Subscribe to Updates
Get the latest creative news from FooBar about art, design and business.
- ದೇಶದ 2ನೇ ಅತಿ ದೊಡ್ಡ ಕ್ರಿಕೆಟ್ ಕ್ರೀಡಾಂಗಣಕ್ಕೆ ಸಿಎಂ ಸಿದ್ದರಾಮಯ್ಯ ಶಂಕುಸ್ಥಾಪನೆ
- ಈ ವರ್ಷ 52 ಸಾವಿರ ಅತಿಥಿ ಶಿಕ್ಷಕರ ನೇಮಕ: ಸಚಿವ ಮಧು ಬಂಗಾರಪ್ಪ
- ಬೀದರ್ ಬ್ರಿಮ್ಸ್ (BRIMS) ಆಸ್ಪತ್ರೆಯಲ್ಲಿ ಕರ್ತವ್ಯ ನಿರತ ವೈದ್ಯರ ಮೇಲೆ ಭೀಕರ ಹಲ್ಲೆ: 7 ಮಂದಿ ಆರೋಪಿಗಳ ಬಂಧನ
- ತುಮಕೂರು ಜಿಲ್ಲೆಗೆ ‘ತುಮಕೂರು (ಬೆಂಗಳೂರು ಉತ್ತರ)’ ಎಂದು ಮರುನಾಮಕರಣ: ಗೃಹ ಸಚಿವ ಡಾ.ಜಿ.ಪರಮೇಶ್ವರ್
- ಮಾದಾವರ–ತುಮಕೂರು ಮೆಟ್ರೋ ರೈಲು ಯೋಜನೆ: ಸರ್ಕಾರಕ್ಕೆ ಸಲ್ಲಿಕೆಯಾಯ್ತು ಡಿಪಿಆರ್ ವರದಿ
- ಪಕ್ಷದ ಜವಾಬ್ದಾರಿ ನಿರ್ವಹಿಸದಿದ್ದರೆ ಶಿಸ್ತು ಕ್ರಮ: ಕಾಂಗ್ರೆಸ್ ಮುಖಂಡರ ಸಭೆಯಲ್ಲಿ ಶಾಸಕ ಕೆ. ಷಡಕ್ಷರಿ ಎಚ್ಚರಿಕೆ
- ಗುಬ್ಬಿ ಶಾಸಕರು, ಪುತ್ರನಿಂದ ಕುತಂತ್ರ ರಾಜಕಾರಣ: ಷಡ್ಯಂತ್ರಗಳಿಗೆ ಜಗ್ಗುವುದಿಲ್ಲ: ಜೆಡಿಎಸ್ ಮುಖಂಡ ನಾಗರಾಜು ಕಿಡಿ
- ತುಮಕೂರು: ಕುಲ್ಲಕ ವಿಷಯಕ್ಕೆ ಜಗಳ: ಕೊಲೆ
Author: admin
ಹೈದರಾಬಾದ್: ಮದುವೆ ಆಗಲು ವೀಡಿಯೋ ನಿರೂಪಕ ನನ್ನು ಅಪಹರಣ ಮಾಡಿಸಿದ್ದ ಮಹಿಳಾ ಉದ್ಯಮಿಯನ್ನು ಹೈದರಾಬಾದ್ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಭೋಗಿರೆಡ್ಡಿ ತ್ರಿಶಾ ಎಂದು ಗುರುತಿಸಲಾಗಿದೆ. ಆಕೆ ಐದು ಸ್ಟಾರ್ಟಪ್ ಕಂಪನಿಗಳ ವ್ಯವಸ್ಥಾಪಕ ನಿರ್ದೇಶಕಿ ಎಂದು ತಿಳಿದು ಬಂದಿದೆ. ತ್ರಿಶಾ ಮ್ಯಾಟ್ರಿಮೋನಿಯಲ್ ವೆಬ್ಸೈಟ್ ನಲ್ಲಿ ಟಿವಿ ಆಂಕರ್ ಪ್ರಣವ್ ಎಂಬವರ ಪ್ರೊಫೈಲ್ ನೋಡಿ ಮದುವೆ ಪ್ರಸ್ತಾಪ ಮಾಡಿದ್ದಳು. ಈ ಪ್ರಸ್ತಾಪಕ್ಕೆ ಪ್ರಣವ್ ಕಡೆಯಿಂದಲೂ ಒಪ್ಪಿಗೆ ಸಿಕ್ಕಿತ್ತು. ಇದಾದ ಬಳಿಕ ಚಾಟಿಂಗ್ ಆರಂಭಿಸಿ ಹಲವು ತಿಂಗಳ ಬಳಿಕ ಅದು ನಕಲಿ ಪ್ರೊಫೈಲ್ ಎಂದು ತ್ರಿಶಾಗೆ ಗೊತ್ತಾಗಿದೆ. ಇದಾದ ಬಳಿಕ ಆಕೆ ಪ್ರಣವ್ ಅವರ ನಿಜವಾದ ಮೊಬೈಲ್ ನಂಬರ್ ಪಡೆದು ನಡೆದ ವಿಚಾರವನ್ನು ಹೇಳಿಕೊಂಡಿದ್ದಳು. ಅಲ್ಲದೇ ಮದುವೆ ವಿಚಾರ ಪ್ರಸ್ತಾಪಿಸಿದ್ದಳು. ಇದಕ್ಕೆ ಪ್ರಣವ್ ಒಪ್ಪಿರಲಿಲ್ಲ. ಇದರಿಂದ ಬೇಸತ್ತ ತ್ರಿಶಾ ಆಂಕರ್ ನ ಕಾರಿಗೆ ಜಿಪಿಎಸ್ ಟ್ರ್ಯಾಕ್ ಅಳವಡಿಸಿ ಆತನ ಚಲನವಲನಗಳ ಮೇಲೆ ನಿಗಾ ವಹಿಸಿದ್ದ 31 ವರ್ಷದ ಮಹಿಳಾ ಉದ್ಯಮಿ ಹಣ ನೀಡಿ ಅಪಹರಣಕಾರರ ಮೂಲಕ…
ಸ್ನಾಯು ಮತ್ತು ಕೀಲು ನೋವಿಗೆ ಆಯುರ್ವೇದವೇ ಮದ್ದು!: ಅಶ್ವಗಂಧ ಭಾರತ ಮತ್ತು ಉತ್ತರ ಆಫ್ರಿಕಾದಲ್ಲಿ ಕಂಡುಬರುವ ಒಂದು ಸಣ್ಣ ಮರ. ಈ ಸಸ್ಯ ಬೇರುಗಳು ಮತ್ತು ಹಣ್ಣುಗಳನ್ನು ಹೊಂದಿದೆ. ಇದನ್ನು ಅತ್ಯಂತ ಜನಪ್ರಿಯ ಆಯುರ್ವೇದ ಪರಿಹಾರವನ್ನು ಉತ್ಪಾದಿಸಲು ಬಳಸಲಾಗುತ್ತದೆ. ಇದು ನಿಮ್ಮ ದೇಹವು ಒತ್ತಡವನ್ನು ಹೆಚ್ಚು ಪರಿಣಾಮಕಾರಿಯಾಗಿ ನಿರ್ವಹಿಸಲು ಸಹಾಯ ಮಾಡುತ್ತದೆ. ಈ ಮೂಲಿಕೆಯು ಒತ್ತಡವನ್ನು ಹೆಚ್ಚಿಸುವ ಕಾರ್ಟಿಸೋಲ್ ಮಟ್ಟವನ್ನು ಕಡಿಮೆ ಮಾಡುತ್ತದೆ. ಇದು ಸ್ನಾಯು ಮತ್ತು ಕೀಲು ನೋವುಗಳನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಊಟದ ನಂತರ ಬೆಲ್ಲ ತಿಂದರೆ ಇಷ್ಟೆಲ್ಲಾ ಪ್ರಯೋಜನಗಳು..!: ಹಿಂದಿನ ದಿನಗಳಲ್ಲಿ ಅನೇಕ ಜನರು ಬೆಲ್ಲ ತಿನ್ನುತ್ತಿದ್ದರು. ಇದರಿಂದ ಅನೇಕ ಅನುಕೂಲಗಳಿವೆ. ಬೆಲ್ಲವು ಬಿಪಿಯನ್ನು ನಿಯಂತ್ರಿಸುತ್ತದೆ. ಇದರಲ್ಲಿರುವ ಪೊಟ್ಯಾಶಿಯಂ, ಸೋಡಿಯಂ & ಕಬ್ಬಿಣದ ಅಂಶ ಹೇರಳವಾಗಿದೆ. ಇದರಿಂದ ರಕ್ತಹೀನತೆ ದೂರವಾಗಿ ಹಿಮೋಗ್ಲೋಬಿನ್ ಮಟ್ಟ ಹೆಚ್ಚಾಗುತ್ತದೆ. ಇದರಿಂದ ಆಯಾಸ ಕಡಿಮೆಯಾಗುತ್ತದೆ. ಜೀರ್ಣಕ್ರಿಯೆಯನ್ನು ಹೆಚ್ಚಿಸುವಲ್ಲಿ ಬೆಲ್ಲ ಚೆನ್ನಾಗಿ ಕೆಲಸ ಮಾಡುತ್ತದೆ. ಬೆಚ್ಚಗಿನ ನೀರಿನಲ್ಲಿ ಬೆಲ್ಲ ಬೆರೆಸಿ ಕುಡಿದರೆ ಜ್ವರ,…
ರಾಜ್ಯ ಪೊಲೀಸ್ ಇಲಾಖೆಯಲ್ಲಿ ಸುಮಾರು ಮೂರು ವರ್ಷಗಳಿಂದ ಪತಿ-ಪತ್ನಿ ಕರ್ತವ್ಯ ನಿರ್ವಹಿಸುತ್ತಿದ್ದು, ಇಬ್ಬರೂ ಬೇರೆ ಬೇರೆ ಜಿಲ್ಲೆಯಲ್ಲಿದ್ದಾರೆ. ಇದರಿಂದ ನಮಗೆ ನೆಮ್ಮದಿಯಾಗಿ ಕರ್ತವ್ಯ ನಿರ್ವಹಿಸಲು ಸಾಧ್ಯವಾಗುತ್ತಿಲ್ಲವೆಂದು ಪೊಲೀಸ್ ಸಿಬ್ಬಂದಿ ದಯಾಮರಣ ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಗೆ ಮತ್ತು ರಾಷ್ಟ್ರಪತಿಗಳಿಗೆ ಪತ್ರ ಬರೆದ ಘಟನೆ ನಡೆದಿದೆ. ಪತಿ ಒಂದು ಜಿಲ್ಲೆಯಲ್ಲಿ ವಾಸ, ಪತ್ನಿ ಇನ್ನೊಂದು ಜಿಲ್ಲೆಯಲ್ಲಿ ವಾಸಿಸುತ್ತಿದ್ದಾರೆ. ಇದರಿಂದ ಗಂಡ-ಹೆಂಡತಿ ಜೊತೆಯಲ್ಲಿ ಇರಲು ಸಾಧ್ಯವಾಗುತ್ತಿಲ್ಲ. ವಿಚ್ಛೇದನ ಪ್ರಕರಣ ಕೂಡ ಹೆಚ್ಚುತ್ತಿವೆ. ಕೆಲ ಸಿಬ್ಬಂದಿ ವಯಸ್ಸಾದ ತಂದೆ ತಾಯಿಯನ್ನು ನೋಡಿಕೊಳ್ಳಬೇಕಿದೆ. ಹೀಗಾಗಿ ವರ್ಗಾವಣೆ ಕೋರಿ ಮನವಿ ಮಾಡಿದ್ದಾರೆ. ಮುಖ್ಯಮಂತ್ರಿಗಳು, ಗೃಹ ಇಲಾಖೆ ಮಂತ್ರಿಗಳು ಬಾಯಿ ಮಾತಿನಲ್ಲಿ ವರ್ಗಾವಣೆ ಮಾಡುತ್ತೇವೆ ಅಂತ ಹೇಳುತ್ತಾರೆ. ಆದರೆ ಅಂತರ ಜಿಲ್ಲಾ ವರ್ಗಾವಣೆ ಲಿಖಿತ ರೂಪದಲ್ಲಿ ಬರುತ್ತಿಲ್ಲ ಎಂದು ರಾಜ್ಯದ ಹಲವು ಠಾಣೆಗಳಲ್ಲಿನ ಸಿಬ್ಬಂದಿ ಪತ್ರ ಬರೆದಿದ್ದಾರೆ. ಸುಪ್ರೀಂಕೋರ್ಟ್ ಆದೇಶ ಮತ್ತು ಕೆಸಿಎಸ್ಆರ್ ನಿಯಮದ ಪ್ರಕಾರ ಪತಿ-ಪತ್ನಿ ಒಂದೆ ಘಟಕ ಹಾಗೂ ಒಂದೆ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸಲು ನಿಯಮ ಇದ್ದರು…
ಯುವ ಕ್ರಿಕೆಟಿಗರೊಬ್ಬರು ಹೃದಯಾಘಾತಕ್ಕೆ ಬಲಿಯಾಗಿರುವ ದುರ್ಘಟನೆ ನಡೆದಿದೆ. ಕೆ.ಹೊಯ್ಸಳ ಹೃದಯಘಾತಕ್ಕೆ ಬಲಿಯಾದ ದುರ್ದೈವಿ ಯುವ ಕ್ರಿಕೆಟಿಗರಾಗಿದ್ದಾರೆ. ವರದಿ ಪ್ರಕಾರ ಪ್ರಸ್ತುತ ನಡೆಯುತ್ತಿರುವ ಏಜಿಸ್ ಸೌತ್ ಝೋನ್ ಟೂರ್ನಿಯಲ್ಲಿ ಕರ್ನಾಟಕ ಹಾಗೂ ತಮಿಳುನಾಡು ನಡುವೆ ಪಂದ್ಯ ನಡೆದಿತ್ತು. ಈ ಪಂದ್ಯದಲ್ಲಿ ತಮಿಳುನಾಡು ತಂಡವನ್ನು ಮಣಿಸುವಲ್ಲಿ ಕರ್ನಾಟಕ ತಂಡ ಯಶಸ್ವಿಯಾಗಿತ್ತು. ಈ ವೇಳೆ ತಂಡದೊಂದಿಗೆ ಸಂಭ್ರಮಾಚರಣೆ ಮಾಡಿದ್ದ ಹೊಯ್ಸಳಗೆ ಮೈದಾನದಲ್ಲೇ ಎದೆಯಲ್ಲಿ ನೋವು ಕಾಣಿಸಿಕೊಂಡು ಪ್ರಜ್ಞೆ ತಪ್ಪಿದ್ದಾರೆ. ಬಳಿಕ ಆಂಬ್ಯುಲೆನ್ಸ್ ಮೂಲಕ ಬೆಂಗಳೂರಿನ ಬೌರಿಂಗ್ ಆಸ್ಪತ್ರೆಗೆ ಅವರನ್ನು ಕರೆದೊಯ್ಯಲಾಯಿತಾದರೂ ಆಸ್ಪತ್ರೆಗೆ ತಲುಪುವಷ್ಟರಲೇ ಹೊಯ್ಸಳ ಅವರ ಪ್ರಾಣಪಕ್ಷಿ ಹಾರಿ ಹೋಗಿದೆ. ಫೆಬ್ರವರಿ 22 ನೇ ಗುರುವಾರದಂದು ಈ ಘಟನೆ ನಡೆದಿದ್ದು, ಫೆಬ್ರವರಿ 23 ರ ಸಂಜೆಯಂದು ಬೆಳಕಿಗೆ ಬಂದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಅಸ್ಸಾಂ ಏಕರೂಪ ನಾಗರಿಕ ಸಂಹಿತೆಗೆ. ಮುಸ್ಲಿಂ ವಿವಾಹ ಮತ್ತು ವಿಚ್ಛೇದನ ನೋಂದಣಿ ಕಾಯ್ದೆಯನ್ನು ರದ್ದುಪಡಿಸಲು ತೀರ್ಮಾನಿಸಲಾಗಿದ್ದು, ನಿನ್ನೆ ರಾತ್ರಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಮುಸ್ಲಿಂ ಹೆಣ್ಣುಮಕ್ಕಳಿಗೆ 18 ವರ್ಷಕ್ಕಿಂತ ಮೊದಲು ವಿವಾಹ ನೋಂದಣಿಯನ್ನು ಸಹ ರದ್ದುಗೊಳಿಸಲಾಗುತ್ತದೆ. ಮುಸ್ಲಿಂ ಹುಡುಗರು ಮತ್ತು ಹುಡುಗಿಯರ ಮದುವೆಯ ವಯಸ್ಸು ಕ್ರಮವಾಗಿ 18 ಮತ್ತು 21 ಆಗಿರುತ್ತದೆ. ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅಸ್ಸಾಂ ಸಚಿವ ಜಯಂತ ಮಲ್ಲ ಬರುವಾ ಮಾಹಿತಿ ನೀಡಿದ್ದಾರೆ. ರಾಜ್ಯ ವಿಧಾನಸಭೆ ಅಧಿವೇಶನದಲ್ಲಿ ಈ ಸಂಬಂಧ ಮಸೂದೆ ಮಂಡಿಸಲಾಗುವುದು. ಮುಸ್ಲಿಂ ವಿವಾಹಗಳು ಮತ್ತು ವಿಚ್ಛೇದನಗಳನ್ನು ನೋಂದಾಯಿಸುವ ಅಧಿಕಾರವನ್ನು ಜಿಲ್ಲಾಧಿಕಾರಿ ಮತ್ತು ಜಿಲ್ಲಾ ನೋಂದಣಾಧಿಕಾರಿ ವಹಿಸಿಕೊಳ್ಳಲಿದ್ದಾರೆ ಎಂದು ಸಚಿವರು ಹೇಳಿದರು. ಅಸ್ಸಾಂ ಮುಸ್ಲಿಂ ಮದುವೆ ಮತ್ತು ವಿಚ್ಛೇದನ ನೋಂದಣಿ ಕಾಯಿದೆ 1935 ರ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ 94 ಮುಸ್ಲಿಂ ರಿಜಿಸ್ಟ್ರಾರ್ ಗಳನ್ನು ತಮ್ಮ ಕರ್ತವ್ಯದಿಂದ ಮುಕ್ತಗೊಳಿಸಲಾಗುವುದು ಮತ್ತು…
ಅಭಿಮಾನಿಗಳು ತಮ್ಮ ನೆಚ್ಚಿನ ನಟ, ನಟಿಯರಿಗೆ ತಮ್ಮ ಅಭಿಮಾನವನ್ನು ತೋರಿಸಲು ಹಲವು ವಿಭಿನ್ನ ಪ್ರಯತ್ನಗಳನ್ನು ಮಾಡುತ್ತಲೇ ಇರುತ್ತಾರೆ. ಅನ್ನದಾನ, ರಕ್ತದಾನ, ದಿನಸಿ ನೀಡುವುದು, ಹೆಸರನ್ನು ಹಚ್ಚೆ ಹಾಕಿಸಿಕೊಳ್ಳುವುದು ಈ ರೀತಿಯಲ್ಲಿ ತಮ್ಮ ಅಭಿಮಾನ ತೋರಿಸುತ್ತಾರೆ. ಆದರೆ, ಕೆಲವೊಮ್ಮೆ ಅದು ಅತಿರೇಕಕ್ಕೆ ಹೋಗಿಬಿಡುತ್ತದೆ. ಇಲ್ಲೊಂದು ಅಂತಹದ್ದೇ ಘಟನೆ ನಡೆದಿದೆ. ಹರ ಹರ ಮಹಾದೇವ ಖ್ಯಾತಿಯ ನಟ, ಬಿಗ್ ಬಾಸ್ ಕನ್ನಡ ಸೀಸನ್ ಹತ್ತರ ಸ್ಪರ್ಧಿ ವಿನಯ್ ಗೌಡ ಅಭಿಮಾನಿಯೊಬ್ಬರು ತಮ್ಮ ರಕ್ತದಲ್ಲಿ ವಿನಯ್ ಗೌಡ ಚಿತ್ರವನ್ನು ಬರೆದಿದ್ದಾರೆ. ಇದನ್ನು ವಿಡಿಯೋ ಮಾಡಿ ವಿನಯ್ ಅವರಿಗೆ ಟ್ಯಾಗ್ ಮಾಡಿದ್ದಾರೆ. ನಟ ವಿನಯ್ ಗೌಡ ಕೂಡ ಈ ವಿಡಿಯೋಗೆ ಕಾಮೆಂಟ್ ಮಾಡಿದ್ದಾರೆ. ರವೀಶ್ ಎಂಬ ಕಲಾವಿದ ವಿನಯ್ ಗೌಡ ಅಭಿಮಾನಿಯಾಗಿರುವ ಚಂದನ್ ಎನ್ನುವವರ ರಕ್ತವನ್ನು ಬಳಸಿ, ನಟ ವಿನಯ್ ಗೌಡ ಚಿತ್ರವನ್ನು ಬರೆದಿದ್ದಾರೆ. ಚಂದನ್ ರಕ್ತವನ್ನು ಒಂದು ಸಿರೆಂಜ್ ಮೂಲಕ ತೆಗೆದುಕೊಂಡು, ಅದರ ಮೂಲಕ ಚಿತ್ರ ಬಿಡಿಸಿರುವುದನ್ನು ವೀಡಿಯೋ ಮಾಡಿದ್ದಾರೆ ಕಲಾವಿದ ರವೀಶ್. ಈ ವಿಡಿಯೋವನ್ನು…
ಕೆ.ವಿ.ಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಶರೀರಶಾಸ್ತ್ರ ವಿಭಾಗದಿಂದ ಶುಕ್ರವಾರ CME ಸಭೆ ನಡೆಯಿತು. ಸಭಾಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಅಧ್ಯಕ್ಷ ಡಾ| ಕೆ.ವಿ. ಚಿದಾನಂದ ಅವರು ಶರೀರ ಶಾಸ್ತ್ರದ ಮಹತ್ವದ ಬಗ್ಗೆ ವಿವರಿಸಿದರು. ಮುಖ್ಯ ಅಥಿತಿಯಾಗಿ ಡಾ| ಸಂಧ್ಯಾ ಟಿ ಅವಧಾನಿ ಪಾಲ್ಗೊಂಡಿದ್ದರು. ಸಭೆಯು ದೀಪ ಬೆಳಗುವುದರೊಂದಿಗೆ ಪ್ರಾರಂಭಗೊಂಡಿತು. ನಂತರ ಕೆ.ವಿ.ಜಿ.ಮ್.ಸಿ.ಎಚ್. ಡೀನ್, ಡಾ| ನೀಲಾಂಬಿಕೈ ನಟರಾಜನ್ ಮುಖ್ಯ ಅತಿಥಿಗಳನ್ನು ಪರಿಚಯಿಸಿದರು. ಡಾ| ದಾಮೋಧರ್ ಡಿ ವಂದಿಸಿ, ರಕ್ಷತಾ ರಮೇಶ್ ಕಾರ್ಯಕ್ರಮದ ನಿರೂಪಣೆಯನ್ನು ನಡೆಸಿಕೊಟ್ಟರು. ನಂತರ ಕಾರ್ಯಕ್ರಮದ ಕೇಂದ್ರ ಬಿಂದು ನುರಿತ ವೈದ್ಯರುಗಳಿಂದ ವೈಜ್ಞಾನಿಕ ಅಧಿವೇಶನ ನಡೆಯಿತು. ತಮಿಳುನಾಡಿನ ತಿರುವನ್ನಮಲೈ ಮೆಡಿಕಲ್ ಕಾಲೇಜಿನ ಶರೀರಶಾಸ್ತ್ರ ವಿಭಾಗದ ಹಿರಿಯ ಸಹಾಯಕ ಪ್ರಾಧ್ಯಾಪಕ ಡಾ| ಪ್ರೇಮ್ ಬಳಗೂರು, ಹಿರಿಯ ಸಹಾಯಕ ಪ್ರಾಧ್ಯಾಪಕರು, ಡಾ| ಅರುಣ ಯಡಿಯಾಳ್, ಪ್ರಾಧ್ಯಾಪಕರು, ಮನೋವೈದ್ಯಶಾಸ್ತ್ರ ವಿಭಾಗ ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜು ಮಂಗಳೂರು, ಡಾ | ರಾಘವೇಂದ್ರ ಪ್ರಸಾದ, ಕನ್ಸಲ್ಟೆಂಟ್ ಗ್ಯಾಸ್ಟ್ರೋಎಂಟರಾಲಜಿಸ್ಟ್, ಎ.ಜೆ.…
ಮಣಿಪುರದಲ್ಲಿ ಮತ್ತೆ ಸಂಘರ್ಷ. ಇಂಫಾಲ್ ಪಶ್ಚಿಮ ಜಿಲ್ಲೆಯಲ್ಲಿ ಐಇಡಿ ಸ್ಫೋಟದಲ್ಲಿ ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದಾನೆ. ತಂಗಮೈಬಂದ್ ನ ಡಿಎಂ ಕಾಲೇಜು ಆವರಣದಲ್ಲಿ ಸ್ಫೋಟ ಸಂಭವಿಸಿದೆ. ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದಾರೆ. ಶುಕ್ರವಾರ ರಾತ್ರಿ 9.20ರ ಸುಮಾರಿಗೆ ಈ ಘಟನೆ ನಡೆದಿದೆ. ವರದಿಗಳ ಪ್ರಕಾರ, ಡಿಎಂ ಕಾಲೇಜು ಕ್ಯಾಂಪಸ್ ನಲ್ಲಿರುವ ಎಎಂಎಸ್ ಯು ಕಚೇರಿಯಲ್ಲಿ ಸ್ಫೋಟ ಸಂಭವಿಸಿದೆ. ಓಯಿನಮ್ ಕೆನೆಜಿ ಎಂಬ 24 ವರ್ಷದ ವ್ಯಕ್ತಿ ಹತ್ಯೆಗೀಡಾದ. ಗಾಯಗೊಂಡ ಓಯಿನಮ್ ಕೆನೆಜಿ ಅವರನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಯಿತು ಆದರೆ ಅವರ ಜೀವ ಉಳಿಸಲು ಸಾಧ್ಯವಾಗಲಿಲ್ಲ. ಗಂಭೀರವಾಗಿ ಗಾಯಗೊಂಡಿರುವ ಇನ್ನಿಬ್ಬರು ರಾಜ್ ಮೆಡಿಸಿಟಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ಫೋಟದ ಹೊಣೆಯನ್ನು ಇನ್ನೂ ಯಾವುದೇ ಸಂಘಟನೆ ಹೊತ್ತುಕೊಂಡಿಲ್ಲ. ಮಣಿಪುರ ಪೊಲೀಸರು ಮತ್ತು ಅರೆಸೇನಾ ಪಡೆಗಳು ಪ್ರದೇಶವನ್ನು ಸುತ್ತುವರೆದಿದ್ದು, ಶೋಧವನ್ನು ಪ್ರಾರಂಭಿಸಿದವು. ಸ್ಫೋಟದ ಕಾರಣ ಮತ್ತು ಅದರ ಹಿಂದೆ ಇರುವವರ ಪತ್ತೆಗೆ ಪೊಲೀಸರು ಪ್ರಯತ್ನಿಸುತ್ತಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.…
ರಾಜೀವ್ ಗಾಂಧಿ ಹತ್ಯೆ ಪ್ರಕರಣದಲ್ಲಿ ಜೈಲಿನಿಂದ ಹೊರಬಂದ ಶಾಂತನ್ ಶ್ರೀಲಂಕಾಕ್ಕೆ ತೆರಳಿದ್ದರು. ಶಾಂತನ್ ಒಂದು ವಾರದಲ್ಲಿ ಶ್ರೀಲಂಕಾಕ್ಕೆ ಹೋಗುತ್ತಾನೆ. ಕೇಂದ್ರ ಸರ್ಕಾರದ ನಿರ್ಗಮನ ಪರವಾನಗಿಯನ್ನು ತಿರುಚಿರಾಪಳ್ಳಿ ಜಿಲ್ಲಾಧಿಕಾರಿಗೆ ಹಸ್ತಾಂತರಿಸಲಾಗಿದೆ. ಭಾರತವನ್ನು ತೊರೆದ ಖೈದಿಗಳಲ್ಲದವರಲ್ಲಿ ಶಾಂತನ್ ಮೊದಲಿಗ. ಲಂಕಾ ಸರ್ಕಾರವು ಆಗಸ್ಟ್ ವರೆಗೆ ಚಾಲ್ತಿಯಲ್ಲಿರುವ ಪ್ರಯಾಣದ ದಾಖಲೆಯನ್ನು ನೀಡಿದ ನಂತರ ಸಂತಾನ್ ಮನೆಗೆ ಮರಳಲು ಅವಕಾಶ ನೀಡಲಾಯಿತು. ತನ್ನ ವಯಸ್ಸಾದ ತಾಯಿಯೊಂದಿಗೆ ವಾಸಿಸಲು ಶ್ರೀಲಂಕಾಕ್ಕೆ ಬಿಡುಗಡೆ ಮಾಡುವಂತೆ ಶಾಂತನ್ ಈ ಹಿಂದೆ ವಿನಂತಿಸಿದ್ದರು. ಜೈಲಿನಿಂದ ಬಿಡುಗಡೆಯಾದ ನಂತರ ಶಾಂತನ್ ಮತ್ತು ಇತರರನ್ನು ವಿಧಿರಪಲ್ಲಿಯ ವಿಶೇಷ ಶಿಬಿರಕ್ಕೆ ಸ್ಥಳಾಂತರಿಸಲಾಯಿತು. ರಾಜೀವ್ ಗಾಂಧಿ ಹತ್ಯೆ ಪ್ರಕರಣದಲ್ಲಿ 32 ವರ್ಷಗಳ ಜೈಲುವಾಸದಲ್ಲಿ ತನ್ನ ತಾಯಿಯನ್ನು ನೋಡಲು ಸಾಧ್ಯವಾಗದ ಕಾರಣ, ಶಾಂತನ್ ಶ್ರೀಲಂಕಾಕ್ಕೆ ಭೇಟಿ ನೀಡಲು ಮತ್ತು ತನ್ನ ತಾಯಿಯನ್ನು ನೋಡಿಕೊಳ್ಳಲು ಅವಕಾಶ ನೀಡುವಂತೆ ರಾಷ್ಟ್ರಪತಿಗೆ ಮನವಿ ಮಾಡಿದರು. ಸೆಪ್ಟೆಂಬರ್ 2018 ರಲ್ಲಿ, ತಮಿಳುನಾಡು ಕ್ಯಾಬಿನೆಟ್ ರಾಜೀವ್ ಗಾಂಧಿ ಹತ್ಯೆ ಪ್ರಕರಣದಲ್ಲಿ ಎಲ್ಲಾ ಏಳು ಜೀವಾವಧಿ ಅಪರಾಧಿಗಳನ್ನು ಬಿಡುಗಡೆ…
ಮಹಾರಾಷ್ಟ್ರ: ಅಣ್ಣ, ತಂಗಿ ತಪ್ಪು ದಾರಿ ತುಳಿದರೂ ಬುದ್ಧಿ ಹೇಳೊ ಬದಲು ಆತ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಆಕೆಯ ತಪ್ಪಿಗೆ ರಕ್ಷಕನಾಗಿ ಖತರ್ನಾಕ್ ಪ್ಲಾನ್ ಮಾಡಿ ಸಿಕ್ಕಿಬಿದ್ದಿದ್ದಾನೆ. ತನ್ನ ಸಹೋದರಿಗೆ 12ನೇ ತರಗತಿ ಪರೀಕ್ಷೆಯಲ್ಲಿ ನಕಲು ಮಾಡಲು ನೆರವಾಗುವ ನಿಟ್ಟಿನಲ್ಲಿ, ವ್ಯಕ್ತಿಯೊಬ್ಬ ಪೊಲೀಸ್ ಸಮವಸ್ತ್ರ ಧರಿಸಿ ಪರೀಕ್ಷಾ ಕೇಂದ್ರದಲ್ಲಿ ಭದ್ರತಾ ಕಾರ್ಯವನ್ನು ನಿರ್ವಹಿಸುವಂತೆ ನಟಿಸಿ ಸಿಕ್ಕಿಬಿದ್ದಿರುವ ಘಟನೆ ಮಹಾರಾಷ್ಟ್ರದ ಅಕೋಲಾ ಜಿಲ್ಲೆಯಲ್ಲಿ ನಡೆದಿದೆ. ಅನುಪಮ್ ಮದನ್ ಖಂಡಾರೆ(24) ಎಂಬಾತ ಪೊಲೀಸ್ ಕೈಗೆ ಸಿಕ್ಕಿಬಿದ್ದ ವ್ಯಕ್ತಿ ಎಂದು ಗುರುತಿಸಲಾಗಿದೆ. ಪಾತೂರು ಪಟ್ಟಣದ ಶಹಬಾಬು ಉರ್ದು ಪ್ರೌಢಶಾಲೆಯಲ್ಲಿ 12ನೇ ತರಗತಿಯ ಮೊದಲ ಪರೀಕ್ಷೆಯ ವೇಳೆ ಈ ಘಟನೆ ನಡೆದಿದೆ. ಪಾಂಗ್ರಾ ಬಂಡಿಯಿಂದ ಬಂದ ಖಂಡಾರೆ, ತನ್ನ ತಂಗಿಗೆ ಪರೀಕ್ಷೆಯಲ್ಲಿ ಕಾಪಿ ಮಾಡಲು ನೆರವಾಗುವ ನಿಟ್ಟಿನಲ್ಲಿ ನಿಜವಾದ ಪೊಲೀಸ್ ಧಿರಿಸಿನಲ್ಲಿ ಶಾಲೆಗೆ ಬಂದಿದ್ದಾನೆ. ಪರೀಕ್ಷಾ ಕೇಂದ್ರದ ಭದ್ರತೆಗೆ ನಿಂತು ಅಲ್ಲಿಂದ ಉತ್ತರ ಪತ್ರಿಕೆಯನ್ನು ತೆಗೆದುಕೊಂಡು ಹೋಗುವ ಯೋಜನೆಯನ್ನು ಅನುಪಮ್ ಹಾಕಿಕೊಂಡಿದ್ದ ಎನ್ನಲಾಗಿದೆ. ಇದೇ…