Subscribe to Updates
Get the latest creative news from FooBar about art, design and business.
- ದೇಶದ 2ನೇ ಅತಿ ದೊಡ್ಡ ಕ್ರಿಕೆಟ್ ಕ್ರೀಡಾಂಗಣಕ್ಕೆ ಸಿಎಂ ಸಿದ್ದರಾಮಯ್ಯ ಶಂಕುಸ್ಥಾಪನೆ
- ಈ ವರ್ಷ 52 ಸಾವಿರ ಅತಿಥಿ ಶಿಕ್ಷಕರ ನೇಮಕ: ಸಚಿವ ಮಧು ಬಂಗಾರಪ್ಪ
- ಬೀದರ್ ಬ್ರಿಮ್ಸ್ (BRIMS) ಆಸ್ಪತ್ರೆಯಲ್ಲಿ ಕರ್ತವ್ಯ ನಿರತ ವೈದ್ಯರ ಮೇಲೆ ಭೀಕರ ಹಲ್ಲೆ: 7 ಮಂದಿ ಆರೋಪಿಗಳ ಬಂಧನ
- ತುಮಕೂರು ಜಿಲ್ಲೆಗೆ ‘ತುಮಕೂರು (ಬೆಂಗಳೂರು ಉತ್ತರ)’ ಎಂದು ಮರುನಾಮಕರಣ: ಗೃಹ ಸಚಿವ ಡಾ.ಜಿ.ಪರಮೇಶ್ವರ್
- ಮಾದಾವರ–ತುಮಕೂರು ಮೆಟ್ರೋ ರೈಲು ಯೋಜನೆ: ಸರ್ಕಾರಕ್ಕೆ ಸಲ್ಲಿಕೆಯಾಯ್ತು ಡಿಪಿಆರ್ ವರದಿ
- ಪಕ್ಷದ ಜವಾಬ್ದಾರಿ ನಿರ್ವಹಿಸದಿದ್ದರೆ ಶಿಸ್ತು ಕ್ರಮ: ಕಾಂಗ್ರೆಸ್ ಮುಖಂಡರ ಸಭೆಯಲ್ಲಿ ಶಾಸಕ ಕೆ. ಷಡಕ್ಷರಿ ಎಚ್ಚರಿಕೆ
- ಗುಬ್ಬಿ ಶಾಸಕರು, ಪುತ್ರನಿಂದ ಕುತಂತ್ರ ರಾಜಕಾರಣ: ಷಡ್ಯಂತ್ರಗಳಿಗೆ ಜಗ್ಗುವುದಿಲ್ಲ: ಜೆಡಿಎಸ್ ಮುಖಂಡ ನಾಗರಾಜು ಕಿಡಿ
- ತುಮಕೂರು: ಕುಲ್ಲಕ ವಿಷಯಕ್ಕೆ ಜಗಳ: ಕೊಲೆ
Author: admin
ಜ್ಞಾನವಾಪಿ ಸಂಕೀರ್ಣದ ‘ವ್ಯಾಸ್ ತೆಹ್ಖಾನಾ’ದಲ್ಲಿ ಪೂಜೆ ಸಲ್ಲಿಸಲು ಹಿಂದೂಗಳಿಗೆ ಅನುಮತಿ ನೀಡಿದ ಆದೇಶವನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ಇಂದು ವಜಾಗೊಳಿಸಿದೆ. ಈ ಮೂಲಕ ಜ್ಞಾನವಾಪಿ ಮಸೀದಿ ಪ್ರಕರಣ ಸಂಬಂಧ ಹಿಂದೂಗಳಿಗೆ ಮತ್ತೆ ಜಯ ಸಿಕ್ಕಿದೆ. ವಾರಣಾಸಿ ಜಿಲ್ಲಾ ನ್ಯಾಯಾಧೀಶರು ಇತ್ತೀಚೆಗೆ ಆದೇಶ ನೀಡಿದ್ದ ಪೂಜೆಯನ್ನು ಮುಂದುವರಿಸಲಾಗುವುದು ಎಂದು ಹೈಕೋರ್ಟ್ ಆದೇಶ ನೀಡಿದೆ. ಅಲಹಾಬಾದ್ ಹೈಕೋರ್ಟ್ನಲ್ಲಿ ನ್ಯಾಯಮೂರ್ತಿ ರೋಹಿತ್ ರಂಜನ್ ಅಗರ್ವಾಲ್ ಅವರ ಪೀಠವು, ಜ್ಞಾನವಾಪಿ ಮಸೀದಿಯನ್ನು ನಿರ್ವಹಿಸುವ ಸಂಸ್ಥೆಯಾದ ಅಂಜುಮನ್ ಇಂತೇಜಾಮಿಯಾ ಮಸೀದಿ ಸಮಿತಿ ಸಲ್ಲಿಸಿದ ಮೇಲ್ಮನವಿಯನ್ನು ಆಲಿಸಿ ತನ್ನ ತೀರ್ಪನ್ನು ಕಾಯ್ದಿರಿಸಿದೆ. ಇನ್ನು ಕೋರ್ಟ್ ತೀರ್ಪು ಸಂಬಂಧ ಹಿಂದೂ ಪರ ವಕೀಲ ವಿಷ್ಣು ಶಂಕರ್ ಜೈನ್ ಪ್ರತಿಕ್ರಿಯಿಸಿ, ಇಂದು ಅಲಹಾಬಾದ್ ಹೈ ಕೋರ್ಟ್ ಅಂಜುಮನ್ ಇಂತೇಜಾಮಿಯಾ ಮಸೀದಿ ಸಮಿತಿ ಆದೇಶದ ಮೊದಲ ಮೇಲ್ಮನವಿಯನ್ನು ವಜಾಗೊಳಿಸಿದೆ. ಇದರಲ್ಲಿ ವಾರಣಾಸಿ ಜಿಲ್ಲಾ ನ್ಯಾಯಾಲಯವು ಜನವರಿ 17 ಮತ್ತು 31 ರಂದು ನೀಡಿದ್ದ ಆದೇಶವನ್ನು ಅಲಹಾಬಾದ್ ಹೈಕೋರ್ಟ್ನಲ್ಲಿ ಪ್ರಶ್ನಿಸಲಾಗಿದೆ. ಜ್ಞಾನವಾಪಿ ಕಾಂಪ್ಲೆಕ್ಸ್ನ…
ಬೆಣ್ಣೆ ತಿಂದರೆ ಕ್ಯಾಲ್ಸಿಯಂ ಹೇರಳವಾಗಿ ಸಿಗುತ್ತೆ: ಬೆಣ್ಣೆ ತಿನ್ನೋದ್ರಿಂದ ದೇಹದಲ್ಲಿ ಕೊಲೆಸ್ಟ್ರಾಲ್ ಹೆಚ್ಚಾಗುತ್ತೆ ಜೊತೆಗೆ ಹೃದಯರಕ್ತನಾಳದ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ಕೆಲವು ಜನರು ಅಂದುಕೊಂಡಿದ್ದಾರೆ. ಆದರೆ ನಿಜವಾಗಿ ಹಾಗೆ ಇಲ್ವೇ ಇಲ್ಲ, ಬೆಣ್ಣೆ ಆರೋಗ್ಯಕ್ಕೆ ಅನೇಕ ರೀತಿಯಲ್ಲಿ ಪ್ರಯೋಜನಕಾರಿಯಾಗಿದೆ. ಬೆಣ್ಣೆಯಲ್ಲಿ ವಿಟಮಿನ್ ಡಿ ನಂತಹ ಪ್ರಮುಖ ಪೋಷಕಾಂಶಗಳಿವೆ, ಇದು ಮೂಳೆಗಳ ಬೆಳವಣಿಗೆ ಮತ್ತು ಅಭಿವೃದ್ಧಿಗೆ ಸಹಾಯ ಮಾಡುತ್ತದೆ. ಇದಲ್ಲದೆ, ಇದು ಕ್ಯಾಲ್ಸಿಯಂನ ಉತ್ತಮ ಮೂಲವಾಗಿದೆ, ಇದು ಮೂಳೆಯ ಆರೋಗ್ಯಕ್ಕೆ ಬಹಳ ವಿಶೇಷ ಪೋಷಣೆ ನೀಡುತ್ತದೆ. ಆಲೂಗಡ್ಡೆ ಜ್ಯೂಸ್ ನಲ್ಲಿವೆ ಅದ್ಭುತ ಆರೋಗ್ಯ ಪ್ರಯೋಜನಗಳು: ಆಲೂ ಜ್ಯೂಸ್ ಕುಡಿಯುವುದರಿಂದ ಮಾನವ ದೇಹಕ್ಕೆ ಹಲವಾರು ಪ್ರಯೋಜನಗಳಿವೆ ಎಂದು ಸಮೀಕ್ಷೆಯೊಂದು ಬಹಿರಂಗಪಡಿಸಿದೆ. ಸಮೀಕ್ಷೆಯ ಪ್ರಕಾರ, ಆಲೂಗಡ್ಡೆಯಲ್ಲಿ ವಿಟಮಿನ್ ಸಿ ಅಧಿಕವಾಗಿದೆ. ಆಲೂಗಡ್ಡೆಯ ಜ್ಯೂಸ್ ಕುಡಿದರೆ ತೂಕ ಕಡಿಮೆಯಾಗುತ್ತದೆ. ಹೃದಯರಕ್ತನಾಳದ ಆರೋಗ್ಯವನ್ನು ಸುಧಾರಿಸುತ್ತದೆ. ಕಣ್ಣು, ಚರ್ಮ, ಹಲ್ಲು ಮತ್ತು ನರಮಂಡಲದ ಆರೋಗ್ಯವೂ ಸುಧಾರಿಸುತ್ತದೆ. ಇದು ಅಜೀರ್ಣಕ್ಕೂ ಸಹಾಯ ಮಾಡುತ್ತದೆ. ಚರ್ಮವನ್ನು ಸ್ವಚ್ಛಗೊಳಿಸುತ್ತದೆ. ಉಬ್ಬುವಿಕೆಯನ್ನು ಕಡಿಮೆ ಮಾಡುತ್ತದೆ. ಆರೋಗ್ಯ…
ಮಸಾಜ್ ಪಾರ್ಲರ್ ಹೆಸರಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಯಲಂಹಕದ ರೋರಾ ಲಕ್ಸುರಿ ಥಾಯ್ ಸ್ಪಾ ಮೇಲೆ ಪೊಲೀಸರು ದಾಳಿ ಮಾಡಿದ್ದು, ಮೂವರು ಆರೋಪಿಗಳನ್ನು ಬಂಧಿಸಿದ ಘಟನೆ ನಡೆದಿದೆ. ಏಳು ಮಂದಿ ವಿದೇಶಿ ಮಹಿಳೆಯರನ್ನು ರಕ್ಷಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದು, ಯಲಹಂಕ ಉಪ ನಗರದ ಬಿ ಸೆಕ್ಟರ್ ನಲ್ಲಿರುವ ಕಟ್ಟಡದಲ್ಲಿ ವೇಶ್ಯಾವಾಟಿಕೆ ನಡೆಸುತ್ತಿರುವುದರ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ಥಾಯ್ಲೆಂಡ್ ದೇಶದ ಮಹಿಳೆಯರನ್ನು ಕರೆತಂದು ವೇಶ್ಯಾವಾಟಿಕೆ ನಡೆಸುತ್ತಿರುವುದು ಗೊತ್ತಾಗಿದೆ. ಟೂರಿಸ್ಟ್ ವೀಸಾ ಹಾಗೂ ಬಿಸ್ನೆಸ್ ವೀಸಾ ಮೂಲಕ ಆರೋಪಿಗಳು ಮಹಿಳೆಯರನ್ನು ಕರೆ ತಂದಿರುವುದು ತನಿಖೆಯಲ್ಲಿ ಬಯಲಾಗಿದೆ. ಆಂಜನೇಯ ಗೌಡ, ಆಂಜನೇಯ ರೆಡ್ಡಿ ಹಾಗೂ ಹರೀಶ್ ಬಂಧಿತ ಆರೋಪಿಗಳು ಎಂದು ಗುರುತಿಸಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಕೆಲವು ಸೆಲೆಬ್ರಿಟಿಗಳು ಇತ್ತೀಚೆಗೆ ಡಾರ್ಕ್ ವೆಬ್ ಎಂಬ ತಂತ್ರಾಂಶ ಬಳಸಿ ವಾಟ್ಸಪ್ ನಂತಹ ಸಂವಹನ ಅಪ್ಲಿಕೇಶನ್ ಗಳನ್ನು ಹ್ಯಾಕ್ ಮಾಡುತ್ತಾರೆ’ ಎಂದು ಆರೋಪಿಸಿ ಬಾಲಿವುಡ್ ನಟಿ ಕಂಗನಾ ರಣಾವತ್ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ವೊಂದನ್ನು ಹಂಚಿಕೊಂಡಿದ್ದಾರೆ ಎನ್ನಲಾಗಿದೆ. ಇನ್ ಸ್ಟಾಗ್ರಾಮ್ ಸ್ಟೋರಿಯಲ್ಲಿ ಪೋಸ್ಟ್ ಮಾಡಿರುವ ಅವರು, ಚಿತ್ರರಂಗದ ವ್ಯಕ್ತಿಗಳ ಮೇಲೆ ಈ ಗಂಭೀರ ಆರೋಪ ಮಾಡಿದ್ದಾರೆ. ಈ ಹೇಳಿಕೆ ಇದೀಗ ಚರ್ಚೆಗೆ ಗ್ರಾಸವಾಗಿದ್ದು, ಕೆಲವು ನೆಟ್ಟಿಗರು ಇದ್ದರೂ ಇರಬಹುದೆಂದು ಎಂದಿದ್ದಾರೆ. ನೆಟ್ಟಿಗರೊಬ್ಬರ ಪ್ರಶ್ನೆಯುಳ್ಳ ಪೋಸ್ಟ್ ಅನ್ನು ಮರು ಟ್ಯಾಗ್ ಮಾಡಿಕೊಂಡಿರುವ ನಟಿ ಕಂಗನಾ, “ಅದ್ಭುತ!! ಡಾರ್ಕ್ ವೆಬ್ ಬಗ್ಗೆ ಕೇಂದ್ರವು ಏನಾದರೂ ಮಾಡಬೇಕು. ಕೆಲವು ಪ್ರಭಾವಿ ವ್ಯಕ್ತಿಗಳು ಡಾರ್ಕ್ ವೆಬ್ ಮೂಲಕ ವಾಟ್ಸಪ್ ಮತ್ತು ಇಮೇಲ್ ಗಳಂತಹ ಪ್ಲಾಟ್ ಫಾರ್ಮ್ಗಳನ್ನು ಹ್ಯಾಕ್ ಮಾಡಿ ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ. ಕೇಂದ್ರವು ಡಾರ್ಕ್ ವೆಬ್ ಬಗ್ಗೆ ಏನಾದರೂ ಕ್ರಮ ಕೈಗೊಳ್ಳಬೇಕು. ಅನೇಕ ಜನಪ್ರಿಯ ಚಿತ್ರರಂಗದ ವ್ಯಕ್ತಿಗಳು ಇದಕ್ಕೆ ವ್ಯಸನಿಯಾಗಿದ್ದಾರೆ. ಅವರು ಅಲ್ಲಿಂದ ಕಾನೂನುಬಾಹಿರ ಮಾಹಿತಿಯನ್ನು ಸಂಗ್ರಹಿಸುತ್ತಿದ್ದಾರೆ. ಅದಕ್ಕಾಗಿ…
ನಮಗೆ ದೇವಾಲಯದ ತೀರ್ಥಪ್ರಸಾದ ಬೇಡ. ಉನ್ನತ ಶಿಕ್ಷಣಕ್ಕಾಗಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ(ಬಿಎಂಟಿಸಿ) ಬಸ್ ಗಳು ಬೇಕು” ಎಂದು ಎಂಟನೇ ತರಗತಿಯ ವಿದ್ಯಾರ್ಥಿಯೊಬ್ಬಳು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ. ಬೆಂಗಳೂರು ಗ್ರಾಮಾಂತರದ ತಾವರಕೆರೆ ವ್ಯಾಪ್ತಿಯ ಸೀಗೆಹಳ್ಳಿಯಲ್ಲಿ ವಾಸವಿರುವ 8ನೇ ತರಗತಿ ವಿದ್ಯಾರ್ಥಿನಿ ವಿ.ವೈ. ಹರ್ಷಿಣಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ. “ಈ ದೇಶದ ರಾಷ್ಟ್ರಪತಿ ಮಹಿಳೆ. ಇಂದಿನ ದಿನಗಳಲ್ಲಿ ಹೆಣ್ಣು ಮಕ್ಕಳಿಗೆ ಉನ್ನತ ಶಿಕ್ಷಣ ಮತ್ತು ಸುರಕ್ಷತೆ ಸಿಗುವಂತೆ ಮಾಡಿರುವುದು ಬಾಬಾಸಾಹೇಬ್ ಡಾ.ಬಿ.ಆರ್. ಅಂಬೇಡ್ಕರ್ ಅವರ ಆಶೀರ್ವಾದ. ಹಾಗಾಗಿ, ಬಾಬಾಸಾಹೇಬ್ ಅಂಬೇಡ್ಕರ್ ಅವರ ಹೆಸರಿನಲ್ಲಿ ಶಾಲಾ ಮಕ್ಕಳಿಗೆ ಪ್ರತಿ ಜಿಲ್ಲೆ ಮತ್ತು ತಾಲೂಕು ಹಳ್ಳಿಯ ಶಾಲಾ ಮಕ್ಕಳಿಗೆ ವಿಶೇಷ ಸಾರಿಗೆ ಬಸ್ ಆರಂಭಿಸಬೇಕು” ಎಂದು ಮನವಿ ಮಾಡಿದ್ದಾಳೆ. ಸ್ವಾಮಿ, ನಾನು ಕುಮಾರಿ ವಿ.ವೈ.ಹರ್ಷಿಣಿ, 8ನೇ ತರಗತಿ ವಿದ್ಯಾರ್ಥಿನಿ. ನಾನು ಮತ್ತು ನನ್ನ ತಾಯಿ ಹಲವು ಬಾರಿ ತಮ್ಮ ಸಂಸ್ಥೆಯ ಅಧಿಕಾರಿಗಳಿಗೆ ತಾವರೆಕೆರೆಯಿಂದ ಮಾಗಡಿ ರಸ್ತೆಯ ಮುಖಾಂತರ ಶ್ರೀನಗರ ಬಸ್…
ಬೆಂಗಳೂರಿನ ಕೆ. ಆರ್. ಪುರಂ ಪ್ರದೇಶದಲ್ಲಿ 70 ವರ್ಷದ ಮಹಿಳೆಯ ಮೃತದೇಹ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅವಶೇಷಗಳನ್ನು ಡ್ರಮ್ ನಲ್ಲಿ ಇರಿಸಿ ಖಾಲಿ ಸ್ಥಳದಲ್ಲಿ ಎಸೆಯಲಾಗಿದೆ. ಮೃತ ದುರ್ದೈವಿಯನ್ನು ಕೆ.ಆರ್. ಪುರಂನ ನಿಸರ್ಗ ಲೇಔಟ್ ಬಳಿಯ ಬಾಡಿಗೆ ಫ್ಲಾಟ್ ನಲ್ಲಿ ತನ್ನ ಮಗಳೊಂದಿಗೆ ವಾಸಿಸುತ್ತಿದ್ದ ಸುಶೀಲಮ್ಮ ಎಂದು ಗುರುತಿಸಲಾಗಿದೆ. ವರದಿಗಳ ಪ್ರಕಾರ, ದುಷ್ಕರ್ಮಿಗಳು ಮಹಿಳೆಯ ಕೈ ಮತ್ತು ಕಾಲುಗಳನ್ನು ಕತ್ತರಿಸಿದ್ದು, ಅವು ಪ್ರಸ್ತುತ ಕಾಣೆಯಾಗಿವೆ. ಈ ಪ್ರದೇಶದಿಂದ ದುರ್ವಾಸನೆ ಬರುತ್ತಿರುವುದನ್ನು ಗಮನಿಸಿದ ಸ್ಥಳೀಯರು ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರು. “ಈ ಘಟನೆಯು ನಿನ್ನೆ ಸಂಭವಿಸಿರಬಹುದು. ಸದ್ಯ ಸ್ಥಳ ಪರಿಶೀಲಿಸಲಾಗುತ್ತಿದ್ದು, ಹೆಚ್ಚಿನ ತನಿಖೆಗೆ ಆದೇಶಿಸಲಾಗಿದೆ ಎಂದು ಗುಪ್ತಾ ಹೇಳಿದರು. ಸಮಗ್ರ ತನಿಖೆಯ ಭರವಸೆ ನೀಡಿದ ಅವರು, “ನಮ್ಮ ಅಧಿಕಾರಿಗಳು ಅಗತ್ಯವಿರುವ ಎಲ್ಲಾ ತನಿಖೆಗಳನ್ನು ನಡೆಸುತ್ತಾರೆ. ನಾವು ತನಿಖೆಯನ್ನು ಸಕ್ರಿಯವಾಗಿ ಮುಂದುವರಿಸುತ್ತಿದ್ದೇವೆ ಮತ್ತು ಅಪರಾಧಿಗಳನ್ನು ಆದಷ್ಟು ಬೇಗ ಬಂಧಿಸುತ್ತೇವೆ ಎಂದು ತಿಳಿಸಿದರು “. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್…
ಬೆಂಗಳೂರಿನ 38 ವರ್ಷದ ಮಹಿಳೆಯೊಬ್ಬರು ಆನ್ಲೈನ್ ನಲ್ಲಿ ಕೇವಲ 49 ರೂಪಾಯಿಗೆ ನಾಲ್ಕು ಡಜನ್ ಮೊಟ್ಟೆ ಖರೀದಿಸಲು ಪ್ರಯತ್ನಿಸಿದಾಗ 48,000 ರೂಪಾಯಿಗಳನ್ನು ಕಳೆದುಕೊಂಡು, ಹೈ ಗ್ರೌಂಡ್ಸ್ ಪೊಲೀಸರಿಗೆ ದೂರು ನೀಡಿದ್ದಾರೆ. ವಸಂತನಗರದ ನಿವಾಸಿಯಾದ ಶಿವಾನಿ (ಕೋರಿಕೆಯ ಮೇರೆಗೆ ಹೆಸರು ಬದಲಾಯಿಸಲಾಗಿದೆ) ಫೆಬ್ರವರಿ 17 ರಂದು ಜನಪ್ರಿಯ ಕಂಪನಿಯೊಂದು ಅತಿ ಕಡಿಮೆ ಬೆಲೆಗೆ ಮೊಟ್ಟೆಗಳನ್ನು ಮಾರಾಟ ಮಾಡುತ್ತಿದೆ ಎಂದು ಹೇಳುವ ಇಮೇಲ್ ಜಾಹೀರಾತನ್ನು ನೋಡಿ, “ಜಾಹೀರಾತಿನಲ್ಲಿ ಶಾಪಿಂಗ್ ಲಿಂಕ್ ಅನ್ನು ಉಲ್ಲೇಖಿಸಲಾದ ಲಿಂಕ್ ಮೇಲೆ ಕ್ಲಿಕ್ ಮಾಡಿದಾಗ, ಅದು ನನ್ನನ್ನು ಒಂದು ಪುಟಕ್ಕೆ ಕರೆದೊಯ್ಯಿತು, ಅಲ್ಲಿ ಕೋಳಿಗಳನ್ನು ಹೇಗೆ ಬೆಳೆಸಲಾಗುತ್ತದೆ ಮತ್ತು ಮೊಟ್ಟೆಗಳನ್ನು ಸಂಗ್ರಹಿಸಿ ಹೇಗೆ ವಿತರಿಸುತ್ತಾರೆ ಎಂಬುದರ ವಿವರಣೆ ಇತ್ತು “ಎಂದು ಅವರು ಹೇಳಿದರು. ಕೆಳಗೆ ಸ್ಮಾಲ್ ಮಾಡುವಾಗ, ಯಾವುದೇ ಡಿಲವರಿ ಚಾರ್ಜಸ್ ಇಲ್ಲದೆ 99 ರೂಪಾಯಿಗಳಿಗೆ ಎಂಟು ಡಜನ್ ಮೊಟ್ಟೆಗಳನ್ನು ಪೂರೈಸುವುದಾಗಿ ಹೇಳಿಕೊಂಡ ಒಂದು ಕೊಡುಗೆ ಸೇರಿದಂತೆ ವಿವಿಧ ಕೊಡುಗೆಗಳನ್ನು ನೀಡಿದ್ದಾಗಿ ಶಿವಾನಿ ತಿಳಿಸಿದ್ದಾರೆ. “ನಾನು 49 ರೂಪಾಯಿಗೆ ನಾಲ್ಕು…
ಹೊಸ ಶೈಕ್ಷಣಿಕ ವರ್ಷದಿಂದ ಪ್ರಥಮ ದರ್ಜೆ ಪ್ರವೇಶಕ್ಕೆ ಕನಿಷ್ಠ ವಯೋಮಿತಿಯನ್ನು 6 ವರ್ಷಕ್ಕೆ ಏರಿಸುವಂತೆ ಕೇಂದ್ರವು ರಾಜ್ಯಗಳಿಗೆ ಪತ್ರ ಕಳುಹಿಸಿದೆ. ಪತ್ರದಲ್ಲಿ ಕರ್ನಾಟಕ ಸೇರಿದಂತೆ ರಾಜ್ಯಗಳು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚಿಸಲಾಗಿದೆ. ಪ್ರವೇಶ ಮಾರ್ಗಸೂಚಿಗಳನ್ನು ಮಾರ್ಪಾಡು ಮಾಡಿ ಪ್ರಕಟಿಸಬೇಕು ಎಂದು ಕೇಂದ್ರ ಸರ್ಕಾರ ನಿರ್ದೇಶನ ನೀಡಿದೆ. ಹಲವು ರಾಜ್ಯಗಳು ಹಿಂದಿನ ವರ್ಷಗಳಲ್ಲಿ ನೀಡಿದ ಸೂಚನೆಗಳನ್ನು ಜಾರಿಗೊಳಿಸದ ಪರಿಸ್ಥಿತಿಯಲ್ಲಿ ಹೊಸ ಪತ್ರ ಬಂದಿದೆ. ರಾಷ್ಟ್ರೀಯ ಶಿಕ್ಷಣ ನೀತಿ(2020) ಒಂದನೇ ತರಗತಿಗೆ ಪ್ರವೇಶ ಪಡೆಯಲು 6 ವರ್ಷ ವಯಸ್ಸಾಗಿರಬೇಕು ಎಂದು ಸೂಚಿಸಿದೆ. 14 ರಾಜ್ಯಗಳು/UTಗಳು ವಯಸ್ಸಿನ ಮಿತಿಯನ್ನು 6 ಕ್ಕೆ ಹೆಚ್ಚಿಸಿವೆ. ರಾಷ್ಟ್ರೀಯ ಶಿಕ್ಷಣ ನೀತಿಯ ಪ್ರಕಾರ 3–6 ವರ್ಷಗಳು ನರ್ಸರಿ ಮತ್ತು ಎಲ್.ಕೆ.ಜಿ., ಯು.ಕೆ.ಜಿ ಇರಲಿ ಎಂದು ಹೇಳಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಬೇಸಿಗೆ ಆರಂಭದಲ್ಲಿಯೇ ನದಿಗಳಲ್ಲಿ ನೀರಿನ ಪ್ರಮಾಣ ಕಡಿಮೆಯಾಗುತ್ತಾ ಹೋಗುತ್ತಿದ್ದು. ಇನ್ನೊಂದೆಡೆ ನದಿಯಲ್ಲಿ ನೀರು ಕಡಿಮೆಯಾದ ತಕ್ಷಣ ಮುಂದಾಲೋಚನೆಯೂ ಇಲ್ಲದೆ ಸಿಡಿ ಮದ್ದು ಸಿಡಿಸಿ ಮೀನು ಹಿಡಿಯುವ ಕೆಲಸಕ್ಕೆ ಕೆಲವರು ಮುಂದಾಗಿರುವುದು ಜಿಲ್ಲೆಯ ಕೆ.ಆರ್.ನಗರ ತಾಲೂಕಿನ ಚುಂಚನಕಟ್ಟೆ ಕಾವೇರಿ ನದಿ ವ್ಯಾಪ್ತಿಯಲ್ಲಿ ಕಂಡು ಬಂದಿದೆ. ಆದರೆ ಇಂತಹ ಪ್ರಕರಣಗಳು ಬೆಳಕಿಗೆ ಬರದೆ ಹಲವು ಕಡೆಗಳಲ್ಲಿ ನಡೆಯುತ್ತಿದೆ. ಕಿಡಿಗೇಡಿಗಳು ರಾತ್ರಿ ವೇಳೆಯಲ್ಲಿ ಯಾರೂ ಇಲ್ಲದ ಸಂದರ್ಭ ನೀರು ನಿಲ್ಲುವ ಪ್ರದೇಶಗಳಲ್ಲಿ ಸಿಡಿಮದ್ದು ಸಿಡಿಸಿ ಮೀನುಗಳ ಮಾರಣ ಹೋಮ ಮಾಡುತ್ತಿದ್ದು, ಮದ್ದಿನ ಸ್ಪೋಟಕ್ಕೆ ಸಿಲುಕಿ ಸತ್ತ ಮೀನುಗಳು ನೀರಿನಲ್ಲಿ ತೇಲಿ ಬರುತ್ತಿದ್ದು, ಅಕ್ರಮವಾಗಿ ಸಿಡಿ ಮದ್ದು ಬಳಸಿ ಮೀನು ಹಿಡಿಯುವ ದುಷ್ಕರ್ಮಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಈ ವ್ಯಾಪ್ತಿಯ ಜನರು ಒತ್ತಾಯಿಸುತ್ತಿದ್ದಾರೆ. ಕೆಲವು ದುಷ್ಕರ್ಮಿಗಳು ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ನೀರಿನಲ್ಲಿ ಸ್ಪೋಟಕ ಸಿಡಿಸಿ ಮೀನುಗಳನ್ನು ಹಿಡಿಯುತ್ತಿರುವುದರಿಂದ ಒಂದು ಕಡೆ ಮೀನುಗಳ ಮಾರಣ ಹೋಮ ನಡೆಯುತ್ತಿದ್ದರೆ, ಮತ್ತೊಂದೆಡೆ ಅಪಾಯದ ಭಯವೂ ಸ್ಥಳೀಯರನ್ನು ಕಾಡುತ್ತಿದೆ. ಈ…
“ಭಗವಾನ್ ಶ್ರೀ ಕೃಷ್ಣ ನಮ್ಮೆಲ್ಲರನ್ನೂ ಹರಸಲಿ” ಎಂದು ಪ್ರಧಾನಿ ನರೇಂದ್ರ ಮೋದಿ ತಮ್ಮ ‘ಎಕ್ಸ್’ ಖಾತೆಯಲ್ಲಿ ಹೇಳಿದ್ದಾರೆ. ಶ್ರೀ ಕೃಷ್ಣನ ಮುಳುಗಿ ಹೋದ ನಗರವನ್ನು ಹುಡುಕುವ ಸಮುದ್ರದಾಳದ ತಮ್ಮ ಪಯಣದ ವೇಳೆ ಸ್ಕೂಬಾ ಸಾಧನಗಳನ್ನು ಧರಿಸಿರುವ ಚಿತ್ರಗಳನ್ನು ಹಂಚಿಕೊಂಡಿದ್ದಾರೆ. “ಇಂದು ನಾನು ಅನುಭವಿಸಿದ ಆ ಕ್ಷಣಗಳು ನನ್ನ ಜೀವನದಲ್ಲಿ ಎಂದೆಂದಿಗೂ ಚಿರಸ್ಥಾಯಿಯಾಗಿ ಉಳಿಯಲಿವೆ. ನಾನು ಸಮುದ್ರದ ಆಳಕ್ಕೆ ತೆರಳಿದ್ದೆ ಮತ್ತು ಪುರಾತನ ದ್ವಾರಕಾ ನಗರದ ದರ್ಶನ ಮಾಡಿದೆ. ನೀರಿನ ಅಡಿಯಲ್ಲಿ ಅಡಗಿರುವ ದ್ವಾರಕಾ ನಗರದ ಬಗ್ಗೆ ಪುರತತ್ವ ಶಾಸ್ತ್ರಜ್ಞರು ಸಾಕಷ್ಟು ಬರೆದಿದ್ದಾರೆ. ನಮ್ಮ ಗ್ರಂಥಗಳಲ್ಲಿ ಕೂಡ ಸುಂದರ ದ್ವಾರಗಳು ಹಾಗೂ ಜಗತ್ತಿನ ತುದಿಯ ಎತ್ತರದಷ್ಟು ಉದ್ದನೆಯ ಕಟ್ಟಡಗಳಿದ್ದ ನಗರ ಎಂಬುದಾಗಿ ದ್ವಾರಕಾವನ್ನು ವರ್ಣಿಸಲಾಗಿದೆ. “ಶ್ರೀ ಕೃಷ್ಣ ಸ್ವತಃ ಈ ನಗರವನ್ನು ನಿರ್ಮಿಸಿದ್ದ” ಎಂದು ದ್ವಾರಕಾ ದರ್ಶನದ ಬಳಿಕ ನಡೆದ ಸಮಾವೇಶ ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ ತಿಳಿಸಿದ್ದಾರೆ. ದ್ವಾರಕಾದಲ್ಲಿನ ಶ್ರೀ ಕೃಷ್ಣ ದೇವಸ್ಥಾನದಲ್ಲಿ ಕೂಡ ಪ್ರಧಾನಿ ಮೋದಿ ಪೂಜೆ ಸಲ್ಲಿಸಿದರು. ದೇಶದ…