ್ ನಲ್ಲಿ ದಲಿತ ಚಕ್ರವರ್ತಿ ಕುರಂಗರಾಜನ ಪ್ರತಿಮೆಗೆ ಮಾದಿಗ ಸಮುದಾಯದ ಮುಖಂಡರುಗಳ ನೇತೃತ್ವದಲ್ಲಿ ಮಹಾರಾಜನಿಗೆ ಪುಷ್ಪಾರ್ಚನೆಯನ್ನು ಮಾಡಿ 278ನೇ ಪಟ್ಟಾಭಿಷೇಕವನ್ನು ನೆನಪಿಸಿ ಗೌರವವನ್ನು ಸಲ್ಲಿಸಿದರು. ಖ್ಯಾತ ಪ್ರಾಧ್ಯಾಪಕರು ಹಾಗೂ ಸಾಹಿತಿಗಳಾದ ಡಾ.ಓ.ನಾಗರಾಜ್ ಮಾತನಾಡಿ, ಕುರಂಗರಾಜ ತಳ ಸಮುದಾಯದ ಅಸ್ಮಿತೆಯಾಗಿದ್ದು ಇವರ ಈ ಪಟ್ಟಾಭಿಷೇಕದ ಮಹೋತ್ಸವ ಇತಿಹಾಸದಲ್ಲಿ ದಾಖಲಿಸಲಿದ್ದು, ಕೊರಟಗೆರೆ ಪಟ್ಟಣದ ಪ್ರಥಮ ದರ್ಜೆ ಕಾಲೇಜಿನಲ್ಲಿ ನಾನು ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದಾಗ ಸಿದ್ದರಬೆಟ್ಟಕ್ಕೆ ಚಾರಣ ಕೈಗೊಂಡ ಸಂದರ್ಭದಲ್ಲಿ ಕುರಂಗರಾಜನ ಬಗ್ಗೆ ಕೆಲವು…
ತುರುವೇಕೆರೆ: ತಾಲೂಕಿನ ಕಣಕೂರಿನಲ್ಲಿ ಫೆ.6ರಂದು ನಡೆಯಲಿರುವ ಟಿ.ಟಿ.ಡಿ. ಶ್ರೀ ಲಕ್ಷ್ಮೀ ವೆಂಕಟೇಶ್ವರ ಸ್ವಾಮಿ ಕಲ್ಯಾಣೋತ್ಸವದ ರೂಪರೇಷೆ ಕುರಿತು ತಾಲೂಕು ದಂಡಾಧಿಕಾರಿ ಕುಂಞಿ ಅಹಮದ್ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ ನಡೆಸಿದರು. ಕಾರ್ಯಕ್ರಮ ಸುಗಮವಾಗಿ ನಡೆಯಲು ತೆಗೆದುಕೊಳ್ಳಬೇಕಾದ ಅಗತ್ಯ ಕ್ರಮಗಳ ಬಗ್ಗೆ ಆಯಾ ಅಧಿಕಾರಿಗಳೊಂದಿಗೆ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳಲು ತಾಲೂಕು ಮಟ್ಟದ ಅಧಿಕಾರಿಗಳಿಗೆ ಸೂಚಿಸಿದರು. ಶ್ರೀ ಬಾಲಾಜಿ ಸೇವಾ ಟ್ರಸ್ಟ್ (ರಿ) ಸಂಸ್ಥಾಪಕ ಅಧ್ಯಕ್ಷ ಬಾಲಾಜಿ ಕೆ. ಕುಮಾರ್, ತಾಲೂಕು ಪಂಚಾಯಿತಿ ಇ.ಓ. ಅನಂತರಾಜು, ಸರ್ಕಲ್ ಇನ್ಸ್ಪೆಕ್ಟರ್ ಲೋಹಿತ್, ಡಿ.ಹೆಚ್.ಓ ಡಾ. ರಂಗನಾಥ್, ಅಗ್ನಿಶಾಮಕ ಅಧಿಕಾರಿ ಶ್ರೀನಿವಾಸ್, ಬೆಸ್ಕಾಂ ಎ.ಇ.ಇ ರಾಜಶೇಖರ್, ಪಿಡಬ್ಲ್ಯೂಡಿ ಅಧಿಕಾರಿ ನೂರೂಲ್ಲ, ಕುಡಿಯುವ ನೀರು ಸರಬರಾಜು ಇಲಾಖೆ ಅಬ್ದುಲ್ ಅಶಾಮ್, ರೈತ ಸಂಘದ ಅಧ್ಯಕ್ಷ ಕಣಕೂರು ಚಂದ್ರಶೇಖರ್, ಸಚಿನ್ ಸೇರಿದಂತೆ ಇತರರು ಉಪಸ್ಥಿತರಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್…
ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಭಾನುವಾರ (ಫೆಬ್ರವರಿ 1, 2026) ದಾಖಲೆಯ ಸತತ 9ನೇ ಬಾರಿಗೆ ಕೇಂದ್ರ ಬಜೆಟ್ ಅನ್ನು ಮಂಡಿಸಿದ್ದಾರೆ. ಸುಮಾರು 1 ಗಂಟೆ 25 ನಿಮಿಷಗಳ ಕಾಲ ನಡೆದ ಭಾಷಣದಲ್ಲಿ ಆರ್ಥಿಕ ಬೆಳವಣಿಗೆ, ಮೂಲಸೌಕರ್ಯ ಮತ್ತು ಉದ್ಯೋಗ ಸೃಷ್ಟಿಗೆ ಹೆಚ್ಚಿನ ಒತ್ತು ನೀಡಲಾಗಿದೆ. ತೆರಿಗೆದಾರರಿಗೆ ಸಿಹಿ–ಕಹಿ: ಹೊಸ ಆದಾಯ ತೆರಿಗೆ ಪದ್ಧತಿಯಲ್ಲಿ ಯಾವುದೇ ಮಹತ್ವದ ಬದಲಾವಣೆ ಮಾಡಿಲ್ಲ. ತೆರಿಗೆ ಪಾವತಿ ವಿಳಂಬಕ್ಕೆ ಶೇ 10ರಷ್ಟು ದಂಡ ವಿಧಿಸಲು ನಿರ್ಧರಿಸಲಾಗಿದೆ. ಐಟಿ ರಿಟರ್ನ್ಸ್ ಸಲ್ಲಿಕೆಯ ಅವಧಿಯನ್ನು ಡಿಸೆಂಬರ್ 31ರಿಂದ ಮಾರ್ಚ್ 31ರವರೆಗೆ ವಿಸ್ತರಿಸಲಾಗಿದೆ. ಸಿಗರೇಟು ಮತ್ತು ಮದ್ಯದ ಮೇಲಿನ ತೆರಿಗೆಯನ್ನು ಹೆಚ್ಚಿಸಲಾಗಿದೆ. ಆರೋಗ್ಯ ಕ್ಷೇತ್ರಕ್ಕೆ ಕೊಡುಗೆ: ಕ್ಯಾನ್ಸರ್ ಚಿಕಿತ್ಸೆಗೆ ಸಂಬಂಧಿಸಿದ 17 ಪ್ರಮುಖ ಔಷಧಗಳ ಮೇಲಿನ ತೆರಿಗೆ ಇಳಿಕೆ ಮಾಡಲಾಗಿದೆ. 7 ಅಪರೂಪದ ಕಾಯಿಲೆಗಳ ಔಷಧಗಳ ಬೆಲೆ ಇಳಿಕೆಯಾಗಲಿದೆ. ಉತ್ತರ ಭಾರತದಲ್ಲಿಯೂ ಬೆಂಗಳೂರಿನ ಮಾದರಿಯ ‘ನಿಮ್ಹಾನ್ಸ್’ (NIMHANS) ಸ್ಥಾಪನೆಗೆ ಘೋಷಣೆ ಮಾಡಲಾಗಿದೆ. ರೈಲ್ವೆ ಮತ್ತು ಮೂಲಸೌಕರ್ಯ:…
ತಿಪಟೂರು: ನಗರದ ಎಸ್ ವಿಪಿ ವಿದ್ಯಾಸಂಸ್ಥೆಯ ಆವರಣದಲ್ಲಿ ಜೆಡಿಎಸ್ ಮುಖಂಡ ಕೆ.ಟಿ. ಶಾಂತಕುಮಾರ್ ಅವರ ನೇತೃತ್ವದಲ್ಲಿ ಶನಿವಾರ ಆಯೋಜಿಸಲಾಗಿದ್ದ ಬೃಹತ್ ಉದ್ಯೋಗ ಮೇಳವು ಯಶಸ್ವಿಯಾಗಿ ಜರುಗಿತು. ಈ ಮೇಳದಲ್ಲಿ ಒಟ್ಟು 396 ಉದ್ಯೋಗಾಕಾಂಕ್ಷಿಗಳು ಸ್ಥಳದಲ್ಲೇ ನೇಮಕಾತಿ ಪತ್ರಗಳನ್ನು ಪಡೆದುಕೊಂಡಿದ್ದಾರೆ. ಭಾಗವಹಿಸಿದ ಕಂಪನಿಗಳು: ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ್ದ ಸುಮಾರು 74 ಖಾಸಗಿ ಕಂಪನಿಗಳು ಮೇಳದಲ್ಲಿ ಪಾಲ್ಗೊಂಡಿದ್ದವು. ಉದ್ಯೋಗಾವಕಾಶ: ಮೇಳದಲ್ಲಿ ಒಟ್ಟು 9,495ಕ್ಕೂ ಹೆಚ್ಚು ಉದ್ಯೋಗಾವಕಾಶಗಳು ಲಭ್ಯವಿದ್ದವು. ನೋಂದಣಿ: ಸುಮಾರು 800ಕ್ಕೂ ಹೆಚ್ಚು ನಿರುದ್ಯೋಗಿ ಯುವಕ-ಯುವತಿಯರು ಉದ್ಯೋಗಕ್ಕಾಗಿ ನೋಂದಾಯಿಸಿಕೊಂಡಿದ್ದರು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ, “ಸಮಯ ಮತ್ತು ಸಮುದ್ರದ ಅಲೆಗಳು ಯಾರಿಗೂ ಕಾಯುವುದಿಲ್ಲ. ಯುವಜನರು ನಿರಂತರ ಪ್ರಯತ್ನದ ಮೂಲಕ ಸ್ವಾವಲಂಬಿ ಜೀವನ ನಡೆಸಬೇಕು” ಎಂದು ಕಿವಿಮಾತು ಹೇಳಿದರು. ಮೇಳದ ಸಂಘಟಕರಾದ ಕೆ.ಟಿ. ಶಾಂತಕುಮಾರ್ ಮಾತನಾಡಿ, ಇಂದಿನ ತಂತ್ರಜ್ಞಾನ ಮತ್ತು ಎಐ (AI) ಯುಗದಲ್ಲಿ ಉದ್ಯೋಗಾವಕಾಶಗಳು ಹೆಚ್ಚಾಗಿವೆ. ಯುವಕರು ಇದರ ಸದುಪಯೋಗ ಪಡಿಸಿಕೊಳ್ಳಬೇಕು. ಇದೇ ವೇಳೆ ಅವರು…
ತುಮಕೂರು: “ಅಹಿಂಸೆ, ಸಮಾನತೆ, ಶಾಂತಿ ಮತ್ತು ಮಾನವೀಯ ಮೌಲ್ಯಗಳನ್ನು ಪ್ರತಿಪಾದಿಸಿದ ಮಹಾತ್ಮ ಗಾಂಧೀಜಿಯವರ ಹತ್ಯೆಯು ಕೇವಲ ಒಬ್ಬ ವ್ಯಕ್ತಿಯ ಕೊಲೆಯಲ್ಲ, ಅದು ಮೌಲ್ಯಗಳ ವಿರುದ್ಧದ ದ್ವೇಷವಾಗಿದೆ” ಎಂದು ಹೋರಾಟಗಾರ ಕೆ.ದೊರೈರಾಜ್ ಅಭಿಪ್ರಾಯಪಟ್ಟಿದ್ದಾರೆ. ನಗರದಲ್ಲಿ ಶುಕ್ರವಾರ ‘ಸೌಹಾರ್ದ ಕರ್ನಾಟಕ’ ಸಂಘಟನೆಯ ವತಿಯಿಂದ ಆಯೋಜಿಸಲಾಗಿದ್ದ ಹುತಾತ್ಮರ ದಿನಾಚರಣೆ ಮತ್ತು ಪ್ರತಿಜ್ಞಾ ವಿಧಿ ಬೋಧನೆ ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದರು. ಆಧುನಿಕ ಗೋಡ್ಸೆಗಳ ಎಚ್ಚರಿಕೆ: ಪ್ರಸ್ತುತ ಕಾಲಘಟ್ಟದಲ್ಲಿ ‘ಆಧುನಿಕ ಗೋಡ್ಸೆಗಳು’ ಸುಳ್ಳುಗಳನ್ನು ಹರಡುವ ಮೂಲಕ ಗಾಂಧೀಜಿಯವರ ವಿಚಾರಗಳನ್ನು ಮರೆಮಾಚುವ ಕೆಲಸ ಮಾಡುತ್ತಿದ್ದಾರೆ. ಗಾಂಧೀಜಿಯೇ ಸುಳ್ಳು ಎಂಬ ಭಾವನೆಯನ್ನು ಜನರಲ್ಲಿ ಬಿತ್ತಲು ಪ್ರಯತ್ನಿಸುತ್ತಿದ್ದಾರೆ ಎಂದು ದೊರೈರಾಜ್ ಕಿಡಿಕಾರಿದರು. ಸಂವಿಧಾನಕ್ಕೆ ಧಕ್ಕೆ: ಪರಿಸರವಾದಿ ಸಿ.ಯತಿರಾಜು ಮಾತನಾಡಿ, “ಗಾಂಧಿಯನ್ನು ಕೊಂದವರು ಇಂದು ಸಂವಿಧಾನವನ್ನು ಕೊಲ್ಲಲು ಮುಂದಾಗಿದ್ದಾರೆ. ದೇಶವು ವಸಾಹತುಶಾಹಿ ನೀತಿಗಳಿಗೆ ಬಲಿಯಾಗುತ್ತಿದ್ದು, ಸಂವಿಧಾನದ ಆಶಯಗಳನ್ನು ಹತ್ತಿಕ್ಕುವ ಕೆಲಸ ನಡೆಯುತ್ತಿದೆ” ಎಂದು ಕಳವಳ ವ್ಯಕ್ತಪಡಿಸಿದರು. ಯುವ ಸಮೂಹಕ್ಕೆ ಕರೆ: ಅಸಹಿಷ್ಣುತೆ ಮತ್ತು ಅಶಾಂತಿ ಹೆಚ್ಚುತ್ತಿರುವ ಈ ಸಮಯದಲ್ಲಿ ಯುವಜನತೆ ಗಾಂಧೀಜಿಯವರ ತತ್ತ್ವಗಳನ್ನು ಹೆಚ್ಚು…